Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23
ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”
ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.
ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.
ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.
ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!
ಡಾ. ಶಿವರಾಮ ಭಟ್ ಗುರು:
ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ. ಶಿವರಾಮ ಭಟ್ ಎಂದು ನಂಬಿದ್ದರು.
ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!
ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.
Posted by Vidyamaana on 2024-01-07 10:56:52 |
ಬೆಂಗಳೂರು : ಬೆಂಗಳೂರು ನಗರದ ಓಲ್ಡ್ ಮದ್ರಾಸ್ ರಸ್ತೆಯ ಬಹುಮಹಡಿ ಕಟ್ಟಡದಲ್ಲಿರುವ ನಿರ್ವಾಣ ಸ್ಪಾ ಮೇಲೇ ಸಿಸಿಬಿ ದಾಳಿ ನಡೆಸಿದ್ದರಿಂದ ವೇಶ್ಯಾವಾಟಿಕೆ ದಂಧೆ ಬಯಲಾಗಿದೆ.ಸ್ಪಾ ಮಾಲೀಕ ಅನೀಲ್ ಎಂದು ಹೇಳಲಾಗುತ್ತಿದ್ದು, ಬೇರೆ ರಾಜ್ಯದಿಂದ ಆಗಮಿಸಿ ಇಲ್ಲಿ ಸ್ಪಾ ನಡೆಸುತ್ತಿದ್ದ, ಆದರೆ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದದ್ದು ಬಯಲಾಗಿದೆ.ಆರೋಪಿಯೂ ಹೊರ ರಾಜ್ಯ ವಿದೇಶದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎನ್ನಲಾಗುತ್ತಿದೆ.
ಸಿಸಿಬಿ ಮಹಿಳಾ ಸಂರಕ್ಷಣಾ ದಳವು ದಾಳಿ ನಡೆಸಿದ ವೇಳೆ ಒಟ್ಟು 44 ಮಹಿಳೆಯರನ್ನು ಕ್ಷಣೆ ಮಾಡಲಾಗಿದ್ದು 34 ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಹುಮಡಿ ಕಟ್ಟಡದ 1 ಮತ್ತು 6ನೇ ಫ್ಲೋರ್ ನಲ್ಲಿ ಈ ದಂದೆ ನಡೆಯುತ್ತಿತ್ತು.
ಹೊರ ರಾಜ್ಯ ಹಾಗೂ ದೇಶದಿಂದ ಯುವತಿಯರನ್ನು ಕರೆದೊಯ್ದು ಆರೋಪಿ ವೇಶ್ಯಾವಾಟಿಕೆಯಲ್ಲಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಯನ್ನು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2024-02-27 08:41:28 |
ನವದೆಹಲಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (ಪಿಪಿಬಿಎಲ್) ಅಧ್ಯಕ್ಷ ಸ್ಥಾನಕ್ಕೆ ವಿಜಯ್ ಶೇಖರ್ ಶರ್ಮಾ ರಾಜೀನಾಮೆ ನೀಡಿದ್ದಾರೆ. ಪಿಪಿಬಿಎಲ್ ಮಂಡಳಿಯನ್ನು ಪುನರ್ ರಚಿಸಲಾಗಿದೆ ಎಂದು ಒನ್ 97 ಕಮ್ಯುನಿಕೇಷನ್ಸ್ ಷೇರು ಮಾರುಕಟ್ಟೆ ಮಂಡಳಿಗೆ ಮಾಹಿತಿ ನೀಡಿದೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಶ್ರೀಧರ್, ನಿವೃತ್ತ ಐಎಎಸ್ ಅಧಿಕಾರಿ ದೇಬೇಂದ್ರನಾಥ್ ಸಾರಂಗಿ, ಬ್ಯಾಂಕ್ ಆಫ್ ಬರೋಡಾದ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಅಶೋಕ್ ಕುಮಾರ್ ಗರ್ಗ್ ಮತ್ತು ನಿವೃತ್ತ ಐಎಎಸ್ ರಜನಿ ಸೆಖ್ರಿ ಸಿಬಲ್ ಪಿಪಿಬಿಎಲ್ ಮಂಡಳಿಗೆ ಸೇರಿದ್ದಾರೆ ಎಂದು ಒನ್ 97 ಕಮ್ಯುನಿಕೇಷನ್ಸ್ ಲಿಮಿಟೆಡ್ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. ಅವರು ಸ್ವತಂತ್ರ ನಿರ್ದೇಶಕರಾಗಿ ಸೇರಿಕೊಂಡಿದ್ದಾರೆ ಎಂದು ತಿಳಿಸಿದೆ.
ಜನವರಿ 31 ರಂದು ಆರ್ಬಿಐ ಪಿಪಿಬಿಎಲ್ ಮೇಲೆ ಪ್ರಮುಖ ವ್ಯವಹಾರ ನಿರ್ಬಂಧಗಳನ್ನು ವಿಧಿಸಿತು. ಇದರಲ್ಲಿ ಫೆಬ್ರವರಿ 29 ರ ನಂತರ ಹೊಸ ಠೇವಣಿಗಳನ್ನು ಸ್ವೀಕರಿಸುವುದು ಮತ್ತು ಕ್ರೆಡಿಟ್ ವಹಿವಾಟುಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಫೆಬ್ರವರಿ 16 ರಂದು ಗಡುವನ್ನು ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ.
Posted by Vidyamaana on 2023-08-24 10:32:19 |
ಪುತ್ತೂರು: ಚೂರಿ ಇರಿತಗೊಳಗಾಗಿ ಗಂಭೀರ ಗಾಯಗೊಂಡ ಯುವತಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಯುವತಿಯನ್ನು ಅಳಿಕೆ ಮೂಲದ ಗೌರಿ ಎಂದು ಹೇಳಲಾಗಿದೆ.
ಆರೋಪಿ ಪದ್ಮರಾಜ್ ಎಂಬಾತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದ ಬೆನ್ನಲ್ಲೇ, ಯುವತಿ ಕೊನೆಯುಸಿರೆಳೆದಿದ್ದಾಳೆ.
ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಬದಿಯಲ್ಲಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಬಳಿಯ ದ್ವಾರದಲ್ಲಿ ಘಟನೆ ನಡೆದಿದೆ.
Posted by Vidyamaana on 2023-03-25 05:08:39 |
ಪುತ್ತೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ನಗರದ ಬೊಳುವಾರಿನಲ್ಲಿರುವ ಜಾಗದಲ್ಲಿ ಆಶ್ಲೇಷ ಬಲಿ, ಅರ್ಧ ಏಕಾಹ ಭಜನೆ ಹಾಗೂ ಜನಜಾಗೃತಿ ಸಭೆ ಶುಕ್ರವಾರ ರಾತ್ರಿ ನಡೆಯಿತು.
ಸಭೆಯಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಕಾರಿಂಜೇಶ್ವರ ದೇವಸ್ಥಾನದ ಸುತ್ತ ಗಣಿಗಾರಿಕೆ ನಡೆಯಬಾರದು ಎಂಬ ಹೋರಾಟಕ್ಕೆ ಸಂಘಟನೆ ಮೂಲಕ ಯಶಸ್ಸು ಸಿಕ್ಕಿದೆ. ಬೊಳುವಾರಿ ಕುಕ್ಕೆ ಕ್ಷೇತ್ರಕ್ಕೆ ಜಾಗ ದಾನ ಕೊಟ್ಟವರು ಬ್ರಾಹ್ಮಣರು. ಈ ಜಾಗವನ್ನು ಮತ್ತೆ ಸ್ವಾಧೀನ ಪಡೆಯಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಾಗಲಿ, ಅಧಿಕಾರಿಗಳ ತಂಡಗಳಾಗಲಿ ಮುಂದೆ ಬಂದಿಲ್ಲ. ಇದೀಗ ಹಿಂದೂ ಜಾಗರಣಾ ವೇದಿಕೆ ಹೋರಾಟದ ಫಲವಾಗಿ ಜಾಗವನ್ನು ಮತ್ತೆ ದೇವಸ್ಥಾನದ ಹೆಸರಿನಲ್ಲಿ ಪಡೆಯುವಂತಾಗಿದ್ದು, ಈ ಮೂಲಕ ಹಿಂದೂ ಜಾಗರಣ ವೇದಿಕೆ ಧರ್ಮ ಜಾಗೃತಿ ಮಾಡಿದೆ ಎಂದರು.
ಬ್ರಹ್ಮಶ್ರೀ ವೇ.ಮೂ. ಕುಂಟಾರು ರವೀಶ ತಂತ್ರಿ ದಿಕ್ಸೂಚಿ ಭಾಷಣ ಮಾಡಿ, ಆತ್ಮ ಸ್ಥೈರ್ಯದೊಂದಿಗೆ ಮುನ್ನುಗ್ಗುವ ಸಂಘ ಜಗತ್ತಿನಲ್ಲಿದ್ದರೆ ಅದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಸಂಘ ಪರಿವಾರದ ಸಂಘಟನೆ. ಈ ನಿಟ್ಟಿನಲ್ಲಿ ನಾವು ಸ್ವಾಭಿಮಾನಿಯಾಗಿ ಎದ್ದು ನಿಂತರೆ ಯಾವ ಕಾರ್ಯವನ್ನು ಮಾಡಲು ಸಾಧ್ಯವಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ ಎಂದ ಅವರು, ಈ ಜಾಗದಲ್ಲಿ ಭವಿಷ್ಯತ್ ನಲ್ಲಿ ಹಿಂದೂ ಸಮಾಜಕ್ಕೆ ಉಪಯೋಗವಾಗುವ ಮಂದಿರವನ್ನು ನಿರ್ಮಾಣ ಮಾಡುವ ತೀರ್ಮಾನ ಮಾಡಲಾಗಿದೆ. ಅದಕ್ಕೆ ದೇವರ ಅನುಗ್ರಹ ಇದೆ ಎಂದರು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಎಂ.ಕೆ.ಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೊಳುವಾರಿನಲ್ಲಿ ಇಂದು ಅನ್ಯರ ಪಾಲಾಗಿದ್ದ ಜಾಗವನ್ನು ಮತ್ತೆ ದೇವಸ್ಥಾನಕ್ಕೆ ಕೊಡುವಲ್ಲಿ ಸಂಘಟನೆಯ ಪಾತ್ರ ಮಹತ್ವದಾಗಿದೆ ಎಂದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಯ ಮಾತನಾಡಿ, ಭಜನೆ ಮೂಲಕ ಎಲ್ಲರೂ ಒಂದುಗೂಡಲು ಸಾಧ್ಯ. ಹಿಂದೂ ಜಾಗರಣ ವೇದಿಕೆ ಭಜನೆ ಮೂಲಕ ಧರ್ಮ ಜಾಗೃತಿ ಮೂಡಿಸಿದೆ. ಸುಬಬ್ರಹ್ಮಣ್ಯದ ಪುಣ್ಯ ಭೂಮಿಯನ್ನು ನಮಗೆ ಒಪ್ಪಿಸುವ ಕೆಲಸ ಮಾಡಿದ ಹಿಂದೂ ಜಾಗರಣ ವೇದಿಕೆ ಮಾಡಿದ ಜಾಗರಣ ವೇದಿಕೆ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.
ರವಿರಾಜ ಶೆಟ್ಟಿ ಕಡಬ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ದಿನೇಶ್ ಪಂಜಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆಯ ಪ್ರಮುಖರಾದ ಚಿನ್ಮಯ್ ರೈ ಈಶ್ವರಮಂಗಲ, ರಾಕೇಶ್ ಪಂಜೋಡಿ, ನರಸಿಂಹ ಮಾಣಿ, ಜಯರಾಮ, ಪ್ರೀತಮ್, ಚರಣ್, ಅಭಿ, ಅಶೋಕ್ ಸ್ವಾಮೀಜಿಗಳು ಹಾಗೂ ರವೀಶ ತಂತ್ರಿಯವರನ್ನು ಫಲಪುಷ್ಪ ನೀಡಿ ಗೌರವಿಸಿದರು. ತಾಲೂಕು ಸಮಿತಿ ಸದಸ್ಯರಾದ ಮನೀಶ್ ದರ್ಬೆ, ಲತೇಶ್ ಕೆಮ್ಮಾಯಿ ಅತಿಥಿಗಳನ್ನು ಗೌರವಿಸಿದರು. ಪ್ರೀತಿ ಕುಡ್ವ ಪ್ರಾರ್ಥಿಸಿದರು. ಹಿಂಜಾವೇ ತಾಲೂಕು ಸಹ ಸಂಚಾಲಕ ಸ್ವಸ್ತಿಕ್ ಮೇಗಿನಗುತ್ತು ಸ್ವಾಗತಿಸಿದರು. ಸಹಸಂಚಾಲಕ ಗಿರೀಶ್ ಮಡಪ್ಪಾಡಿ ವಂದಿಸಿದರು. ಹರಿಣಿ ಪುತ್ತೂರಾಯ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಆಶ್ಲೇಷ ಬಲಿ ಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಬೆಳಿಗ್ಗೆ ವೇ.ಮೂ. ರಾಜೇಶ್ ಭಟ್ ಗಣಪತಿ ಹೋಮ ನೆರವೇರಿಸಿದರು
Posted by Vidyamaana on 2023-12-17 12:35:50 |
ಬಿಹಾರ: ಅತ್ತೆಯಂದಿರ ಪಾಲಿಗೆ ಅಳಿಯ ಅಂದ್ರೆ ಮಗನ ಸಮಾನ ಅಂತಾರೆ. ಆದ್ರೆ ಇಲ್ಲಿ ಮಾತ್ರ ಅತ್ತೆ, ತನ್ನ ಅಳಿಯನನ್ನು ನೋಡಿ ನೀನೇ ನನ್ನ ನಲ್ಲ ಅಂತಿದ್ದಾಳೆ. ಅಳಿಯನೂ ಅಷ್ಟೆ. ಅತ್ತೇನೆ ನನ್ನ ಜೀವ, ಜೀವನ ಎಂದು ಹಿಂದೆ ಬಿದ್ದಿದ್ದಾನೆ. ತನ್ನ ಸ್ವಂತ ಅತ್ತೆಯನ್ನೇ ಗೆಳತಿಯಾಗಿ ಮಾಡಿಕೊಂಡಿದ್ದಾನೆ.ಬಿಹಾರದಲ್ಲಿ ಅತ್ತೆ-ಅಳಿಯನ ಪ್ರೀತಿಯ ಸುದ್ದಿ ಪೊಲೀಸ್ ಠಾಣೆಯ ವರೆಗೂ ತಲುಪಿದೆ.
ಮದುವೆಗೂ (Marriage) ಮುನ್ನ ವ್ಯಕ್ತಿ ತನ್ನ ಅತ್ತೆಯ ಮನೆಗೆ ಆಗಾಗ ಭೇಟಿ ನೀಡುತ್ತಿದ್ದ. ಅಲ್ಲಿ ಅವನು ತನ್ನ ಸೋದರ ಸಂಬಂಧಿಯ ವಿಧವೆ ಅತ್ತೆಯೊಂದಿಗೆ ಪ್ರೀತಿ ಯಲ್ಲಿ ಸಿಲುಕಿದ್ದಾನೆ. ನಂತರ ಇಬ್ಬರೂ ರಹಸ್ಯವಾಗಿ ಭೇಟಿಯಾಗಲು ಪ್ರಾರಂಭಿಸಿದ್ದಾರೆ. ಬಿಹಾರದ ಜಮುಯಿಯಲ್ಲಿ ಈ ಘಟನೆ ನಡೆದಿರೋದಾಗಿ ವರದಿಯಾಗಿದೆ. ಅಳಿಯ ಮತ್ತು ಅತ್ತೆ ಪರಸ್ಪರ ಮದುವೆಯಾಗುವ ನಿರ್ಧಾರ ಮಾಡಿದ್ದಾರೆ. ಆಗಾಗ ರಹಸ್ಯವಾಗಿ ಭೇಟಿಯಾಗುತ್ತಿದ್ದರು.ರಾತ್ರಿ ಭೇಟಿ ಮಾಡುವಾಗ ಸಿಕ್ಕಿಬಿದ್ದ ಅತ್ತೆ-ಅಳಿಯ, ಗ್ರಾಮಸ್ಥರಿಂದ ಥಳಿತ
ಆದರೆ ಇತ್ತೀಚಿಗೆ ಅಳಿಯ ರಾತ್ರಿಯಲ್ಲಿ ತನ್ನ ಅತ್ತೆಯನ್ನು ಭೇಟಿಯಾಗಲು ಹೋಗಿದ್ದು, ಇಬ್ಬರೂ ಮೈ ಮರೆತು ಚಕ್ಕಂದವಾಡುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾರೆ. ಗ್ರಾಮಸ್ಥರು ಅಳಿಯನನ್ನು ತೀವ್ರವಾಗಿ ಥಳಿಸಿ, ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಪ್ರಕರಣವು ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಹನ್ಸ್ದಿಹ್ ಗ್ರಾಮಕ್ಕೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ.
ಬಂಕಾ ಜಿಲ್ಲೆಯ ಧೋರೈಯಾ ಗ್ರಾಮದ ನಿವಾಸಿ ಚಂದನ್ ಗೋಸ್ವಾಮಿ ಅವರ ಅತ್ತಿಗೆ ಹನ್ಸ್ದಿಹ್ ಗ್ರಾಮದಲ್ಲಿದ್ದಾರೆ. ಅವರ ಸೋದರ ಸಂಬಂಧಿ ವಿಧವೆ ಅತ್ತೆ ಕೂಡ ಅಲ್ಲಿ ವಾಸಿಸುತ್ತಿದ್ದಾರೆ. ಅತ್ತೆಯ ಮನೆಗೆ ಹೋಗುವಾಗ ಚಂದನ್ಗೆ ಆಕೆಯ ಮೇಲೆ ಪ್ರೀತಿಯಾಗಿದೆ. ಇಲ್ಲಿಂದ ಇಬ್ಬರ ನಡುವೆ ಲವ್ ಸ್ಟೋರಿ ಶುರುವಾಗಿದೆ. ಇದಾದ ನಂತರ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಅತ್ತೆಯನ್ನು ಭೇಟಿಯಾಗಲು ಚಂದನ್, ಆಗಾಗ ಹನ್ಸ್ದಿಹ್ ಗ್ರಾಮಕ್ಕೆ ಭೇಟಿ ನೀಡುತ್ತಿದ್ದ ಎಂದು ತಿಳಿದುಬಂದಿದೆ. ಘಟನೆಯ ಕುರಿತು ಪೊಲೀಸರು ತನಿಖೆ (Enquiry) ನಡೆಸುತ್ತಿದ್ದಾರೆ.
Posted by Vidyamaana on 2024-04-14 07:49:28 |
ಮಂಗಳೂರು, ಎ.13: ಕೇರಳ ಸರಕಾರ ಗಣರಾಜ್ಯೋತ್ಸವ ಪರೇಡಿಗೆ ನಾರಾಯಣ ಗುರು ಸ್ತಬ್ಧಚಿತ್ರ ಮಾಡಿದಾಗ, ಇಲ್ಲದ ನೆಪ ಹೇಳಿ ನಿರಾಕರಣೆ ಮಾಡಲಾಗಿತ್ತು. ಆನಂತರ, ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ನಾರಾಯಣ ಗುರುಗಳ ಪಠ್ಯವನ್ನೇ ಏಳನೇ ತರಗತಿಯಿಂದ ತೆಗೆದು ಹಾಕಲಾಗಿತ್ತು. ಅದನ್ನು ಬಿಜೆಪಿ ನಾಯಕರು ಪ್ರಶ್ನೆ ಮಾಡಲಿಲ್ಲ. ಇದೀಗ ಬಿಲ್ಲವ ಸಮಾಜದ ಓಲೈಕೆಗಾಗಿ ಬಿಜೆಪಿಗೆ ಮತ್ತೆ ನಾರಾಯಣ ಗುರು ನೆನಪಾಗಿದ್ದಾರೆ. ಪ್ರಧಾನಿ ಮೋದಿಯವರ ಮೂಲಕ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ ಎಂದು ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಕಟಕಿಯಾಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ತಬ್ಧಚಿತ್ರದ ವಿಚಾರ ಬಂದಾಗ ಇಲ್ಲಿನ ಸಂಸದರು ಮುಂದಿನ ವರ್ಷವೇ ನಾವು ಸ್ತಬ್ಧಚಿತ್ರ ಮಾಡಿಸುತ್ತೇವೆ ಎಂದಿದ್ದರು. ಆದರೆ ಅದು ಈಡೇರಿಕೆ ಆಗಿಲ್ಲ. ನಾವು ಬಿಲ್ಲವ ಸಮಾಜದಿಂದ ಪ್ರತಿಭಟನೆ ನಡೆಸಿದಾಗಲೂ ಯಾವುದೇ ಬಿಜೆಪಿ ನಾಯಕರು ನಮಗೆ ಬೆಂಬಲ ನೀಡಿಲ್ಲ. ಏಳನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಿಂದ ನಾರಾಯಣ ಗುರುಗಳ ಪಠ್ಯ ತೆಗೆದು ಹಾಕಿದ್ದ ರೋಹಿತ್ ಚಕ್ರತೀರ್ಥ ಅವರನ್ನು ನಮ್ಮ ವಿರೋಧ ನಡುವೆಯೇ ಮಂಗಳೂರಿಗೆ ತಂದು ಸನ್ಮಾನ ಮಾಡಿದ್ದರು