ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಡಾ.ಸುರೇಶ್ ಪುತ್ತೂರಾಯರಿಗೆ ಅರುಣ್ ಕುಮಾ‌ರ್ ಪುತ್ತಿಲ ಚುನಾವಣಾ ಕಚೇರಿಯಲ್ಲಿ ಅದ್ದೂರಿ ಸ್ವಾಗತ.

Posted by Vidyamaana on 2023-04-26 00:55:19 |

Share: | | | | |


ಡಾ.ಸುರೇಶ್ ಪುತ್ತೂರಾಯರಿಗೆ ಅರುಣ್ ಕುಮಾ‌ರ್ ಪುತ್ತಿಲ ಚುನಾವಣಾ ಕಚೇರಿಯಲ್ಲಿ ಅದ್ದೂರಿ ಸ್ವಾಗತ.

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ. ಅವರನ್ನು ಬೆಂಬಲಿಸುವಂತೆ ಹೇಳಿಕೆ ನೀಡಿದ್ದ. ಪುತ್ತೂರಿನ ಜನಪ್ರಿಯ ವೈದ್ಯ ಡಾ.ಸುರೇಶ್ ಪುತ್ತೂರಾಯರವರು ಏ.25ರಂದು ಸಂಜೆ ಅರುಣ್ ಕುಮಾರ್ ಪುತ್ತಿಲರವರ ಚುನಾವಣಾ ಕಚೇರಿಗೆ ಭೇಟಿ ನೀಡಿದಾಗ ಅವರನ್ನು ಹೂ ಹಾರ ಹಾಕಿ ಸ್ವಾಗತಿಸಲಾಯಿತು.

ಶ್ರೀ ಕೃಷ್ಣ ಉಪಾಧ್ಯಾಯ, ಪ್ರಸನ್ನ ಕುಮಾರ್ ಮಾರ್ತ, ಮನೀಷ್ ಕುಲಾಲ್, ಕೃಷ್ಣ ಪ್ರಸಾದ್ ಶೆಟ್ಟಿ, ಗೋಪಾಲ್ ಎಂ.ಯು., ರೂಪೇಶ್ ನ್ಯಾಕ್ ಮೊದಲಾದವರು ಡಾ.ಸುರೇಶ್ ಪುತ್ತೂರಾಯರವರನ್ನು ಹೂ ಹಾರ ಹಾಕಿ ಸ್ವಾಗತಿಸಿದರು.

ಮೇನಾಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ..

Posted by Vidyamaana on 2023-04-27 11:52:58 |

Share: | | | | |


ಮೇನಾಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ..

ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ತೊಡಗಿಸಿಕೊಂಡಿದ್ದು ಎಲ್ಲಾ ನಾಯಕರು ವಿವಿಧ ಭಾಗಗಳಲ್ಲಿ ಅದ್ದೂರಿಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ನಮ್ಮ ಒಗ್ಗಟ್ಟನ್ನು ಕಂಡು ಬಿಜೆಪಿ ಕೊತಕೊತ ಕುದಿಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಎಂ ಎಸ್ ಮಹಮ್ಮದ್ ಹೇಳಿದರು.

ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ನಲ್ಲಿ ೧೪ ಮಂದಿ ಟಕೆಟ್ ಆಕಾಂಕ್ಷಿಗಳು ಇದ್ದರೂ ಹೈಕಮಾಂಡ್ ಆಯ್ಕೆ ಮಾಡಿರುವ ಅಶೋಕ್ ರೈಯವ ರನ್ನು ಎಲ್ಲರೂ ಬೆಂಬಲಿಸಿ ಅವರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು ಈ ಬಾರಿಯ ಚುನಾವಣೆಯಲ್ಲಿ ಅಶೋಕ್ ರೈ ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ. ಮುಂದಿನ ಐದು ವರ್ಷದಲ್ಲಿ ಪುತ್ತೂರು ಅಭಿವೃದ್ದಿ ಕಾಣಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಶ್ರೀರಾಂ ಪಕ್ಕಳ , ಅಭ್ಯರ್ಥಿ ಅಶೋಕ್ ರೈ , ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತಿತರರು ಉಪಸ್ತಿತರಿದ್ದರು.

ಮೊಬೈಲ್ ನಲ್ಲಿ ಹೊಡೆದು ಅತ್ತೆಯನ್ನು ಕೊಂದ ಪಾಪಿ ಸೊಸೆ

Posted by Vidyamaana on 2024-05-03 22:21:22 |

Share: | | | | |


ಮೊಬೈಲ್ ನಲ್ಲಿ ಹೊಡೆದು ಅತ್ತೆಯನ್ನು ಕೊಂದ ಪಾಪಿ ಸೊಸೆ

ಮಡಿಕೇರಿ: ಅತ್ತೆಯನ್ನು ಸೊಸೆಯೇ ಹತ್ಯೆ ಮಾಡಿದ ನಿಗೂಢ ರಹಸ್ಯಕಾರಿ ಸಿನಿಮಾ ಮಾದರಿ ಘಟನೆ ಮಡಿಕೇರಿಯಲ್ಲಿ ನಡೆದಿದ್ದು, ಸಹಜ ಸಾವು ಎಂದು ನಂಬಲಾಗಿದ್ದ ಪ್ರಕರಣ ತಿರುವು ಪಡೆದುಕೊಂಡು ಕೊಲೆ ಎಂಬುದು ಬಯಲಾಗಿ ಆರೋಪಿತೆಯನ್ನು ಪೊಲೀಸರು ಬಂಧಿಸಿದ್ದಾರೆ.


ಮಡಿಕೇರಿ ತಾಲೂಕಿನ ಮರಗೋಡಿನ ನಿವಾಸಿ ಪೂವಮ್ಮ (73) ಎಂಬವರನ್ನು ಹತ್ಯೆ ಮಾಡಲಾಗಿದ್ದು, ಕೊಲೆ ಆರೋಪದಲ್ಲಿ ಸೊಸೆ ಬಿಂದು (26) ಎಂಬಾಕೆಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬೆಳಕಿಗೆ ಬಂದಿದ್ದು ಹೇಗೆ?

ಪೂವಮ್ಮ ಅವರ ಪುತ್ರ ಶಿಕ್ಷಕರಾಗಿರುವ ಪ್ರಸನ್ನ, ಪತ್ನಿ ಬಿಂದು ಮತ್ತು ಒಂದು ವರ್ಷದ ಪುತ್ರಿಯೊಂದಿಗೆ ವಾಸವಾಗಿದ್ದರು. ಅತ್ತೆ ಮತ್ತು ಸೊಸೆ ನಡುವೆ ತೀವ್ರ ಮನಸ್ತಾಪ ಇತ್ತು ಎಂದು ತಿಳಿದು ಬಂದಿದೆ.

ನೆಲ್ಲಿಕಟ್ಟೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾ ಜ್ಯೋತಿ ಎಲ್ ಕೆಜಿ ಮತ್ತು ಯುಕೆಜಿ ತರಗತಿ ಉದ್ಘಾಟನೆ

Posted by Vidyamaana on 2023-09-09 19:36:57 |

Share: | | | | |


ನೆಲ್ಲಿಕಟ್ಟೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾ ಜ್ಯೋತಿ ಎಲ್ ಕೆಜಿ ಮತ್ತು ಯುಕೆಜಿ ತರಗತಿ ಉದ್ಘಾಟನೆ

ಪುತ್ತೂರು: ನೆಲ್ಲಿಕಟ್ಟೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ರೋಟರಿಕ್ಲಬ್ ಪುತ್ತೂರು ಸಿಟಿ, ರೋಟರಿ ಕ್ಲಬ್ ಪುತ್ತೂರು ಸಿಟಿ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ವಿದ್ಯಾ ಜ್ಯೋತಿ ಎಲ್ ಕೆಜಿ ಮತ್ತು ಯುಕೆಜಿ ಮತ್ತು ಅಂಗನವಾಡಿ ಪುನಶ್ವೇತನ ರೋಟರಿ ಜಿಲ್ಲಾ ಯೋಜನೆಯನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಸರಕಾರ ಮಾಡಬೇಕಾದ ಕೆಲಸವನ್ನು ರೋಟರಿ ಕ್ಲಬ್ ಮಾಡುತ್ತಿರುವುದು ಶ್ಲಾಘನೀಯ, ರೋಟರಿ ಕ್ಲಬ್ ನಿಂದ ಸಮಾಜ ಸೇವೆ ನಿರಂತರವಾಗಿ ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು ಮುಂದಿನ ಒಂದು ವರ್ಷದೊಳಗೆ ಎಲ್ಲಾ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಎಲ್ ಕೆ .ಜಿ ತರಗತಿ ಆರಂಭಿಸಲಾಗುವುದು ಮಾತ್ರವಲ್ಲ ಶಿಕ್ಷಕರ ನೇಮಕಾತಿಯೂ ಪೂರ್ಣಗೊಳ್ಳಲಿದೆ. ಇಂಗ್ಲೀಷ್ ಮಾದ್ಯಮದಲ್ಲಿ ಶಿಕ್ಷಣ ಅತೀ ಮುಖ್ಯವಾಗಿದ್ದು, ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು. ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತ, ರೋಟರಿ ಕ್ಲಬ್ ಪುತ್ತೂರು ಸಿಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸುರೇಂದ್ರ ಕಿಣಿ, ರೋನ್ 4 ರ ಅಸಿಸ್ಟಂಟ್ ಗವರ್ನರ್ ಲಾರೆನ್ಸ್ ಗೋನ್ಸಾಲ್ವಿಸ್, ನಗರ ಸಬಾ ಸದಸ್ಯ ಶಕ್ತಿ ಸಿನ್ಹಾ ನೆಲ್ಲಿಕಟ್ಟೆ ಸರಕಾರಿ ಹಿ.ಪ್ರಾ. ಶಾಲೆ ಮುಖ್ಯ ಶಿಕ್ಷಕಿ ಯಶೋಧ, ಎಸ್ ಡಿ ಎಂಸಿ ಅಧ್ಯಕ್ಷೆ ವಸುಧಾ, ರೊ. ಶ್ಯಾಮಲಾ ಎಂ ಶೆಟ್ಟಿ, ರೊ.ಗ್ರೇಸಿ ಗೊನ್ಸಾಲ್ವಿಸ್, ರೊ.ಸುಧಾಕರ್ ಶೆಟ್ಟಿ ಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಡಾ. ಶಶಿಧರ್ ಕಜೆ ಕಾರ್ಯಕ್ರಮ ನಿರೂಪಿಸಿದರು.

ಬಿಜೆಪಿ ಟಿಕೇಟ್ ಡೀಲ್ ಪ್ರಕರಣ : ವಜ್ರಾದೇಹಿ ಸ್ವಾಮಿಜೀಗೆ ಸಿಸಿಬಿ ನೋಟೀಸ್

Posted by Vidyamaana on 2023-10-10 16:50:37 |

Share: | | | | |


ಬಿಜೆಪಿ ಟಿಕೇಟ್ ಡೀಲ್ ಪ್ರಕರಣ : ವಜ್ರಾದೇಹಿ ಸ್ವಾಮಿಜೀಗೆ ಸಿಸಿಬಿ ನೋಟೀಸ್

ಬೆಂಗಳೂರು: ಬಿಜೆಪಿ ಟಿಕೆಟ್ ಡೀಲ್ ವಿಷಯವಾಗಿ


ಹಿಂದೂ ಮುಖಂಡೆ ಚೈತ್ರ ಕುಂದಾಪುರ (Chaithra


Kundapura) ಹಾಗೂ ಹಾಲಶ್ರೀ ಸ್ವಾಮಿಜಿ


ಬಂಧನವಾಗಿ ತಿಂಗಳು ಕಳೆದ ನಂತರ ದಕ್ಷಿಣ ಕನ್ನಡದ ಪ್ರಮುಖ ಹಿಂದೂ ಪರ ಇರುವ ಸ್ವಾಮಿಜೀಗೆ ವಿಚಾರಣೆಗೆ ಹಾಜರಾಗಲು ನೋಟಿಸ್


ಜಾರಿಯಾಗಿದೆ.ಉದ್ಯಮಿ ಗೋವಿಂದ ಬಾಬು ಪೂಜಾರಿಗೆ


ಬೈಂದೂರಿನ ಬಿಜೆಪಿ ಟಿಕೇಟ್ ನೀಡುವ ವಿಚಾರವಾಗಿ ಡೀಲ್ ನಡೆದು ಚೈತ್ರ ಕುಂದಾಪುರ ಬಂಧನ ಆದ ನಂತರ ಚೈತ್ರ ಇಡಿ ಗೆ ಬರೆದ ಪತ್ರದಲ್ಲಿ ವಜ್ರಾದೇಹಿ ಶ್ರೀ, ಚಕ್ರವರ್ತಿ ಸೂಲಿಬೆಲೆ, ಹಾಗೂ ಸಿಟಿ ರವಿ ಹೆಸರು ಉಲ್ಲೇಖವಾಗಿತ್ತು.ಇದೀಗ ಸಿಸಿಬಿ ಮಂಗಳೂರು ಗುರುಪುರ ವಜ್ರಾದೇಹಿ ಮಠದ ರಾಜಶೇಖರಾನಂದ ಸ್ವಾಮಿಜೀಗೇ ನೋಟಿಸ್ ಜಾರಿ ಮಾಡಿದೆಬೆಂಗಳೂರು ನಗರ ಸಿಸಿಬಿ ಮಹಿಳಾ ಸಂರಕ್ಷಣಾ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ

ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ಕಮಿಷನರ್ ರವರಾದ ರೀನಾ ಸುವರ್ಣ ಅವರು ವಜ್ರಾದೇಹಿ ಶ್ರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಹೊಸ ಟ್ರೆಂಡ್ ಸೃಷ್ಟಿಸಿದ ಮೋದಿ ಎಐ ವಾಯ್ಸ್ - ಮೋದಿ ವಾಯ್ಸನಲ್ಲಿ ಕನ್ನಡ ಹಾಡು ಕೂಡ ಕೇಳಬಹುದು : ಹೇಗೆ ಗೊತ್ತಾ?

Posted by Vidyamaana on 2023-10-05 06:42:29 |

Share: | | | | |


ಹೊಸ ಟ್ರೆಂಡ್ ಸೃಷ್ಟಿಸಿದ ಮೋದಿ ಎಐ ವಾಯ್ಸ್ - ಮೋದಿ ವಾಯ್ಸನಲ್ಲಿ ಕನ್ನಡ ಹಾಡು ಕೂಡ ಕೇಳಬಹುದು : ಹೇಗೆ ಗೊತ್ತಾ?

ಆಧುನಿಕ ಕಾಲಘಟ್ಟದಲ್ಲಿ ಕೃತಕ ಬುದ್ಧಿಮತ್ತೆ ಎಲ್ಲೆಡೆ ಸದ್ದು ಮಾಡುತ್ತಿದ್ದು, ಇದೀಗ ಪ್ರಸಿದ್ಧರ ಧ್ವನಿಗಳನ್ನು ನಕಲು ಮಾಡಲು ಕೂಡ ಎಐ ಬಳಕೆಯಾಗುತ್ತಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲರ್‌ಗಳಿಗೆ, ಮೆಮ್‌ ಪೇಜ್‌ಗಳಿಗೆ ಇದೊಂದು ಹೊಸ ಅಸ್ತ್ರವಾಗಿದೆ.ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಅವರ ಎಐ ಆಧಾರಿತ ಧ್ವನಿ ಬಳಸಿದ ವಿಡಿಯೋಗಳು ಟ್ರೋಲ್‌ ಆಗುತ್ತಿದೆ. ಈಚೆಗೆ ಭಾರತದಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಪಾಲ್ಗೊಂಡ ವಿವಿಧ ದೇಶಗಳ ಮಹಿಳಾ ಅಧಿಕಾರಿಗಳ ಜತೆ ಮೋದಿ ನಡೆಸಿದ ಮಾತುಕತೆಯ ವಿಡಿಯೋಗೆ ಎಐ ವಾಯ್ಸ್‌ ಬಳಸಿ ಟ್ರೋಲ್ ಮಾಡಲಾಗಿದೆ. ಇವರಲ್ಲದೆ ಇನ್ನೂ ಹಲವು ಖ್ಯಾತರ ವಿಡಿಯೋಗಳಿಗೆ ಅವರ ಧ್ವನಿಯನ್ನು ನಕಲು ಮಾಡಿ ಟ್ರೋಲ್ ಮಾಡುತ್ತಿದ್ದಾರೆ.


ಗೂಗಲ್‌ನಲ್ಲಿ ಎಐ ವಾಯ್ಸ್‌ ಚೇಂಜರ್ ಅಂತಾ ಟೈಪಿಸಿದರೆ ಸಾವಿರಾರು ವಾಯ್ಸ್ ಎಐ ವೆಬ್‌ಸೈಟ್‌ಗಳು ಬರುತ್ತವೆ. ಅಲ್ಲದೇ ಆ್ಯಪ್ ಗಳು ಲಭ್ಯವಿವೆ. ಯಾರಿಗೆ ಯಾವ ಮೂಲ ಧ್ವನಿಯಲ್ಲಿ ಯಾರ ಎಐ ಬೇಕಾಗಿರುತ್ತದೋ ಅದನ್ನು ಆಯ್ಕೆ ಮಾಡಿಕೊಂಡರೆ ಅದು ಸಿದ್ಧವಾಗುತ್ತದೆ. ಬಳಕೆದಾರರು ಇವುಗಳನ್ನು ಬಳಸಿಕೊಂಡು ತಮಗೆ ಬೇಕಾದವರ ಧ್ವನಿಗಳನ್ನು ನಕಲು ಮಾಡಬಹುದು.ಉದಾಹರಣೆಗೆ ಕನ್ನಡದ ಉಸಿರೇ.. ಉಸಿರೇ ಹಾಡನ್ನು ಪ್ರಧಾನಿ ಮೋದಿ ಅವರ ಧ್ವನಿಯಲ್ಲಿ ಕೇಳಬೇಕಾದರೆ ಉಸಿರೇ ಉಸಿರೇ ಹಾಡಿನ ಕ್ಲಿಪ್ ಅಥವಾ ಲಿಂಕ್ ಅನ್ನು ಹಾಕಿ ಮೋದಿ ಧ್ವನಿಗೆ ಬದಲಿಸಬಹುದು.ಇದನ್ನು ಮನರಂಜನಾತ್ಮಕವಾಗಿ ಮಾಡಲು ಶುರುಮಾಡಿದ್ದು, ಇದೀಗ ಮೋಸದಾಟಕ್ಕೂ ಬಳಕೆಯಾಗುತ್ತಿರುವುದು ಬೆಳಕಿಗೆ ಬಂದಿದೆ.

Recent News


Leave a Comment: