ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ವಿಟ್ಲ ಯುವಕನ ಮೇಲೆ ಹಲ್ಲೆ ಪ್ರಕರಣ: ದೂರು-ಪ್ರತಿದೂರು ದಾಖಲು

Posted by Vidyamaana on 2024-04-03 12:03:39 |

Share: | | | | |


ವಿಟ್ಲ  ಯುವಕನ ಮೇಲೆ ಹಲ್ಲೆ ಪ್ರಕರಣ: ದೂರು-ಪ್ರತಿದೂರು ದಾಖಲು

ವಿಟ್ಲ: ಅಡ್ಯನಡ್ಕ ಸಮೀಪದ ನಡೆದ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.

ಅಡ್ಯನಡ್ಕ ನಿವಾಸಿ ಮಹಮ್ಮದ್ ಅಲಿ ಎ (36)ಎಂಬವರ ದೂರಿನಂತೆ ಮಧ್ಯಾಹ್ನ, ಗಣೇಶ್ ಎಂಬಾತನು ಮನೆಯ ಬಳಿಗೆ ಬಂದು ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ತಕರಾರು ತೆಗೆದು, ಅವ್ಯಾಚವಾಗಿ ಬೈದು, ತಾನು ತಂದಿದ್ದ ಕತ್ತಿಯಿಂದ ಹಲ್ಲೆ ನಡೆಸಿರುತ್ತಾನೆ. ಈ ವೇಳೆ ಸ್ಥಳೀಯರು ಬರುವುದನ್ನು ಕಂಡು ಆರೋಪಿಯು ಜೀವ ಬೆದರಿಕೆ ಹಾಕಿ ಪರಾರಿಯಾಗಿರುತ್ತಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಇಂದಿನಿಂದ ರಾಜ್ಯದಲ್ಲಿ ಹೊಸ ರೂಲ್ಸ್ ಜಾರಿ

Posted by Vidyamaana on 2023-08-01 01:58:11 |

Share: | | | | |


ಇಂದಿನಿಂದ ರಾಜ್ಯದಲ್ಲಿ ಹೊಸ ರೂಲ್ಸ್ ಜಾರಿ

ಬೆಂಗಳೂರು : ಆಗಸ್ಟ್.1ರ ಇಂದಿನಿಂದ ಹಲವು ಹೊಸ ನಿಯಮಗಳು ಜಾರಿಗೊಳ್ಳಲಿದ್ದಾವೆ. ಜನಜೀವನದ ಮೇಲೆ ಪರಿಣಾಮ ಬೀರುವ ಸರ್ಕಾರದ ಒಂದಷ್ಟು ತೀರ್ಮಾನಗಳು ಇಂದಿನಿಂದ ಜಾರಿಗೆ ಬರಲಿದ್ದಾರೆ. ಕೆಲವು ತೀರ್ಮಾನ ಸಮಾಧಾನ ತಂದರೇ, ಮತ್ತೆ ಕೆಲವು ಬಿಸಿ ಮುಟ್ಟಿಸಲಿವೆ. ಹೊಸ ಸರ್ಕಾರದ ಗೃಹ ಜ್ಯೋತಿಯ ಅನುಭವ, ಆಗಸ್ಟ್ ತಿಂಗಳ ಇಂದಿನಿಂದ ಜನಸಾಮಾನ್ಯರ ಅರಿವಿಗೆ ಬರಲಿದೆಹಾಗಾದ್ರೇ ಇಂದಿನಿಂದ ಹೊಸ ನಿಯಮಗಳೇನು? ಎನ್ನುವ ಬಗ್ಗೆ ಮುಂದೆ ಓದಿ.


ಇಂದಿನಿಂದ ವಿವಿಧ ನಿಯಮಗಳಲ್ಲಿ ಬದಲಾವಣೆಯಾಗಲಿವೆ. ಹಲವು ದುಬಾರಿಯಾದ್ರೇ, ಮತ್ತೆ ಕೆಲವು ಖುಷಿ ನೀಡುವಂತ ಸಂಗತಿಗಳು ಇದ್ದಾವೆ. ಆದಾಯ ತೆರಿಗೆ ಪಾವತಿಯ ಗಡುವು ಮುಕ್ತಾಯಗೊಂಡಿದೆ. ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಕರೆಂಟ್ ಫ್ರೀ ಆಗಲಿದೆ.

ವಿದ್ಯುತ್ ಉಚಿತ

ಆಗಸ್ಟ್ 1ರಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆಮಾಡಿದಂತೆ ಜೂನ್.18ರಿಂದ ಜುಲೈ.27ರ ಒಳಗಾಗಿ ನೋಂದಾಯಿಸಿಕೊಂಡಂತ ಗ್ರಾಹಕರಿಗೆ ವಿದ್ಯುತ್ ಉಚಿತವಾಗಲಿದೆ. 200 ಯೂನಿಟ್ ವರೆಗೆ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಉಚಿತ ವಿದ್ಯುತ್ ಸೌಲಭ್ಯ ದೊರೆಯಲಿದೆ.

ಶೇ.10ರಷ್ಟು ಹೋಟೆಲ್ ತಿನಿಸಿ ದುಬಾರಿ

ದಿನೇ ದಿನೇ ಹೆಚ್ಚಳವಾಗುತ್ತಿರುವಂತ ಅಗತ್ಯ ವಸ್ತುಗಳ ಬೆಲೆಯ ಕಾರಣದಿಂದ ನೀವು ರುಚಿ ರುಚಿಯಾಗಿ ಸವಿಯುವಂತ ಹೋಟೆಲ್ ತಿಂಡಿ-ತಿನಿಸುಗಳು ದುಬಾರಿಯಾಗಲಿವೆ. ಆಗಸ್ಟ್ 1ರ ಇಂದಿನಿಂದ ಜಾರಿಗೆ ಬರುವಂತೆ ಶೇ.10ರಷ್ಟು ತಿನಿಸುಗಳ ಬೆಲೆ ಹೆಚ್ಚಳವಾಗಲಿದೆ.

ಹಾಲಿನ ದರ 3 ರೂ ಹೆಚ್ಚಳ

ಇಂದಿನಿಂದ ನಂದಿನಿ ಹಾಲಿನ ದರ 3 ರೂಹಚ್ಚಳವಾಗಲಿದೆ. ಹಾಲು ಉತ್ಪಾದಕರ ಒಕ್ಕೂಟದ ಒತ್ತಡಕ್ಕೆ ಮಣಿದಿರುವಂತ ರಾಜ್ಯ ಸರ್ಕಾರ, ಈ ನಿರ್ಧಾರವನ್ನು ಕೈಗೊಂಡಿದೆ. ಒಂದುದು ಹಾಲು ಮಹಾಮಂಡಳದಲ್ಲಿ ಪ್ರತಿ ಲೀಟರ್ ಹಾಲಿಗೆ ಒಂದೊಂದು ದರ ಇದ್ದು, ಹಾಲಿನ ದರಕ್ಕೆ ಹೆಚ್ಚುವರಿ ಮೂರು ರೂ ಸೇರಿಸಿ ಇಂದಿನಿಂದ ಮಾರಾಟವಾಗಲಿದೆ. ಆದರೇ ಈ ಹೆಚ್ಚುವರಿ ದರ ಹಾಲು ಉತ್ಪಾದಕರಿಗೆ ನೀಡಬೇಕು ಎಂಬುದಾಗಿ ಸರ್ಕಾರ ಷರತ್ತು ವಿಧಿಸಿದೆ.


ಹೆಚ್ಚಲಿಗೆ ಮೋಟಾರು ಟ್ಯಾಕ್ಸ್


ರಾಜ್ಯ ವಿಧಾನಸಭೆಯಲ್ಲಿ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ(ತಿದ್ದುಪಡಿ) ವಿಧೇಯಕವನ್ನು ಮಂಡಿಸಿ ಉಭಯ ಸದನಗಳಲ್ಲೂ ಒಪ್ಪಿಗೆ ಪಡೆಯಲಾಗಿತ್ತು. ಇದಕ್ಕೆ ರಾಜ್ಯಪಾಲರು ಅಂಕಿತ ಕೂಡ ಹಾಕಿದ್ದಾರೆ. ಈ ತಿದ್ದುಪಡಿ ನಿಯಮದಂತೆ ಮೋಟಾರು ವಾಹನಗಳ ತೆರಿಗೆ ದರಗಳು ಹೆಚ್ಚಾಗಲಿವೆ.ಅತಿ ಭಾರದ ಸರಕು ವಾಹನಗಳು, ಮೋಟಾರು ಕ್ಯಾಬ್, ಶಾಲಾ ಕಾಲೇಜು ವಾಹನಗಳ ತೆರಿಗೆ ಹೆಚ್ಚಳವಾಗಲಿದೆ. ಶಾಲಾ ಮಕ್ಕಳು ತೆರಳುವ ಶಾಲೆಯ ಒಡೆತನದ ವಾಹನಗಳ ಪ್ರತಿ ಚದರ ಮೀಟರ್ ತೆರಿಗೆಯನ್ನು 20 ರೂ ನಿಂದ 100ಕ್ಕೆ ಏರಿಕೆ ಮಾಡಲಾಗಿದೆ.


ಐಟಿಆರ್ ವೈಫಲ್ಯಕ್ಕೆ ಇಂದಿನಿಂದ ದಂಡ ಫಿಕ್ಸ್


ನೀವು ಆದಾಯ ತೆರಿಗೆ ಪಾವತಿದಾರರು ಆಗಿದ್ದರೇ, ಜುಲೈ.31ರ ಒಳಗಾಗಿ ಪಾವತಿಸದೇ ಇದ್ದರೇ, ಇಂದಿನಿಂದ ದಂಡ ಪಾವತಿಸುವುದು ಫಿಕ್ಸ್ ಆಗಿದೆ. ನಿಗದಿತ ಅವಧಿಯ ಒಳಗಾಗಿ ಐಟಿಆರ್ ಫೈಲ್ ಮಾಡದೇ ಇದ್ದವರು 5,000ದವರೆಗೆ ದಂಡ ತೆರಬೇಕಿದೆ.

ರಾಜ್ಯದಲ್ಲಿ ಎತ್ತರದ ಕಟ್ಟಡಕ್ಕೆ ಶುಲ್ಕ

ಇನ್ನೂ ಕರ್ನಾಟಕ ಅಗ್ನಿಶಾಮಕ ದಳ (ತಿದ್ದುಪಡಿ) ಅಧಿನಿಯಮ 2023ರಕ್ಕೆ ಶಾಸನಸಭೆ ಒಪ್ಪಿಗೆ ನೀಡಲಾಗಿತ್ತು. ಇದು ರಾಜ್ಯಪತ್ರದಲ್ಲಿ ಕೂಡಪ್ರಕಟಲಾಗಿದೆ. ಈ ಹಿನ್ನಲೆಯಲ್ಲಿ ಇನ್ಮುಂದೆ ರಾಜ್ಯ ಅಗ್ನಿಶಾಮ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕಾಗಿದೆ. ಅಂದರೆ ರಾಷ್ಟ್ರೀಯ ಕಟ್ಟಡ ಸಂಹಿತೆಯಲ್ಲಿ ಎತ್ತರದ ಕಟ್ಟಡ ಅಂದರೇ ಯಾವುದೆಂದು ಪ್ರಸ್ತಾಪವಿದೆ. ಅದರ ಪ್ರಕಾರ ನಿರಾಕ್ಷೇಪಣಾ ಪತ್ರ ಪಡೆಯುವಾಗ ನಿಯಮ ಪಾಲಿಸುವ ಜತೆ, ಕಟ್ಟ ಮಾಲೀಕರು ಶುಲ್ಕವನ್ನು ಕಟ್ಟಬೇಕಾಗುತ್ತದೆ

SC-ST ಕಾಯಿದೆಯಡಿಯ ಸುಳ್ಳು ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ: ಹೈಕೋರ್ಟ್

Posted by Vidyamaana on 2023-08-08 11:28:41 |

Share: | | | | |


SC-ST ಕಾಯಿದೆಯಡಿಯ ಸುಳ್ಳು ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ: ಹೈಕೋರ್ಟ್

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಡಗಳ (ದೌರ್ಜನ್ಯ ತಡೆ) ಕಾಯಿದೆಯಡಿ ದಾಖಲಾಗುತ್ತಿರುವ ಸುಳ್ಳು ಕ್ರಿಮಿನಲ್​ ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ ಪಡಿಸುತ್ತಿವೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.ಅಲ್ಲದೇ, ಈ ರೀತಿಯ ಪ್ರಕರಣಗಳು ನ್ಯಾಯಾಂಗ ಕ್ಷೇತ್ರದ ಅಮೂಲ್ಯ ಸಮಯ ವ್ಯರ್ಥ ಮಾಡುತ್ತಿವೆ ಎಂದು ತಿಳಿಸಿದೆ. 


ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯಿದೆಯಡಿ ದಾಖಲಾಗಿದ್ದನ್ನು ಪ್ರಶ್ನಿಸಿ ರಸಿಕ್ ಲಾಲ್ ಮತ್ತು ಪುರುಷೋತ್ತಮ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತ ಪಡಿಸಿದೆ. ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯಿದೆ ಅಡಿ ಸುಳ್ಳು ಪ್ರಕರಣಗಳು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಲಿದ್ದು, ನಿಯಂತ್ರಿಸುವಲ್ಲಿ ವಿಫಲವಾದಲ್ಲಿ ಇಡೀ ಅಪರಾಧ ನ್ಯಾಯ ವ್ಯವಸ್ಥೆಗೆ ದೊಡ್ಡ ಹೊರೆಯಾಗಬಹುದು ಎಂದು ತಿಳಿಸಿದೆ.


ಜತೆಗೆ, ಈ ಸಂಬಂಧ ಪ್ರಕರಣದಲ್ಲಿ ಸಿಲುಕುವವರಿಗೆ ಕಿರುಕುಳ ಮುಂದುವರೆಯಲಿದೆ ಮತ್ತು ನ್ಯಾಯ ತಪ್ಪಿದಂತಾಗಬಹುದು ಎಂದು ಪೀಠ ಅಭಿಪ್ರಾಯ ವ್ಯಕ್ತ ಪಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವರ್ಗಗಳಜನತೆಯ ಮೇಲಿನ ದೌರ್ಜನ್ಯಗಳನ್ನು ತಡೆಯುವ ಉದ್ದೇಶದಿಂದ ಕಾಯಿದೆ ಜಾರಿ ಮಾಡಲಾಗಿದೆ. ಆದರೆ, ಈ ಕಾಯಿದೆ ಉಲ್ಲಂಘನೆ ಮಾಡಿರುವುದಕ್ಕೆ ಪ್ರಸ್ತುತದ ಪ್ರಕರಣ ಒಂದು ಉತ್ತಮ ನಿರ್ದಶನವಾಗಿದೆ ಎಂದು ನ್ಯಾಯಪೀಠ ತಿಳಿಸಿದೆ. 


ಅಲ್ಲದೇ, ಈ ರೀತಿಯ ಪ್ರಕರಣಗಳಿಂದ ನಿಜವಾಗಿಯೂ ಸಮಸ್ಯೆಗೆ ಸಿಲುಕಿರುವವರು ನ್ಯಾಯಕ್ಕಾಗಿ ಕಾಯುತ್ತಿರುವ ಸಂದರ್ಭದಲ್ಲಿ ಸುಳ್ಳು ಪ್ರಕರಣವನ್ನು ವಿಚಾರಣೆಗೊಳಪಡಿಸುವುದು ಒಂದು ರೀತಿಯ ಅಪಹಾಸ್ಯದಂತಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ. ಜತೆಗೆ, ದೂರುದಾರರ ತಂದೆ ಅರ್ಜಿದಾರರಿಗೆ ತಮ್ಮ ಜಮೀನನ್ನು ಮಾರಾಟ ಮಾಡಿದ್ದಾರೆ. ಅಲ್ಲದೇ, ಆ ಆಸ್ತಿಯನ್ನು ಅರ್ಜಿದಾರರು ಕಳೆದ 50 ವರ್ಷಗಳಿಂದ ತಮ್ಮಲ್ಲಿ ಉಳಿಸಿಕೊಂಡಿರುವ ಸಂಬಂಧ ಸರ್ಕಾರದಲ್ಲಿ ದಾಖಲೆಗಳಿವೆ. ಹಾಗೆ, ಅರ್ಜಿದಾರರು ಜಮೀನನ್ನು ಖರೀದಿ ಮಾಡಿದ್ದಾರೆ ವಿನಃ ಅತಿಕ್ರಮ ಮಾಡಿಲ್ಲ ಎಂಬ ಅಂಶ ದಾಖಲೆಗಳಲ್ಲಿ ಎತ್ತಿ ತೋರಿಸುತ್ತಿದೆ, ಆದರೂ ಈಅಂಶವನ್ನು ಪರಿಗಣಿಸದೇ ದೂರು ನೀಡಲಾಗಿದೆ. ಹೀಗಾಗಿ ಪ್ರಕರಣ ರದ್ದುಗೊಳಿಸುತ್ತಿರುವುದಾಗಿ ಪೀಠ ತಿಳಿಸಿದೆ.


ಪ್ರಕರಣದ ಹಿನ್ನೆಲೆ : ರಸಿಕ್ ಲಾಲ್ ಮತ್ತು ಪುರುಷೋತ್ತಮ್ ಎಂಬುವರ ವಿರುದ್ಧ ತಮ್ಮ ಮನೆಯ ನೆರೆಹೊರೆಯವರು ಮನೆ ಒತ್ತುವರಿ ಮತ್ತು ನಿರಂತರ ಕಿರುಕುಳ ನೀಡಲಾಗುತ್ತಿದೆ. ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಖಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಐಪಿಸಿಯ ವಿವಿಧ ಸೆಕ್ಷನ್‌ಗಳು ಸೇರಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿರುದ್ಧದ ದೌರ್ಜನ್ಯ ತಡೆ ಕಾಯಿದೆಯ ಸೆಕ್ಷನ್‌ಗಳನ್ನು ಸೇರ್ಪಡೆ ಮಾಡಿದ್ದರು. ಪ್ರಕರಣ ಸಂಬಂಧ ರಾಮಮೂರ್ತಿ ನಗರದ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು.

ಬಿಜೆಪಿ ಸಂಸದ ಅನಂತ ಅಪ್ಪುಗೆಗೆ ಕೈ ಶಾಸಕ ಸತೀಶ್ ಸ್ಮೈಲ್

Posted by Vidyamaana on 2023-06-23 13:56:31 |

Share: | | | | |


ಬಿಜೆಪಿ ಸಂಸದ ಅನಂತ ಅಪ್ಪುಗೆಗೆ ಕೈ ಶಾಸಕ ಸತೀಶ್ ಸ್ಮೈಲ್

ಕಾರವಾರ: ದಿಶಾ ಸಭೆಗೆ ಬಂದಿದ್ದ ಸಂಸದ ಅನಂತ ‌ಕುಮಾರ‌ ಹೆಗಡೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಬಿಗಿದಪ್ಪಿ ಅಭಿನಂದಿಸಿದ ಘಟನೆ ಶುಕ್ರವಾರ ನಡೆಯಿತು.ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ದಿಶಾ ಸಭೆ ನಡೆದಿತ್ತು. ಸಭೆಯ ನಂತರ ಶಾಸಕ ಸೈಲ್ , ಸಂಸದ ಹೆಗಡೆ ಮುಖಾಮುಖಿ ಆದರು. ತತ್ ಕ್ಷಣ ಸಂಸದರು ತಮ್ಮ ಸ್ನೇಹಿತ ಸೈಲ್ ಬಳಿ ತೆರಳಿ ಬಿಗಿದಪ್ಪಿ ಅಭಿನಂದಿಸಿದರು. ವಿಧಾನಸಭೆ ಚುನಾವಣೆ ಗೆಲುವಿನ ನಂತರ ಇಬ್ಬರ ಭೇಟಿ ಇಂದೇ ಮೊದಲಾಗಿತ್ತು. ಈ ಅಪ್ಪುಗೆಯನ್ನು ಕೃಷ್ಣಾರ್ಜುನರ‌ ಅಪ್ಪುಗೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬಣ್ಣಿಸಲಾಗಿದೆ. ಹಾಗೂ ಇದು ಹೊಸ ಮನ್ವಂತರ ಎಂದೂ, ಆಂಜನೇಯನನ್ನು ಅಭಿನಂದಿಸಿದ ರಾಮ ಎಂದು ಅನಂತ ಕುಮಾರ್ ಅವರನ್ನು ‌ಹೊಗಳಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಸಂಸದ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ‌ ಪ್ರಚಾರಕ್ಕೆ ಬಂದಿರಲಿಲ್ಲ. ಪ್ರಧಾನಿ ಮೋದಿ ಕಾರವಾರ ಸಮೀಪದ ಸಭೆಗೆ ಬಂದರೂ ,‌ಸಂಸದ ಅನಂತ ಹೆಗಡೆ ಗೈರಾಗಿದ್ದರು. ಸಂಸದರು ಹೇಳಿದ ಅಭ್ಯರ್ಥಿ ಗಳಿಗೆ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಕೊಡದೇ ಹೋದುದು ಸಂಸದರ ಅಸಮಾಧಾನಕ್ಕೆ ಕಾರಣ ಎಂದು ಹೇಳಲಾಗಿತ್ತು. ಈಗ ಕಾಂಗ್ರೆಸ್ ನಲ್ಲಿನ ಸ್ನೇಹಿತ ಶಾಸಕ ಸೈಲ್ ರನ್ನು ಅಭಿನಂದಿಸುವ ಮೂಲಕ ಹೆಗಡೆ ಸುದ್ದಿ ಮಾಡಿದ್ದಾರೆ. ಶಾಸಕ ಸೈಲ್ ರ‌ನ್ನು ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅಪ್ಪುಗೆಯನ್ನು ” ಟುಡೇ ಬಿಗ್ ಪೋಟೋ” ಎಂದು ಬ್ಲಾಕ್ ಕಾಂಗ್ರೆಸ್ ಬಣ್ಣಿಸಿದೆ.

ರಾಜ್ಯಾಧ್ಯಂತ ಕಲರ್‌ ಕಾಟನ್‌ ಕ್ಯಾಂಡಿ ನಿಷೇಧ- ಸಚಿವ ದಿನೇಶ್ ಗುಂಡೂರಾವ್ ಘೋಷಣೆ

Posted by Vidyamaana on 2024-03-11 12:58:02 |

Share: | | | | |


ರಾಜ್ಯಾಧ್ಯಂತ ಕಲರ್‌ ಕಾಟನ್‌ ಕ್ಯಾಂಡಿ ನಿಷೇಧ- ಸಚಿವ ದಿನೇಶ್ ಗುಂಡೂರಾವ್ ಘೋಷಣೆ

ಗಳೂರು:ರಾಜ್ಯಾಧ್ಯಂತ ಕಾಟನ್‌ ಕ್ಯಾಂಡಿ ನಿಷೇಧ ಮಾಡಲಾಗಿದೆ ಅಂತ ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಅವರು ಹೇಳಿದರು. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಅವರು ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ, ವಿವಿಧ ಕಡೆಗಳಲ್ಲಿ ಎರಡು ಪದಾರ್ಥಗಳಲ್ಲಿ ನ ಸ್ಯಾಂಪಲ್‌ಗಳನ್ನು ಸಂಗ್ರಹಿಸ ಮಾಡಲಾಯಿತು.ಗೋಬಿ ಮಂಚೂರಿಯ 121 ಮಾದರಿಯನ್ನು ಸಂಗ್ರಹ ಮಾಡಲಾಯಿತು. ಇದಲ್ಲದೇ ಇದರಲ್ಲಿ ಎರಡು ವಿಶಕಾರಿ ಅಂಶಗಳು ಪತ್ತೆಯಾಗಿದ್ದು, ಇದರಿಂದ ಇದರ ಸೇವನೆ ಮಾಡುವುದು ಯೋಗ್ಯವಲ್ಲ ಅಂತ ಹೇಳಿದರು. ಇದನ್ನು ದಿನ ನಿತ್ಯ ಸೇವನೆ ಮಾಡುವುದರಿಂದ ಕ್ಯಾನ್ಸರ್ ಬರುವ ಸಂಭವಿದೆ ಅಂಥ ಹೇಳಿದರು. ಇದನ್ನು ಬಳಕೆ ಮಾಡುವುದು ಕಾನೂನು ಬಾಹಿರ ಅಂಥ ಹೇಳಿದರು.


ಮಾದರಿಗಳನ್ನು ಬೇರೆ ಬೇರೆ ಕಡೆ ಸಂಗ್ರಹಿಸಲಾಗಿತ್ತು. 171 ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಲಾಗಿದೆ. ಅದರಲ್ಲಿ ಕೃತಕ ಬಣ್ಣಗಳ ಅಸುರಕ್ಷಿತ ಮಾದರಿಯನ್ನು ಪತ್ತೆ ಹಚ್ಚಿರೋದು 107 ಇದೆ. ಸೋ ಗೋಬಿ ಮಂಚೂರಿನೂ ಮಾಡಿದ್ದೇವೆ, ಕ್ಯಾಂಡಿಯನ್ನೂ ಮಾಡಿದ್ದೇವೆ ಎಂದರು.


ಒಂದು ರೋಡಮೈನ್ ಬೀ, ಇನ್ನೊಂದು ಟಾಟ್ರಾಸೈನ್ ಅಂತ ಅದು ಇವತ್ತು ನಾವು ಈ ಒಂದು ಪದಾರ್ಥಗಳಲ್ಲಿ, ನಮ್ಮ ಸ್ಯಾಂಪಲ್ಲಿನಲ್ಲಿ ಸಿಕ್ಕಿದೆ. ಇದು ನಮ್ಮ ಉಪಯೋಗಕ್ಕೆ ಅನ್ ಸೇಫ್. ರೋಡಮೈನ್ ಬೀ ಕ್ಯಾನ್ಸರ್ ಗೆ ಬರೋದಕ್ಕೆ ಒಂದು ರೀತಿ ಕಾರಣವಾಗುತ್ತದೆ. ಈ ಕೆಮಿಕಲ್ ಅವಕಾಶ ಮಾಡಿಕೊಡುತ್ತದೆ. ವಿಶೇಷವಾಗಿ ಈ ಬಣ್ಣವನ್ನು ಯೂಸ್ ಮಾಡುವ ಹಾಗೋ ಇಲ್ಲ. ಯಾವ ಪದಾರ್ಥಗಳಲ್ಲೂ ಯೂಸ್ ಮಾಡೋ ಹಾಗೇಇಲ್ಲ. ಹಾಗಿದ್ದರೂ ಅದನ್ನು ಸ್ಯಾಂಪಲ್ ಗಳಲ್ಲಿ ಪರೀಕ್ಷೆಯಲ್ಲಿ ಬಳಕೆ ಮಾಡಿರೋದು ಕಂಡು ಬಂದಿದೆ ಎಂದರು.


ಯಾಕೆ ರೋಡಮೈನ್ ಬೀ ಬಳಕೆ ಮಾಡುತ್ತಾರೆ ಅಂದರೇ ಪಿಂಕ್ ಕಲರ್ ಬರೋದಕ್ಕೆ ಬಳಕೆ ಮಾಡುತ್ತಾರೆ. ಈಗ ನಮ್ಮ ಆರೋಗ್ಯ ಇಲಾಖೆಯ ಆಯುಕ್ತರು ಕೂಡ ಸುತ್ತೋಲೆ ಹೊರಡಿಸುತ್ತಾರೆ. ಅದನ್ನು ಬಳಕೆ ಮಾಡುವಂತಿಲ್ಲ. ಬಳಕೆ ಮಾಡಿದ್ರೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.


ಗೋಬಿ ಮಂಚೂರಿ ಇದೊಂದು ಪುಡ್ ಐಟಂ. ಟಾಟ್ರಾಸೈನ್ ಏನಿದೆ ಅದು ಅಪ್ರೂವ್ಡ್ ಆರ್ಟಿಫಿಷಲ್ ಪುಡ್ ಕಲ್ಲರ್. ಕೆಮಿಕಲ್ ಬಳಕೆ ಮಾಡದಂತ ಗೋಬಿಮಂಚೂರಿಯನ್ನು ಬಳಕೆಗೆ ಅವಕಾಶ ನೀಡಲಾಗುತ್ತದೆ. ವಿತ್ ಔಟ್ ಕಲರ್ ಬಳಕೆ ಮಾಡಿರದ ಕ್ಯಾಂಡಿಯನ್ನು ಬಳಕೆ ಮಾಡೋದಕ್ಕೆ ಅವಕಾಶ ನೀಡಲಾಗುತ್ತದೆ. ಅದರ ಹೊರತಾಗಿ ಕಲರ್ ಬಳಕೆ ಮಾಡುವಂತ ಗೋಬಿಮಂಚೂರಿ, ಕ್ಯಾಂಡಿ ನಿಷೇಧ ಮಾಡಲಾಗುತ್ತಿದೆ ಎಂಬುದಾಗಿ ಘೋಷಣೆ ಮಾಡಿದರು

ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ದೇವರ ಪ್ರತಿಷ್ಠೆ

Posted by Vidyamaana on 2024-04-27 13:07:01 |

Share: | | | | |


ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ದೇವರ ಪ್ರತಿಷ್ಠೆ

ಪುತ್ತೂರು:ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪುನರ್ ಪ್ರತಿಷ್ಠ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಎ.೨೬ರಂದು ಪ್ರಧಾನ ದೇವರಾಗಿರುವ ಶ್ರೀ ಸುಬ್ರಹ್ಮಣ್ಯ, ಪರಿವಾರ ದೇವರುಗಳಾದ ಗಣಪತಿ ಹಾಗೂ ದುರ್ಗಾದೇವಿ ಹಾಗೂ ದೈಗಳ ಪ್ರತಿಷ್ಠೆಯು ನೆರವೇರಿತು

ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದಲ್ಲಿ ಪ್ರಾತಃಕಾಲ ಮಹಾಗಣಪತಿ ಹೋಮ, ಮಂಟಪ ಸಂಸ್ಕಾರ, ಕುಂಭೇಶಕರ್ಕರಿಪೂಜೆ,



Leave a Comment: