ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು

Posted by Vidyamaana on 2023-06-11 01:09:46 |

Share: | | | | |


ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ  ಬಿದ್ದ ಕಾರು

ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಎರ್ಟಿಗಾ ಕಾರು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ರಸ್ತೆ ಬದಿಯ ಹೊಳೆಗೆ ಉರುಳಿ ಬಿದ್ದ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ.

ಮೃತಪಟ್ಟವರನ್ನು ತಮಿಳುನಾಡಿನ ಹೊಸೂರು ಮೂಲದ ಹರಿಪ್ರಸಾದ್ (50) ಎಂದು ಗುರುತಿಸಲಾಗಿದ್ದು, ಗೋಪಿ (48) ಎಂಬವರು ಗಾಯಗೊಂಡವರು.


ಗಾಯಾಳುವನ್ನು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ದಾಖಲಿಸಲಾಗಿದೆ. ಕಾರು ನೀರಿನಲ್ಲಿ ಮುಳುಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಯಿಂದ ಪ್ರತಿಭಟನೆ

Posted by Vidyamaana on 2023-09-13 20:30:37 |

Share: | | | | |


ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಯಿಂದ  ಪ್ರತಿಭಟನೆ

ಪುತ್ತೂರು: ರಾಷ್ಟ್ರೀಯ ವಿಚಾರಧಾರೆಗಳಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ.  ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಿರ್ಲಕ್ಷಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಡಾ. ನವೀನ್ ಹೇಳಿದರು.


ಪುತ್ತೂರು ಅಮರ ಜವಾನ್ ಸ್ಮಾರಕದ ಬಳಿ ಬುಧವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.


ಕೃಷಿ ಹಾಗೂ ಕೃಷಿ ಕ್ಷೇತ್ರಕ್ಕೆ 1.50 ಲಕ್ಷ ಕೋಟಿ ರೂಪಾಯಿಯನ್ನು ಬಿಜೆಪಿ ಸರ್ಕಾರ ನೀಡಿದೆ. ಇಂತಹ ಕೊಡುಗೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನೀಡಿಲ್ಲ. ಎಲ್ಲಾ ರೀತಿಯಲ್ಲೂ ರೈತರನ್ನು ವಿರೋಧಿಸುವ ಕಾರ್ಯವನ್ನೇ ಮಾಡುತ್ತಿದ್ದು, ಬರವನ್ನು ನಿಭಾಯಿಸುವ ಸಾಮಾನ್ಯ ಜ್ಞಾನವೂ ಇಲ್ಲದಂತಾಗಿದೆ ಎಂದು ಕುಟುಕಿದರು.


ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು, ರೈತ ವಿರೋಧಿ ನೀತಿಯನ್ನು ಜನಸಾಮಾನ್ಯರಿಗೆ ತಿಳಿಸುವ ಕಾರ್ಯವನ್ನು ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ 312 ತಾಲೂಕುಗಳಲ್ಲಿ ಹೋರಾಟ ನಡೆಸಲಾಗುತ್ತಿದೆ ಎಂದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ರಾಜ್ಯದ ಸುಮಾರು 190 ತಾಲೂಕುಗಳು ಬರಪೀಡಿತವಾಗಿದೆ. ಬರ ಪೀಡಿತ ಪ್ರದೇಶಗಳ ಅಧ್ಯಯನವನ್ನು ಮಾಡಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಿಂದ ಹೊರ ಬರುತ್ತಿಲ್ಲ. ತನ್ನ ಹುದ್ದೆಯ ನಾಲ್ಕು ಕಾಲುಗಳು ಯಾವಾಗ ಅಲುಗಾಡುತ್ತದೋ ಎಂದು ತಿಳಿಯದೆ, ಮುಖ್ಯಮಂತ್ರಿಗಳು ಕುರ್ಚಿ ಬಿಟ್ಟು ಏಳುತ್ತಿಲ್ಲ ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದ ಬಳಿಕ ಇದುವರೆಗೆ ದಿನಕ್ಕೆ ಇಬ್ಬರಂತೆ 170 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಗಂಭೀರ ವಿಚಾರವನ್ನು ಸರ್ಕಾರ ಗಣನೆಗೇ ತೆಗೆದುಕೊಂಡಿರದೇ ಇರುವುದು ವಿಪರ್ಯಾಸ. ವಿದ್ಯುತ್ ಖರೀದಿಯಿಂದ ರಾಜ್ಯ ಸರ್ಕಾರದ ಭ್ರಷ್ಟಾಚಾರ ಪ್ರಾರಂಭವಾಗಿದೆ. ರೈತರ ಕೃಷಿ ಸಾಲಗಳ ಬಗ್ಗೆ ಮಾಡಿದ ಘೋಷಣೆ ಇನ್ನೂ ಜಾರಿಯಾಗಿಲ್ಲ. ಕರ್ನಾಟಕ ಜನರನ್ನು ಕತ್ತಲೆಯಲ್ಲಿ ಹಾಕಿದ ಕಾಂಗ್ರೆಸ್ ಗೆ ಜನ ಹಿಡಿ ಶಾಪ ಹಾಕುತ್ತಿದ್ದಾರೆ. ಜನರಿಗೂ ಈಗ ಮನವರಿಕೆ ಆಗುತ್ತಿದೆ – ಕಾಂಗ್ರೆಸ್ ಅಂದರೆ ಬರ, ಬಿಜೆಪಿ ಅಂದರೆ ಸಮೃದ್ಧಿ ಎಂದು ಹೇಳಿದರು.


ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಮುಖಂಡರಾದ ಆಶಾ ತಿಮ್ಮಪ್ಪ ಗೌಡ, ಪಿ.ಜಿ. ಜಗನ್ನಿವಾಸ ರಾವ್, ಚನಿಲ ತಿಮ್ಮಪ್ಪ ಶೆಟ್ಟಿ, ಆರ್.ಸಿ. ನಾರಾಯಣ, ಮಹೇಶ್ ಮೇನಾಲ ಮೊದಲಾದವರು ಉಪಸ್ಥಿತರಿದ್ದರು.


ಉಷಾ ಮುಳಿಯ ಪ್ರಾರ್ಥಿಸಿದರು. ರೈತ ಮೂರ್ಚಾ ಅಧ್ಯಕ್ಷ ಸುರೇಶ್ ಕಣ್ಣಾರಾಯ ಸ್ವಾಗತಿಸಿದರು. ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಶ್ ಬನ್ನೂರು ಕಾರ್ಯಕ್ರಮ ನಿರೂಪಿಸಿದರು.

ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ಜಂಬೂರಾಜ್ ಮಹಾಜನ್ ನೇಮಕ

Posted by Vidyamaana on 2023-12-02 14:06:13 |

Share: | | | | |


ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ಜಂಬೂರಾಜ್ ಮಹಾಜನ್ ನೇಮಕ

ಪುತ್ತೂರು: ಡಿ.ಸಿ.ಆ‌ರ್.ಬಿ. ಚಿಕ್ಕಮಗಳೂರು

ಘಟಕದಲ್ಲಿದ್ದ ಜಂಬೂರಾಜ್ ಮಹಾಜನ್ ಅವರನ್ನು ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ. ಆಗಿ ನೇಮಕಗೊಳಿಸಿ ಪೊಲೀಸ್ ಉಪ ಮಹಾನಿರೀಕ್ಷಕ ಚಂದ್ರಗುಪ್ತ ಆದೇಶಿಸಿದ್ದಾರೆ.


ಇವರು ಈ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಪಿ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿದ್ದರು.ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಆಗಿದ್ದ ಧನಂಜಯ ಬಿ.ಸಿ. ಅವರು ಪಶ್ಚಿಮ ವಲಯ ಕಚೇರಿಗೆ ಸ್ಥಳಾಂತರಗೊಂಡಿದ್ದು, ತೆರವಾದ ಹುದ್ದೆಗೆ ಜಂಬೂರಾಜ್ ಮಹಾಜನ್ ವರ್ಗಾವಣೆಗೊಂಡಿದ್ದಾರೆ.

ಉಪ್ಪಿನಂಗಡಿ : ಕಾಲೇಜು ವಿದ್ಯಾರ್ಥಿ ಅತ್ತಾವುಲ್ಲಾ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2024-02-15 11:24:39 |

Share: | | | | |


ಉಪ್ಪಿನಂಗಡಿ : ಕಾಲೇಜು ವಿದ್ಯಾರ್ಥಿ ಅತ್ತಾವುಲ್ಲಾ  ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ನಿವಾಸಿ ಅತ್ತಾವುಲ್ಲಾ (22) ಮೃತ ಯುವಕ.ಅತ್ತಾವುಲ್ಲಾ ರವರ ಸಂಬಂಧಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.


ಅತ್ತಾವುಲ್ಲಾ ತಾಯಿಯೊಂದಿಗೆ ವಾಸವಾಗಿದ್ದು, ಮಡಂತ್ಯಾರಿನ ಕಾಲೇಜಿನಲ್ಲಿ ದ್ವಿತಿಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು.


ಅತ್ತಾವುಲ್ಲಾ ಸುಮಾರು 1 ½ ತಿಂಗಳಿಂದ ಕಾಲೇಜಿಗೆ ಹೋಗದೇ ಮನೆಯಲ್ಲಿಯೇ ಇದ್ದು, ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದು, ಫೆ.14 ರಂದು ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸು ಮನೆಗೆ ಬಂದು ನೋಡಿದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಅತ್ತಾವುಲ್ಲಾ ಯಾವುದೋ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ., ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಹೊರತು ಆತನ ಮರಣದಲ್ಲಿ ಯಾವುದೇ ಸಂಶಯ ಇರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಯುಡಿಆರ್ ನಂಬ್ರ 03/2024 ಕಲಂ:174 CRPC ರಂತೆ ಪ್ರಕರಣ ದಾಖಲಾಗಿದೆ.

ನಗರ ಸಭೆ ಕಚೇರಿ ದುರಸ್ತಿಗೆ ಬೇರಿನ್ಯಾವ ಅನುದಾನ ಬಳಸ್ಬೇಕು

Posted by Vidyamaana on 2023-08-30 11:25:42 |

Share: | | | | |


ನಗರ ಸಭೆ ಕಚೇರಿ ದುರಸ್ತಿಗೆ ಬೇರಿನ್ಯಾವ ಅನುದಾನ ಬಳಸ್ಬೇಕು

ಪುತ್ತೂರು: ಶಾಸಕರ ಕಚೇರಿ ನಗರಸಭೆಯ ಕಟ್ಟಡವಾಗಿದ್ದು, ಅದನ್ನು ದುರಸ್ಥಿ ಪಡಿಸಲು ನಗರಸಭೆಯ ಅನುದಾನವನ್ನು ಬಳಸಬೇಕಲ್ಲದೆ ಬೇರೆ ಯಾವ ಅನುದಾನವನ್ನು ಬಳಕೆ ಮಾಡಬಹುದು? ಅದು ಶಾಸಕರ ಕಚೇರಿ ಹೊರತು ಅಶೋಕ್ ಕುಮಾರ್ ರೈ ಅವರ ವೈಯುಕ್ತಿಕ ಕಚೇರಿಯಲ್ಲ. ಮುಂದಿನ ದಿನ ಯಾರೆ ಶಾಸಕರಾಗಲಿ ಅವರಿಗೆ ಈ ಕಚೇರಿ ಉಪಯೋಗಕ್ಕೆ ಬರುತ್ತದೆ ಎಂದ ಬಿಜೆಪಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ನಡೆದ ಪತ್ರಿಕಾಗೋಷ್ಠಿಗೆ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದು, ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಐಷಾರಮಿ ಕಚೇರಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿರುವುದು ತೆರಿಗೆಯ ದುರುಪಯೋಗವಲ್ಲವೇ ಎಂದು ಪ್ರಶ್ನಿಸಿದ್ದಾರೆ.ಅಶೋಕ್ ಕುಮಾರ್ ರೈ ಅವರು ಶಾಸಕರಾಗಿ ಮೂರೇ ತಿಂಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು, ಜನಪರ ಯೋಜನೆಗಳನ್ನು ಹಾಕಿಕೊಂಡು ಜನಪ್ರಿಯರಾಗುತ್ತಿದ್ದಾರೆ. ಅವರ ಜನಪ್ರಿಯತೆ ಸಹಿಸಲಾಗದೆ ಹೊಟ್ಟೆಕಿಚ್ಚಿನಿಂದ ಮಾಜಿ ಶಾಸಕ ಸಂಜೀವ ಮಠಂದೂರು ಶಾಸಕರ ನೂತನ ಕಚೇರಿ ಕುರಿತು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಇವತ್ತು ಮಾಜಿ ಶಾಸಕರಿಗೆ ಕೆಲಸವಿಲ್ಲ. ಕಳೆದ ಚುನಾವಣೆಯಲ್ಲಿ ಅವರಿಗೆ ಟಿಕೇಟ್ ಕೊಡಲಿಲ್ಲ. ಇವತ್ತು ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಬೇರೆ ಬೇರೆ ವಿಚಾರ ತೆಗೆದು ಕೊಂಡು ಮಾದ್ಯಮದ ಮುಂದೆ ಬರುತ್ತಿದ್ದಾರೆ. ಅಶೋಕ್ ಕುಮಾರ್ ರೈ ಅವರು ತಮ್ಮನ್ನು ಭೇಟಿಯಾಗಲು ಬರುವ ಸಾರ್ವಜನಿಕರಿಗೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಲ್ಲಿ ಸಭೆ ನಡೆಸಲು ಅನುಕೂಲವಾಗುವ ವ್ಯವಸ್ಥಿತವಾದ ಕಚೇರಿ ಇರಬೇಕೆಂಬ ಸುದುದ್ದೇಶದಿಂದ ಸುಸಜ್ಜಿತ ಕಚೇರಿ ನಿರ್ಮಿಸುವಂತೆ ಜಿಲ್ಲಾಡಳಿತದಲ್ಲಿ ಕೇಳಿಕೊಂಡಂತೆ ಹಿಂದಿನ ಪುರಸಭಾ ಕಟ್ಟಡದಲ್ಲಿ ನೂತನ ಕಚೇರಿ ನಿರ್ಮಾಣ ಮಾಡಲಾಗಿದೆ. ಆದರೆ ಈ ವಿಷಯವನ್ನು ತೆಗೆದುಕೊಂಡು ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಹಿಂದಿನ ಕಚೇರಿ ಗೂಡಂಗಡಿ:

ಹಿಂದಿನ ಶಾಸಕ ಸಂಜೀವ ಮಠಂದೂರು ಅವರ ಮಿನಿ ವಿಧಾನ ಸೌಧದಲ್ಲಿರುವ ಕಚೇರಿ ಗೂಡಂಗಡಿಯಂತೆ ಇತ್ತು. ಈ ಕಚೇರಿಯಲ್ಲಿ ಸಾರ್ವಜನಿಕರಿಗೆ ಬಂದು ಭೇಟಿಯಾಗಿ ಮಾತನಾಡಲು ಸರಿಯಾದ ಸ್ಥಳಾವಕಾಶವಿರಲಿಲ್ಲ. ಅವರಿಗೆ ಸಾರ್ವಜನಿಕರಿಗೆ ತನ್ನ ಕಚೇರಿಯಿಂದ ಅನಾನುಕೂಲ ಆಗುತ್ತದೆ ಎಂಬ ಕಾಳಜಿಯೂ ಇರಲಿಲ್ಲ. ಆದರ ಈಗಿನ ಶಾಸಕರು ಸಾರ್ವಜನಿಕರಿಗಾಗಿ ವಿಶಾಲವಾದ ಕಚೇರಿ ಮಾಡಿಕೊಂಡಿದ್ದಾರೆ. ಎಂದು ಹೆಚ್.ಮಹಮ್ಮದ್ ಆಲಿ ಹೇಳಿದರು .

ಸಂಜೀವ ಮಠಂದೂರು ಅವರಿಂದ ಕೋಟ್ಯಾಂತರ ರೂಪಾಯಿ ದುರುಪಯೋಗ:

ಮಾಜಿ ಶಾಸಕ ಸಂಜೀವ ಮಠಂದೂರು ಅವರ ಅವಧಿಯಲ್ಲಿ ಸರಕಾರದ ವಿವಿಧ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ದುರುಪಯೋಗ ಆಗಿದೆ. ನಗರಸಭೆಗೆ ಸುಸಜ್ಜಿತ ಕಚೇರಿ ಇದ್ದಾಗಲೂ ಶಾಸಕ ಸಂಜೀವ ಮಠಂದೂರು ಅವರು ಹಿಂದಿನ ಪುರಸಭೆಯ ಕಟ್ಟಡ ಕೆಡವಿದಲ್ಲದೆ ಪಕ್ಕದಲ್ಲಿರುವ ಈಗಿನ ಶಾಸಕರ ಕಚೇರಿ ಕಟ್ಟಡವನ್ನು ಕೆಡವಿ ರೂ.13 ಕೋಟಿ ವೆಚ್ಚದಲ್ಲಿ ಹೊಸ ನಗರಭೆ ಕಚೇರಿ ನಿರ್ಮಿಸಲು ಹೊರಟಿದ್ದರು. ಆಗ ಜನರ ತೆರಿಗೆ ಹಣ ದುರುಪಯೋಗ ಆಗುತ್ತದೆ ಎಂದು ಅವರಿಗೆ ಗೊತ್ತಿರಲಲಿಲ್ಲವೇ? ಪುಡಾ ಕಚೇರಿಯಿಂದ ರೂ.13 ಸಾವಿರ ಬರುವ ಬಾಡಿಗೆ ನಷ್ಟ ಆಗಿದೆ ಎನ್ನುತ್ತಿರುವ ಮಾಜಿ ಶಾಸಕರಿಗೆ ಆ ಕಟ್ಟಡ ಕೆಡವಿದಾಗ ಪುಡಾದ ಬಾಡಿಗೆ, ತಳ ಅಂತಸ್ತಿನಲ್ಲಿರುವ ಹೊಟೇಲ್,ಇನ್ನಿತರ ಉದ್ಯಮದಿಂದ ಬರುವ ಬಾಡಿಗೆ ನಷ್ಟ ಆಗುತ್ತದೆ ಎಂದು ಗೊತ್ತಿರಲಿಲ್ಲವೇ? ನಗರಸಭೆಯ ವಿವಿಧ ಕಡೆಗಳಲ್ಲಿ ಹಲವು ಕಡೆ ಜನರೇ ಇಲ್ಲದಲ್ಲಿಗೆ ಪಾರ್ಕ್ ಮಾಡಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿರುವುದು, ರಸ್ತೆ ಬದಿಯ ಇಂಟರ್ ಲಾಕ್ ತೆರವು ಮಾಡಿ ಡಾಮಾರು ಹಾಕಿಸಿರುವುದು, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸ್ಮಾರ್ಟ್ ಬಸ್ ತಂಗುದಾಣ ಮಾಡಿರುವುದು, ಕೃಷಿ ಭೂಮಿ ಸಂರಕ್ಷಣೆಗೆ ಒದಗಿಸಲ್ಪಟ್ಟ ಸಣ್ಣ ನೀರಾವರಿ ಇಲಾಖೆಯ ಅನುದಾನದಲ್ಲಿ ನಿಮ್ಮ ಆಪ್ತರ ಪರಿವರ್ತನ ಭೂಮಿಗೆ ತಡೆಗೋಡೆ ಕಟ್ಟಿರುವುದು, ನಗರಸಭೆಯ ಕಚೇರಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸುಸಜ್ಜಿತ ಕಚೇರಿಇದ್ದಾಗಲೂ ಬಿಜೆಪಿ ಆಡಳಿತ ಬಂದಾಗ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಎಸಿ ಅಳವಡಿಸಿ ಕಚೇರಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿರುವುದು, ಮುಕ್ರಂಪಾಡಿಯಲ್ಲಿ ರೂ.50 ಲಕ್ಷದಲ್ಲಿ ಆಗುವ ಸೇತುವೆಗೆ ರೂ.1.75 ಕೋಟಿ ಖರ್ಚು ತೋರಿಸಿರುವುದು, ಇರ್ದೆ ಗ್ರಾಮದ ಬೈಲಾಡಿ ಗೋಪಾಲಕೃಷ್ಣ ದೇವಾಲಯದಿಂದ ಬೆಂದ್ರತೀರ್ಥಕ್ಕೆ ಹೋಗಲು ತೂಗು ಸೇತುವೆ ನಿರ್ಮಾಣ ಮಾಡುವ ಬದಲು ಖಾಸಗಿ ತೋಟಕ್ಕೆ ಹೋಗಲು ಸೇತುವೆ ಮಾಡಿರುವುದು, ಇದೆ ಗ್ರಾಮದ ಕೆಲ್ಲಾಡಿ ಎಂಬಲ್ಲಿ 500 ಮೀಟರ್ ಅಂತರದಲ್ಲಿ ರಸ್ತೆ ಸಂಪರ್ಕ ಇಲ್ಲದ ಗುಡ್ಡೆಗ ರೂ. 6.50 ಕೋಟಿ ಸೇತುವೆ ನಿರ್ಮಾಣ ಮಾಡಿರುವುದು ಯಾರ ತೆರಿಗೆಯ ಹಣದಲ್ಲಿ ಎಂದು ಪ್ರಶ್ನಿಸಿದ ಮಹಮ್ಮದ್ ಆಲಿಯವರು ಇದೆಲ್ಲ ದುರುಪಯೋಗವಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇವೆಲ್ಲ ಶೇ.40 ಕಮಿಷನ್ ಆಸೆಗಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಮಾಡಿದ ದುರುಪಯೋಗ ಎಂದರು. ಇವತ್ತು ಮಾಜಿ ಪುರಸಭೆ ಕಟ್ಟಡದಲ್ಲಿ ಶಾಸಕರ ಕಚೇರಿ ನಿರ್ಮಾಣಗೊಂಡಿದ್ದರಿಂದ ಅಲ್ಲಿ ಕಟ್ಟಡ ಕೆಡವುವ ಬಿಜೆಪಿಯ ಹುನ್ನಾರಕ್ಕೆ ತಡೆ ಹಿಡಿಯಲಾಗಿದೆ. ಮುಂದೆಯೂ ಅಲ್ಲಿ ನಗರಸಭೆ ಕಚೇರಿ ನಿರ್ಮಾಣ ಮಾಡಲುನಾವು ಬಿಡುವುದಿಲ್ಲ ಎಂದು ಮಹಮ್ಮದ್ ಆಲಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರೋಶನ್ ರೈ ಬನ್ನೂರು, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಕ್ಟ‌ ಪಾಯಸ್, ಉಪಾಧ್ಯಕ್ಷ ಮಂಜುನಾಥ್ ಕೆಮ್ಮಾಯಿ ಉಪಸ್ಥಿತರಿದ್ದರು.

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಹೆಚ್’ಡಿ ದೇವೇಗೌಡ: ರಾಜಕಾರಣದಲ್ಲಿ ತೀವ್ರ ಕುತೂಹಲ

Posted by Vidyamaana on 2023-12-15 15:03:14 |

Share: | | | | |


ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಹೆಚ್’ಡಿ ದೇವೇಗೌಡ: ರಾಜಕಾರಣದಲ್ಲಿ ತೀವ್ರ ಕುತೂಹಲ

ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.ಸಂಸತ್ ಭವನದಲ್ಲಿ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ದೇವೇಗೌಡ ಮತ್ತು ಖರ್ಗೆ ಅವರು ಮಾತುಕತೆ ನಡೆಸಿದರು. ಈ ಬಗ್ಗೆ ಟ್ವೀಟ್ ಮಾಡಿದ ರಾಜ್ಯಸಭಾ ಸದಸ್ಯ ರಾಜೀವ್ ಶುಕ್ಲಾ, “ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನು ಸಂಸತ್ತಿನ ಭವನದಲ್ಲಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು” ಎಂದರು.

Recent News


Leave a Comment: