KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ದ ಕ ಲೋಕ ಸಭಾ ಕ್ಷೇತ್ರದ ಜಿಲ್ಲಾ ಪ್ರಚಾರ ಸಮಿತಿಯ ಸಹ ಉಸ್ತುವಾರಿ ಯಾಗಿ ಮಹಮ್ಮದ್ ಬಡಗನ್ನೂರು ನೇಮಕ

Posted by Vidyamaana on 2024-04-11 15:29:45 |

Share: | | | | |


ದ ಕ ಲೋಕ ಸಭಾ ಕ್ಷೇತ್ರದ ಜಿಲ್ಲಾ ಪ್ರಚಾರ ಸಮಿತಿಯ ಸಹ ಉಸ್ತುವಾರಿ ಯಾಗಿ ಮಹಮ್ಮದ್ ಬಡಗನ್ನೂರು ನೇಮಕ

ಪುತ್ತೂರು :ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಕೆಪಿಸಿಸಿ ಯಿಂದ ದ ಕ ಲೋಕ ಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ರಮಾನಾಥ ರೈ ಯವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಚಾರ ಸಮಿತಿಯನ್ನು ರಚಿಸಲಾಗಿದ್ದು, ಮಹಮ್ಮದ್ ಬಡಗನ್ನೂರು  ರವರನ್ನು ಜಿಲ್ಲಾ ಪ್ರಚಾರ ಸಮಿತಿಯ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ಸುಳ್ಯ : ವಾಹನ ಅಡ್ಡ ಗಟ್ಟಿ ಯುವಕರಿಂದ ಹಲ್ಲೆ ಆರೋಪ

Posted by Vidyamaana on 2023-08-13 08:32:23 |

Share: | | | | |


ಸುಳ್ಯ : ವಾಹನ ಅಡ್ಡ ಗಟ್ಟಿ   ಯುವಕರಿಂದ ಹಲ್ಲೆ ಆರೋಪ

ಸುಳ್ಯ : ಪರಿಚಯದ ಯುವತಿಯೋರ್ವಳನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋದ ವಿಷಯವಾಗಿ ಯುವಕರ ತಂಡವೊಂದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ವ್ಯಕ್ತಿಯೋರ್ವರು ಸುಳ್ಯ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ.


ಕೇರಳ ಮಲಪುರಂ ನಿವಾಸಿ ಮೊಹಮ್ಮದ್ ಜಲೀಲ್ (39) ನೀಡಿದ ದೂರಿನ ಮೇರೆಗೆ ಲತೀಶ್ ಗುಂಡ್ಯ, ವರ್ಷಿತ್, ಪುನೀತ್ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.


ಕೇರಳ ಮಲಪುರಂ ನಿವಾಸಿ ಮೊಹಮ್ಮದ್ ಜಲೀಲ್ ಪ್ರಸ್ತುತ ಸುಳ್ಯ ತಾಲೂಕು ಅರಂತೋಡಿನಲ್ಲಿ ರಬ್ಬರ್ ತೋಟವನ್ನು ಕಳೆದ 3 ತಿಂಗಳ ಹಿಂದೆ ಗುತ್ತಿಗೆ ಪಡೆದು ಅರಂತೋಡಿನಲ್ಲಿ ವಾಸವಾಗಿದ್ದು, ಆ.12 ರಂದು ತನ್ನ ಪರಿಚಯದ ಯುವತಿಯೋರ್ವಳು ತಾನು ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದು, ತನಗೆ ವಿಶ್ರಾಂತಿ ಪಡೆಯಲು ರೂಮ್ ಬೇಕೆಂದು ಕೇಳಿಕೊಂಡ ಮೇರೆಗೆ ಜಲೀಲ್ ಸುಳ್ಯದಲ್ಲಿ ರೂಂ ವ್ಯವಸ್ಥೆ ಮಾಡಿ ಬಳಿಕ ವೈಯಕ್ತಿಕ ಕೆಲಸ ನಿಮಿತ್ತ ಸುಳ್ಯ ತಾಲೂಕು ತೋಡಿಕಾನಕ್ಕೆ ತೆರಳಿದ್ದಾಗ 5 ಜನರು ಕಾರು ಮತ್ತು ಸ್ಕೂಟರ್ ಮೂಲಕ ಜಲೀಲ್ ಕಾರನ್ನು ಪಡೆದು ಜಲೀಲ್ ರವರಿಗೆ ಅವ್ಯಾಚವಾಗಿ ಬೈದು ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿ ತೆರಳಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಸದರಿ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 87/2023 ಕಲಂ 143, 147, 341, 323, 504, 506, 153(A) ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಆರೋಪಿಗಳ ಪೈಕಿ ಸುಳ್ಯ ಸೊಣಂಗೇರಿ ನಿವಾಸಿ ಪುನೀತ್ ಎಂಬಾತನನ್ನು ಬಂಧಿಸಿದ್ದು, ತನಿಖೆ ನಡೆಸಲಾಗುತ್ತಿದೆ..

ಕ್ರಿಕೆಟ್​ ಆಡಿ ಬಂದು ತಕ್ಷಣ ನೀರು ಕುಡಿದ ಬಾಲಕ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಸಾವು

Posted by Vidyamaana on 2023-12-31 16:02:08 |

Share: | | | | |


ಕ್ರಿಕೆಟ್​ ಆಡಿ ಬಂದು ತಕ್ಷಣ ನೀರು ಕುಡಿದ ಬಾಲಕ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಸಾವು

ಲಕ್ನೋ: ಕ್ರಿಕೆಟ್‌ ಆಡಿ ನೀರು ಕುಡಿದ ಬಳಿಕ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲ್ಮೋರಾ ಜಿಲ್ಲೆಯಲ್ಲಿ ನಡೆದಿದೆ.ಶನಿವಾರ(ಡಿ.30 ರಂದು) ನಡೆದಿದ್ದು, ಹಸನ್‌ಪುರದ ಕಾಯಸ್ತಾನ್‌ನ 10ನೇ ತರಗತಿ ವಿದ್ಯಾರ್ಥಿ ಪ್ರಿನ್ಸ್ ಸೈನಿ ಎಂಬ ಬಾಲಕ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ.ಬಾಲಕ ಸೈನಿ ಕ್ರಿಕೆಟ್‌ ಆಡಿದ ಬಳಿಕ ನೀರು ಕುಡಿಯಲು ಬಂದಿದ್ದಾನೆ. ಕೋಲ್ಡ್‌ ನೀರು ಕುಡಿದಿದ್ದಾನೆ. ನೀರು ಕುಡಿದ ತಕ್ಷಣವೇ ಆತ ಪ್ರಜ್ಞೆ ತಪ್ಪಿದ್ದಾನೆ.


ಪ್ರಿನ್ಸ್‌ ಅವರ ಸ್ನೇಹಿತರು ವಿಚಾರವನ್ನು ಮನೆಯವರಿಗೆ ತಿಳಿಸಿದ್ದು,ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಪರೀಕ್ಷೆ ಮಾಡಿದ ವೈದ್ಯರು ಆದಾಗಲೇ ಆತ ಮೃತಪಟ್ಟಿರುವುದಾಗಿ ಹೇಳಿದ್ದಾರೆ.ಬಾಲಕನ ಸಾವಿಗೆ ಹೃದಯಾಘಾತವೇ ಕಾರಣವಿರಬಹದೆಂದು ಶಂಕಿಸಲಾಗಿದೆ. ಸದ್ಯ ಈ ಬಗ್ಗೆ ಪೋಷಕರು ದೂರು ದಾಖಲಿಸಿಲ್ಲ ಎಂದು ವರದಿ ತಿಳಿಸಿದೆ.

ಮೈಸೂರು:ರಾಮ ಮಂದಿರ ಗುದ್ದಲಿ ಪೂಜೆಗೆ ಆಗಮಿಸಿದ ಸಂಸದಗೆ ಘೇರಾವ್, ವಾಪಸ್ ತೆರಳಿದ ಸಿಂಹ

Posted by Vidyamaana on 2024-01-23 07:20:40 |

Share: | | | | |


ಮೈಸೂರು:ರಾಮ ಮಂದಿರ ಗುದ್ದಲಿ ಪೂಜೆಗೆ ಆಗಮಿಸಿದ ಸಂಸದಗೆ ಘೇರಾವ್, ವಾಪಸ್ ತೆರಳಿದ ಸಿಂಹ

ಮೈಸೂರು, ಜ 23: ಸಂಸದ ಪ್ರತಾಪ್ ಸಿಂಹ ಅವರಿಗೆ  ದಲಿತ ರಾಮಭಕ್ತರು ಘೇರಾವ್ ಹಾಕಿರುವ ಘಟನೆ ಸೋಮವಾರ ಮೈಸೂರಿನಲ್ಲಿ ನಡೆದಿದೆ.


ರಾಮಲಲ್ಲಾ ವಿಗ್ರಹ ಕೆತ್ತನೆಗೆ ಕಲ್ಲು ತೆಗೆದ ಸ್ಥಳದಲ್ಲಿ ಹಾರೋಹಳ್ಳಿ ಮತ್ತು ಗುಜ್ಜೇಗೌಡನಪುರ ಗ್ರಾಮಸ್ಥರು ಆಯೋಜಿಸಿದ್ದ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ವಿರೋಧಿ ಘೋಷಣೆ ಕೂಗಿ ಘೇರಾವ್ ಹಾಕಿದ್ದಾರೆ


ಇದರಿಂದ ಸ್ಥಳದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸ್ಥಳದಲ್ಲಿಯೇ ಇದ್ದ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ರಾಮಲಲ್ಲಾ ಮೂರ್ತಿಗೆ ಕಲ್ಲು ಕೊಟ್ಟ ದಲಿತ ರೈತನಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿಲ್ಲ ಎಂಬುದು ಇವರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ


ಮಾಜಿ ತಾಪಂ ಸದಸ್ಯ ಹಾರೋಹಳ್ಳಿ ಸುರೇಶ್ ಮಾತನಾಡಿ, ನೀವೊಬ್ಬ ದಲಿತ ವಿರೋಧಿ. ನಿಮ್ಮ ನಡವಳಿಕೆಯಿಂದ ದಲಿತರ ಭಾವನೆಗೆ ಧಕ್ಕೆಯುಂಟಾಗಿದೆ. ಮಹಿಷ ದಸರಾ ಆಚರಣೆ ಸಂದರ್ಭದಲ್ಲಿ ದಲಿತರನ್ನು ತುಳಿದು ಹಾಕಿ ಬಿಡುತ್ತೇನೆ, ಹೊಸಕಿ ಹಾಕಿ ಬಿಡುತ್ತೇನೆ ಎಂದು ಬೆದರಿಸಿದ್ದ ನೀವು ದಲಿತರ ಜಮೀನಿಗೆ ಏಕೆ ಬರುತ್ತೀರಿ? ಇಲ್ಲಿಂದ ಹೊರ ನಡೆಯಿರಿ ಎಂದು ಹೇಳಿದರು.


ಈ ವೇಳೆ ಸಂಸದ ಪ್ರತಾಪ್ ಸಿಂಹ, "ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ದಲಿತ ವಿರೋಧಿಯಲ್ಲ" ಎಂದು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮಾಡಿದರು. ಆದರೆ ಇದರಿಂದ ಸಮಾಧಾನಗೊಳ್ಳದ ಗ್ರಾಮಸ್ಥರು, "ನೀವು ಏನು ಹೇಳುವುದು ಬೇಡ, ಇಲ್ಲಿಂದ ವಾಪಸ್ ಹೋಗಿ" ಪಟ್ಟು ಹಿಡಿದರು.


ಶಾಸಕರಾದ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಸಚಿವ ಸಾ.ರಾ.ಮಹೇಶ್ ಗ್ರಾಮಸ್ಥರ ಮನವೊಲಿಸಲು ಪ್ರಯತ್ನಪಟ್ಟರಾದರೂ ಗ್ರಾಮಸ್ಥರು ಮಾತ್ರ ಅದಕ್ಕೆ ಬಗ್ಗಲಿಲ್ಲ. ನಂತರ ಸಂಸದ ಪ್ರತಾಪ್ ಸಿಂಹ ಅವರನ್ನೇ ಅಲ್ಲಿಂದ ವಾಪಸ್ ಹೋಗುವಂತೆ ಶಾಸಕರು ವಿನಂತಿಸಿದರು.


ಇದರಿಂದ ಬೇಸರಗೊಂಡ ಸಂಸದ ಪ್ರತಾಪ್ ಸಿಂಹ ಅಲ್ಲಿಂದ ಹೊರಟು ಹೋದರು. ಆ ಬಳಿಕ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು.

ಇಂದು ರಾತ್ರಿ ಸೌದಿಯ ಜಿದ್ದಾದಲ್ಲಿ ಅಮರ್ ಅಕ್ಬರ್ ಅಂತೋನಿ ಟ್ರೋಫಿಯ ಫೈನಲ್ ಪಂದ್ಯ

Posted by Vidyamaana on 2023-09-22 20:06:38 |

Share: | | | | |


ಇಂದು ರಾತ್ರಿ ಸೌದಿಯ ಜಿದ್ದಾದಲ್ಲಿ ಅಮರ್ ಅಕ್ಬರ್ ಅಂತೋನಿ ಟ್ರೋಫಿಯ ಫೈನಲ್ ಪಂದ್ಯ

ಸೌದಿ ಅರೇಬಿಯಾದಲ್ಲಿರುವ ಕ್ಲಾಸಿಕ್ ಫ್ರೆಂಡ್ ಪುತ್ತೂರು, ತುಳುನಾಡು ಕ್ರಿಕೆಟ್ ಅಸೋಸಿಯೇಷನ್, ಸಿಟಿ ಬಾಯ್ಸ್ ಪುತ್ತೂರು ಇದರ ಆಶ್ರಯದಲ್ಲಿ ಅಮರ್ ಅಕ್ಬರ್ ಅಂತೋಣಿ ಸೌಹಾರ್ದ ರೋಲಿಂಗ್ ಟ್ರೋಫಿ ಟಿಪಿಎಲ್ ಸೀಸನ್ -3 ಕ್ರಿಕೆಟ್ ಪಂದ್ಯಾಟದ ಉದ್ಘಾಟನೆ ಆಗಸ್ಟ್ 11ರಂದು ಅದ್ದೂರಿಯಿಂದ ಜಿದ್ದಾದಲ್ಲಿ ನಡೆಯಿತು. ಇದರ ಫೈನಲ್ ಪಂದ್ಯ ಇಂದು (ಸೆ. 22) ರಾತ್ರಿ 10 ಗಂಟೆಗೆ ನಡೆಯಲಿದೆ.

ಅಮರ್ ಅಕ್ಬರ್ ಅಂತೋನಿ ರೋಲಿಂಗ್ ಟ್ರೋಫಿ, ಅಮರ್ ಅಕ್ಬರ್ ಅಂತೋನಿ ಲೆಜೆಂಡ್ ಕ್ರಿಕೆಟ್, ಅಮರ್ ಅಕ್ಬರ್ ಅಂತೋನಿ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಕೂಟದ ಫೈನಲ್ ಇದಾಗಿದೆ.

ಉದ್ಘಾಟನಾ ಸಮಾರಂಭದಲ್ಲಿ ಜಾವೀದ್ ಮಿಯಾಂದಾದ್ ಶಾಹುಲ್ ಭೂಪಾ ಮೊಹಸೀನ್ ವಾಮಂಜೂರು, ಜಾಸಿಮ್ ಕಲ್ಲಡ್ಕ ನವಾಝ್ ಮಂಗಳ್ ಪೇಟೆ, ಅಲ್ತಾಫ್ ಕುಮಟಾ ಸಮದ್, ಫಯಾಝ್, ಕ್ಲಾಸಿಕ್ ಫ್ರೆಂಡ್ಸ್ ಪುತ್ತೂರು ತಂಡದ ಮಾಲಕ ಹುರೈಸ್ ಬಪ್ಪಳಿಗೆ, ಅಧ್ಯಕ್ಷ ಇಫ್ರಾಜ್ ಬೆಳುವಾಯಿ, ಹುರೈಸ್ ಬಪ್ಪಳಿಗೆ, ನೌಚಾ ಮೊಟ್ಟೆತ್ತಡ್ಕ, ಸಿನಾನ್ ಪೆರ್ನೆ ಉಪಸ್ಥಿತರಿದ್ದರು.

ಮೊಹಸಿನ್ ವಾಮಂಜೂರು ಮಾಲಕತ್ವದ ಸನ್ ಮೂನ್ ವಾಮಂಜೂರು, ಸಿಬ್ಬತ್ & ಜಾವೀದ್ ಮಿಯಾಂದಾದ್ ಮಾಲಕತ್ವದ ಜಾಝ ಸ್ಪೋರ್ಟ್ಸ್ ಅಕಾಡೆಮಿ, ಜೈಸನ್ ಡಿಕೋಸ್ಟಾ ಮಾಲಕತ್ವದ ಕುಡ್ಲ ಬುಲ್ಸ್, ಯಾಸಿನ್ ಉಳ್ಳಾಲ ಹಾಗೂ ಇರ್ಷಾದ್  ಮಾಲಕತ್ವದ ನಝರ್ ಗಯ್ಸ್ ಜಿದ್ದಾ ಈ ತಂಡಗಳು ಪಂದ್ಯಾ ಕೂಟದಲ್ಲಿ ಭಾಗವಹಿಸಿದ್ದವು.

ಇದರ ಜೊತೆಗೆ ಲೆಜೆಂಡ್ ಕಪ್ ಓವರ್ ಆರ್ಮ್  ಹಳ್ಳಿ ಹುಡುಗ್ರು ಪ್ಯಾಟೆ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಕೂಡ ನಡೆಯಿತು.

ಅಮರ್ ಅಕ್ಬರ್ ಅಂತೋನಿ ಇದರ ಸ್ಥಾಪಕರಾದ ರಜ್ಹಾಕ್ ಬಿ ಎಚ್ ಬಪ್ಪಳಿಗೆ  ಈ ಪಂದ್ಯಕೂಟಕ್ಕೆ ಟ್ರೋಫಿಯನ್ನು ಕೊಡುಗೆಯಾಗಿ ನೀಡಿದರು. ಟಿಪಿಎಲ್ ಸೀಸನ್ 3 ಇದರ ಸಮವಸ್ತ್ರವನ್ನು ಫಯಾಜ್ ಸುದೀರ್ ರೆಂಟಲ್ ಉಡುಗೊರೆಯಾಗಿ ನೀಡಿದರು.

ನೌಷದ್ ಮೊಟ್ಟೆತ್ತಡ್ಕ, ಹುರೈಸ್ ಪುತ್ತೂರು, ಸಿನಾನ್ ಪೆರ್ನೆ, ಇಫ್ರಾಜ್ ಬೆಳುವಾಯಿ, ರಜಾಕ್ ಬಪ್ಪಳಿಗೆ ನೇತೃತ್ವದಲ್ಲಿ ಪಂದ್ಯಕೂಟ ನಡೆಯುತ್ತಿದೆ.

ಶಾಸಕರ ಇಂದಿನ ಕಾರ್ಯಕ್ರಮ ಆ 27

Posted by Vidyamaana on 2023-08-26 23:18:35 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 27

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 27 ರಂದು

ಬೆಳಿಗ್ಗೆ 10 ಕ್ಕೆತುಳು ಅಪ್ಪೆ ಕೂಟದ ವತಿಯಿಂದ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ತುಳು ಕಾರ್ಯಕ್ರಮ

11 ಗಂಟೆಗೆ ಮುರದಲ್ಲಿ‌ಶಿವ ಸದನ‌ಲೋಕಾರ್ಪಣೆ

12 ಗಂಟೆಗೆ ಬಿರ್ವೆರ್ ಸಂಘದಿಂದ ಕೆಸರುಗೊಬ್ಬು‌ ಮಂಜಲ್ಪಡ್ಪುವಿನಲ್ಲಿ

Recent News


Leave a Comment: