ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸುದ್ದಿಗಳು News

Posted by vidyamaana on 2024-07-05 17:03:24 |

Share: | | | | |


ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ.

ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ. 5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ ಹಾಗೂ ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

 Share: | | | | |


ಹತ್ತೂರ ಒಡೆಯನ ಸಮಕ್ಷಮದಲ್ಲಿ ಸಂಪನ್ನಗೊಳ್ಳಲಿದೆ ಭಕ್ತಿ ಭಾವದ ಶ್ರೀನಿವಾಸ ಕಲ್ಯಾಣೋತ್ಸವ

Posted by Vidyamaana on 2023-12-21 06:27:24 |

Share: | | | | |


ಹತ್ತೂರ ಒಡೆಯನ ಸಮಕ್ಷಮದಲ್ಲಿ ಸಂಪನ್ನಗೊಳ್ಳಲಿದೆ ಭಕ್ತಿ ಭಾವದ ಶ್ರೀನಿವಾಸ ಕಲ್ಯಾಣೋತ್ಸವ

ಪುತ್ತೂರು : ಪುತ್ತಿಲ ಪರಿವಾರ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಆಶ್ರಯದಲ್ಲಿ ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಎದುರಿನ ದೇವರ ಮಾರು ಗದ್ದೆಯಲ್ಲಿ ಡಿ.24 ಮತ್ತು 25 ರಂದು ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮ ಕಾರ್ಯಕ್ರಮ ನಡೆಯುವುದು ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಮತ್ತು ಸ್ವಾಗತ ಸಮಿತಿಯ ಸಂಚಾಲಕ ಪ್ರಸನ್ನಕುಮಾರ್ ಮಾರ್ತ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಎದುರಿನ ಗದ್ದೆಯಲ್ಲಿ ಇದೇ ಮೊದಲ ಬಾರಿಗೆ  ಶ್ರೀನಿವಾಸ ಕಲ್ಯಾಣೋತ್ಸವ ನಡೆಯುವುದು. ಡಿ.24ರಂದು ಬೆಳಿಗ್ಗೆ 6.30ರಿಂದ ಭಜನಾ ಕಾರ್ಯಕ್ರಮ. ಸಂಜೆ 4ಗಂಟೆಗೆ ನಗರದ ಬೊಳುವಾರಿನಲ್ಲಿ ಶ್ರೀದೇವಿ,ಭೂದೇವಿ ಸಹಿತ ಶ್ರೀನಿವಾಸ ದೇವರನ್ನು ಭಕ್ತಿಪೂರ್ವಕ ಸ್ವಾಗತಿಸಿ, ಬಳಿಕ ಅಲ್ಲಿಂದ ಮಹಾಲಿಂಗೇಶ್ವರ ದೇವಳದ ಗದ್ದೆ ತನಕ ಪುಷ್ಪವೃಷ್ಠಿ, ವಿದ್ವಾಂಸರ ವೇದಪಠಣ,ಶಂಕನಾದ, ಚೆಂಡೆವಾದ್ಯಗಳ ಪೋಷದೊಂದಿಗೆ ಶ್ರೀ ದೇವರ ಭವ್ಯ ಶೋಭಾಯಾತ್ರೆ ನಡೆಯಲಿದೆ.

ಸಂಜೆ 5.30ಕ್ಕೆ ದ.ಕ.ಮತ್ತು ಉಡುಪಿ ಜಿಲ್ಲೆಯ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಸನಾತನ ಸಮಾಗಮ ಕಾರ್ಯಕ್ರಮ ನೆಡೆಯಲಿದೆ. ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ,ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ,ಆನೆಗುಂಡಿ ಮಹಾಸಂಸ್ಥಾನಂ ಸರಸ್ವತೀ ಪೀಠದ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ, ಚಿತ್ರಾಪುರ ಮಠದ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಮಂಗಳೂರು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ, ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ, ಅರೆಮಾದೇನಹಳ್ಳಿ ವಿಶ್ವಕರ್ಮ ಪೀಠದ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ, ಮಾಣಿಲ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ, ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ, ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕನ್ಯಾನ ಕಣಿಯೂರು ಕ್ಷೇತ್ರದ ಮಹಾಬಲ ಸ್ವಾಮೀಜಿ, ಕನ್ಯಾಡಿ ಮಠದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ,ವಿಟ್ಲ ಯೋಗೀಶ್ವರ ಮಠದ ರಾಜಗುರು ಯೋಗಿ ಶ್ರದ್ಧಾನಾಥ ಜೀ, ಕುಕ್ಕಾಜೆ ಕಾಳಿಕಾಂಬಾ ಆಂಜನೇಯ ಕ್ಷೇತ್ರದ ಕೃಷ್ಣ ಗುರೂಜಿ ಭಾಗವಹಿಸುವರು.  ಬಳಿಕ ರಾಜ್ಯದ ಪ್ರತಿಷ್ಠಿತ ತಂಡಗಳಿಂದ ಸಾಂಸ್ಕೃತಿ ಕಾರ್ಯಕ್ರಮ, ಅನ್ನಸಂತರ್ಪಣೆ ನಡೆಯುವುದು ಎಂದು ಅವರು ತಿಳಿಸಿದರು.


ಡಿ.25ರಂದು ಬೆಳಿಗ್ಗೆ 6ಗಂಟೆಗೆ ಸುಪ್ರಭಾತ ಪೂಜೆ ಆರಂಭಗೊಳ್ಳುವುದು.ಅಪರಾಹ್ನ ಗಂಟೆ 2ರಿಂದ ಭಜನೋತ್ಸವ ನಡೆಯಲಿದೆ.ಸಂಜೆ 6ಗಂಟೆಗೆ ವೈಭವದ ಕಲ್ಯಾಣೋತ್ಸವ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸುಮಾರು 50 ಸಾವಿರ ಮಂದಿಗೆ ಲಡ್ಡು ಪ್ರಸಾದ ವಿತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.


ಹೊರೆಕಾಣಿಕೆ ಸಮರ್ಪಣೆ

ಡಿ.23ರಂದು ಗ್ರಾಮ ಮಟ್ಟಗಳಲ್ಲಿ ಹೊರೆಕಾಣಿಕೆ ಸಂಗ್ರಹಿಸಿ, ಸಂಜೆ 5 ಗಂಟೆಗೆ ನಗರದ ದರ್ಬೆ ಯಿಂದ ಮಹಾಲಿಂಗೇಶ್ವರ ದೇವಳ ಗದ್ದೆ ತನಕ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದ ಸ್ವಾಗತ ಸಮಿತಿಯ ಸಂಚಾಲಕ ಪ್ರಸನ್ನಕುಮಾರ್ ಮಾರ್ತ ಅವರು ಕಾರ್ಯಕ್ರಮಕ್ಕೆ ಬೇಕಾಗುವ ದಿನಸಿ ಸಾಮಾಗ್ರಿಗಳನ್ನು ನೀಡಿ ಅನ್ನದಾನಕ್ಕೆ ಸಹಕರಿಸುವಂತೆ ವರ್ತಕರಲ್ಲಿ ಮನವಿ ಮಾಡಿಕೊಂಡರು.


ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್ ಬನ್ನೂರು, ಸ್ವಯಂ ಸೇವಕ ಸಮಿತಿಯ ಸಂಚಾಲಕ ಅನಿಲ್ ತೆಂಕಿಲ, ಪ್ರಚಾರ ಮತ್ತು ಮಾಧ್ಯಮ ಸಮಿತಿಯ ಸಂಚಾಲಕ ನವೀನ್ ರೈ ಪಂಜಳ, ಕಾರ್ಯದರ್ಶಿ ಪ್ರಜ್ವಲ್ ಘಾಟೆ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಬೆಂಗಳೂರು ಕಂಬಳ ಆಯೋಜನೆ ಶಾಸಕ ಅಶೋಕ್ ರೈ ಅವರಿಗೆ ಶಹಬ್ಬಾಸ್ ಎಂದ ಸಿಎಂ ಸಿದ್ದರಾಮಯ್ಯ

Posted by Vidyamaana on 2023-11-26 12:27:36 |

Share: | | | | |


ಬೆಂಗಳೂರು ಕಂಬಳ ಆಯೋಜನೆ  ಶಾಸಕ ಅಶೋಕ್ ರೈ ಅವರಿಗೆ ಶಹಬ್ಬಾಸ್ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನ.25: ಬೆಂಗಳೂರು ಕಂಬಳದಲ್ಲಿ ತುಳು ಅಧಿಕೃತ ಭಾಷೆಯಾಗಬೇಕೆಂಬ ಧ್ವನಿ ನಾಲ್ಕೂರುಗಳಿಗೆ ಮಾರ್ದನಿಸಿದೆ. ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತುಳು ಭಾಷಿಗರ ಬಗ್ಗೆ ಅಭಿಮಾನ ತೋರಿದ್ದಾರೆ. ತುಳು ಭಾಷೆಯನ್ನು ಹೆಚ್ಚುವರಿ ಭಾಷೆಯಾಗಿಸುವ ವಿಚಾರದಲ್ಲಿ ನಿಮ್ಮ ಭಾಗದವರೇ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಿದ್ದರಲ್ವಾ.. ಯಾಕೆ ಮಾಡಿಲ್ಲ ಎಂದು ಕುಹುಕದ ಪ್ರಶ್ನೆಯೆತ್ತಿ ನಾವು ಆ ಕೆಲಸವನ್ನು ಮಾಡಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ. 


ಉಡುಪಿ, ಮಂಗಳೂರಿನ ಇಬ್ಬರು ಎಲ್ಲೇ ಸಿಗಲಿ ಅವರು ತುಳುವಿನಲ್ಲೇ ಮಾತಾಡುತ್ತಾರೆ. ನಡುವೆ ನಾವಿದ್ದರೆ ಅವರ ಮುಖ ನೋಡುವ ಸ್ಥಿತಿ. ಬಿ.ಆರ್ ಶೆಟ್ಟಿ ಹಿಂದೆ ದುಬೈನಲ್ಲಿದ್ದರೂ ಕರಾವಳಿಯ ಯಾರೇ ಸಿಕ್ಕಿದರೂ ಅವರಲ್ಲಿ ತುಳುವಲ್ಲೇ ಮಾತಾಡುತ್ತಿದ್ದರು ಅಂತ ವೇದಿಕೆಯಲ್ಲಿದ್ದ ಶೆಟ್ಟರ ಮುಖ ನೋಡಿ ನಕ್ಕರು. ಆ ಭಾಗದವರಿಗೆ ತುಳು ಭಾಷೆ ಅಂದ್ರೆ ಅಷ್ಟೊಂದು ಪ್ರೀತಿ. ಈ ಭಾಷೆಗೆ ಸ್ವಂತ ಲಿಪಿ ಇಲ್ಲ ತಾನೇ ಎಂದು ಕೇಳಿದಾಗ, ಸೇರಿದ್ದ ಜನರು ಇದೆ, ಇದೆ ಎಂದು ಉದ್ಘೋಷ ಹಾಕಿದರು. ತುಳು ಲಿಪಿ ಇದೆಯಾ.. ಓಕೆ.. ತುಳುವನ್ನು ಹೆಚ್ಚುವರಿ ಭಾಷೆ ಮಾಡಬೇಕೆಂದು ಅಶೋಕ್ ರೈ ವಿಧಾನಸಭೆಯಲ್ಲಿ ಮಾತಾಡಿದ್ರು. ಆಗ ಕನ್ನಡ ಮತ್ತು ಸಂಸ್ಕೃತಿ ಸಚಿವರು ಉತ್ತರ ಕೊಟ್ಟಿದ್ರು. ಹಿಂದೆ ನಿಮ್ಮ ಭಾಗದವರೇ ಈ ಖಾತೆಯ ಸಚಿವರಾಗಿದ್ದರು. ಆಗ ಸುಲಭದಲ್ಲಿ ಮಾಡಬಹುದಿತ್ತು. ಮಾಡಿಲ್ಲ ತಾನೇ..?ನಾವು ಆ ಪ್ರಯತ್ನ ಮಾಡುತ್ತೇವೆ. ತುಳುವನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾಡುತ್ತೇವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೆಸರೆತ್ತದೆ ಕಾಲೆಳೆಯುತ್ತ ವ್ಯಂಗ್ಯವಾಡಿದರು. ಅಲ್ಲದೆ, ಕಂಬಳಕ್ಕೆ ಇಷ್ಟೊಂದು ಜನ ಸೇರುತ್ತಾರೆಂದು ಗೊತ್ತಿರಲಿಲ್ಲ. ಬೆಂಗಳೂರಿನಲ್ಲಿ ಕಂಬಳ ಮಾಡಿದ್ದಕ್ಕಾಗಿ ಅಶೋಕ್ ರೈಗೆ ಶಹಭಾಸ್ ಹೇಳುತ್ತೇನೆ. ಪ್ರತಿ ವರ್ಷ ಇಲ್ಲಿ ಕಂಬಳ ಮಾಡಬೇಕೆಂದು ಆಶಿಸುತ್ತೇನೆ, ಇದೊಂದು ದೊಡ್ಡ ಈವೆಂಟ್ ಎಂದು ಹೇಳಿ ಮೆಚ್ಚುಗೆ ಸೂಚಿಸಿದರು.ಕಂಬಳ ಸಮಾರಂಭದಲ್ಲಿ ಕರಾವಳಿಯ ಜನಪ್ರತಿನಿಧಿಗಳು ಹೆಚ್ಚಿನವರು ತಾವೂ ತುಳುವರೆಂದು ಹೇಳಿಕೊಳ್ಳಲು ತುಳು ಭಾಷೆಯಲ್ಲೇ ಮಾತನಾಡಿದ್ರು. ಯುಟಿ ಖಾದರ್ ಸೇರಿದಂತೆ ಹಲವು ನಾಯಕರು ಸಮಾರಂಭದಲ್ಲಿ ಭಾಗವಹಿಸಿ ತುಳುವಿನಲ್ಲಿ ಮಾತಾಡಿದ್ರು. ಸಿಎಂ ಸಿದ್ದರಾಮಯ್ಯ ವೇದಿಕೆಯಲ್ಲಿದ್ದಾಗ ಕಂಬಳದ ವಿಶೇಷ ಬಗ್ಗೆ ಖಾದರ್ ಅವರೇ ಹೇಳುತ್ತಿದ್ದರು.

ತುಳು ಭಾಷೆ ಹೆಚ್ಚುವರಿ ಭಾಷೆ-ಭರವಸೆಯಿದೆ- ಅಶೋಕ್ ಕುಮಾ‌ರ್ ರೈ:


ಪ್ರಾಸ್ತಾವಿಕ ನುಡಿಗಳನ್ನಾಡಿದ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈಯವರು ತುಳು ಭಾಷೆಯನ್ನು ಹೆಚ್ಚುವರಿ ಭಾಷೆಯನ್ನಾಗಿ ಮಾಡಬೇಕೆಂದು ಎಲ್ಲಾ ತುಳುವರ ಪರವಾಗಿ ಮನವಿ ಇದೆ.ಮುಖ್ಯಮಂತ್ರಿಯವರಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ವೇಳೆ ಐದು ಇಲಾಖೆಗಳ ಎನ್‌ಒಸಿ ಬಂದಾಗ ತುಳುವಿಗೆ ಮಾನ್ಯತೆ ಸಿಗಲಿದೆ ಎಂದಿದ್ದಾರೆ.ಈ ಬಗ್ಗೆ ಅವರು ಸತತ ಪ್ರಯತ್ನ ಮಾಡಿ ತುಳುವರಿಗೆ ಮನ್ನಣೆ ಒದಗಿಸಿಕೊಡುವ ಕೆಲಸ ಮಾಡಲಿದ್ದಾರೆ ಎನ್ನುವ ಭರವಸೆ ಇದೆ ಎಂದರು.

ಸಭಾಧ್ಯಕ್ಷತೆ ವಹಿಸಿ ಮಾತನಾಡಿದ ಕಂಬಳ ಸಮಿತಿಯ ಗೌರವಾಧ್ಯಕ್ಷ ಕೆ.ಪ್ರಕಾಶ್‌ ಶೆಟ್ಟಿಯವರು ಮಾತನಾಡಿ,`ತುಳುನಾಡಿನಲ್ಲಿ ಹುಟ್ಟಿರುವುದು ನಮ್ಮ ಭಾಗ್ಯ.ಕರಾವಳಿಯ ಬುದ್ದಿವಂತರು ಮಾತ್ರವಲ್ಲ.ನಾವು ಸಾಧಕರು ಎಂಬುದನ್ನು ಕಂಬಳ ಆಯೋಜನೆಯ ಮೂಲಕ ಸಾಬೀತಾಗಿದೆ ಎಂದರು.


ಅನಿವಾಸಿ ಉದ್ಯಮಿ ಡಾ|ಬಿ.ಆ‌ರ್. ಶೆಟ್ಟಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.ಕಂದಾಯ ಸಚಿವ ಕೃಷ್ಣ ಬೈರೇ ಗೌಡ ಮಾತನಾಡಿ ಕಂಬಳದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು.ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಎಂ.ಲಮಾಣಿ, ವಿಧಾನಪರಿಷತ್ ಸದಸ್ಯ ಡಾ|ಮಂಜುನಾಥ ಭಂಡಾರಿ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಕಂಬಳದ ಪ್ರಾಯೋಜಕರಾದ ಉದಯ್ ಶೆಟ್ಟಿ ಮುನಿಯಾಲು, ಆಭರಣ ಜ್ಯುವೆಲ್ಲರ್ಸ್‌ನ ಮಧುಕರ್ ಪ್ರತಾಪ್,ಬೆಂಗಳೂರು ಕಂಬಳ ಸಮಿತಿ ಉಪಾಧ್ಯಕ್ಷರಾದ ಗುಣರಂಜನ್ ಶೆಟ್ಟಿ, ಕಾವು ಹೇಮನಾಥ್ ಶೆಟ್ಟಿ ಕಾವು, ಅನಿತಾ ಹೇಮನಾಥ ಶೆಟ್ಟಿ, ಪ್ರಿಯಾಂಕಾ ಉಪೇಂದ್ರ, ಉಮೇಶ್ ಶೆಟ್ಟಿ, ಬೆಳಪು ದೇವಿಪ್ರಸಾದ್‌ ಶೆಟ್ಟಿ, ವಿಠಲ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯದರ್ಶಿ ದೀಪಕ್ ಕುಮಾ‌ರ್ ಶೆಟ್ಟಿ ಸ್ವಾಗತಿಸಿದರು.ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್‌ ಶೆಟ್ಟಿ ವಂದಿಸಿದರು.



ಪ್ರತೀಯೊಬ್ಬ ಫಲಾನುಭವಿಗೆ ಹಕ್ಕುಪತ್ರ ತಲುಪಿಸಲು ನಾನು ಬದ್ಧ – ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2024-01-02 22:29:50 |

Share: | | | | |


ಪ್ರತೀಯೊಬ್ಬ ಫಲಾನುಭವಿಗೆ ಹಕ್ಕುಪತ್ರ ತಲುಪಿಸಲು ನಾನು ಬದ್ಧ – ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಪುತ್ತೂರು ಹಾಗೂ ಉಪ್ಪಿನಂಗಡಿ ಹೋಬಳಿಯಲ್ಲಿ ಬಾಕಿಯಿರುವ ಅಕ್ರಮ-ಸಕ್ರಮ, 94ಸಿ, 94ಸಿಸಿ ಹಕ್ಕುಪತ್ರ ವಿತರಣೆಯನ್ನು ಪ್ರಾಮಾಣಿಕವಾಗಿ, ಭ್ರಷ್ಟಾಚಾರ ರಹಿತವಾಗಿ ಕಾನೂನಿನ ಚೌಕಟ್ಟಿನಲ್ಲಿ, ಸಂಬಂಧ ಪಟ್ಟ ಅಧಿಕಾರಿಗಳ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಫಲಾನುಭವಿಯ ಮನೆಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಅಶೋಕ್‌ ಕುಮಾ‌ರ್ ರೈ ಹೇಳಿದರು.


ಅವರು ಶಾಸಕರ ಕಚೇರಿ ಎದುರು ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ಹಾಗೂ ಉಪ್ಪಿನಂಗಡಿ ಹೋಬಳಿಯ ಅಕ್ರಮ-ಸಕ್ರಮ, 94ಸಿ ಹಾಗೂ 94ಸಿಸಿ ಹಕ್ಕುಪತ್ರ ವಿತರಿಸಿ ಮಾತನಾಡಿದರು.


ಇಂದು ಸುಮಾರು 460 ಮಂದಿಗೆ ಹಕ್ಕುಪತ್ರ ವಿತರಣೆ ನಡೆದಿದೆ. ಮುಂದೆ -ವಿಟ್ಲ ಭಾಗದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗಾಗಿ 260 ಕಡತಗಳು ರೆಡಿಯಾಗಿದೆ ಎಂದು ತಿಳಿಸಿದರು.


ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಮಾತನಾಡಿ, ಪುತ್ತೂರಿನಲ್ಲಿ ಸರಕಾರದ ಯೋಜನೆ ಪ್ರತಿಯೊಬ್ಬ ಬಡ ಫಲಾನುಭವಿಗೆ ತಲುಪುವ ನಿಟ್ಟಿನಲ್ಲಿ ಪುತ್ತೂರಿನ ಪ್ರತಿ ಸರಕಾರಿ ಕಚೇರಿಯಲ್ಲಿ ನನ್ನ ವೈಯಕ್ತಿಕ ಮೊಬೈಲ್ ನಂಬ‌ರ್ ಅಳವಡಿಸುತ್ತೇನೆ. ಏನಾದರೂ ಸಮಸ್ಯೆ ಉಂಟಾದಲ್ಲಿ ನನಗೆ ಕರೆ ಮಾಡಬಹುದು ಎಂದು ತಿಳಿಸಿದ ಅವರು, ಸರಕಾರಿ ಕೆಲಸವನ್ನು ಎಲ್ಲರೊಂದಿಗೆ ಕೈಜೋಡಿಸಿ ಶ್ರಮ ಪಟ್ಟು ಮಾಡುತ್ತೇನೆ ಎಂದರು.


ವೇದಿಕೆಯಲ್ಲಿ ತಹಶೀಲ್ದಾ‌ರ್ ಶಿವಶಂಕ‌ರ್, ಅಕ್ರಮ-ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು,ರಾಮಣ್ಣ ಪಿಲಿಂಜ, ರೂಪರೇಖಾ ಆಳ್ವ ಉಪಸ್ಥಿತರಿದ್ದರು.

ಸುರತ್ಕಲ್: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್ ಸಹೋದರ ಆದಿಲ್ ಗೆ ಹಲ್ಲೆ.

Posted by Vidyamaana on 2023-02-08 16:23:20 |

Share: | | | | |


ಸುರತ್ಕಲ್: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್ ಸಹೋದರ  ಆದಿಲ್ ಗೆ ಹಲ್ಲೆ.

ಸುರತ್ಕಲ್: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್ ಅವರ ಸಹೋದರ ಆದಿಲ್ ಎಂಬವರಿಗೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಕಾಟಿಪಳ್ಳದ ಗಣೇಶ್ ಪುರ ಎಂಬಲ್ಲಿ ನಡೆದಿದೆ.

ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದಾರೆ.

ಜೋರು ಮಳೆಗೆ ರಜೆ ನಡುವೆ ಚಿಣ್ಣರಿಗೆ ಇನ್ನೊಂದು ಗುಡ್ ನ್ಯೂಸ್

Posted by Vidyamaana on 2023-07-06 03:59:05 |

Share: | | | | |


ಜೋರು ಮಳೆಗೆ ರಜೆ ನಡುವೆ ಚಿಣ್ಣರಿಗೆ ಇನ್ನೊಂದು ಗುಡ್ ನ್ಯೂಸ್

ಬೆಂಗಳೂರು: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.ಇತ್ತೀಚೆಗಷ್ಟೇ ಶಾಲಾ ಬ್ಯಾಗ್‌ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದೆ.ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ. 2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚನೆ ನೀಡಿದೆ.ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್‌ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ.ಈ ಕುರಿತು ಜಿಲ್ಲಾ, ತಾಲ್ಲೂಕು ಹಾಗೂ ಕ್ಲಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯ ಶಿಕ್ಷಕರು ಶಿಕ್ಷಕರ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.ಸಂಭ್ರಮ ಶನಿವಾರ ದಂದು ಜಿಲ್ಲಾ ಹಂತ, ಬ್ಲಾಕ್ ಹಂತದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ. 2023-24ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೋಡೀಕೃತ ವರದಿಯನ್ನು ಪ್ರತಿ ತಿಂಗಳು ಸಿದ್ಧಪಡಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಡಿಎಸ್‌ಇಆರ್‌ಟಿ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ. ವಿದ್ಯಾರ್ಥಿ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಕೈಪಿಡಿಯನ್ನು ಡಿಎಸ್‌ಇಆರ್‌ಟಿ ವೆಬ್‌ಸೈಟ್ https://dsert.karnataka.gov.in/ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದ ಕಾರ್ಪೋರೇಟರ್ ಚೇತರಿಕೆ

Posted by Vidyamaana on 2024-01-05 07:15:35 |

Share: | | | | |


ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದ ಕಾರ್ಪೋರೇಟರ್ ಚೇತರಿಕೆ

ಮಂಗಳೂರು: ನಗರದ ಬೋಳೂರು ವಾರ್ಡ್ ನ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ನಗರ ಸ್ಟೇಟ್ ಬ್ಯಾಂಕ್ ಬಳಿ ಕಾರಿನಲ್ಲಿ ಕುಳಿತು ಜಗದೀಶ್‌ ಶೆಟ್ಟಿ ವಿಷ ಸೇವನೆ ಮಾಡಿದ್ದರು. ಕಾರಿನೊಳಗೆ ಇದ್ದ ಅವರನ್ನು ಗಮನಿಸಿದ ಸ್ಥಳೀಯರು ಮತ್ತು ಪೊಲೀಸರು ಗಾಜು ಒಡೆದು ಹೊರ ತೆಗೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮೊದಲಾದವರು ಭೇಟಿ‌ ನೀಡಿದ್ದು, ಕುಟುಂಬಕ್ಕೆ ಧೈರ್ಯ ಹೇಳಿದ್ದಾರೆ.

Recent News


Leave a Comment: