ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಅಲ್ಫಿಯಾ ಜೊತೆ ಅಖಿಲ್ ಮದುವೆ: ತಾಳಿ ಕಟ್ಟುವ ವೇಳೆ ವಧುವನ್ನು ಎಳೆದೊಯ್ದ ಪೊಲೀಸರು.

Posted by Vidyamaana on 2023-06-21 07:59:35 |

Share: | | | | |


ಅಲ್ಫಿಯಾ ಜೊತೆ ಅಖಿಲ್ ಮದುವೆ: ತಾಳಿ ಕಟ್ಟುವ ವೇಳೆ ವಧುವನ್ನು ಎಳೆದೊಯ್ದ ಪೊಲೀಸರು.

ತಿರುವನಂತಪುರಂ: ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಮದುವೆ ಆಗಲು ಹೋದ ವೇಳೆ ಪೊಲೀಸರು ಮಂಟಪದಿಂದ ಯುವತಿಯನ್ನು ಎಳೆದೊಯ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.ಜೂ.17 ರಂದು ಆಲ್ಫಿಯಾ (18) ಅಖಿಲ್ (21) ನನ್ನು ತಿರುವನಂತಪುರಂನಲ್ಲಿರುವ ಕೋವಲಂ ದೇವಾಲಯದಲ್ಲಿ ಮದುವೆಯಾಗಲು ನಿರ್ಧರಿಸಿದ್ದಾರೆ. ಇನ್ನೇನು ಮದುವೆ ಶಾಸ್ತ್ರ ನಡೆದು ತಾಳಿ ಕಟ್ಟುವ ವೇಳೆಯೇ ಪೊಲೀಸರು ದೇವಸ್ಥಾನಕ್ಕೆ ಬಂದು ಯುವತಿಯನ್ನು ಎಳೆದುಕೊಂಡು ಹೋಗಿದ್ದಾರೆ.ಮುಸ್ಲಿಂ ಯುವತಿ ಆಗಿರುವ ಆಲ್ಫಿಯಾ ಹಿಂದೂ ಯುವಕ ಅಖಿಲ್‌ ನನ್ನು ಕಳೆದ ಕೆಲ ಸಮಯದಿಂದ ಪ್ರೀತಿಸುತ್ತಿದ್ದಾಳೆ. ಇಬ್ಬರ ಧರ್ಮ ಬೇರೆಯಾಗಿದ್ದರಿಂದ ಎರಡೂ ಕಡೆಯಿಂದ ಸಂಬಂಧಕ್ಕೆ ವಿರೋಧವಿದೆ.


ಜೂ.16 ರಂದು ಆಲ್ಫಿಯಾ ವಿವಾಹವಾಗುವ ನಿಟ್ಟಿನಲ್ಲಿ ತಿರುವನಂತಪುರಂಕ್ಕೆ ತೆರಳಿದ್ದಾರೆ. ಮರುದಿನ ಆಲ್ಫಿಯಾ ಮನೆಯವರು ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದಾರೆ ದೇವಸ್ಥಾನದಲ್ಲಿ ಇನ್ನೇನು ಅಖಿಲ್‌ – ಆಲ್ಫಿಯಾ ವಿವಾಹ ನಡೆಯಬೇಕು ಅಷ್ಟರಲ್ಲೇ ಪೊಲೀಸರು ಬಂದಿದ್ದಾರೆ. ಪ್ರಕರಣವನ್ನು ಮುಕ್ತಾಯಗೊಳಿಸಲು ಆಲ್ಫಿಯಾಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಬೇಕಾಗಿದ್ದು,  ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ನಿಟ್ಟಿನಲ್ಲಿ ನಮ್ಮೊಂದಿಗೆ ಬನ್ನಿ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಪೊಲೀಸರ ಮಾತನ್ನು ಕೇಳದಿದ್ದಕ್ಕೆ ಆಲ್ಫಿಯಾಳನ್ನು ಪೊಲೀಸರು ಎಳೆದೊಯ್ದು ವಾಹನದಲ್ಲಿ ಕೂರಿಸಿದ್ದಾರೆ.ನಾನು ಸ್ವಇಚ್ಛೆಯಿಂದ ಅಖಿಲ್‌ ನೊಂದಿಗೆ ಮದುವೆಯಾಗಲು ಮನೆಯಿಂದ ಬಂದಿರುವುದಾಗಿ ಪೊಲೀಸರ ಬಳಿ ಜೂ.16 ರಂದು ಹೇಳಿದ್ದೆ. ನನಗೆ 18 ವರ್ಷ ಆಗಿಲ್ಲ ಎಂದಿದ್ದಾರೆ. ನನ್ನ ಮನೆಯವರು ದೂರು ನೀಡಿದ ಬಳಿಕ ಈ ಘಟನೆ ನಡೆದಿದೆ ಎಂದು ಯುವತಿ ಅಲ್ಫಿಯಾ ಹೇಳಿದ್ದಾಳೆ.

ರದ್ದಾದ ವಿಜಯೋತ್ಸವದ ಬಗ್ಗೆ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ ಸ್ಪಷ್ಟನೆ

Posted by Vidyamaana on 2023-06-02 09:17:05 |

Share: | | | | |


ರದ್ದಾದ ವಿಜಯೋತ್ಸವದ ಬಗ್ಗೆ  ನಗರ ಕಾಂಗ್ರೆಸ್ ಅಧ್ಯಕ್ಷ  ಮಹಮ್ಮದಾಲಿ ಸ್ಪಷ್ಟನೆ

ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಗೆದ್ದು ಶಾಸಕರಾಗಿ ಆಯ್ಕೆಯಾಗಿರುವುದರಿಂದ ಪಕ್ಷದ ವತಿಯಿಂದ ಸಂಭ್ರಮದ ವಿಜಯೋತ್ಸವ ಆಚರಿಸಬೇಕೆಂದು ಕಾರ್ಯಕರ್ತರ ಬಯಕೆ ಸಹಜವಾಗಿರುತ್ತದೆ.

ಕಳೆದ ಸೋಮವಾರ ನಡೆದ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಬೊಲ್ವಾರ್ ನಿಂದ - ದರ್ಬೆಯವರೆಗೆ ವಿಜಯೋತ್ಸವದ ಮೆರವಣಿಗೆ ನಡೆಸುವುದೆಂದು ತೀರ್ಮಾನಕ್ಕೆ ಬರಲಾಗಿತ್ತು ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ತಿಳಿಸಿದ್ದಾರೆ.


ಜೂನ್ 3ರಂದು ಶನಿವಾರ ನಡೆಯಲಿರುವ ವಿಜಯೋತ್ಸವ ಕಾರ್ಯಕ್ರಮದ ಬಗ್ಗೆ ನಡೆದ ಪೂರ್ವಬಾವಿ ಸಭೆಯಲ್ಲಿ ಹವಾಮಾನ ವರದಿಯಂತೆ ಶುಕ್ರವಾರವೇ ಮುಂಗಾರು ಮಳೆ ಪ್ರಾರಂಭವಾಗುವ ಮುನ್ಸೂಚನೆ ಇರುವುದರಿಂದ ವಿಜಯೋತ್ಸವದ ಮೆರವಣಿಗೆಗೆ ಮಳೆ ಅಡ್ಡಿಯಾದೀತು ಎಂಬ ಸಂಶಯ ಹಾಗೂ ಈಗಾಗಲೇ ನಾಮಪತ್ರ ಸಲ್ಲಿಸುವ ದಿನ ದರ್ಬೆಯಿಂದ - ಕಿಲ್ಲೆ ಮೈದಾನವರೆಗೆ ಮೆರವಣಿಗೆ ನಡೆಸಲಾಗಿದೆ,

ಬಹಿರಂಗ ಪ್ರಚಾರದ ಅಂತಿಮ ದಿನ ಬೊಲ್ವಾರ್ ನಿಂದ - ದರ್ಬೆಯವರೆಗೆ  ಭ್ರಹತ್ ರೋಡ್ ಶೋ,ನಡೆಸಲಾಗಿದೆ,

ಚುನಾವಣ ಪಲಿತಾಂಶದ ದಿನ  ಅಶೋಕ್ ಕುಮಾರ್ ರೈ ಯವರು ಶಾಸಕರಾಗಿ ಆಯ್ಕೆಯಾಗಿ ಬಂದ ಸಂದರ್ಭದಲ್ಲಿ ಮಾಣಿಯಿಂದ - ಪುತ್ತೂರಿನ ದರ್ಬೆಯ ಚುನಾವಣ ಕಚೇರಿ ತನಕ ಬ್ರಹತ್ ಮೆರವಣಿಗೆ ನಡೆಸಿ ವಿಜಯೋತ್ಸವ ಆಚರಿಸಲಾಗಿದೆ,

ಪುನ್ಹ ಮೆರವಣಿಗೆ ಮಾಡಿ ವಿಜಯೋತ್ಸವ ಆಚರಿಸುವುದು ಅಬಾಸವಾಗಿ ಕಾಣುತ್ತದೆ,  ಮೆರವಣಿಗೆ ನಡೆಸಿದಾಗ ಟ್ರಾಫಿಕ್ ಜಾಮ್ ಆಗಿ ಜನರಿಗೆ ತೊಂದರೆ ಆಗುತ್ತದೆ,

ಮೆರವಣಿಗೆ ನಡೆಸಿ ದರ್ಬೆಯಲ್ಲಿ ಕೊನೆಗೊಳಿಸಿದರೆ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಅವಕಾಶವಾಗುವುದಿಲ್ಲ, ಹಾಲ್ ನಲ್ಲಿ ಸಭೆ ನಡೆಸಿದರೆ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿ ಒಳ್ಳೆಯ ಭೋಜನ ನೀಡಬಹುದು ಎಂಬ ಕಾರಣಕ್ಕಾಗಿ ವಿಜಯೋತ್ಸವ ಮೆರವಣಿಗೆ ಕಾರ್ಯಕ್ರಮ ರದ್ದುಪಡಿಸಿ, ಪುತ್ತೂರು ಪುರಭವನದಲ್ಲಿ ಶಾಸಕರಿಗೆ ಅಭಿನಂದನೆ, ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಕೃತಜ್ಞತ ಸಮರ್ಪಣೆ ಕಾರ್ಯಕ್ರಮ ನಡೆಸುವ ತೀರ್ಮಾನವು ಪಕ್ಷದ ಪ್ರಮುಖರ ತೀರ್ಮಾನವೇ ಹೊರತು ಶಾಸಕ ಅಶೋಕ್ ಕುಮಾರ್ ರೈ ಯವರ ಒಬ್ಬರ ತೀರ್ಮಾನವಲ್ಲ ಎಂಬುದರ ಬಗ್ಗೆ ಕಾರ್ಯಕರ್ತರಿಗೆ ಅರಿಕೆ ಮಾಡಿಕೊಳ್ಳುತ್ತಾ ಶನಿವಾರ ನಡೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕಾಗಿ ವಿನಂತಿಸುತ್ತಿದ್ದೇನೆ.

ಬಂಟ್ವಾಳ ಜಮೀಯ್ಯತುಲ್ ಫಲಾಹ್ ರೋಟರಿ ಕ್ಲಬ್ ನಿಂದ ಮೆಹ್ ಫಿಲೇ ಈದ್

Posted by Vidyamaana on 2024-05-15 19:42:42 |

Share: | | | | |


ಬಂಟ್ವಾಳ ಜಮೀಯ್ಯತುಲ್ ಫಲಾಹ್ ರೋಟರಿ ಕ್ಲಬ್ ನಿಂದ ಮೆಹ್ ಫಿಲೇ ಈದ್

ಬಂಟ್ವಾಳ ; ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕ, ರೋಟರಿ ಕ್ಲಬ್ ಬಂಟ್ವಾಳ, ಉಪ್ಪಿನಂಗಡಿ, ಬಂಟ್ವಾಳ ಟೌನ್ ಹಾಗೂ ವಿಟ್ಲ ಘಟಕದ ಸಹಯೋಗದಲ್ಲಿ ಮೆಹ್ ಫಿಲೇ ಈದ್ ಕಾರ್ಯಕ್ರಮವು ಮೇ 17 ಶುಕ್ರವಾರ ಸಂಜೆ 5.30ಕ್ಕೆ ಮಾಣಿ ಸಮೀಪದ ನೇರಳಕಟ್ಟೆ ಜನಪ್ರಿಯ ಗಾರ್ಡನ್ಸ್ ನಲ್ಲಿ ನಡೆಯಲಿದೆ.

   ಎನ್ನಾರೈ ಉದ್ಯಮಿ, ಸಂಘಟಕ ಝಕರಿಯಾ ಜೋಕಟ್ಟೆ ಅಲ್ ಮುಝೈನ್, ಶಿಕ್ಷಣ ಹರಿಕಾರ, ಸಾಂಸ್ಕೃತಿಕ ಸಂಘಟಕ ಡಾ. ಎಂ. ಮೋಹನ್ ಆಳ್ವ, ಮಂಗಳೂರು ಉದ್ಯಮಿ, ಸೇವಾಕರ್ತೃ ರೋಹನ್ ಮೊಂತೇರೋ ಅವರಿಗೆ ಈದ್ ಅವಾರ್ಡ್ ನೀಡಿ ಗೌರವಿಸಲಾಗುವುದು.

ಏ.4 : ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Posted by Vidyamaana on 2024-03-28 14:00:58 |

Share: | | | | |


ಏ.4 : ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಏ.4 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಈವರೆಗೆ ಯಾವ ಪಕ್ಷದಿಂದಲೂ ನಾಮಪತ್ರ ಸಲ್ಲಿಕೆಯಾಗಿಲ್ಲ.

ನಾಮಪತ್ರಗಳನ್ನು ಸಲ್ಲಿಸಲು ಗುರುವಾರ (ಏಪ್ರಿಲ್​ 4) ಕೊನೆಯ ದಿನವಾಗಿದೆ.

ಶುಕ್ರವಾರ (ಏಪ್ರಿಲ್​ 5) ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು.

ನಾಮಪತ್ರಗಳನ್ನು ಹಿಂಪಡೆಯಲು ಸೋಮವಾರ (ಏಪ್ರಿಲ್​ 8) ಕೊನೆಯ ದಿನವಾಗಿದೆ.

ದಕ್ಷಿಣ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್​ 26 ರಂದು ಮತದಾನ ನಡೆಯಲಿದೆ.

ಉತ್ತರ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ

ಮತಗಳ ಎಣಿಕೆ ಮತ್ತು ಫಲಿತಾಂಶ ಜೂನ್​ 4 ರಂದು ಪ್ರಕಟವಾಗಲಿದೆ.

ಒಮ್ಮೆಯೂ ಸಂಸತ್ ಚರ್ಚೆಯಲ್ಲಿ ಭಾಗವಹಿಸದ ಕರ್ನಾಟಕದ 4 ಸಂಸದರು..

Posted by Vidyamaana on 2024-02-14 21:33:12 |

Share: | | | | |


ಒಮ್ಮೆಯೂ ಸಂಸತ್ ಚರ್ಚೆಯಲ್ಲಿ ಭಾಗವಹಿಸದ ಕರ್ನಾಟಕದ 4 ಸಂಸದರು..

ನವದೆಹಲಿ(ಫೆ.14): ಕರ್ನಾಟಕದ 28 ಲೋಕಸಭಾ ಸದಸ್ಯರ ಪೈಕಿ ನಾಲ್ವರು ತಮ್ಮ ಐದು ವರ್ಷಗಳ ಅವಧಿಯಲ್ಲಿ ಒಮ್ಮೆಯೂ ಲೋಕಸಭೆಯ ಒಂದೂ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ.ಶನಿವಾರವಷ್ಟೇ 17ನೇ ಲೋಕಸಭೆಯ ಕೊನೆಯ ಅಧಿವೇಶನ ಮುಗಿದಿದೆ. ಇದರ ಬೆನ್ನಲ್ಲೇ ಲೋಕಸಭೆಯ ಅಧಿಕೃತ ಅಂಕಿ-ಅಂಶ ಆಧರಿಸಿ ಪಿಆರ್‌ಎಸ್‌ ಲೆಜಿಸ್ಲೇಟಿವ್‌ ಸಂಸ್ಥೆ ಬಿಡುಗಡೆ ವರದಿಯೊಂದನ್ನು ಬಿಡುಗಡೆ ಮಾಡಿದೆ.ಅದರ ಪ್ರಕಾರ, ರಾಜ್ಯದ ಅನಂತಕುಮಾರ ಹೆಗಡೆ (ಉತ್ತರ ಕನ್ನಡ), ರಮೇಶ ಜಿಗಜಿಣಗಿ (ವಿಜಯಪುರ), ಬಿ.ಎನ್‌. ಬಚ್ಚೇಗೌಡ (ಚಿಕ್ಕಬಳ್ಳಾಪುರ) ಹಾಗೂ ವಿ. ಶ್ರೀನಿವಾಸ ಪ್ರಸಾದ್‌ (ಚಾಮರಾಜನಗರ) ಕಳೆದ 5 ವರ್ಷದಲ್ಲಿ ಸದನದಲ್ಲಿ ನಡೆದ ಒಂದೂ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ ಎಂಬ ಮಾಹಿತಿ ಲಭಿಸಿದೆ.

ಕಾರ್ಯಕರ್ತರ ಭಾವನೆಗಳಿಗೆ ಮನ್ನಣೆ ಕೊಡುವ ಸಲುವಾಗಿ ಮಾತೃ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಬೇಕು:ಅರುಣ್ ಕುಮಾರ್ ಪುತ್ತಿಲ

Posted by Vidyamaana on 2024-02-05 22:51:54 |

Share: | | | | |


ಕಾರ್ಯಕರ್ತರ ಭಾವನೆಗಳಿಗೆ ಮನ್ನಣೆ ಕೊಡುವ ಸಲುವಾಗಿ ಮಾತೃ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಬೇಕು:ಅರುಣ್ ಕುಮಾರ್ ಪುತ್ತಿಲ

ಪುತ್ತೂರು, ಫೆ.5: ಪುತ್ತಿಲ ಪರಿವಾರವನ್ನು ಬಿಜೆಪಿ ಜೊತೆ ವಿಲೀನ ಮಾಡುವ ಕುರಿತು ಮಹತ್ವದ ಸಮಾಲೋಚನಾ ಸಭೆಯನ್ನು ಪುತ್ತೂರಿನಲ್ಲಿ ನಡೆಸಲಾಗಿದ್ದು ಪರಿವಾರದ ನಾಯಕರು ಬಿಜೆಪಿ ನಾಯಕರಿಗೇ ಎಚ್ಚರಿಕೆ ನೀಡಿದ್ದಲ್ಲದೆ, ಜವಾಬ್ದಾರಿ ಸಹಿತ ಸೇರ್ಪಡೆಗೆ ಮೂರು ದಿನಗಳ ಗಡುವು ನೀಡಿದ್ದಾರೆ. 


ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲ ಒಟ್ಟು ಸೇರಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂಬುದು ಪ್ರಮುಖ ಬೇಡಿಕೆಯಾಗಿದೆ. ಈ ಬಗ್ಗೆ ನೂರಾರು ಮಂದಿ ಸೇರಿದ್ದ ಸಭೆಯಲ್ಲಿ ನಿರ್ಣಯ ಸ್ವೀಕರಿಸಲಾಗಿದೆ. ಸಭೆ ನಿರ್ಣಯ ಮಂಡಿಸಿದ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ಅರುಣ್ ಪುತ್ತಿಲ, ಸಭೆಯ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಕಾರ್ಯಕರ್ತರ ಭಾವನೆಗಳಿಗೆ ಮನ್ನಣೆ ಕೊಡುವ ಸಲುವಾಗಿ ಮಾತೃ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈ ಬಗ್ಗೆ ಸೂಕ್ತ ನಿರ್ಧಾರವನ್ನು ಮೂರು ದಿನಗಳೊಳಗೆ ಕೈಗೊಳ್ಳಬೇಕು. ಇಲ್ಲವಾದಲ್ಲಿ ಚುನಾವಣಾ ರಾಜಕೀಯಕ್ಕೆ ಪುತ್ತಿಲ ಪರಿವಾರ ಸಿದ್ಧವಾಗಿದೆ ಎಂದಿದ್ದಾರೆ. 




ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 718 ವಾಟ್ಸಾಪ್ ಗ್ರೂಪ್ ಗಳಲ್ಲಿ 4,23,400 ಜನ ಬೆಂಬಲಿಗರಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವುದು ದೊಡ್ಡ ಸಂಗತಿಯೇ ಅಲ್ಲ. ಬೇರೆ ವ್ಯವಸ್ಥೆಗಳ ಅಗತ್ಯವೂ ಇಲ್ಲ. ನಾವೆಲ್ಲ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿದ್ದು ರಕ್ತವನ್ನು ಬೆವರಾಗಿಸಿ ಮಾತೃ ಪಕ್ಷವನ್ನು‌ ಅಧಿಕಾರಕ್ಕೆ ತರಲು ದುಡಿದಿದ್ದೇವೆ. ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಗೌರವ ತರುವ ವ್ಯವಸ್ಥೆಗಳು ಸುಸೂತ್ರವಾಗಿ‌ ನಡೆಯಬೇಕು ಮತ್ತು ಇದಕ್ಕಾಗಿ ಪುತ್ತಿಲ ಪರಿವಾರ ಸಂಘಟನೆ ಕೆಲವು ತೀರ್ಮಾನಗಳನ್ನ‌ ತೆಗೆದುಕೊಂಡಿದ್ದಾರೆ. ಅವರ ನಿರ್ಧಾರಕ್ಕೆ ನಾನು ಕಟಿಬದ್ಧನಾಗಿದ್ದೇನೆ. ಇಲ್ಲವಾದಲ್ಲಿ ಪುತ್ತೂರಿನಲ್ಲಿ ನಡೆದ ವಿದ್ಯಾಮಾನಗಳು ಇಡೀ ರಾಜ್ಯದಲ್ಲಿ ನಡೆಯಲಿದೆ ಎಂದು ಅರುಣ್ ಕುಮಾರ್ ಪುತ್ತಿಲ ಬಿಜೆಪಿ ನಾಯಕರನ್ನು ಎಚ್ಚರಿಸಿದ್ದಾರೆ.  


ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಪುತ್ತೂರು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಸ್ಥಾನ ನೀಡಬೇಕು. ನೀಡಿದಲ್ಲಿ ಮಾತ್ರ ಮಾತೃಪಕ್ಷ ಬಿಜೆಪಿ ಜೊತೆಗೆ ಪುತ್ತಿಲ ಪರಿವಾರವನ್ನ ವಿಲೀನ ಮಾಡುತ್ತೇವೆ. ನಾವೆಲ್ಲರೂ ಬಿಜೆಪಿಗರು, ನಾವೆಲ್ಲ ಸಂಘ ಪರಿವಾರ, ನಮ್ಮ ಹಿತೈಷಿಗಳೆಲ್ಲ ಬಿಜೆಪಿಗರು, ನಮ್ಮಮತದಾರರು ಬಿಜೆಪಿಗರೇ ಆಗಿದ್ದಾರೆ. 10 ತಿಂಗಳಿನಿಂದ ಬಿಜೆಪಿ ಜೊತೆ ಸಂಧಾನ ಮಾತುಕತೆ ಮಾತ್ರ ನಡೀತಾ ಇದೆ. 


ಆದ್ರೆ ಯಾವುದೇ ನಿರ್ಧಾರ ಇಲ್ಲಿಯ ವರೆಗೂ ಆಗಿಲ್ಲ. ಅರುಣ್ ಪುತ್ತಿಲರಿಗೆ ನಾಯಕತ್ವ ನೀಡಲು ವಿಫಲವಾದರೆ ನಾವೇನು ಮಾಡಬಹುದು.‌ ದೊಡ್ಡ ರಾಜಕೀಯ ವಿಪ್ಲವ ನಡೆಯಲಿದೆ. ಜಿಲ್ಲೆಯ ರಾಜಕೀಯಕ್ಕೆ ಸುನಾಮಿ ಬರಲಿ, ಬಿರುಗಾಳಿ ಬರಲಿ, ಭೂಕಂಪವಾಗ್ಲಿ.. ನಾವೂ ಮುಂದೆ ಬರುವ ಚುನಾವಣೆಯಲ್ಲಿ ಸ್ಪರ್ಧಿಸಿಯೇ ಸಿದ್ಧ.‌ ಹಿಂದುತ್ವ ಮತ್ತು ಕೇಸರಿಯ ಗೌರವಕ್ಕೆ ಪುತ್ತಿಲ ಪರಿವಾರ ಯಾವತ್ತೂ ಸಿದ್ಧ ಎಂದು ಗುಡುಗಿದ್ದಾರೆ. 


ಕ್ಷಮೆ ಕೇಳುವ ಅವಶ್ಯಕತೆ ಇಲ್ಲ ; ಉಪಾಧ್ಯ


ಅರುಣ್ ಕುಮಾರ್ ಪುತ್ತಿಲ ಯಾರನ್ನೂ ನಾವು ಬೈದಿಲ್ಲ. ಹಾಗಾಗಿ ಯಾರಲ್ಲೂ ಕ್ಷಮೆ ಕೇಳುವ ಅವಶ್ಯಕತೆಯಿಲ್ಲ ಎಂದು ಪುತ್ತಿಲ ಪರಿವಾರದ ಮುಖಂಡ ಶ್ರೀಕೃಷ್ಣ ಉಪಾಧ್ಯಾಯ ಹೇಳಿದ್ದಾರೆ. ಮೂರು ದಿನಗಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಿ. ಎಲ್ಲವೂ ಸರಿಯಾಗುವ ಶಕ್ತಿಯನ್ನು ಈ ತುಳುವ ಮಣ್ಣು ನೀಡಲಿ. ಅರುಣ್‌ ಪುತ್ತಿಲ ಬಿಜೆಪಿ ಸೇರ್ಪಡೆಗೆ ಪುತ್ತೂರು ಬಿಜೆಪಿಯ ಸ್ಥಾಪಿತ ಬೆರಳೆಣಿಕೆಯ ಜನರ ವಿರೋಧವಿದೆ. ಆದರೆ ಅರುಣ್‌ ಪುತ್ತಿಲ ಹಿಂದೆ ಬಹುದೊಡ್ಡ ಪಡೆ ಇದೆ. ಆ ಕಾರಣದಿಂದಲೇ ಪುತ್ತೂರಿನ ಚುನಾವಣೆ ಹೈಲೈಟ್‌ ಆಗಿದೆ. ಪುತ್ತಿಲ ಒಳಗೆ ಬಂದ್ರೆ ನಮ್ಮ ಕುರ್ಚಿಗೆ ಪೆಟ್ಟು ಬೀಳುತ್ತೆ ಎಂದು ನಾಲ್ಕು ಜನ ಮಾತ್ರ ಅಡ್ಡಿ ಬಿಟ್ರೆ 32000 ಜನರ ವಿರೋಧವೇ ಇಲ್ಲ ಎಂದರು.ವೇದಿಕೆಯಲ್ಲಿ ಪುತ್ತಿಲ ಪರಿವಾರದ ಸಲಹೆಗಾರ ಶಶಾಂಕ ಕೊಟೇಚಾ, ಅಧ್ಯಕ್ಷ ಪ್ರಸನ್ನ ಮಾರ್ತ, ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ಕಾನೂನು ಸಲಹೆಗಾರ ರಾಜೇಶ್ ಆರ್ಲಪದವು, ನಗರ ಅಧ್ಯಕ್ಷ ಅನಿಲ್‌ ತೆಂಕಿಲ ಪಸ್ಥಿತರಿದ್ದರು. ರವಿ ಕುಮಾರ್ ರೈ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ನವೀನ್ ರೈ ಪಂಜಳ ಕಾರ್ಯಕ್ರಮ ನಿರೂಪಿಸಿದರು.



Leave a Comment: