ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

ಸುದ್ದಿಗಳು News

Posted by vidyamaana on 2024-07-25 13:38:46 |

Share: | | | | |


ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

      ನಾವೆಲ್ಲರೂ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತೇವೆ, ಇದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ, ಆದರೆ ನಿಮ್ಮ ಸ್ಮಾರ್ಟ್ಫೋನ್ ಅಡಿಯಲ್ಲಿ ಸಣ್ಣ ರಂಧ್ರವನ್ನು ನೀವು ಎಂದಾದರೂ ಗಮನಿಸಿದ್ದೀರಾ, ಆದರೆ ಅದು ಏನು ಬಳಸುತ್ತದೆ ಎಂಬುದರ ಬಗ್ಗೆ ನೀವು ಯೋಚಿಸಿದ್ದೀರಾ, ಜನರು ಇದನ್ನು ಮೈಕ್ರೊಫೋನ್ ಎಂದು ಪರಿಗಣಿಸುತ್ತಾರೆ, ಇದನ್ನು ಮೈಕ್ರೊಫೋನ್ ಗ್ರಿಲ್ ಎಂದು ಕರೆಯಲಾಗುತ್ತದೆ, ಇದು ನಿರ್ದಿಷ್ಟವಾಗಿ ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಗಳನ್ನು ಒಳಗೊಂಡಿದೆ.ಶಬ್ದವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಫೋನ್ ಕರೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ, ಅದರ ಬಗ್ಗೆ ಸಂಪೂರ್ಣ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ

ಇದು ಹೇಗೆ ಕಾರ್ಯನಿರ್ವಹಿಸುತ್ತದೆ

ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ನಿಮ್ಮ ಫೋನ್ನ ಪ್ರಾಥಮಿಕ ಮೈಕ್ರೊಫೋನ್ನೊಂದಿಗೆ ಕಾರ್ಯನಿರ್ವಹಿಸುತ್ತದೆ, ಇದು ಸಾಮಾನ್ಯವಾಗಿ ಮುಂಭಾಗ ಅಥವಾ ಮೇಲ್ಭಾಗದಲ್ಲಿದೆ. ಕರೆ ಸಮಯದಲ್ಲಿ, ಮುಖ್ಯ ಮೈಕ್ರೊಫೋನ್ ನಿಮ್ಮ ಧ್ವನಿಯನ್ನು ಸೆರೆಹಿಡಿಯುತ್ತದೆ, ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಸುತ್ತಮುತ್ತಲಿನ ಶಬ್ದಗಳನ್ನು ತೆಗೆದುಕೊಳ್ಳುತ್ತದೆ.

ಮೈಕ್ರೊಫೋನ್ ಗ್ರಿಲ್ ನ ಪ್ರಾಮುಖ್ಯತೆ

ಮೈಕ್ರೊಫೋನ್ ಗ್ರಿಲ್ ಶಬ್ದವನ್ನು ತೆಗೆದುಹಾಕುವುದು ಅಥವಾ ತಿರುಚುವುದು ನಿಮ್ಮ ಕರೆಯ ಗುಣಮಟ್ಟದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಈ ಘಟಕವಿಲ್ಲದೆ, ಹಿನ್ನೆಲೆ ಶಬ್ದಗಳು ಹೆಚ್ಚು ಸ್ಪಷ್ಟವಾಗುತ್ತವೆ, ಸಂವಹನವನ್ನು ಕಷ್ಟಕರವಾಗಿಸುತ್ತದೆ.ಎಲ್ಲೆಲ್ಲೂ ಇಲ್ಲ

ಎಲ್ಲಾ ಸ್ಮಾರ್ಟ್ಫೋನ್ಗಳು ಶಬ್ದ-ರದ್ದುಗೊಳಿಸುವ ಮೈಕ್ರೊಫೋನ್ ಅನ್ನು ಹೊಂದಿಲ್ಲ ಎಂಬುದನ್ನು ಗಮನಿಸುವುದು ಮುಖ್ಯ. ನಿಮ್ಮ ಸಾಧನವು ಈ ವೈಶಿಷ್ಟ್ಯವನ್ನು ಹೊಂದಿದೆಯೇ ಎಂದು ನಿಮಗೆ ಖಚಿತವಿಲ್ಲದಿದ್ದರೆ, ನಿಮ್ಮ ಫೋನ್ನ ಕೈಪಿಡಿಯನ್ನು ನೀವು ನೋಡಿಕೊಳ್ಳಬಹುದು.

 Share: | | | | |


ಮುತ್ತು ಬೆಳೆದ ಊರಿನಲ್ಲಿ ಮಿನುಗಲು ಸಿದ್ಧವಾಗಿದೆ ಸುಲ್ತಾನ್ ಡೈಮಂಡ್ಸ್ ಗೋಲ್ಡ್

Posted by Vidyamaana on 2024-02-20 23:15:54 |

Share: | | | | |


ಮುತ್ತು ಬೆಳೆದ ಊರಿನಲ್ಲಿ ಮಿನುಗಲು ಸಿದ್ಧವಾಗಿದೆ ಸುಲ್ತಾನ್ ಡೈಮಂಡ್ಸ್  ಗೋಲ್ಡ್

ಪುತ್ತೂರು: ಗ್ರಾಹಕರ ವಿಶ್ವಾಸ ಗಳಿಸಿ ವಿಶ್ವಾಸಾರ್ಹ ಅಭರಣ ಬ್ರಾಂಡ್ ಎನಿಸಿಕೊಂಡಿರುವ ಸುಲ್ತಾನ್ ಡೈಮಂಡ್ಸ್ ಅಂಡ್ ಗೋಲ್ಡ್ ಪುತ್ತೂರು ಶಾಖೆ ಫೆಬ್ರವರಿ 22ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದ್ದು, ಶುಭಾರಂಭಕ್ಕೆ ಸಿದ್ಧತೆಗಳು ಭರ್ಜರಿಯಾಗಿಯೇ ನಡೆಯುತ್ತಿವೆ.

ಸಮಕಾಲೀನ ಮತ್ತು ಸಾಂಪ್ರದಾಯಿಕ ವಿನ್ಯಾಸಗಳು, ಸರಿಸಾಟಿಯಿಲ್ಲದ ಪರಿಶುದ್ಧತೆ ಮತ್ತು ಸೇವೆಗಳ ಉತ್ತಮ ಮಿಶ್ರಣದೊಂದಿಗೆ, ಸುಲ್ತಾನ್ ಪುತ್ತೂರಿನ ಆಭರಣ ಪ್ರಿಯರ ಮನಸ್ಸನ್ನು ಅಸ್ವಾದಿಸಲು ಸಿದ್ಧವಾಗಿದೆ. 1992ರಿಂದಲೇ ಗ್ರಾಹಕರ ವಿಶ್ವಾಸ ಗಳಿಸಿರುವ ಸುಲ್ತಾನ್ ಡೈಮಂಡ್ಸ್ ಅಂಡ್ ಗೋಲ್ಡ್ , ತನ್ನ 10ನೇ ಶಾಖೆಯನ್ನು ಪುತ್ತೂರಿನಲ್ಲಿ ತೆರೆಯುತ್ತಿದೆ.

ಬಹುಭಾಷಾ ತಾರೆ ಪ್ರಿಯಾಮಣಿ ಅವರು ಮಳಿಗೆಯನ್ನು ಉದ್ಘಾಟಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅತಿಥಿಯಾಗಿರಲಿದ್ದು, ಮಾಜಿ ಶಾಸಕ ಸಂಜೀವ ಮಠಂದೂರು ಅವರು ವೈವಿಧ್ಯಮಯದ ವಜ್ರದ ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. 

ನಗರಸಭೆ ಸದಸ್ಯೆ ವಿದ್ಯಾ ಗೌರಿ ಅವರು ಜೆಮ್ ಸ್ಟೋನ್ ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. ಪುತ್ತೂರಿನ ಎಸ್.ಡಿ.ಪಿ.ಐ. ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ಅವರು "ಆಂಟಿಕ್" ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. 

ಮೌಂಟನ್ ವ್ಯೂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆಪಿ ಅಹಮದ್ ಹಾಜಿ ಆಕರ್ಷಣ್ ಅವರು ಚಿನ್ನಾಭರಣದ ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. ಸುದಾನ ವಸತಿಯುತ ಶಾಲಾ ಸಂಚಾಲಕ ರೆವರೆಂಡ್ ವಿಜಯ್ ಹಾರ್ವಿನ್ ಅವರು ಮಕ್ಕಳ ಚಿನ್ನಾಭರಣದ ಮತ್ತು ಬೆಳ್ಳಿಯ ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. ಲಯನ್ಸ್ 317D ಅಧ್ಯಕ್ಷೆ  ಡಾಕ್ಟರ್ ರಂಜಿತಾ ಶೆಟ್ಟಿ ಅವರು CAIA - ಲೈಫ್ ಸ್ಟೈಲ್ ಜ್ಯುವೆಲ್ಲರಿಯನ್ನು ಅನಾವರಣಗೊಳಿಸಲಿದ್ದಾರೆ.

ಕಳೆದ ಮೂರು ದಶಕಗಳಿಂದ ಸುಲ್ತಾನ್ ಡೈಮಂಡ್ ಅಂಡ್ ಗೋಲ್ಡ್ - ನಂಬಿಕೆ, ಶುದ್ಧತೆ, ಡಿಸೈನ್, ವೈವಿಧ್ಯತೆ, ಕನಿಷ್ಠ ತಯಾರಿಕಾ ವೆಚ್ಚ, ಮಾರಾಟ ನಂತರದ ಗ್ರಾಹಕ ಸ್ನೇಹಿ ಸೇವೆ, ಉಚಿತ ಜ್ಯುವೆಲ್ಲರಿ ನಿರ್ವಹಣಾ ವ್ಯವಸ್ಥೆ ಮುಂತಾದವುಗಳಿಂದಾಗಿ ಜನಮನ್ನಣೆ ಪಡೆದಿದೆ. ಸುಲ್ತಾನ್ ನಲ್ಲಿ ನಿವ್ವಳ ತೂಕಕ್ಕೆ ಚಿನ್ನದ ಬೆಲೆ ಮತ್ತು ಆಭರಣಗಳಲ್ಲಿರುವ ಕಲ್ಲುಗಳು ಅಥವಾ ಇನ್ನಿತರ ಪೂರಕ ಬೀಟ್ಸ್ - ಮಣಿಗಳನ್ನು ಪ್ರತ್ಯೇಕವಾಗಿ ಬೆಲೆ ಸೂಚ್ಯಂಕದಿಂದ ಮಾರಾಟ ಮಾಡಲಾಗುತ್ತದೆ. ಸುಲ್ತಾನ್ ನಲ್ಲಿ IGI ಪ್ರಮಾಣೀಕೃತ ವಜ್ರದ ಆಭರಣಗಳನ್ನು ಮತ್ತು ಪ್ಲಾಟಿನಮ್ ಗಿಲ್ಡ್ ಇಂಟರ್ನ್ಯಾಷನಲ್ (PGI) ಪ್ರಮಾಣಿಕೃತ ಪ್ಲಾಟಿನಮ್ ಆಭರಣಗಳನ್ನು ಮಾತ್ರ ಮಾರಾಟ ಮಾಡಲಾಗುತ್ತದೆ. ಹಾಗೆಯೇ ಶೇ. 100 ಶುದ್ಧ BIS ಹಾಲ್ ಮಾರ್ಕ್ HUID 916 ಚಿನ್ನಾಭರಣಗಳನ್ನು ಮಾತ್ರ ಮಾರಾಟ ಮಾಡಲಾಗುತ್ತದೆ.


ಪುತ್ತೂರು ಮಳಿಗೆ ಮಳಿಗೆಯ ಉದ್ಘಾಟನೆಯ ಅಂಗವಾಗಿ ಗ್ರಾಹಕರಿಗೆ ವಿಶೇಷ ಆಕರ್ಷಕ ಕೊಡುಗೆಗಳನ್ನು ನೀಡಲಾಗುತ್ತದೆ. ಉದ್ಘಾಟನೆ ಪ್ರಯುಕ್ತ ಕೊಡುಗೆಗಳು 2024ರ ಮಾರ್ಚ್ 10ರ ವರೆಗೆ ಇರಲಿದೆ.

• ಪ್ರತಿದಿನ ಇಬ್ಬರು ಗ್ರಾಹಕರಿಗೆ ಒಂದು ಗ್ರಾಂ ಚಿನ್ನದ ನಾಣ್ಯ ಗೆಲ್ಲುವ ಅವಕಾಶ.

• ಚಿನ್ನಾಭರಣದ ತಯಾರಿಕಾ ವೆಚ್ಚದಲ್ಲಿ ಶೇ. 50 ಕಡಿತ

• ಡೈಮಂಡ್ ಪ್ರತಿ ಕ್ಯಾರೆಟ್ ಮೇಲೆ ರೂ. 8000/- ರಿಯಾಯಿತಿ.

• ಬೆಳ್ಳಿ ಆಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ. 25 ಕಡಿತ.

• ಹಳೆಯ ಚಿನ್ನದ ವಿನಿಮಿಯದಲ್ಲಿ ಪ್ರತೀ ಗ್ರಾಮಿಗೆ ರೂ. 50/- ಹೆಚ್ಚುವರಿಯಾಗಿ ಪಡೆಯಬಹುದು.


ಸುಮಾರು 10,000 ಚದರ ಅಡಿ ವಿಶಾಲವಾಗಿರುವ ಪುತ್ತೂರು ಮಳಿಗೆಯಲ್ಲಿ ಸುಲ್ತಾನ್ ನ ಬ್ರಾಂಡ್ ಗಳಾದ ಪ್ಯೂರ್ ವೇರ್ ಡೈಮಂಡ್ ಕಲೆಕ್ಷನ್, ಅಮೋಕ ಪ್ಲಾಟಿನಂ ಕಲೆಕ್ಷನ್ಸ್, ಆಕರ್ಷ" ಅನ್ ಕಟ್ ಡೈಮಂಡ್, ಅಮೂಲ್ಯ ಜೆಮ್ ಸ್ಟೋನ್ ಕಲೆಕ್ಷನ್ಸ್, ತಾರಕ ಮಕ್ಕಳ ಆಭರಣಗಳು, CAIA ಲೈಟ್ ವೈಟ್ ಆಭರಣಗಳು, ಮತ್ತು ನಿತ್ಯೋಪಯೋಗಿ ಆಭರಣಗಳು ಇಲ್ಲಿ ಲಭ್ಯ  ಇರಲಿದೆ.


ಕಡಿಮೆ ಬೆಲೆಯಲ್ಲಿ ಉತ್ಕೃಷ್ಟ ಆಭರಣ:

ಸುಲ್ತಾನ್ ಡೈಮಂಡ್ಸ್ ಆಂಡ್ ಗೋಲ್ಡ್ ನಿರ್ದೇಶಕರಾದ ಡಾಕ್ಟರ್ ಅಬ್ದುಲ್ ರಹೂಫ್ ಮತ್ತು ಅಬ್ದುಲ್ ರಹೀಮ್ ಮಾತನಾಡಿ, “ನಾವು ಸುಲ್ತಾನ್ ಜ್ಯುವೆಲ್ಲರಿಯ ವಿಶೇಷತೆಗಳನ್ನು ಪುತ್ತೂರು ಜನತೆಗೆ  ಪರಿಚಯಿಸಲಿದ್ದು, ನಮ್ಮ ಶೋರೂಮ್ಗೆ ಭೇಟಿ ಮಾಡಿ ಸುಲ್ತಾನ್ ತನ್ನ ಗ್ರಾಹಕರಿಗೆ ನೀಡುವ ಅನನ್ಯ ಆಭರಣ ಸಂಗ್ರಹ ಮತ್ತು ಸೇವೆಯನ್ನು ಆನಂದಿಸಬೇಕು" ಎಂದು ವಿನಂತಿಸಿದ್ದಾರೆ. ಹಾಗೆಯೇ “ಪುತ್ತೂರಿನ ಈ ಮಳಿಗೆ ನೂರು ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿದೆ” ಎಂದಿದ್ದಾರೆ.

"ಸುಲ್ತಾನ್ ಡೈಮಂಡ್ಸ್ ಅಂಡ್ ಗೋಲ್ಡ್ ಕರ್ನಾಟಕ ಮತ್ತು ಕೇರಳದಲ್ಲಿ ಒಟ್ಟು 10 ಶೋ ರೂಮ್ಗಳನ್ನು ಹೊಂದಿದೆ. ಹಾಗೆಯೇ ಶೀಘ್ರದಲ್ಲಿ ಮೈಸೂರು ಮತ್ತು ಬೆಂಗಳೂರುನಲ್ಲಿ ಮತ್ತೆರಡು ಮಳಿಗೆಗಳನ್ನು ತೆರೆಯಲಿದೆ. ಸುಲ್ತಾನ್ ಚಿನ್ನ ಆಮದು ಮಾಡುವ ಲೈಸೆನ್ಸ್ ಹೊಂದಿದ್ದು, ಆಮದಿತ ಶುದ್ಧ ಚಿನ್ನದ ಬಾರ್ ಗಳನ್ನು ತರಿಸುತ್ತದೆ. ಹಾಗೆಯೇ ತನ್ನದೇ ತಯಾರಿಕಾ ಘಟಕವನ್ನು ಹೊಂದಿದೆ. ಹೀಗಾಗಿ ಶುದ್ಧ ಚಿನ್ನದ ಅತ್ಯಂತ ಉತ್ಕೃಷ್ಟವಾಗಿ ತಯಾರಿಸಲಾದ ಆಭರಣಗಳನ್ನು ಕಡಿಮೆ ಬೆಲೆಯಲ್ಲಿ ನೀಡಲು ನಮಗೆ ಸಾಧ್ಯವಾಗುತ್ತದೆ” ಎಂದು ತಿಳಿಸಿದ್ದಾರೆ.

ಸುಲ್ತಾನ್ ನಲ್ಲಿ ಕನಿಷ್ಠ ತಯಾರಿಕಾ ವೆಚ್ಚ ಇದೆ ಮತ್ತು ವೇಸ್ಟೇಜ್ ವೆಚ್ಚ ಇರುವುದಿಲ್ಲ, ಹಾಗೆಯೇ 11 ತಿಂಗಳ ಮಾಸಿಕ ಕಂತುಗಳ ಯೋಜನೆ ಇದೆ. ಪಾವತಿಗಾಗಿ ಮೊಬೈಲ್ ಆಪ್ ಕೂಡ ಇರುತ್ತದೆ. ಮದುವೆ ಮತ್ತು ಇನ್ನಿತರ ಸಮಾರಂಭಗಳಿಗಾಗಿ ಮುಂಗಡ ಪಾವತಿ ಮಾಡಿ. ಚಿನ್ನದ ಬೆಲೆ ಏರಿಕೆಯಿಂದ ರಕ್ಷಣೆ ಪಡೆಯಬಹುದು. ಮದುವೆ ಖರೀದಿಗೆ ವಿಶೇಷ ರಿಯಾಯಿತಿ ಇರುತ್ತದೆ. ಸುಲ್ತಾನ್  ಹಬ್ಬ ಹರಿದಿನಗಳಿಗೆ, ಹಾಗೆಯೇ ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೆ, ವಧು-ವರರಿಗೆ... ಹೀಗೆ ಎಲ್ಲಾ ವರ್ಗದ ಜನರಿಗೆ ಜನಪ್ರಿಯ ಆಕರ್ಷಕ ಆಭರಣಗಳ ಮಳಿಗೆಯಾಗಿದೆ ಎಂದು ತಿಳಿಸಿದ್ದಾರೆ.

ಪುತ್ತೂರು ಏಳ್ಮುಡಿ ಸೇತುವೆ ಬಳಿಯ ತಾಜ್ ಟವರ್ಸ್ ನಲ್ಲಿ ಈ ವಿಶಾಲ ಮಳಿಗೆ ಕಣ್ಮನ ಸೆಳೆಯುತ್ತಿದೆ. ವಿವರಗಳಿಗೆ ಸಂಪರ್ಕಿಸಿ 08246816916.

ಅಕಾಲಿಕವಾಗಿ ನಿಧನರಾದ ಪದ್ಮನಾಭ್ ಸಾಮಂತ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Posted by Vidyamaana on 2024-04-02 15:13:55 |

Share: | | | | |


ಅಕಾಲಿಕವಾಗಿ ನಿಧನರಾದ ಪದ್ಮನಾಭ್ ಸಾಮಂತ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

ಬಂಟ್ವಾಳ: ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ಪದ್ಮನಾಭ ಸಾಮಂತ್ ಅವರ ಮನೆಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.

ಪದ್ಮನಾಭ ಸಾಮಂತ್ ಅವರ ತಾಯಿ, ತನ್ನ ಮಗನ ದಾರುಣ ಸ್ಥಿತಿಯನ್ನು ಪದ್ಮರಾಜ್ ಅವರಿಗೆ ತಿಳಿಸಿ ಕಣ್ಣೀರಾದರು. 

ಕಡಬದಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು

Posted by Vidyamaana on 2024-04-06 13:10:16 |

Share: | | | | |


ಕಡಬದಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು

ಕಡಬ: ಕಡಬ ತಾಲೂಕಿನ ಕೊಂಬಾರು ಸಮೀಪದ ಚೆರು ಗ್ರಾಮಕ್ಕೆ ಗರುವಾರ ಸಾಯಂಕಾಲ ನಕ್ಸಲರ ತಂಡ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ.

ನಕ್ಸಲರು ಚೆರು ಗ್ರಾಮದ ಮನೆಯೊಂದಕ್ಕೆ ತೆರಳಿ, ಎರಡು ಗಂಟೆಗಳ ಕಾಲ ಅಲ್ಲೇ ಕಾಲ ಕಳೆದಿದ್ದಾರೆ. ನಂತರ ಅದೇ ಮನೆಯಲ್ಲಿ ಊಟ ಮಾಡಿ ಬಳಿಕ ದಿನಸಿ ಸಾಮಗ್ರಿ ಪಡೆದಿರುವ ಮಾಡಿರುವ ಮಾಹಿತಿ ದೊರೆತಿದೆ.

ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

Posted by Vidyamaana on 2023-06-06 05:24:39 |

Share: | | | | |


ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೋಲಿಸ್ ಅಧೀಕ್ಷರರ ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಸರಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದ್ದು ,ಕಂದಾಯ ಇಲಾಖೆಯಿಂದಲೂ ಸ್ಥಳ ಕಾಯ್ದಿರಿಸಲಾಗಿದೆ ,ಅನುದಾನವೂ ಅನುಮೋದನೆಯಾಗಿರುತ್ತದೆ . ಸರಕಾರವು ಈ ವಿಚಾರವನ್ನು ಪರಿಗಣಿಸಿ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವಂತೆ ಶಾಸಕರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಪುತ್ತೂರಿಗೆ ಉಪವಿಭಾಗಕ್ಕೆ ಎಸ್ ಪಿ ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಹಲವು ವರ್ಷಗಳಿಂದ ಸರಕಾರದ ಮೂಲಕ ಒತ್ತಡ ತರಲಾಗುತ್ತದೆ. ಆದರೆ ಪೂರ್ಣ ಪ್ರಮಾಣದಲ್ಲಿ ಇದರ ಕಾರ್ಯ ನಡೆದಿರುವುದಿಲ್ಲ. ಮಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶ ವ್ಯಾಪ್ತಿ‌ಮಂಗಳೂರು ಕಮಿಷನರ್ ಸುಪರ್ದಿಗೆ ಒಳಪಡುವ ಕಾರಣ  ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವುದಕ್ಕೆ ಇಲಾಖಾ ಮಟ್ಟದಲ್ಲಿ ಹಲವು ವರ್ಷಗಳಿಂದ ಪ್ರಯತ್ನಗಳು ನಡೆಯುತ್ತಿದೆ. ಶಾಸಕ ಅಶೋಕ್ ರೈ ಮುಂದಾಳುತ್ವದಲ್ಲಿ ಈ ಬಾರಿ ಎಸ್ ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರವಾಗುವ ಸಾಧ್ಯತೆ ಇದ್ದು ಈಗಾಗಲೇ ರಾಜ್ಯ ಗೃಹ ಸಚಿವ ಪರಮೇಶ್ವರ್ ಜೊತೆ ಮಾತುಕತೆಯನ್ನು ನಡೆಸಿದ್ದಾರೆ. ಈ ಮೂಲಕ ಪುತ್ತೂರು ಉಪ ವಿಭಾಗ ವ್ಯಾಪ್ತಿಯ ಬಹು ವರ್ಷದ ಕನಸು ಈ ಬಾರಿ ನನಸಾಗುವ ಸಾಧ್ಯತೆ ಇದೆ.

ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ,ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಈ ವೇಳೆ ಉಪಸ್ಥಿತರಿದ್ದರು.

ಬೆಳ್ತಂಗಡಿ : ಮನೆಯಿಂದ ಕಾಲೇಜ್ ವಿದ್ಯಾರ್ಥಿ ಪುನೀತ್ ನಾಪತ್ತೆ

Posted by Vidyamaana on 2023-09-05 04:38:54 |

Share: | | | | |


ಬೆಳ್ತಂಗಡಿ : ಮನೆಯಿಂದ ಕಾಲೇಜ್ ವಿದ್ಯಾರ್ಥಿ ಪುನೀತ್ ನಾಪತ್ತೆ

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿ ಮನೆಯಿಂದ ಏಕಾಏಕಿ ನಾಪತ್ತೆಯಾದ ಘಟನೆ ಬೆಳ್ತಂಗಡಿಯ ಗುರುದೇವ ಕಾಲೇಜಿನ ಬಳಿಯ ಮನೆಯಲ್ಲಿ ನಡೆದಿದೆ.


 ಗುರುದೇವ ಕಾಲೇಜಿನ ಬಳಿ ಇರುವ ಮನೆಯಲ್ಲಿ ವಾಸವಾಗಿರುವ ಶ್ರೀಮತಿ ಗೀತಾ ಎಂಬವರ ಮಗ ಪುನೀತ್ ಎಸ್.ಟಿ  (21) ಎಂಬಾತನು 3 ನೇ ವರ್ಷದ  ಬಿ.ಎಸ್.ಸಿ  ನಲ್ಲಿ ವಿಧ್ಯಾಭ್ಯಾಸ ಮಾಡಿಕೊಂಡಿದ್ದು ಸೆ 4 ರಂದು ಗೀತಾ ಅವರ ಮಗಳು ರಂಜಿತಾಳು ಬೆಳಿಗ್ಗೆ 7.45 ಗಂಟೆಗೆ ಕಾಲೇಜಿಗೆ ತೆರಳಿದ್ದು ಆ ಸಮಯ ಮನೆಯಲ್ಲಿ ಪುನೀತ್ ಎಸ್.ಟಿ ಎಂಬಾತನು ಒಬ್ಬನೇ ಇದ್ದು ತಾಯಿ ಸಕಲೇಶಪುರದಿಂದ ಮಧ್ಯಾಹ್ನ  3 ಗಂಟೆಗೆ ಬಂದು  ಮನೆಯ ಬೀಗ ತೆಗೆದು  ಒಳ ಹೋಗಿ ನೋಡಲಾಗಿ  ಅವರ ಮಗ ಮನೆಯ ಹಾಲ್ ನಲ್ಲಿರುವ ಬೇಡ್ ಮೇಲೆ ಒಂದು ಪತ್ರ ಬರೆದಿಟ್ಟು ಮನೆಯಲ್ಲಿ ಯಾರಿಗೂ ಹೆಳದೇ ಹೋಗಿದ್ದು ಆತನು ಮನೆಯಿಂದ ಹೋಗುವಾಗ ಆತನನ್ನು ನೆರೆ ಮನೆಯ ಗಿರಿಜಾ ಎಂಬುವವರು 12:30 ಗಂಟೆಗೆ ನೋಡಿದ್ದು ಆ ಬಳಿಕ ಆತನ ಬಗ್ಗೆ ಗೀತಾ ತಮ್ಮ ಗಂಡ ಮತ್ತು ಕುಟುಂಬದವರ ಬಳಿ ವಿಚಾರಿಸಿದಲ್ಲಿ ಇವರೇಗೆ ಪತ್ತೆಯಾಗದೇ ಇದ್ದು ಕಾಣೆಯಾದ ತಮ್ಮ ಮಗ ಪುನೀತ್ ಎಸ್.ಟಿ ಎಂಬಾತನನ್ನು ಪತ್ತೆ ಮಾಡಿಕೊಡಬೇಕಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಮ್ಮವರು ಇರಬಹುದು ಮೆಲ್ಲನೆ ಅಗೆಯಿರಿ: ಯುವಕನ ಮನಮಿಡಿಯುವ ಮನವಿಗೆ ಹಿಟಾಚಿ ಚಾಲಕ ಭಾವುಕ

Posted by Vidyamaana on 2024-08-07 06:59:20 |

Share: | | | | |


ನಮ್ಮವರು ಇರಬಹುದು ಮೆಲ್ಲನೆ ಅಗೆಯಿರಿ: ಯುವಕನ ಮನಮಿಡಿಯುವ ಮನವಿಗೆ ಹಿಟಾಚಿ ಚಾಲಕ ಭಾವುಕ

ವಯನಾಡ್: ಭೂಕುಸಿತದಿಂದಾಗಿ ಮಣ್ಣಿನಡಿ ಸಿಲುಕಿದ ದೇಹಗಳನ್ನು ಹೊರತೆಗೆಯುವ ಕಾರ್ಯದಲ್ಲಿ ತೊಡಗಿರುವವರ ತಂಡ ಅಲ್ಲಿನ ಮನಕಲಕುವ ಅನುಭವಗಳನ್ನು ತೆರೆದಿಟ್ಟಿದ್ದಾರೆ. ಮಣ್ಣಿನಡಿ ಏನಿದೆ ಎಂದು ತಿಳಿಯದ ಕಾರಣ ಹಿಟಾಚಿ ಸೇರಿದಂತೆ ಇತರ ಯಂತ್ರಗಳನ್ನು ಎಚ್ಚರಿಕೆಯಿಂದ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ.

Recent News


Leave a Comment: