ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಕಡಬ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ನಿಶಾಂತ್ ಬಂಧನ

Posted by Vidyamaana on 2023-07-10 16:23:37 |

Share: | | | | |


ಕಡಬ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ನಿಶಾಂತ್ ಬಂಧನ

ಕಡಬ; ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದಾತನನ್ನು ಪೊಲೀಸರು ಬಂಧಿಸಿರುವ ಘಟನೆ ಕಡಬ ಕೋಡಿಂಬಾಳದಲ್ಲಿ ನಡೆದಿದೆ. ಕೋಡಿಂಬಾಳ ಗ್ರಾಮದ ನಿಶಾಂತ್ (20 ) ಬಂಧಿತ ಆರೋಪಿ . ಆತನ ವಿರುದ್ಧ ಪೋಕ್ಸ್ ಪ್ರಕರಣ ದಾಖಲಾಗಿದೆ.


ನಿಶಾಂತ್ ತನ್ನ ಸೋದರ ಸಂಬಂಧಿ 14 ರ ಹರೆಯದ ಬಾಲಕಿಯನ್ನು ಅತ್ಯಾಚಾರವೆಸಗಿದ್ದ ಪರಿಣಾಮ ಆಕೆ ಎಂಟು ತಿಂಗಳ ಗರ್ಭಿಣಿಯಾಗಿದ್ದಾಳೆ. ತಾಯಿ ಜೊತೆ ಬಾಲಕಿ ಕಡಬ ಸಮುದಾಯ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾದ ಈ ಘಟನೆ ಬೆಳಕಿಗೆ ಬಂದಿದೆ.


ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಯುವಕನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ತಿಳಿದು ಬಂದಿದೆ

ಪುತ್ತೂರು ಉಪ ವಿಭಾಗದ ಡಿವೈಎಸ್ಪಿ ಡಾ. ಗಾನ ಪಿ ಕುಮಾರ್ ವರ್ಗಾವಣೆ

Posted by Vidyamaana on 2023-11-18 04:46:21 |

Share: | | | | |


ಪುತ್ತೂರು ಉಪ ವಿಭಾಗದ ಡಿವೈಎಸ್ಪಿ ಡಾ. ಗಾನ ಪಿ ಕುಮಾರ್ ವರ್ಗಾವಣೆ

ಪುತ್ತೂರು: ರಾಜ್ಯ ಸರಕಾರದಿಂದ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ ವಿಭಾಗದ ಡಿವೈಎಸ್ಪಿ ಆಗಿದ್ದ ಡಾ. ಗಾನ ಪಿ. ಕುಮಾರ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ನ 17 ಶುಕ್ರವಾರ ದಂದು ಸರಕಾರ ಆದೇಶ ಹೊರಡಿಸಿದೆ.


ಖಾಲಿಯಾಗಲಿರುವ ಅವರ ಸ್ಥಾನಕ್ಕೆ ಸದ್ಯಕ್ಕೆ ಯಾರನ್ನು ನೇಮಕ ಮಾಡಿಲ್ಲ.

ಆತ್ಮಹತ್ಯೆಗೆ ಶರಣಾದ ಹೋಟೆಲ್ ಮ್ಯಾನೇಜ‌ರ್ ಸನ್ನಿಧಿ

Posted by Vidyamaana on 2024-08-03 14:21:27 |

Share: | | | | |


ಆತ್ಮಹತ್ಯೆಗೆ ಶರಣಾದ ಹೋಟೆಲ್ ಮ್ಯಾನೇಜ‌ರ್ ಸನ್ನಿಧಿ

ಬೆಂಗಳೂರು : ನೆಲಮಂಗಲದ ಶ್ರೀನಂದಿ ವೈಭವ್ ಹೋಟೆಲ್ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸನ್ನಿಧಿ(24) ಮೃತ ವ್ಯಕ್ತಿ. ಹೋಟೆಲ್ ಪಕ್ಕದ ಜಾಗದಲ್ಲಿ ಕಬ್ಬಿಣದ ಆಯಂಗಲ್​ಗೆ ಸ್ಕ್ರೀನ್ ಬಟ್ಟೆಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳ್ತಂಗಡಿ ; ಮಂಗಳೂರು- ಹಾಸನ ಪೆಟ್ರೋನೆಟ್ ಡೀಸೆಲ್ ಪೈಪ್ ಲೈನಿಗೆ ಕನ್ನ

Posted by Vidyamaana on 2024-03-22 15:41:11 |

Share: | | | | |


ಬೆಳ್ತಂಗಡಿ ; ಮಂಗಳೂರು- ಹಾಸನ ಪೆಟ್ರೋನೆಟ್ ಡೀಸೆಲ್ ಪೈಪ್ ಲೈನಿಗೆ ಕನ್ನ

ಬೆಳ್ತಂಗಡಿ, ಮಾ.22: ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮದ  ಆಲಡ್ಕ ಎಂಬಲ್ಲಿಂದ ಹಾದು ಹೋಗುವ ಡಿಸೇಲ್‌ ಪೈಫ್‌ ಲೈನ್‌ ಅನ್ನು ಯಾರೋ ಕಳ್ಳರು ರಂಧ್ರ ಕೊರೆದು 9.60 ಲಕ್ಷ ಮೌಲ್ಯದ ಡೀಸೆಲ್ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕೇರಳದ ಅಲಪ್ಪುಝ ಜಿಲ್ಲೆ ಮಾವೇಲಿಕ್ಕರ ನಿವಾಸಿ ರಾಜನ್‌ ಜಿ ಎಂಬವರು ದೂರು ನೀಡಿದ್ದಾರೆ. ಸದ್ರಿಯವರು ಪೆಟ್ರೊನೆಟ್‌ ಎಮ್‌ ಹೆಚ್‌ ಬಿ ಲಿಮಿಟೆಡ್‌ ನೆರಿಯಾದ ಸ್ಟೇಶನ್‌ ಇನ್ಚಾರ್ಜ್‌ ಆಗಿದ್ದಾರೆ. ಮಂಗಳೂರು, ಹಾಸನ ಮತ್ತು ಬೆಂಗಳೂರಿಗೆ ಪೆಟ್ರೋನೆಟ್‌ ಪೈಪ್ ಮೂಲಕ ಡಿಸೇಲ್‌ ಸರಬರಾಜು ಆಗುತ್ತಿದ್ದು ಮಾ.16ರ ರಾತ್ರಿಯಿಂದ 19ರಂದು ರಾತ್ರಿಯ ಮಧ್ಯದ ಅವಧಿಯಲ್ಲಿ ಪುದುವೆಟ್ಟು ಗ್ರಾಮದ  ಆಲಡ್ಕ ಎಂಬಲ್ಲಿ ಡೀಸೆಲ್ ಪೈಪ್ ಲೈನಿಗೆ ಕನ್ನ ಕೊರೆಯಲಾಗಿದೆ. 


ಪೈಪ್ ಲೈನಿಗೆ 2.5 ಇಂಚು ಗಾತ್ರದ ರಂಧ್ರ ಕೊರೆದು ಹೆಚ್‌ ಡಿ ಪಿ ಇ ಪೈಪ್‌ ಮೂಲಕ ಅಂದಾಜು 12,000 ಲೀಟರ್‌ ಡಿಸೇಲ್‌ ಕಳವು ಮಾಡಿರುತ್ತಾರೆ. ಅದರ ಅಂದಾಜು ಮೌಲ್ಯ ರೂ 9,60,000/ ಆಗಬಹುದು ಎಂಬುದಾಗಿ ದೂರು ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಸೆಕ್ಷನ್ 427, 285, 379  ಐ ಪಿ ಸಿ ಕಲಂ 15(2) ಪೆಟ್ರೊನೆಟ್‌ ಕಾಯ್ದೆ ಕಲಂ 3(2) ಪ್ರಿವೆನ್ಸೆನ್‌ ಆಫ್‌ ಡ್ಯಾಮೆಜ್‌ ಟು ಪಬ್ಲಿಕ್‌ ಪ್ರಾಪರ್ಟಿ ಕಾಯ್ದೆ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮಗನಿಂದ ತಾಯಿ ಕೊಲೆ ಕೇಸ್‌ಗೆ ಬಿಗ್‌ಟ್ವಿಸ್ಟ್‌: ಪೊಲೀಸ್‌ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

Posted by Vidyamaana on 2024-02-06 12:24:15 |

Share: | | | | |


ಮಗನಿಂದ ತಾಯಿ ಕೊಲೆ ಕೇಸ್‌ಗೆ ಬಿಗ್‌ಟ್ವಿಸ್ಟ್‌: ಪೊಲೀಸ್‌ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು :ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಕೊಲೆ ಮಗ ಮಾಡಿದಲ್ಲ ಬದಲಿಗೆ ಅಪ್ಪನ ಕೊಲೆಯನ್ನು ತನ್ನ ಮೇಲೆ ಹಾಕಿಕೊಂಡು ಮಗನೇ ಪೊಲೀಸರಿಗೆ ತಾನೇ ಕೊಲೆ ಮಾಡಿದ್ದ ಎನ್ನಲಾಗಿದೆ.ಈ ನಡುವೆ ಫಿಂಗರ್ ಪ್ರಿಂಟ್ ಪತ್ತೆಯಾದ ಹಿನ್ನೆಲೆ ತನಿಖೆ ನಡೆಸಿದ್ದ ಪೊಲೀಸರು ಕೊಲೆಯಲ್ಲಿ ತಂದೆ ಕೊಲೆ ಮಾಡಿದ್ದ ಎನ್ನಲಾಗಿದೆ.ಮಹಿಳೆ ಕೊಲೆಗೆ ಅಕ್ರಮ ಸಂಬಂಧವೇ ಪ್ರಮುಖ ಕಾರಣ ಎನ್ನಲಾಗಿದೆ. ಈ ನಡುವೆ ನೇತ್ರಾಳಿಗೆ ಅಕ್ರಮ ಸಂಬಂಧದ ಜೊತೆಗೆ ಕುಡಿತದ ಚಟ ಇತ್ತು. ಕೆಲವೊಮ್ಮೆ ಎರಡು ಮೂರು ದಿನಗಳ ಕಾಲ ಮನೆಗೆ ಬರ್ತಾ ಇರಲಿಲ್ಲ. ಹೀಗಾಗಿ ಮಗನ ಜೊತೆ ಸೇರಿ ಕೊಲೆ ಮಾಡಲು ನಿರ್ಧಾರ ಮಾಡಿದೆ ಎಂದು ಆರೋಪಿ ಪೊಲೀಸರ ಮುಂದೆ ಹೇಳಿದ್ದಾನೆ ಎನ್ನಲಾಗಿದೆ. ಅಪ್ರಾಪ್ತರು ಜೈಲಿಗೆ ಹೋದರೆ ಶಿಕ್ಷೆ ಕಡಿಮೆ ಇರುತ್ತೆ, ಜೊತೆಗೆ ಅವರೇ ವಿದ್ಯಾಭ್ಯಾಸ ಕೊಡಿಸ್ತಾರೆ ಎಂದು ಅಪ್ಪನನ್ನು ಮಗ ಓಲೈಸಿದ್ದ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಮಗ ಪೊಲೀಸರ ಮುಂದೆ ಹೇಳಿದ್ದ ಎನ್ನಲಾಗಿದೆ.

ಕಾರ್ಕಳ: ಅವಳಹೇನಕಾರಿ ಬ್ಯಾನರ್:ಅಮೂಲ್ಯ ಗ್ರಾಫಿಕ್ಸ್‌ನ ಮಾಲಕಿ ಸಹಿತ ಇಬ್ಬರು ಆರೋಪಿಗಳ ಬಂಧನ

Posted by Vidyamaana on 2024-09-03 21:26:28 |

Share: | | | | |


ಕಾರ್ಕಳ: ಅವಳಹೇನಕಾರಿ ಬ್ಯಾನರ್:ಅಮೂಲ್ಯ ಗ್ರಾಫಿಕ್ಸ್‌ನ ಮಾಲಕಿ ಸಹಿತ ಇಬ್ಬರು ಆರೋಪಿಗಳ ಬಂಧನ

ಕಾರ್ಕಳ: ಕಾರ್ಕಳ ಸಾಣೂರು ಗ್ರಾಮದ ಮುರತಂಗಡಿ ಕಮಲಾಕ್ಷ ನಗರ ಎಂಬಲ್ಲಿ ಮುಸ್ಲಿಮರ ಬಗ್ಗೆ ಅವಹೇಳನಕಾರಿಯಾಗಿ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಸೆ.3ರಂದು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಬ್ಯಾನರ್‌ನಲ್ಲಿ ಹೆಸರು ಉಲ್ಲೇಖಿಸಿದ್ದ ಸ್ಥಳೀಯ ನಿವಾಸಿ ಸತೀಶ್ ದೇವಾಡಿಗ ಹಾಗೂ ಬ್ಯಾನರ್ ಮುದ್ರಿಸಿದ ಕಾರ್ಕಳ ಮಾರ್ಕೆಟ್ ರಸ್ತೆಯಲ್ಲಿರುವ ಅಮೂಲ್ಯ ಗ್ರಾಫಿಕ್ಸ್‌ನ ಮಾಲಕಿ ಪುಷ್ಪಲತಾ ಎಂದು ಗುರುತಿಸಲಾಗಿದೆ.

Recent News


Leave a Comment: