Posted by vidyamaana on 2024-07-03 19:23:39 |
ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್ನಲ್ಲಿ ಸದಸ್ಯರಾಗಿರುತ್ತಾರೆ.
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.
Posted by Vidyamaana on 2024-02-12 07:42:40 |
ವಿಟ್ಲ: ಜಿಲ್ಲೆ ಮಾತ್ರವಲ್ಲ ರಾಜ್ಯದ ಚಿತ್ತವನ್ನೇ ತನ್ನತ್ತ ಸೆಳೆದುಕೊಂಡ ಘಟನೆ ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ. ವಿರಳಾತೀವಿರಳ ಪ್ರಕರಣದಲ್ಲಷ್ಟೇ ಬ್ಯಾಂಕ್ ದರೋಡೆಯನ್ನು ದರೋಡೆಕೋರರು ಯಶಸ್ವಿಯಾಗಿ ನಡೆಸುತ್ತಾರೆ. ಅಂತಹ ಸಿನಿಮೀಯ ಘಟನೆ ಅಡ್ಯನಡ್ಕದಲ್ಲಿ ನಡೆದಿದ್ದು, ದರೋಡೆಕೋರರು ನಗ ಹಾಗೂ ನಗದಿನೊಂದಿಗೆ ಪರಾರಿಯಾಗಿದ್ದಾರೆ.
ಇದೀಗ ಆರೋಪಿಗಳಿಬ್ಬರ ಪತ್ತೆ ಆಗಿರಬಹುದು. ಪೊಲೀಸರು ತಮ್ಮ ಶ್ರಮದ ಎಲ್ಲೆ ಮೀರಿ ದರೋಡೆಕೋರರ ಹೆಡೆಮುರಿ ಕಟ್ಟಿರಬಹುದು. ಆದರೆ, ಈ ಪ್ರಕರಣ ಗ್ರಾಹಕರ ಜವಾಬ್ದಾರಿಯನ್ನು ನೆನಪಿಸಿದೆ ಎಂದು ಹೇಳಿದರೆ ತಪ್ಪಾಗದು.
ಹೌದು! ಎಚ್ಚರ ಗ್ರಾಹಕ ಎಚ್ಚರ!! ಶ್ಲೋಗನ್ ನೀವು ಎಲ್ಲಾ ಕಡೆಯೂ ಕೇಳಿರಬಹುದು. ಇದು ಬ್ಯಾಂಕಿಂಗ್ ಕ್ಷೇತ್ರಕ್ಕೂ ಅನ್ವಯಿಸುತ್ತದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಬ್ಯಾಂಕಿಂಗ್ ಕ್ಷೇತ್ರ ಅತೀ ಸೇಫ್ ಆಗಿದೆ, ಬ್ಯಾಂಕಿಂಗ್ ಉದ್ಯಮಿಗಳು ಹದ್ದಿನ ಕಣ್ಣಿನಿಂದ ನಮ್ಮ ಆಸ್ತಿಯನ್ನು ಕಾಪಾಡುತ್ತಾರೆ ಎಂಬ ಭ್ರಮೆಯಿಂದ ಈಗಲಾದರೂ ಸ್ವಲ್ಪ ಹೊರಬಂದು ನೋಡಿ. ಅಡ್ಯನಡ್ಕ ಕರ್ಣಾಟಕ ಬ್ಯಾಂಕನ್ನು ದರೋಡೆ ಮಾಡುವ ಹಿಂದೆ ಬ್ಯಾಂಕಿನಿಂದ ನಡೆದಿರಬಹುದಾದ ತಪ್ಪುಗಳನ್ನೇ ಗಮನಿಸಿದರೂ ಸಾಕು!!
1) ದರೋಡೆಕೋರರು ಬ್ಯಾಂಕ್ ಒಳನುಗ್ಗಲು ಬಳಸಿದ ಕಿಟಕಿಯನ್ನು ಇದೀಗ ಮುಚ್ಚಲಾಗಿದೆ. ಪೊಲೀಸ್ ಅಧಿಕಾರಿಗಳ ನಿರ್ದೇಶನದಂತೆ ಕಟ್ಟಡದಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿಕೊಳ್ಳಲಾಗುತ್ತಿದೆ.
2) ಸ್ಟ್ರಾಂಗ್ ರೂಮ್ ಅನ್ನು ಇದೀಗ ಮತ್ತಷ್ಟು ಭದ್ರ ಪಡಿಸಲಾಗುತ್ತಿದೆ. ಅದರ ಬಾಗಿಲುಗಳನ್ನು ಕ್ರೇನ್ ಸಹಾಯದಿಂದ ಅಳವಡಿಸಲಾಗುತ್ತಿದೆ.
ತಾವೇ ನಂಬರ್ ವನ್ ಎಂದು ಬಿಂಬಿಸಿಕೊಳ್ಳುತ್ತಾ, ಗ್ರಾಮ ಗ್ರಾಮದಲ್ಲೂ ತಲೆ ಎತ್ತುತ್ತಿರುವ ಬ್ಯಾಂಕಿಂಗ್ ಉದ್ಯಮ ಬರೀಯ ಉದ್ಯಮವಾಗಿದೆಯಷ್ಟೇ. ಗ್ರಾಹಕರು ಅಡ ಇಡುವ ಆಸ್ತಿಗಳ ಸೇಫ್ ಬಗ್ಗೆ ಗಮನ ಹರಿಸಿಯೇ ಇಲ್ಲ. ಗ್ರಾಹಕರು ತಾವು ಸ್ವತ್ತು ಅಡ ಇಡುವ ಮೊದಲು ಇವುಗಳನ್ನೆಲ್ಲಾ ಗಮನಿಸಿಕೊಳ್ಳುವುದು ಅನಿವಾರ್ಯ.
1) ತಮಗೆ ಸೇವೆ ನೀಡುತ್ತಿರುವ ಬ್ಯಾಂಕ್ ಅದೆಷ್ಟು ಸೇಫ್ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬೇಕು.
2) ಸ್ವತ್ತುಗಳಿಗೆ ಅವರೆಷ್ಟು ಭದ್ರತೆ ನೀಡುತ್ತಾರೆ ಎನ್ನುವ ಬಗ್ಗೆಯೂ ಖಾತ್ರಿ ಪಡಿಸಿಕೊಳ್ಳಬೇಕು.
3) ಲೋನ್ ನೀಡುವಾಗ ಬ್ಯಾಂಕುಗಳು ಪಡೆದುಕೊಳ್ಳುವ ದಾಖಲಾತಿ, ಪರಿಶೀಲನೆ ಇವುಗಳನ್ನು ಅಡ ಇಡುವ ಸಂದರ್ಭ ಅನುಸರಿಸುತ್ತಿವೆಯೇ? ಇಲ್ಲಾ ಎಂದಾದರೆ ಗ್ರಾಹಕರು ಇವನ್ನು ಮಾಡಲೇಬೇಕು ತಾನೇ?
ಪೊಲೀಸರ ಜವಾಬ್ದಾರಿ:
ಯಾವುದೇ ಅವಘಡ ನಡೆದಾಗಲೂ ಮೊದಲ ಬೈಗುಳ ಪೊಲೀಸರಿಗೆ. ಯಾಕೆ ಹೀಗೆ? ಕೃತ್ಯ ನಡೆದ ಬಳಿಕವಷ್ಟೇ ಪೊಲೀಸರ ಪ್ರವೇಶ ಆಗುತ್ತದೆ. ಅದಕ್ಕೆ ಮೊದಲು ಕೃತ್ಯವನ್ನು ತಡೆಯುವಲ್ಲಿ ಗ್ರಾಹಕರ ಪಾತ್ರ ಪ್ರಮುಖವಾದದ್ದು. ತನಗೇಕೆ ಬೇಕು? ತನಗೇನು ಪ್ರಯೋಜನ? ಎಂಬಿತ್ಯಾದಿ ಧೋರಣೆ ಬಿಟ್ಟು ಪ್ರತಿಯೊಬ್ಬರು ನಮ್ಮ ಕರ್ತವ್ಯ, ಜವಾಬ್ದಾರಿಯನ್ನು ನೆನಪಿಸಿಕೊಳ್ಳಬೇಕು.
ಬ್ಯಾಂಕ್ ದರೋಡೆ ಪ್ರಕರಣವನ್ನೇ ನೋಡಿದರೂ, ದರೋಡೆಕೋರರು ಎಷ್ಟು ಚಾಲಕಿಗಳು ಎನ್ನುವುದನ್ನು ಅರಿತುಕೊಳ್ಳಬಹುದು. ಆಧುನಿಕ ತಂತ್ರಜ್ಞಾನಗಳನ್ನು ಕಳ್ಳರು ಅಥವಾ ದರೋಡೆಕೋರರು ಬಳಸಿಕೊಳ್ಳುವ ರೀತಿಗೆ ಆಶ್ಚರ್ಯಪಡಲೇಬೇಕು. ಹೀಗಿದ್ದರೂ ಕೃತ್ಯವನ್ನು ಬೇಧಿಸಿದರೆ ಪೊಲೀಸರಿಗೆ ಶಹಬ್ಬಾಶ್, ಬೇಧಿಸದೇ ಇದ್ದರೆ ಮತ್ತದೇ ಬೈಗುಳಗಳ ಸುರಿಮಳೆ. ಇದರಿಂದ ಹೊರಬಂದು ಸಾರ್ವಜನಿಕರು ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳುವ ಅಗತ್ಯ ತುಂಬಾ ಇದೆ.
Posted by Vidyamaana on 2023-08-18 05:58:17 |
ಲಖನೌ: ಈ ಕನ್ನಡಿಯಲ್ಲಿ ಎಲ್ಲರೂ ಬೆತ್ತಲೆಯಾಗಿ ಕಾಣಿಸುತ್ತಾರೆ ಎಂಬ ಮೋಸದ ಆಶ್ವಾಸನೆ ಬಲೆಗೆ ಬಿದ್ದ 72 ವರ್ಷದ ವೃದ್ಧನೊಬ್ಬ ಬರೋಬ್ಬರಿ 9 ಲಕ್ಷ ರೂ.. ಕೊಟ್ಟು ಮ್ಯಾಜಿಕ್ ಕನ್ನಡಿ ಖರೀದಿಸಿ ಮೋಸ ಹೋದ ಚಿತ್ರ ವಿಚಿತ್ರವಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಮ್ಯಾಜಿಕ್ ಕನ್ನಡಿ ಖರೀದಿಸಿದ ಬಳಿಕ ಇದರಲ್ಲಿ ಯಾವುದೇ ಮ್ಯಾಜಿಕ್ ಇಲ್ಲ, ನನಗೇ ಮ್ಯಾಜಿಕ್ ಮಾಡಿ ವಂಚಿಸಲಾಗಿದೆ ಎಂಬುದು ವೃದ್ಧನ ಅರಿವಿಗೆ ಬಂದಿದೆ. ವಂಚನೆ ಎಸಗಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅವಿನಾಶ್ ಕುಮಾರ್ ಶುಕ್ಲಾ (72) ಎಂಬ ವೃದ್ಧನಿಗೆ ಪಶ್ಚಿಮ ಬಂಗಾಳದ (West Bengal) ಮೂರು ವ್ಯಕ್ತಿಗಳು ಈ ವಂಚನೆ ಎಸಗಿದ್ದು ಇದು ಮ್ಯಾಜಿಕ್ ಕನ್ನಡಿ. ಇದರಲ್ಲಿ ಎಲ್ಲರೂ ಬೆತ್ತಲಾಗಿ ಕಾಣುತ್ತಾರೆ. ಇದು ಭವಿಷ್ಯವನ್ನು ತೋರಿಸುತ್ತದೆ. ಇದನ್ನು ನಾಸಾ ವಿಜ್ಞಾನಿಗಳು (Nasa Scientist) ಬಳಸಿದ್ದಾರೆ ಎಂದು ಸುಳ್ಳು ಹೇಳಿ ಕನ್ನಡಿ ಕೊಳ್ಳುವಂತೆ ಮಾಡಿದ್ದರುಇದನ್ನು ನಂಬಿದ ವೃದ್ಧ 9 ಲಕ್ಷ ರು. ಹಣ ಕೊಟ್ಟು ಕನ್ನಡಿ ಖರೀದಿಸಿ ಮೋಸ ಹೋಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಥ ಸಿಂಗ್ರೇ, ಮೊಲಯ ಸರ್ಕಾರ್, ಸುದೀಪ್ತ ಸಿನ್ಹಾ ರಾಯ್ ಎಂಬ ಮೂವರು ವಂಚಕರನ್ನು ಬಂಧಿಸಲಾಗಿದೆ. ಅಲ್ಲದೇ ಬಂಧಿತರಿಂದ 5 ಮೊಬೈಲುಗಳು, ಅತಿಂದ್ರೀಯ ಶಕ್ತಿ ಪ್ರದರ್ಶಿಸುವ ವಿಡಿಯೋ 28 ಸಾವಿರ ರು.ಗಳನ್ನು ವಶಪಡಿಸಿಕೊಳ್ಳಲಾಗಿದೆ.
Posted by Vidyamaana on 2023-05-30 23:13:04 |
ಪುತ್ತೂರು: ರಾಜ್ಯಾದ್ಯಂತ ಮೇ 31 ಅಂದರೆ ಇಂದು ಶಾಲಾ ಶೈಕ್ಷಣಿಕ ಪ್ರಾರಂಭೋತ್ಸವ ನಡೆಯಲಿದ್ದು, ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವವು ಬೆಳಿಗ್ಗೆ 10 ಗಂಟೆಗೆ ಬೊಳುವಾರು ಸ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ. ಶಾಸಕ ಅಶೋಕ್ ಕುಮಾರ್ ರೈ ಅವರು ಚಾಲನೆ ನೀಡಲಿದ್ದಾರೆ.
ಉಳಿದಂತೆ ಶಾಸಕರ ದಿನಚರಿ (ಮೇ 31) ಈ ರೀತಿ ಇದೆ -
*ಬೆಳಿಗ್ಗೆ 9.30ಕ್ಕೆ ಕೆಯ್ಯೂರು ಕೆಪಿಎಸ್ ಸ್ಕೂಲ್ ನಲ್ಲಿ ಪ್ರೌಢಶಾಲಾ ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ 19 ನೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವುದು*
10 ಗಂಟೆಗೆ ಬೊಳುವಾರು ಸರಕಾರಿ ಹಿ ಪ್ರಾ ಶಾಲೆಯಲ್ಲಿ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ*
*11 ಗಂಟೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಭೆ*
*12.30 ಕ್ಕೆ ಪಾಣಾಜೆ ಸರಕಾರಿ ಹಿ ಪ್ರಾ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ*
Posted by Vidyamaana on 2023-09-05 21:16:18 |
ಮಂಗಳೂರು: ನಾಲ್ಕು ದಿನಗಳ ಹಿಂದೆ ಬಜ್ಪೆಯಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ತಾರಿಕಂಬ್ಳ ನಿವಾಸಿ ವಿನ್ಸೆಂಟ್ ಡಿಸೋಜ (34) ಬಂಧಿತ ಆರೋಪಿ.
ಸೆ.1ರಂದು ಬಜಪೆ ಗ್ರಾಮದ ಪೊರ್ಕೋಡಿ ದೇವಸ್ಥಾನದ ರಸ್ತೆಯ ಕರೋಡಿ ಎಂಬಲ್ಲಿ ಮನೆಯ ಬೆಡ್ ರೂಮಿನಲ್ಲಿದ್ದ ಕಬ್ಬಿಣದ ಕಪಾಟಿನ ಲಾಕರ್ ಮುರಿದು 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಬಜಪೆ ಪೊಲೀಸ್ ನಿರೀಕ್ಷಕ ಪ್ರಕಾಶ್ ನೇತೃತ್ವದ ತಂಡ ಗುಮಾನಿಯ ಮೇರೆಗೆ ಆರೋಪಿ ವಿನ್ಸೆಂಟ್ ಡಿಸೋಜಾನನ್ನ ಬಜ್ಪೆಯ ಕಿನ್ನಿಪದವು ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದಿತ್ತು.
ವಿಚಾರಣೆ ವೇಳೆ ಆರೋಪಿ ತಪ್ಪು ಒಪ್ಪಿಕೊಂಡಿದ್ದು ಸುಮಾರು 5 ಲಕ್ಷ ರೂ. ಮೌಲ್ಯದ ಒಟ್ಟು 80 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿದ್ದಾರೆ. ಬಜ್ಪೆ ಪಿಎಸ್ಐ ಗುರಪ್ಪ ಕಾಂತಿ, ಪಿಎಸ್ಐ ರೇವಣ ಸಿದ್ದಪ್ಪ, ಪಿಎಸ್ಐ ಕುಮಾರೇಶನ್, ಪಿಎಸ್ಐ ಶ್ರೀಮತಿ ಲತಾ, ಎಎಸ್ಐ ರಾಮ ಪೂಜಾರಿ ಮೇರೆಮಜಲು, ರಶೀದ ಶೇಖ್, ಸುಜನ್, ರೋಹಿತ, ದುರ್ಗಾಪ್ರಸಾದ್ ಶೆಟ್ಟಿ, ಸಂತೋಷ, ಬಸವರಾಜ್ ಪಾಟೀಲ್, ಕೆಂಚನ ಗೌಡ ಮತ್ತು ಇತರ ಸಿಬ್ಬಂದಿ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದರು
Posted by Vidyamaana on 2023-08-05 02:19:07 |
ಪುತ್ತೂರು:ಸುಮಾರು ಒಂದೂವರೆ ವರ್ಷದಿಂದ ಪುತ್ತೂರು ಎಪಿಎಂಸಿ ರಸ್ತೆಯ ಅಕ್ಷಯ ಕಾಂಪ್ಲೆಕ್ಸ್ನ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಭಾರತ್ -ಒನ್ ಸೌಹಾರ್ದ ಸಹಕಾರಿ ಸಂಘ ಮತ್ತು ಸಂಸ್ಥೆಯ ಅಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಟಾರ್ಗೆಟ್ 2 ಸಕ್ಸಸ್ ಎಂಬ ಟ್ರೇಡಿಂಗ್ ವ್ಯವಹಾರ ಸಂಸ್ಥೆಗಳು ಮೆಚೂರ್ ಆಗಿರುವ ಠೇವಣಿಗಳಿಗೆ ಸ೦ಬ೦ಧಿಸಿ ಹಣ ಹಿ೦ದಿರುಗಿಸದೆ ಗ್ರಾಹಕರಿಗೆ ಮತ್ತು ಸಿಬ್ಬಂದಿಗಳಿಗೆ ವಂಚನೆ ಮಾಡಿರುವುದಾಗಿ ಆರೋಪಿಸಿ ಗ್ರಾಹಕರು ಮತ್ತು ಸಿಬ್ಬಂದಿಗಳು ಸೇರಿ ಸಂಸ್ಥೆಯ ಅಧ್ಯಕ್ಷರನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಆ.4ರಂದು ನಡೆದಿದೆ. ವಂಚನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭಾರತ್ ಓನ್ ಸೌಹಾರ್ದ ಸಹಕಾರಿ ಸಂಘವು ಗ್ರಾಹಕರಿಗೆ ಮತ್ತು ಅಲ್ಲಿನ ಸಿಬ್ಬಂದಿಗಳಿಗೆ ವಂಚನೆ ಮಾಡಿರುವುದಾಗಿ ಆರೋಪಿಸಿ ಒಳಮೊಗ್ರು ಗ್ರಾಮದ ನಿವಾಸಿಯಾದ ನಾರಾಯಣ ನಾಯ್ಕ ಎಂಬವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸಂಸ್ಥೆಯ ಅಧ್ಯಕ್ಷ ಗಿರೀಶ್ ರೈ ಎಂಬವರು ಗ್ರಾಹಕರಿಂದ ಡೆಪೋಸಿಟ್ ಪಡೆದು ಅದನ್ನು ಹಿಂದಿರುಗಿಸದ ವಂಚನೆ ಮಾಡಿದ್ದಾರೆ ಇದರ ಜೊತೆಗೆ ಸಂಸ್ಥೆಯ ಸಿಬ್ಬಂದಿಗಳಿಗೆ ಷರತ್ತು ವಿಧಿಸಿ ಅವರಿಂದಲೂ ಅತ್ಯಧಿಕ ಮೊತ್ತದ ಡೆಪೋಸಿಟ್ ಪಡೆದುಕೊಂಡಿದ್ದಾರೆ ಆದರೆ ಸಿಬ್ಬಂದಿಗಳಿಗೆ ಸರಿಯಾದ ವೇತನ ನೀಡದೆ ಸಂಸ್ಥೆಯಲ್ಲಿ ಇಟ್ಟಿರುವ ಡೆಪೋಸಿಟ್ ಹಣವನ್ನು ಹಿಂತಿರುಗಿಸದೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ತಲೆಮರೆಸಿಕೊಂಡಿದ್ದ ಅಧ್ಯಕ್ಷ:
ಭಾರತ್ ಓನ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಗಿರೀಶ್ ರೈ ಎಂಬವರು ಹಲವು ಸಮಯಗಳಿಂದ ತಲೆಮರೆಸಿಕೊಂಡಿದ್ದರು ಎಂದು ಗ್ರಾಹಕರು ಮತ್ತು ಸಿಬ್ಬಂದಿಗಳು ಅವರ ಪತ್ತೆಗಾಗಿ ಕಾಯುತ್ತಿದ್ದರು.ಆ 04ರಂದು ಅವರು ಪುತ್ತೂರು ಐಸಿಐಸಿಐ ಬ್ಯಾಂಕ್ಗೆ ಬಂದಿದ್ದಾರೆಂಬ ಮಾಹಿತಿ ಪಡೆದು ಅಲ್ಲಿಗೆ ಆಗಮಿಸಿದ ಹಲವು ಗ್ರಾಹಕರು ಮತ್ತು ಸಿಬ್ಬಂದಿಗಳು ಸುತ್ತುವರಿದು ಅವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಠಾಣೆ,ಮುಂದೆ ಜಮಾಯಿಸಿದ ಜನರು: ಬ್ಯಾಂಕ್ನ ಅಧ್ಯಕ್ಷ ಗಿರೀಶ್ ರೈ ಅವರನ್ನು ಠಾಣೆಗೆ ಕರೆದೊಯ್ದ ಮಾಹಿತಿ ತಿಳಿಯುತ್ತಲೇ, ಹಣ ಕಳೆದುಕೊಂಡಿದ್ದ ಹಲವು ಗ್ರಾಹಕರು ಮತ್ತು ಸಿಬ್ಬಂದಿಗಳು ಠಾಣೆಯ ಮುಂದೆ ಜಮಾಯಿಸಿ ತಾವು ಮೋಸ ಹೋಗಿರುವ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರು
ಲಕ್ಷಾಂತರ ರೂಪಾಯಿ ಕಳೆದುಕೊಂಡ ಸಿಬ್ಬಂದಿಗಳು ಗ್ರಾಹಕರು:
ಕ್ಯಾಶಿಯರ್ ಆಗಿ ಅಪಾಯಿಂಟ್ಮೆಂಟ್ ಮಾಡಬೇಕಾದರೆ ರೂ.5 ಲಕ್ಷ ಪೋಸಿಟ್ ಇಡಬೇಕೆಂಬ ಷರತ್ತು ವಿಧಿಸಿದಂತೆ ಕವಿತಾ ಎಂಬವರು ಪರಿಚಯಸ್ಥರ ಮೂಲಕ ರೂ.5 ಲಕ್ಷ ಮತ್ತು ತನ್ನ ಸ್ವಂತದ್ದೆಂದು ರೂ.50 ಸಾವಿರವನ್ನು ಡೆಪೋಸಿಟ್ ಇಟ್ಟಿದ್ದರು.ಹರ್ಷಿತಾ ಎಂಬವರು ಕ್ಲರ್ಕ್ ಹುದ್ದೆಗೆ ರೂ.1 ಲಕ್ಷ, ಗೋಪಾಲಕೃಷ್ಣ ಪಂಜ ಎಂಬವರು ರೂ.1 ಲಕ್ಷ, ಹರೀಶ್ ಎಂಬವರು ಅವರ ತಂಗಿಯ ಹೆಸರಿನಲ್ಲಿ ರೂ.1 ಲಕ್ಷ, ದೀಕ್ಷನ್ ಎಂಬವರು ರೂ.1 ಲಕ್ಷ, ನಾರಾಯಣ ಎಂಬವರು ಲಕ್ಷಾಂತರ ರೂಪಾಯಿ ಹೀಗೆ ಹಲವಾರು ಮಂದಿ ತಾವು ಡೆಪೋಸಿಟ್ ಇಟ್ಟು ಮೋಸಹೋಗಿರುವುದಾಗಿ ಪೊಲೀಸ್ ಠಾಣೆಯಲ್ಲಿ ಮಾಧ್ಯಮದ ಮುಂದೆ ಅವಲತ್ತುಕೊಂಡರು.
Posted by Vidyamaana on 2024-05-03 07:21:29 |
ಮಂಗಳೂರು, ಮೇ.2: ರಾಜ್ಯದ ಮುಜರಾಯಿ ಇಲಾಖೆಗೊಳಪಟ್ಟ ಶ್ರೀಮಂತ ದೇಗುಲ ಎಂದು ಹೆಸರಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಎಸ್.ಜೆ. ಯೇಸುರಾಜ್ ಎಂಬವರನ್ನು ನೇಮಕ ಮಾಡಲಾಗಿತ್ತು. ರಾಮನಗರ ಜಿಲ್ಲಾ ಮುಜರಾಯಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೇಸುರಾಜ್ ಅವರನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎಇಓ ಆಗಿ ನೇಮಕ ಮಾಡಿರುವುದು ಚರ್ಚೆಗೂ ಕಾರಣವಾಗಿತ್ತು.
ಯೇಸುರಾಜ್ ಎನ್ನುವ ಹೆಸರಿನ ಕಾರಣಕ್ಕೆ ಅನ್ಯ ಧರ್ಮದವರನ್ನು ಹಿಂದುಗಳ ದೇವಸ್ಥಾನಕ್ಕೆ ನೇಮಕ ಮಾಡಿದ್ದಾರೆಂದು ಹಿಂದು ಸಂಘಟನೆಗಳ ನಾಯಕರು ಆಕ್ಷೇಪಿಸಿದ್ದರು. ಅವರ ಧರ್ಮದ ಹಿನ್ನೆಲೆಯ ಬಗ್ಗೆ ಪ್ರಶ್ನೆಯನ್ನೂ ಮಾಡಿದ್ದರು. ಈ ವಿಚಾರ ಆಕ್ಷೇಪಕ್ಕೆ ಗುರಿಯಾದ ಬೆನ್ನಲ್ಲೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದು, ಯೇಸುರಾಜ್ ಅವರ ಹಿನ್ನೆಲೆ, ಗೋತ್ರಗಳ ದಾಖಲೆಯನ್ನು ಟ್ವಿಟರ್ ನಲ್ಲಿ ಬಿಡುಗಡೆ ಮಾಡಿದ್ದಾರೆ.