Posted by vidyamaana on 2023-06-29 12:19:28 |
ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು, ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು.
ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು.
ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ ಮುಸ್ಲಿಂ ಮಗುವೊಂದು ಮೃತಪಟ್ಟಿದೆ.
ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.
Posted by Vidyamaana on 2024-03-26 16:53:19 |
ಬೆಂಗಳೂರು : ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಕತರ್ನಾಕ್ ಅಂತರಾಜ್ಯ ಕಳ್ಳರ ಗ್ಯಾಂಗ್ ನನ್ನು ಇದೀಗ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಪ್ರಯಾಣಿಕರಿಗೆ ಪ್ರಜ್ಞೆ ತಪ್ಪುವ ವಸ್ತು ನೀಡಿ ಇವರು ಕಳ್ಳತನ ಮಾಡುತ್ತಿದ್ದರು. ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ ಹಣ ದೋಚುತ್ತಿದ್ದರು ಎನ್ನಲಾಗುತ್ತಿದೆ.ಇದೀಗ ರೈಲ್ವೆ ಪೊಲೀಸ್ರಿಂದ ಮೂರು ಆರೋಪಿಗಳನ್ನು ಬಂದಿಸಲಾಗಿದೆ. ಆರೋಪಿಗಳಿಂದ 24 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನ ಮಹಮ್ಮದ್ ಶೌಕತ್ ಅಲಿ, ಮಹಮ್ಮದ್ ಸತ್ತರ್, ಮೊಹಮ್ಮದ್ ಆಸಾಫ್ ಬಂಧಿತ ಆರೋಪಿಗಳು ಎಂದು ಹೇಳಲಾಗುತ್ತಿದೆ.
ದರೋಡೆ ಹೇಗೆ?
ಆರೋಪಿಗಳು ಸಂಪೂರ್ಣ ನಕಲಿ ದಾಖಲೆ ನೀಡಿ ಟಿಕೆಟ್ ಬುಕ್ ಮಾಡುತ್ತಿದ್ದರು ಎನ್ನಲಾಗುತ್ತಿದೆ. ನಂತರ ಪ್ರಯಾಣಿಕರ ಜೊತೆ ಪರಿಚಯ ದವರಂತೆ ಮಾತಿಗೆಳೆಯುತ್ತಾರೆ.ಎರಡು ದಿನಗಳ ಕಾಲ ಪ್ರಯಾಣ ಮಾಡುವಾಗ ಪರಿಚಯ ಮಾಡಿಕೊಳ್ಳುತ್ತಾರೆ. ಬೇರೆ ಪ್ರಯಾಣಿಕರ ಜೊತೆ ಊಟ ತಿಂಡಿ ಕೂಡ ಮಾಡುತ್ತಿದ್ದರು.ಅಲ್ಲದೆ ತುಂಬಾ ಕ್ಲೋಸ್ ಆಗುತ್ತಿದ್ದರು. ಸರಿಯಾದ ಸಮಯ ನೋಡಿ ಕೋಲ್ಡ್ರಿಂಗ್ಸ್ ನಲ್ಲಿ ಮತ್ತು ಬರುವ ಔಷಧಿ ಹಾಕಿ ಅವರಿಗೆ ಕೊಡುತ್ತಿದ್ದರು. ಬಾದಾಮಿ ಹಾಲಿನಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿ ಕೊಡುತ್ತಿದ್ದರು ಪ್ರಜ್ಞೆ ತಪ್ಪಿದ ಬಳಿಕ ಹಣ ಆಗಲಿ ಚಿನ್ನಾಭರನವನ್ನು ದೋಚಿ ಪರಾರಿಯಾಗುತ್ತಿದ್ದರು.ಕೇರಳ ತಮಿಳುನಾಡು ಅಸಾಂ ಕಲ್ಕತ್ತಾದಲ್ಲೂ ಇವರು ಕೃತ್ಯ ನಡೆಸಿದ್ದಾರೆ ಎಂದು ರೈಲ್ವೆ ಎಸ್ಪಿ ಆಗಿರುವ ಸೌಮ್ಯಲತಾ ಅವರು ಈ ಕುರಿತಂತೆ ಮಾಹಿತಿ ನೀಡಿದರು.
Posted by Vidyamaana on 2023-07-13 16:29:04 |
ವಿಜಯವಾಡ: ಇತ್ತೀಚಿನ ದಿನಗಳಲ್ಲಿ ಮದುವೆಯ ಹೆಸರಲ್ಲಿ ಮೋಸ ಹೋಗುವವರು ಮತ್ತು ಮೋಸ ಮಾಡುತ್ತಿರುವವ ಸಂಖ್ಯೆ ಹೆಚ್ಚಾಗುತ್ತಿದೆ. ಕೆಲ ಯುವತಿಯರು, ಯುವಕರು ಅವಿವಾಹಿತರನ್ನೇ ಟಾರ್ಗೆಟ್ ಮಾಡಿ ವಂಚನೆಯ ಬಲೆಗೆ ಬೀಳಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಯುವತಿಯೊಬ್ಬಳು ಎಂಟು ಮಂದಿಯನ್ನು ಮದುವೆಯಾಗಿ ವಂಚಿಸಿದ ಘಟನೆ ಮುನ್ನೆಲೆಗೆ ಬಂದಿದೆ.ನಾಲ್ಕು ರಾಜ್ಯಗಳಲ್ಲಿ ವಂಚನೆ
ಮಹಾವಂಚಕಿಯ ಹೆಸರು ರಶೀದಾ. ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಈ ಯುವತಿ ಮದುವೆ ಹೆಸರಲ್ಲಿ ಯುವಕರನ್ನು ಯಾಮಾರಿಸಿದ್ದಾಳೆ. ಮದುವೆಯಾದ ಕೆಲವೇ ದಿನಗಳಲ್ಲಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದಳು. ರಶೀದಾಗೆ ಇನ್ಸ್ಟಾಗ್ರಾಂ ಮೂಲಕ ತಮಿಳುನಾಡಿನ ಸೇಲಂ ಜಿಲ್ಲೆಯ ತಾರಮಂಗಲ ಮೂಲದ ಫೈನಾನ್ಶಿಯರ್ ಮೂರ್ತಿ ಎಂಬುವರ ಪರಿಚಯವಾಗಿತ್ತು. ಹಲವು ತಿಂಗಳುಗಳ ಕಾಲ ಇಬ್ಬರ ನಡುವೆ ಮಾತುಕತೆ ನಡೆಯುತ್ತಿತ್ತು. ಬಳಿಕ ಪರಿಚಯ ಪ್ರೀತಿಗೆ ತಿರುಗಿ ರಶೀದಾ ಮದುವೆ ಆಗುವ ಬಯಕೆಯನ್ನು ಮೂರ್ತಿ ಮುಂದೆ ವ್ಯಕ್ತಪಡಿಸಿದಳುಹುಡುಗಿ ನೋಡಲು ಸುಂದರವಾಗಿದ್ದರಿಂದ ಮೂರ್ತಿ ಕೂಡ ಮರುಮಾತಾಡದೆ ಮದುವೆ ಓಕೆ ಎಂದರು. ಇಬ್ಬರ ಮದುವೆ ಕಳೆದ ಮಾರ್ಚ್ 30ರಂದು ನಡೆದಿತ್ತು. ಆದರೆ, ಮದುವೆಯಾದ ಕೆಲವೇ ದಿನಗಳಲ್ಲಿ ರಶೀದಾ ಇದ್ದಕ್ಕಿಂದ್ದಂತೆ ಮಾಯವಾದಳು. ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಾಣೆಯಾಗಿರುವುದನ್ನು ನೋಡಿ, ತಾನು ಮೋಸ ಹೋಗಿರುವುದು ಸಹ ಮೂರ್ತಿಗೆ ಅರ್ಥವಾಯಿತು. ಬಳಿಕ ಸ್ಥಳೀಯ ಠಾಣೆಗೆ ಆಕೆಯ ವಿರುದ್ಧ ದೂರು ನೀಡಿದರು.
ತನಿಖೆಯಲ್ಲಿ ಲೇಡಿಯ ವಂಚನೆ ಬಯಲುಮೂರ್ತಿ ದೂರು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದಾಗ ರಶೀದಾಳ ಅಸಲಿ ಮುಖ ಬಯಲಾಯಿತು. ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳನ್ನು ತೆರೆದು, ಆರ್ಥಕವಾಗಿ ಸದೃಢರಾದ ಅವಿವಾಹಿತ ಹುಡುಗರನ್ನು ಟಾರ್ಗೆಟ್ ಮಾಡಿ, ಪರಿಚಯಿಸಿಕೊಂಡು, ಪ್ರೀತಿಯ ಹೆಸರಲ್ಲಿ ನಂಬಿಸಿ ಮದುವೆಯಾಗಿ ವಂಚನೆ ಮಾಡುತ್ತಿದ್ದಳು ಎಂಬುದು ಬಯಲಾಗಿದೆ.
ಅಂದಹಾಗೆ ಆರೋಪಿ ರಶೀದಾ ನೀಲಗಿರಿ ಮೂಲದವಳು. ಪೊಲೀಸರು ಆಕೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ
Posted by Vidyamaana on 2024-06-17 16:11:21 |
ಶಿವಮೊಗ್ಗ: ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು.
Posted by Vidyamaana on 2024-06-11 17:30:29 |
ಹೊಸದಿಲ್ಲಿ: ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಹಾಗೂ ಒಂಬತ್ತು ಮಂದಿ ಇತರರು ಇಂದು ವಿಮಾನ ದುರಂತವೊಂದರಲ್ಲಿ ಮೃತಪಟ್ಟಿದ್ದಾರೆಂದು ದೇಶದ ಅಧ್ಯಕ್ಷರ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.ಸೌಲೋಸ್ ಮತ್ತಿತರರು ಪ್ರಯಾಣಿಸುತ್ತಿದ್ದ ವಿಮಾನ ನಾಪತ್ತೆಯಾಗಿತ್ತೆಂದು ಈ ಹಿಂದೆ ವರದಿಯಾಗಿತ್ತು.
Posted by Vidyamaana on 2023-12-07 05:21:44 |
ಪುತ್ತೂರು: ರಸ್ತೆ ಅಗಲೀಕರಣಕ್ಕಾಗಿ ವಿದ್ಯುತ್ ಲೈನ್ ಸ್ಥಳಾಂತರ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ, ವಾಟರ್ ಸಪ್ಪೆ ಮತ್ತು ಉಪ್ಪಿನಂಗಡಿ ಎಕ್ಸ್ಪ್ರೆಸ್ ಹಾಗೂ 110/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಫೀಡರ್ನಲ್ಲಿ ಡಿ.7ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:00 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 1110/33/1183 ಕೆ ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮತ್ತು 110/11ಕೆ ವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ರ ಸರಬರಾಜಾಗುವ ಹಾರಾಡಿ, ಚಿಕ್ಕಪುತ್ತೂರು, ನೆಲ್ಲಿಕಟ್ಟೆ, ಎಳ್ಳುಡಿ, ಕೆಎಸ್ಆರ್ಟಿಸಿ ಬಸ್ ಈ ನಿಲ್ದಾಣ ಪರಿಸರ, ಕಲ್ಲಾರೆ, ಕೂರ್ನಡ್ಕ, ದರ್ಬೆ, ಮರೀಲು, ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.