ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ನಿಡ್ಪಳ್ಳಿ:ಬಿಜೆಪಿ-ಕಾಂಗ್ರೆಸ್-ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ

Posted by Vidyamaana on 2023-07-11 23:06:46 |

Share: | | | | |


ನಿಡ್ಪಳ್ಳಿ:ಬಿಜೆಪಿ-ಕಾಂಗ್ರೆಸ್-ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ

ಪುತ್ತೂರು: ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆಗೆ ದಿನ ನಿಗದಿಯಾಗಿದ್ದು, ಕಣದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ನಿಡ್ಪಳ್ಳಿ ಗ್ರಾ.ಪಂ.ನ 1ನೇ ವಾರ್ಡ್ ಸದಸ್ಯರಾಗಿದ್ದ, ಬಿಜೆಪಿ ಬೆಂಬಲಿತ ಸದಸ್ಯ ಮುರಳೀಕೃಷ್ಣ ಭಟ್ ಅವರ ಮರಣದ ಬಳಿಕ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.

ಈ ಬಾರಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ್ ಪ್ರಭು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸತೀಶ್ ಶೆಟ್ಟಿ ಹಾಗೂ ಹರೀಶ್ ಕಣಕ್ಕೆ ಧುಮುಕ್ಕಿದ್ದಾರೆ. ಈ ಬಾರಿ ಪುತ್ತಿಲ ಪರಿವಾರವೂ ಸತ್ವ ಪರೀಕ್ಷೆಗೆ ಮುಂದಾಗಿದ್ದು, ಜಗನ್ನಾಥ ರೈ ಕೊಳೆಂಬೆತ್ತಿಮಾರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.


ಹೀಗಿದೆ ಲೆಕ್ಕಾಚಾರ:

ಹಿಂದಿನ ಬಾರಿಯ ಚುನಾವಣೆಯಲ್ಲಿ ಮುರಳೀಕೃಷ್ಣ ಭಟ್ ಅವರು 29 ಮತಗಳಿಂದ ಗೆಲುವು ಸಾಧಿಸಿದ್ದರು. ಆಗ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ನಡುವೆ ನೇರಾ ನೇರ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಈ ಬಾರಿ ಪರಿಸ್ಥಿತಿ ಹಾಗಿಲ್ಲ. ಪುತ್ತಿಲ ಪರಿವಾರವೂ ಕಣದಲ್ಲಿ ಇರುವುದರಿಂದ ವಿಧಾನಸಭಾ ಚುನಾವಣೆಯ ಬಳಿಕ ಬಿಜೆಪಿಗೆ ಮತ್ತೊಮ್ಮೆ ಅಗ್ನಿ ಪರೀಕ್ಷೆಯಿದು. ಬಿಜೆಪಿ ಮತಗಳು ಹೋಳಾಗುವ ಕಾರಣದಿಂದ ಕಾಂಗ್ರೆಸ್ ಪರಿಸ್ಥಿತಿಯ ಪ್ರಯೋಜನ‌ ಪಡೆದುಕೊಳ್ಳುತ್ತದೆಯೇ? ಅಥವಾ ಮುರಳೀಕೃಷ್ಣ ಭಟ್ ಅವರ ಅನುಕಂಪದ ಮತಗಳು ಬಿಜೆಪಿ ಗೆಲುವಿಗೆ ಕಾರಣವಾಗಲಿದೆಯೇ? ಹೊಸ ಅಲೆ ಸೃಷ್ಟಿಸಿರುವ ಅರುಣ್ ಕುಮಾರ್ ಪುತ್ತಿಲ ಅವರು ಹೊಸದಾಗಿ ಇನ್ನಿಂಗ್ಸ್ ಶುಭಾರಂಭ ಮಾಡುವ ಸಾಧ್ಯತೆ ಇದೆಯೇ? ಹೀಗೆ ಅನೇಕ ಲೆಕ್ಕಾಚಾರಗಳು ಕಣದಲ್ಲಿ ಕೇಳಿಬರುತ್ತಿದೆ.


ಪಕ್ಷದ ಪರವಾಗಿ ನಿಂತ ಪ್ರಮುಖರು:

ಕಾಂಗ್ರೆಸ್, ಬಿಜೆಪಿ ಹಾಗೂ ಪುತ್ತಿಲ ಪರಿವಾರದ ಬೆಂಬಲಿತ ಸದಸ್ಯರು ನಾಮಪತ್ರ ಸಲ್ಲಿಸುವಾಗ ಪಕ್ಷದ ಪ್ರಮುಖರು ಜೊತೆಯಲ್ಲಿದ್ದದ್ದು ಕಣದ ಗಂಭೀರತೆಗೆ ಸಾಕ್ಷಿಯಾಗಿತ್ತು. ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ಶಾಸಕ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆಶಾ ತಿಮ್ಮಪ್ಪ ಹಾಗೂ ಕಾಂಗ್ರೆಸಿನಿಂದ ಜಿಲ್ಲಾ ಪ್ರಚಾರ ಸಮಿತಿಯ ಜಂಟಿ ಸಂಯೋಜಕ ಕೃಷ್ಣಪ್ರಸಾದ್ ಆಳ್ವ ಮತ್ತು ಪ್ರಮುಖರು, ಪುತ್ತಿಲ ಪರಿವಾರದಿಂದ ಅರುಣ್ ಕುಮಾರ್ ಪುತ್ತಿಲ, ಪ್ರಸನ್ನ ಕುಮಾರ್ ಮಾರ್ತಾ, ಉಮೇಶ್ ಗೌಡ ವೀರಮಂಗಲ ಮೊದಲಾದವರು ಉಪಸ್ಥಿತರಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ

Posted by Vidyamaana on 2023-11-10 19:15:26 |

Share: | | | | |


ಬಿಜೆಪಿ ರಾಜ್ಯಾಧ್ಯಕ್ಷರಾಗಿ  ವಿಜಯೇಂದ್ರ ಆಯ್ಕೆ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ  ಬಿ.ವೈ. ವಿಜಯೇಂದ್ರ ಆಯ್ಕೆಯಾಗಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸೀಟು ಗೆಲ್ಲದ ಹಿನ್ನಲೆಯಲ್ಲಿ ನಳೀನು ಕುಮಾರ್ ಕಟೀಲ್‌ ಅವರನ್ನು ಬದಲಾವಣೆ ಮಾಡಲಾಗುವುದು ಎನ್ನಲಾಗುತ್ತಿತ್ತು. ಯಾರಾಗ್ತಾರೆ ಬಿಜೆಪಿ ರಾಜ್ಯಾಧ್ಯಕ್ಷ ಎಂಬ ಬಗ್ಗೆಯೂ ಚರ್ಚೆಯಾಗುತ್ತಿತ್ತು. ಎಲ್ಲದಕ್ಕೂ ಈಗ ಫುಲ್ ಸ್ಟಾಪ್‌ ಬಿದ್ದಿದೆ. ಬಿಜೆಪಿ ಹೈಕಮಾಂಡ್‌ ಮಾಜಿ ಸಿಎಂ ಬಿ.ವೈ. ಯಡಿಯೂರಪ್ಪರ ಪುತ್ರ ಬಿ ಬೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದೆ.


ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ಪುತ್ರ ವಿಜಯೇಂದ್ರ ಈ ಹಿಂದೆ ಭಾರತೀಯ ಜನತಾ ಯುವ ಮೋರ್ಚಾದ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ ವಕೀಲರಾಗಿ ಸ್ವಲ್ಪ ಸಮಯ ಕೆಲಸ ಮಾಡಿದ್ದರು. ಸದ್ಯ ಶಿಕಾರಿ ಪುರದ ಶಾಸಕರಾಗಿದ್ದಾರೆ.

ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಸಿಕ್ಕಾಕೊಂಡಿರುವ ಪಕ್ಷವನ್ನು ರಕ್ಷಿಸಬೇಕಿದೆ : ಬಂಡಾಯವೆದ್ದ KS ಈಶ್ವರಪ್ಪ

Posted by Vidyamaana on 2024-03-13 22:45:58 |

Share: | | | | |


ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಸಿಕ್ಕಾಕೊಂಡಿರುವ ಪಕ್ಷವನ್ನು ರಕ್ಷಿಸಬೇಕಿದೆ : ಬಂಡಾಯವೆದ್ದ KS ಈಶ್ವರಪ್ಪ

ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ್ದು ಸದ್ಯ ಬಿಜೆಪಿಯ ಹಲವು ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿದೆ. ಅದರಂತೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗ ಕಾಂತೇಶ್ ಗೆ ಕೂಡ ಈ ಬಾರಿ ಟಿಕೆಟ್ ದೊರಕಿಲ್ಲ.ಇದರಿಂದ ಸಿಡಿದೆದ್ದ ಕೆಎಸ್ ಈಶ್ವರಪ್ಪ ಕರ್ನಾಟಕದಲ್ಲಿ ಕುಟುಂಬದ ಕೈಯಲ್ಲಿ ಪಕ್ಷವೊಂದು ಸಿಕ್ಕಾಕೊಂಡಿದೆ.ಅದನ್ನು ರಕ್ಷಿಸಬೇಕಿದೆ ಎಂದು ಪರೋಕ್ಷವಾಗಿ ಬಿಎಸ್ ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಾಕೊಂಡಿದೆ.ಕುಟುಂಬದ ಕೈಯಿಂದ ಪಕ್ಷ ರಕ್ಷಿಸಬೇಕೆಂಬ ಒತ್ತಾಯವಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ನೀಡಿದರು.ಕರ್ನಾಟಕದಲ್ಲಿ ಬೇರೆ ಯಾರು ಲಿಂಗಾಯತ ನಾಯಕರೆಲ್ವಾ? ಎಂದು ಕಿಡಿ ಕಾರಿದ್ದಾರೆ.ಬಿಎಸ್ ಯಡಿಯೂರಪ್ಪ ಪಟ್ಟು ಹಿಡಿದು ಶೋಭಾ ಕರಂದ್ಲಾಜೆ ಹಾಗೂ ಬಸವರಾಜ ಬೊಮ್ಮಾಯಿಗೆ ಪಟ್ಟು ಹಿಡಿದು ಟಿಕೆಟ್ ಕೊಡಿಸಿದ್ದಾರೆ.ನನ್ನ ಮಗ ಕೆಇ ಕಾಂತೇಶ್ ಗೆ ಯಾಕೆ ಟಿಕೆಟ್ ಕೊಡಿಸಲಿಲ್ಲ? ನಾನು 40 ವರ್ಷ ನಿಷ್ಠೆಯಿಂದ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ ಸಿಟಿ ರವಿ, ನಳಿನ ಕುಮಾರ್ ಕಟೀಲ್, ಪ್ರತಾಪ್ ಸಿಂಹ, ನನಗೆ ಸೇರಿದಂತೆ ನನ್ನ ಪುತ್ರನಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಅಪೇಕ್ಷೆ ಪಡುವವರಲ್ಲಿ ನಾನು ಒಬ್ಬ. ನೀವು ಮತ್ತೆ ನರೇಂದ್ರ ಮೋದಿಯವರಿಗೆ ಬೆಂಬಲ ಕೊಡಿ ನಾವು ಚುನಾವಣೆಗೆ ನಿಲ್ಲಿಸಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸುತ್ತೇವೆ ಎಂದು ಬೆಂಬಲಿಗರು ತಿಳಿಸಿದ್ದಾರೆ. 15 ರಂದು ಶುಕ್ರವಾರ ಸಂಜೆ 5:00 ಗಂಟೆಗೆ ಶಿವಮೊಗ್ಗದ ಬಣಜಾರ ಭವನದಲ್ಲಿ ಎಲ್ಲಾ ಸಮಾಜದ ಪ್ರಮುಖರು ಹಿರಿಯರು ಹಿತೈಷಿಗಳು ಈ ಸಭೆಯಲ್ಲಿ ಸೇರಲಿದ್ದಾರೆ. ಅವರೆಲ್ಲರ ಸಲಹೆ ಮೇಲೆ ನಾನು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.

ಫೆ. 28ರಂದು ವಿಜ್ಡಮ್ ಸಂಸ್ಥೆಗಳ ನೆಟ್ ವರ್ಕ್ ಸೆಂಟರ್ ಪುತ್ತೂರಿನಲ್ಲಿ ಶುಭಾರಂಭ

Posted by Vidyamaana on 2024-02-27 17:43:19 |

Share: | | | | |


ಫೆ. 28ರಂದು ವಿಜ್ಡಮ್ ಸಂಸ್ಥೆಗಳ ನೆಟ್  ವರ್ಕ್ ಸೆಂಟರ್ ಪುತ್ತೂರಿನಲ್ಲಿ ಶುಭಾರಂಭ

ಪುತ್ತೂರು: ವಿಜ್ಡಮ್ ಸಂಸ್ಥೆಗಳ ನೆಟ್ ವರ್ಕ್ ಸೆಂಟರ್ ಫೆ. 28ರಂದು ಬೆಳಿಗ್ಗೆ 10ಕ್ಕೆ ದರ್ಬೆ ಸಂತ ಫಿಲೋಮಿನಾ ಕಾಲೇಜು ಎದುರುಭಾಗದಲ್ಲಿರುವ ಆರಾಧ್ಯ ಆರ್ಕೇಡಿನ ಪ್ರಥಮ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ.

ಶಾಸಕ ಅಶೋಕ್ ಕುಮಾರ್ ರೈ ಮುಖ್ಯಅತಿಥಿಯಾಗಿರುವರು. ಮಾಜಿ ಶಾಸಕ ಸಂಜೀವ ಮಠಂದೂರು ವಿಶೇಷ ಅತಿಥಿಯಾಗಿರುವರು. ವಿಸ್ಡಮ್ ಸಂಸ್ಥೆಯ ಸ್ಥಾಪಕ, ಎಂಡಿ, ಅಧ್ಯಕ್ಷ ಡಾ. ಫ್ರಾನ್ಸಿಸ್ಕಾ ತೇಜ್, ಸಂತ ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ಫಾ.ಸ್ಟ್ಯಾನಿ ಪಿಂಟೊ, ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಅಧ್ಯಕ್ಷ ಅಬ್ದುಲ್ ರಹಿಮಾನ್, ಪ್ರೇರಣಾದ ಕಾರ್ಯನಿರ್ವಾಹಕ ನಿರ್ದೇಶಕ ಪ್ರವೀಣ್ ಕುಂಟ್ಯಾನ, ಆರಾಧ್ಯ ಆರ್ಕೇಡಿನ ಮಾಲಕ ಕರುಣಾಕರ್ ರೈ ಅತಿಥಿಯಾಗಿರುವರು.

ಅಕ್ಷಯ ಎಜ್ಯುಕೇಷನ್ ಚಾರಿಟೇಬಲ್ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ಜಯಂತ್ ನಡುಬೈಲು, ವಿಜ್ಡಮ್ ಇನ್’ಸ್ಟಿಟ್ಯೂಷನ್ ನೆಟ್ ವರ್ಕ್ ನ ಹ್ಯೂಮನ್ ರಿಸೋರ್ಸಸ್ ಗ್ಲೋಬಲ್ ಡೈರೆಕ್ಟರ್ ದೀಪಕ್ ಬೋಳೂರ್, ವಿಸ್ಡಮ್ ಇನ್’ಸ್ಟಿಟ್ಯೂಷನ್ಸ್ ನೆಟ್’ವರ್ಕಿನ ವ್ಯವಹಾರ ಪಾಲುದಾರ ವಿನಿತ್ ಕುಂದರ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಬಿಲ್ಕಿಸ್ ಬಾನೋ ಪ್ರಕರಣದಲ್ಲಿ‌ ಅಪರಾಧಿಗಳ ಬಿಡುಗಡೆ, ಗುಜರಾತ್‌ ಸರ್ಕಾರದ ಆದೇಶ ರದ್ದು

Posted by Vidyamaana on 2024-01-08 21:57:45 |

Share: | | | | |


ಬಿಲ್ಕಿಸ್ ಬಾನೋ ಪ್ರಕರಣದಲ್ಲಿ‌ ಅಪರಾಧಿಗಳ ಬಿಡುಗಡೆ, ಗುಜರಾತ್‌ ಸರ್ಕಾರದ ಆದೇಶ  ರದ್ದು

ನವದೆಹಲಿ ಜ.8: ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳನ್ನು ಅವಧಿಗೆ ಮೊದಲೇ ಬಿಡುಗಡೆಗೊಳಿಸಿದ್ದ ಗುಜರಾತ್‌ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿದೆ. ಚುನಾವಣೆ ಹೊತ್ತಲ್ಲಿ ಕೋರ್ಟ್ ನೀಡಿರುವ ಆದೇಶ ಗುಜರಾತ್‌ ಸರ್ಕಾರಕ್ಕೆ ಹಿನ್ನಡೆ ಆದಂತಾಗಿದೆ. 


ಗುಜರಾತ್‌ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಂತ್ರಸ್ತ ಮಹಿಳೆ ಬಿಲ್ಕಿಸ್‌ ಬಾನು ಸುಪ್ರೀಂಕೋರ್ಟ್‌ ಗೆ ಸಲ್ಲಿಸಿದ್ದ ಮನವಿಯನ್ನು ಜಸ್ಟೀಸ್‌ ಬಿ.ವಿ.ನಾಗರತ್ನ ಮತ್ತು ಜಸ್ಟೀಸ್‌ ಉಜ್ಜಾಲ್‌ ಭುವನ್‌ ಅವರನ್ನೊಳಗೊಂಡ ಪೀಠ ತೀರ್ಪು ನೀಡಿದೆ. 2002ರಲ್ಲಿ ಗುಜರಾತ್‌ ನ ಗೋಧ್ರಾದಲ್ಲಿ ಬಿಲ್ಕಿಸ್‌ ಬಾನು ಮೇಲೆ ಅತ್ಯಾಚಾರ ಎಸಗಿ, ಆಕೆಯ 7 ಮಂದಿ ಕುಟುಂಬ ಸದಸ್ಯರನ್ನು ಕೊಲೆಗೈದ ಪ್ರಕರಣದಲ್ಲಿ 11 ಮಂದಿ ದೋಷಿಗಳಾಗಿದ್ದು ಜೀವಾವಧಿ ಶಿಕ್ಷೆಗೆ ಒಳಗಾಗಿದ್ದರು.‌ ಆದರೆ ಗುಜರಾತ್‌ ಸರ್ಕಾರ 2022ರಲ್ಲಿ 11 ಅಪರಾಧಿಗಳನ್ನು ಅವಧಿ ಪೂರ್ವ ಬಿಡುಗಡೆಗೊಳಿಸಲು ಹೊರಡಿಸಿದ್ದ ಆದೇಶವನ್ನು ಸುಪ್ರೀಂಕೋರ್ಟ್‌ ರದ್ದು ಮಾಡಿದೆ. 




ಆ ರೀತಿಯ ಆದೇಶವನ್ನು ಜಾರಿಗೊಳಿಸುವ ಅಧಿಕಾರ ಗುಜರಾತ್‌ ಸರ್ಕಾರಕ್ಕಿಲ್ಲ. ಇದೊಂದು ವಂಚನೆ ಕೃತ್ಯ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಅಲ್ಲದೆ, 11 ಅಪರಾಧಿಗಳು ಎರಡು ವಾರದೊಳಗೆ ಶರಣಾಗಿ, ಜೈಲಿಗೆ ಮರಳಬೇಕು ಎಂದು ತೀರ್ಪಿನಲ್ಲಿ ಸೂಚಿಸಿದೆ. ಅಪರಾಧಿಗಳ ಶೀಘ್ರ ಬಿಡುಗಡೆಯ ಅಧಿಕಾರ ಗುಜರಾತ್‌ ಸರ್ಕಾರಕ್ಕಿಲ್ಲ. ಬದಲಿಗೆ ಅಪರಾಧಿಗಳ ಅವಧಿ ಪೂರ್ವ ಬಿಡುಗಡೆಗೆ ಮಹಾರಾಷ್ಟ್ರ ಸರ್ಕಾರ ಪರಿಶೀಲನೆ ನಡೆಸಬಹುದು, ಯಾಕೆಂದರೆ ಆರೋಪಿಗಳ ವಿಚಾರಣೆ ನಡೆದಿರುವುದು ಮಹಾರಾಷ್ಟ್ರದಲ್ಲಿ.  ಗುಜರಾತ್‌ ನಲ್ಲಿ ಅಲ್ಲ ಎಂದು ಸ್ಪಷ್ಟಪಡಿಸಿದೆ. 


ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದಲ್ಲಿ ಎಲ್ಲ 11 ಅಪರಾಧಿಗಳನ್ನು ಜೀವಾವಧಿ ಶಿಕ್ಷೆಯ 14 ವರ್ಷ ಪೂರ್ತಿಗೊಳಿಸಿದ್ದಾರೆಂದು ಹೇಳಿ ಗುಜರಾತ್ ಸರ್ಕಾರ, 2022ರ ಆಗಸ್ಟ್ 15ರಂದು ಅವರನ್ನು ಜೈಲಿನಿಂದ ಬಿಡುಗಡೆ ಮಾಡಿತ್ತು.

ಸುರತ್ಕಲ್ : ಕಾವೂರಿನಲ್ಲಿ ನಡೆದ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ

Posted by Vidyamaana on 2024-03-29 07:47:38 |

Share: | | | | |


ಸುರತ್ಕಲ್ : ಕಾವೂರಿನಲ್ಲಿ ನಡೆದ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ

ಸುರತ್ಕಲ್: ಮಂಗಳೂರು ವಿಧಾನಸಭಾ ಕ್ಷೇತ್ರದ ಸುರತ್ಕಲ್ ಮತ್ತು ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ‌ ವತಿಯಿಂದ ಗುರುವಾರ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ಬಿಜೆಪಿಗೆ ಸೋಲಿನ ಭಯ ಈಗಲೇ ಶುರುವಾಗಿದೆ. ಅದಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಆರಂಭಿಸಿದ್ದಾರೆ. ಆದರೆ ತಾನು ಇದುವರೆಗೆ ಯಾವುದೇ ಕೆಟ್ಟ ಕೆಲಸಗಳನ್ನು ಮಾಡಿಲ್ಲ. ಮುಂದೆ ಮಾಡುವುದೂ ಇಲ್ಲ. ಕಾರ್ಯಕರ್ತರು ಜನರ ಬಳಿಗೆ ಹೋದಾಗ ತಲೆ ಏತ್ತಿ ಮಾತಾಡುವಂತೆ ಮಾಡುತ್ತೇನೆ. ಹಾಗಾಗಿ ಈ ಲೋಕಸಭಾ ಚುನಾವಣೆಯ ಗೆಲುವು ನಿಮ್ಮ ಗೆಲುವು ಎಂದರು.

ಹಿಂದು ಧರ್ಮದ ಜ್ಞಾನ, ಬೌದ್ಧ ಧರ್ಮದ ‌ಕರುಣೆ, ಕ್ರೈಸ್ತ ಧರ್ಮದ ಪ್ರೀತಿ, ಮಹಮ್ಮದ್ ಪೈಗಂಬರರ  ಸಹೋದರತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡು ಸದೃಢ ದೇಶ ನಿರ್ಮಿಸೋಣ ಎಂದರು.

Recent News


Leave a Comment: