Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29
ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.
ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.
ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.
ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.
ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.
Posted by Vidyamaana on 2023-06-12 15:19:08 |
ಉಪ್ಪಿನಂಗಡಿ;ಧಾರ್ಮಿಕ ಶಿಕ್ಷಣ ಕ್ಷೇತ್ರದಲ್ಲಿ ಜಾಗತಿಕ ಮನ್ನಣೆ ಪಡೆದ ಸಮಸ್ತ ಇಸ್ಲಾಮಿಕ್ ಮತ ವಿಧ್ಯಾಬ್ಯಾಸ ಬೋರ್ಡ್ ಅಧೀನದ ಜಂಹಿಯ್ಯತ್ತುಲ್ ಮುಹಲ್ಲಿಮೀನ್ ದಕ ಜಿಲ್ಲಾ ಸಮಿತಿಯ ಆಶ್ರಯಲ್ಲಿ ಮದ್ರಸ ಕ್ಷೇತ್ರಕ್ಕೆ ಶಕ್ತಿ ತುಂಬುವ ಸಲುವಾಗಿ ಸದರ್ ಮುಹಲ್ಲಿಂ ಸಂಗಮ ಜೂನ್ ಹನ್ನೆರಡು ಸೋಮವಾರ ಉಪ್ಪಿನಂಗಡಿಯ ಎಚ್ ಎಂ ಹಾಲ್ ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದುಹಾಶಿರ್ವಚನದ ಮೂಲಕ ಬೆಳ್ತಂಗಡಿ ಜಿಪ್ರಿ ತಂಙಲ್ ಉದ್ಘಾಟಿಸಿ ಮುಹಲ್ಲಿಮರು ಮಾದರಿ ಯೋಗ್ಯರಾಗಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.
ಕೇಂದ್ರೀಯ ಸಂಪನ್ನೂಲ ವ್ಯಕ್ತಿಗಳಾಗಿ ವಿಚಾರ ಮಂಡಿಸಿ ಮಾತನಾಡಿದ ಕೊಡಗು ಅಬ್ದುರ್ಹ್ಮಾನ್ ಮುಸ್ಲಿಯಾರ್ ಮುಹಲ್ಲಿಮರ ಜವಾಬ್ದಾರಿ ಯನ್ನು ನೆನಪಿಸಿದರು.ಇನ್ನೋರ್ವ ಭಾಷಣಗಾರ ಅಸ್ಲಮ್ ಅಝ್ಹರಿ ಮಾತನಾಡಿ ತಮ್ಮ ಸ್ವಂತ ಜೀವನ ಬದಲಾದರೆ ಸಮಾಜವನ್ನು ಬದಲಾಯಿಸಲು ಸಾಧ್ಯ ಎಂದರು.ಸಮಸ್ತ ಮುಶಾವರ ಸದಸ್ಯ ಉಸ್ಮಾನುಲ್ ಪೈಝಿ ಮಾತನಾಡಿ ಉಲಮಾಗಳು ವಸ್ತ್ರ ಸಂಹಿತೆಯಲ್ಲಿ ಕೂಡಾ ಇತರರಿಗೆ ಮಾದರಿಯಾಗ ಬೇಕು ಎಂದರು.
ರಾಜ್ಯ ದಾರಿಮಿ ಒಕ್ಕೂಟದ ಎಸ್ ಬಿ ದಾರಿಮಿ ಯವರು ಆಗಲೇ ಆಗಮಿಸಿದ ಸ್ಪೀಕರ್ ಯುಟಿ ಖಾದರ್ ರನ್ನು ಸ್ವಾಗತಿಸಿ ಮಾತನಾಡಿ ಮುಹಲ್ಲಿಮರ ಭವಣೆ ನೀಗಿಸಲು ಸಮಾಜ ಮತ್ತು ಸರಕಾರ ಮುಂದೆ ಬರಬೇಕು.ಲಕ್ಷಾಂತರ ಮಹಿಳೆಯರಿಗೆ ಎರಡು ಸಾವಿರ ರೂಪಾಯಿ ಕೊಡುವಾಗ ಕೆಲವೊಂದಿಷ್ಟು ಮದ್ರಸ ಅಧ್ಯಾಪಕರಿಗೆ ವಕಫ್ ಬೊರ್ಡ್ ಮೂಲಕ ಅನುದಾನ ಬಿಡುಗಡೆ ಗೊಳಿಸಿದರೆ ಅದು ದೊಡ್ಡ ಹೊರೆಯಾಗದು ಎಂದರು.
ಜಿಲ್ಲೆಯ ಬಹುತೇಕ ಮದ್ರಸ ಗಳು ಸಮಸ್ತದ ಆದರ್ಶದಂತೆ ನಡೆಯುತ್ತಿದೆ.ಆದರೆ ವಕಫ್ ಹಜ್ ಮೊದಲಾದ ಧಾರ್ಮಿಕ ಮಂಡಳಿಗೆ ಆಯ್ಕೆ ಮಾಡುವಾಗ ಸಮಸ್ತದ ಪ್ರತಿನಿಧಿಗಳನ್ನು ಕಡೆಗಣಿಸುವುದು ಇನ್ನು ಮುಂದೆ ಸಹಿಸಲಾಗದು ಎಂದರಲ್ಲದೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟ ಪಕ್ಷದ ಬೆನ್ನೆಲುಬಾಗಿ ನಿಲ್ಲಲು ಸಮಸ್ತದ ಅಭಿಮಾನಿಗಳು ಸದಾ ಮುಂಚೂಣಿಯಲ್ಲಿದ್ದರು.
ಕೋಮುವಾದಿ ಪಕ್ಷದ ಜೊತೆ ಹೊಂದಾಣಿಕೆ ಮಾಡಿದ ಇತಿಹಾಸ ಸಮಸ್ತದ ಕಾರ್ಯಕರ್ತರಿಗೆ ಇಲ್ಲ ಎಂದು ನೆನಪಿಸಿದರು.
ಇದೇ ಸಂಧರ್ಭದಲ್ಲಿ ಸರಕಾರದ ನೂತನ ಸ್ಪೀಕರ್ ಯುಟಿ ಖಾದರ್ ನ್ನು ಸನ್ಮಾನಿಸಲಾಯಿತು.
ನಂತರ ಭಾಷಣ ಮಾಡಿದ ಸ್ಪೀಕರ್ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನಾನು ಸದಾ ಬದ್ದನಾಗಿದ್ದೇನೆ.ಸಮುದಾಯದ ರಾಯಬಾರಿಗಳೆಂದರೆ ಅದು ಉಲಮಾಗಳು ಮಾತ್ರ.ಅವರ ಮಾರ್ಗದರ್ಶನ ಪಡೆದು ಮುಂದೆ ಸಾಗಿದರೆ ಇಲ್ಲಿ ಅಶಾಂತಿ ಅವ್ಯವಸ್ಥೆ ಉಂಟಾಗುವುದಿಲ್ಲ.ನನ್ನ ಇತಿಮಿತಿಯಲ್ಲಿ ಸಮಸ್ತದ ಕಾರ್ಯಕರ್ತ ರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಸಮಾರೋಪ ಭಾಷಣ ಮಾಡಿದ ಅಬ್ದುಲ್ ಖಾದಿರ್ ಅಲ್ ಖಾಸಿಮಿ ಮಾತನಾಡಿ ಕುರ್ಅನ್ ಕಲಿಕೆಯಲ್ಲಿ ಉಂಟಾಗುವ ಲೋಪದೋಷಗಳನ್ನು ಸರಿಪಡಿಸಲು ಅಧ್ಯಾಪಕರು ಶೃದ್ದೆ ವಹಿಸ ಬೇಕೆಂದು ಕರೆ ನೀಡಿದರು.ಹಾಜಿ ಕೆಂಪಿ ಮುಸ್ತಪ ಶುಭ ಹಾರೈಸಿದರು.ಜಿಲ್ಲಾ ಜಂಯಿತ್ತುಲ್ ಮುಹಲ್ಲಿಮೀನ್ ಅಧ್ಯಕ್ಷ ಹಾಜಿ ಶಂಸುದ್ದಿನ್ ದಾರಿಮಿ ಅಧ್ಯಕ್ಷತೆ ವಹಿಸಿದ್ದರು.ಕಡಬ ಇಬ್ರಾಹಿಂ ದಾರಿಮಿ ಕಿರಾಅತ್ ಪಠಿಸಿದರು.
ಸಿದ್ದೀಖ್ ಪೈಝಿ ಕರಾಯ ಸ್ವಾಗತಿಸಿ ರೆಂಜಾಡಿ ದಾರಿಮಿ ವಂದಿಸಿದರು.
ಬೆಳಗ್ಗೆ ನಡೆದ ಸರಳ ಸಮಾರಂಭದಲ್ಲಿ ಕೇಂದ್ರಿಯ ಘಟಕದ ವತಿಯಿಂದ ಪ್ರತೀ ಜಿಲ್ಲೆಗೆ ಒಂದರಂತೆ ನೀಡಲಾಗುವ ಎಂಟು ಲಕ್ಷ ವೆಚ್ಚದ ಮುಹಲ್ಲಿಂ ಮಂಝಿಲ್ ಗೆ ಸಯ್ಯಿದ್ ಅನಸ್ ತಂಙಳ್ ಶಿಲಾನ್ಯಾಸ ಗೈದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಮನವಿ ವಾಚಿಸಿದರು.
Posted by Vidyamaana on 2023-04-13 16:24:20 |
ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಿ.ಎಂ. ಬೊಮ್ಮಾಯಿಯವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಅವರ ವಾಹನ ತಪಾಸಣೆಗೆ ಒಳಪಡಿಸಿದ ಘಟನೆಯ ಬೆನ್ನಲ್ಲೇ ಎ.13 ರಂದು ಚುನಾವಣಾ ಅಧಿಕಾರಿಗಳು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ತಪಾಸಣೆ ನಡೆಸಿದ್ದಾರೆ.ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ಐದು ಪೊಲೀಸ್ ಭದ್ರತಾ ವಾಹನದೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಬರುತ್ತಿದ್ದಾಗ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ತಡೆದು ನಿಲ್ಲಿಸಿ ಕಾರು ಪರಿಶೀಲನೆ ನಡೆಸಿ ನಂತರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರು.ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಎಸ್.ಎಸ್.ಟಿ. ಅಧಿಕಾರಿ ಜಯಕೀರ್ತಿ ಹೆಚ್.ಬಿ., ಸುಖೇಶ್ ಜಿ, ಧರ್ಮಸ್ಥಳ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್, ಸುನಿಲ್ ಹಾಗೂ ಸಿ.ಆರ್.ಪಿ.ಎಫ್. ಪಡೆ ಸಿಬ್ಬಂದಿಗಳು ತಮ್ಮ ಕರ್ತವ್ಯ ನಿರ್ವಹಿಸಿದರು.
Posted by Vidyamaana on 2023-10-07 09:31:15 |
ಸುಳ್ಯ: ವಿದ್ಯಾಭ್ಯಾಸದ ನಂತರ ನಾವೇನು ಮಾಡಬೇಕು? ಎಂಬುದಕ್ಕೆ ಉತ್ತರವಾಗಿ ಇದೇ ಬರುವ ದಿನಾಂಕ ಅಕ್ಟೋಬರ್ 15 ಭಾನುವಾರದಂದು ಬೆಳಿಗ್ಗೆ 9:30ರಿಂದ ಮಧ್ಯಾಹ್ನ 3:30ರ ವರೆಗೆ ಐಎಎಸ್/ ಕೆಎಎಸ್/ ಬ್ಯಾಂಕಿಂಗ್/ ಎಸ್.ಡಿ.ಎ ಮತ್ತು ಎಫ್.ಡಿ.ಎ ಇತ್ಯಾದಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಮಾಡುವುದು ಹೇಗೆ ಮತ್ತು ನೇಮಕಾತಿಗಳ ವಿವರ , ಪ್ರಶ್ನೆಪತ್ರಿಕೆಗಳ ಸ್ವರೂಪ - ಪರೀಕ್ಷೆಗಳು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳ ಮೂಲಕ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ತನ್ನ ಸುಳ್ಯ ಶಾಖೆಯಲ್ಲಿ ಉಚಿತ ಮಾಹಿತಿ ಕಾರ್ಯಗಾರದ ಮೂಲಕ ನೀಡಲಿದೆ.
ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?
ಅಲ್ಲದೇ ಖಾಸಗಿ ಉದ್ಯೋಗಗಳಿಗೆ ಪ್ರಯತ್ನಿಸುವವರಿಗಾಗಿ ಕಂಪನಿಗಳ ನೇರ ಸಂದರ್ಶನವನ್ನು ಎದುರಿಸುವ ಬಗ್ಗೆ ಉದ್ಯೋಗ ಕೌಶಲ್ಯತೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಾರ್ಯಾಗಾರದಲ್ಲಿ ನೀಡಲಾಗುವುದು.
ವಿದ್ಯಾಮಾತಾ ಅಕಾಡೆಮಿಯು ಸುಳ್ಯದಲ್ಲಿ ನೂತನವಾಗಿ ಶಾಖೆಯನ್ನು ಪ್ರಾರಂಭಿಸಿದ್ದು ಬ್ಯಾಂಕಿಂಗ್, ಪೊಲೀಸ್, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳಿಗೆ ನೂರಾರು ಅಭ್ಯರ್ಥಿಗಳು ತರಬೇತಿಯನ್ನು ಪಡೆದು ಸೇರಿರುವುದನ್ನು ಸ್ಮರಿಸಿಕೊಳ್ಳಬಹುದು. ಇದೀಗ ಸುಳ್ಯ, ಕೊಡಗು, ಕಾಸರಗೋಡು ಮತ್ತು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ಖಾಸಗಿ ಉದ್ಯೋಗಗಳಿಗೆ ಪೂರ್ವ ತಯಾರಿಯನ್ನು ಮಾಡಿಕೊಳ್ಳಬೇಕೆಂಬ ಯೋಜನೆಯೊಂದಿಗೆ ಉಚಿತ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳು 12/10/2023 ರ ಒಳಗಾಗಿ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ (ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದಕ್ಷಿಣ ಕನ್ನಡ) ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು.
ಅಥವಾ 9448527606 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
Posted by Vidyamaana on 2024-02-28 16:48:11 |
ಮಂಗಳೂರು, ಫೆ.28: ಮಂಗಳೂರಿನಲ್ಲಿ ಖಾಸಗಿ ಬಸ್ ವ್ಯವಹಾರ ನೋಡಿಕೊಳ್ಳುತ್ತಿದ್ದ ನಗರದ ಬಜಾಲ್ ನಿವಾಸಿ ಪ್ರಜ್ವಲ್ ಡಿ. (35) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಭವಾನಿ ಬಸ್ನ ಮಾಲಕರಾಗಿದ್ದ ದಿ. ದೇವೇಂದ್ರ ಅವರ ಎರಡನೇ ಪುತ್ರ. ಮಂಗಳವಾರ ಬೆಳಗ್ಗೆ ಜೆ.ಎಂ. ರೋಡ್ನಲ್ಲಿರುವ ಸ್ವಗೃಹದಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ತನ್ನ ಸಹೋದರನ ಜೊತೆ ಸೇರಿ ಪ್ರಜ್ವಲ್ ಬಸ್ಸಿನ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಬ್ಯಾಂಕ್ ಸಾಲ ಹೊಂದಿದ್ದ ಇವರಿಗೆ ಬ್ಯಾಂಕ್ನವರು ಕಿರುಕುಳ ನೀಡುತ್ತಿದ್ದರೆಂಬ ಆರೋಪ ಇದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಪತ್ನಿ ಮತ್ತು ನಾಲ್ಕು ವರ್ಷದ ಮಗುವನ್ನು ಅಗಲಿದ್ದಾರೆ.
Posted by Vidyamaana on 2024-01-08 11:06:36 |
ಬೆಂಗಳೂರು : ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ದಟ್ಟವಾಗಿದೆ.ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಕೇಂದ್ರ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿ, ಕೇಂದ್ರ ಸರ್ಕಾರದ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರು ಎಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅತ್ಯಂತ ಪ್ರೀತಿ ವಿಶ್ವಾಸದಿಂದ ಗೌರವಿಸಲಾಯಿತು ಎಂದು ತಿಳಿಸಿದ್ದಾರೆ.
ಇದೇ ವೇಳೆ ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ವರ್ಗಕ್ಕೆ ಸೇರಿಸುವುದು, ರಾಜ್ಯದ ತೆಂಗು ಬೆಳೆಗಾರರಿಂದ ಕೊಬ್ಬರಿ ಖರೀದಿ ಹಾಗೂ ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಎಚ್ಡಿಕೆ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ
ಎನ್ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್ಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಇರಾದೆ ಬಿಜೆಪಿ ವರಿಷ್ಠರದ್ದಾಗಿದೆ. ರಾಮಮಂದಿರ ಉದ್ಘಾಟನೆ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಐವರು ಹೊಸದಾಗಿ ಸೇರ್ಪಡೆಯಾಗಲಿದ್ದಾರೆ. ಇದೇ ವೇಳೆ ಕುಮಾರಸ್ವಾಮಿ ಅವರು ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ದಟ್ಟವಾಗಿದೆ ಎಂದು ಮೂಲಗಳು ಹೇಳಿವೆ.
ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್, ಗೆದ್ದ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ, ಸಂಪುಟ ದರ್ಜೆಯ ಖಾತೆ ಖಾಲಿ ಇದೆ. ಕೃಷಿ ಖಾತೆಯ ಬಗ್ಗೆ ಕುಮಾರಸ್ವಾಮಿ ಒಲವು ಹೊಂದಿದ್ದು, ಸಂಪುಟಕ್ಕೆ ಸೇರಿದರೆ ಅದೇ ಖಾತೆ ಸಿಗುವ ಸಂಭವ ಇದೆ ಎಂಬ ಚರ್ಚೆಯೂ ನಡೆದಿದೆ. ಕೃಷಿ ಖಾತೆ ರಾಜ್ಯ ಸಚಿವರಾಗಿ ರಾಜ್ಯದವರೇ ಆದ ಶೋಭಾ ಕರಂದ್ಲಾಜೆ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಕುಮಾರಸ್ವಾಮಿ ಕೃಷಿ ಸಚಿವರಾದರೆ, ಶೋಭಾ ಖಾತೆ ಬದಲಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
Posted by Vidyamaana on 2023-08-05 10:51:31 |
ಮಂಗಳೂರು: ಮಹಿಳೆಯೊಬ್ಬರು ಸ್ನಾನ ಮಾಡುವಾಗ ವೀಡಿಯೊ ಚಿತ್ರೀಕರಣ ಮಾಡುತ್ತಿದ್ದವ ನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯೊಂದು ಬುಧವಾರ ನಡೆದಿದ್ದು, ಸುಮಂತ್ ಪೂಜಾರಿಗೆ ನ್ಯಾಯಾಂಗ ಬಂಧನವಾಗಿದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ, ಘಟನೆಗೆ ಸಂಬಂಧಿಸಿ ಪ್ರಜ್ವಲ್ ಎಂಬವರು ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸುಮಂತ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನ್ಯಾಯಾಲಯವು ಸುಮಂತ್ ಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮೊಬೈಲ್ ಫೋನ್ ನ್ನು ಎಫ್ಎಸ್ಎಲ್ ತನಿಖೆಗೆ ಕಳುಹಿಸಲಾಗಿದ್ದು, ವರದಿಯ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ