ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಾಯಘಾತದಿಂದ ನಿಧನ

ಸುದ್ದಿಗಳು News

Posted by vidyamaana on 2024-07-05 17:20:19 |

Share: | | | | |


ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಾಯಘಾತದಿಂದ ನಿಧನ

ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದರಾಗಿದ್ದಂತ ಕುಂಬ್ಳೆ ಶ್ರೀಧರ ರಾವ್ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದಾಗಿ ತಿಳಿದು ಬಂದಿದೆ.

ಇಂದು ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಸಮೀಪದಲ್ಲಿನ ಬೇರಿಕೆ ನಿವಾಸಿಯಾಗಿದ್ದಂತ ಶ್ರೀಧರ ರಾವ್ ಅವರಿಗೆ ಇಂದು ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.

ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ.

ಮೃತರು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಪತ್ನಿ ಸುಲೋಚನಾ, ಪುತ್ರರಾದ ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

 Share: | | | | |


5 ವರ್ಷದಿಂದ ವಿಟ್ಲದ ಬಾಲಕಿಗೆ ಲೈಂಗಿಕ ಕಿರುಕುಳ- ಕೇರಳದ ಯುವಕರ ಮೇಲೆ ಕೇಸ್

Posted by Vidyamaana on 2023-07-30 12:11:11 |

Share: | | | | |


5 ವರ್ಷದಿಂದ ವಿಟ್ಲದ ಬಾಲಕಿಗೆ ಲೈಂಗಿಕ ಕಿರುಕುಳ- ಕೇರಳದ ಯುವಕರ ಮೇಲೆ ಕೇಸ್

ವಿಟ್ಲ: ಬಾಲಕಿ ಮೇಲೆ, ಬೇರೆ ಬೇರೆ ಯುವಕರು ಬೇರೆ ಬೇರೆ ಸಂದರ್ಭದಲ್ಲಿ ಲೈಂಗಿಕ ಅಪರಾಧ ನಡೆಸಿದ್ದಾರೆ ಎಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪರಿಶಿಷ್ಟ ಪಂಗಡಕ್ಕೆ ಸೇರಿದ 16 ವರ್ಷದ ಬಾಲಕಿ ಮೇಲೆ ಕೇರಳ ಭಾಗದ ಕೆಲವು ಯುವಕರು ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಅಪರಾಧ ನಡೆಸಿದ್ದರು.ಬಾಲಕಿ ಮನೆಗೆ ಈಚೆಗೆ ಒಂದು ದಿನ ಬರುವಾಗ


ತಡವಾದ ಬಗ್ಗೆ ವಿಚಾರಿಸಿದಾಗ ಆಕೆ ಈ ಬಗ್ಗೆ ಮಾಹಿತಿ ನೀಡಿದ್ದಳು. ಐವರು ಆರೋಪಿಗಳು ಲೈಂಗಿಕ ಅಪರಾಧ ನಡೆಸಿದ್ದಾರೆ. 2019ರಿಂದಲೂ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆರೋಪಿಗಳಲ್ಲಿ ಒಬ್ಬಾತ ಬಾಲಕಿಯ ಬಂಧು. ಉಳಿದವರು ಕೇರಳದವರು ಎಂದು ಪೋಷಕರು ತಿಳಿಸಿದ್ದಾರೆದೂರಿನಲ್ಲಿ ಆರೋಪಿಗಳ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸ್‌) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ

ಜೈಸ್ವಾಲ್ ಹೊಸ ದಾಖಲೆ ; ಕೆಕೆಆರ್ ವಿರುದ್ಧ ರಾಜಸ್ಥಾನಕ್ಕೆ ಅತ್ಯಮೋಘ ಜಯ

Posted by Vidyamaana on 2023-05-11 20:26:54 |

Share: | | | | |


 ಜೈಸ್ವಾಲ್ ಹೊಸ ದಾಖಲೆ ; ಕೆಕೆಆರ್ ವಿರುದ್ಧ ರಾಜಸ್ಥಾನಕ್ಕೆ ಅತ್ಯಮೋಘ ಜಯ

ಕೋಲ್ಕತಾ: ಈಡನ್ ಗಾರ್ಡನ್ಸ್ ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 9 ವಿಕೆಟಿಗಳಿಂದ ಅಮೋಘ ಗೆಲುವು ಸಾಧಿಸಿತು.ರಾಜಸ್ಥಾನ್ ರಾಯಲ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಕೆಕೆಆರ್ 8 ವಿಕೆಟ್ ನಷ್ಟಕ್ಕೆ 149 ರನ್ ಕಲೆ ಹಾಕಿತು. ವೆಂಕಟೇಶ್ ಅಯ್ಯರ್ 57 ರನ್ ಗರಿಷ್ಠ ಸ್ಕೋರ್ ಮಾಡಿದರು. ಜೇಸನ್ ರಾಯ್ 10, ಗುರ್ಬಾಜ್ 18, ನಾಯಕ ನಿತೀಶ್ ರಾಣಾ 22, ರಸೆಲ್ 10, ರಿಂಕು ಸಿಂಗ್ 16 ರನ್ ಗಳಿಸಿ ಔಟಾದರು. ತಂಡ ದೊಡ್ಡ ಮೊತ್ತ ಕಲೆ ಹಾಕುವಲ್ಲಿ ವಿಫಲವಾಯಿತು. ಬ್ಯಾಟ್ಸ್ ಮ್ಯಾನ್ ಗಳು ನಿರೀಕ್ಷಿತ ಆಟ ತೋರಲಿಲ್ಲ. ಆರ್ ಆರ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ 4 ವಿಕೆಟ್ ಕಬಳಿಸಿದರು. ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್(187) ಪಡೆದ ಬೌಲರ್ ಆಗಿದ್ದಾರೆ. ಡ್ವೇನ್ ಬ್ರಾವೋ 183 ವಿಕೆಟ್ ಕಬಳಿಸಿ ಅಗ್ರಣಿಯಾಗಿದ್ದರು.ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ಯಶಸ್ವಿ ಜೈಸ್ವಾಲ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಮತ್ತು ನಾಯಕ ಸಂಜು ಸ್ಯಾಮ್ಸನ್ ಅವರ ಭರ್ಜರಿ ಸಾಥ್ ನಿಂದಾಗಿ ಅಮೋಘ ಜಯ ಸಾಧಿಸಿತು. 13.1 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿ ಸ್ಮರಣೀಯ ಜಯ ತನ್ನದಾಗಿಸಿಕೊಂಡಿತು.

ಜೈಸ್ವಾಲ್ ಐಪಿಎಲ್‌ನಲ್ಲಿ ಅತಿ ವೇಗದ ಐವತ್ತು ರನ್ ಗಳಿಸಿದ ದಾಖಲೆ ಮಾಡಿದರು. ಕೆ ಎಲ್ ರಾಹುಲ್ ಮತ್ತು ಪ್ಯಾಟ್ ಕಮಿನ್ಸ್ ಅವರು ಈ ಹಿಂದೆ 14  ಎಸೆತಗಳಲ್ಲಿ ಸ್ಪೋಟಕ ಅರ್ಧ ಶತಕಗಳನ್ನು ಸಿಡಿಸಿದ್ದರು.ಕೇವಲ 13 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಜೈಸ್ವಾಲ್ 47ಎಸೆತಗಳಿಂದ 98 ರನ್ ಗಳಿಸಿ ಅಜೇಯರಾಗಿ ಉಳಿದರು.13 ಬೌಂಡರಿ ಮತ್ತು 5 ಆಕರ್ಷಕ ಸಿಕ್ಸರ್ ಬಾರಿಸಿದ್ದರು. ಸಂಜು ಸ್ಯಾಮ್ಸನ್ ಔಟಾಗದೆ 29 ಎಸೆತಗಳಿಂದ 48 ರನ್ ಗಳಿಸಿ ಅಜೇಯರಾಗಿ ಉಳಿದರು 2 ಬೌಂಡರಿ ಮತ್ತು 5 ಭರ್ಜರಿ ಸಿಕ್ಸರ್ ಅವರ ಇನ್ನಿಂಗ್ಸ್ ನಲ್ಲಿ ಒಳಗೊಂಡಿತ್ತು.

WATCH VIDEO: ವೃದ್ಧ ತಂದೆಯ ಮುಖಕ್ಕೆ ಹೊಡೆದ ಪಾಪಿ ಮಗ, ನೀಚ ಕೃತ್ಯ ಸಿಸಿಟಿವಿಯಲ್ಲಿ ಸೆರೆ

Posted by Vidyamaana on 2024-04-29 13:35:21 |

Share: | | | | |


WATCH VIDEO: ವೃದ್ಧ ತಂದೆಯ ಮುಖಕ್ಕೆ ಹೊಡೆದ ಪಾಪಿ ಮಗ, ನೀಚ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸೋಷಿಯಲ್ ಮೀಡಿಯಾದಲ್ಲಿ ಬಹಳ ಆತಂಕಕಾರಿ ವೀಡಿಯೊ ವೈರಲ್ ಆಗಿದ್ದು, ಇದನ್ನು ನೋಡಿದ ಯಾರ ರಕ್ತವನ್ನು ಕುದಿಯುವಂತೆ ಮಾಡುತ್ತದೆ ಕೂಡ. ವೈರಲ್‌ ವಿಡಿಯೋದಲ್ಲಿ ಯುವಕನೊಬ್ಬ ತನ್ನ ವಯಸ್ಸಾದ ತಂದೆಯನ್ನು ಕ್ರೂರವಾಗಿ ಹೊಡೆಯುವುದನ್ನು ಕಾಣಬಹುದು. ಮಗ ತನ್ನ ತಂದೆಯ ಮುಖಕ್ಕೆ ಹೊಡೆದ ರೀತಿಯನ್ನು ನೋಡಿದರೆ, ನೀವು ಕೋಪಗೊಳ್ಳವುಉದು ಸಹಜ, ಘಟನೆಯಲ್ಲಿ ವೃದ್ಧರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಸೌಜನ್ಯ ಪ್ರಕರಣ:ತಿಮರೋಡಿ ನೇತೃತ್ವದಲ್ಲಿಂದು ಪ್ರತಿಭಟನೆ

Posted by Vidyamaana on 2023-09-03 08:30:09 |

Share: | | | | |


ಸೌಜನ್ಯ ಪ್ರಕರಣ:ತಿಮರೋಡಿ ನೇತೃತ್ವದಲ್ಲಿಂದು ಪ್ರತಿಭಟನೆ

ಬೆಳ್ತಂಗಡಿ: ಸೌಜನ್ಯಾ ಸ್ತ್ರೀ ಸ್ವರೂಪ ತೊರೆದು ಕಾಳಿ ಸ್ವರೂಪವನ್ನ ಪಡೆದಿದ್ದಾಳೆ. ಅವಳ ಆತ್ಮ ಭೀಕರ ಸ್ವರೂಪ ಪಡೆಯುವ ಮುನ್ನ ಸರಕಾರ ಎಚ್ಚೆತ್ತು ಕೊಳ್ಳಬೇಕು ಎಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಹೇಳಿದ್ದಾರೆ. 


ಸೌಜನ್ಯಾ ಪರವಾಗಿ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಧರ್ಮಪಾಲನಾಥ ಸ್ವಾಮೀಜಿ ಭಾಷಣ ಮಾಡಿದ್ದಾರೆ. ಸತ್ಯ, ನ್ಯಾಯದ ಹೋರಾಟಕ್ಕೆ ಆದಿಚುಂಚನಗಿರಿ ಮಠದ ಸಂಪೂರ್ಣ ಬೆಂಬಲವಿದೆ. ಒಕ್ಕಲಿಗ ಸಮಾಜದ ಬೆಂಬಲ ಇದೆ. 

ಆರು ವರ್ಷ ಜೈಲಿನಲ್ಲಿದ್ದ ಸಂತೋಷ ರಾವ್ ಗೆ ಮರಳಿ ಜೀವನ ನೀಡಲು ಸಾಧ್ಯವಿಲ್ಲ. ಅದಕ್ಕಾಗಿ ರಾಜ್ಯ ಸರಕಾರ ಅವನ ಬದುಕಿಗೆ ಏನಾದ್ರು ವ್ಯವಸ್ಥೆ ಮಾಡಬೇಕು. ಜೊತೆಗೆ ಸೌಜನ್ಯಾ ಕುಟುಂಬಕ್ಕೂ ರಾಜ್ಯ ಸರಕಾರ ರಕ್ಷಣೆ ನೀಡಬೇಕು. 11 ವರ್ಷಗಳ ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗದೇ ಇರುವುದು ನಮ್ಮ ವ್ಯವಸ್ಥೆಯ ದುರಂತ. 


ತನಿಖೆಯ ಸಂದರ್ಭದಲ್ಲಿ ಒಬ್ಬನಿಂದ ಆಗಿರುವ ಕೃತ್ಯ ಅಲ್ಲ. ಸಾಮೂಹಿಕ ಅತ್ಯಾಚಾರ ಆಗಿರುವುದು ಪತ್ತೆಯಾಗಿತ್ತು. ಹಾಗಾದರೆ ಯಾರು ಈ ಕೃತ್ಯ ಎಸಗಿದ್ದೆಂದು ಪತ್ತೆಯಾಗಬೇಕು. ಅದಕ್ಕಾಗಿ ಶವ ಪರೀಕ್ಷೆ ಮಾಡಿದ ವೈದ್ಯರು ಮತ್ತು ಪೊಲೀಸ್ ತನಿಖಾಧಿಕಾರಿಯನ್ನ ಮಂಪರು ಪರೀಕ್ಷೆ ಮಾಡಬೇಕು. ಮಹೇಶ್ ಶೆಟ್ಟಿ ಅವರ ಹೋರಾಟಕ್ಕೆ ಆದಿಚುಂಚನಗಿರಿ ಮಠ ಮತ್ತು ಒಕ್ಕಲಿಗ ಸಮಾಜದ ಬೆಂಬಲ ಇದೆ.‌ ನಮ್ಮ ಮಠದ ಹಿರಿಯ ಸ್ವಾಮೀಜಿಗಳು ಸಭೆ ಕರೆದಿದ್ದಾರೆ. ಮಾಹಿತಿ ನೀಡುತ್ತೇವೆ.‌ ಸರಕಾರ ಶೀಘ್ರ ತನಿಖೆ ನಡೆಸಿ ಯಾರು ಆರೋಪಿ ಎಂಬುದನ್ನು ಪತ್ತೆ ಮಾಡಬೇಕು‌ ಎಂದು ಸ್ವಾಮೀಜಿ ಪ್ರಖರ ಭಾಷಣ ಮಾಡಿದ್ದಾರೆ. 


ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್, ಗಿರೀಶ್ ಮಟ್ಟೆಣ್ಣವರ್, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ ಮತ್ತಿತರರು ಇದ್ದಾರೆ. ಸಾವಿರಾರು ಜನರು ಸೇರಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

Posted by Vidyamaana on 2023-07-14 03:02:36 |

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

27 ನೇ ವಾರ್ಷಿಕೋತ್ಸವದಲ್ಲಿ ಚೇತನಾ ಹಾಸ್ಟಿಟಲ್ – ಎನ್ ಎ ಬಿ ಹೆಚ್ ಪ್ರಮಾಣ ಪತ್ರ ಹಸ್ತಾಂತರ ಕಾರ್ಯಕ್ರಮ ಆಸ್ಪತ್ರೆಗೆ ಸಹಕರಿಸಿದವರಿಗೆ, ಸಿಬ್ಬಂದಿಗಳಿಗೆ ಗೌರವ – ಸಿಬ್ಬಂದಿಗಳಿಂದ ವೈದ್ಯರಿಗೆ ಸನ್ಮಾನ.

Posted by Vidyamaana on 2023-01-28 13:01:38 |

Share: | | | | |


27 ನೇ ವಾರ್ಷಿಕೋತ್ಸವದಲ್ಲಿ ಚೇತನಾ ಹಾಸ್ಟಿಟಲ್ – ಎನ್ ಎ ಬಿ ಹೆಚ್ ಪ್ರಮಾಣ ಪತ್ರ ಹಸ್ತಾಂತರ ಕಾರ್ಯಕ್ರಮ  ಆಸ್ಪತ್ರೆಗೆ ಸಹಕರಿಸಿದವರಿಗೆ, ಸಿಬ್ಬಂದಿಗಳಿಗೆ ಗೌರವ – ಸಿಬ್ಬಂದಿಗಳಿಂದ ವೈದ್ಯರಿಗೆ ಸನ್ಮಾನ.

ಪುತ್ತೂರು: 27 ವರ್ಷಗಳ ಹಿಂದೆಯೇ ಪುತ್ತೂರಿನಲ್ಲಿ ತುರ್ತು ಚಿಕಿತ್ಸಾ ಘಟಕವನ್ನು ಸ್ಥಾಪಿಸಿದ ಸಹಿತ ಹಲವು ಪ್ರಥಮಗಳಿಗೆ ಕಾರಣವಾಗಿರುವ ಪುತ್ತೂರಿನ ಚೇತನಾ ಆಸ್ಪತ್ರೆಯು 27 ನೇ ವರ್ಷದ ಸಂಭ್ರಮದಲ್ಲಿ ಆಸ್ಪತ್ರೆಯ ಆರೋಗ್ಯ ಸೇವೆಗಳನ್ನು ಗಮನಿಸಿಕೊಂಡು ನೀಡುವ ‘ಎನ್.ಎ.ಬಿ.ಎಚ್’ ಪ್ರಮಾಣಪತ್ರಕ್ಕೆ ಹಸ್ತಾಂತರ ಕಾರ್ಯಕ್ರಮ ಜ.26 ರಂದು ಸಂಜೆ ಆಸ್ಪತ್ರೆಯ ವಠಾರದಲ್ಲಿ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರು ಎನ್.ಎ.ಬಿ.ಎಚ್ ಪ್ರಮಾಣ ಪತ್ರವನ್ನು ಆಸ್ಪತ್ರೆಯ ಆಡಳಿತ ಪಾಲುದಾರ ವೈದ್ಯರಾದ ಡಾ. ಜೆ.ಸಿ.ಅಡಿಗ ಮತ್ತು ಡಾ. ಶ್ರೀಕಾಂತ್ ರಾವ್ ಅವರಿಗೆ ಹಸ್ತಾಂತರಿಸಿದರು.



ಎನ್‌ಎಬಿಹೆಚ್ ರೋಗಿಗೆ ಗುಣಮಟ್ಟ, ಸುರಕ್ಷತೆಯನ್ನು ಕೊಡುತ್ತದೆ:

ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ಕುಮಾರ್ ರೈ ಅವರು ಮಾತನಾಡಿ ಎನ್.ಎ.ಬಿ.ಹೆಚ್ ಪಡೆಯಲು ಒಂದಷ್ಟು ಮಾರ್ಗಸೂಚಿ ಇದೆ. ಆದರೆ ಇದು ರೋಗಿಗೆ ಗುಣಮಟ್ಟ ಮತ್ತು ಸುರಕ್ಷತೆಯನ್ನ ಕೊಡುವಲ್ಲಿ ಸಹಕಾರಿಯಾಗಲಿದೆ. ಇದರ ಜೊತೆಗೆ ಆಸ್ಪತ್ರೆಯ ಸಿಬ್ಬಂದಿಗಳಿಗೂ ಪ್ರಯೋಜನವಿದೆ. ಯಾಕೆಂದರೆ ಕಾಲಕ್ಕೆ ತಕ್ಕಂತೆ ವೈದ್ಯಕೀಯ ಕ್ಷೇತ್ರದಲ್ಲಿ ಅಪ್‌ಗ್ರೇಡ್ ಆಗುತ್ತಿರಬೇಕು. ಗುಣಮಟ್ಟದ ಸೇವೆ ಇಂಟರ್ ನ್ಯಾಷನಲ್ ಮಾದರಿಯಲ್ಲಿ ಇರಬೇಕಾಗುವುದು ಮುಖ್ಯ ಎಂದರು. ಪ್ರಸ್ತುತ ದಿನದಲ್ಲಿ ಇದು ಕೇವಲ ಖಾಸಗಿ ಆಸ್ಪತ್ರೆ ಮಾತ್ರವಲ್ಲ ಸರಕಾರಿ ಆಸ್ಪತ್ರೆಯಲ್ಲೂ ಕಾಯಕಲ್ಪ ಕಾರ್ಯಕ್ರಮ ಅಳವಡಿಸಲಾಗಿದೆ. ಇವತ್ತು ನಮಗೆ ಎನ್‌ಎಬಿಹೆಚ್ ಪ್ರಮಾಣ ಪತ್ರ ಸಿಕ್ಕಿದೆ ಎಂದು ಸುಮ್ಮನೆ ಇರಬಾರದು. ಇದನ್ನು ಮೈಂಟೆನೆನ್ಸ್ ಮಾಡಿಕೊಂಡು ಹೋಗಬೇಕು ಎಂದ ಅವರು ಆಸ್ಪತ್ರೆ ಮತ್ತು ವೈದ್ಯರು ಪ್ರೀತಿಯಿಂದ ಚಿಕಿತ್ಸೆ ನೀಡಬೇಕು. ಉದ್ದೇಶ ಇಟ್ಟುಕೊಂಡು ಕರ್ತವ್ಯ ಮಾಡಬಾರದು ಎಂದರು. ಸರಕಾರಿ ಆಸ್ಪತ್ರೆಯ ಕಾರ್ಯಕ್ರಮದಲ್ಲೂ ಖಾಸಗಿ ವೈದ್ಯರು ಸಹಕರಿಸುವಂತೆ ವಿನಂತಿಸಿದ ಅವರು ಈಗಾಗಲೇ ಸರಕಾರಿ ವ್ಯವಸ್ಥೆಯ ಅಡಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಾ. ಜೆ.ಸಿ. ಅಡಿಗ ಮತ್ತು ಡಾ. ಶ್ರೀಕಾಂತ್ ಅವರು ಕರೆದಾಗ ಬಂದು ಉತ್ತಮ ಮಾಹಿತಿ ನೀಡುತ್ತಾರೆ. ಇವತ್ತಿನ ದಿನದಲ್ಲಿ ಸರಕಾರಿ ಆಸ್ಪತ್ರೆಯು ಬಹಳ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸ್ವಂತ ಆಕ್ಸಿಜನ್ ಉತ್ಪಾದನೆ ಘಟಕವಿದೆ. ಐಸಿಯು ಇದೆ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ನಮ್ಮ ಸರಕಾರಿ ಆಸ್ಪತ್ರೆಯ ಜೊತೆ ಕೈ ಜೋಡಿಸುವಂತೆ ವಿನಂತಿಸಿದರು.

ಚೇತನ ಆಸ್ಪತ್ರೆಯ ಸಾಧನೆಯ ಸರಮಾಲೆಯಲ್ಲಿ ಇನ್ನೊಂದು ಹೂವು ಸೇರಿದೆ:

ಸ್ವರ್ಣೋದ್ಯಮಿ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್‍ಸ್‌ನ ಮಾಲಕ ಬಲರಾಮ ಆಚಾರ್ಯ ಅವರು ಮಾತನಾಡಿ ಚಿಕ್ಕ ಬ್ಲಡ್ ಬ್ಯಾಂಕ್‌ನ್ನು ಮಾಡಬೇಕಾದರೆ ಅದರ ಅನುಷ್ಠಾನಕ್ಕೆ ಎಷ್ಟು ಕಷ್ಟ ಇದೆ ಎಂದು ನಾನು ಸ್ವತಃ ಕಂಡು ಕೊಂಡಿದ್ದೆನೆ. ಹಾಗಿರುವಾಗ ಒಂದು ಆಸ್ಪತ್ರೆಯ ಎಲ್ಲಾ ವಿಭಾಗಗಳನ್ನು ನೋಡಿ ಪ್ರಮಾಣ ಪತ್ರ ಕೊಡಬೇಕಾದರೆ ಅಷ್ಟು ಸುಲಭದ ಮಾತಲ್ಲ. ಅದನ್ನು ಸಾಧಿಸಿದ ಚೇತನ ಆಸ್ಪತ್ರಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು. ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಗಳಿಸಿದ ಹಾಗೆ ರೋಗಿಗಳ ಪೈಕಿ ಓರ್ವ ರೋಗಿಗೆ ತೊಂದರೆ ಆದರೆ ಅದು ಕೂಡಾ ವೈದ್ಯರ ತಪ್ಪು ಆಗದೇ ಇದ್ದರೂ ಅಲ್ಲಿ ರೋಗಿಯ ಸಂಬಂಧಿಕರ ಪ್ರಶ್ನೆಗಳನ್ನು ಎದುರಿಸಬೇಕಾದ ಪರಿಸ್ಥಿತಿ ಇದೆ. ಆದರೆ 27 ವರ್ಷದಲ್ಲಿ ಚೇತನಾ ಆಸ್ಪತ್ರೆ ತನ್ನ ಜನಪ್ರಿಯತೆಯನ್ನು ಹೆಚ್ಚು ಹೆಚ್ಚು ಮಾಡಿಕೊಂಡು ಹೋಗಿದೆ. ಅದು ಇದರ ದೊಡ್ಡ ಸಾಧನೆ. ಈ ಸಾಧನೆಯ ಸರಮಾಲೆಯಲ್ಲಿ ಎನ್‌ಎಬಿಎಹೆಚ್ ಪ್ರಮಾಣ ಲಭಿಸಿರುವುದು ಇನ್ನೊಂದು ಹೂವು ಸೇರಿದಂತಾಗಿದೆ ಎಂದರು. ಆರೋಗ್ಯ ವಿಮೆಯ ಮೂಲಕವೇ ಇವತ್ತಿನ ಆರೋಗ್ಯ ಸುಧಾರಿಕೆ ಆಗುತ್ತಿದೆ. ಇಂತಹ ಸೌಲಭ್ಯ ಪಡೆಯಲು ಆಸ್ಪತ್ರೆಗಳು ಎನ್‌ಎಬಿಹೆಚ್ ಪ್ರಮಾಣ ಪತ್ರ ಪಡೆಯುವುದು ಬಹಳ ಮುಖ್ಯ ಎಂದರು.ಡಾ.ಜೆ.ಸಿ ಅಡಿಗ, ಡಾ. ಶ್ರೀಕಾಂತ್ ಕುಟುಂಬದ ವೈದ್ಯರಂತೆ:

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ವ್ಯವಸ್ಥಾಪಕ ನಿರ್ದೇಶಕ ಡಾ. ಯು.ಪಿ.ಶಿವಾನಂದ ಅವರು ಮಾತನಾಡಿ ಇವತ್ತು ಡಾ.ಜೆ.ಸಿ.ಅಡಿಗ ಮತ್ತು ಡಾ. ಶ್ರೀಕಾಂತ್ ರಾವ್ ಅವರ ಹೆಸರು ದ.ಕ.ಜಿಲ್ಲೆಯಲ್ಲಿ ಪ್ರಚಲಿತದಲ್ಲಿದೆ. ಯಾಕೆಂದರೆ ಅವರ ವೈದ್ಯಕೀಯ ಸೇವೆ ಮತ್ತು ನಿಲುವು ಇವತ್ತಿಗೂ ಅವರ ಜೊತೆ ಇದೆ. ಒಬ್ಬ ವ್ಯಕ್ತಿಯಾಗಿ, ವೈದ್ಯರಾಗಿ, ಆಸ್ಪತ್ರೆಯಲ್ಲಿ ಜನರ ಮನಸ್ಸಿನಲ್ಲಿರುವುದು ಕಷ್ಟ. ಆದರೆ ಡಾ. ಅಡಿಗ ಮತ್ತು ಡಾ.ಶ್ರೀಕಾಂತ್ ಅವರು ಅದನ್ನು ಸಾಧಿಸಿದ್ದಾರೆ ಎಂದರು. ಸುಳ್ಯದಲ್ಲಿ ನಾನು ವೈದ್ಯನಾಗಿದ್ದ ಸಂದರ್ಭದಲ್ಲಿ ಅವರನ್ನು ನಮ್ಮ ಆಸ್ಪತ್ರೆಗೆ ಬರಮಾಡಿಕೊಂಡೆ. ಆಗ ಅವರ ಹೆಸರಿನಲ್ಲಿ ನಮ್ಮ ಆಸ್ಪತ್ರೆಗೆ ರೋಗಿಗಳು ಬರಲು ಆರಂಭಿಸಿದ್ದರು. ಹಾಗೆ ಮುಂದೆ ಡಾ.ಶ್ರೀಕಾಂತ್ ಅವರು ಕೂಡಾ ಜೊತೆಗೆ ಸೇರಿದರು. ಇವರಿಬ್ಬರು ಕೂಡಾ ಪುತ್ತೂರು, ಸುಳ್ಯ, ಈಶ್ವರಮಂಗಲ, ವಿಟ್ಲ ಪರಿಸರದಲ್ಲಿ ಸೇವೆಯ ಮೂಲಕ ಜನರನ್ನು ತಲುಪುವ ಕೆಲಸ ಮಾಡಿದರು. ಅದೇಷ್ಟೋ ಮಂದಿ ಚಿಕಿತ್ಸೆಗೆ ಮಂಗಳೂರಿಗೆ ಹೋಗುತ್ತಿದ್ದವರು ತಜ್ಞ ವೈದ್ಯರಾದ ಡಾ. ಅಡಿಗ ಮತ್ತು ಶ್ರೀಕಾಂತ್ ಅವರು ಪುತ್ತೂರಿನಲ್ಲೇ ಇದ್ದಾರೆಂದು ತಿಳಿದ ಬಳಿಕ ಮಂಗಳೂರಿಗೆ ಹೋಗುವುದನ್ನು ನಿಲ್ಲಿಸಿದರು. ಇವರು ರೋಗಿಯ ಖಾಯಿಲೆಯ ಜೊತೆ ಯಾರು ಎಂಬುದನ್ನು ಗುರುತಿಸುತ್ತಿದ್ದರು. ಅದು ಬಹಳ ದೊಡ್ಡ ಸಾಧನೆ. ಇದು ವೈದ್ಯರ ದುಡ್ಡಿನ ಚಿಕಿತ್ಸೆಯಲ್ಲ. ಬದಲಾಗಿ ಮಾನವೀಯತೆ ಮತ್ತು ಸಂಬಂಧಗಳು. ಇದಕ್ಕೆ ಬೆಲೆ ಕಟ್ಟಲಾಗುವುದಿಲ್ಲ. ಡಾ. ಜೆ.ಸಿ ಅಡಿಗರು ಮತ್ತು ಡಾ. ಶ್ರೀಕಾಂತರು ಒಬ್ಬ ಕುಟುಂಬದ ವೈದ್ಯರಂತೆ. ಯಾಕೆಂದರೆ ಅವರಿಗೆ ಕುಟುಂಬ ರೋಗಿಯೊಂದಿಗೆ ಭಾವನಾತ್ಮಕ ಸಂಬಂಧವಿದೆ.

ವೈದ್ಯಕೀಯ ವೃತ್ತಿಯಲ್ಲಿ ಚಾಲಕೀತನ ಅದು ಬೇರೆಯೇ ಆಗಿರುತ್ತದೆ. ಆದರೆ ಆತ್ಮೀಯತೆ, ನಂಬಿಕೆ ವಿಶ್ವಾಸ ಇದು ಅಡಿಗರು ಮತ್ತು ಶ್ರೀಕಾಂತರಲ್ಲಿದೆ ಎಂದ ಅವರು ಇದು ಆಸ್ಪತ್ರೆಗೂ ಏನೋ ತೊಂದರೆ ಆದಾಗಲೂ ಜನರು ವೈದ್ಯರನ್ನು ಒಳ್ಳೆಯವರೆಂದೇ ಗುರುತಿಸುತ್ತಾರೆ. ಇದು ಸಂಬಂಧವನ್ನು ವೃದ್ಧಿಸುತ್ತದೆ ಎಂದರು.


ಚೇತನಾ ಆಸ್ಪತ್ರೆಯಿಂದ ರೋಗಿಗಳಿಗೆ ಉತ್ತಮ ಸೇವೆ ಸಿಗುತ್ತಿದೆ:

ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜೋನ್ ಕುಟ್ಹೀನಾ ಅವರು ಮಾತನಾಡಿ ಆರೋಗ್ಯಕ್ಕೆ ಸಂಬಂಧಿಸಿ ದೂರಾಲೋಚನೆಯೊಂದಿಗೆ ಡಾ. ಜೆ.ಸಿ ಅಡಿಗ, ಡಾ. ಶ್ರೀಕಾಂತ್ ಅವರು ಆರಂಭಿಸಿದ ಆಸ್ಪತ್ರೆಯಿಂದ ಇವತ್ತು ರೋಗಿಗಳಿಗೆ ಉತ್ತಮ ಸೇವೆ ಸಿಗುತ್ತಿದೆ. ಹೆಸರು ಮಾಡಲು ಸುಲಭವಿಲ್ಲ. ಆಸ್ಪತ್ರೆ ಮಾಡಿದ ಮೇಲೆ ಅಲ್ಲಿ ರೋಗಿಗೆ ಸಿಗುವ ಚಿಕಿತ್ಸಾ ಸೌಲಭ್ಯ ಉತ್ತಮವಾಗಿರಬೇಕು. ಇದನ್ನು ಇತರರಿಗೆ ನಾವು ಹೇಳಬೇಕು. ಆದರೆ ಅಲ್ಲಿ ಏನಾದರು ಸ್ವಲ್ಪ ಹೆಚ್ಚು ಕಡಿಮೆ ಆದರೆ ಹೇಳಬಾರದು. ಅದನ್ನು ಪರಾಂಬಿರಿಸಿ ನೋಡಬೇಕು. ಆಗ ನಾವು ಉತ್ತಮ ಕೆಲಸ ಮಾಡಿದಂತೆ. ಈ ಇಬ್ಬರು ಯುವಕರು 25 ವರ್ಷ ಹಿಂದೆ ನಿರ್ಮಾಣ ಮಾಡಿದ ಆಸ್ಪತ್ರೆ ಜನಮೆಚ್ಚುಗೆ ಪಡೆದಿದೆ. ಇವತ್ತು ಪುತ್ತೂರಿನ ಮಟ್ಟಿಗೆ ವೈದ್ಯರು ಉತ್ತಮ ಸೇವೆ ಕೊಡುವಂತಹವರಾಗಿದ್ದಾರೆ ಎಂದ ಅವರು ವೈದ್ಯರ ಕುರಿತು ಕವನ ಹಾಡಿದರು.

ವೈದ್ಯಕೀಯದಲ್ಲಿ ಸಂಕಟ ಬಂದಾಗ ನಾವೆಲ್ಲ ಒಂದಾಗಿದ್ದೇವೆ :

ಆದರ್ಶ ಆಸ್ಪತ್ರೆಯ ಡಾ. ಎಂ.ಕೆ.ಪ್ರಸಾದ್ ಅವರು ಮಾತನಾಡಿ ಅಡಿಗರು, ಶ್ರೀಕಾಂತದ್ವಯರು ಮೋಸ್ಟ್ ಇಂಟಲಿಜಂಟ್ ಮ್ಯಾನ್, ಮೋಸ್ಟ್ ಎನ್‌ಸೈಕ್ಲೋಪಿಡಿಯಾ. ನಮಗೇನಾದರೂ ಸಂಶಯ ಬಂದಾಗ ನಾವು ಕೇಳುವುದು ಅಡಿಗರನ್ನೇ ಎಂದ ಅವರು ಇಬ್ಬರು ವೈದ್ಯರು ಊರಿಗೆ ಒಳ್ಳೆಯ ಸೇವೆ ಮಾಡಿದ್ದಾರೆ. ಇವತ್ತು ಅನೇಕ ಸಂದರ್ಭದಲ್ಲಿ ನಮಗೆಲ್ಲರಿಗೂ ತೊಂದರೆ ಆಗಿದೆ. ವೈದ್ಯರಿಗೂ ಆಪತ್ತು ಬರುತ್ತದೆ. ಅಂತಹ ಸಂದರ್ಭದಲ್ಲಿ ವೈದ್ಯಕೀಯದಲ್ಲಿ ಸಂಕಟ ಬಂದಾಗ ನಾವೆಲ್ಲ ಒಂದಾಗಿದ್ದೇವೆ ಎಂದರು.

ಚೇತನ ಆಸ್ಪತ್ರೆ ನನ್ನ ತವರು:

ಡಾ.ಪೂರ್ಣಾ ಸಿ ರಾವ್ ಅವರು ಮಾತನಾಡಿ ಹಿಂದೆ ಯಾವ ಕೇಸು ತೆಗೆಯುವಾಗ ಭಯವಿರಲಿಲ್ಲ. ರೋಗಿಯನ್ನು ಬದುಕಿಸುವ ಚಿಂತನೆ ನಮ್ಮ ಮುಂದಿತ್ತು. ಇವತ್ತು ನಾವು ಕೇಸು ತೆಗೆದು ಕೊಳ್ಳುವ ಮುಂಚೆ ಇದರಿಂದ ನಮಗೆನಾದರೂ ಪೆಟ್ಟು ಬೀಳುತ್ತದೆಯೋ ಎಂದು ಚಿಂತನೆ ಮಾಡುವ ಪರಿಸ್ಥಿತಿ ವೈದ್ಯ ಸಮೂಹದ ಮುಂದಿರುವ ಪ್ರಶ್ನೆಯಾಗಿದೆ. ಆದ್ದರಿಂದ ಇಂತಹ ಪರಿಸ್ಥಿತಿಗೆ ಗಟ್ಟಿಯಾದ ಕಾನೂನು ಬೇಕು ಎಂದರು. ಇವತ್ತು ಮಂಗಳೂರಿಗೆ ಗೈನಕಾಲೋಜಿಸ್ಟ್‌ಗೆ ಕಂಪೇರ್ ಮಾಡಿದರೆ ನಾವು ಆರ್ಥಿಕವಾಗಿ ಹಿಂದುಳಿದ್ದಿದ್ದರೂ ಆದರೆ ರೋಗಿಯ ಪ್ರೀತಿಯಲ್ಲಿ ನಾವು ತುಂಬಾ ಎತ್ತರದಲ್ಲಿದ್ದೇವೆ. ಹಾಗಾಗಿ ಪುತ್ತೂರಿನ ಜನತೆಗೆ ನನ್ನ ಹೃತ್ಪೂರ್ವಕ ವಂದನೆ ಎಂದ ಅವರು ನಾನು ಈಗ ಪೂರ್ಣಚಂದ್ರ ಕ್ಲೀನಿಕ್ ಮಾಡಿದ್ದರೂ ನನ್ನ ತವರು ಚೇತನ ಆಸ್ಪತ್ರೆಯೇ ಆಗಿದೆ ಎಂದರು.


ಎಷ್ಟೆ ರಾತ್ರಿಯಾದರೂ ತುರ್ತು ಸಂದರ್ಭದಲ್ಲಿ ಸೇವೆ ನೀಡಿದವರು:

ಡಾ. ಶ್ರೀಕುಮಾರ್ ಅವರು ಮಾತನಾಡಿ ಹಣ ಮಾಡಲು ಚಿಕಿತ್ಸೆ ಮಾಡಬೇಡಿ, ಗುಣ ಮಾಡಲು ಚಿಕಿತ್ಸೆ ಮಾಡಿ, ಆಗ ಹಣ ತನ್ನಿಂದ ತಾನೆ ಬರುತ್ತದೆ ಈ ಮಾತು ಬಹಳ ಸತ್ಯದ ಮಾತು. ಇದಕ್ಕೆ ಪೂರಕವಾಗಿ ಡಾ. ಜೆ.ಸಿ.ಅಡಿಗ ಮತ್ತು ಡಾ. ಶ್ರೀಕಾಂತ್ ಅವರು ಉತ್ತಮ ಸೇವೆ ಮಾಡಿದ್ದಾರೆ. ಎಷ್ಟೇ ರಾತ್ರಿಯಾದರೂ ತಕ್ಷಣ ತುರ್ತು ಸಂದರ್ಭದಲ್ಲಿ ಬಂದು ರೋಗಿಯನ್ನು ಗುಣಪಡಿಸಿದ್ದಾರೆ ಎಂದರು.

ಚೇತನಾ ಅಸ್ಪತ್ರೆಯಲ್ಲಿ ಲಭ್ಯವಿರುವ ವಿಶೇಷ ಸೇವೆಗಳು:

24 ಗಂಟೆ ಕಾರ್ಯಾಚರಿಸುವ ವೈದ್ಯಕೀಯ ಸೇವೆಗಳಲ್ಲಿ ಮುಖ್ಯವಾದವುಗಳೆಂದರೆ, ಥೈರೋಕೇರ್ ಡಯಾಗ್ನಾಸ್ಟಿಕ್ನ ಸಹಯೋಗದೊಂದಿಗೆ ಕಂಪ್ಯೂಟರಿಕೃತ ಲ್ಯಾಬೊರೇಟರಿ, ಎಕ್ಸ್-ರೇ 300 ಎಂ.ಎ., ಎಕ್ಸ್-ರೇ ಯುನಿಟ್ ಮತ್ತು ಸಿ ಆರ್ಮ್ ಡಿಜಿಟಲ್ ಎಕ್ಸ್-ರೇ, ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಮತ್ತು ಕಲರ್ ಡಾಪ್ಲರ್, ಡಾಪ್ಲರ್ ಸ್ಕ್ಯಾನ್, ಫಾರ್ಮಸಿ ವಿಭಾಗ, ಅನುಭವಿ ತಜ್ಞ ವೈದ್ಯೆಯರ ಲಭ್ಯತೆಯೊಂದಿಗೆ ಸುಸಜ್ಜಿತ ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗ, ಇಂಕ್ಯುಬೇಟರ್, ಫೊಟೋಥೆರಪಿ ಮತ್ತು ವೆಂಟಿಲೇಟರ್ ಸೌಲಭ್ಯದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಮಕ್ಕಳ ತೀವ್ರ ನಿಗಾ ವಿಭಾಗ, ಹೃದಯ ಸ್ಕ್ಯಾನಿಂಗ್ಗೆ ಇಕೋಕಾರ್ಡಿಯಗ್ರಾಫಿ, ಅಸ್ತಮಾ ಚಿಕಿತ್ಸೆಗೆ ಸ್ಪೇರೋಮೀಟರ್, ವಿಡಿಯೋ ಎಂಡೋಸ್ಕೋಪಿ, ಕೋಲೊನೋಸ್ಕೋಪಿ, ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆ, ಮೂತ್ರ ಜನಕಾಂಗದ ಶಸ್ತ್ರಚಿಕಿತ್ಸೆಗಾಗಿ ಕ್ರಯೋಸರ್ಜರಿ, ಫೇಕೋ ಶಸ್ತ್ರಚಿಕಿತ್ಸೆ ಸೌಲಭ್ಯದೊಂದಿಗೆ ಕಣ್ಣಿನ ಶಸ್ತ್ರಚಿಕಿತ್ಸೆ, ಇವೆಲ್ಲದರ ಜೊತೆಯಲ್ಲಿ ೨೪ ಗಂಟೆ ಕಾರ್ಯನಿರ್ವಹಿಸುವ ಆಂಬುಲೆನ್ಸ್ ಸೇವೆ ಹಾಗೂ ಇಲೆಕ್ಟ್ರೋಕನ್ವಲ್ಸಿವ್ ಥೆರಪಿ ಸೌಲಭ್ಯವೂ ಇಲ್ಲಿದೆ. ಇನ್ನು ಮಲ್ಟಿಪ್ಯಾರಾ ಮಾನಿಟರ್ ಸೌಲಭ್ಯದೊಂದಿಗೆ ಹವಾನಿಯಂತ್ರಿತ ಶಸ್ತ್ರಚಿಕಿತ್ಸಾ ಕೊಠಡಿ.. ಹೀಗೆ ನಗರದ ಪ್ರಮುಖ ಭಾಗದಲ್ಲಿ ಸ್ಥಾಪನೆಗೊಂಡಿರುವ ಚೇತನಾ, ಸುಸಜ್ಜಿತ ವೈದ್ಯಕೀಯ ಸೌಲಭ್ಯಗಳು, ನುರಿತ ತಜ್ಞವೈದ್ಯರು, ರೋಗಿಗಳಿಗೆ ಆಪ್ತಪಾಲನೆಯನ್ನು ಒದಗಿಸುವ ಸಿಬ್ಬಂದಿವರ್ಗ, ಇವರೆಲ್ಲರ ಒಗ್ಗಟ್ಟಿನ ಶ್ರಮದ ಫಲವಾಗಿ ‘ಚೇತನಾ’ 25 ಸಂವತ್ಸರಗಳ ಬಳಿಕವೂ ರೋಗಿಗಳ ಪಾಲಿಗೆ ಆಪ್ತಚೇತನಾಗಿ, ಆರೋಗ್ಯ ಚೇತರಿಕೆಯ ಹೆಗ್ಗುರುತಾಗಿ ಇಲ್ಲಿನವರ ಮನದಲ್ಲಿ ನೆಲೆಯಾಗಿದೆ ಎಂದು ಚೇತನಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Recent News


Leave a Comment: