ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ

ಸುದ್ದಿಗಳು News

Posted by vidyamaana on 2024-07-08 15:11:53 |

Share: | | | | |


ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ

ಕಲಬುರಗಿ: ಹೃದಯಾಘಾತವಾದ ಹಿನ್ನೆಲೆಯಲ್ಲಿ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ.

ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದ್ದಲ್ಲಿ ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಇಹಲೋಕ ತ್ಯಜಿಸಿದ್ದಾರೆ.

ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ರಟಕಲ್ ಗ್ರಾಮದಲ್ಲಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.

 Share: | | | | |


ಅಶೋಕ್ ಕುಮಾರ್ ರೈ ಗೆ ಸಿಕ್ತು ಭರ್ಜರಿ ಗೆಲುವಿನ ರುಚಿ

Posted by Vidyamaana on 2023-05-13 08:01:56 |

Share: | | | | |


ಅಶೋಕ್ ಕುಮಾರ್ ರೈ ಗೆ  ಸಿಕ್ತು ಭರ್ಜರಿ ಗೆಲುವಿನ ರುಚಿ

ಪುತ್ತೂರು: ರಾಜ್ಯದ ಗಮನ ಸೆಳೆದಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಶೋಕ್ ಕುಮಾರ್ ರೈ 3351ಮತಗಳಿಂದ  ಜಯಭೇರಿ ಭಾರಿಸಿದ್ದಾರೆ.


ಜನಮತಗಣನೆಯಲ್ಲಿ ಮುನ್ನಡೆ ಸಾಧಿಸಿರುವ ಅಶೋಕ್ ಕುಮಾರ್ ರೈ ಅವರು, ಶಾಸಕರಾಗಿ ಆಯ್ಕೆಯಾಗಿದ್ದಾರೆ. ನಿರೀಕ್ಷೆಯಂತೆ, ಪುತ್ತೂರಿನಲ್ಲಿ ಕಾಂಗ್ರೆಸ್ ಬಹುಮತ ಪಡೆದುಕೊಂಡಿದೆ.

ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿ ನಡುವಿನ ಪೈಪೋಟಿಯ ಲಾಭವನ್ನು ಕಾಂಗ್ರೆಸ್ ಸಮರ್ಥವಾಗಿ ಬಳಸಿಕೊಂಡಿದೆ. ಬಿಜೆಪಿಯ ಮತಗಳು ವಿಭಜನೆಗೊಂಡಿದ್ದು ಹಾಗೂ ಕಾಂಗ್ರೆಸ್ ಒಗ್ಗಟ್ಟಿನಿಂದ ಮುನ್ನುಗ್ಗಿದ್ದರಿಂದ ಗೆಲುವಿನ ಪತಾಕೆ ಹಾರಿಸಲು ಸಾಧ್ಯವಾಯಿತು. ಅಶೋಕ್ ಕುಮಾರ್ ರೈ ಅವರ ಮುಂದಾಳುತ್ವ ಕಾಂಗ್ರೆಸಿಗೆ ವರದಾನವಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹ

Posted by Vidyamaana on 2023-03-24 10:00:18 |

Share: | | | | |


ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹ

ನವದೆಹಲಿ, ಮಾ 24 : ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ಸಿನ ಪರಮೋಚ್ಚ ನಾಯಕ ರಾಹುಲ್    ಗಾಂಧಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಆದೇಶಿಸಲಾಗಿದೆ.2019 ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಿ

ಸಂಸದರಾಗಿ ಆಯ್ಕೆಯಾಗಿದ್ದರು.ಕಳೆದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕದ ಕೇರಳದಲ್ಲಿ ಪ್ರಧಾನಿಯವರ ಸರ್ ನೇಮ್ ಕುರಿತು ರಾಹುಲ್ ನೀಡಿದ ಹೇಳಿಕೆ ಅವರಿಗೆ ಮುಳುವಾಗಿದೆ. ಈ ವಿವಾದಾತ್ಮಕ ಹೇಳಿಕೆಯನ್ನು ವಿರೋಧಿಸಿ ಗುಜರಾತ್ ರಾಜ್ಯದ ಸೂರತ್ ನ ಕೋರ್ಟ್ ರಾಹುಲ್ ಅವರನ್ನು ದೋಷಿ ಎಂದು ಪರಿಗಣಿಸಿ ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು.. ಆದರೆ ದೋಷಿ ಎಂದು ತೀರ್ಪು ಬಂದ ಬೆನ್ನಲ್ಲೇ ಜಾಮೀನು ಕೂಡ ದೊರೆದಿತ್ತು. ಎರಡು ಅಥವಾ ಅದಕ್ಕಿಂತ ಹೆಚ್ಚಿನ ವರ್ಷದ ಶಿಕ್ಷೆಗೆ ಒಳಗಾದರೆ ಲೋಕ ಸಭೆ ಸದಸ್ಯತ್ವವನ್ನು

ಅನರ್ಹಗೊಳಿಸಬಹುದು ಎಂಬ ನಿಯಮವಿದ್ದು, ಅದರಂತೆ ಅವರನ್ನು ಇದೀಗ ಅನರ್ಹಗೊಳಿಸಲಾಗಿದೆ.

ಹೊಸ ವರ್ಷದ ಪಾರ್ಟಿಗಾಗಿ 5 ಲಕ್ಷ ಕೊಟ್ಟವನನ್ನೇ ಕೊಲೆಗೈದು ಕಾಡು ಪ್ರಾಣಿಗೆ ತಿನ್ನಲೆಸೆದ ಕಿರಾತಕರು!

Posted by Vidyamaana on 2024-01-10 19:16:52 |

Share: | | | | |


ಹೊಸ ವರ್ಷದ ಪಾರ್ಟಿಗಾಗಿ 5 ಲಕ್ಷ ಕೊಟ್ಟವನನ್ನೇ ಕೊಲೆಗೈದು ಕಾಡು ಪ್ರಾಣಿಗೆ ತಿನ್ನಲೆಸೆದ ಕಿರಾತಕರು!

ಬೆಂಗಳೂರು (ಜ.10): ಹೊಸ ವರ್ಷದ ಪಾರ್ಟಿಗೆಂದು ವ್ಯಕ್ತಿಯೊಬ್ಬನನ್ನು ಕಿಡ್ನಾಪ್‌ ಮಾಡಿ 5 ಲಕ್ಷ ರೂ. ಹಣವನ್ನು ಪಡೆದ ಕಿರಾತಕರು, ನಂತರ ಹಣ ಕೊಟ್ಟವನನ್ನು ಬಿಟ್ಟು ಕಳಿಸದೇ ಕೊಲೆಗೈದು ಕಾಡು ಪ್ರಾಣಿಗಳಿಗೆ ಆಹಾರವಾಗಲೆಂದು ಎಸೆದು ಬಂದಿದ್ದಾರೆ.ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದುಡಿಯುವ ವರ್ಗ ಒಂದಿದ್ದರೆ, ದುಡಿದು ಸಂಪಾದನೆ ಮಾಡಿದ್ದವರನ್ನು ದರೋಡೆ ಮಾಡಿ ಮಜಾ ಮಾಡುವ ಇನ್ನೊಂದು ವರ್ಗವಿದೆ.ಹೀಗೆ, ನಾಲ್ವರು ಕಿರಾತಕರು ತಮ್ಮ ಹೊಸ ವರ್ಷದ ಪಾರ್ಟಿ ಹಾಗೂ ಶೋಕಿಗಾಗಿ ಅಮಾಯಕರಿಂದ ಹಣ ಪಡೆದಿದ್ದೂ ಅಲ್ಲದೇ, ಅವರನ್ನು ಅನ್ಯಾಯವಾಗಿ ಕೊಲೆಗೈದು ಅವರ ಮೃತ ದೇಹವೂ ಸಿಗದಂತೆ ಕಾಡು ಪ್ರಾಣಿಗಳಿಗೆ ಎಸೆದು ವಿಕೃತಿ ಮೆರೆದಿದ್ದಾರೆ. ಇದರಿಂದ ಬೆಂಗಳೂರಿನಲ್ಲಿ ಕಷ್ಟಪಟ್ಟು ದುಡಿದು ಮನೆ, ಹೆಂಡತಿ-ಮಕ್ಕಳ ಜೊತೆಗೆ ನೆಮ್ಮದಿಯಾಗಿದ್ದ ಕುಟುಂಬಗಳು ಬೀದಿಗೆ ಬರುತ್ತಿವೆ.


ಬೆಂಗಳೂರಿನ ಜ್ಞಾನಭಾರತೊ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಜಯ್ , ಆನಂದ್, ತಿಮ್ಮ ಮತ್ತು ಹನುಮಂತ ಎಂಬ ನಾಲ್ವರು ಹೊಸ ವರ್ಷದ ಪಾರ್ಟಿಗಾಗಿ ಯಾರನ್ನಾದರೂ ಕಿಡ್ನಾಪ್‌ ಮಾಡಬೇಕು ಎಂದು ಸ್ಕೆಚ್ ಹಾಕಿದ್ದರು. ಅದರಂತೆ ತಮಗೆ ಪರಿಚಿತವಿದ್ದ ಗುರುಸಿದ್ದಪ್ಪ ಎನ್ನುವವರನ್ನು ಡಿ.3ಒರಂದು ತಾವಿದ್ದ ಸ್ಥಳಕ್ಕೆ ಕರೆಸಿಕೊಂಡು ಕಿಡ್ನಾಪ್‌ ಮಾಡಿದ್ದಾರೆ. ನಂತರ, ಆತನ ಪತ್ನಿಗೆ ಕರೆ ಮಾಡಿಸಿ 5 ಲಕ್ಷ ರೂ. ತರಲು ಹೇಳಿದ್ದಾರೆ. ಹಣವನ್ನು ಪಡೆದ ನಂತರ ಆತನನ್ನು ಬಿಟ್ಟು ಕಳುಹಿಸದೇ ಕಾರಿನಲ್ಲಿ ಕೂಡಿಸಿಕೊಂಡು ಮದ್ಯ ಸೇವನೆ ಮಾಡುತ್ತಾ ಮಂಚಿನಬೆಲೆ ಡ್ಯಾಮ್‌ ಬಳಿಗೆ ಹೋಗಿದ್ದಾರೆ.ಮಂಚಿನಬೆಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡಿದ್ದ ಗ್ಯಾಂಗ್, ಡಿಸೆಂಬರ್ 30ರ ರಾತ್ರಿ ಪಾರ್ಟಿ ಮಾಡಿ ಗುರು ಸಿದ್ದಪ್ಪನನ್ನು ಬಿಟ್ಟು ಕಳಿಸುವುದಾಗಿ ಹೇಳಿದ್ದರು. ಆದ್ರೆ ಇವನನ್ನು ಬಿಟ್ರೆ ಪೊಲೀಸರಿಗೆ ಹೇಳುತ್ತಾನೆ ಎಂದು ಕೊಲೆ ಮಾಡಿದ್ದಾರೆ. ಗುರುಸಿದ್ದಪ್ಪನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ನಂತರ, ಮೃತ ದೇಹವನ್ನು ಕಾಡಿನಲ್ಲಿಯೇ ಬೀಸಾಡಿ, ಅಲ್ಲಿಂದ ಹೊಸ ವರ್ಷಕ್ಕಾಗಿ ಗೋವಾಕ್ಕೆ ತೆರಳಿ ಭರ್ಜರಿಯಾಗಿ ಪಾರ್ಟಿ ಮಾಡಿದ್ದಾರೆ. ಆದರೆ, ಇತ್ತ ಹುಬ್ಬಳ್ಳಿಯಿಂದ ಬಂದು ಜೀವನ ಕಟ್ಟಿಕೊಂಡು, ಬೆಂಗಳೂರಿನ ಕಿರಾತಕ ಹುಡುಗರಿಗೆ ಪಾರ್ಟಿಗಾಗಿ ಹಣವನ್ನು ಕೊಟ್ಟ ಗುರುಸಿದ್ದಪ್ಪ ಅನಾಥ ಹೆಣವಾಗಿ ಕಾಡಿನಲ್ಲಿ ಬಿದ್ದಿದ್ದನು.


ಈ ನಡುವೆ ಗುರುಸಿದ್ದಪ್ಪ ಪತ್ನಿ ತನ್ನ ಗಂಡ ಹಣ ಪಡೆದುಕೊಂಡು ಹೋದವರು ಮನೆಗೆ ವಾಪಸ್ಸು ಬಂದಿಲ್ಲಾ ಎಂದು ಮಿಸ್ಸಿಂಗ್ ಕೇಸ್ ನೀಡಿದ್ದರು. ಮಿಸ್ಸಿಂಗ್ ಕೇಸ್ ವಿಚಾರಣೆ ಮಾಡುವಾಗ ಕೊಲೆ ಆಗಿರುವುದು ಪತ್ತೆಯಾಗಿದೆ. ಸದ್ಯ ಮಂಚಿನ ಬೆಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮೃತ ದೇಹ ಪತ್ತೆ ಮಾಡಿದ್ದಾರೆ. ಸತತ ಎರಡು ದಿನ ಹುಡುಕಾಟದ ಬಳಿಕ ಮೃತ ದೇಹ ಪತ್ತೆಯಾಗಿದ್ದು, ಕಾಡು ಪ್ರಾಣಿಗಳು ಗುರುಸಿದ್ದಪ್ಪನ ದೇಹವನ್ನು ಏಳೆದುಕೊಂಡು ಹೋಗಿ ತಿಂದಿದ್ದಾವೆ. ಇನ್ನು ದೇಹದಲ್ಲಿ ತಲೆ ಬುರುಡೆ ಮತ್ತು ಬೆನ್ನೆಲುಬಿನ ಮೂಳೆಗಳು ಮಾತ್ರ ಲಭ್ಯವಾಗಿವೆ. ಗುರುಸಿದ್ದಪ್ಪನ ಅಳಿದುಳಿದ ಮೃತದೇಹದ ಭಾಗಗಳನ್ನು ಸಂಗ್ರಹಿಸಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗುದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗುರುಸಿದ್ದಪ್ಪ ಮೃತ ದೇಹದ ಮರಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ.

ಭಟ್ಕಳ | ಕಾರು-ಲಾರಿ ಮುಖಾಮುಖಿ ಢಿಕ್ಕಿ: ಉಡುಪಿ ಮೂಲದ ಮಹಿಳೆ ಮೃತ್ಯು; ಇಬ್ಬರಿಗೆ ಗಾಯ

Posted by Vidyamaana on 2023-10-17 20:18:24 |

Share: | | | | |


ಭಟ್ಕಳ | ಕಾರು-ಲಾರಿ ಮುಖಾಮುಖಿ ಢಿಕ್ಕಿ: ಉಡುಪಿ ಮೂಲದ ಮಹಿಳೆ ಮೃತ್ಯು; ಇಬ್ಬರಿಗೆ ಗಾಯ

ಭಟ್ಕಳ, ಅ 17: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಮೂಡ್ ಭಟ್ಕಳ ಬೈಪಾಸ್ ಬ್ರಿಡ್ಜ್ ಸಮೀಪ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ನಡೆದಿದೆ.ಮೃತರನ್ನು ಉಡುಪಿ ಜಿಲ್ಲೆಯ ಬೇಳೂರು ಗ್ರಾಮದ ರೀಟಾ ಕ್ಸೇವಿಯರ್ ಡಿಸೋಜ(51) ಎಂದು ಗುರುತಿಸಲಾಗಿದೆ.ರೀಟಾರ ಪತಿ ಕ್ಸೇವಿಯರ್ ರಾಜ್ ಡಿಸೋಜ ಮತ್ತು ಪುತ್ರಿ ಇನ್ರಿಕಾ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.


ಕ್ಸೇವಿಯರ್ ರಾಜ್ ಕುಟುಂಬವು ಕಾರಿನಲ್ಲಿ ಉಡುಪಿ ಕಡೆಯಿಂದ ಗೋವಾ ಕಡೆಗೆ ತೆರಳುತ್ತಿತ್ತು. ಇವರ ಕಾರು ಭಟ್ಕಳ ಬೈಪಾಸ್ ಬ್ರಿಡ್ಜ್ ಸಮೀಪ ತಲುಪಿದಾಗ ಮುರ್ಡೇಶ್ವರ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಮುಖಾಮುಖಿ ಢಿಕ್ಕಿಯಾಗಿದೆ ಎಂದು ಹೇಳಲಾಗಿದೆ.


ಗಂಭೀರ ಗಾಯಗೊಂಡಿದ್ದ ರೀಟಾ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿ ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪುತ್ತೂರು :ಎಪಿಎಂಸಿ ಸಹಾಯಕ ಕಾರ್ಯದರ್ಶಿ ರಾಮಚಂದ್ರ ಸೇವೆಯಿಂದ ಅಮಾನತು

Posted by Vidyamaana on 2024-05-04 20:42:20 |

Share: | | | | |


ಪುತ್ತೂರು :ಎಪಿಎಂಸಿ ಸಹಾಯಕ ಕಾರ್ಯದರ್ಶಿ ರಾಮಚಂದ್ರ ಸೇವೆಯಿಂದ ಅಮಾನತು

ಪುತ್ತೂರು ಮೇ 04 : ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಸೇರಿದ ದಿನವೇ ಮತ್ತೆ ಅಮಾನಾತಾದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪುತ್ತೂರಿನ ಎಪಿಎಂಸಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.ವರ್ಗಾವಣೆ ವಿರುದ್ಧ ಕೆಎಟಿಯಿಂದ ತಡೆಯಾಜ್ಞೆ ತಂದು ಗುರುವಾರ ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ರಾಮಚಂದ್ರ ಅವರಿಗೆ ಮಧ್ಯಾಹ್ನ ವೇಳೆ ಅಮಾನತು ಆದೇಶ ನೀಡಲಾಗಿದೆ.

ರಾಮಚಂದ್ರ ಅವರು ತರಕಾರಿ ವ್ಯಾಪಾರಸ್ಥರಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ತರಕಾರಿ ವಾಹನಗಳ ಒಳಪ್ರವೇಶವನ್ನು ನಿರಾಕರಿಸುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಪರವಾನಗಿ ನೀಡದೆ ಇರುವುದರಿಂದ ವ್ಯಾಪಾರದಲ್ಲಿ ನಷ್ಟ ಆಗಿದೆ ಎಂದು ಎಪಿಎಂಸಿ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು ಜನವರಿ 4ರಂದು ಕೃಷಿ ಮಾರಾಟ ಇಲಾಖೆ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.

ಅಪರಾಧ ಹಿನ್ನೆಲೆ ಪತ್ತೆಗೆ ಡಿಜಿಟಲ್ ಟಚ್.

Posted by Vidyamaana on 2023-02-19 07:55:08 |

Share: | | | | |


ಅಪರಾಧ ಹಿನ್ನೆಲೆ ಪತ್ತೆಗೆ ಡಿಜಿಟಲ್ ಟಚ್.

ಪುತ್ತೂರು: ರಾತ್ರಿ ವೇಳೆ ಜರಗುವ ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಹಾಗೂ ಅಪರಾಧಿಗಳನ್ನು ಪತ್ತೆ ಹಚ್ಚುವ ಹಿನ್ನೆಲೆಯಲ್ಲಿ ನೂತನ MCCTNS ( Mobile Crime and Criminal Tracking Network System) ಪೋರ್ಟಬಲ್ ಸ್ಕ್ಯಾನರ್ ಬಳಕೆಗೆ ದ.ಕ. ಜಿಲ್ಲಾ ಪೊಲೀಸರು ಚಾಲನೆ ನೀಡಿದ್ದಾರೆ.

ರಾತ್ರಿ ಗಸ್ತು ಕರ್ತವ್ಯದ ವೇಳೆ ಕಾಣಸಿಗುವ ಅಪರಿಚಿತ ಹಾಗೂ ಸಂಶಯಾಸ್ಪದ ವ್ಯಕ್ತಿಗಳ ಅಪರಾಧ ಚಟುವಟಿಕೆಯನ್ನು ತಿಳಿದುಕೊಳ್ಳಲು ಈ ತಂತ್ರಜ್ಞಾನ ನೆರವಾಗಲಿದೆ. ಆ ವ್ಯಕ್ತಿಯ ಬೆರಳಚ್ಚನ್ನು ತೆಗೆದುಕೊಳ್ಳುವ ಈ ಪೋರ್ಟಬಲ್ ಸ್ಕ್ಯಾನರ್, ಆತ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದರೆ ಅದರ ಸಂಪೂರ್ಣ ವಿವರವನ್ನು ತಕ್ಷಣದಲ್ಲೇ ನೀಡಲಿದೆ. ಮೌಖಿಕ ವಿಚಾರಣೆಯ ಜೊತೆಗೆ ತಂತ್ರಾಂಶದ ಮೂಲಕ ಪರಿಶೀಲಿಸಿದಾಗ ದೊರೆಯುವ ಮಾಹಿತಿ ಆಧಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸಾಧ್ಯಣ.

ಇಂತಹ ನೂತನ ತಂತ್ರಜ್ಞಾನ ವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಬಳಸುತ್ತಿರುವುದರಿಂದ  ಅಪರಾಧ ಹಿನ್ನೆಲೆಯ ವ್ಯಕ್ತಿಗಳನ್ನು ತಕ್ಷಣ ಪತ್ತೆ ಹಚ್ಚಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಧ್ಯ. ಆದ್ದರಿಂದ ಸಾರ್ವಜನಿಕರು ಈ ಪ್ರಕ್ರಿಯೆಗೆ ಸಹಕರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Leave a Comment: