ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಮಂಗಳೂರು ವಿವಿಯಲ್ಲಿ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸ ಕಾರ್ಯಕ್ರಮ ವಿರೋಧಿಸಿ ಎಬಿವಿಪಿ ಪ್ರತಿಭಟನೆ ; ವಿದ್ಯಾರ್ಥಿ ಹಾಗೂ ಪೊಲೀಸರ ನಡುವೆ ಘರ್ಷಣೆ

Posted by Vidyamaana on 2023-09-09 13:25:34 |

Share: | | | | |


ಮಂಗಳೂರು ವಿವಿಯಲ್ಲಿ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸ ಕಾರ್ಯಕ್ರಮ  ವಿರೋಧಿಸಿ ಎಬಿವಿಪಿ ಪ್ರತಿಭಟನೆ ; ವಿದ್ಯಾರ್ಥಿ ಹಾಗೂ ಪೊಲೀಸರ ನಡುವೆ ಘರ್ಷಣೆ

ಮಂಗಳೂರು: ದೆಹಲಿ ವಿವಿ ನಿವೃತ್ತ ಪ್ರೊಫೆಸರ್ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ಉಪನ್ಯಾಸ ವಿರೋಧಿಸಿ ಮಂಗಳೂರು ವಿವಿ  ಕಾಲೇಜಿಗೆ ಎಬಿವಿಪಿ ಮುತ್ತಿಗೆ ಹಾಕಲು ಯತ್ನಿಸಿದೆ. ಹಂಪನಕಟ್ಟೆ ಬಳಿಯ ಮಂಗಳೂರು ವಿವಿಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಗೇಟ್ ಬಳಿ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.


ಪ್ರತಿಷ್ಠಾನ ದಿಂದ ಉಪಾನ್ಯಾಸ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮೊದಲ ಸ್ವಾತಂತ್ರ್ಯ ಸಂಗ್ರಾಮ 1857 - ಜಂಟಿ ಬಲದಾನಗಳು , ಜಂಟಿ ವಾರಿಸುದಾರಿಕೆ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಈ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜನೆ ಮಾಡಬೇಡಿ ಎಂದು ಪ್ರತಿಭಟಿಸುತ್ತಿದ್ದಾರೆ.


ದೆಹಲಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಡಾ ಶಂಸುಲ್‌ ಇಸ್ಲಾಂ ಅವರು ಉಪನ್ಯಾಸ ನೀಡಲಿದ್ದಾರೆ ಎಂದಿದ್ದಕ್ಕೆ ಎಬಿವಿಪಿ‌‌ ಭಾರೀ ವಿರೋಧ ವ್ಯಕ್ತಪಡಿಸಿದೆ. ವಿರೋಧದ ನಡುವೆಯೂ ಬಿ ವಿ ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ ಕಾಲೇಜಿನಲ್ಲಿ ಸಂಘರ್ಷ ವಾತಾವರಣ ಸೃಷ್ಠಿಗೆ ಸಂಚು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಕಾರ್ಯಕ್ರಮ‌‌ ನಡೆಯದಂತೆ ತಡೆಯಲು ಎಬಿವಿಪಿ ಯೋಜನೆ ಮಾಡಿದೆ. ಆ ಕಾರಣದಿಂದಲೇ ಪ್ರತಿಭಟನೆ ಆರಂಭವಾಗಿದೆ. ಹಲವು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.


ಆರ್ ಎಸ್ ಎಸ್ ನ ತೀವ್ರ ವಿರೋಧಿ ಆಗಿರುವ ಡಾ ಶಂಸುಲ್ ಇಸ್ಲಾಂ ಅವರು ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ ಎಂಬುದು ಆಕ್ರೋಷಕ್ಕೆ ಕಾರಣವಾಗಿದೆ. ಸಂಘ ಪರಿವಾರದ ತೀವ್ರ ವಿರೋಧಿಯಾಗಿರುವ ಡಾ ಶಂಸುಲ್ ಇಸ್ಮಾಂ ಉಪನ್ಯಾಸಕ್ಕೆ ಕರೆಸಲಾಗಿದೆ. ಪ್ರಧಾನಿ ಮೋದಿ ವಿರೋಧಿಯಾಗಿರುವ ಡಾ ಶಂಸುಲ್ ಇಸ್ಮಾಂ ಅವರು ಉಪನ್ಯಾಸ ಮಾಡಬಾರದು ಎಂಬುದು ವಿದ್ಯಾರ್ಥಿಗಳ ವಾದವಾಗಿದೆ.


ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ  ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿರುವುದನ್ನು ಪೊಲೀಸರು ತಡೆದಿದ್ದಾರೆ. ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆಯಾಗಿದೆ

ಚಾಕೋಲೇಟ್‌ ಎಂದು ಭಾವಿಸಿ ಮಾತ್ರೆ ತಿಂದಿದ್ದ 4 ವರ್ಷದ ಮಗು ಸಾವು

Posted by Vidyamaana on 2024-03-08 07:22:23 |

Share: | | | | |


ಚಾಕೋಲೇಟ್‌ ಎಂದು ಭಾವಿಸಿ ಮಾತ್ರೆ ತಿಂದಿದ್ದ 4 ವರ್ಷದ ಮಗು ಸಾವು

ಪೋಷಕರೇ ಎಚ್ಚರ: ಮಕ್ಕಳ ಎದುರು ಮಾತ್ರೆಗಳನ್ನ ಇಟ್ಟು ಎಲ್ಲೂ ಹೋಗ್ಬೇಡಿ, ಅಪಾಯ ಕಟ್ಟಿಟ್ಟ ಬುತ್ತಿ


ಚಿತ್ರದುರ್ಗ: ಚಾಕೋಲೇಟ್‌ ಎಂದುಕೊಂಡು ಮನೆಯಲ್ಲಿದ್ದ ಮಾತ್ರೆ ಸೇವಿಸಿದ್ದ 4 ವರ್ಷದ ಗಂಡು ಮಗು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.ಚಿತ್ರದುರ್ಗ ತಾಲೂಕು ಕಡಬನಕಟ್ಟೆ ನಿವಾಸಿ ವಸಂತಕುಮಾರ್‌ ಹಾಗೂ ಪವಿತ್ರಾ ದಂಪತಿ ಪುತ್ರ ಹೃತ್ವಿಕ್‌ ಮೃತಪಟ್ಟ ಮಗು.ಮಾ.2ರಂದು ಮಧ್ಯಾಹ್ನ 12:30ರ ಸುಮಾರಿಗೆ ಮನೆಯಲ್ಲಿ ಯಾರೂ ಯಾರೂ ಇಲ್ಲದ ವೇಳೆ ಕಪಾಟಿನಲ್ಲಿದ್ದ ಮಾತ್ರೆಗಳನ್ನು ಮಗು ತಿಂದಿದೆ. ನಂತರ ಸುಸ್ತಾಗಿದ್ದು, ತಾಯಿಗೆ ಸನ್ನೆಯ ಮೂಲಕ ಮಾತ್ರೆ ತಿಂದಿರುವುದನ್ನು ತಿಳಿಸಿದೆ.


ತಕ್ಷಣ ಮಗುವನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಾ.3ರಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾ.6ರಂದು ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.


ಈ ಕುರಿತು ಮೃತ ಮಗುವಿನ ತಂದೆ ವಸಂತಕುಮಾರ್‌ ತುರುವನೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇಂದು ಪ್ರಧಾನಿ ಮೋದಿಯಿಂದ ರಾಮಮಂದಿರ ಲೋಕರ್ಪಣೆ ಇಡೀ ಪ್ರಪಂಚದ ಚಿತ್ತ ಅಯ್ಯೋಧ್ಯೆಯತ್ತ

Posted by Vidyamaana on 2024-01-22 07:44:18 |

Share: | | | | |


ಇಂದು ಪ್ರಧಾನಿ ಮೋದಿಯಿಂದ ರಾಮಮಂದಿರ ಲೋಕರ್ಪಣೆ  ಇಡೀ ಪ್ರಪಂಚದ ಚಿತ್ತ ಅಯ್ಯೋಧ್ಯೆಯತ್ತ

ಅಯ್ಯೋಧ್ಯೆ: ರಾಮ ಮಂದಿರದ ಭವ್ಯ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ನವ ವಧುವಿನಂತೆ ಅಯ್ಯೋಧ್ಯೆ ಕಂಗೋಳಿಸುತ್ತಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಎಲ್ಲಾ ರೀತಿಯ ಅಲಂಕಾರಗಳಿಂದ ಅಲಂಕರಿಸಲಾಗಿದೆ.ಪ್ರಾಣ ಪ್ರತಿಷ್ಠಾ ಸಮಾರಂಭದ ತಯಾರಿಗಾಗಿ ಪವಿತ್ರ ನಗರವನ್ನು ರೋಮಾಂಚಕ ಹೂವುಗಳಿಂದ ಅಲಂಕರಿಸಲಾಗಿದೆ. ಜನವರಿ 23 ರಿಂದ ಸಾರ್ವಜನಿಕರಿಗೆ ದರ್ಶನಕ್ಕಾಗಿ ರಾಮ ಮಂದಿರವನ್ನು ತೆರೆಯಲಾಗುವುದು ಎಂದು ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ.


ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ದೇವಾಲಯದ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಸೇರಿದಂತೆ ಇತರ ಗಣ್ಯರ ಸಮ್ಮುಖದಲ್ಲಿ ಶ್ರೀ ರಾಮ್ ಜನ್ಮಭೂಮಿ ದೇವಾಲಯವನ್ನು ಇಂದು ಉದ್ಘಾಟಿಸಲಾಗುವುದು.


ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ನಡೆಯಲಿದೆ. ಜನವರಿ 23 ರಿಂದ ಸಾರ್ವಜನಿಕರಿಗೆ ದರ್ಶನಕ್ಕಾಗಿ ರಾಮ ಮಂದಿರವನ್ನು ತೆರೆಯಲಾಗುವುದು ಎಂದು ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ದೇವಾಲಯದ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಸೇರಿದಂತೆ ಇತರ ಗಣ್ಯರ ಸಮ್ಮುಖದಲ್ಲಿ ಶ್ರೀ ರಾಮ್ ಜನ್ಮಭೂಮಿ ದೇವಾಲಯವನ್ನು ಜನವರಿ 22 ರಂದು ಉದ್ಘಾಟಿಸಲಾಗುವುದು. ಪ್ರಾಣ ಪ್ರತಿಷ್ಠಾಪನೆಗೆ ಮುಂಚಿತವಾಗಿ ಅಯೋಧ್ಯೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಲತಾ ಮಂಗೇಶ್ಕರ್ ಚೌಕ್ ನಲ್ಲಿ ಎಟಿಎಸ್ ಕಮಾಂಡೋಗಳನ್ನು ನಿಯೋಜಿಸಲಾಗಿದೆ. ಅಯೋಧ್ಯೆಯಲ್ಲಿ ಇಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಮುಂಚಿತವಾಗಿ ಅಯೋಧ್ಯೆಯ ರಾಮ ದೇವಾಲಯವನ್ನು ಸುಂದರವಾಗಿ ಅಲಂಕರಿಸಲಾಗಿದೆ.


ಕ್ರಿಕೆಟ್ ದಂತಕಥೆಗಳಾದ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ, ಎಂಎಸ್ ಧೋನಿ, ಬಾಲಿವುಡ್ ಸೂಪರ್ಸ್ಟಾರ್ಗಳಾದ ಅಮಿತಾಬ್ ಬಚ್ಚನ್, ರಜನಿಕಾಂತ್, ಅನುಷ್ಕಾ ಶರ್ಮಾ, ಆಲಿಯಾ ಭಟ್, ರಣಬೀರ್ ಕಪೂರ್ ಮತ್ತು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಸೇರಿದಂತೆ 7,000 ಕ್ಕೂ ಹೆಚ್ಚು ಜನರನ್ನು ದೇವಾಲಯದ ಟ್ರಸ್ಟ್ ಆಹ್ವಾನಿಸಿದೆ.


ಅಯೋಧ್ಯೆ ರಾಮ ಮಂದಿರದ ಮಹತ್ವವೇನು?

ಅಯೋಧ್ಯೆ ರಾಮ ಮಂದಿರವನ್ನು ಹಿಂದೂಗಳ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇದು ಭಗವಾನ್ ರಾಮನ ಜನ್ಮಸ್ಥಳವೆಂದು ನಂಬಲಾಗಿದೆ ಮತ್ತು ಇದನ್ನು ಪವಿತ್ರ ಸ್ಥಳವೆಂದು ಪೂಜಿಸಲಾಗುತ್ತದೆ. ಆಗಸ್ಟ್ 5, 2020 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರಕ್ಕೆ ಶಿಲಾನ್ಯಾಸ ಮಾಡಿದ್ದರು.


ರಾಮ ಮಂದಿರ ನಿರ್ಮಾಣವನ್ನು ಕೇಂದ್ರವು ರಚಿಸಿದ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮೇಲ್ವಿಚಾರಣೆ ನಡೆಸುತ್ತಿತ್ತು. ದೇವಾಲಯದ ನಿರ್ಮಾಣದ ಮೇಲ್ವಿಚಾರಣೆ ನಡೆಸುತ್ತಿರುವ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆರಂಭದಲ್ಲಿ ವೆಚ್ಚವನ್ನು 1,800 ಕೋಟಿ ರೂ.ಗಳೆಂದು ಅಂದಾಜಿಸಿತ್ತು. ಈ ಅಂದಾಜು ನಿರ್ಮಾಣ ವೆಚ್ಚಗಳು, ಸಾಮಗ್ರಿ ವೆಚ್ಚಗಳು, ಯಂತ್ರೋಪಕರಣಗಳು, ಕಾರ್ಮಿಕರು ಮತ್ತು ಇತರ ಆಡಳಿತಾತ್ಮಕ ವೆಚ್ಚಗಳಂತಹ ವಿವಿಧ ಅಂಶಗಳನ್ನು ಒಳಗೊಂಡಿದೆ.

ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ಮಾಡಿದ ನಂತರ 2020 ರಲ್ಲಿ ರಾಮ ದೇವಾಲಯದ ನಿರ್ಮಾಣ ಪ್ರಾರಂಭವಾಯಿತು. 2019 ರಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ದೇವಾಲಯದ ನಿರ್ಮಾಣ ಪ್ರಾರಂಭವಾಯಿತು, ಅಲ್ಲಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪಿನಲ್ಲಿ ಉತ್ತರ ಪ್ರದೇಶದ ಅಯೋಧ್ಯೆ ಪಟ್ಟಣದ ವಿವಾದಿತ 2.77 ಎಕರೆ ಸ್ಥಳವನ್ನು ದೇವಾಲಯ ನಿರ್ಮಾಣಕ್ಕಾಗಿ ಹಿಂದೂ ಕಡೆಯವರಿಗೆ ಹಸ್ತಾಂತರಿಸಿತು. ಹಿಂದೂ ಪುರಾಣಗಳ ಪ್ರಕಾರ, ಭಗವಾನ್ ರಾಮನು ಅಭಿಜಿತ್ ಮುಹೂರ್ತ, ಮೃಗಶಿರ್ಷ ನಕ್ಷತ್ರ, ಅಮೃತ ಸಿದ್ಧಿ ಯೋಗ ಮತ್ತು ಸರ್ವಾರ್ಥ ಸಿದ್ಧಿ ಯೋಗದ ಸಂಗಮದಲ್ಲಿ ಜನಿಸಿದನೆಂದು ನಂಬಲಾಗಿದೆ. ಗಮನಾರ್ಹವಾಗಿ, ಈ ಎಲ್ಲಾ ಅನುಕೂಲಕರ ಅವಧಿಗಳು ಜನವರಿ 22, 2024 ರಂದು ಹೊಂದಿಕೆಯಾಗಲಿವೆ.


ಅಯೋಧ್ಯೆಯ ರಾಮ ಮಂದಿರವನ್ನು ತಲುಪುವುದು ಹೇಗೆ?

ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ರಸ್ತೆ, ರೈಲು ಅಥವಾ ವಿಮಾನದ ಮೂಲಕ ತಲುಪಬಹುದು. ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣವನ್ನು ಇತ್ತೀಚೆಗೆ ಉದ್ಘಾಟಿಸಲಾಗಿದ್ದು, ದೇವಾಲಯದ ನಗರವನ್ನು ಭಾರತದ ಇತರ ಭಾಗಗಳೊಂದಿಗೆ ಸಂಪರ್ಕಿಸುತ್ತದೆ. ರೈಲು ಮೂಲಕ, ಅಯೋಧ್ಯೆ ಲಕ್ನೋದಿಂದ 135 ಕಿಲೋಮೀಟರ್, ಗೋರಖ್ಪುರದಿಂದ 164 ಕಿಲೋಮೀಟರ್, ಪ್ರಯಾಗ್ರಾಜ್ನಿಂದ 164 ಕಿಲೋಮೀಟರ್ ಮತ್ತು ವಾರಣಾಸಿಯಿಂದ 189 ಕಿಲೋಮೀಟರ್ ದೂರದಲ್ಲಿದೆ. ರಸ್ತೆಯ ಮೂಲಕ ಪ್ರಯಾಣಿಸುವವರಿಗೆ, ಉತ್ತರ ಪ್ರದೇಶ ಸಾರಿಗೆ ನಿಗಮದ ಬಸ್ಸುಗಳು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತವೆ, ಇದು ಎಲ್ಲಾ ಸ್ಥಳಗಳಿಂದ ಅನುಕೂಲಕರ ಪ್ರವೇಶವನ್ನು ಒದಗಿಸುತ್ತದೆ.


ರಾಮ್ ಲಲ್ಲಾ ಆರತಿಯನ್ನು ಪ್ರತಿದಿನ ಮೂರು ಬಾರಿ ನಿಗದಿಪಡಿಸಲಾಗಿದೆ. ಭಕ್ತರು ಬೆಳಿಗ್ಗೆ 6:30, ಮಧ್ಯಾಹ್ನ 12 ಮತ್ತು ಸಂಜೆ 7:30 ಕ್ಕೆ ಆರತಿಯಲ್ಲಿ ಭಾಗವಹಿಸಬಹುದು. ಒಬ್ಬರಿಗೆ ಟ್ರಸ್ಟ್ ಮಾಡಿದ ಪಾಸ್ ಅಗತ್ಯವಿದೆ, ಇದಕ್ಕಾಗಿ ನೀವು ಐಡಿ ಪ್ರೂಫ್ ಒದಗಿಸಬೇಕು. ಜನವರಿ 23 ರಿಂದ ರಾಮ ಮಂದಿರ ಭಕ್ತರಿಗೆ ತೆರೆದಿರುತ್ತದೆ. ದರ್ಶನದ ಸಮಯವನ್ನು ಎರಡು ಸ್ಲಾಟ್ಗಳಾಗಿ ವಿಂಗಡಿಸಲಾಗಿದೆ - ಬೆಳಿಗ್ಗೆ 7 ರಿಂದ 11:30 ಮತ್ತು ಮಧ್ಯಾಹ್ನ 2 ರಿಂದ 7 ರವರೆಗೆ.

ಕರ್ನಾಟಕದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ರಾಮ್ ಲಲ್ಲಾ ವಿಗ್ರಹವನ್ನು ಕೆತ್ತಿದ್ದಾರೆ.


ಅಯೋಧ್ಯೆಯಲ್ಲಿ ರಾಮ ಮಂದಿರದ ಗಾತ್ರವೆಷ್ಟು?

ಒಟ್ಟು ವಿಸ್ತೀರ್ಣ: 2.7 ಎಕರೆ

ಒಟ್ಟು ನಿರ್ಮಾಣ ಪ್ರದೇಶ: 57,400 ಚದರ ಅಡಿ.

ದೇವಾಲಯದ ಒಟ್ಟು ಉದ್ದ: 360 ಅಡಿ

ದೇವಾಲಯದ ಒಟ್ಟು ಅಗಲ: 235 ಅಡಿ

ಶಿಖರ ಸೇರಿದಂತೆ ದೇವಾಲಯದ ಒಟ್ಟು ಎತ್ತರ: 161 ಅಡಿ

ಒಟ್ಟು ಮಹಡಿಗಳ ಸಂಖ್ಯೆ: 3

ಪ್ರತಿ ಮಹಡಿಯ ಎತ್ತರ: 20 ಅಡಿ

ದೇವಾಲಯದ ನೆಲಮಹಡಿಯಲ್ಲಿರುವ ಕಂಬಗಳ ಸಂಖ್ಯೆ: 160

ದೇವಾಲಯದ ಮೊದಲ ಮಹಡಿಯಲ್ಲಿರುವ ಕಂಬಗಳ ಸಂಖ್ಯೆ: 132

ದೇವಾಲಯದ ಎರಡನೇ ಮಹಡಿಯಲ್ಲಿರುವ ಕಂಬಗಳ ಸಂಖ್ಯೆ: 74

ದೇವಾಲಯದಲ್ಲಿರುವ ಶಿಖರಗಳು ಮತ್ತು ಮಂಟಪಗಳ ಸಂಖ್ಯೆ: 5

ದೇವಾಲಯದ ದ್ವಾರಗಳ ಸಂಖ್ಯೆ: 12


ರಾಮ ಮಂದಿರವನ್ನು ಪ್ರವೇಶಿಸಲು, ನೀವು ಭದ್ರತಾ ಮಾನದಂಡಗಳನ್ನು ನೋಡಿಕೊಳ್ಳಬೇಕು. ಮೊಬೈಲ್ ಫೋನ್ಗಳು, ಇಯರ್ಫೋನ್ಗಳು ಅಥವಾ ಇತರ ಯಾವುದೇ ಗ್ಯಾಜೆಟ್ಗಳಂತಹ ಎಲೆಕ್ಟ್ರಿಕ್ ವಸ್ತುಗಳನ್ನು ದೇವಾಲಯಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ರಾಮ ಮಂದಿರದ ಉದ್ಘಾಟನೆಯ ಸಮಯದಲ್ಲಿ ಸಾಂಪ್ರದಾಯಿಕ ಭಾರತೀಯ ಉಡುಪನ್ನು ಧರಿಸಬಹುದು. ಪುರುಷರು ಧೋತಿ ಅಥವಾ ಕುರ್ತಾ-ಪೈಜಾಮಾ ಧರಿಸಬಹುದು. ಮತ್ತೊಂದೆಡೆ, ಮಹಿಳೆಯರು ಸಲ್ವಾರ್ ಸೂಟ್ ಅಥವಾ ಸೀರೆಗಳನ್ನು ಧರಿಸಬಹುದು. ಆದಾಗ್ಯೂ, ಈ ಬಗ್ಗೆ ರಾಮ್ ದೇವಾಲಯ ಟ್ರಸ್ಟ್ ಯಾವುದೇ ಡ್ರೆಸ್ ಕೋಡ್ ವಿಧಿಸಿಲ್ಲ.


ಪ್ರಾಣ ಪ್ರತಿಷ್ಠಾ ಸಮಾರಂಭದ ನೇರ ಪ್ರದರ್ಶನವು ಜನವರಿ 22 ರಂದು ದೂರದರ್ಶನದಲ್ಲಿ ಪ್ರಸಾರವಾಗಲಿದೆ. ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರದಿಂದ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಸಂಪೂರ್ಣ ಧಾರ್ಮಿಕ ಸಮಾರಂಭವನ್ನು ನೇರ ಪ್ರಸಾರ ಮಾಡಲಾಗುತ್ತದೆ. ವೀಕ್ಷಕರು ದೂರದರ್ಶನದ ಡಿಡಿ ನ್ಯೂಸ್ ಮತ್ತು ಡಿಡಿ ನ್ಯಾಷನಲ್ ಚಾನೆಲ್ ಗಳಲ್ಲಿ, ಖಾಸಗಿ ಮಾಧ್ಯಮದಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು


ರಾಮ ಮಂದಿರ ಪ್ರಾಣ ಪ್ರತಿಷ್ಠಾನಕ್ಕೆ ಯಾವ ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ?

ಜನವರಿ 22 ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು, ಅಂತರರಾಷ್ಟ್ರೀಯ ಅತಿಥಿಗಳು ಮತ್ತು ಮಂದಿರ ಚಳವಳಿಗೆ ಅಸಾಧಾರಣ ಕೊಡುಗೆ ನೀಡಿದ ಸಾಮಾನ್ಯ ಜನರನ್ನು ಒಳಗೊಂಡ ಕೇವಲ 7,000 ಕ್ಕೂ ಹೆಚ್ಚು ವ್ಯಕ್ತಿಗಳಿಗೆ ಆಹ್ವಾನವನ್ನು ನೀಡಲಾಗಿದೆ.

ಫಟಾಫಟ್ ಕಂಬ ತೆರವು ಗೊಳಿಸಿದ ಮೆಸ್ಕಾಂ

Posted by Vidyamaana on 2023-05-31 12:09:55 |

Share: | | | | |


ಫಟಾಫಟ್ ಕಂಬ ತೆರವು ಗೊಳಿಸಿದ ಮೆಸ್ಕಾಂ

ಪುತ್ತೂರು: ಕುಂಬ್ರದ ಶೇಖಮಲೆಯಲ್ಲಿ ಭಾರಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳನ್ನು ಮೆಸ್ಕಾಂ ಅಧಿಕಾರಿ, ಸಿಬ್ಬಂದಿಗಳು ಫಟಾಫಟ್ ಬದಲಾಯಿಸಿ, ಸಾರ್ವಜನಿಕರ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಸ್ಥಳೀಯರ ಸಹಕಾರದೊಂದಿಗೆ ಧರೆಗುರುಳಿದ ಮರಗಳನ್ನು ತಕ್ಷಣವೇ ತೆರವು ಮಾಡಲಾಯಿತು.

ಶೇಖಮಲೆಯಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿ ಸಂಚಾರಕ್ಕೆ ಅಡಚಣೆಯಾಗಿತ್ತು. ಸ್ಥಳೀಯರು ವಿದ್ಯುತ್ ಸಮಸ್ಯೆಯಿಂದ ಸಂಕಷ್ಟಕ್ಕೀಡಾಗಿದ್ದರು. ತಕ್ಷಣ ಸ್ಪಂದಿಸಿದ ಮೆಸ್ಕಾಂ, ಧರೆಗುರುಳಿದ‌ ವಿದ್ಯುತ್ ಕಂಬಗಳನ್ನು ತೆರವು ಮಾಡಿ, ತಂತಿಗಳನ್ನು ತೆರವು ಮಾಡಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.

ಧರೆಗುರುಳಿದ ಮರವನ್ನು ಸ್ಥಳೀಯರು ತೆರವು ಮಾಡಿದರು. ಪೊಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು. ಅಧಿಕಾರಿ, ಸಿಬ್ಬಂದಿಗಳಿಗೆ ಸ್ಥಳೀಯರು ಸಹಕಾರ ನೀಡಿದರು.

ಶಾಸಕ ಅಶೋಕ್ ರೈ ಸೂಚನೆ:

ಶಾಸಕ ಅಶೋಕ್ ಕುಮಾರ್ ರೈ ಅವರು ಇತ್ತೀಚೆಗೆ ನಡೆದ ಸಭೆಯಲ್ಲಿ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡುತ್ತಾ, ವಿದ್ಯುತ್ ಕಡಿತಗೊಂಡು 24 ಗಂಟೆಯೊಳಗೆ ವ್ಯವಸ್ಥೆ ಸರಿಪಡಿಸಬೇಕು ಎಂದಿದ್ದರು. ಅದರಂತೆ ಸಕ್ರೀಯರಾಗಿರುವ ಮೆಸ್ಕಾಂ ಅಧಿಕಾರಿ, ಸಿಬ್ಬಂದಿಗಳು ವಿದ್ಯುತ್ ತಂತಿ, ಕಂಬ ಧರೆಗುರುಳಿದ ಕೆಲವೇ ಕ್ಷಣಗಳಲ್ಲಿ ತೆರವು ಮಾಡಿದ್ದಾರೆ.

ಪ್ರಮಾಣವಚನ ಸ್ವೀಕಾರ ಸಮಾರಂಭ

Posted by Vidyamaana on 2023-05-20 04:04:58 |

Share: | | | | |


ಪ್ರಮಾಣವಚನ ಸ್ವೀಕಾರ ಸಮಾರಂಭ

ಬೆಂಗಳೂರು : ಇಂದು ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ  ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಲಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಉಳ್ಳಾಲದಲ್ಲಿ ಸೈಟ್ ಅಭಿವೃದ್ಧಿ ಹೆಸರಲ್ಲಿ ಬಿಲ್ಡರ್‌ನಿಂದ 86 ಲಕ್ಷ ಹಣ ಪಡೆದು ವಂಚನೆ ; ಮಂಗಳೂರಿನ ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ಮೇಲೆ ಕೇಸು ದಾಖಲು

Posted by Vidyamaana on 2024-05-29 05:56:24 |

Share: | | | | |


ಉಳ್ಳಾಲದಲ್ಲಿ ಸೈಟ್ ಅಭಿವೃದ್ಧಿ ಹೆಸರಲ್ಲಿ ಬಿಲ್ಡರ್‌ನಿಂದ 86 ಲಕ್ಷ ಹಣ ಪಡೆದು ವಂಚನೆ ; ಮಂಗಳೂರಿನ ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ಮೇಲೆ ಕೇಸು ದಾಖಲು

ಮಂಗಳೂರು, ಮೇ.27: ಸೈಟ್ ಅಭಿವೃದ್ಧಿ ಪಡಿಸುವ ನೆಪದಲ್ಲಿ ಬಿಲ್ಡರ್‌ ಒಬ್ಬರಿಂದ 86 ಲಕ್ಷ ರೂ. ಹಣ ಪಡೆದು ವಂಚಿಸಿ, ಲೇಔಟ್‌ ವ್ಯವಹಾರಕ್ಕೆ ಅಡ್ಡಿಪಡಿಸಿ,  ಜೀವ ಬೆದರಿಕೆಯೊಡ್ಡಿದ ಆರೋಪದಲ್ಲಿ ರಾಷ್ಟ್ರೀಕೃತ ಬ್ಯಾಂಕೊಂದರ ಮ್ಯಾನೇಜರ್‌ ಸಹಿತ ಬ್ರೋಕರ್‌, ಸಿವಿಲ್‌ ಗುತ್ತಿಗೆದಾರನ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ರಾಷ್ಟ್ರೀಕೃತ ಬ್ಯಾಂಕ್ ಒಂದರಲ್ಲಿ ಮ್ಯಾನೇಜರ್‌ ಆಗಿರುವ ಜೆಪ್ಪಿನಮೊಗರು ನಿವಾಸಿ ಪವನ್‌ ಕುಮಾರ್‌, ಬ್ರೋಕರ್‌ ಆಗಿರುವ ಗುರುರಾಜ್‌, ಸಿವಿಲ್‌ ಗುತ್ತಿಗೆದಾರ ಜಗದೀಶ್‌ ಹಾಗೂ ಅವರ ಸಹಚರ ಜಯಪ್ರಕಾಶ್‌ ಜೆ.ಪಿ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಉಳ್ಳಾಲದ ಪುಷ್ಪರಾಜ್ ಎಂಬವರು ಬೆಂಗಳೂರು ಮೂಲದ ವೆಂಕಟೇಶ್ ಮತ್ತು ಮಹೇಶ್ ಕುಮಾರ್ ಎಂಬಿಬ್ಬರು ಬಿಲ್ಡರ್‌ ಗಳ ಜೊತೆಗೂಡಿ ಮಂಗಳೂರಿನಲ್ಲಿ ಲೇಔಟ್‌ ನಿರ್ಮಿಸಿ ಸಾರ್ವಜನಿಕವಾಗಿ ಸೈಟ್‌ ಮಾರಾಟ ಮಾಡಲು ಯೋಜನೆ ಹಾಕಿದ್ದರು. ಇದೇ ಸಂದರ್ಭ ಬ್ಯಾಂಕ್‌ ಮ್ಯಾನೇಜರ್‌ ಪವನ್‌ ಕುಮಾರ್‌ ಎಂಬಾತ ಪರಿಚಯವಾಗಿದ್ದು ತನ್ನ ಮೂಲಕ ಉಳ್ಳಾಲದಲ್ಲಿ ನಾಲ್ಕು ಎಕ್ರೆ ಜಮೀನನ್ನು ಕ್ರಯಕ್ಕೆ ಕೊಡಿಸಿದ್ದರು. 2022ರ ಫೆಬ್ರವರಿ ತಿಂಗಳಲ್ಲಿ ನಿವೇಶನಗಳನ್ನು ವಿಂಗಡಿಸಿ ಮಾರಾಟ ಮಾಡಲು ಆರಂಭಿಸಿದ್ದರು. ಈ ಬಗ್ಗೆ ಪವನ್‌ ಕುಮಾರ್‌, ಬಿಲ್ಡರ್‌ ಅವರಲ್ಲಿ  ಲೇಔಟ್‌ನ ಡ್ರೈನೇಜ್‌ ಇನ್ನಿತರ ಕೆಲಸಗಳನ್ನು ತಾನೇ ಮಾಡಿಸುತ್ತೇನೆಂದು ಹೇಳಿ ಮಾತುಕತೆ ನಡೆಸಿದ್ದರು.



Leave a Comment: