ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಸುದ್ದಿಗಳು News

Posted by vidyamaana on 2024-07-23 19:43:42 |

Share: | | | | |


ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಪುಣೆ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವು ಚಾಲಕರು ಅವಸರದಲ್ಲಿ ವೇಗವಾಗಿ ವಾಹನ ಚಲಾಯಿಸಿ ಜನರ ಜೀವಕ್ಕೆ ಆಪತ್ತು ತರುತ್ತಿದ್ದಾರೆ. ಎಲ್ಲೆಂದರಲ್ಲಿ ನಿಂತ ಜನರ ಮೇಲೂ ವಾಹನವನ್ನು ಹಾರಿಸಿಕೊಂಡು ಹೋಗುತ್ತಾರೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case)ಆಗಿದೆ.ಪ್ರಿ-ಚಿಂಚ್ವಾಡ್‍ನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಟ್ಯಾಕ್ಸಿ ಮಹಿಳೆಗೆ ಡಿಕ್ಕಿ ಹೊಡೆದು ನಂತರ ಚಾಲಕ ಅಪಘಾತದ ಸ್ಥಳದಿಂದ ಓಡಿಹೋದ ಹೊಸ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪುಣೆಯಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಪಿಂಪ್ರಿ-ಚಿಂಚ್ವಾಡ್‍ನಲ್ಲಿ ಈ ಘಟನೆ ನಡೆದಿದೆ. ಈ ಹಿಟ್ ಅಂಡ್ ರನ್ ಪ್ರಕರಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಭಾನುವಾರ ಮಧ್ಯಾಹ್ನ 1:30ರ ಸುಮಾರಿಗೆ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ ಎದುರಿಗೆ ವೇಗವಾಗಿ ಬಂದ ಟ್ಯಾಕ್ಸಿ ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ರಸ್ತೆಯಲ್ಲಿದ್ದ ಇತರ ಜನರು ಆಕೆಯ ಸಹಾಯಕ್ಕಾಗಿ ಓಡಿ ಬರುತ್ತಿರುವುದು ಕಂಡುಬಂದಿದೆ. ಟ್ಯಾಕ್ಸಿಗೆ ಡಿಕ್ಕಿ ಹೊಡೆದ ಮಹಿಳೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಪಿಂಪ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಈ ಪ್ರಕರಣದ ಬಗ್ಗೆ ಪಿಂಪ್ರಿ-ಚಿಂಚ್ವಾಡ್ ಡಿಸಿಪಿ ಶಿವಾಜಿ ಪವಾರ್ ಮಾತನಾಡಿ, ಈ ಅಪಘಾತದಲ್ಲಿ ಸಂತ್ರಸ್ತೆ ರೇಖಾ ಗಾಯಗೊಂಡಿದ್ದಾರೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ. 24 ವರ್ಷದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನ ಚಾಲಕ ಕುಡಿದಿರಲಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೇಲ್ನೋಟಕ್ಕೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ಮಹಾರಾಷ್ಟ್ರದಲ್ಲಿ ವರದಿಯಾದ ಮೊದಲ ಹಿಟ್ ಅಂಡ್ ರನ್ ಪ್ರಕರಣವಲ್ಲ. ಈಗಾಗಲೇ ಹಿಟ್ ಅಂಡ್ ರನ್ ಪ್ರಕರಣ ಮತ್ತೊಂದು ಸುದ್ದಿಯಲ್ಲಿ, ವೇಗವಾಗಿ ಬಂದ ಆಡಿ ಕಾರು ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಆಟೋರಿಕ್ಷಾ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಲುಂಡ್ ಪೊಲೀಸರು ಆಡಿ ಕಾರನ್ನು ವಶಪಡಿಸಿಕೊಂಡಿದ್ದಾರೆ, ಆದರೆ ಅಪಘಾತದ ನಂತರ ಅದರ ಚಾಲಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

 Share: | | | | |


ಧರ್ಮಸ್ಥಳ ಕ್ಷೇತ್ರ ಡಾ|ಹೆಗ್ಗಡೆಯವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ತಿಮರೋಡಿಗೆ ಹೈಕೋರ್ಟ್ ಆದೇಶ

Posted by Vidyamaana on 2023-09-01 01:45:46 |

Share: | | | | |


ಧರ್ಮಸ್ಥಳ ಕ್ಷೇತ್ರ  ಡಾ|ಹೆಗ್ಗಡೆಯವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ತಿಮರೋಡಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ ಎನ್ನಲಾಗುತ್ತಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕೋರ್ಟು ಆದೇಶ ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದೆ.


ಇನ್ನು ಮುಂದಕ್ಕೂ ಇದಕ್ಕೆ ತಪ್ಪಿದಲ್ಲಿ ಡಿ.ಜಿ. ಮತ್ತು ಐ.ಜಿ., ಸರಕಾರದ ಮುಖ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಪೋಲಿಸ್ ಉನ್ನತ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ನ್ಯಾಯಾಲಯ ಆದೇಶ ಹೊರಡಿಸಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಹೆಗ್ಗಡೆ ಕುಟುಂಬಸ್ಥರ ಪರವಾಗಿ ಖ್ಯಾತ ಹಿರಿಯ ನ್ಯಾಯವಾದಿಗಳಾದ ಉದಯ ಹೊಳ್ಳ ಹಾಗೂ ರಾಜಶೇಖರ್ ಹಿಲ್ಯಾರು ವಾದಿಸಿದ್ದರು. ಕಳೆದ ವಾರವೇ ಹೆಗ್ಗಡೆ ಕುಟುಂಬ ಕೋರ್ಟ್ ಮೆಟ್ಟಲು ಹತ್ತಿತ್ತು. ಇದೀಗ ಮಹೇಶ್ ಶೆಟ್ಟಿಯವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ಆದೇಶ ನೀಡಿದೆ.

ಬಸ್ ಸ್ಟ್ಯಾಂಡಿನಲ್ಲಿದ್ದ ಚನ್ನರಾಯಪಟ್ಟಣದ ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಕಾಮುಕ ಅಂದರ್

Posted by Vidyamaana on 2023-11-29 20:27:55 |

Share: | | | | |


ಬಸ್ ಸ್ಟ್ಯಾಂಡಿನಲ್ಲಿದ್ದ ಚನ್ನರಾಯಪಟ್ಟಣದ ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಕಾಮುಕ ಅಂದರ್

ಪುತ್ತೂರು : ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ಮಹಿಳೆಯೊಬ್ಬರಿಗೆ ಮದ್ಯ ಕುಡಿಸಿ ಅತ್ಯಾಚಾರ ಮಾಡಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.


ಮೂಲತಃ ಆರ್ಯಾಪು ನಿವಾಸಿ, ಪ್ರಸ್ತುತ ಬನ್ನೂರಿನಲ್ಲಿ ವಾಸವಿರುವ ಸಂಶುದ್ದೀನ್ ಆಸ್ಗರ್ ಆಲಿ (23) ಬಂಧಿತ ಆರೋಪಿ.


ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿಯಾಗಿರುವ ಮಹಿಳೆ ನ.24 ರಂದು ರಾತ್ರಿ ವೇಳೆ ಪುತ್ತೂರು ಬಸ್ ನಿಲ್ದಾಣದಲ್ಲಿ ಇದ್ದಾಗ, ಅಪರಿಚಿತ ವ್ಯಕ್ತಿಯೋರ್ವ ಸದರಿ ಮಹಿಳೆಗೆ ಮದ್ಯವನ್ನು ಸೇವಿಸಲು ನೀಡಿ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದು, ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ 114/2023 ಕಲಂ 376 ಐ.ಪಿ.ಸಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.


ನ.28 ರಂದು ಸಂಜೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ವರದಿಯಾಗಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶಾಸಕ ಸುರೇಶ್ ಕುಮಾರ್: ವದಂತಿಗೆ ಸ್ಪಷ್ಟನೆ

Posted by Vidyamaana on 2024-09-05 07:57:05 |

Share: | | | | |


ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶಾಸಕ ಸುರೇಶ್ ಕುಮಾರ್: ವದಂತಿಗೆ ಸ್ಪಷ್ಟನೆ

ಬೆಂಗಳೂರು : ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರೂಪಾಂತರಿ ಚಿಕುನ್ ಗುನ್ಯಾದಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಇಂದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಸುರೇಶ್ ಕುಮಾರ್ ಅವರಿಗೆ ಚಿಕನ್ ಗುನ್ಯಾ ಸೋಂಕು ತಗುಲಿದ ಬೆನ್ನಲ್ಲೆ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಐಸಿಯು ಘಟಕದಲ್ಲಿ ಸುರೇಶ್ ಕುಮಾರ್‌ಗೆ ಚಿಕಿತ್ಸೆ ನೀಡಿದ್ದರು. ಸದ್ಯ ಅವರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

ಪುತ್ತೂರು – ಉಪ್ಪಿನಂಗಡಿ ಟ್ವಿನ್ ಸಿಟಿ ನಡುವಿನ ಚತುಷ್ಪಥ ಕಾಮಗಾರಿಗೆ ವೇಗ

Posted by Vidyamaana on 2023-01-18 08:17:32 |

Share: | | | | |


ಪುತ್ತೂರು – ಉಪ್ಪಿನಂಗಡಿ ಟ್ವಿನ್ ಸಿಟಿ ನಡುವಿನ ಚತುಷ್ಪಥ ಕಾಮಗಾರಿಗೆ ವೇಗ

ಪುತ್ತೂರು: ಒಂದೊಮ್ಮೆ ಉಪ್ಪಿನಂಗಡಿ ತಾಲೂಕು ಕೇಂದ್ರ. ಕ್ರಮೇಣ ತಾಲೂಕು ಕೇಂದ್ರ ಪುತ್ತೂರಿಗೆ ವರ್ಗವಾಯಿತು. ಹಾಗೆಂದು ಈ ಎರಡು ಪಟ್ಟಣಗಳ ನಡುವಿನ ಸಂಬಂಧ ಪ್ರತ್ಯೇಕಗೊಂಡಿಲ್ಲ. ಎರಡೂ ಪಟ್ಟಣಗಳು ಹುಬ್ಬಳ್ಳಿ – ಧಾರವಾಡ ಟ್ವಿನ್ ಸಿಟಿ ಮಾದರಿಯಲ್ಲಿ ಬೆಳೆಯುತ್ತಿದೆ. ಇದಕ್ಕೆ ಇನ್ನಷ್ಟು ಬಲ ತುಂಬುವ ದಿಶೆಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ವೇಗ ಪಡೆಯುತ್ತಿದೆ.

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ

Posted by Vidyamaana on 2023-04-15 07:02:55 |

Share: | | | | |


ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ

 ಬಿಪುತ್ತೂರು :  ಪುತ್ತೂರಿನಲ್ಲಿ ಅರುಣ್ ಪುತ್ತಿಲ ರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳ ಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ.

ಹಿಂದುತ್ವಕ್ಕಾಗಿ ದುಡಿಯುತ್ತಿರುವ ನಾಯಕನಿಗೆ ಟಿಕೆಟ್ ಕೈ ತಪ್ಪಿದ ಬಗ್ಗೆ ಅಸಮಾಧಾನಗೊಂಡ ಕಾರ್ಯಕರ್ತರು ತುರ್ತುಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಪುತ್ತಿಲ ಅಭಿಮಾನಿ ಬಳಗ ಹಾಗೂ ಹಿಂದೂ ಕಾರ್ಯಕರ್ತರು ಅವರನ್ನು ಪಕ್ಷೇತರರಾಗಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.

ಕಾರ್ಯಕರ್ತರ ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ ಧ್ವನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲ ರವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ.

ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲ ರವರು ಎ.17 ಸೋಮವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ.

ಎ.17 ರಂದು ಬೆಳಿಗ್ಗೆ ಪುತ್ತೂರು ಮಹಾತೋಭಾರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ, ಬೆಳಿಗ್ಗೆ 10ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದ ವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.

ಸ್ಟಾರ್ ಚಂದ್ರು ಪರ ಪ್ರಚಾರಕ್ಕಿಳಿದ ನಟ ದರ್ಶನ್ ಕುಮಾರಸ್ವಾಮಿ ಪರ ಪ್ರಚಾರ ಮಾಡದ ಸುಮಲತಾ

Posted by Vidyamaana on 2024-04-18 12:50:47 |

Share: | | | | |


ಸ್ಟಾರ್ ಚಂದ್ರು ಪರ ಪ್ರಚಾರಕ್ಕಿಳಿದ ನಟ ದರ್ಶನ್ ಕುಮಾರಸ್ವಾಮಿ ಪರ ಪ್ರಚಾರ ಮಾಡದ ಸುಮಲತಾ

ಮಂಡ್ಯ ಏಪ್ರಿಲ್ 18: ಮಂಡ್ಯದ ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದೆ. ಇಂದು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಹಲಗೂರಿನಲ್ಲಿ ಮತಭೇಟೆ ಆರಂಭಿಸಿದ್ದು, ಸ್ಯಾಂಡಲ್‌ವುಡ್‌ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರದಲ್ಲಿ ಭಾಗವಹಿಸಿ ಅಚ್ಚರಿ ಮೂಡಿಸಿದ್ದಾರೆ.ಈ ವೇಳೆ ಮಂಡ್ಯ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಡಿ ಬಾಸ್ ದರ್ಶನ್, ನಾನು ಅಂದು ಕೂಡ ಇಂದು ಕೂಡ ವ್ಯಕ್ತಿಯನ್ನು ನೋಡಿ ಪ್ರಚಾರಕ್ಕೆ ಬಂದಿದ್ದೇನೆ. ಪಕ್ಷವನ್ನು ನೋಡಿ ಅಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನೂ ಇದೇ ವೇಳೆ,ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರ ನಿಂತಾದ್ದಾರೆ ನಿಮ್ಮ ಅಮೂಲ್ಯವಾದ ಮತ ಅವರಿಗೆ ನೀಡಿ ಎಂದು ಮನವಿ ಮಾಡಿದರು.

ಈ ಬಾರಿ ಕಾಂಗ್ರೆಸ್‌ ವಿರುದ್ಧ ಜಯ ಸಾಧಿಸಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸುತ್ತಿವೆ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಎಚ್‌ಡಿ ಕುಮರಸ್ವಾಮಿಗೆ ಟಿಕೆಟ್ ನೀಡಲಾಗಿದೆ. ಸಂಸದೆ ಸಮಲತಾ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಮಾತ್ರವಲ್ಲದೆ ಬಿಜೆಪಿಗೆ ಮತ ಹಾಕಿ ಅಂತಲೂ ಹೇಳಿದ್ದಾರೆ

Recent News


Leave a Comment: