ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಕಡಬ : ತನ್ನದಲ್ಲದ ತಪ್ಪಿಗೆ 11 ತಿಂಗಳು ಜೈಲು

Posted by Vidyamaana on 2023-11-21 08:58:31 |

Share: | | | | |


ಕಡಬ : ತನ್ನದಲ್ಲದ ತಪ್ಪಿಗೆ 11 ತಿಂಗಳು ಜೈಲು

ಮಂಗಳೂರು: ತಾನು ಮಾಡದ ತಪ್ಪಿಗೆ ದೂರದ ಸೌದಿ ಅರೇಬಿಯಾದಲ್ಲಿ 11 ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದ. ಯಾರೋ ಮಾಡಿದ ತಪ್ಪಿಗೆ ಆ ಯುವಕ ಬಲಿಪಶುವಾಗಿದ್ದ. ವಿದೇಶಾಂಗ ಇಲಾಖೆ ಸೇರಿದಂತೆ ಎಲ್ಲರ ಪ್ರಯತ್ನದ ಬಳಿಕ ಕಡಬ ಮೂಲದ ಯುವಕ ಮರಳಿ ತಾಯ್ನಾಡು ಸೇರಿದ್ದಾನೆ. ಮಂಗಳೂರು ವಿಮಾನ ನಿಲ್ದಾಣದಿಂದ ಹೊರಬರುತ್ತಲೇ ತಾಯಿ ತನ್ನ ಮಗನನ್ನು ಅಪ್ಪಿ ಹಿಡಿದು ದುಃಖ ಮತ್ತು ಆನಂದ ಎರಡನ್ನೂ ಹರಿಸಿದರು.


ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಚಂದ್ರಶೇಖರ್ ಸೌದಿಯಲ್ಲಿ ಜೈಲು ಪಾಲಾಗಿ ಕಡೆಗೂ ಜೈಲು ಕುಣಿಕೆಯಿಂದ ಪಾರಾಗಿ ಬಂದಿದ್ದಾರೆ. ಅಲ್ಫನಾರ್ ಸಿರಾಮಿಕ್ಸ್ ಎನ್ನುವ ಕಂಪನಿಯಲ್ಲಿ ಬೆಂಗಳೂರಿನಲ್ಲಿ ಕೆಲಸಕ್ಕಿದ್ದ ಚಂದ್ರು ಅವರಿಗೆ ಭಡ್ತಿ ಸಿಕ್ಕಿದ್ದರಿಂದ ಒಂದು ವರ್ಷದ ಹಿಂದೆ ಸೌದಿ ಅರೇಬಿಯಾದಲ್ಲಿ ಕೆಲಸ ಸಿಕ್ಕಿತ್ತು. ಅಲ್ಲಿಗೆ ತೆರಳಿ ಕೆಲವು ತಿಂಗಳಲ್ಲೇ ಊರಿಗೆ ಮರಳಬೇಕು ಎನ್ನುವಷ್ಟರಲ್ಲಿ ಚಂದ್ರು ಮೊಬೈಲ್ ಸಿಮ್ ಖರೀದಿಗೆ ತೆರಳಿದ್ದರು. ಸಿಮ್ ಖರೀದಿಗಾಗಿ ಕೈ ಬೆರಳಚ್ಚು ನೀಡಿದ್ದ ಅವರು ಸಿಮ್ ಪಡೆಯಲಿದ್ದ ಪ್ರಕ್ರಿಯೆಯನ್ನೂ ಪೂರೈಸಿದ್ದರು. ಮೊಬೈಲಿಗೆ ಬಂದಿದ್ದ ಸಂದೇಶ ಪ್ರಕಾರ, ಓಟಿಪಿಯನ್ನೂ ನೀಡಿದ್ದರು.



ಆದರೆ ವಾರದ ನಂತರ, ರಿಯಾದ್ ಪೊಲೀಸರು ನೇರವಾಗಿ ಬಂದು ಚಂದ್ರಶೇಖರ್ ಅವರನ್ನು ಬಂಧಿಸಿದ್ದರು. ಮಹಿಳೆಯೊಬ್ಬರು ತನ್ನ ಖಾತೆಯಿಂದ ಚಂದ್ರು ಖಾತೆಗೆ 22 ಸಾವಿರ ರಿಯಾಲ್ ಹಣ ಹೋಗಿರುವುದಾಗಿ ದೂರು ನೀಡಿದ್ದರು. ಪೊಲೀಸರ ತನಿಖೆಯಲ್ಲಿ ತನ್ನಲ್ಲಿ ಒಂದೇ ಬ್ಯಾಂಕ್ ಖಾತೆ ಇರೋದು, ಅದರಿಂದ ಹಣ ಹೋಗಿಲ್ಲ ಎಂದರೂ ಕೇಳಲಿಲ್ಲ. ಚಂದ್ರು ಹೆಸರಲ್ಲಿಯೇ ನಕಲಿ ಬ್ಯಾಂಕ್ ಖಾತೆ ತೆರೆದಿದ್ದ ಹ್ಯಾಕರ್ಸ್, ಆ ಖಾತೆಗೆ ಮಹಿಳೆಯ ಖಾತೆಯಿಂದ ಹಣವನ್ನು ವರ್ಗಾಯಿಸಿದ್ದರು. ಆನಂತರ, ನಕಲಿ ಖಾತೆಯಿಂದಲೇ ಮತ್ತೊಂದು ಖಾತೆಗೆ ಹಣ ವರ್ಗಾವಣೆ ಆಗಿತ್ತು. ಯಾರೋ ಹ್ಯಾಕ್ ಮಾಡಿ ಈ ರೀತಿಯಾಗಿದೆ ಎಂದು ಮನವರಿಕೆ ಮಾಡಿದರೂ, ಪೊಲೀಸರು ಕೇಳದೆ ಚಂದ್ರುವನ್ನು ನೇರವಾಗಿ ಜೈಲಿಗೆ ತಳ್ಳಿದ್ದರು.



ಆನಂತರ, ಚಂದ್ರು ಕೆಲಸ ಮಾಡುತ್ತಿದ್ದ ಕಂಪನಿಯ ಪ್ರತಿನಿಧಿಗಳು ಮತ್ತು ಇತರ ಗೆಳೆಯರು ಸೇರಿ ಸೌದಿ ಕೋರ್ಟಿಗೆ ಮನವರಿಕೆ ಮಾಡಿದರು. ಅಲ್ಲದೆ, ದಂಡ ಕಟ್ಟಲು ಮತ್ತು ಮಹಿಳೆಯ ಹಣವನ್ನು ತೀರಿಸುವುದಕ್ಕೂ ಮುಂದಾಗಿದ್ದರು. ಕೊನೆಗೆ, ಹತ್ತು ಲಕ್ಷ ರೂಪಾಯಿಯಷ್ಟು ಹಣ ಕೊಡುವುದಕ್ಕೆ ಬಂದಿದ್ದು, ಎಲ್ಲವನ್ನೂ ಮಂಗಳೂರು ಮೂಲದ ಗೆಳೆಯರು ಪೂರೈಸಿದ್ದಾರೆ. ಆಮೂಲಕ ಸೌದಿ ಕೋರ್ಟಿನಲ್ಲಿ ಬಿಡುಗಡೆಯಾಗಿ ಬಂದ ಚಂದ್ರಶೇಖರ್ ನನ್ನು ರಿಯಾದ್ ಪೊಲೀಸರು ನೇರವಾಗಿ ಭಾರತಕ್ಕೆ ಕಳಿಸಿಕೊಟ್ಟಿದ್ದಾರೆ. ರಿಯಾದ್ ನಿಂದ ನೇರವಾಗಿ ಮುಂಬೈಗೆ ಬಂದು ಸೋಮವಾರ ಸಂಜೆ ಅಲ್ಲಿಂದ ಮಂಗಳೂರಿಗೆ ರಾತ್ರಿ 7.45ರ ವೇಳೆಗೆ ತಲುಪಿದ್ದಾರೆ. ಅಷ್ಟರಲ್ಲಿ ತಾಯಿ ಹೇಮಾವತಿ, ಅಣ್ಣ ಹರೀಶ್, ಈತನ ಬಿಡುಗಡೆಗಾಗಿ ಪ್ರಯತ್ನಿಸಿದ್ದ ಸಾಮಾಜಿಕ ಕಾರ್ಯಕರ್ತ ಶ್ರೀಧರ ಗೌಡ ಕೊಕ್ಕಡ ಸೇರಿದಂತೆ ಹಲವರು ಇದ್ದರು. ಚಂದ್ರು ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ಸ್ವಾಗತಿಸಿದರು.


ಕೋಟಿ ಕೋಟಿ ಅಭಿನಂದನೆ ಎಂದ ಚಂದ್ರು


ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಚಂದ್ರಶೇಖರ್, ನನ್ನ ಬಿಡುಗಡೆಗಾಗಿ ಹಲವರು ಪ್ರಯತ್ನ ಮಾಡಿದ್ದಾರೆ. ಎಲ್ಲರಿಗೂ ಕೋಟಿ ಕೋಟಿ ಅಭಿನಂದನೆ ಹೇಳುತ್ತೇನೆ. ಎಲ್ಲರಿಗೂ ಆಭಾರಿಯಾಗಿದ್ದೇನೆ. ಜೈಲಿನಲ್ಲಿದ್ದರೂ ಕಂಪನಿ ಪ್ರತಿನಿಧಿಗಳು, ಮಂಗಳೂರು ಮೂಲದ ಹಲವರು ಸಹಾಯ ಮಾಡಿದ್ದಾರೆ. ಜೈಲಿನಲ್ಲಿದ್ದಾಗ ಮನೆಯವರೊಂದಿಗೆ ಮಾತನಾಡಲು ಸಾಧ್ಯವಾಗಲಿಲ್ಲ. ಇದರಿಂದ ತುಂಬ ದುಃಖಿತನಾಗಿದ್ದೆ. ಮೊಬೈಲ್ ಕೊಟ್ಟರೂ ಎರಡು ನಿಮಿಷ ಮಾತ್ರ ಬಳಕೆಗೆ ಅವಕಾಶ ಇತ್ತು. ಜೈಲಿನಲ್ಲಿ ಪೊಲೀಸರು ನನಗೆ ಯಾವುದೇ ತೊಂದರೆ ಮಾಡಿಲ್ಲ. ಮರಳಿ ಬರಲು ಕಾರಣವಾದ ಎಲ್ಲರಿಗೂ ಥ್ಯಾಂಕ್ಸ್ ಎಂದು ಹೇಳಿದ್ದಾರೆ. ದೀರ್ಘ ಕಾಲ ಜೈಲಿನಲ್ಲಿದ್ದರಿಂದಲೋ ಏನೋ, ಚಂದ್ರಶೇಖರ್ ಆರಂಭದಲ್ಲಿ ಮಾತನಾಡುವುದಕ್ಕೂ ತೊದಲಿದರು. ಅರಬ್ಬರ ಊರಿನಲ್ಲಿ ಮೌನದಲ್ಲೇ ಇದ್ದವರು ನೇರವಾಗಿ ವಿಮಾನದಲ್ಲಿ ಬಂದು ತಾಯಿ ನೆಲದಲ್ಲಿಯೇ ಬಾಯಿ ತೆರೆದಂತಿತ್ತು. ತಾಯಿ ಹೇಮಾವತಿ, ಅಣ್ಣ ಹರೀಶ್ ಮುಖದಲ್ಲಿ ಅಳುವೇ ಆವರಿಸಿತ್ತು. ಕಣ್ಣೀರು ಹಾಕುತ್ತಾ ಮನೆ ಮಗನನ್ನು ಅಪ್ಪಿ ಹಿಡಿದು ಆಲಿಂಗಿಸಿದರು. ಕಂಪನಿ ಕೆಲಸವೆಂದು ಹೋಗಿದ್ದ ಮಗನಿಗೆ ಹೀಗಾಯಿತಲ್ಲ ಎಂದು ತಾಯಿ ಕಣ್ಣೀರು ಹಾಕಿದರು.

ಉಪ್ಪಿನಂಗಡಿ ಕಂದಾಯ ನಿರೀಕ್ಷಕರಾಗಿ ಚಂದ್ರ ನಾಯ್ಕ್

Posted by Vidyamaana on 2023-12-05 15:59:14 |

Share: | | | | |


ಉಪ್ಪಿನಂಗಡಿ ಕಂದಾಯ ನಿರೀಕ್ಷಕರಾಗಿ ಚಂದ್ರ ನಾಯ್ಕ್

ಪುತ್ತೂರು: ಉಪ್ಪಿನಂಗಡಿ ಹೋಬಳಿಯ ಕಂದಾಯ ನಿರೀಕ್ಷಕರಾಗಿ ಪಂಜ ಹೋಬಳಿಯಿಂದ ವರ್ಗಾವಣೆಗೊಂಡಿರುವ ಚಂದ್ರ ನಾಯ್ಕ್ ಡಿ.4ರಂದು ಅಧಿಕಾರ ಸ್ವೀಕರಿಸಿದ್ದಾರೆ.


ಕೋಡಿಂಬಾಡಿ, ಬೆಳ್ಳಿಪ್ಪಾಡಿ, ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಪುಣ್ಚಪ್ಪಾಡಿ ಗ್ರಾಮಗಳಲ್ಲಿ ಗ್ರಾಮಕರಣಿಕರಾಗಿದ್ದ ಚಂದ್ರ ನಾಯ್ಕ ಆಹಾರ ನಿರೀಕ್ಷಕರಾಗಿ ಭಡ್ತಿಹೊಂದಿ ಕಡಬಕ್ಕೆ ವರ್ಗಾವಣೆಗೊಂಡಿದ್ದರು. ನಂತರ ವರ್ಗಾವಣೆಗೊಂಡು ಸುಳ್ಯ ತಾಲೂಕಿನ ಪಂಜ ಹೋಬಳಿಯ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಇದೀಗ ಉಪ್ಪಿನಂಗಡಿ ಹೋಬಳಿಗೆ ವರ್ಗಾವಣೆಗೊಂಡಿದ್ದಾರೆ

ಮಲಪ್ಪುರಂ ದೋಣಿ ದುರಂತ: ಒಂದೇ ಕುಟುಂಬದ 12 ಸದಸ್ಯರು ಸಹಿತ 22 ಮಂದಿ ಮೃತ್ಯು. ಮೃತರ ಕುಟುಂಬಕ್ಕೆ ಹತ್ತು ಲಕ್ಷ ರೂ ಪರಿಹಾರ ಘೋಷಣೆ

Posted by Vidyamaana on 2023-05-08 09:50:17 |

Share: | | | | |


ಮಲಪ್ಪುರಂ ದೋಣಿ ದುರಂತ: ಒಂದೇ ಕುಟುಂಬದ 12 ಸದಸ್ಯರು ಸಹಿತ 22 ಮಂದಿ ಮೃತ್ಯು. ಮೃತರ ಕುಟುಂಬಕ್ಕೆ ಹತ್ತು ಲಕ್ಷ ರೂ ಪರಿಹಾರ ಘೋಷಣೆ

ಮಲಪ್ಪುರಂ: ಮಲಪ್ಪುರಂನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 22 ಮಂದಿಯನ್ನು ಬಲಿ ತೆಗೆದುಕೊಂಡ ಪ್ರವಾಸಿ ದೋಣಿ ದುರಂತದ ನ್ಯಾಯಾಂಗ ತನಿಖೆಗೆ ಕೇರಳ ಸರ್ಕಾರವು ಸೋಮವಾರ ಘೋಷಿಸಿದೆ. ಅಲ್ಲದೆ ಮೃತರ ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ ಪರಿಹಾರವನ್ನು ನೀಡಲು ನಿರ್ಧರಿಸಿದೆ.ತಿರುರಂಗಂಡಿ ತಾಲೂಕು ಆಸ್ಪತ್ರೆ ಮತ್ತು 12 ಸದಸ್ಯರನ್ನು ಕಳೆದುಕೊಂಡ ಕುನ್ನುಮ್ಮೆಲ್ ಕುಟುಂಬಕ್ಕೆ ಭೇಟಿ ನೀಡಿದ ನಂತರ ಇಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅಪಘಾತವನ್ನು ‘ದುರಂತ’ ಎಂದು ಬಣ್ಣಿಸಿದರು. ಚಿಕಿತ್ಸೆಯಲ್ಲಿರುವವರ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದರು.ತಾನೂರಿನಲ್ಲಿ ನಡೆದ ಸರ್ವಪಕ್ಷಗಳ ಸಭೆಯ ನಂತರ ವಿಜಯನ್ ಅವರು ತನಿಖೆ ಮತ್ತು ಪರಿಹಾರವನ್ನು ಘೋಷಿಸಿದರು. ಸಭೆಯಲ್ಲಿ ವಿರೋಧ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದರು.

ನವವಿವಾಹಿತೆ ಹರ್ಷಿತಾ ಆತ್ಮಹತ್ಯೆ

Posted by Vidyamaana on 2023-04-25 16:39:04 |

Share: | | | | |


ನವವಿವಾಹಿತೆ ಹರ್ಷಿತಾ ಆತ್ಮಹತ್ಯೆ

ಪುತ್ತೂರು: ನವವಿವಾಹಿತೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ಕೆದಿಲದಲ್ಲಿ ನಡೆದಿದೆ.

ಕೆಮ್ಮಿಂಜೆ ನಿವಾಸಿ ಪ್ರಶಾಂತ್ ಎಂಬವರ ಪತ್ನಿ ಹರ್ಷಿತಾ (28)ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.

ಕಳೆದ 2 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಚಿನ್ನದ ಅಂಗಡಿ ಮೇಲೆ ನಕಲಿ ಅಧಿಕಾರಿಗಳ ದಾಳಿ 1 ಕೇಜಿ ಬಂಗಾರ ತೆಗೆದುಕೊಂಡು ಪರಾರಿಯಾಗುತ್ತಿದ್ದವರು ಪೊಲೀಸರ ಬಲಗೆ ಬಿದ್ದಿದ್ದೇ ರೋಚಕ

Posted by Vidyamaana on 2024-01-31 08:13:29 |

Share: | | | | |


ಚಿನ್ನದ ಅಂಗಡಿ ಮೇಲೆ ನಕಲಿ ಅಧಿಕಾರಿಗಳ ದಾಳಿ 1 ಕೇಜಿ ಬಂಗಾರ ತೆಗೆದುಕೊಂಡು ಪರಾರಿಯಾಗುತ್ತಿದ್ದವರು ಪೊಲೀಸರ ಬಲಗೆ ಬಿದ್ದಿದ್ದೇ ರೋಚಕ

ಬೆಂಗಳೂರು: ಇತ್ತೀಚಿಗೆ ನಗರದಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದೆ. ಜನವರಿ 27 ರಂದು ಕೆಆರ್​ಪುರಂನಲ್ಲಿರುವ (KR Puram) ಚಿನ್ನದ ಅಂಗಡಿ (Gold Shop) ಮೇಲೆ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಧಿಕಾರಿಗಳು ದಾಳಿ ಮಾಡಿದ್ದರು. ಆದರೆ ದಾಳಿ ಮಾಡಿದವರು ಅಸಲಿ ಅಧಿಕಾರಿಗಳಲ್ಲ, ಬದಲಿಗೆ ನಕಲಿ ಅಧಿಕಾರಿಗಳು. 45 ನಿಮಿಷದ ಕಾರ್ಯಾಚರಣೆ ಥೇಟ್ ಸಿನಿಮಾ ಕಥೆಯನ್ನೇ ಹೊಲುವ ರೀತಿ ಇದೆ. ಯಾವಾಗ ಇವರು ನಕಲಿ ಅಧಿಕಾರಿಗಳು ಎಂದು ತಿಳಿಯಿತು, ಆಗ 30 ನಿಮಿಷದ ಪೊಲೀಸರ ಕಾರ್ಯಾಚರಣೆ ನಡೆದಿದ್ದು, ಇದು ಪ್ರಕರಣದ ಮೇಜರ್ ಟ್ವಿಸ್ಟ್ ಆಗಿದೆ.


ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಧಿಕಾರಿಗಳು ಅಂತ ಹೇಳಿ ಇದೇ ತಿಂಗಳು 27 ರಂದು ಇನೋವ್​ ಕಾರ್​ನಲ್ಲಿ ಎಂಟ್ರಿ ಕೊಟ್ಟಿದ್ದ ನಾಲ್ವರು ಕೆಆರ್​ಪುರಂನಲ್ಲಿರುವ ಮಹಾಲಕ್ಷ್ಮಿ ಜ್ಯುವೆಲರ್ಸ್ ಮೇಲೆ ದಾಳಿ ಮಾಡಿದ್ದರು. ಬೆಂಗಳೂರಿನ ಹಲವು ಬಂಗಾರದ ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ ಅದರಲ್ಲಿ‌ ನಿಮ್ಮದೂ ಒಂದು. ಹಾಲ್ ಮಾರ್ಕ್ ಇಲ್ಲದೆ ಅಕ್ರಮವಾಗಿ ನೀವು ಚಿನ್ನ ಮಾರಾಟ ಮಾಡುತ್ತಿದ್ದೀರಿ ಎಂಬ ಮಾಹಿತಿ ನಮಗೆ ದೊರೆತಿದೆ ಹೀಗಾಗಿ ದಾಳಿ ಮಾಡಿದ್ದೇವೆ ಎಂದು ನಕಲಿ ಅಧಿಕಾರಿಗಳು ಹೇಳಿದ್ದಾರೆ. ಬಳಿಕ 45 ನಿಮಿಷ ಕಾರ್ಯಾಚರಣೆ ನಡೆಸಿದ ನಕಲಿ ಅಧಿಕಾರಿಗಳು, ಅಂಗಡಿಯಲ್ಲಿದ್ದ 80 ಲಕ್ಷ ರೂ. ಮೌಲ್ಯದ 1 ಕೆಜಿಗೂ ಅಧಿಕ ಚಿನ್ನ ತೆಗೆದುಕೊಂಡರು.


ಇವೆಲ್ಲವನ್ನೂ ಸೀಜ್ ಮಾಡುವುದಾಗಿ ನಕಲಿ ಅಧಿಕಾರಿಗಳು ಹೇಳಿದ್ದರು. ಬಳಿಕ ಅಂಗಡಿ ಮಾಲಿಕನ ಕೈಗೆ ನಕಲಿ ನೋಟಿಸ್ ನೀಡಿ, ಮುಂದಿನ ವಾರ ತಮಿಳುನಾಡಿನ ಕಚೇರಿಗೆ ಬರುವಂತೆ ಹೇಳಿ ಹೋದರು. ಹೀಗೆ ಹೋಗುವಾಗ ನಕಲಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ.ಊರು ಬಿಡುವ ಮುನ್ನವೇ ನಕಲಿ ಅಧಿಕಾರಿಗಳು ಲಾಕ್ ಆಗಿದ್ದೇಗೆ ?


ನಕಲಿ ಅಧಿಕಾರಿಗಳು ಚಿನ್ನದ ಅಂಗಡಿಯಿಂದ ಹೊರಡುವಾಗ ಸಿಸಿಟಿವಿ ಡಿವಿಆರ್ ತೆಗೆದುಕೊಂಡು ಹೋಗಿದ್ದಾರೆ. ಇದನ್ನು ಕಂಡು ಅನುಮಾನಗೊಂಡ ಚಿನ್ನದ ಅಂಗಡಿ ಕೆಲ ಸಿಬ್ಬಂದಿಗಳು, ನಕಲಿ ಅಧಿಕಾರಿಗಳನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಇದನ್ನು ತಿಳಿದ ನಕಲಿ ಅಧಿಕಾರಿಗಳು, ತಪ್ಪಿಸಿಕೊಳ್ಳುವ ಬರದಲ್ಲಿ ಟಿಸಿ ಪಾಳ್ಯದಲ್ಲಿ ಬೈಕ್​​ಗಳಿಗೆ ಗುದ್ದಿದ್ದಾರೆ.


ಇತ್ತ ಅಂಗಡಿ ಮಾಲಿಕರಿಗೂ ಅನುಮಾನ ಬಂದು ಕೆಆರ್​ಪುರಂ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಾಗುತಿದ್ದಂತೆ, ಪೊಲೀಸರಿಗೆ ಸರಣಿ ಅಪಘಾತದ ಮಾಹಿತಿ ದೊರೆತಿದೆ. ಕೂಡಲೇ ಅಲರ್ಟ್ ಆದ ಪೊಲೀಸರು ಟಿಸಿ ಪಾಳ್ಯದ ಕಡೆಗೆ ಹೋಗಿದ್ದಾರೆ. ಪೊಲೀಸರು ಬರುವುದನ್ನು ಕಂಡ ನಕಲಿ ಅಧಿಕಾರಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಪೊಲೀಸರು ಚೇಸ್​​ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.ಸಂಪತ್ ಕುಮಾರ್, ಜೊಶಿ ಥಾಮಸ್, ಅವಿನಾಶ್, ಸಂದೀಪ್ ಬಂಧಿತಕ ನಕಲಿ ಅಧಿಕಾರಿಗಳು. ಸಂಪತ್ ಈ ಹಿಂದೆ ಮಂಡ್ಯದಲ್ಲಿ ಸಹ ಕಳ್ಳತನ ಕೃತ್ಯ ಎಸಗಿದ್ದನು. ಈ ಪ್ರಕರಣ ಸಂಬಂಧ ಜೈಲು ವಾಸ ಅನುಭವಿಸಿ ಬಿಡುಗಡೆಯಾಗಿದ್ದನು. ಅದಾದ ಬಳಿಕ ತಮಿಳುನಾಡು ಮೂಲದ ಓರ್ವ ವ್ಯಕ್ತಿಯ ಸಂರ್ಪಕಕ್ಕೆ ಬಂದಿದ್ದಾನೆ. ಆತನ ನಿರ್ದೇಶನದಂತೆ ಈ ಕೃತ್ಯಕ್ಕೆ ಕೈ ಹಾಕಿದ್ದಾನೆ.


ಆರೋಪಿಗಳು ಅರೆಸ್ಟ್​ ಆಗುತ್ತಿದ್ದಂತೆ ತಮಿಳುನಾಡು ಮೂಲದ ಮಾಸ್ಟರ್ ಮೈಂಡ್ ನಾಪತ್ತೆಯಾಗಿದ್ದಾನೆ. ಕೆಆರ್​ಪುರಂ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಕಳ್ಳತನವಾಗಿದ್ದ ಸಂಪೂರ್ಣ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ ನೇಣಿಗೆ ಶರಣು

Posted by Vidyamaana on 2023-10-20 18:37:44 |

Share: | | | | |


ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ ನೇಣಿಗೆ ಶರಣು

ಬಂಟ್ವಾಳ: ಪ್ರೇಮ ವೈಫಲ್ಯ ಕಂಡ ಕಾರಣಕ್ಕಾಗಿ ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ.ಕಡೇಶಿವಾಲಯ ಗ್ರಾಮದ ನೆಲ್ಲಿ ಗುಡ್ಡೆ ನಿವಾಸಿ ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.


ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ದಿ.ಸುಂದರ ಎಂಬವರ ಮಗ ಸಚಿನ್ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಸಚಿನ್ ಬಂಟ್ವಾಳದ ಲೆವಿನ್ ಇಲೆಕ್ಟ್ರಿಕಲ್ ಕಂಪೆನಿಯಲ್ಲಿ ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಅ.18 ರಂದು ಕೆಲಸಕ್ಕೆ ಹೋದವನು ರಾತ್ರಿಯಾದರೂ ಮನೆಗೆ ಬರದ ಹಿನ್ನೆಲೆಯಲ್ಲಿ ಈತನನ್ನು ಹುಡುಕಲು ಶುರು ಮಾಡಿದ್ದರು.


ಪೋನ್ ಮಾಡಿದಾಗ ರಿಂಗ್ ಆಗುತ್ತಿತ್ತು ವಿನಹ ರಿಸೀವ್ ಮಾಡದ ಇರುವಾಗ ಬಂಟ್ವಾಳದ ಕಾಮಾಜೆ ಮಾವನ ಮನೆಯರವಲ್ಲಿ ವಿಚಾರಿಸಿದ್ದಾರೆ. ಅವರು ಹುಡುಕಿದಾಗ ಮುಂಜಾನೆ ಸುಮಾರು 3 ಗಂಟೆಯ ವೇಳೆ ಈತನ ಸ್ಕೂಟರ್ ಬಿ.ಮೂಡ ಗ್ರಾಮದ ಮಿತ್ತಕೋಡಿ ಎಂಬಲ್ಲಿರುವ ಮೈದಾನದ ಬಳಿ ನಿಲ್ಲಿಸಲಾಗಿತ್ತು.


ಆದರೆ ಸಚಿನ್ ಅಲ್ಲಿ ಕಾಣದ ಹಿನ್ನೆಲೆಯಲ್ಲಿ ಪೋನ್ ಮಾಡಿದಾಗ ಅಲ್ಲೇ ಸಮೀಪದ ಗುಡ್ಡವೊಂದರಲ್ಲಿ ಪೋನ್ ರಿಂಗು ಕೇಳುತ್ತಿತ್ತು ಎಂದು ಹೋಗಿ ನೋಡಿದಾಗ ಆತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.


ಆತ್ಮಹತ್ಯೆ ಮಾಡುವ ಮೊದಲು ಈತ ಚೀಟಿಯನ್ನು ಬರೆದು ಕಿಸೆಯಲ್ಲಿಟ್ಟಿದ್ದು, ಇದೀಗ ಚೀಟಿ ಪೋಲೀಸರ ಕೈ ಸೇರಿದೆ. ಪ್ರೇಮ ವೈಫಲ್ಯ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಈತ ಚೀಟಿಯಲ್ಲಿ ಬರೆದಿದ್ದ ಎಂದು ಹೇಳಲಾಗಿದ್ದು,ಮರಣೋತ್ತರ ಪರೀಕ್ಷಾ ವರದಿಯ ಬಳಿಕ ಪೋಲೀಸ್ ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಲಿದೆ.


ನಗರ ಠಾಣಾ ಇನ್ಸ್ ಪೆಕ್ಟರ್ ಆನಂತ ಪದ್ಮನಾಭ ಮತ್ತು ಎಸ್. ಐ.ರಾಮಕೃಷ್ಣ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದಾಖಲಿಸಿಕೊಂಡಿದ್ದಾರೆ.

Recent News


Leave a Comment: