Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21
ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.
ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.
ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.
ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.
Posted by Vidyamaana on 2024-07-20 07:09:13 |
ಹರ್ಯಾಣ: ಹಣಕಾಸಿನ ಸಮಸ್ಯೆಯಿಂದ ನೊಂದ 19 ವರ್ಷದ ವಿದ್ಯಾರ್ಥಿಯೊಬ್ಬ ಎತ್ತರದ ನೀರಿನ ಟ್ಯಾಂಕ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯ ವೀಡಿಯೊ ವೈರಲ್ ಆಗಿದೆ.
ಘಟನೆ ಹರ್ಯಾಣದ ಖರಾರ್ ನ ಖಾನ್ಪುರ್ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಈ ಭಯಾನಕ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Posted by Vidyamaana on 2024-07-06 21:12:31 |
ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು ತೆರೆಯಲಾಗಿದೆ. ಆಧಾರ್ಬಕಾರ್ಡು ಮಾಡಿಸಲು ಬೆಳಿಗ್ಗೆ 5 ಗಂಟೆಗೆ ಎದ್ದು ಅಂಚೆ ಕಚೇರಿ ಮುಂದೆ ಇನ್ನು ಕ್ಯೂ ನಿಲ್ಲುವ ಅಗತ್ಯವಿಲ್ಲ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.
ಪುತ್ತೂರು ತಾಲೂಕು ಕಚೇರಿಯಲ್ಲಿ ನೂತನ ಆಧಾರ್ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನೂತನ ಕೇಂದ್ರದಲ್ಲಿ 18 ವರ್ಷ ಪ್ರಾಯದವರೆಗಿನ ಮಕ್ಕಳಿಗೆ ಹೊಸ ಆಧಾರ್ ,18 ರ ನಂತರದವರ ಆದಾರ್ ತಿದ್ದುಪಡಿ. ನಂಬರ್
Posted by Vidyamaana on 2023-04-26 03:18:31 |
ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಪ್ರಚಾರ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಗ್ರಾಮಾಂತರ ಭಾಗಗಳಲ್ಲಿ ಪ್ರಚಾರ ಸಭೆಗಳನ್ನು ಆಯೋಜಿಸಲಾಗುತ್ತಿದೆ.
ಅಶೋಕ್ ಕುಮಾರ್ ರೈ ಅವರ ಇಂದಿನ ಪ್ರಚಾರ ಸಭೆಗಳು ಹೀಗಿವೆ -
ಬೆಳಿಗ್ಗೆ 9.30ಕ್ಕೆ ಅರಿಯಡ್ಕ, 10.30ಕ್ಕೆ ಮಾಡ್ನೂರು, 11.30ಕ್ಕೆ ಕೊಳ್ತಿಗೆ, ಮಧ್ಯಾಹ್ನ 2.30ಕ್ಕೆ ನೆಟ್ಟಣಿಗೆ ಮುಡ್ನೂರು, 3.30ಕ್ಕೆ ಪಡುವನ್ನೂರು, 4.30ಕ್ಕೆ ಬಡಗನ್ನೂರು, ಸಂಜೆ 6ಕ್ಕೆ ಬೆಟ್ಟಂಪಾಡಿ, 7 ಗಂಟೆಗೆ ನಗರದಲ್ಲಿ ಪ್ರಚಾರ ಸಭೆಗಳು ನಡೆಯಲಿವೆ ಎಂದು ತಿಳಿದುಬಂದಿದೆ.
Posted by Vidyamaana on 2024-06-27 19:16:25 |
ಮಂಗಳೂರು; ಜೂ.27: ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.28) ಶುಕ್ರವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
Posted by Vidyamaana on 2023-04-27 06:16:08 |
ಪುತ್ತೂರು :ವಿಧಾನ ಸಭಾ ಕ್ಷೇತ್ರದಲ್ಲಿ ಇವತ್ತು ಅತ್ಯಂತ ಹೆಚ್ಚು ಚರ್ಚೆಯಲ್ಲಿರುವ ವಿಷಯವೇನೆಂದರೆ ಅರುಣ್ ಕುಮಾರ್ ಪುತ್ತಿಲ ರವರಿಗೆ ಬಿಜೆಪಿಯಿಂದ ಶಾಸಕ ಸ್ಥಾನಕ್ಕೆ ಸ್ಪರ್ಧೆ ಮಾಡಲು ಯಾಕೆ ಟಿಕೆಟ್ ನೀಡಿಲ್ಲ ಎಂಬುದು ಯುವ ಕಾರ್ಯಕರ್ತರಿಗೆ ತಿಳಿಯದೇ ಇರುವ ಸಂಗತಿಗಳು ಹಲವಾರು ಇವೆ. ಪುತ್ತೂರು ಬಿಜೆಪಿಯ ಕಛೇರಿಗೇ ಬಾರದೇ, ಬಿಜೆಪಿಯ ಮುಖಂಡರನ್ನು ಸಂಪರ್ಕಿಸದೇ ತನಗೆ ಶಾಸಕ ಸ್ಥಾನದ ಟಿಕೆಟ್ ನೀಡಬೇಕೆಂದು ಆಗ್ರಹಿಸುವುದು ಹಾಸ್ಯಾಸ್ಪದ ಎಂದು ಪತ್ರಿಕಾಗೋಷ್ಠಿಯಲ್ಲಿ ಡಾ.ಎಂ.ಕೆ. ಪ್ರಸಾದ್ ರವರು ಹೇಳಿದರು.
ಅರುಣ್ ಕುಮಾರ್ ಪುತ್ತಿಲ ರವರು ಈ ಹಿಂದೆ ಭಜರಂಗದಳದ ಜಿಲ್ಲಾ ಸಂಚಾಲಕರಾಗಿದ್ದರು. ಅವರ ನಡವಳಿಕೆಯಿಂದಾಗಿ ಅವರಾಗಿಯೇ ಪರಿವಾರ ಸಂಘಟನೆಯಿಂದ ಹೊರ ನಡೆದರು. ನಂತರ ಪ್ರಮೋದ್ ಮುತಾಲಿಕರೊಂದಿಗೆ ಕೈಜೋಡಿಸಿ ಶ್ರೀರಾಮಸೇನೆಯ ಸಂಚಾಲಕರಾದರು. ಯಾವಾಗ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ವೃದ್ಧಿಯಾಯಿತೋ, ಪುತ್ತಿಲರು ಶ್ರೀರಾಮ ಸೇನೆಯಿಂದ ಹೊರ ಬಂದರು. ತನ್ನದೇ ಹಿಂದೂ ಸೇನೆ ರಚಿಸಿ ಅದನ್ನೂ ಸಹ ಅರ್ಧದಲ್ಲೇ ಕೈ ಬಿಟ್ಟರು.2013ರಲ್ಲಿ ಸಂಘ ಪರಿವಾರದ ಹಿರಿಯರು ಬಿಜೆಪಿಯಲ್ಲಿ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಹೇಳಿದಾಗ ತನಗೆ ಅಧ್ಯಕ್ಷ ಸ್ಥಾನವನ್ನೇ ಕೊಡಬೇಕೆಂದು ಹಠ ಹಿಡಿದ ಕಾರಣದಿಂದ, ಬಿಜೆಪಿಯಲ್ಲಿ ಕೆಲಸ ಮಾಡುವ ಅವಕಾಶವನ್ನು ತಾನಾಗಿಯೇ ಕೈ ಚೆಲ್ಲಿದರು. ಸಂಘದ ಹಿರಿಯರು ಬಿಜೆಪಿಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸೂಚಿಸಿದರೂ ಪಕ್ಷಕ್ಕೆ ಬರಲಿಲ್ಲ. ನಂತರ ಕೂಡಾ ಸಂಘ ಪರಿವಾರದ ಹಿರಿಯರು ಪುತ್ತಿಲರನ್ನು ಕಡೆಗಣಿಸದೇ, ಸಂಘಟನೆಯಲ್ಲಿ ಕೆಲಸ ಮಾಡುವ ಸಲುವಾಗಿ ನಮೋ ಬ್ರಿಗೇಡ್ನ ನೇತೃತ್ವವನ್ನು ನೀಡಿದರು.
2008ರ ವಿಧಾನ ಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿ ಶಕುಂತಳಾ ಶೆಟ್ಟಿಯವರೊಂದಿಗೆ ಕೆಲಸ ಮಾಡಿ, ಬಿಜೆಪಿಗೆ ವಿರುದ್ಧವಾಗಿ ನಡೆದರು. ನಂತರದ ಚುನಾವಣೆಗಳಾದ 2013, 2018ರ ಚುನಾವಣೆಗಳಲ್ಲಿಯೂ ಪುತ್ತಿಲರವರು ಪಕ್ಷದ ವಿರುದ್ಧ ಬಂಡಾಯವೆದ್ದು, ತಾನು ಮತ್ತು ತನ್ನ ಬಳಗ ಕಾಂಗ್ರೆಸ್ನೊಂದಿಗೆ ಕೈ ಜೋಡಿಸಿ ಬಿಜೆಪಿಗೆ ವಿರುದ್ಧವಾಗಿ ಕೆಲಸ ಮಾಡಿ ಬಿಜೆಪಿಯನ್ನು ಸೋಲಿಸಲು ಪ್ರಯತ್ನ ಮಾಡಿದ್ದಾರೆ. ಹಿಂದೆ ಅವರ ವಿರುದ್ಧ ಹಲವಾರು ಆಪಾದನೆಗಳು ಕೇಳಿ ಬಂದಿವೆ. ಶನಿ ಪೂಜೆಯ ಸಂದರ್ಭದಲ್ಲಿ ಪೊಲೀಸರು ಮೆರವಣಿಗೆಗೆ ಅನುಮತಿ ನಿರಾಕರಿಸಿದ ಸಮಯದಲ್ಲಿ, ಅನುಮತಿ ಇಲ್ಲದೇ ಮೆರವಣಿಗೆ ಮಾಡುವ ಪ್ರಯತ್ನ ಮಾಡಿ ಸಾಕಷ್ಟು ಕಾರ್ಯಕರ್ತರು ತೊಂದರೆಗೊಳಗಾಗಿರುವುದು ಎಲ್ಲರಿಗೂ ತಿಳಿದ ವಿಚಾರ.., ಕುಕ್ಕಿನಡ್ಕ ದೇವಸ್ಥಾನದ ಬ್ರಹ್ಮಕಲಶದ ಸಮಯದಲ್ಲಿ, ಸಂಪ್ಯ ಶ್ರೀ ವಿಷ್ಣುಮೂರ್ತಿ ಒತ್ತೆಕೋಲ ಮುಂತಾದ ಸಂದರ್ಭಗಳಲ್ಲಿ ಅವರ ವಿರುದ್ಧ ಹಣಕಾಸಿನ ವಿಚಾರವಾಗಿ ಆಪಾದನೆಗಳು ಕೇಳಿ ಬಂದಿರುತ್ತದೆ.
ಮುಂಡೂರು ಮೃತ್ಯುಂಜಯೇಶ್ವರ ದೇವಾಲಯದಲ್ಲಿನ ಕಾಣಿಕೆ ಡಬ್ಬಿಯ ವಿಚಾರವಾಗಿ ಅವರ ವಿರುದ್ಧ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ರಿ ಪ್ರಕರಣ ಈಗಲೂ ಇದೆ. ಧಾರ್ಮಿಕ ಕೇಂದ್ರವಾದ ದೇವಸ್ಥಾನದಲ್ಲಿಯೇ ಹಿಂದೂ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣವೂ ಅವರ ವಿರುದ್ದ ಇದೆ.
ಮೃತ್ಯುಂಜಯೇಶ್ವರ ದೇವಾಲಯದಲ್ಲಿ ನಾಗನ ಕಟ್ಟೆಯನ್ನು ಕಟ್ಟುವಾಗ ಆ ಕೆಲಸ ಆಗದಂತೆ ಅದರ ವಿರುದ್ಧ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದು, ಅಭಿವೃದ್ಧಿ ಕಾರ್ಯಗಳಿಗೆ ತೊಡಕುಂಟು ಮಾಡಿದ್ದಾಗಿದೆ. ಈ ರೀತಿಯಲ್ಲಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹಲವಾರು ಆಪಾದನೆಗಳು ಪುತ್ತಿಲರ ವಿರುದ್ದ ಇದೆ.
ಓರ್ವ ವ್ಯಕ್ತಿ ಶಾಸಕನಾಗಬೇಕಾದರೆ ಆತ ಶಾಂತ ಸ್ವಭಾವವನ್ನು ಹೊಂದಿರಬೇಕು. ಸಾರ್ವಜನಿಕರ ಕಷ್ಟ ಸುಖಗಳಲ್ಲಿ ಸ್ಪಂದಿಸಬೇಕು. ಪಕ್ಷದಲ್ಲಿ ಜವಾಬ್ದಾರಿಯನ್ನು ನಿರ್ವಹಿಸಿರಬೇಕು. ಪುತ್ತೂರು ಬಿಜೆಪಿಯಲ್ಲಿ ಪರಿವಾರ ಸಂಘಟನೆಯ ಹಿರಿಯರು ಸೂಚಿಸಿದಾಗಲೂ ಯಾವುದೇ ಜವಾಬ್ದಾರಿ ಅಥವಾ ಹುದ್ದೆ ಸ್ವೀಕರಿಸಲು ನಿರಾಕರಿಸಿ, ತನ್ನದೇ ಆದ ಸಂಘಟನೆ ಮಾಡಿಕೊಂಡು, ಬಿಜೆಪಿಯ ವಿರುದ್ಧವೇ ಹೋರಾಟ ಮಾಡಿಕೊಂಡು, ಬಿಜೆಪಿಯ, ಸಂಘ ಪರಿವಾರದ ಹಿರಿಯರ ವಿರುದ್ಧ ಕೆಟ್ಟದಾಗಿ ಮಾತಾಡಿಕೊಂಡು, ಮುಖ್ಯವಾಹಿನಿಗೆ ಸೇರಿಕೊಳ್ಳದೇ, ತನಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ನೀಡಬೇಕೆಂದು.., ಕೇಳುವುದು ಎಷ್ಟು ಸರಿ ಎಂಬುದನ್ನು ನಾವೆಲ್ಲ ಅರ್ಥ್ಯೈಸಿಕೊಳ್ಳಬೇಕಾಗಿದೆ ಎಂದು ಖ್ಯಾತ ವೈದರಾದ ಡಾ. ಎಂ.ಕೆ. ಪ್ರಸಾದ್ ರವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಸಹಜ್ ರೈ ಬಳ್ಳಜ್ಜ, ರಾಜೇಶ್ ಬನ್ನೂರು, ಚಂದ್ರಶೇಖರ್ ರಾವ್ ಬಪ್ಪಳಿಗೆ, ಶಂಭು ಭಟ್ ಉಪಸ್ಥಿತರಿದ್ದರು.
Posted by Vidyamaana on 2024-05-11 10:16:42 |
ಮೈಸೂರು:ಮೈಸೂರಿನ ಕೆ.ಆರ್.ನಗರದ ವೃದ್ಧೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ ಪ್ರಕರಣ ದಾಖಲಾಗಿದೆ.
ಮೈಸೂರಿನ ಹುಣಸೂರು ತಾಲೂಕಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಯುವತಿಯ ಅಪಹರಣಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ ರೇವಣ್ಣ ಅವರ ತಂದೆ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಈಗಾಗಲೇ ಬಂಧಿಸಲಾಗಿದೆ.