Posted by vidyamaana on 2024-07-25 12:27:06 |
ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.
ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
Posted by Vidyamaana on 2023-10-10 20:50:01 |
ಮಂಗಳೂರು: ಇಸ್ರೇಲ್ ನಲ್ಲಿರುವ ಕರಾವಳಿಯ ಜನರನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತದೆ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಇಸ್ರೇಲ್ ನಲ್ಲಿ ಹಮಾಸ್ ಬಂಡುಕೋರರು ನಡೆಸಿರುವ ರಾಕೆಟ್ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ನಡೆಸುತ್ತಿದ್ದು ಇದೀಗ ಇಸ್ರೇಲ್ ನಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದ್ದು ಅಲ್ಲದೆ ಉದ್ಯೋಗ ಅರಸಿ ಕರಾವಳಿಯಾ ಸಾವಿರಾರು ಮಂದಿ ಇದೀಗ ಇಸ್ರೇಲ್ ನಲ್ಲಿ ಸಿಲುಕಿದ್ದಾರೆ ಈ ಕುರಿತು ಮಾತನಾಡಿದ ನಳಿನ್ ಕುಮಾರ್ ಕಟೀಲ್ ಯಾರು ಭಯ ಪಡಬೇಕಾಗಿಲ್ಲ ಇಸ್ರೇಲ್ ನಲ್ಲಿ ಐದು ಸಾವಿರ ದ.ಕ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ, ಯಾರಿಗೂ ಅಪಾಯ ಆಗದಂತೆ ಅವರಿಗೆ ರಕ್ಷಣೆ ಒದಗಿಸ್ತೇವೆ ಅಲ್ಲದೆ ಅವರನ್ನು ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಸರ್ಕಾರ ಮಾಡಲಿದೆ ಎಂದು ಹೇಳಿದರು.
ಕರಾವಳಿಗರ ರಕ್ಷಣೆ ಕುರಿತು ಸಚಿವ ಮುರಳೀಧರನ್ ಅವರ ಜೊತೆಗೂ ನಾನು ಮಾತನಾಡಿದ್ದೇನೆ, ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಇಸ್ರೇಲ್ ವಾಸಿಗಳ ಪೂರ್ಣ ಮಾಹಿತಿ ತರಿಸಿ ಕೊಳ್ಳಲು ಸೂಚಿಸ್ತೇನೆ ಯುದ್ಧದ ಪರಿಸ್ಥಿತಿ ಇದ್ದಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತವೆ, ಈಗಲೂ ಇಸ್ರೇಲ್ ನಲ್ಲಿದ್ದವರು ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದ್ದೆ ಇರುತ್ತದೆ, ರಷ್ಯಾ-ಉಕ್ರೇನ್ ಯುದ್ದ ಆದಾಗಲೂ ಇಂಥದ್ದೇ ಪರಿಸ್ಥಿತಿ ಇತ್ತು ಆಗಲೂ ಅವರ ಮನೆಗಳಿಗೆ ತೆರಳಿ ಸಮಾಧಾನ ಹೇಳಿದ್ದೆವು, ಮೋದಿ ಸರ್ಕಾರ ಆಗಲೂ ಅಲ್ಲಿದ್ದ ಭಾರತೀಯರ ರಕ್ಷಣೆ ಮಾಡಿತ್ತು ಅದೇ ಕೆಲಸವನ್ನು ಈಗಲೂ ಮಾಡುತ್ತದೆ ಎಂದು ಹೇಳಿದರು.
ನಾನು ಎಂಬೆಸ್ಸಿ ಜೊತೆಗೆ ಸಂಪರ್ಕದಲ್ಲಿ ಇದ್ದೇನೆ, ಯಾರೂ ಭಯ ಪಡೋ ಅಗತ್ಯ ಇಲ್ಲ, ಏನೇ ಆತಂಕ ಇದ್ದರೂ ನನ್ನನ್ನ ನೇರವಾಗಿ ಸಂಪರ್ಕಿಸಿ ಎಂದು ಹೇಳಿದರು.
Posted by Vidyamaana on 2024-05-19 15:28:02 |
ಉಡುಪಿ: ತಾಯಿಯ ಶವದೊಂದಿಗೆ ಮಾನಸಿಕ ಅಸ್ವಸ್ಥಳಾಗಿದ್ದ ಪುತ್ರಿ 3 ದಿನ ಕಳೆದಿರುವ ಮನ ಕಲಕುವ ಘಟನೆ ಕುಂದಾಪುರ ತಾಲೂಕಿನಲ್ಲಿ ನಡೆದಿದೆ.ತಾಯಿ ಮೃತಪಟ್ಟಿದ್ದ ಕಾರಣ ಅಹಾರ ಮತ್ತು ನೀರಿಲ್ಲದೇ ಮಗಳು ಕೂಡಾ ಅಸ್ವಸ್ಥಳಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯ ನಿವಾಸಿಗಳಾಗಿದ್ದ ತಾಯಿ ಜಯಂತಿ ಶೆಟ್ಟಿ (62) ಮತ್ತು ಮಗಳು ಪ್ರಗತಿ ಶೆಟ್ಟಿ (32) ಮೃತಪಟ್ಟವರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಜಯಂತಿ ಶೆಟ್ಟಿ
Posted by Vidyamaana on 2024-05-16 07:36:18 |
ನವದೆಹಲಿ, ಮೇ.16: ನಾನು ಯಾವತ್ತೂ ಹಿಂದು- ಮುಸ್ಲಿಂ ಅಂತ ಭೇದ ಮಾಡಿಲ್ಲ. ಹಾಗೊಂದ್ವೇಳೆ, ಹಿಂದು – ಮುಸ್ಲಿಂ ಭೇದ ಮಾಡಿದರೆ, ಸಾರ್ವಜನಿಕ ಜೀವನದಲ್ಲಿ ಇರುವುದಕ್ಕೆ ಯೋಗ್ಯನಲ್ಲ ಎಂದು ಭಾವಿಸುತ್ತೇನೆ. ಇದು ನನ್ನ ಸಂಕಲ್ಪ ಎಂದು ಪ್ರಧಾನಿ ನರೇಂದ್ರ ಮೋದಿ ಸಂದರ್ಶನ ಒಂದರಲ್ಲಿ ಹೇಳಿರುವ ವಿಡಿಯೋವನ್ನು ಮೋದಿ ತನ್ನ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ರಾಜಸ್ಥಾನದ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಜನರ ಬಳಿಯಿರುವ ಚಿನ್ನದ ಸಂಪತ್ತನ್ನು ಹೆಚ್ಚು ಮಕ್ಕಳಿದ್ದವರಿಗೆ ಹಂಚುತ್ತದೆ ಎಂದು ಹೇಳಿರುವುದು ಮೋದಿ ಮುಸ್ಲಿಮರನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ರೀತಿ ಬಿಂಬಿತವಾಗಿತ್ತು. ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಇತ್ತೀಚೆಗೆ ನ್ಯೂಸ್ 18 ವಾಹಿನಿಗೆ ನೀಡಿದ್ದ ಸಂದರ್ಶನದ ತುಣುಕನ್ನು ಮೋದಿ ತನ್ನ ಟ್ವಿಟರ್ ನಲ್ಲಿ ಹಂಚಿದ್ದು, ಅದರಲ್ಲಿ ನಾನೆಂದೂ ಹಿಂದು –ಮುಸ್ಲಿಂ ಎಂದು ಭೇದ ಮಾಡಿಲ್ಲ. ನಾನೆಂದಿಗೂ ತುಷ್ಟೀಕರಣ ರಾಜಕೀಯ ಮಾಡಲ್ಲ. ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್ ಎನ್ನುವುದೇ ನನ್ನ ನಂಬಿಕೆ ಎಂದು ಹೇಳಿದ್ದಾರೆ.
Posted by Vidyamaana on 2024-08-10 10:58:56 |
ಮಂಡ್ಯ :ರೈಲಿಗೆ ಸಿಲುಕಿ ಗೋಲ್ಡ್ ಮೆಡಲ್ ಪದವೀಧರೆ ಸಾವನ್ನಪ್ಪಿದ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ಜರುಗಿದೆ.ಮಂಡ್ಯದ ಸ್ವರ್ಣಸಂದ್ರ ಬಡಾವಣೆಯ ರಮ್ಯ(24)ಮೃತ ಯುವತಿ. ರೈಲು ನಿಲ್ದಾಣದ ರೈಲ್ವೆ ಮೇಲ್ಸೇತುವೆ ಬಳಿ ಹಳಿ ದಾಟುವ ವೇಳೆ ಘಟನೆ ಸಂಭವಿಸಿದೆ.
Posted by Vidyamaana on 2023-12-05 13:54:01 |
ಮೈಸೂರು: ಕಾಡಾನೆ ಕಾರ್ಯಾಚರಣೆ ವೇಳೆ ಕಾದಾಟದಲ್ಲಿ ಮೃತಪಟ್ಟ ಅರ್ಜುನ ಆನೆಯನ್ನು ನೆನೆದು ಮಾವುತ ವಿನು ಕಣ್ಣೀರಿಟ್ಟಿದ್ದಾರೆ.
ಅಂತಿಮ ದರ್ಶನದ ವೇಳೆ ಮಾವುತ ವಿನು ಅರ್ಜುನ ಆನೆಯನ್ನ ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದು, ನನ್ನ ಆನೆಯನ್ನ ಬದುಕಿಸಿಕೊಡಿ. ನನ್ನನ್ನೂ ಅರ್ಜುನನ ಜೊತೆ ಮಣ್ಣು ಮಾಡಿ. ನನ್ನ ಆನೆಯನ್ನ ಮೈಸೂರಿಗೆ ಕಳುಹಿಸಿಕೊಡಿ ಅರ್ಜುನ ಸತ್ತಿಲ್ಲ ಎಂದು ಹೆಂಡತಿ ಮಕ್ಕಳಿಗೆ ಹೇಳಿದ್ದೇನೆ ಎಂದು ಕಣ್ಣೀರಿಟ್ಟರು. ಸೋಮವಾರ ಕಾಡಾನೆ ಜೊತೆಗಿನ ಕಾಳಗದಲ್ಲಿ ಮೃತಪಟ್ಟ ಆನೆಯ ಅಂತ್ಯಸಂಸ್ಕಾರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಜನರು ತಂಡೋಪತಂಡವಾಗಿ ಬಂದು ದರ್ಶನ ಪಡೆಯುತ್ತಿದ್ದಾರೆ.
ಉಕ್ಕಿ ಬರುತ್ತಿದ್ದ ದುಃಖವನ್ನು ತಡೆದುಕೊಳ್ಳಲು ಪ್ರಯತ್ನಿಸಿದರೂ ವಿನುವಿಗೆ ಅಳು ತಡೆಯಲು ಆಗುತ್ತಿಲ್ಲ. ಪದೇ ಪದೇ ಅರ್ಜುನ ಬಳಿ ಹೋಗಿ, ನನ್ನೊಂದಿಗೆ ಬಂದು ಬಿಡು ಎಂದು ಕೇಳಿಕೊಳ್ಳುತ್ತಿರುವುದು ಮನಕಲುಕುವಂತಿತ್ತು.
ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದಲೇ ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿದ್ದ ಅರ್ಜುನ ಮೃತಪಟ್ಟಿದ್ದಾನೆ. ಅರಣ್ಯ ಅಧಿಕಾರಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕು. ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ತುರ್ತು ಚರ್ಚೆ ಮಾಡಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
Posted by Vidyamaana on 2024-01-26 04:16:30 |
ಬೆಂಗಳೂರು : ನಮ್ಮ ರಾಜ್ಯದ ರಾಜಧಾನಿ ಎಷ್ಟೇ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದರೂ ಫಾರಿನ್ ಸಿಟಿಯಾಗಲು ಸಾಧ್ಯವಿಲ್ಲ. ಪಬ್ಲಿಕ್ ಪಾರ್ಕ್, ರಸ್ತೆ ಹಾಗೂ ಬಸ್ ನಿಲ್ದಾಣದಲ್ಲಿಯೇ ಕಿಸ್ಸಿಂಗ್, ಹಗ್ಗಿಂಗ್, ರೊಮ್ಯಾನ್ಸಿಂಗ್ ಮಾಡುವುದಕ್ಕೆ ಕಡಿವಾಣವಿದೆ. ಆದರೆ, ಇಲ್ಲೊಂದು ಜೋಡಿ ಪಾರ್ಕ್ ಪಕ್ಕದ ರಸ್ತೆಯಲ್ಲಿಯೇ ಕಾರು ನಿಲ್ಲಿಸಿ ಮಟ ಮಟ ಮದ್ಯಾಹ್ನವೇ ಕಾಮತೃಷೆ ತೀರಿಸಿಕೊಳ್ಳುತ್ತಿದ್ದಾರೆ.ಇದನ್ನು ನೋಡಿದ ಪೊಲೀಸಪ್ಪ ಬುದ್ಧಿ ಹೇಳಲು ಮುಂದಾದರೆ ಅವರಿಗೆ ಕಾರು ಗುದ್ದಿಸಿ ಪರಾರಿ ಆಗಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೌದು, ಬೆಂಗಳೂರು ಸೇಫ್ ಸಿಟಿ, ಸಂಸ್ಕೃತಿಯೂ ಇರುವಂತಹ ಸಿಟಿ ಎಂದು ನಾವು ನಂಬಿದ್ದೇವೆ. ಇಲ್ಲಿ ಕೆಲವು ವಿದೇಶಗಳಲ್ಲಿರುವಂತೆ ಬಯಲಿನಲ್ಲಿಯೇ ದೈಹಿಕ ಕಾಮನೆಗಳನ್ನು ತೀರಿಸಿಕೊಳ್ಳಲು ಅವಕಾಶವಿಲ್ಲ. ಇಷ್ಟಿದ್ದರೂ ಅಲ್ಲೊಂದು, ಇಲ್ಲೊಂದು ಸಾರ್ವಜನಿಕ ಸ್ಥಳದಲ್ಲಿಯೇ ಕಿಸ್ ಮಾಡುವ ದೃಶ್ಯಗಳು ಕಂಡುಬರುತ್ತಿದೆ. ಇಂಥಹ ಘಟನೆಗಳಿಗೆ ಸಾರ್ವಜನಿಕರು ಹಾಗೂ ಸ್ಥಳೀಯ ಪೊಲೀಸರು ಬುದ್ಧಿ ಹೇಳಿ ಅಂತಹ ಜೋಡಿಗಳನ್ನು ಅಲ್ಲಿಂದ ಕಳಿಸುತ್ತಾರೆ. ಇಂತಹ ದೃಶ್ಯಗಳಿಂದ ಚಿಕ್ಕ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ನಮ್ಮ ವಾದವಾಗಿದೆ.ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ಪಿಎಸ್ಐ ಮಹೇಶ್ ಅವರು ಜ.20ರ ಮಧ್ಯಾಹ್ನ 3.30ರ ವೇಳೆಗೆ ಮನೆಗೆ ಬಂದು ಊಟ ಮಾಡಿ ಹೊರಗೆ ಬಂದಾಗ ಪಾರ್ಕಿನ ಬಳಿ ಒಂದು ಕಾರು ನಿಂತುಕೊಂಡು ಅಲುಗಾಡುತ್ತಿತ್ತು. ಇನ್ನು ಅದನ್ನು ಗಮನಿಸದೇ ಮುಂದಕ್ಕೆ ಹೋಗಿ ಹಿಂದಕ್ಕೆ ತಿರುಗಿ ನೋಡಿದರೆ ಯುವಕ ಹಾಗೂ ಯುವತಿ ಇಬ್ಬರೂ ಕಾರಿನ ಹಿಂಬದಿ ಸೀಟಿನಲ್ಲಿ ಕಾಮತೃಷೆ ತೀರಿಸಿಕೊಳ್ಳುವುದು ಕಣ್ಣಿಗೆ ಬಿದ್ದಿದೆ. ಇದೇ ರಸ್ತೆಯಲ್ಲಿ ಶಾಲಾ ಮಕ್ಕಳು, ಮಹಿಳೆಯರು ಅಡ್ಡಾಡುವ ರಸ್ತೆಯಾಗಿದ್ದು, ಅವರಿಗೆ ಮುಜುಗರ ಉಂಟಾಗುವುದನ್ನು ತಪ್ಪಿಸುವ ಉದ್ದೇಶದಿಂದ ಪಿಎಸ್ಐ ಮಹೇಶ್ ಅವರು ಕಾರಿನಲ್ಲಿದ್ದವರಿಗೆ ಬುದ್ಧಿ ಹೇಳಲು ಮುಂದಾಗಿದ್ದಾರೆ. ಈ ವೇಳೆ ಕಾರಿನ ನಂಬರ್ ನೋಟ್ ಮಾಡಿಕೊಂಡು ಅವರಿಗೆ ಬುದ್ಧಿ ಹೇಳಬೇಕು ಎನ್ನುವಷ್ಟರಲ್ಲಿ ಯುವಕ ಕಾರನ್ನು ಸ್ಟಾರ್ಟ್ ಮಾಡಿದ್ದಾನೆ.ಕಾರು ಸ್ಟಾರ್ಟ್ ಆದ ಕೂಡಲೇ ಪೊಲೀಸಪ್ಪನಿಗೆ ಎಲ್ಲಿಯೂ ಅಕ್ಕ ಪಕ್ಕದಲ್ಲಿ ಸರಿದುಕೊಳ್ಳಲು ಜಾಗವೇ ಇರಲಿಲ್ಲ. ಆದ್ದರಿಂದ ಕಾರಿನಲ್ಲಿದ್ದ ಯುವಕ ನೇರವಾಗಿ ಕಾರನ್ನು ಪಿಎಸ್ಐ ಮೇಲೆಯೇ ಹರಿಸಲು ಮುಂದಾಗಿದ್ದಾನೆ. ಈ ವೇಳೆ ಪಿಎಸ್ಐ ಮಹೇಶ್ ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ. ಹಾಗೆಯೇ ಕಾರನ್ನು ತುಸು ದೂರು ಓಡಿಸಿದ ಯುವಕ ನಂತರ ರಿವರ್ಸ್ ಗೇರ್ ಹಾಕಿ ಒಮ್ಮೆಲೆ ಚಲಾಯಿಸಿದ್ದಾನೆ. ಆಗ ಬಾನೆಟ್ ಮೇಲಿಂದ ಪಿಎಸ್ಐ ಕೆಳಗೆ ಬಿದ್ದು ತಲೆಗೆ ಗಾಯವಾಗಿ ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಅಲ್ಲಿದ್ದ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನಂತರವೇ ಅವರಿಗೆ ಎಚ್ಚರವಾಗಿದೆ.ಕಾಮತೃಷೆ ತೀರಿಸಿಕೊಳ್ಳುತ್ತಿದ್ದ ಜೋಡಿಗೆ ಬುದ್ಧಿ ಹೇಳಲು ಮುಂದಾದ ಪಿಎಸ್ಐ ಮಹೇಶ್ ಆಸ್ಪತ್ರೆಯಿಂದ ಬಂದು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಹಿಟ್ ಅಂಡ್ ರನ್ ಪ್ರಕರಣವನ್ನು ದಾಖಲಿಸಿದ್ದಾರೆ. ಇನ್ನೂ ಗಾಯಗಳಿಂದ ಪೂರ್ಣ ಪ್ರಮಾಣದಲ್ಲಿ ಚೇತರಿಕೆ ಕಾಣದೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂತಹ ಘಟನೆಗಳಿಗೆ ಕಡಿವಾಣ ಬೀಳಬೇಕಿದೆ ಎಂದು ಹೇಳಿದ್ದಾರೆ.