Posted by vidyamaana on 2024-07-24 23:15:54 |
ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.
ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.
ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
Posted by Vidyamaana on 2023-09-28 20:36:20 |
ಮಥುರಾ: ಸೆ 28: ರೈಲೊಂದು ತಡರಾತ್ರಿ ಟ್ರ್ಯಾಕ್ ಬಿಟ್ಟು ಪ್ಲಾಟ್ಫಾರ್ಮ್ಗೆ ನುಗ್ಗಿದ ಘಟನೆ ಉತ್ತರ ಪ್ರದೇಶದ ಮಥುರಾ ರೈಲು ನಿಲ್ದಾಣದಲ್ಲಿ ನಡೆದಿದೆ.ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ ರೈಲೊಂದು ಏಕಾಏಕಿ ಪ್ಲಾಟ್ಫಾರ್ಮ್ಗೆ ನುಗ್ಗಿದ ಘಟನೆ ಮಥುರಾ ಜಂಕ್ಷನ್ನಲ್ಲಿ ತಡರಾತ್ರಿ ನಡೆದಿದೆ.ರೈಲು ಶಕುರ್ ಬಸ್ತಿಯಿಂದ ಮಂಗಳವಾರ ರಾತ್ರಿ 10:49ಕ್ಕೆ ಮಥುರಾ ನಿಲ್ದಾಣಕ್ಕೆ ಬಂದಿದ್ದು, ಎಲ್ಲಾ ಪ್ರಯಾಣಿಕರು ರೈಲಿನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಇದ್ದಕ್ಕಿದ್ದಂತೆ ರೈಲು ಪ್ಲಾಟ್ಫಾರ್ಮ್ಗೆ ನುಗ್ಗಿದೆ. ಈ ವೇಳೆ ತಕ್ಷಣ ಪ್ರಯಾಣಿಕರು ರೈಲಿನಿಂದ ಇಳಿದಿದ್ದರಿಂದ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.ಇನ್ನು ಘಟನೆ ಸಂಬಂಧ ಪ್ರತಿಕ್ರಿಯಿಸಿದ ಮಥುರಾ ರೈಲು ನಿಲ್ದಾಣದ ನಿರ್ದೇಶಕ ಎಸ್.ಕೆ ಶ್ರೀವಾಸ್ತವ, "ಮಹಿಳೆಯೊಬ್ಬರು ವಿದ್ಯುತ್ ಆಘಾತಕ್ಕೆ ಒಳಗಾಗಿದ್ದಾರೆ. ಇದನ್ನು ಬಿಟ್ಟರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದೇವೆ. ಇತರೆ ರೈಲುಗಳ ಸಂಚಾರಕ್ಕೆ ಅಡಚಣೆ ಆಗಿದೆ" ಎಂದು ತಿಳಿಸಿದ್ದಾರೆ ಅಂತಾ ಪಿಟಿಐ ವರದಿ ಮಾಡಿದೆ. ಮತ್ತೊಂದೆಡೆ ರೈಲು ಅಪಘಾತದ ವಿಡಿಯೋ ಎನ್ಎನ್ಐ ಟ್ವೀಟ್ನಲ್ಲಿ ಹಂಚಿಕೆಯಾಗಿದೆ.
ಮಹಿಳೆಗೆ ಸಣ್ಣಪುಟ್ಟ ಗಾಯ
ಮಥುರಾ ಜಂಕ್ಷನ್ ರೈಲು ನಿಲ್ದಾಣದಲ್ಲಿ ಸ್ಥಳೀಯ ರೈಲು ಪ್ಲಾಟ್ಫಾರ್ಮ್ಗೆ ಹತ್ತಿದ ಪರಿಣಾಮ ಝಾನ್ಸಿ ಮೂಲದ ಉಷಾದೇವಿ (39) ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಆಕೆಯನ್ನು ಝಾನ್ಸಿಗೆ ಕಳುಹಿಸಲಾಯಿತು ಎಂದು ಹೇಳಿದರು. ಅಲ್ಲದೆ ಈ ಕುರಿತು ಉನ್ನತ ಮಟ್ಟದ ತನಿಖೆಗೆ ರೈಲ್ವೇ ಇಲಾಖೆ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.ಆಗ್ರಾ ವಿಭಾಗದ ಅಧಿಕಾರಿಯ ಪ್ರಕಾರ, ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ ರೈಲು ಮಂಗಳವಾರ ರಾತ್ರಿ 10.50ಕ್ಕೆ ಶಕುರ್ ಬಸ್ತಿಯಿಂದ ಪ್ಲಾಟ್ಫಾರ್ಮ್ 2ಎಗೆ ಆಗಮಿಸಿತು. ಸಿಬ್ಬಂದಿ ಸೇರಿದಂತೆ ಎಲ್ಲಾ ಪ್ರಯಾಣಿಕರು ಡಿಬೋರ್ಡ್ ಮಾಡಿದ ನಂತರ, ರೈಲು ಹಳಿ ತಪ್ಪಿದೆ. ನಂತರ ನಿಲ್ದಾಣಕ್ಕೆ ಬರುವ ಮೊದಲು ರೈಲು ಪ್ಲಾಟ್ಫಾರ್ಮ್ಗೆ ನುಗ್ಗಿತು ಎನ್ನುವ ಮಾಹಿತಿಯನ್ನು ನೀಡಿದ್ದಾರೆ. ಇನ್ನು 2ಎ ಹೊರತುಪಡಿಸಿ ಎಲ್ಲಾ ಪ್ಲಾಟ್ಫಾರ್ಮ್ಗಳಲ್ಲಿ ರೈಲುಗಳ ಸಂಚಾರ ಸಾಮಾನ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
Posted by Vidyamaana on 2024-02-21 07:25:10 |
ವಿರುಷ್ಕಾ ದಂಪತಿ ಪುತ್ರ ‘ಅಕಾಯ್’ ಹೆಸರಿನ ಅರ್ಥವೇನು ಗೊತ್ತಾ?
ಮುಂಬೈ: ಟೀಂ ಇಂಡಿಯಾ (Team India) ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಅವರ ಮನೆಗೆ ಮತ್ತೊಬ್ಬ ಅತಿಥಿಯ ಆಗಮನವಾಗಿದೆ. ಬಾಲಿವುಡ್ ನಟಿ, ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ (Anushka Sharma) ಗಂಡು ಮಗುವಿಗೆ (Boy Baby) ಜನ್ಮ ನೀಡಿದ್ದಾರೆ.
ಅನುಷ್ಕಾ ಶರ್ಮಾ ಅವರು ಇನ್ಸ್ಟಾಗ್ರಾಮ್ನಲ್ಲಿ (Instagram) ಅಭಿಮಾನಿಗಳ ಜೊತೆ ಸಿಹಿಸುದ್ದಿ ಹಂಚಿಕೊಂಡಿದ್ದಾರೆ. ಫೆ.15 ರಂದು ವಿರುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ಮಂಗಳವಾರ (ಫೆ.20) ಹಂಚಿಕೊಂಡಿದ್ದಾರೆ. ವಮಿಕಾಳ ತಮ್ಮನನ್ನು ಈ ಜಗತ್ತಿಗೆ ಸ್ವಾಗತಿಸಿದ್ದೇವೆ ಎಂದು ಎಲ್ಲರಿಗೂ ತಿಳಿಸಲು ಸಂತೋಷವಾಗುತ್ತಿದೆ. ಈ ಸಂತಸದ ಸಮಯದಲ್ಲಿ ನಿಮ್ಮ ಆಶೀರ್ವಾದ ಮತ್ತು ಶುಭಹಾರೈಕೆಗಳನ್ನು ಬಯಸುತ್ತೇವೆ. ಈ ಸಮಯದಲ್ಲಿ ನಮ್ಮ ಗೌಪತ್ಯೆಯನ್ನು ಗೌರವಿಸಲು ವಿನಂತಿಸುತ್ತೇನೆ ಎಂದು ನಟಿ ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಮಗುವಿಗೆ ಈಗಾಗಲೇ ‘ಅಕಾಯ್’ ಎಂದು ಹೆಸರಿಟ್ಟಿದ್ದಾರೆ. ಕೊಹ್ಲಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.
ರಾಜ್ಕೋಟ್ನಲ್ಲಿ ಇಂಗ್ಲೆಂಡ್-ಭಾರತ ಟೆಸ್ಟ್ ಸರಣಿ ನಡೆಯುತ್ತಿದೆ. ಐದು ಸರಣಿಯಲ್ಲಿ ಈಗಾಗಲೇ ಮೂರು ಪಂದ್ಯಗಳು ನಡೆದಿವೆ. ಭಾರತ 3-2 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸರಣಿ ಕೈವಶಕ್ಕೆ ಇನ್ನೊಂದೇ ಹೆಜ್ಜೆ ಬಾಕಿಯಿದೆ. ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ.
ಅಕಾಯ್ ಅಂದ್ರೇನು: ವಿರುಷ್ಕಾ ದಂಪತಿ ಮಗುವಿನ ಹೆಸರು ‘ಅಕಾಯ್’ ಅಕಾಯ್’ (Akaay) ಎಂಬ ವಿಶಿಷ್ಟ ಮತ್ತು ವಿಶೇಷ ಹೆಸರಿನ ಸುತ್ತ ಈಗ ಚರ್ಚೆ ನಡೆಯುತ್ತಿದೆ. ಅಕಾಯ್ ಎಂಬುದು ಹಿಂದಿ ಪದ ‘ಕಾಯ’ದಿಂದ ಬಂದಿದೆ. ಇದರ ಅರ್ಥ ‘ದೇಹ’. ಅಕಾಯ್ ಎಂದರೆ, ದೈಹಿಕ ಶಕ್ತಿಗಿಂತ ಮಿಗಿಲಾದವನು. ಟರ್ಕಿಶ್ ಮೂಲದಲ್ಲಿ, ‘ಅಕಾಯ್’ ಪದಕ್ಕೆ ‘ಹೊಳೆಯುವ ಚಂದ್ರ’ ಎಂದರ್ಥ.ಮಗುವಿಗೆ ಹೆಸರಿಡಲು ಯಾವ ಮೂಲದಿಂದ ಈ ಪದವನ್ನು ತೆಗೆದುಕೊಳ್ಳಲಾಗಿದೆ ಎಂಬುದನ್ನು ವಿರುಷ್ಕಾ ದಂಪತಿ ಇನ್ನೂ ಖಚಿತಪಡಿಸಿಲ್ಲ. ವಿರಾಟ್ ದಂಪತಿ ಮಗುವಿನ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿದ್ದಂತೆ ಅಭಿಮಾನಿಗಳು, ಸೆಲೆಬ್ರಿಟಿಗಳು, ಕ್ರಿಕೆಟ್ ತಾರೆಯರು ಶುಭಹಾರೈಸಿದ್ದಾರೆ.
Posted by Vidyamaana on 2023-09-29 11:28:59 |
ಪುತ್ತೂರು : ತೋಡಾರು ಶಂಸುಲ್ ಉಲಮಾ ಅರಬಿಕ್ ಕಾಲೇಜಿನ ಸಂತತಿ ಬಪ್ಪಳಿಗೆ ನೂರುಲ್ ಹುದಾ ಮದ್ರಸದ ಹಳೆ ವಿದ್ಯಾರ್ಥಿ ಪಟ್ಟಿಕ್ಕಾಡ್ ಜಾಮಿಆಃ ನೂರಿಯದಲ್ಲಿ 2022 ನೇ ಸಾಲಿನ ಫಿಕ್ಹ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಫೈಝಿ ಅಲ್ ಮಅಬರಿ ಪದವಿ ಪಡೆದ ಮುಹಮ್ಮದ್ ಶಫೀಕ್ ರನ್ನು ಬಪ್ಪಳಿಗೆಯಲ್ಲಿ ನಡೆದ ಮೀಲಾದ್ ಸಮಾರಂಭದಲ್ಲಿ ಅದ್ದೂರಿಯಾಗಿ ಸನ್ಮಾನಿಸಲಾಯಿತು.
ಸ್ಥಳೀಯ ಸಾಮಾಜಿಕ ಸೇವಾ ಸಂಘಟನೆಯಾದ *BGF ಬಪ್ಪಳಿಗೆ ಗ್ಲೋಬಲ್ ಫ್ರೆಂಡ್ಸ್* ಈ ಸನ್ಮಾನವನ್ನು ಜಮಾಅತರ ಪರವಾಗಿ, ಮಸೀದಿ ವಠಾರದಲ್ಲಿ ನಡೆದ ಮೀಲಾದ್ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿತ್ತು.
ಶಾಲು ಹೊದಿಸಿ,ಐದು ಸಾವಿರ ರೂಪಾಯಿಯನ್ನೊಳಗೊಂಡ ನಗದು, ಸನ್ಮಾನ ಫಲಕ ಹಾಗೂ ಅಮೂಲ್ಯ ಗ್ರಂಥಗಳನ್ನು ನೀಡಿ ಯುವ ವಿದ್ವಾಂಸನನ್ನು ಸಂಘಟಕರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಜಮಾಅತ್ ಸಮಿತಿ ಪದಾಧಿಕಾರಿಗಳು, ಅನ್ಸಾರುಲ್ ಇಸ್ಲಾಂ ಯುವಕ ಸಮಿತಿ ಕಾರ್ಯಕರ್ತರು, ಬಪ್ಪಳಿಗೆ ಈದ್ ಮಿಲಾದ್ ಸಮಿತಿಯ ಸಾರಥಿಗಳು, ಮಸೀದಿ ಮದ್ರಸದ ಉಸ್ತಾದರು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು.
ಹಿರಿಯ ವಿದ್ವಾಂಸರಾಗಿದ್ದ ಮರ್ಹೂಂ ಅಬ್ದುಲ್ ಖಾದಿರ್ ಫೈಝಿ ಬಪ್ಪಳಿಗೆ ಹಾಗೂ ಝೈನಬ ದಂಪತಿಗಳ ಗಂಡು ಮಕ್ಕಳಲ್ಲಿ ಕಿರಿಯವರೇ ಮುಹಮ್ಮದ್ ಶಫೀಕ್.
ಮಕ್ಕಳಿಗೆ ಬೇಕಾದ ಧಾರ್ಮಿಕ ಮತ್ತು ಲೌಕಿಕ ವಿದ್ಯಾಭ್ಯಾಸಗಳೆರಡನ್ನೂ ನೀಡಿ ಜೀವನದ ಉತ್ತಮ ದಾರಿಯನ್ನು ಕಂಡುಕೊಳ್ಳುವಲ್ಲಿ ಮಕ್ಕಳಿಗೆ ಸರಿಯಾದ ದಾರಿ ತೋರುವಲ್ಲಿ ಮರ್ಹೂಂ ಅಬ್ದುಲ್ ಖಾದರ್ ಫೈಝಿ ಉಸ್ತಾದರು ಯಶಸ್ವಿಯಾಗಿದ್ದಾರೆ.ಗಂಡು ಮಕ್ಕಳ ಪೈಕಿ ಮೂರು ಮಂದಿ ವಿದೇಶ ಉದ್ಯೋಗದಲ್ಲಿದ್ದು ಕಿರಿಯ ಮಗನಾದ ಶಫೀಕ್ ನನ್ನು ಓರ್ವ ಧಾರ್ಮಿಕ ವಿದ್ವಾಂಸ(ಆಲಿಂ)ನನ್ನಾಗಿ ಮಾಡಬೇಕೆಂದು ನನ್ನ ಆಸೆ ಎಂದು ಬಪ್ಪಳಿಗೆ ಮದ್ರಸದ ಒಂದನೇ ತರಗತಿಗೆ ದಾಖಲು ಮಾಡುವಾಗ ಹೇಳಿದ್ದರು.
ಮದ್ರಸದ ಒಂದನೇ ತರಗತಿಯಲ್ಲಿ ಆತೂರು ಕುದ್ಲೂರಿನ ನಝೀರ್ ಮದನಿ ಉಸ್ತಾದರು ಅಧ್ಯಾಪಕರಾಗಿದ್ದು, ಒಂದನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ
ತ್ರಪ್ತಿ ದಾಯಕ ಅಂಕಗಳು ಶಫೀಕ್ ಪಡೆದಿಲ್ಲ ಎಂಬ ಮಾಹಿತಿಯನ್ನು ಅವರು ಅಂದು ಮದ್ರಸಾ ಮುಖ್ಯೋಪಾಧ್ಯಾಯರಾಗಿದ್ದ ನನ್ನ ಗಮನಕ್ಕೆ ತಂದಾಗ ಮರ್ಹೂಂ ಫೈಝಿ ಉಸ್ತಾದರಿಗೆ ಈ ಮಾಹಿತಿಯನ್ನು ನಾನು ತಿಳಿಸಿ,ಇನ್ನೊಂದು ವರ್ಷ ಒಂದನೇ ತರಗತಿಯಲ್ಲೇ ಕಲಿಯುವುದಾದರೆ ಮುಂದಿನ ಭವಿಷ್ಯ ಒಳ್ಳೆಯ ದಾಗಲಿದೆ ಎಂದಾಗ ,ಅವನ ಹಿತಕ್ಕಾಗಿ ನೀವು ಕೈಗೊಳ್ಳುವ ಎಲ್ಲಾ ಕ್ರಮಗಳಿಗೆ ನಾನು ಬದ್ಧ ಎಂದರು.
ಅಲ್ಲಿಂದ ಮತ್ತೆ ಪ್ರಾರಂಭವಾಯಿತು,ಶಫೀಕನ ಕಲಿಕೆಯ ಛಲ.ಮುಂದಿನ ಎಲ್ಲಾ ತರಗತಿಗಳಲ್ಲೂ ಪ್ರಥಮನಾಗಿ,ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ರೇಂಜ್ ಮಟ್ಟದಲ್ಲಿಯೇ ಉನ್ನತ ಸಾಧನೆಗೈದು, ಉತ್ತಮ ನಡವಳಿಕೆಯ ವಿದ್ಯಾರ್ಥಿ ಯಾಗಿ ಗುರುಹಿರಿಯರ ಸಂಪೂರ್ಣ ತೃಪ್ತಿ ಗಳಿಸಿದ್ದ.
ಹತ್ತನೇ ತರಗತಿಯ ಬಳಿಕ ತಂದೆಯ ಅಭಿಲಾಷೆಯಂತೆ ಜಾಮಿಆಃ ನೂರಿಯಾದ ಸಂತತಿಯಾಗಿ ,ಧರ್ಮ ಪ್ರಬೋಧನೆಯ ಕುಡಿಯಾಗಬೇಕೆಂದು ಪ್ರತಿಷ್ಠಿತ ತೋಡಾರು ಶಂಸುಲ್ ಉಲಮಾ ಅರಬಿಕ್ ಕಾಲೇಜಿನಲ್ಲಿ ಪ್ರವೇಶಾತಿ ಪಡೆದ.(ವಿದ್ಯಾರ್ಥಿಯಾಗಿದ್ದ ಈ ಮಗನೇ ತಂದೆಯ ಜನಾಝ ನಮಾಝಿಗೆ ನೇತ್ರತ್ವವನ್ನು ನೀಡಿದ್ದರು.)ಕಾಲೇಜಿನ ಅಧ್ಯಯನ ವರ್ಷಗಳನ್ನು
ಪ್ರತಿಭಾನ್ವಿತನಾಗಿ ಪೂರೈಸಿ, ಜಾಮಿಆಃ ನೂರಿಯಾದಲ್ಲಿ ಸೇರಿ, ಅಧ್ಯಯನಕ್ಕೆ ಫಿಖ್ಹ್ ವಿಭಾಗವನ್ನು ಆಯ್ಕೆ ಮಾಡಿ,ಅಂತಿಮ ಪರೀಕ್ಷೆಯಲ್ಲಿ ಘಟಾನುಘಟಿ ವಿದ್ಯಾರ್ಥಿ ಗಳೆಡೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮಹ್ಬರಿ ಫೈಝಿ ಪಟ್ಟ ಅಲಂಕರಿಸಿ ಬಪ್ಪಳಿಗೆಗೆ ಕೀರ್ತಿ ತಂದ ಶಫೀಕ ರನ್ನು ಅಭಿನಂದಿಸಿ ಈ ಸನ್ಮಾನವನ್ನು ನೀಡಲಾಯಿತು.
ಪ್ರಸ್ತುತ ಶಫೀಕ್ ಫೈಝಿಯವರು ಕಿನ್ಯದ ವಾದೀ ತೈಬ ಅಕಾಡೆಮಿಯಲ್ಲಿ ಮುದರ್ರಿಸರಾಗಿ ಸೇವೆ ಸಲ್ಲಿಸುತ್ತಿದ್ದು,ಮುಂದಿನ ಜೀವನ ಇನ್ನಷ್ಟು ಬೆಳಗಿ ಅವರ ವಿದ್ವತ್ ಸಂಪತ್ತು ಸಮುದಾಯಕ್ಕೆ ಬೆಳಕಾಗಲಿ...ಆಮೀನ್
Posted by Vidyamaana on 2023-07-30 23:17:54 |
ಮಂಗಳೂರು: ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ನಗರದ ಪಡೀಲ್ ಅಳಪೆ ಪಡ್ಡು ಬಳಿ ನಡೆದಿದೆ.
ಅಳಪೆ ಪಡ್ಡುರೆಂಜ ನಿವಾಸಿ ವರುಣ್ (27) ಮತ್ತು ಎಕ್ಕೂರು ಕೆಎಚ್ಬಿ ಕಾಲನಿ ನಿವಾಸಿ ವೀಕ್ಷಿತ್ (28) ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ.
ಇಂದು ಸಂಜೆ 5 ಗಂಟೆಯ ವೇಳೆ 6 ಮಂದಿ ಗೆಳೆಯರು ಒಟ್ಟಾಗಿ ಕ್ರಿಕೆಟ್ ಆಡಲು ತೆರಳಿದ್ದರು. ಈ ಸಂದರ್ಭ ವರುಣ್ ಮತ್ತು ವೀಕ್ಷಿತ್ ರೈಲ್ವೆಯ ಟ್ರಾಕ್ ಪಕ್ಕದ ಹಳ್ಳದ ದಡದಲ್ಲೇ ಕುಳಿತಿದ್ದರು.
ಹಳ್ಳದ ದಡದಲ್ಲಿ ಕುಳಿತಿದ್ದ ಸಂದರ್ಭ ವರುಣ್ ನೀರಿಗೆ ಬಿದ್ದಿದ್ದು, ಇದನ್ನು ನೋಡಿದ ವೀಕ್ಷಿತ್ ಕೂಡಲೇ ಹಳ್ಳಕ್ಕೆ ಅವರನ್ನು ರಕ್ಷಿಸಲು ಧುಮಿಕಿದರು. ಆದರೆ ಹಳ್ಳದಲ್ಲಿ ಹೂಳು ತುಂಬಿದ ಕಾರಣ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ. ತೀವ್ರ ಹುಡುಕಾಟದ ಬಳಿಕ ಮೃತದೇಹ ವನ್ನು ಹೊರತೆಗೆಯಲಾಗಿದೆ.
Posted by Vidyamaana on 2023-12-28 14:08:13 |
ನವದೆಹಲಿ : ನಕಲಿ ಲೋನ್ ಅಪ್ಲಿಕೇಶನ್ಗಳು ಮತ್ತು ಬೆಟ್ಟಿಂಗ್ ಅಪ್ಲಿಕೇಶನ್ಗಳ ವಿರುದ್ಧ ಸರ್ಕಾರ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ಆಯಪ್ಗಳನ್ನ ನಿಷೇಧಿಸಲಾಗುತ್ತಿದೆ. ಮಂಗಳವಾರ, ಸಚಿವಾಲಯವು ಅಕ್ರಮ ಸಾಲ ಅಪ್ಲಿಕೇಶನ್ಗಳು ಮತ್ತು ಬೆಟ್ಟಿಂಗ್ ಅಪ್ಲಿಕೇಶನ್ಗಳನ್ನ ತೆಗೆದುಹಾಕಲು ಸೂಚನೆಗಳನ್ನ ನೀಡಿದೆ.ನಕಲಿ ಸಾಲ ಅಪ್ಲಿಕೇಶನ್ಗಳ ಜಾಹೀರಾತುಗಳನ್ನ ತಡೆಗಟ್ಟಲು ನಾವು ಕೆಲಸ ಮಾಡುತ್ತಿದ್ದೇವೆ ಎಂದು ಕೇಂದ್ರ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಅನೇಕ ಪ್ಲಾಟ್ ಫಾರ್ಮ್ಗಳಲ್ಲಿ ಇಂತಹ ನಕಲಿ ಸಾಲ ಅಪ್ಲಿಕೇಶನ್ಗಳ ಜಾಹೀರಾತುಗಳಿವೆ.
ಕೆವೈಸಿ ಪ್ರಕ್ರಿಯೆಯನ್ನು ಬ್ಯಾಂಕುಗಳಿಗೆ ಹೆಚ್ಚು ಸಮಗ್ರಗೊಳಿಸುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು RBI ಒತ್ತಾಯಿಸಿದೆ. ಈ ಪ್ರಸ್ತಾವಿತ KYC ಪ್ರಕ್ರಿಯೆಗೆ ನೋ ಯುವರ್ ಡಿಜಿಟಲ್ ಫೈನಾನ್ಸ್ ಆಯಪ್ (KYDFA) ಎಂದು ಹೆಸರಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ, ನಕಲಿ ಸಾಲ ಅಪ್ಲಿಕೇಶನ್ಗಳ ಜಾಲವು ಸಾಕಷ್ಟು ಹರಡಿದೆ. ಇಂತಹ ಆಯಪ್ಗಳಿಗೆ ಬಲಿಯಾಗುವ ಜನರು ಸಾಲದ ಸುಳಿಯಲ್ಲಿ ಸಿಲುಕುವುದು ಮಾತ್ರವಲ್ಲ, ಅನೇಕ ಸಂದರ್ಭಗಳಲ್ಲಿ ಸಂತ್ರಸ್ತರು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ. ಈ ವಿಷಯವು ದೀರ್ಘಕಾಲದಿಂದ ಚರ್ಚೆಯಲ್ಲಿದೆ ಮತ್ತುಇಲ್ಲಿಯವರೆಗೆ ಸರ್ಕಾರವು ಅಂತಹ ಎಲ್ಲಾ ಅಪ್ಲಿಕೇಶನ್ಗಳನ್ನು ನಿಷೇಧಿಸಿದೆ.
ಆದಾಗ್ಯೂ, ಈ ಅಪ್ಲಿಕೇಶನ್ಗಳು ಒಂದಲ್ಲ ಒಂದು ರೂಪದಲ್ಲಿ ಹೊಸ ಹೆಸರಿನೊಂದಿಗೆ ಹಿಂತಿರುಗುತ್ತವೆ. ಅಂತಹ ಅಪ್ಲಿಕೇಶನ್ಗಳಲ್ಲಿ, ಮೊದಲನೆಯದಾಗಿ, ಗ್ರಾಹಕರಿಗೆ ಒಂದು ಕ್ಲಿಕ್ ಮತ್ತು ದಾಖಲೆಗಳಿಲ್ಲದೆ ಸಾಲವನ್ನ ನೀಡಲಾಗುತ್ತದೆ. ಅನೇಕ ಜನರು ಈ ರೀತಿಯ ಸಾಲದ ಬಲೆಗೆ ಬೀಳುತ್ತಾರೆ, ಆದರೆ ಈ ಲೋನ್ ಅಪ್ಲಿಕೇಶನ್ಗಳು ಸ್ಪೈವೇರ್ನಂತೆ ಕಾರ್ಯನಿರ್ವಹಿಸುತ್ತವೆ.
ಜನರು ಹೇಗೆ ಸಿಕ್ಕಿಹಾಕಿಕೊಳ್ಳುತ್ತಾರೆ.?
ಈ ಅಪ್ಲಿಕೇಶನ್ಗಳನ್ನು ಡೌನ್ಲೋಡ್ ಮಾಡಿದ ತಕ್ಷಣ, ಸಾಲ ನೀಡುಗರು ಬಳಕೆದಾರರ ಎಲ್ಲಾ ಫೋಟೋಗಳು ಮತ್ತು ಸಂಪರ್ಕ ವಿವರಗಳಿಗೆ ಪ್ರವೇಶವನ್ನ ಪಡೆಯುತ್ತಾರೆ. ನಂತರ ಅವರ ನಿಜವಾದ ಆಟವು ಸಾಲ ವಸೂಲಾತಿ ಹೆಸರಿನಲ್ಲಿ ಪ್ರಾರಂಭವಾಗುತ್ತದೆ. ಈ ನಕಲಿ ಅಪ್ಲಿಕೇಶನ್ಗಳು ಸಾಧ್ಯವಾದಷ್ಟು ಬೇಗ ಸಾಲವನ್ನು ಪಾವತಿಸುವಂತೆ ಸಂತ್ರಸ್ತರ ಮೇಲೆ ನಿರಂತರವಾಗಿ ಒತ್ತಡಹೇರುತ್ತವೆ. ಅನೇಕ ಬಾರಿ ಅವರ ಫೋಟೋಗಳನ್ನು ಮಾರ್ಫಿಂಗ್ ಮಾಡಲಾಗುತ್ತದೆ ಮತ್ತು ವೈರಲ್ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತದೆ.
Posted by Vidyamaana on 2024-02-12 21:57:25 |
ಪುತ್ತೂರು : ಜಾಗದ ವಿಚಾರದಲ್ಲಿ ತಕರಾರು ನಡೆದು ಮಹಿಳೆಗೆ ಹಲ್ಲೆ ನಡೆಸಿದ ಘಟನೆ ಕೆದಿಲದಲ್ಲಿ ನಡೆದಿದ್ದು, ಗಾಯಗೊಂಡ ಮಹಿಳೆಯ ಮನೆಗೆ ಬಿಜೆಪಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ ನೀಡಿದರು.ಮನೆಯವರ ಜೊತೆ ಮಾತನಾಡಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಸಹಜ್ ರೈ ಬಳಜ್ಜ, ನಾಗರಾಜ್ ನಡುವಡ್ಕ ಹಾಗೂ ಮತ್ತಿತರರು ಉಪಸ್ಥಿತರಿದ್ದರು