Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.
*💥Whats App Group ಗೆ ಸೇರಲು ಕ್ಲಿಕ್ ಮಾಡಿ
*ಹಣ ತೆಗೆದುಕೊಂಡು ಹೋದ ವಿಚಾರ*: ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.
ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.
ಮೂವರು ಕೂಡ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
Posted by Vidyamaana on 2024-01-22 21:36:16 |
ಪುತ್ತೂರು /ಸುಳ್ಯ :ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆಗಳ ತರಬೇತಿಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಗೆ 2024ರ ಸಾಲಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಕೊಡಲ್ಪಡುವ "ರಾಜ್ಯ ಯುವ ಸಾಂಘಿಕ" ಪ್ರಶಸ್ತಿಯು ಲಭಿಸಿದೆ.
ಸವಣೂರಿನಲ್ಲಿ ನಡೆಯುತ್ತಿರುವ ಯುವಜನ ಮೇಳದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಸುಳ್ಯ ಶಾಸಕಿ ಕುಮಾರಿ ಭಾಗೀರತಿ ಮುರುಳ್ಯ ರವರು ಪ್ರಶಸ್ತಿಯನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರಿಗೆ ಪ್ರಧಾನ ಮಾಡಿದರು. ಹತ್ತು ಹಲವಾರು ಪ್ರಶಸ್ತಿಗಳೊಂದಿಗೆ ಕಳೆದ 2023ರ ಸಾಲಿನ "ರಾಜ್ಯ ಶಿಕ್ಷಣ ಸೇವಾ ರತ್ನ", "ಮಂದಾರ", ಪ್ರಶಸ್ತಿಗಳೊಂದಿಗೆ ರಾಜ್ಯಮಟ್ಟದ "ರಾಜ್ಯ ಯುವ ಸಾಂಘಿಕ" ಪ್ರಶಸ್ತಿಯನ್ನು ವಿದ್ಯಾಮಾತಾ ಅಕಾಡೆಮಿಯು ಮುಡಿಗೇರಿಸಿಕೊಂಡಿದೆ. ಕರಾವಳಿ ಭಾಗದಲ್ಲಿ 5 ವರ್ಷದಿಂದ 40 ವರ್ಷದ ವರೆಗಿನವರಿಗೆ ಉದ್ಯೋಗ ಕೌಶಲ್ಯತೆ, ಶಿಕ್ಷಣ ಮೌಲ್ಯ, ವಿವಿಧ ನೇಮಕಾತಿಗಳಿಗೆ ತರಬೇತಿ, ಖಾಸಗಿ ಉದ್ಯೋಗಗಳ ನೇರ ಸಂದರ್ಶನಗಳನ್ನು ಒಂದೇ ಸೂರಿನಡಿಯಲ್ಲಿ ಕೊಡುವ ಏಕೈಕ ಸಂಸ್ಥೆ ಎಂಬ ಗರಿಮೆ ವಿದ್ಯಾಮಾತಾ ಅಕಾಡೆಮಿಗೆ ಇದೆ. "ಅತ್ಯಂತ ಕಷ್ಟಪಟ್ಟು ಬೆಳೆಸಿದ ಸಂಸ್ಥೆಯನ್ನು ಸಾಮಾಜಿಕವಾಗಿ ಗುರುತಿಸುತ್ತಿರುವುದು ಅತ್ಯಂತ ಖುಷಿ ಕೊಟ್ಟಿದೆ" ಎಂದು ಭಾಗ್ಯೇಶ್ ರೈ ಅವರು ಸಂತಸವನ್ನು ಹಂಚಿಕೊಂಡಿದ್ದಾರೆ.
Posted by Vidyamaana on 2024-03-11 12:58:02 |
ಗಳೂರು:ರಾಜ್ಯಾಧ್ಯಂತ ಕಾಟನ್ ಕ್ಯಾಂಡಿ ನಿಷೇಧ ಮಾಡಲಾಗಿದೆ ಅಂತ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರು ಹೇಳಿದರು. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಅವರು ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ, ವಿವಿಧ ಕಡೆಗಳಲ್ಲಿ ಎರಡು ಪದಾರ್ಥಗಳಲ್ಲಿ ನ ಸ್ಯಾಂಪಲ್ಗಳನ್ನು ಸಂಗ್ರಹಿಸ ಮಾಡಲಾಯಿತು.ಗೋಬಿ ಮಂಚೂರಿಯ 121 ಮಾದರಿಯನ್ನು ಸಂಗ್ರಹ ಮಾಡಲಾಯಿತು. ಇದಲ್ಲದೇ ಇದರಲ್ಲಿ ಎರಡು ವಿಶಕಾರಿ ಅಂಶಗಳು ಪತ್ತೆಯಾಗಿದ್ದು, ಇದರಿಂದ ಇದರ ಸೇವನೆ ಮಾಡುವುದು ಯೋಗ್ಯವಲ್ಲ ಅಂತ ಹೇಳಿದರು. ಇದನ್ನು ದಿನ ನಿತ್ಯ ಸೇವನೆ ಮಾಡುವುದರಿಂದ ಕ್ಯಾನ್ಸರ್ ಬರುವ ಸಂಭವಿದೆ ಅಂಥ ಹೇಳಿದರು. ಇದನ್ನು ಬಳಕೆ ಮಾಡುವುದು ಕಾನೂನು ಬಾಹಿರ ಅಂಥ ಹೇಳಿದರು.
ಮಾದರಿಗಳನ್ನು ಬೇರೆ ಬೇರೆ ಕಡೆ ಸಂಗ್ರಹಿಸಲಾಗಿತ್ತು. 171 ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಲಾಗಿದೆ. ಅದರಲ್ಲಿ ಕೃತಕ ಬಣ್ಣಗಳ ಅಸುರಕ್ಷಿತ ಮಾದರಿಯನ್ನು ಪತ್ತೆ ಹಚ್ಚಿರೋದು 107 ಇದೆ. ಸೋ ಗೋಬಿ ಮಂಚೂರಿನೂ ಮಾಡಿದ್ದೇವೆ, ಕ್ಯಾಂಡಿಯನ್ನೂ ಮಾಡಿದ್ದೇವೆ ಎಂದರು.
ಒಂದು ರೋಡಮೈನ್ ಬೀ, ಇನ್ನೊಂದು ಟಾಟ್ರಾಸೈನ್ ಅಂತ ಅದು ಇವತ್ತು ನಾವು ಈ ಒಂದು ಪದಾರ್ಥಗಳಲ್ಲಿ, ನಮ್ಮ ಸ್ಯಾಂಪಲ್ಲಿನಲ್ಲಿ ಸಿಕ್ಕಿದೆ. ಇದು ನಮ್ಮ ಉಪಯೋಗಕ್ಕೆ ಅನ್ ಸೇಫ್. ರೋಡಮೈನ್ ಬೀ ಕ್ಯಾನ್ಸರ್ ಗೆ ಬರೋದಕ್ಕೆ ಒಂದು ರೀತಿ ಕಾರಣವಾಗುತ್ತದೆ. ಈ ಕೆಮಿಕಲ್ ಅವಕಾಶ ಮಾಡಿಕೊಡುತ್ತದೆ. ವಿಶೇಷವಾಗಿ ಈ ಬಣ್ಣವನ್ನು ಯೂಸ್ ಮಾಡುವ ಹಾಗೋ ಇಲ್ಲ. ಯಾವ ಪದಾರ್ಥಗಳಲ್ಲೂ ಯೂಸ್ ಮಾಡೋ ಹಾಗೇಇಲ್ಲ. ಹಾಗಿದ್ದರೂ ಅದನ್ನು ಸ್ಯಾಂಪಲ್ ಗಳಲ್ಲಿ ಪರೀಕ್ಷೆಯಲ್ಲಿ ಬಳಕೆ ಮಾಡಿರೋದು ಕಂಡು ಬಂದಿದೆ ಎಂದರು.
ಯಾಕೆ ರೋಡಮೈನ್ ಬೀ ಬಳಕೆ ಮಾಡುತ್ತಾರೆ ಅಂದರೇ ಪಿಂಕ್ ಕಲರ್ ಬರೋದಕ್ಕೆ ಬಳಕೆ ಮಾಡುತ್ತಾರೆ. ಈಗ ನಮ್ಮ ಆರೋಗ್ಯ ಇಲಾಖೆಯ ಆಯುಕ್ತರು ಕೂಡ ಸುತ್ತೋಲೆ ಹೊರಡಿಸುತ್ತಾರೆ. ಅದನ್ನು ಬಳಕೆ ಮಾಡುವಂತಿಲ್ಲ. ಬಳಕೆ ಮಾಡಿದ್ರೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಗೋಬಿ ಮಂಚೂರಿ ಇದೊಂದು ಪುಡ್ ಐಟಂ. ಟಾಟ್ರಾಸೈನ್ ಏನಿದೆ ಅದು ಅಪ್ರೂವ್ಡ್ ಆರ್ಟಿಫಿಷಲ್ ಪುಡ್ ಕಲ್ಲರ್. ಕೆಮಿಕಲ್ ಬಳಕೆ ಮಾಡದಂತ ಗೋಬಿಮಂಚೂರಿಯನ್ನು ಬಳಕೆಗೆ ಅವಕಾಶ ನೀಡಲಾಗುತ್ತದೆ. ವಿತ್ ಔಟ್ ಕಲರ್ ಬಳಕೆ ಮಾಡಿರದ ಕ್ಯಾಂಡಿಯನ್ನು ಬಳಕೆ ಮಾಡೋದಕ್ಕೆ ಅವಕಾಶ ನೀಡಲಾಗುತ್ತದೆ. ಅದರ ಹೊರತಾಗಿ ಕಲರ್ ಬಳಕೆ ಮಾಡುವಂತ ಗೋಬಿಮಂಚೂರಿ, ಕ್ಯಾಂಡಿ ನಿಷೇಧ ಮಾಡಲಾಗುತ್ತಿದೆ ಎಂಬುದಾಗಿ ಘೋಷಣೆ ಮಾಡಿದರು
Posted by Vidyamaana on 2023-11-23 12:27:22 |
ಮಂಗಳೂರು, ನ.23: ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದರು.
ಹರೇಕಳ ಹಾಜಬ್ಬ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಮ್ ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರನ್ನು ಗುರುತಿಸಿದ ಏರ್ ಇಂಡಿಯ ಎಕ್ಸ್ ಪ್ರೆಸ್ ನ ಸಿಬ್ಬಂದಿ ವಿಮಾನದ ಕ್ಯಾಪ್ಟನ್ ನ ಗಮನಕ್ಕೆ ತಂದರು. ಕ್ಯಾಪ್ಟನ್ ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ "ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಅವರಿಗೆ ಹೃದಯ ತುಂಬಿದ ಅಭಿನಂದನೆಗಳು" ಎಂದರು.
ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಮಂಗಳೂರು ಹಾಗೂ ಉದ್ಯಮಿ ಫಾರೂಕ್ ಕನ್ಯಾನ ಪೋರ್ಟ್ ವೇ ಈ ವೇಳೆ ಹಾಜಬ್ಬರ ಜೊತೆಗಿದ್ದರು.
Posted by Vidyamaana on 2023-07-21 23:20:36 |
ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕ ಪತ್ರಿಕಾ ಭವನದ ನೇತೃತ್ವದಲ್ಲಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಮತ್ತು ಉಪನ್ಯಾಸ ಕಾರ್ಯಕ್ರಮ ಜುಲೈ 22ರಂದು ಬೆಳಿಗ್ಗೆ 10ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿದೆ.
ಸಮಾರಂಭವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಸಿದ್ದಿಕ್ ನೀರಾಜೆ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಪ್ರಿಯಾ ನಾಯ್ಕ್ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ, ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಿ.ಎಸ್. ರವಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಷಾಚಂದ್ರ ಮುಳಿಯ ಉಪಸ್ಥಿತರಿರುವರು.
ಇದೇ ಸಂದರ್ಭ ಹಿರಿಯ ಪತ್ರಿಕಾ ವಿತರಕ ಯು. ನಾಗರಾಜ್, ಬಳ್ಳಿ ನೆಕ್ಕಿಲಾಡಿಯ ಸಮಗ್ರ ಸಾವಯವ ಕೃಷಿಕ ಐರಿನ್ ಲೋಬೋ, ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದ ರೆಹನಾಝ್ ಅವರನ್ನು ಸನ್ಮಾನಿಸಲಾಗುವುದು.
ಬೆಂಗಳೂರು ಅನನ್ಯ ಎಂಟರ್ ಪ್ರೈಸಸ್ ನ ನಟೇಶ್ ಪೂಜಾರಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಕೆ.ವಿ. ಪ್ರಸಾದ್, ಬಿ.ಎಸ್.ಎಫ್. ನಿವೃತ್ತ ಕಮಾಂಡೆಂಟ್ ಚಂದಪ್ಪ ಮೂಲ್ಯ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
Posted by Vidyamaana on 2023-08-24 12:42:34 |
ವಿಶ್ವಕಪ್ ಚೆಸ್ ಫೈನಲ್ ಪಂದ್ಯದಲ್ಲಿ 2 ದಶಕಗಳ ಬಳಿಕ ಫೈನಲ್ ಪ್ರವೇಶಿಸಿದ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ವಿಶ್ವ ನಂ.1 ನಾರ್ವೆಯ ಮ್ಯಾಗ್ನಸ್ ಕಾರ್ಲ್ ಸನ್ವಿರುದ್ಧ ಸೋಲು ಕಂಡಿದ್ದಾರೆ.
ಆದರೆ ಸೋತರೂ ಕೊಟ್ಯಂತರ ಭಾರತೀಯ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ರಣರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ವಿಶ್ವದ ನಂಬರ್ 1 ಚೆಸ್ ತಾರೆಗೆ ಎಲ್ಲಾ ರೀತಿಯಲ್ಲೂ ಪೈಪೋಟಿ ನೀಡುವಲ್ಲಿ ಪ್ರಜ್ಞಾನಂದ ಯಶಸ್ವಿಯಾಗಿದ್ದರು. ಆದರೆ ಟೈಬ್ರೇಕ್ ನಲ್ಲಿ ಮೇಲುಗೈ ಸಾಧಿಸುವ ಮೂಲಕ ಕಾರ್ಲ್ ಸೆನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು.
ಗುರುವಾರ ನಡೆದ ಟೈ ಬ್ರೇಕರ್ ಪಂದ್ಯದಲ್ಲಿ ಮೊದಲ ಸೆಟ್ ನಲ್ಲಿ ಹಿನ್ನಡೆ ಅನುಭವಿಸಿದ ಅವರು ಆ ಬಳಿಕದ ಸುತ್ತಿನಲ್ಲಿ ಡ್ರಾ ಸಾಧಿಸಿದರು. ಆದರೆ 1-0 ಮುನ್ನಡೆ ಕಾಯ್ದುಕೊಂಡ ಮ್ಯಾಗ್ನಸ್ ಕಾರ್ಲ್ ಸನ್ ಗೆದ್ದು 6ನೇ ಬಾರಿ ವಿಶ್ವ ಕಿರೀಟ ಗೆದ್ದರು. ಪ್ರಜ್ಞಾನಂದ ಅವರು ವಿಶ್ವನಾಥನ್ ಆನಂದ್ ಬಳಿಕ ಚೆಸ್ ವಿಶ್ವಕಪ್ನಲ್ಲಿ ಫೈನಲ್ ಪ್ರವೇಶಿಸಿದ ಕೇವಲ 2ನೇ ಭಾರತೀಯ ಎನಿಸಿಕೊಂಡಿದ್ದಾರೆ
Posted by Vidyamaana on 2024-05-31 06:33:40 |
ಮಂಗಳೂರು : ಇಲ್ಲಿನ ಕಂಕನಾಡಿಯ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲಿ ಮೇ 24ರಂದು ನಮಾಜ್ ಮಾಡಿದ್ದರ ಸಂಬಂಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಕೊಂಡಿದ್ದ ಕದ್ರಿಯ ನಗರ ಪೂರ್ವ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವರಿಗೆ ಕಡ್ಡಾಯ ರಜೆ ನೀಡಲಾಗಿದೆ.
ಸಂಚಾರಕ್ಕೆ ಅಡೆತಡೆ ಮಾಡುವ ಉದ್ದೇಶ ಇಲ್ಲದೆ ನಮಾಜ್ ಮಾಡಿರುವುದರಿಂದ ಈ ಪ್ರಕರಣ ದಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಪ್ರಕರಣ ದಾಖಲಿಸಿದ್ದ ಪೊಲೀಸ್ ಇನ್ಸ್ಪೆಕ್ಟರ್ ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿ, ಎಸಿಪಿ ದರ್ಜೆಯ ಅಧಿಕಾರಿಯನ್ನು ವಿಚಾರಣೆಗೆ ನೇಮಕ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ರಸ್ತೆಯಲ್ಲಿ ನಮಾಜ್ ಮಾಡಿದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ (ಐಪಿಸಿ ಸೆಕ್ಷನ್ 341,283,143,149) ದಾಖಲಿಸಿಕೊಂಡಿದ್ದರು. ಇದಕ್ಕೆ ಮುಸ್ಲಿಂ ಸಂಘಟನೆಗಳವರು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದವರು ಆಕ್ರೋಶ ವ್ಯಕ್ತಪಡಿಸಿ, ಪ್ರಕರಣ ವಾಪಸ್ಗೆ ಕ್ರಮ ಕೈಗೊಳ್ಳುವಂತೆ ಕೋರಿದ್ದರು.
ಮುಸ್ಲಿಂ ಸಂಘಟನೆಯ ಒತ್ತಡಕ್ಕೆ ಮಣಿದು, ಬಿ ವರದಿ ಸಲ್ಲಿಸಿದ್ದು ಸರಿಯಲ್ಲ ಎಂದು ವಿಎಚ್ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ತಿಳಿಸಿದ್ದಾರೆ. ರಾಜ್ಯದಾದ್ಯಂತ ಹೋರಾಟಕ್ಕೆ ಕರೆ ನೀಡುವುದಾಗಿ ಹೇಳಿದ್ದಾರೆ.