ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಸಂಪ್ಯದಲ್ಲಿ ವಿಜೃಂಭಿಸಿದ ನವಚೇತನಾ ಯುವಕ ಮಂಡಲದ 41ನೇ ವರ್ಷದ ಗಣೇಶೋತ್ಸವ

Posted by Vidyamaana on 2023-09-21 11:30:57 |

Share: | | | | |


ಸಂಪ್ಯದಲ್ಲಿ ವಿಜೃಂಭಿಸಿದ ನವಚೇತನಾ ಯುವಕ ಮಂಡಲದ 41ನೇ ವರ್ಷದ ಗಣೇಶೋತ್ಸವ

ಪುತ್ತೂರು: ಸಂಪ್ಯ ನವಚೇತನಾ ಯುವಕ ಮಂಡಲದ ವತಿಯಿಂದ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳ ಕಾಲ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮದಿಂದ ನಡೆಯಿತು.

ವೇ.ಮೂ ಸಂದೀಪ್ ಕಾರಂತರವರ ನೇತೃತ್ವದಲ್ಲಿ ನಡೆದ ಗಣೇಶೋತ್ಸವದಲ್ಲಿ ಬೆಳಿಗ್ಗೆ ಶ್ರೀಗಣೇಶನ ವಿಗ್ರಹದ ಆಗಮನದ ಬಳಿಕ ಗಣೇಶ ವಿಗ್ರಹ ಪ್ರತಿಷ್ಠೆ, ಗಣಹೋಮ ನಡೆದ ಬಳಿಕ ವಿವಿಧ ಭಜನಾ ಮಂಡಳಿಯವರಿಂದ ಭಜನೆ ನಡೆದ ಬಳಿಕ ಮಕ್ಕಳು, ಮಹಿಳೆಯರು ಹಾಗೂ ಪುರುಷರಿಗೆ ವಿವಿಧ ಸ್ಪರ್ಧೆಗಳು ನೆರವೇರಿತು.

ಮಧ್ಯಾಹ್ನ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ದೈವ ನರ್ತಕ ಡಾ. ರವೀಶ್ ಪಡುಮಲೆ ಮಾತನಾಡಿ, ಸನಾತನ ಧರ್ಮವಾಗಿರುವ ಹಿಂದು ಧರ್ಮವನ್ನು ಸರ್ವ ನಾಶ ಮಾಡಬೇಕು ಎಂದು ಹೇಳಿಕೆ ನೀಡಿರುವುದನ್ನು ನಾವೆಲ್ಲ ಖಂಡಿಸಬೇಕು. ತಮಿಳುನಾಡಿನಲ್ಲಿ ಉದಯನಿಧಿ ನೀಡಿರುವ ಹೇಳಿಕೆಯನ್ನು ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ವಿರೋಧಿಸಿದ್ದು, ಹಿಂದು ಸಮಾಜದ ಶಕ್ತಿಯನ್ನು  ತೋರಿಸುತ್ತದೆ. ಹಿಂದು ಸಮಾಜಕ್ಕೆ ಮುಸ್ಲಿಂರಿಂದ ಹೊಡೆತವಲ್ಲ. ಸಮಾಜದ ಒಳಗಿನವರಿಂದಲೇ ತೊಂದರೆಯಾಗಿದೆ ಎಂದ ಅವರು, ನವಚೇತನ ಯುವಕ ಮಂಡಲವು ಸಂಘಟನೆ ಮಾತ್ರವಲ್ಲ. ಹಿಂದು ಸಮಾಜ ಒಗ್ಗೂಡಿಸುವ ಪ್ರಯತ್ನ ನಡೆಯುತ್ತದೆ. ನಮ್ಮ ಸಂಸ್ಕೃತಿ ಉಳಿಸಲು ಸಮಾಜ ಒಂದಾಗಬೇಕು ಎಂದು ಹೇಳಿದರು.

ರೋಟರಿ ಕ್ಲಬ್ ಸಹಾಯಕ ಗವರ್ನರ್ ಪುರಂದರ ರೈ ಮಿತ್ರಂಪಾಡಿ ಮಾತನಾಡಿ, ಯುವಕ ಮಂಡಲ ನಮ್ಮ ಊರಿನ ಸ್ವತ್ತು. ಯುವಕರ ಉತ್ತಮ ಕೆಲಸಗಳಿಗೆ ಪ್ರೋತ್ಸಾಹ ನೀಡಿ, ಅವರು ದಾರಿ ತಪ್ಪಿದಾದ ಸರಿದಾರಿಗೆ ತರುವ ಕೆಲಸ ಹಿರಿಯರಿಂದ ಆಗಬೇಕು ಎಂದರು.

ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮಾತನಾಡಿ, ಆದಿಪೂಜಿತ ಎಂದು ಹೆಸರಿರುವ ಗಣಪತಿ ವಿಶ್ವವ್ಯಾಪಿಯಾಗಿದೆ. ಗಣಪತಿ ಸ್ನೇಹ, ಒಗ್ಗಟ್ಟು, ಪ್ರೀತಿಯ ಸಂಕೇತ. ಭಕ್ತಿಯಿಂದ ಆಚರಿಸಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ ಎಂದರು. 

ಸನ್ಮಾನ ಸ್ವೀಕರಿಸಿದ ವಿದ್ಯಾಮಾತ ಅಕಾಡೆಮಿಯ ಭಾಗ್ಯೇಶ್ ರೈ ಮಾತನಾಡಿ, ಮಕ್ಕಳಿಗೆ ಸಂಸ್ಕಾರ ನೀಡುವುದು ಶಿಕ್ಷಣ ಸಂಸ್ಥೆಗಳಲ್ಲ. ಸಂಸ್ಕಾರ ನೀಡುವುದು ಪೋಷಕರ ಜವಾಬ್ದಾರಿಯಾಗಿದೆ. ನವಚೇತನಾ ಯುವಕ ಮಂಡಲದಿಂದ ನೀಡಲಾಗುವ ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾಮಾತಾ ಅಕಾಡೆಮಿಯಿಂದಲೂ ಸಹಕಾರ ನೀಡುವುದಾಗಿ ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಪ್ರಾರಂಭಗೊಂಡಿರುವ ಗಣೇಶೋತ್ಸವವು ಹಿಂದು ಸಮಾಜವನ್ನು ಒಟ್ಟುಗೂಡಿಸಿ, ಸಂಘಟಿಸುವ ನಿಟ್ಟಿನಲ್ಲಿ ಇಂದಿಗೂ ಪ್ರಸ್ತುತವಾಗಿದೆ. ಎಲ್ಲರ ಭಾಗವಹಿಸುವವಿಕೆಯೊಂದಿಗೆ ಮಾದರಿಯಾಗಿ ನಡೆಯುತ್ತಿದೆ. ಯುವಕ ಮಂಡಲವು ಗಣೇಶೋತ್ಸವಕ್ಕೆ ಸೀಮಿತವಾಗಿರದೆ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಬೆನ್ನೆಲುಬಾಗಿ ಸಹಕರಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮವನ್ನು ಆರ್ಯಾಪು ಗ್ರಾ.ಪಂ ಅಧ್ಯಕ್ಷೆ ಗೀತಾ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಸುಳ್ಯ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯ ಡಾ.ವೇಣುಗೋಪಾಲ, ಪ್ರಗತಿಪರ ಕೃಷಿ ದಯಾನಂದ ಗೌಡ ಕುಂಟ್ಯಾನ ಬಾರಿಕೆ ಹಾಗೂ ಆರ್ಯಾಪು ನೇರಳಕಟ್ಟೆ ಶ್ರೀ ಅಮ್ಮನವರ ದೇವಸ್ಥಾನದ ಸುರೇಶ ಪಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಲಾಂಛನ ಬಿಡುಗಡೆ:

ಸುಮಾರು 41 ವರ್ಷಗಳ ಇತಿಹಾಸವಿರುವ ನವಚೇತನಾ ಯುವಕ ಮಂಡಲದ ನೂತನ ಲಾಂಛನವನ್ನು ಕಾರ್ಯಕ್ರಮದಲ್ಲಿ ದೇವಸ್ಥಾನದ ಆರೋಗ್ಯ ರಕ್ಷಾ ಸಮಿತಿಯ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಬಿಡುಗಡೆಗೊಳಿಸಿದರು.

ಸನ್ಮಾನ:

ಈ ಸಾಲಿನ ಜಿಲ್ಲಾ ಅತ್ಯುತ್ತಮ ಪ್ರಶಸ್ತಿ ಪುರಸ್ಕöÈತರಾದ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿರುವ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲಾ ಶಿಕ್ಷಕ ಉದಯ ಕುಮಾರ್ ರೈ ಸಂಪ್ಯ, ರಾಜ್ಯ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಪುರಸ್ಕöÈತರಾದ ವಿದ್ಯಾಮಾತ ಅಕಾಡೆಮಿಯ ನಿರ್ದೇಶಕ ಭಾಗ್ಯೇಶ್ ರೈಯವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಸೀತಾರಾಮ ಪ್ರತಿಭಾ ಪುರಸ್ಕಾರ;

ಕ್ರೀಡೆ, ಶೈಕ್ಷಣಿಕ ಕ್ಷೇತ್ರದ ಸಾಧಕ ವಿದ್ಯಾರ್ಥಿಗಳಿಗೆ ಯುವಕ ಮಂಡಲದಿಂದ ಪ್ರತಿ ವರ್ಷ ನೀಡುವ ಪ್ರತಿಭಾ ಪುರಸ್ಕಾರವನ್ನು ಈ ವರ್ಷದಿಂದ `ಸೀತಾರಾಮ ಪ್ರತಿಭಾ ಪುರಸ್ಕಾರ ಎಂದು ನಾಮಕರಣ ಮಾಡಿಕೊಂಡು ಯುವಕ ಮಂಡಲ ವ್ಯಾಪ್ತಿಯ ವಿದ್ಯಾರ್ಥಿಗಳಾದ ಶುಭಲಕ್ಷ್ಮೀ, ಅಂಕಿತ್ ಪಿ., ಗಗನ್ ಗೌಡ ಬೈಲಾಡಿ, ಮೇಘಾ ಎಸ್.ಎನ್., ಸುದರ್ಶನ್ ಹೆಬ್ಬಾರ್,  ರೇಷ್ಮಾ, ರವರಿಗೆ ನೀಡಿ ಗೌರವಿಸಲಾಯಿತು. ಗಣೇಶೋತ್ಸವದ ಅನ್ನದಾನ ಪ್ರಾಯೋಜಕರಾದ ಐತ್ತಪ್ಪ ರೈ, ಆದರ್ಶ ನಾಯ್ಕ್ ಸಂಪ್ಯ , ಪಾಂಡುರಂಗ ಭಟ್ ಕಲ್ಲರ್ಪೆಯವರನ್ನು ಗೌರವಿಸಲಾಯಿತು.

ಮೈಥಿಲಿ ಹಾಗೂ ಶಾಲ್ಮಿಲಿ ಪ್ರಾರ್ಥಿಸಿದರು. ನವಚೇತನಾ ಯುವಕ ಮಂಡಲದ ಅಧ್ಯಕ್ಷ ವಿಜಯ ಬಿ.ಎಸ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಉಮೇಶ್ ಎಸ್.ಕೆ ವರದಿ ವಾಚಿಸಿ, ವಂದಿಸಿದರು. ಯುವಕ ಮಂಡಲದ ನಾಗೇಶ್ ಸಂಪ್ಯ, ಲಕ್ಷ್ಮಿರಮಣ ಬೈಲಾಡಿ, ರವಿನಾಥ ಗೌಡ ಬೈಲಾಡಿ, ರವಿ ಗೌಡ, ಸುರೇಶ್ ಉದಯಗಿರಿ, ಕುಂಞಣ್ಣ, ಸುರೇಶ್ ಪೂಜಾರಿ, ಸುರೇಶ್ ಬೈಲಾಡಿ, ಜಯಂತ ಶೆಟ್ಟಿ ಕಂಬಳತ್ತಡ್ಡ, ಶೀನಪ್ಪ, ದಿನೇಶ್ ಅತಿಥಿಗಳನ್ನು ಶಾಲು, ಸ್ಮರಣಿಕೆ ನೀಡಿ ಸ್ವಾಗತಿಸಿದರು. ತೇಜಸ್ ಗೌಡ ಪ್ರತಿಭಾ ಪುರಸ್ಕಾರದ ಪಟ್ಟಿ ವಾಚಿಸಿದರು. ಉದಯ ಕುಮಾರ್ ರೈ ಹಾಗೂ ಹರಿಣಿ ಪುತ್ತೂರಾಯ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ನಂತರ ಅಮ್ಮ ಕಲಾವಿದೆರ್ ಕುಡ್ಲ ಇವರಿಂದ `ಅಲೇ ಬುಡಿಯೆರ್ಗೆ ತುಳು ಹಾಸ್ಯಮಯ ನಾಟಕ ನಡೆದ ಬಳಿಕ ರಾತ್ರಿ ಅನ್ನಸಂತರ್ಪಣೆ ನಡೆಯಿತು.

ಬೆಳ್ತಂಗಡಿ: ಪೊಲೀಸರ ಮೇಲೆ ತಂಡದಿಂದ ಹಲ್ಲೆ; ಪ್ರಕರಣ ದಾಖಲು

Posted by Vidyamaana on 2024-03-10 04:28:51 |

Share: | | | | |


ಬೆಳ್ತಂಗಡಿ: ಪೊಲೀಸರ ಮೇಲೆ ತಂಡದಿಂದ ಹಲ್ಲೆ; ಪ್ರಕರಣ ದಾಖಲು

ಬೆಳ್ತಂಗಡಿ: ಪೊಲೀಸರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ತೆಂಕ ಕಾರಂದೂರು ಗ್ರಾಮದ ಪೆರಾಲ್ದಕಟ್ಟೆ ಸಮೀಪ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ಧ ಹಾಗೂ ಇತರ ಅಪರಿಚಿತರ ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮಹೇಶ್, ಸುರೇಶ್, ಅರುಣ್ ಹಾಗೂ ಇತರ ಹತ್ತಕ್ಕೂ ಹೆಚ್ಚು ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.ವೇಣೂರು ಪೊಲೀಸ್ ಠಾಣೆಯ ಎ.ಎಸ್.ಐ ರಾಮಯ್ಯ ಹೆಗ್ಡೆ ಅವರು ಯುವಕರ ತಂಡ ಶಿವರಾತ್ರಿಯಂದು ರಸ್ತೆಯಲ್ಲಿ ದಾಂಧಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ್ದಾರೆ. ತಡ ರಾತ್ರಿ ವೇಳೆ ರಸ್ತೆಯಲ್ಲಿದ್ದ ಯುವಕರನ್ನು ರಸ್ತೆಯಲ್ಲಿ ಸೋಡಾ ಬಾಟ್ಲಿಗಳನ್ನು ಒಡೆದು ಹಾಕಿರುವ ಬಗ್ಗೆ ರಾಮಯ್ಯ ಅವರು ಪ್ರಶ್ನಿಸಿದ್ದು, ಇದರಿಂದ ಸಿಟ್ಟುಗೊಂಡ ತಂಡ ಅವರ ಮೇಲೆ ದಾಳಿ ನಡೆಸಿ, ಅವರನ್ನು ನೆಲಕ್ಕೆ ಹಾಕಿ ತುಳಿದು ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ.


ಈ ಬಗ್ಗೆ ರಾಮಯ್ಯ ಅವರು ನೀಡಿರುವ ದೂರಿನಂತೆ ವೇಣೂರು ಪೊಲೀಸರು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ. ರಾಮಯ್ಯ ಅವರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಪ್ಪಿನಂಗಡಿ : ಶಿರಾಡಿ ಘಾಟಿಯಲ್ಲಿ ಅಕ್ಕಿ ಸಾಗಟದ ಲಾರಿಗೆ ಬೆಂಕಿ - ಲಕ್ಷಾಂತರ ನಷ್ಟ

Posted by Vidyamaana on 2023-10-21 12:35:31 |

Share: | | | | |


ಉಪ್ಪಿನಂಗಡಿ : ಶಿರಾಡಿ ಘಾಟಿಯಲ್ಲಿ ಅಕ್ಕಿ ಸಾಗಟದ ಲಾರಿಗೆ ಬೆಂಕಿ -  ಲಕ್ಷಾಂತರ  ನಷ್ಟ

ಉಪ್ಪಿನಂಗಡಿ : ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ (Shir

non

i Ghat) ಸಂಭವಿಸಿದೆ.ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಟ್ರಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Seemore ವಿಡಿಯೋ ನೋಡಲು ಕ್ಲಿಕ್ ಮಾಡಿ 

ಉಪ್ಪಿನಂಗಡಿ : ಶಿರಾಡಿ ಘಾಟಿಯಲ್ಲಿ ಅಕ್ಕಿ ಸಾಗಟದ ಲಾರಿಗೆ ಬೆಂಕಿ - ಲಕ್ಷಾಂತರ ನಷ್ಟ


ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್, ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ಪಾರಾಗಿದ್ದಾರೆ.ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಸಂಪೂರ್ಣ ಸುಟ್ಟು ಹೋಗಿದೆ. ಹಾಸನದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಆದರೂ ಲಾರಿ ಅಕ್ಕಿ ಸಮೇತ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ಕೆಲ ಹೊತ್ತು ಅಡಚಣೆ

ಉಂಟಾಗಿತ್ತು ಎಂದು ತಿಳಿದುಬಂದಿದೆ.

ಪುತ್ತೂರು : ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೊಬೈಲ್ ಒಡೆದು ಹಾನಿ : ದೂರು ದಾಖಲು

Posted by Vidyamaana on 2023-07-16 15:35:23 |

Share: | | | | |


ಪುತ್ತೂರು : ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೊಬೈಲ್ ಒಡೆದು ಹಾನಿ : ದೂರು ದಾಖಲು

ಪುತ್ತೂರು : ಬಪ್ಪಳಿಕೆ ಎಂಬಲ್ಲಿ ಪತ್ರಕರ್ತ ನಿಶಾಂತ್ ಬಿಲ್ಲಂಪದವು ಎಂಬವರ ಮೊಬೈಲ್ ಅನ್ನು ಒಡೆದು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.


ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 427 ಐಪಿಸಿ ರನ್ವಯ ದಾಖಲಿಸಿಕೊಂಡು ಸದ್ರಿ ದೂರಿನಲ್ಲಿ ಸಲ್ಲಿಸಿರುವ ವಿಚಾರಗಳ ಕುರಿತು ಸೂಕ್ತ ಕಾನೂನು ಮತ್ತು ನಿಯಮಗಳ ಅನ್ವಯ ಕ್ರಮ ಕೈಗೊಳ್ಳಲಾಗಿದೆ ಮತ್ತು ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ನ್ಯಾಯಾಲಯದಲ್ಲಿ ವರದಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಟ್ಟು ಆಸ್ತಿ ಎಷ್ಟು ಗೊತ್ತಾ?

Posted by Vidyamaana on 2024-04-21 15:46:43 |

Share: | | | | |


ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಟ್ಟು ಆಸ್ತಿ ಎಷ್ಟು ಗೊತ್ತಾ?

ನವದೆಹಲಿ: ಗುಜರಾತ್‌ನ ಗಾಂಧಿನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ ಕೇಂದ್ರ ಗೃಹ ಸಚಿವ ಅಮಿತ್ ಶಾ. ಈ ನಡುವೆ ಅವರ ಈ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ 36 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ.

ಇದೇ ವೇಳೆ ಅವರು ತಮ್ಮ ಬಳಿಯಲ್ಲಿ ಯಾವುದೇ ಕಾರಿಲ್ಲ ಎಂದು ಹೇಳಿರುವ ಶಾ, ಅವರ ಪತ್ನಿ ಬಳಿ ಇದೆ 31 ಕೋಟಿ ರೂ. ಮೌಲ್ಯದ ಆಸ್ತಿ ಇರುವುದಾಗಿ ತಿಳಿಸಿದ್ದಾರೆ. 

ಅಫಿಡವಿಟ್ ಪ್ರಕಾರ, ಶಾ ಮತ್ತು ಅವರ ಪತ್ನಿ ಒಟ್ಟು 65.67 ಕೋಟಿ ರೂ. ಗಮನಾರ್ಹವಾಗಿ, ಇದು 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವರದಿಯಾದ 30.49 ಕೋಟಿ ರೂ.ಗಿಂತ ಗಮನಾರ್ಹ ಹೆಚ್ಚಳವನ್ನು ಸೂಚಿಸುತ್ತದೆ, ಕಳೆದ ಐದು ವರ್ಷಗಳಲ್ಲಿ ಶೇಕಡಾ 100 ಕ್ಕಿಂತ ಹೆಚ್ಚು ಬೆಳವಣಿಗೆಯನ್ನು ತೋರಿಸುತ್ತದೆ.

ಕೋಡಿಂಬಾಡಿ ಗ್ರಾಪಂ; ನೂತನ ಅಧ್ಯಕ್ಷ ಉಪಾಧ್ಯಕ್ಷರ ಪದಗ್ರಹಣ ಸಮಾರಂಭ

Posted by Vidyamaana on 2023-08-23 13:22:01 |

Share: | | | | |


ಕೋಡಿಂಬಾಡಿ ಗ್ರಾಪಂ; ನೂತನ ಅಧ್ಯಕ್ಷ ಉಪಾಧ್ಯಕ್ಷರ ಪದಗ್ರಹಣ ಸಮಾರಂಭ

ಪುತ್ತೂರು: ಕೋಡಿಂಬಾಡಿ ಗ್ರಾಪಂ ಆಡಳಿತ ಹಲವು ವರ್ಷಗಳ ಕಾಲ ಬಿಜೆಪಿ ಆಡಳಿತದ ತೆಕ್ಕೆಯಲ್ಲಿತ್ತು, ಜನತೆ ಬದಲಾವಣೆ ಬಯಸಿದ್ದರು ನಾವು ಬದಲಾವಣೆಯನ್ನು ಮಾಡಿದ್ದೇವೆ, ಗ್ರಾಮದ ಅಭಿವೃದ್ದಿಗಾಗಿ ಕೋಡಿಂಬಾಡಿಯಲ್ಲಿ ಕಾಂಗ್ರೆಸ್ ಆಡಳಿತದ ಪಂಚಾಯತ್ ಬಂದಿದೆ, ಉತ್ತಮ ಆಡಳಿತ ನಡೆಸುವ ಮೂಲಕ ನನ್ನ ಹುಟ್ಟೂರ ಗ್ರಾಪಂ ಕ್ಷೇತ್ರದ ಎಲ್ಲಾ ಗ್ರಾಪಂಗಳಿಗೂ ಮಾಡದರಿಯಾಗಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ತನ್ನ ಹುಟ್ಟೂರಿನ ಕೋಡಿಂಬಾಡಿ ಗ್ರಾಮಪಂಚಾಯತ್‌ನಲ್ಲಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚುವರಿ ನಾಲ್ಕು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಬಂದಿದೆ, ಸುಭದ್ರ ಮತ್ತು ಭೃಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಇತರೆ ಪಕ್ಷದ ಸದಸ್ಯರು ನಮ್ಮ ಜೊತೆ ಕೈ ಜೋಡಿಸಿದ್ದಾರೆ. ನಾವು ಯಾರಿಗೂ ಬಲವಂತ ಮಾಡಿಲ್ಲ, ಕಾಂಗ್ರೆಸ್‌ನ ತತ್ವ ಸಿದ್ದಾಂತವನ್ನು ಮೆಚ್ಚಿ ಬಿಜೆಪಿಯಲ್ಲಿದ್ದವರು ನಮ್ಮ ಜೊತೆ ಸೇರಿಕೊಳ್ಳುತ್ತಿರುವುದು ಉತ್ತಮ ವಿಚಾರವಾಗಿದೆ. ನನ್ನ ಹುಟ್ಟೂರ ಗ್ರಾಪಂ ನಲ್ಲಿ ಬಿಜೆಪಿ ಆಡಳಿತವಿತ್ತು ಅದನ್ನು ಬದಲಾವಣೆ ಮಾಡಲಾಗಿದೆ. ಗ್ರಾಪಂ ಸದಸ್ಯರು ಸೇರಿದಂತೆ ಅನೇಕ ಮಂದಿ ಇತರೆ ಪಕ್ಷದ ಸದಸ್ಯರು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದಾರೆ,ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಂದಿ ಪಕ್ಷವನ್ನು ಸೇರಿಕೊಳ್ಳಲಿದ್ದಾರೆ.


ನೂತನ ಆಡಳಿತ ಇತಿಹಾಸವನ್ನು ನಿರ್ಮಿಸಬೇಕು

ನೂತನವಾಗಿ ಅಧಿಕಾರಕ್ಕೆ ಬಂದ ಆಡಳಿತ ಇತಿಹಾಸವನ್ನು ನಿರ್ಮಿಸಬೇಕು. ಈ ಹಿಂದಿನ ಆಡಳಿತದಿಂದ ಬೇಸತ್ತ ಜನ ಬದಲಾವಣೆ ಬಯಸಿದ್ದರು ಈ ಕಾರಣಕ್ಕೆ ಹಿಂದಿನ ಮಾದರಿಯಲ್ಲಿ ಆಡಳಿತ ನಡೆಸಬಾರದು ಗ್ರಾಮದ ಪ್ರತೀಯೊಬ್ಬ ಪ್ರಜೆಗೂ ಪಂಚಾಯತ್ ಆಡಳಿತದ ಬಗ್ಗೆ ಉತ್ತಮ ಭಾವನೆ ಬರುವ ರೀತಿಯಲ್ಲಿ ಕೆಲಸ ಮಾಡಬೇಕು. ಗ್ರಾಮದಲ್ಲಿ ಬಡವರಿಗೆ ಮನೆ ನಿರ್ಮಾಣಕ್ಕೆ ಸೈಟ್ ಮಾಡಿಕೊಡಬೇಕು. ಗ್ರಾಮದಲ್ಲಿ ಯಾರಿಗೂ ಮನೆ ಇಲ್ಲ, ಕುಡಿಯುವ ನೀರಿಲ್ಲ, ವಾಸಕ್ಕೆ ಮನೆ ಇಲ್ಲ ಎಂಬ ದೂರು ಬರಲೇಬಾರದು ಎಲ್ಲರಿಗೂ ಮೂಲಭೂತ ವ್ಯವಸ್ಥೆಯನ್ನು ಕಲ್ಪಿಸಬೇಕು. ಅಧಿಕಾರಗಳು ಹೇಳಿದ್ದನ್ನೇ ಕೇಳುವುದಲ್ಲ ಸರಕಾರದ ಸುತ್ತೋಲೆ ಯನ್ನು ನಾವು ಅಧ್ಯಯನ ನಡೆಸಬೇಕು, ಬಡವರಿಗೆ ನೆರವಾಗುವ ಯೋಜನೆಗಳನ್ನು ಗ್ರಾಪಂ ಜಾರಿಗೆ ತರಬೇಕು ಎಂದು ಹೇಳಿದರು. ಬಡವರ ಕೆಲಸವನ್ನು ಚಾಚೂ ತಪ್ಪದೆ ಮಾಡಬೇಕು, ಭೃಷ್ಟಾಚಾರ ಮುಕ್ತ ಆಡಳಿತ ನಡೆಸುವ ಮೂಲಕ ನಾವು ನೊಂದವರ ಕಣ್ಣೀರೊರೆಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.


ಡಿಜಿಟಲ್ ಪಂಚಾಯತ್ ಮಾಡುವ ಕನಸು ಇದೆ ಗ್ರಾಮಸ್ಥರ ಸಹಕಾರ ಬೇಕು: ಜಯಪ್ರಕಾಶ್ ಬದಿನಾರ್

ನೂತನವಾಗಿ ಅಧಿಕಾರ ಸ್ವೀಕರಿಸಿದ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ರವರು ಮಾತನಾಡಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಗ್ರಾಪಂ ಆಡಳಿತದಲ್ಲಿ ಯಾವುದೇ ತಾರತಮ್ಯವಿಲ್ಲದೆ ಎಲ್ಲರನ್ನೂ ಸಮಾನ ರೀತಿಯಲ್ಲಿ ನೋಡಿಕೊಳ್ಳುತ್ತೇವೆ, ಪಂಚಾಯತ್‌ನ ಎಲ್ಲಾ ಸದಸ್ಯರನ್ನು ವಿಸ್ವಾಸಕ್ಕೆ ತೆಗೆದುಕೊಂಡು ನಾವು ಮುಂದಕ್ಕೆ ಕೆಲಸ ಮಾಡಲಿದ್ದೇವೆ. ಶಾಸಕರ ನಿರ್ದೇಶನದಂತೆ ಭೃಷ್ಟಾಚಾರ ರಹಿತ ಆಡಳಿತವನ್ನು ನೀಡಲಿದ್ದು ಗ್ರಾಪಂ ನ್ನು ಡಿಜಿಟಲ್ ಪಂಚಾಯತನ್ನಾಗಿ ಪರಿವರ್ತನೆ ಮಾಡುತ್ತೇವೆ ಎಲ್ಲದಕ್ಕೂ ಗ್ರಾಮಸ್ಥರ ಮತ್ತು ಗ್ರಾಪಂ ಸದಸ್ಯರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.

ಗ್ರಾಮದಲ್ಲಿ ಮೂಲಬೂತ ಸೌಕರ್ಯಕ್ಕೆ ಮೊದಲ ಅಧ್ಯತೆಯನ್ನು ನೀಡಲಿದ್ದೇವೆ, ಕುಡಿಯುವ ನೀರು, ರಸ್ತೆ ಮತ್ತು ನಿವೇಶನ ರಹಿತರಿಗೆ ನಿವೇಶನವನ್ನು ನೀಡುವ ಯೋಜನೆ ನಮ್ಮ ಮುಂದೆ ಇದ್ದು ಇದಕ್ಕಾಗಿ ಶಾಸಕರ ನೆರವನ್ನು ನಾವು ಪಡೆಯಲಿದ್ದೇವೆ. ಅನೇಕ ವರ್ಷಗಳಿಂದ ಪೆಂಡಿಂಗ್ ಇರುವ ನಿವೇಶನ ಹಂಚಿಕೆಯನ್ನು ಈ ಬಾರಿ ಮಾಡಲಿದ್ದೇವೆರ, ಗ್ರಾಮದಲ್ಲಿ ಸೂರಿಲ್ಲದವರಿಗೆ ಸೂರು ಕಲ್ಪಿಸುವ ಯೋಚನೆಯೂ ನಮ್ಮ ಮುಂದಿದ್ದು ಕೋಡಿಂಬಾಡಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ರೂಪಿಸಲಿದ್ದೇವೆ ಎಂದು ಹೇಳಿದರು.


ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ; ಮಲ್ಲಿಕಾ ಅಶೋಕ್ ಪುಜಾರಿ

ಅಧಿಕಾರ ಸ್ವೀಕರಿಸಿದ ನೂತನ ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ಮಾತನಾಡಿ ನಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ, ಗ್ರಾಪಂ ನ ಎಲ್ಲಾ ಸದಸ್ಯರು, ಪಕ್ಷದ ಮುಖಂಡರು , ಶಾಸಕರ ಮಾರ್ಗದರ್ಶನದಂತೆ ಕೆಲಸವನ್ನು ಮಾಡಲಿದ್ದು ಪಂಚಾಯತ್‌ನಲ್ಲಿ ಬಾಕಿ ಇರುವ ಮತ್ತು ಆಗಬೇಕಾದ ಅಭಿವೃದ್ದಿ ಕೆಲಸಗಳನ್ನು ಎಲ್ಲರ ಸಹಕಾರದಿಂದ ಮಾಡಲಿದ್ದೇವೆ ಎಂದು ಹೇಳಿದರು. ಕಳೆದ ಹಲವು ವರ್ಷಗಳಿಂದ ಅನೇಕ ಕೆಲಸಗಳು ನೆನೆಗುದಿಗೆ ಬಿದ್ದಿದೆ ಅವುಗಳಿಗೆ ವೇಗವನ್ನು ನೀಡುವ ಕೆಲಸವನ್ನು ಮಾಡಲಿದ್ದೇವೆ ಎಂದು ಹೇಳಿದರು.


ಕೈವಶ ಮಾಡಿಕೊಂಡಿದ್ದೇವೆ: ಮುರಳೀಧರ್ ರೈ

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮುರಳೀದರ್ ರೈ ಮಠಂತಬೆಟ್ಟು ಮಾತನಾಡಿ ಬಿಜೆಪಿಯ ವಶದಲ್ಲಿದ್ದ ಕೋಡಿಂಬಡಿ ಗ್ರಾಪಂ ನ್ನು ಈ ಬಾರಿ ಕೈ ವಶ ಮಾಡಿಕೊಂಡಿದ್ದೇವೆ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ವ್ಯಾಪ್ತಿಯಲ್ಲಿ ಬಿಜೆಪಿ ತೆಕ್ಕೆಯಲ್ಲಿದ್ದ ನಾಲ್ಕು ಪಂಛಾಯತ್ ಕಾಂಗ್ರೆಸ್ ವಶ ಮಾಡಿಕೊಂಡಿದ್ದೇವೆ. ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆ ಮತ್ತು ಸುಭದ್ರ ಆಳಿತವನ್ನು ಮೆಚ್ಚಿ ನಮ್ಮ ಜೊತೆ ಗ್ರಾಪಂ ಸದಸ್ಯರುಗಳು ಕೈ ಜೋಡಿಸುತ್ತಿದ್ದಾರೆ, ಶಶಕರ ನೆರವಿನಿಂದ ನಾವು ನಾಲ್ಕು ಪಂಚಾಯತ್‌ಗಳಲ್ಲಿ ಅಧಿಕಾರ ಪಡೆದುಕೊಂಡಿದ್ದೇವೆ. ಉತ್ತಮ ಆಡಳಿತ ನೀಡುವ ಮೂಲಕ ಗ್ರಾಮದ ಬಡವರ ಸೇವೆಯೊಂದೇ ನಮ್ಮ ಉದ್ದೇಶವಾಗಿದೆ ವಿನಾ ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಕಾಂಗ್ರೆಸ್ ಪಂಚಾಯತ್ ಬರಬೇಕೆಂಬುದು ಗ್ರಾಮಸ್ಥರ ಆಶಯವಾಗಿತ್ತು ಅದರಂತೆ ನಾವು ಕೆಲಸವನ್ನು ಮಾಡಲಿದ್ದೇವೆ ಎಂದು ಹೇಳಿದರು.


ಉತ್ತಮ ಆಡಳಿತ ನೀಡಲಿದ್ದೇವೆ: ಡಾ. ರಾಜಾರಾಂ ಕೆ ಬಿ

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ ಮಾತನಾಡಿ ಅಧಿಕಾರಕ್ಕೆ ಬಂದ ನೂತನ ಅಧ್ಯಕ್ಷ ಉಪಾಧ್ಯಕ್ಷರು ಗ್ರಾಮದ ಜನತೆಗೆ ಉತ್ತಮ ಆಡಳಿತವನ್ನು ನೀಡಲಿದ್ದಾರೆ. ಶಸಕರ ತವರು ಗ್ರಾಮವಾದ ಕಾರಣ ಜನರ ನೋಟ ಕೋಡಿಂಬಾಡಿಯತ್ತ ಇರುತ್ತದೆ ಈ ಕಾರಣಕ್ಕೆ ನಮ್ಮ ಗ್ರಾಪಂ ಎಲ್ಲರಿಗೂ ಮಾದರಿಯಾಗಿ ಕೆಲಸವನ್ನು ಮಾಡಬೇಕಿದೆ. ಬಡವರ ಕೆಲಸಗಳು ಸುಸೂತ್ರವಾಗಿ ನಡೆಯಬೇಕು, ಗ್ರಾಮದ ಪ್ರತೀಯೊಬ್ಬ ಪ್ರಜೆಗೂ ಸಂತಸವನ್ನು ನೀಡುವ ಆಡಳಿತ ನಮ್ಮದಾಗಬೇಕು ಎಂಬ ಭಾವನೆ ಪ್ರತೀಯೊಬ್ಬ ಗ್ರಾಪಂ ಸದಸ್ಯರಲ್ಲಿ ಇರಬೇಕು, ಜನರ ಸೇವೆಯನ್ನೇ ಗುರಿಯಗಿಟ್ಟು ಎಲ್ಲರೂ ಒಟ್ಟಾಗಿ ಪಕ್ಷ ಬೇದವಿಲ್ಲದೆ ಕೆಲಸ ಮಾಡಿದರೆ ಗ್ರಾಪಂ ಆಡಳಿತ ಉತ್ತಮವಾಗಿರಲು ಸಾಧ್ಯ ಎಂದು ಹೇಳಿದರು.

ವೇದಿಕೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಗ್ರಾಪಂ ಪಿಡಿಒ ರೀಹಿತ್, ಗ್ರಾಪಂ ಸದಸ್ಯರುಗಳಾದ ಜಗನ್ನಾಥ ಶೆಟ್ಟಿ ನಡುಮನೆ,  ಪೂರ್ಣಿಮಾ ಯತೀಶ್ ಶೆಟ್ಟಿ , ಗೀತಾ ಉಪಸ್ಥಿತರಿದ್ದರು. ಸಭೆಯಲ್ಲಿ ಜಿಪಂ ಮಾಜಿ ಸದಸ್ಯ ಎಂ ಎಸ್ ಮಹಮ್ಮದ್ ಕಾಂಗ್ರೆಸ್ ಮುಖಂಡರುಗಳಾದ ಕ್ಲೆಮಿನ್ ಮಸ್ಕರೇನಸ್, ಪ್ರವೀಣ್ ಚಂದ್ರ ಆಳ್ವ, ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಉಲ್ಲಾಸ್ ಕೋಟ್ಯಾನ್, ರಾಜಶೇಖರ ಜೈನ್, ಬನ್ನೂರು ಸೊಸೈಟಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರಭಟ್, ಜಾನ್ ಕೆನೋಟ್, ಕೇಶವ ಭಂಡಾರಿ, ಸೀತಾರಾಮ ಶೆಟ್ಟಿ, ಶಿವಪ್ರಸಾದ್, ಉದ್ಯಮಿ ಸುದೇಶ್ ಶೆಟ್ಟಿ ಶಾಂತಿನಗರ, ಯೋಗೀಶ್ ಸಾಮಾನಿ, ಪ್ರೇಮಲತಾ, ವಿನುತಾ, ರೇಣುಖಾ, ಅಲ್ಪಸಂಖ್ಯಾತ ಜಿಲ್ಲಾ ಘಟಕದ ಮುಖಂಡರಾದ ನಝೀತ್ ಮಠ, ಅಬ್ದುಲ್ ರಹಿಮಾನ್ ಯೂನಿಕ್, , ಡಿಸಿಸಿ ಸದಸ್ಯೆ ಅಸ್ಮಾ ಗಟ್ಟಮನೆ, ವಿಜಯಲಕ್ಷ್ಮಿ, ಸುಬ್ಬಣ್ಣ ಶೆಟ್ಟಿ, ಪದ್ಮನಾಭ ಶೆಟ್ಟಿ, ಪ್ರಭಾಕರ ಸಾಮಾನಿ, ಸಿಲ್ವೆಸ್ಟರ್, ಪ್ರಕಾಶ್ ಗೌಡ ನೆಕ್ಕಿಲಾಡಿ, ಆಶಾ ಕಾರ್ಯಕರ್ತೆಯವರು, ಅಂಗನವಾಡಿ ಕಾರ್ಯಕತೆಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ವಲಯಾಧ್ಯಕ್ಷರಾದ ಮೋನಪ್ಪ ಗೌಡ ಸ್ವಾಗತಿಸಿದರು.ನಿರಂಜನ್ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ಉಪಾಧ್ಯಕ್ಷರ ಪರಿಚಯ

ನೂತನವಾಗಿ ಅದಿಕಾರ ಸ್ವೀಕರಿಸಿದ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್‌ರವರು ಪುತ್ತೂರು ವಿಧಾನಸಭಾ ಕ್ಷೇತ್ರ ಇಂಟಕ್ ಅಧ್ಯಕ್ಷರಾಗಿ, ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷರಾಗಿ, ಕೋಡಿಂಬಾಡಿ ಸಾರ್ವಜನಿಕ ಗಣೇಶೋತ್ಸವ ಉಪಾಧ್ಯಕ್ಷರಾಗಿ ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾಗಿ, ಕಾಸರಗೋಡು ಚಿಪ್ಪಾರು ಕೋಟಿಚೆನ್ನಯ ಗರಡಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ತನ್ನನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

ಶಾಸಕ ಸಮ್ಮುಖದಲ್ಲೇ ಅಧಿಕಾರ ಸ್ವೀಕಾರ

ಶಸಕರಾದ ಅಶೋಕ್ ರೈಯವರನ್ನು ಕೊಠಡಿಗೆ ಕರೆಸಿಕೊಂಡ ನೂತನ ಅಧ್ಯಕ್ಷ ಉಪಾಧ್ಯಕ್ಷರು ಶಾಸಕರ ಸಮ್ಮುಖದಲ್ಲೇ ಅಧಿಕಾರ ಸ್ವೀಕಾರ ಮಾಡಿದರು. ಶಾಸಕರು ನೂತನ ಸಾರಥಿಗಳಿಗೆ ಹಾರಾರ್ಪಣೆ ಮಾಡಿ ಗೌರವಿಸಿದರು. ಗ್ರಾಪಂ ಸಿಬಂದಿಗಳು ಮತ್ತು ನೂತನ ಆಡಳಿತ ಸಮಿತಿ ಪರವಾಗಿ ಶಾಕರನ್ನು ಶಾಲು ಹಾಕಿ ಪೇಟ ತೊಡಿಸಿ ಸನ್ಮಾನಿಸಿದರು.


ಪಟಾಕಿ ಸಿಡಿಸಿ ಸಂಭ್ರಮ

ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮವನ್ನು ವ್ಯ್ಕತಪಡಿಸಿದರು. ಸುಮಾರು ೧೦ ವರ್ಷಗಳ ಬಳಿಕ ಕೋಡಿಂಬಾಡಿ ಗ್ರಾಪಂ ನಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕಾರಕ್ಕೆ ಬಂದಿದ್ದು ಕಾರ್ಯಕರ್ತರ ಸಂತೋಷಕ್ಕೆ ಪಾರವೇ ಇರಲಿಲ್ಲ.



Leave a Comment: