ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ಸುದ್ದಿಗಳು News

Posted by vidyamaana on 2024-07-24 16:52:02 |

Share: | | | | |


ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ವದೆಹಲಿ : ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದರು.


ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯ ಒಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ.


ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಇದಕ್ಕುತ್ತರಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೇನೆಯಿಂದ ನಿವೃತ್ತಿ ಪಡೆದು ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಗ್ಗೆ ಗೌರವ ಹೊಂದಿದ್ದು, ರೈಲ್ವೇ ವಿಚಾರಗಳ ಬಗ್ಗೆ ಯಾವುದೇ ಮನವಿಯಿದ್ದರೂ ನನ್ನ ಕಚೇರಿಗೆ ಬಂದು ವೈಯಕ್ತಿಕವಾಗಿ ಚರ್ಚಿಸಬಹುದು. ಪರಿಹರಿಸಲು ಮುಕ್ತನಿದ್ದೇನೆ ಎಂದು ಹೇಳಿದರು.

 Share: | | | | |


ಕೊಟ್ಟ ಮಾತಿನಂತೆ ಟಿಬಿ ಡ್ಯಾಂ ಗೆ ಗೇಟ್ ಕೂರಿಸಿದ ಕಾರ್ಮಿಕರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ತಲಾ 50,000 ರೂ.ಬಹುಮಾನ!

Posted by Vidyamaana on 2024-08-20 07:19:18 |

Share: | | | | |


ಕೊಟ್ಟ ಮಾತಿನಂತೆ ಟಿಬಿ ಡ್ಯಾಂ ಗೆ ಗೇಟ್ ಕೂರಿಸಿದ ಕಾರ್ಮಿಕರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ತಲಾ 50,000 ರೂ.ಬಹುಮಾನ!

ಹೊಸಪೇಟೆ : ತುಂಗಾಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ಕೂರಿಸಿದ ಕಾರ್ಮಿಕರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ತಲಾ 50,000 ರೂ. ಬಹುಮಾನ ನೀಡಿದ್ದಾರೆ.

ತುಂಗಾಭದ್ರಾ ಜಲಾಶಯದಲ್ಲಿ ಕ್ರೇನ್ ಅಪರೇಟರ್ಸ್, ಗೇಟ್ ಅನ್ನು ಜಲಾಶಯಕ್ಕೆ ಇಳಿಸುವ ಕಾರ್ಯದಲ್ಲಿ ತೊಡಗಿದವರು ಸೇರಿ ಒಟ್ಟು 20 ಪ್ರಮುಖ ಕಾರ್ಮಿಕರಿಗೆ ತಲಾ 50 ಸಾವಿರ ರೂ.ಗಳನ್ನು ನೀಡಲಾಗಿದೆ.

ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ ಬೆಂಗಳೂರಿನಲ್ಲಿ ಆತ್ಮಹತ್ಯೆ

Posted by Vidyamaana on 2023-10-26 20:47:47 |

Share: | | | | |


ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಬೆಂಗಳೂರು, ಅ.26: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ.


ಅರಿಶಿನಕುಂಟೆಯ ಆದರ್ಶನಗರದ ಮನೆಯಲ್ಲಿ ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ(25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಎರಡು ದಿನಗಳ ಹಿಂದೆ ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಮ್‍ನಲ್ಲಿ ನೇಣು ಬಿಗಿದುಕೊಂಡಿದ್ದು, ಅನುಮಾನಗೊಂಡ ತಂದೆ ರೂಮ್‍ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.


ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರದ ಧನಲಕ್ಷ್ಮೀ ಕುಟುಂಬ, 5 ವರ್ಷದಿಂದ ನೆಲಮಂಗಲದ ಅರಿಶಿನಕುಂಟೆಯ ಆದರ್ಶನಗರದಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ವಾಸವಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮಿ, ಕಾಡುಗೋಡಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.


ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವುದೋ ವಿಚಾರದಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಯುವತಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ

ಶಿವಮೊಗ್ಗದಲ್ಲಿ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆಂದು ಜಾಲತಾಣದಲ್ಲಿ ಸುಳ್ಳು ಸುದ್ದಿ

Posted by Vidyamaana on 2023-10-03 18:31:03 |

Share: | | | | |


ಶಿವಮೊಗ್ಗದಲ್ಲಿ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆಂದು ಜಾಲತಾಣದಲ್ಲಿ ಸುಳ್ಳು ಸುದ್ದಿ

ಶಿವಮೊಗ್ಗ, ಅ.3: ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆಂಬ ಸುಳ್ಳು ಸುದ್ಧಿ ಹರಡುತ್ತಿದೆ. ಈ ಸುದ್ಧಿ ಫಾರ್ವರ್ಡ್ ಮಾಡಿರುವ ಅಜ್ಗರ್ ಎಂಬಾತನ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ. ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆಂದು ಫಾರ್ವರ್ಡ್ ಮಾಡಿರುವವರ ವಿರುದ್ಧವೂ ಎಫ್.ಐ.ಆರ್. ದಾಖಲಿಸಲಾಗುವುದು ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ‌

ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!

ರಾಗುಗುಡ್ಡ ಘರ್ಷಣೆ ಹಿನ್ನೆಲೆಯಲ್ಲಿ ಬಿಗು ಬಂದೋಬಸ್ತ್ ಕೈಗೊಂಡಿರುವ ಎಸ್ಪಿ ಜಾಲತಾಣಗಳ ಮೇಲೆ ನಿಗಾ ಇಟ್ಟಿರುವುದನ್ನು ತಿಳಿಸಿದ್ದಾರೆ. ಪೊಲೀಸ್ ಎನ್ಕೌಂಟರ್ ಮಾಡಿದ್ದಾರೆಂದು ಫಾರ್ವರ್ಡ್ ಆಗಿದ್ದ ವಿಡಿಯೋ ಡಿಲಿಟ್ ಮಾಡಿಸಲಾಗಿದೆ. ಸುಳ್ಳು ಸುದ್ಧಿ ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.‌ ಬೇರೆ ರಾಜ್ಯದ, ಬೇರೆ ಜಿಲ್ಲೆಗಳ ವಿಡಿಯೋಗಳನ್ನು ಹರಡಲಾಗುತ್ತಿದೆ. ಅಂತಹವರ ವಿರುದ್ಧ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು. 


ರಾಗಿಗುಡ್ಡದಲ್ಲಿ ಎರಡು ಮಾರುತಿ ವ್ಯಾನ್ ಬಂದಿರುವ ಬಗ್ಗೆ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಅವರು ನ್ಯಾಮತಿಯಿಂದ ಮೆರವಣಿಗೆ ನೋಡಲು ಬಂದಿದ್ದವರಾಗಿದ್ದರು. ಅವರ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿದರೆ ಕಾನೂನು ಕ್ರಮ ಜರುಗಿಸಲಾಗತ್ತೆ. ಅನೇಕರು ಸುಳ್ಳು ವಿಡಿಯೋಗಳನ್ನು ಹರಡುತ್ತಿದ್ದಾರೆ. ಮೆರವಣಿಗೆಯಲ್ಲಿ ಕತ್ತಿಗಳನ್ನು ಝಳಪಿಸಿರುವುದಕ್ಕೆ ಆಕ್ಷೇಪ ಮಾಡಲಾಗಿದೆ. ಆದರೆ, ಕೆಲವು ಕಡೆ ಆಟಿಕೆ ಕತ್ತಿಗಳನ್ನು ತರಲಾಗಿದೆ. ಇದು ಒರಿಜಿನಲ್ ಕತ್ತಿ ಅಲ್ಲ ಎಂಬುದು ತಿಳಿದುಬಂದಿದೆ. ಅಕಸ್ಮಾತ್ ಒರಿಜಿನಲ್ ಕತ್ತಿ ಎಂದು ಕಂಡು ಬಂದರೆ, ಅಂತಹ ವಿಡಿಯೋ ನನಗೆ ಕಳಿಸಿ. ನಾನು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ. ಯಾವುದೇ ಸುಳ್ಳು ಸುದ್ಧಿ, ವಿಡಿಯೋಗಳನ್ನು ನಂಬಬೇಡಿ ಎಂದು ಜನರಿಗೆ ಮನವಿ ಮಾಡಿದ್ದಾರೆ. 


ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ, 24 ಕೇಸುಗಳನ್ನು ದಾಖಲಿಸಿಕೊಳ್ಳಲಾಗಿದೆ. ಒಟ್ಟು 60 ಜನರನ್ನು ಬಂಧಿಸಲಾಗಿದೆ. ಸಾರ್ವಜನಿಕರು ಸುಳ್ಳು ಸುದ್ಧಿಗಳನ್ನು ನಂಬಬೇಡಿ. ಇನ್ನೂ ಹಲವರನ್ನು ಬಂಧಿಸಲಿದ್ದೆವೆ. ಘಟನೆಗೆ ಕಾರಣರಾದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಹೊರಗಿನಿಂದ ಬಂದವರು ಯಾರಿದ್ದಾರೆಂದು ತನಿಖೆ ಮಾಡುತ್ತಿದ್ದೇವೆ. ಎಲ್ಲಾ ಆಯಾಮಗಳಲ್ಲಿ ಸಾಕ್ಷಿಗಳು ನಮಗೆ ಸಿಕ್ಕಿದೆ. ಯಾರು ಕಾರಣಕರ್ತರಿದ್ದಾರೆ, ಅವರ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಮೆರವಣಿಗೆಯಲ್ಲಿ ಮಚ್ಚು, ಲಾಂಗು ತೋರಿಸಿದವರ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ. ‌

ನಿಂದನಾತ್ಮಕ ಭಾಷೆ ಬಳಸ್ಟೇಡಿ : ಸ್ಕೃತಿ ಇರಾನಿ ಸಮರ್ಥಿಸಿಕೊಂಡು ನೆಟ್ಟಿಗರ ಮನಗೆದ್ದ ರಾಹುಲ್ ಗಾಂಧಿ

Posted by Vidyamaana on 2024-07-12 20:43:59 |

Share: | | | | |


ನಿಂದನಾತ್ಮಕ ಭಾಷೆ ಬಳಸ್ಟೇಡಿ : ಸ್ಕೃತಿ ಇರಾನಿ ಸಮರ್ಥಿಸಿಕೊಂಡು ನೆಟ್ಟಿಗರ ಮನಗೆದ್ದ ರಾಹುಲ್ ಗಾಂಧಿ

ನವದೆಹಲಿ : ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸ್ಮೃತಿ ಇರಾನಿ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ. ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿರುದ್ಧ ನಿಂದನಾತ್ಮಕ ಭಾಷೆ ಬಳಸದಂತೆ ಅವರು ಎಲ್ಲರಿಗೂ ಮನವಿ ಮಾಡಿದ್ದಾರೆ. ಸೋಲು ಮತ್ತು ಗೆಲುವು ಜೀವನದ ಒಂದು ಭಾಗ ಮತ್ತು ಅದು ಉಳಿದಿದೆ ಎಂದು ರಾಹುಲ್ ಗಾಂಧಿ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಎಕ್ಸ್ ನಲ್ಲಿ ಬರೆದಿದ್ದಾರೆ.ಸ್ಮೃತಿ ಇರಾನಿ ಜಿ ಅಥವಾ ಇತರ ಯಾವುದೇ ನಾಯಕರ ವಿರುದ್ಧ ನಿಂದನಾತ್ಮಕ ಭಾಷೆಯನ್ನ ಬಳಸುವುದನ್ನ ಮತ್ತು ಕೆಟ್ಟದಾಗಿ ವರ್ತಿಸುವುದನ್ನ ನಿಲ್ಲಿಸುವಂತೆ ನಾನು ಪ್ರತಿಯೊಬ್ಬರನ್ನು ಒತ್ತಾಯಿಸುತ್ತೇನೆ. ಅವರ ಟ್ವೀಟ್ ನಂತರ, ಅವರು ಹೃದಯಗಳನ್ನ ಗೆದ್ದಿದ್ದಾರೆ ಎಂದು ಜನರು ಹೇಳಿದರು

ಅಯೋಧ್ಯೆ ರಾಮ ಮಂದಿರ ದರ್ಶನದ ಸಮಯ ವಿಸ್ತರಣೆ : ಹೊಸ ವೇಳಾಪಟ್ಟಿ ಪರಿಶೀಲಿಸಿ

Posted by Vidyamaana on 2024-01-25 07:56:21 |

Share: | | | | |


ಅಯೋಧ್ಯೆ ರಾಮ ಮಂದಿರ ದರ್ಶನದ ಸಮಯ ವಿಸ್ತರಣೆ : ಹೊಸ ವೇಳಾಪಟ್ಟಿ ಪರಿಶೀಲಿಸಿ

ನವದೆಹಲಿ: ಅಯೋಧ್ಯೆಯ ರಾಮ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುವ ಹಿನ್ನೆಲೆಯಲ್ಲಿ, ದೇವಾಲಯದ ಆಡಳಿತವು ದರ್ಶನ ಸಮಯವನ್ನು ವಿಸ್ತರಿಸಲು ನಿರ್ಧರಿಸಿದೆ.ಸೀಮಿತ ಭೇಟಿಯ ಸಮಯದಿಂದಾಗಿ ದೇವಾಲಯಕ್ಕೆ ಭೇಟಿ ನೀಡಲು ಸಾಧ್ಯವಾಗದ ಭಕ್ತರಿಗೆ ಈ ನಿರ್ಧಾರವು ಪರಿಹಾರವಾಗಿದೆ.ಈಗ, ಭಕ್ತರು ರಾತ್ರಿ 10 ಗಂಟೆಯವರೆಗೆ ರಾಮ್ ಲಲ್ಲಾ ದರ್ಶನ ಪಡೆಯಬಹುದು.


ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೇವಾಲಯದ ಆಡಳಿತವು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಅಧಿಕೃತ ಮೂಲಗಳ ಪ್ರಕಾರ, ಸುಮಾರು ಐದು ಲಕ್ಷ ಭಕ್ತರು ಪ್ರಸ್ತುತ ಅಯೋಧ್ಯೆಯಲ್ಲಿ ಕ್ಯಾಂಪ್ ಮಾಡುತ್ತಿದ್ದು, ದೇವಾಲಯದಲ್ಲಿ ದರ್ಶನ ಪಡೆಯಲು ತಮ್ಮ ಸರದಿಗಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಹೆಚ್ಚುವರಿಯಾಗಿ, ನಿಯಮಿತವಾಗಿ ಭಕ್ತರ ಪ್ರವಾಹವೂ ಬರುತ್ತಿದೆ, ಇದು ಜನಸಂದಣಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ.ರಾಮಮಂದಿರಹೊಸದರ್ಶನದಸಮಯ


ಭೇಟಿಯ ಸಮಯದ ದೃಷ್ಟಿಯಿಂದ, ದೇವಾಲಯವು ಎರಡು ಪಾಳಿಗಳಲ್ಲಿ ದರ್ಶನಕ್ಕಾಗಿ ತೆರೆದಿರುತ್ತದೆ. ಬೆಳಗ್ಗೆ 7ರಿಂದ 11.30ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ ಪಾಳಿಯಲ್ಲಿ, ವಿಸ್ತೃತ ಸಮಯವು ಭಕ್ತರಿಗೆ ರಾತ್ರಿ 10 ರವರೆಗೆ ದರ್ಶನ ಪಡೆಯಲು ಅನುವು ಮಾಡಿಕೊಡುತ್ತದೆ, ಇದು ದೇವಾಲಯಕ್ಕೆ ಭೇಟಿ ನೀಡಲು ಮತ್ತು ದೈವಿಕ ಆಶೀರ್ವಾದ ಪಡೆಯಲು ಸಾಕಷ್ಟು ಸಮಯವನ್ನು ಒದಗಿಸುತ್ತದೆ.


ಭಕ್ತರು ರಾಮ್ ಲಲ್ಲಾ ದರ್ಶನವನ್ನು ಸಂಜೆ 7 ರ ಬದಲು ರಾತ್ರಿ 10 ರವರೆಗೆ ಮಾಡಬಹುದು.


ಬೆಳಿಗ್ಗೆ 7 ರಿಂದ 11.30 ರವರೆಗೆ ದರ್ಶನ ತೆರೆದಿರುತ್ತದೆ.


ಸಂಜೆ ಪಾಳಿಯಲ್ಲಿ ದರ್ಶನವು ಮಧ್ಯಾಹ್ನ 3 ರಿಂದ ರಾತ್ರಿ 10 ರವರೆಗೆ ತೆರೆದಿರುತ್ತದೆ.

ಸೀಟೂ ಹೋಯ್ತು ನೋಟೂ ಹೋಯ್ತು..– ಇದು ಪುತ್ತಿಲ ವಿರುದ್ಧ ಬೆಟ್ ಕಟ್ಟಿ ದುಡ್ಡು ಕಳೆದುಕೊಂಡವರ ವ್ಯಥೆ

Posted by Vidyamaana on 2023-05-16 23:26:35 |

Share: | | | | |


ಸೀಟೂ ಹೋಯ್ತು ನೋಟೂ ಹೋಯ್ತು..– ಇದು ಪುತ್ತಿಲ ವಿರುದ್ಧ ಬೆಟ್ ಕಟ್ಟಿ ದುಡ್ಡು ಕಳೆದುಕೊಂಡವರ ವ್ಯಥೆ

ಪುತ್ತೂರು: ಮಳೆ ನಿಂತರೂ ಮಳೆ ಹನಿ ನಿಲ್ಲಲಿಲ್ಲ ಎನ್ನುವ ಹಾಗೆ ವಿಧಾನಸಭಾ ಚುನಾವಣೆ ಮುಗಿದು ಸರ್ಕಾರ ರಚನೆಗೆ ಸರ್ಕಸ್ ಮುಂದುವರಿತ್ತಿರುವುದರ ನಡುವೆ ಇಲ್ಲಿ ಪುತ್ತೂರಿನಲ್ಲಿ ಬಿಜೆಪಿಗೆ ಮುಟ್ಟಿ ನೋಡಿಕೊಳ್ಳುವಂತೆ ಸೋಲಿನ ಪೆಟ್ಟು ನೀಡಿದ ಅರುಣ್ ಪುತ್ತಿಲ ಮತ್ತವರ ಹಿಂದುತ್ವದ ಸೇನೆಯ ರಣರೋಚಕ ಕಥೆಗಳು ಪತ್ತೂರು ಆಸುಪಾಸಿನವರ ಬಾಯಲ್ಲಿ ನಿತ್ಯ ನಲಿದಾಡುತ್ತಿದೆ.

   ಪುತ್ತೂರಿನಲ್ಲಿ ಬಿಜೆಪಿ  ಮುಖಂಡರ ಆತ್ಮವಿಶ್ವಾಸ ಎಷ್ಟರಮಟ್ಟಿಗೆ ಇತ್ತೆಂದರೆ ಕೌಂಟಿಂಗ್ ನಡೆಯುವ ದಿನದವರೆಗೂ ಅವರೆಲ್ಲರೂ ಬಿಜೆಪಿ ಗೆಲ್ಲುತ್ತದೆ ಇಲ್ಲವೇ ಎರಡನೇ ಸ್ಥಾನ ಪಡೆಯುತ್ತದೆ ಮತ್ತು ಪುತ್ತಿಲ ಅವರಿಗೆ 15 ಸಾವಿರಕ್ಕಿಂತ ಹೆಚ್ಚಿನ ಮತಗಳು ಬೀಳುವುದಿಲ್ಲ ಎಂಬ ವಿಶ್ವಾಸದಲ್ಲೇ ಇದ್ರು. ಆದರೆ ಅಂತಿಮವಾಗಿ ಪುತ್ತಿಲ ಅವರು 63 ಸಾವಿರದಷ್ಟು ಮತಗಳನ್ನು ಪಡೆದು ಅಲ್ಪ ಅಂತರದಿಂದ ಅಶೋಕ್ ಕುಮಾರ್ ರೈ ಎದುರು ಸೋತಿದ್ದು ಬಿಜೆಪಿ  ನಾಯಕರಿಗೆ ಬಿದ್ದ ಮೊದಲ ಪೆಟ್ಟಾಗಿತ್ತು.

     ಇದಕ್ಕಿಂತಲೂ ವಿಶೇಷವೆಂದ್ರೆ ಈ ಸಲ ಪುತ್ತೂರಿನಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಭರ್ಜರಿ ಬೆಟ್ಟಿಂಗ್ ನಡೆದಿತ್ತು ಎನ್ನುವುದು. ಕರಾವಳಿಯಲ್ಲಿ ಚುನಾವಣಾ ಬೆಟ್ಟಿಂಗ್ ರಾಜ್ಯದ ಬೇರೆ ಕಡೆಗಳಲ್ಲಿ ಇರುವಂತೆ ಇಲ್ಲ. ಆದರೆ ಈ ಬಾರಿ ಪುತ್ತೂರಿನಲ್ಲಿ ರಣ ರೋಚಕ ಫೈಟ್ ಇದ್ದ ಕಾರಣ ಭರ್ಜರಿಯಾಗಿಯೇ ಬೆಟ್ಟಿಂಗ್ ನಡೆದಿದೆ ಎನ್ನುವುದು ಇದೀಗ ಹೊರಬೀಳುತ್ತಿರುವ ಲೇಟೆಸ್ಟ್ ಸುದ್ದಿಯಾಗಿದೆ.

     ಅದರಂತೆ ಪುತ್ತಿಲ ಪರ ಇದ್ದವರು ಬಿಜೆಪಿ ಮೂರನೇ ಸ್ಥಾನಕ್ಕೆ ಇಳಿಯುತ್ತದೆ ಎಂದು ಬೆಟ್ಟಿಂಗ್ ಕಟ್ಟಿದ್ದಾರೆ. ಇದಕ್ಕರ ಎದುರಾಗಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗೋದಿಲ್ಲ ಎಂದು ಬಿಜೆಪಿ ಪರ ಇದ್ದವರು ಬೆಟ್ ಕಟ್ಟಿದ್ದಾರೆ. ಈ ಬೆಟ್ಟಿಂಗ್ ಮತದಾನ ನಡೆದ ಬಳಿಕ ಇನ್ನಷ್ಟು ಬಿರುಸಾಗಿಯೇ ನಡೆದಿದೆ! ಎಲ್ಲಿಯವರೆಗೆ ಅಂದ್ರೆ ಖಾಸಗಿ ಬ್ಯಾಂಕಿನ ಪ್ರಮುಖ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಏಳು ಕೋಟಿ ರೂಪಾಯಿಗಳಷ್ಟು ಹಣವನ್ನು ಈ ಬೆಟ್ಟಿಂಗ್ ನಲ್ಲಿ ಕಳೆದುಕೊಂಡಿದ್ದಾರೆ ಎಂಬ ಸುದ್ದಿ ಇದೀಗ ಪುತ್ತೂರಿನಲ್ಲಿ ಗೌಪ್ಯವಾಗೇನೂ ಉಳಿದಿಲ್ಲ!. ಇವರು ಮಾತ್ರವಲ್ಲದೇ ತಾಲೂಕು ಬಿಜೆಪಿ ಪದಾಧಿಕಾರಿಯೊಬ್ಬರು ತನ್ನ ಮನೆಯ ಒಡವೆಗಳನ್ನೆಲ್ಲಾ ಅಡವಿಟ್ಟು ಸುಮಾರು 50 ಲಕ್ಷ ರೂಪಾಯಿಗಳಷ್ಟು ಹಣವನ್ನು ಪುತ್ತಿಲ ವಿರುದ್ಧ ಬೆಟ್ ಕಟ್ಟಿ ಕಳ್ಕೊಂಡು ಇದೀಗ ಪೆಚ್ಚುಮೋರೆ ಹಾಕಿಕೊಂಡು ಓಡಾಡ್ತಿದ್ದಾರೆ ಎನ್ನುವ ವಿಚಾರ ಟಾಕ್ ಆಫ್ ದಿ ಟೌನ್ ಆಗಿದೆ! ಇನ್ನೊಬ್ಬ ಮಹಾಶಯರು ಹೊಸ ಉದ್ಯಮ ಪ್ರಾರಂಭಿಸಲೆಂದು ತೆಗೆದಿಟ್ಟಿದ್ದ 2.5ಕೋಟಿ ರೂಪಾಯಿಗಳನ್ನು ಬಿಜೆಪಿ ಪರ ಬೆಟ್ ಕಟ್ಟಿ ಇದೀಗ ತಲೆ ಮೇಲೆ ಟವಲ್ ಹಾಕ್ಕೊಂಡು ಕುಳಿತುಕೊಳ್ಳೋ ಪರಿಸ್ಥಿತಿಗಿಳಿದಿದ್ದಾರಂತೆ! ಹೀಗೆ ಈ ಸಲ ಏನಿಲ್ಲವೆಂದರೂ ಪುತ್ತೂರಿನಲ್ಲಿ ಬಿಜೆಪಿ –ಅರುಣ್ ಪುತ್ತಿಲ ಕಾದಾಟದಲ್ಲಿ ಫಲಿತಾಂಶದ ಪರ-ವಿರೋಧವಾಗಿ ಸುಮಾರು 75 ಕೋಟಿ ರೂಪಾಯಿಗಳಷ್ಟು ಮೊತ್ತದ ಭಾರೀ ಬೆಟ್ಟಿಂಗ್ ನಡೆದಿದೆ ಎನ್ನುವುದು ತಾಲೂಕಿನ ಮಟ್ಟಿಗೆ ಒಂದು ದಾಖಲೆಯೇ ಸರಿ.

   ಮತದಾನಕ್ಕೆ ಎರಡು ದಿನ ಇರುವಾಗ ಶುರುವಾದ ಈ ಬೆಟ್ಟಿಂಗ್ ಕೌಂಟಿಂಗ್ ದಿನ ಪೀಕ್ ನಲ್ಲಿತ್ತು. ಇಲ್ಲಿ ಪುತ್ತಿಲ ಪರ ಇದ್ದವರು ಕಡಿಮೆ ರೇಟಲ್ಲಿ ಜೂಜಿನ ಸವಾಲು ಪಡೆದು ಬಂಪರ್ ಲಾಟರಿ ಸಂಪಾದಿಸಿದ್ದಾರೆ. ದೊಡ್ಡ ಕುಳಗಳು ಮಾತ್ರವಲ್ಲದೇ ಅಂಗಡಿ ಮಾಲಕರು, ತೆಂಗಿನಕಾಯಿ ವ್ಯಾಪಾರಿಗಳು ಸೇರಿದಂತೆ ಜನಸಾಮಾನ್ಯರೂ ಸಹ ಈ ಬೆಟ್ಟಿಂಗ್ ನಲ್ಲಿ ದುಡ್ಡು ಕಟ್ಟಿ ಕೆಲವರು ಭರ್ಜರಿ ಲಾಭ ಮಾಡ್ಕೊಂಡಿದ್ರೆ ಇನ್ನು ಕೆಲವರು ನುಣ್ಣಗೆ ಬೋಳಿಸ್ಕೊಂಡು ಇದೀಗ ಒಟ್ರಾಶಿ ಟೆನ್ಷನ್ ನಲ್ಲಿದ್ದಾರೆ ಎನ್ನುವುದು ಪುತ್ತೂರಿನಲ್ಲಿ ಜನರ ಬಾಯಲ್ಲಿ ಓಡಾಡ್ತಿರೋ ವಿಷಯವಾಗಿದೆ.

ಒಟ್ಟಿನಲ್ಲಿ ಈ ಬಾರಿ ಪುತ್ತೂರಿನಲ್ಲಿ ಪುತ್ತಿಲರನ್ನು ಟಚ್ ಮಾಡಲು ಹೋಗಿ  ನಾಯಕರುಗಳು ಎಂದೂ ಮರೆಯಲಾಗದ ಏಟು ತಿಂದಿರುವುದು ಮಾತ್ರ ಸುಳ್ಳಲ್ಲ.

Recent News


Leave a Comment: