ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ತಲಪಾಡಿ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ಎಸ್ಡಿಪಿಐಗೆ ಬೆಂಬಲ

Posted by Vidyamaana on 2023-08-11 16:23:55 |

Share: | | | | |


ತಲಪಾಡಿ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ಎಸ್ಡಿಪಿಐಗೆ ಬೆಂಬಲ

ಉಳ್ಳಾಲ: ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಎಸ್ಡಿಪಿಐ ಗೆಲುವಿಗೆ ಕಾರಣರಾದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ. 


ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿಗೆ ಬಹುಮತ ಇದ್ದ ಕಾರಣ ಸತ್ಯರಾಜ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನಿಲ್ಲಿಸಲಾಗಿತ್ತು. ಆದರೆ ಬಿಜೆಪಿ ಬೆಂಬಲಿತ ಸದಸ್ಯರಾದ ಮಹಮ್ಮದ್ ಫಯಾಝ್ ಮತ್ತು ಮಹಮ್ಮದ್ ಅವರು ಎಸ್ ಡಿಪಿಐ ನಾಯಕರ ಆಸೆ, ಆಮಿಷ, ಒತ್ತಡದಿಂದ ಅಡ್ಡ ಮತದಾನ ಮಾಡಿ ಎಸ್ ಡಿಪಿಐ ಗೆಲುವಿಗೆ ಕಾರಣರಾಗಿದ್ದು ತಪ್ಪೊಪ್ಪಿಕೊಂಡಿದ್ದಾರೆ. ಆದರೂ ಅವರು ಪಕ್ಷಕ್ಕೆ ದ್ರೋಹ ಬಗೆದ ಕಾರಣ ಕ್ರಮ‌ ಕೈಗೊಳ್ಳಲಾಗಿದೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಚಂದ್ರಹಾಸ ಪಂಡಿತೌಸ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 




ಬಿಜೆಪಿ ಅಧಿಕಾರಕ್ಕಾಗಿ ಇರುವ ಪಕ್ಷವಲ್ಲ, ಎಸ್ ಡಿಪಿಐಗೆ ಬೆಂಬಲ ನೀಡುವ ಅಗತ್ಯವೂ ಇಲ್ಲ. ಗ್ರಾಮ ಪಂಚಾಯತ್ ನಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮೀಸಲಾತಿ ಬಂದಿದ್ದು ಬಿಜೆಪಿಯಲ್ಲಿ ಪುಷ್ಪಲತಾ ಶೆಟ್ಟಿ ಮಾತ್ರ ಇದ್ದ ಕಾರಣ ಅವಿರೋಧವಾಗಿ ಉಪಾಧ್ಯಕ್ಷರಾಗಿದ್ದಾರೆ. ಎಸ್ ಡಿಪಿಐಗೆ ಬೆಂಬಲ, ಸಹಕಾರ ನೀಡಿಲ್ಲ, ಈ ಬಗ್ಗೆ ತಪ್ಪು ಸಂದೇಶ ಹೋಗಿದ್ದು ಕಾರ್ಯಕರ್ತರು ಗೊಂದಲಕ್ಕೀಡಾಗಬಾರದು ಎಂದು ತಿಳಿಸಿದರು. 


ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ, ಕಾರ್ಯದರ್ಶಿಗಳಾದ ಸತೀಶ್ ಕುಂಪಲ, ಜಯಶ್ರೀ ಕರ್ಕೇರ, ಮುಖಂಡರಾದ ಕಸ್ತೂರಿ ಪಂಜ, ರಣದೀಪ್ ಕಾಂಚನ್, ನವೀನ್ ಪಾದಲ್ಪಾಡಿ, ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು, ಪುಷ್ಪಲತಾ ಶೆಟ್ಟಿ, ಹೇಮಂತ್ ಶೆಟ್ಟಿ ದೇರಳಕಟ್ಟೆ ಸುದ್ದಿಗೋಷ್ಠಿಯಲ್ಲಿದ್ದರು.

ಉಪ್ಪಿನಂಗಡಿಯ ಮೇಸ್ತ್ರಿಗೆ ಒಲಿದ ಅದೃಷ್ಟ, ಕೇರಳ ಲಾಟರಿಯಲ್ಲಿ ಬಂತು 50 ಲಕ್ಷ ಬಹುಮಾನ

Posted by Vidyamaana on 2023-09-27 04:40:42 |

Share: | | | | |


ಉಪ್ಪಿನಂಗಡಿಯ ಮೇಸ್ತ್ರಿಗೆ ಒಲಿದ ಅದೃಷ್ಟ, ಕೇರಳ ಲಾಟರಿಯಲ್ಲಿ ಬಂತು 50 ಲಕ್ಷ ಬಹುಮಾನ

ಉಪ್ಪಿನಂಗಡಿಯ ಮೇಸ್ತ್ರಿಗೆ  ಅದೃಷ್ಟವೊಂದು ಒಲಿದು ಬಂದಿದೆ. ಕೇರಳ ರಾಜ್ಯ ಲಾಟರಿಯಲ್ಲಿ ಉಪ್ಪಿನಂಗಡಿಯ ಇಳಂತಿಲ ನಿವಾಸಿ ಚಂದ್ರಯ್ಯ ಅವರು 50 ಲಕ್ಷ ರೂ.ಬಹುಮಾನ ಗೆದ್ದಿದ್ದಾರೆ.


ಮೇಸ್ತ್ರಿ ಆಗಿರುವ ಚಂದ್ರಯ್ಯ ಕಾನತ್ತೂರು ದೇವಸ್ಥಾನಕ್ಕೆ ಹೋಗಿದ್ದ ವೇಳೆ ಕಾಸರಗೋಡಿನಲ್ಲಿರುವ ಬೊಲ್ಪು ಲಕ್ಕಿ ಲಾಟರಿ ಏಜೆನ್ಸಿಯಲ್ಲಿ 500 ಬೆಲೆಯ ಸೆ.20 ರಂದು ಡ್ರಾ ಇದ್ದ ಓಣಂ ಬಂಪರ್ ಲಾಟರಿ ಟಿಕೇಟ್ ಖರೀದಿಸಿದ್ದರು. ಇವರು ಖರೀದಿಸಿದ ಟಿಕೆಟ್‌ಗೆ ಬಂಪರ್ ಬಹುಮಾನವಾಗಿ 50ಲಕ್ಷ ರೂ. ಬಂದಿದೆ.

ಈ ಹಿಂದೆ ಇದೇ ಬೊಲ್ಪು ಲಕ್ಕಿ ಲಾಟರಿ ಏಜೆನ್ಸಿಯ ಮೂಲಕ

ಟಿಕೆಟ್ ಖರೀದಿಸಿದ ಉಪ್ಪಿನಂಗಡಿ ಕೆಂಪಿಮಜಲು ಎಂಬಲ್ಲಿನ

ಆನಂದ ಟೈಲರ್ (72) ಎಂಬವರಿಗೆ 80 ಲಕ್ಷ

ರೂ.ಬಹುಮಾನ ಬಂದಿತ್ತು. ಇದೀಗ ಎರಡನೇ ಬಾರಿಗೆ

ಉಪ್ಪಿನಂಗಡಿಗೆ ಅದೃಷ್ಟ ಲಕ್ಷ್ಮೀ ಒಲಿದಿದ್ದು ಅಚ್ಚರಿ

ಮೂಡಿಸಿದೆ.

ಕಾಡಿನೊಳಗೆ ಹಸಿವಿನಿಂದ ಸಾವನ್ನಪ್ಪಿದ 6 ಮಂದಿ ಮ್ಯಾನ್ಮಾರ್ ಕಳ್ಳ ಬೇಟೆಗಾರರು

Posted by Vidyamaana on 2024-02-19 08:04:09 |

Share: | | | | |


ಕಾಡಿನೊಳಗೆ ಹಸಿವಿನಿಂದ ಸಾವನ್ನಪ್ಪಿದ 6 ಮಂದಿ ಮ್ಯಾನ್ಮಾರ್ ಕಳ್ಳ ಬೇಟೆಗಾರರು

ಪೋರ್ಟ್ ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ದೂರದ ನಾರ್ಕೊಂಡಮ್ ದ್ವೀಪದಲ್ಲಿ ಆರು ಶಂಕಿತ ಮ್ಯಾನ್ಮಾರ್ ಕಳ್ಳ ಬೇಟೆಗಾರರ ​​ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ದ್ವೀಪದಲ್ಲಿ ಬೇಟೆಗಾರರು ಹಸಿವಿನಿಂದ ಮತ್ತು ನಿರ್ಜಲೀಕರಣದಿಂದ ಸಾವನ್ನಪ್ಪಿರುವುದಾಗಿ ತೋರುತ್ತದೆ. ದ್ವೀಪವನ್ನು ತಲುಪಲು ಬಳಸಿದ್ದ ಸಣ್ಣ ದೋಣಿಯಲ್ಲಿ ಸ್ವಲ್ಪ ತೊಂದರೆ ಉಂಟಾಗಿ ಅವರು ಹಿಂತಿರುಗಲು ಸಾಧ್ಯವಾಗಲಿಲ್ಲ. ಶನಿವಾರ ಚಿಕ್ಕ ನಾರ್ಕೊಂಡಮ್ ದ್ವೀಪದ ಕಾಡಿನಲ್ಲಿ ತೀರದಿಂದ ಕೆಲವು ಮೀಟರ್ ದೂರದಲ್ಲಿ ಶವಗಳು ಬಿದ್ದಿವೆ ಎಂದು ಅಧಿಕಾರಿ ಹೇಳಿದರು.

ಭಾರತದ ಪೂರ್ವ ಭಾಗದಲ್ಲಿದೆ, ಉತ್ತರ ಮತ್ತು ಮಧ್ಯ ಅಂಡಮಾನ್ ಜಿಲ್ಲೆಯ ನಾರ್ಕೊಂಡಮ್ ಮ್ಯಾನ್ಮಾರ್‌ನ ಕೊಕೊ ದ್ವೀಪದಿಂದ ಕೇವಲ 126 ಕಿಮೀ ದೂರದಲ್ಲಿದೆ. ಇದು ಆಂಡಿಸೈಟ್, ಜ್ವಾಲಾಮುಖಿ ಬಂಡೆಯಿಂದ ರೂಪುಗೊಂಡಿದೆ. ಈ ದ್ವೀಪವನ್ನು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (GSI) ಸುಪ್ತ ಜ್ವಾಲಾಮುಖಿ ಎಂದು ವರ್ಗೀಕರಿಸಿದೆ.

ಸರಿಸುಮಾರು 7.6 ಚದರ ಕಿಲೋಮೀಟರ್ ವಿಸ್ತೀರ್ಣವನ್ನು ಹೊಂದಿರುವ ದ್ವೀಪ ಮ್ಯಾನ್ಮಾರ್ ಬೇಟೆಗಾರರಿಗೆ ಬೇಟೆಯಾಡುವ ಸ್ಥಳವಾಗಿದೆ.ಫೆಬ್ರವರಿ 14 ರಂದು, ಅಂಡಮಾನ್ ಪೊಲೀಸರು ಶೋಧ ಕಾರ್ಯಾಚರಣೆಯ ಸಮಯದಲ್ಲಿ ನಾರ್ಕೊಂಡಮ್ ದ್ವೀಪದಿಂದ ಇಬ್ಬರು ಮ್ಯಾನ್ಮಾರ್ ಕಳ್ಳ ಬೇಟೆಗಾರರನ್ನು ಬಂಧಿಸಿ ಪೋರ್ಟ್ ಬ್ಲೇರ್‌ಗೆ ಕರೆತಂದು ಸಿಐಡಿಗೆ ಒಪ್ಪಿಸಿದ್ದಾರೆ.

ಕ್ರೈಸ್ತ ಬಾಂಧವರಿಂದ ಚರ್ಚ್ ಗಳಲ್ಲಿ ಶ್ರದ್ಧಾ ಭಕ್ತಿಯ ಗುಡ್ ಫ್ರೈಡೇ ಆಚರಣೆ

Posted by Vidyamaana on 2023-04-08 06:51:01 |

Share: | | | | |


ಕ್ರೈಸ್ತ ಬಾಂಧವರಿಂದ ಚರ್ಚ್ ಗಳಲ್ಲಿ ಶ್ರದ್ಧಾ ಭಕ್ತಿಯ ಗುಡ್ ಫ್ರೈಡೇ ಆಚರಣೆ

ಪುತ್ತೂರು:ಏ .7 ರಂದು ಪ್ರಭು ಯೇಸುಕ್ರಿಸ್ತರನ್ನು ಶಿಲುಬೆಗೇರಿಸುವ ದಿನವಾದ ಗುಡ್‌ ಫ್ರೈಡೇ(ಶುಭ ಶುಕ್ರವಾರ) ದಿನವನ್ನು ವಿಶ್ವದಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು, ಪುತ್ತೂರು ತಾಲೂಕಿನ ಚರ್ಚ್ಗಳಲ್ಲಿಯೂ ಗುಡ್‌ ಫ್ರೈಡೇ ದಿನವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಅದರಂತೆ ಪುತ್ತೂರಿನ ಮಾಯಿದೆ ದೇವುಸ್ ಚರ್ಚ್, ಮರೀಲಿನ ಸೆಕ್ರೇಡ್ ಹಾರ್ಟ್ ಚರ್ಚ್, ಬನ್ನೂರಿನ ಸಂತ ಅಂತೋನಿ ಚರ್ಚ್, ಉಪ್ಪಿನಂಗಡಿ ದೀನರ ಕನ್ಯಾಮಾತಾ ದೇವಾಲಯ, ಬೆಳ್ಳಾರೆ ಚರ್ಚ್ ಸಹಿತಿ ಇನ್ನಿತರ ಚರ್ಚ್ ಗಳಲ್ಲಿ ಗುಡ್‌ ಫ್ರೈಡೇ ದಿನವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಆಯಾ ಚರ್ಚ್‌ ನ ಪಾಲನಾ ಸಮಿತಿಯ ಉಪಾಧ್ಯಕ್ಷ, ಕಾರ್ಯದರ್ಶಿ, ಚರ್ಚ್ ಪಾಲನಾ ಸಮಿತಿ ಸದಸ್ಯರು, ಸ್ಯಾಕ್ರಿಸ್ಟಿಯನ್, ಗುರಿಕಾರರು, ಧರ್ಮಭಗಿನಿಯರು, ವೇದಿ ಸೇವಕರು, ಗಾಯನ ಮಂಡಳಿ ಸದಸ್ಯರು ಸಹಕರಿಸಿದರು. ನೂರಾರು ಸಂಖ್ಯೆಯಲ್ಲಿ ಭಕ್ತರು ಧಾರ್ಮಿಕ ವಿಽವಿಧಾನಗಳಲ್ಲಿ ಪಾಲ್ಗೊಂಡರು.

ಮಾಯಿದೆ ದೇವುಸ್ ಚರ್ಚ್ನಲ್ಲಿ ಗುಡ್‌ ಫ್ರೈಡೇ ದಿನದ ಅಂಗವಾಗಿ ಯೇಸುಕ್ರಿಸ್ತರ ಪೂಜ್ಯ ಶರೀರದೊಂದಿಗೆ ಕ್ರೈಸ್ತ ವಿಶ್ವಾಸಿ ಭಕ್ತರು ಚರ್ಚ್-ಕೋರ್ಟ್ರೋಡ್-ಎಂ.ಟಿರೋಡ್ ಮುಖೇನ ಯೇಸುಕ್ರಿಸ್ತರ ಸ್ಮರಣಾ ಮೆರವಣಿಗೆಯನ್ನು ಶ್ರದ್ಧಾ ಭಕ್ತಿಯಿಂದ ಹಮ್ಮಿಕೊಳ್ಳಲಾಯಿತು. ಬನ್ನೂರು ಚರ್ಚ್ನಲ್ಲಿ ಚರ್ಚ್ನಿಂದ ಆನೆಮಜಲು ಕೋರ್ಟ್ ಮುಖೇನ ಸಾಗಿ ಪುನಹ ಚರ್ಚ್ಗೆ ಆಗಮಿಸುವ ಹಾದಿಯಲ್ಲಿ ಯೇಸುಕ್ರಿಸ್ತರ ಶಿಲುಬೆಯ ಹಾದಿಯ 14 ಸ್ಥಳಗಳನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಮಾಯಿದೆ ದೇವುಸ್ ಚರ್ಚ್ನಲ್ಲಿ ಪ್ರಧಾನ ಧರ್ಮಗುರು ವಂ|ಲಾರೆನ್ಸ್ ಮಸ್ಕರೇನ್ಹಸ್, ಸಹಾಯಕ ಧರ್ಮಗುರು ವಂ|ಕೆವಿನ್ ಲಾರೆನ್ಸ್ ಡಿ ಸೋಜ, ವಂ|‌ಸ್ಟ್ಯಾನಿ ಪಿಂಟೋ, ವಂ|ಅಶೋಕ್ ರಾಯನ್ ಕ್ರಾಸ್ತಾ, ಬನ್ನೂರು ಚರ್ಚ್ ನಲ್ಲಿ ವಂ|ಬಾಲ್ತಜಾರ್ ಪಿಂಟೋ, ಹಿರಿಯ ಧರ್ಮಗುರು ವಂ|ಆಲ್ಪೋನ್ಸ್ ಮೊರಾಸ್, ಮರೀಲು ಚರ್ಚ್ ನಲ್ಲಿ ವಂ|ವಲೇರಿಯನ್ ಫ್ರ್ಯಾಂಕ್, ವಂ|ಡೆನ್ಜಿಲ್ ಲೋಬೊ, ಉಪ್ಪಿನಂಗಡಿ ಚರ್ಚ್‌ ನ ಲ್ಲಿ ವಂ|ಅಬೆಲ್ ಲೋಬೊ ನೇತೃತ್ವದಲ್ಲಿ ನಡೆಯಿತು.

ಶಿಲುಬೆಯ ಮೇಲೆ ಯೇಸುಕ್ರಿಸ್ತರು ಪ್ರಾಣ ಬಿಟ್ಟ ದಿನ ಇಡೀ ವಿಶ್ವಕ್ಕೆ ಬೇಸರದ ದಿನ(ಕಪ್ಪು ದಿನ)ವಾಗಿ ಪರಿಣಮಿಸಿದರೂ, ತನ್ನನ್ನು ತಾನು ಸಮರ್ಪಿಸಿಕೊಂಡು ಜನರಲ್ಲಿ ಪರಸ್ಪರ ಸೌಹಾರ್ದತೆ, ಮಾನವೀಯತೆ, ಪ್ರೀತಿ, ಕ್ಷಮಾಪಣಾ ಗುಣವನ್ನು ಬೋಽಸಿದ್ದು ಕ್ರೈಸ್ತ ಬಾಂಧವರಿಗೆ ಶುಭ ಶುಕ್ರವಾರವಾಗಿ ಪರಿಣಮಿಸಿದೆ. ಯೇಸುಕ್ರಿಸ್ತರ ಶಿಲುಬೆಯು ನಮ್ಮಲ್ಲಿ ಹೊಸ ಜೀವನ, ಸಾಂತ್ವನವುಳ್ಳ, ಸಮಾಧಾನದ ಪ್ರತೀಕವಾಗಿದೆ ಮಾತ್ರವಲ್ಲದೆ ಕುಟುಂಬದ ಪಾವಿತ್ರ‍್ಯತೆಯನ್ನು ಹೆಚ್ಚಿಸುತ್ತದೆ. ಯೇಸುಕ್ರಿಸ್ತರು ಸಾವಿಗೆ ಶರಣಾಗಲಿಲ್ಲ. ಸಾವನ್ನು ಲೆಕ್ಕಿಸದೆ ತಾವು ನಂಬಿದ ಮೌಲ್ಯಗಳಿಗಾಗಿ ನಿಂತರು. ಆತನ ಹಿಂಬಾಲಕರಾದ ನಾವು ಸಹ ನಿಲ್ಲಬೇಕಾದ್ದು ಅವರ ಮೌಲ್ಯಗಳಿಗಾಗಿ, ಸಾಗಬೇಕಾದ್ದು ಅವರದೇ ಗುರಿಯತ್ತ. ಶಿಲುಬೆಯ ಮೇಲೆ ಪ್ರಾಣ ಬಿಟ್ಟ ಪ್ರಭು ಯೇಸುಕ್ರಿಸ್ತರು ನಮ್ಮಲ್ಲಿ ಪರಸ್ಪರ ಕ್ಷಮೆ, ಬೆಳಕು ಚೆಲ್ಲುವ ಮತ್ತು ಅರ್ಪಣಾ ಭಾವದ ಮೌಲ್ಯಗಳನ್ನು ಎತ್ತಿ ತೋರಿಸುತ್ತದೆ. ಆದ್ದರಿಂದ ಯೇಸುಕ್ರಿಸ್ತರ ಶಿಲುಬೆಯ ಮುಖಾಂತರದ ಪ್ರಾಣ ತ್ಯಾಗ ಮನುಜನ ಪಾಪ ಪರಿಹಾರಕ್ಕಾಗಿದೆ ಎಂಬುದು ಗುಡ್‌ ಫ್ರೈಡೇ ದಿನದ ಸಂದೇಶವಾಗಿದೆ.

ಹೃದಯ, ಮೆದುಳಿನ ಶಸ್ತ್ರಚಿಕಿತ್ಸೆಗೆ ಬಾಲಕನಿಗೆ ಬೇಕಿದೆ ದಾನಿಗಳ ನೆರವು

Posted by Vidyamaana on 2023-03-09 13:27:52 |

Share: | | | | |


ಹೃದಯ, ಮೆದುಳಿನ ಶಸ್ತ್ರಚಿಕಿತ್ಸೆಗೆ ಬಾಲಕನಿಗೆ ಬೇಕಿದೆ ದಾನಿಗಳ ನೆರವು

ಚಿಕ್ಕಮಗಳೂರು: ಹೃದಯ ಹಾಗೂ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಚಿಕ್ಕಮಗಳೂರಿನ ಉಪ್ಪಳ್ಳಿಯ ಬಾಲಕ ನುಹ್ಮಾನ್ ಅವರ ಕುಟುಂಬ, ಚಿಕಿತ್ಸೆಯ ಖರ್ಚಿಗಾಗಿ ದಾನಿಗಳ ನೆರವಿಗಾಗಿ ಎದುರು ನೋಡುತ್ತಿದ್ದಾರೆ.

ಬಾಲಕ ನುಹ್ಮಾನ್ ಚುರುಕು ಹಾಗೂ ಪ್ರತಿಭಾವಂತ. ಇದ್ದಕ್ಕಿದ್ದಂತೆ ಒಂದು ದಿನ ಅನಾರೋಗ್ಯ ಕಾಡುತ್ತದೆ. ಅನಾರೋಗ್ಯ ತೀವ್ರಗೊಳ್ಳುತ್ತಿದ್ದಂತೆ, ಆಸ್ಪತ್ರೆಯ ಹಾದಿ ಹಿಡಿಯುತ್ತಾರೆ ಮನೆಯವರು. ವೈದ್ಯರು ಹೇಳಿದ ವಿಷಯ ಕೇಳಿ ದಂಗಾಗಿ ಬಿಡುತ್ತಾರೆ. ಕಾರಣ, ನುಹ್ಮಾನ್ ಏಕಕಾಲದಲ್ಲಿ ಮೆದುಳು‌ ಹಾಗೂ ಹೃದಯದ ಕಾಯಿಲೆಗೆ ತುತ್ತಾಗಿದ್ದ. ಸದ್ಯ ನುಹ್ಮಾನ್ ಬೆಂಗಳೂರಿನ‌ ನಿಮ್ಹಾನ್ಸಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಗನನ್ನೇನೋ ಆಸ್ಪತ್ರೆಗೆ ಸೇರಿಸಿದರು ಹೆತ್ತವರು. ಆದರೆ ವೈದ್ಯರು ಹೇಳಿದ 15 ಲಕ್ಷ ರೂ.ವನ್ನು‌ ಹೊಂದಿಸಿಕೊಳ್ಳಲು ಹೆತ್ತವರ ಕೈಯಿಂದ ಆಗುತ್ತಿಲ್ಲ. ಆದ್ದರಿಂದ ದಾನಿಗಳ ನೆರವಿಗಾಗಿ ಮನವಿ ಮಾಡಿದ್ದಾರೆ. ಸಂಪರ್ಕಕ್ಕಾಗಿ 7892938854,

ದಿವ್ಯಪ್ರಭಾ ಗೌಡ ಚಿಲ್ತಡ್ಕ ಕಾಂಗ್ರೆಸ್ ಗೆ ರಾಜೀನಾಮೆ.

Posted by Vidyamaana on 2023-04-14 04:15:49 |

Share: | | | | |


ದಿವ್ಯಪ್ರಭಾ ಗೌಡ ಚಿಲ್ತಡ್ಕ ಕಾಂಗ್ರೆಸ್ ಗೆ ರಾಜೀನಾಮೆ.

ಪುತ್ತೂರು: ಕಾಂಗ್ರೆಸ್ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿದ್ದ, ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆಯಾಗಿದ್ದ ದಿವ್ಯಪ್ರಭಾ ಚಿಲ್ತಡ್ಕ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಗೆ ಏ‌ ೧೪ರಂದು  ಸೇರ್ಪಡೆಗೊಳ್ಳಲಿದ್ದಾರೆ.

ಕಾಂಗ್ರೆಸ್ ಮುಖಂಡೆಯಾಗಿ ಸಮಾಜಮುಖಿಯಾಗಿ ಗುರುತಿಸಿಕೊಂಡಿದ್ದ ದಿವ್ಯಪ್ರಭಾ ಅವರು ಕಾಂಗ್ರೆಸಿನ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿದ್ದರು. ಆದರೆ ಕೊನೆ ಕ್ಷಣದಲ್ಲಿ ಟಿಕೇಟ್ ಕೈತಪ್ಪುವ ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಕಾಂಗ್ರೆಸಿಗೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ರವರು ಎಂಎಲ್ಎ ರಘು ಆಚಾರ್ ಹಾಗೂ ಇತರ ಕಾಂಗ್ರೆಸ್ ಮುಖಂಡರ ಜೊತೆ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

Recent News


Leave a Comment: