ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ಫೀಲ್ಡಿಗಿಳಿದ ಅಶೋಕ್ ರೈ ಪತ್ನಿ

Posted by Vidyamaana on 2023-04-27 16:59:09 |

Share: | | | | |


ಫೀಲ್ಡಿಗಿಳಿದ ಅಶೋಕ್ ರೈ ಪತ್ನಿ

ಪುತ್ತೂರು: ತಳಮಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪ್ರಚಾರ ಕಾರ್ಯ ನಡೆಸುತ್ತಿರುವ ನಡುವೆ, ಅವರ ಪತ್ನಿ ಸುಮಾ ಅಶೋಕ್ ಕುಮಾರ್ ರೈ ಅವರೂ ಫೀಲ್ಡಿಗೆ ಇಳಿದಿದ್ದಾರೆ.

ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಸೂಚನೆ

Posted by Vidyamaana on 2023-06-06 09:01:45 |

Share: | | | | |


ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಸೂಚನೆ

ಮಂಗಳೂರು: ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.ಮಂಗಳೂರಿನಲ್ಲಿ ಪಶ್ಚಿಮ ವಲಯದ ದ.ಕ., ಉಡುಪಿ, ಉ.ಕ., ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಗೃಹ‌ ಸಚಿವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


ಕೋಮು‌ಸೌಹಾರ್ದ ಕಾಪಾಡಲು ಕಠಿನ ಕ್ರಮಕ್ಕೆ ಪೊಲೀಸರಿಗೆ ಸೂಚನೆ‌ ನೀಡಿದ್ದೇನೆ ಎಂದ ಅವರು ಮುಂದೆ‌ ಬೇರೆ ಕಡೆ ಅಗತ್ಯ‌ ಬಿದ್ದರೆ ಅಲ್ಲಿಯೂ ವಿಂಗ್ ರಚಿಸಲಾಗುವುದು ಎಂದು ಹೇಳಿದರು.

ಇಲ್ಲಿನ‌ ಜನರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕಾಗಿದೆ. ಡ್ರಗ್ಸ್ ನಿಯಂತ್ರಣಕ್ಕೆ ಅಭಿಯಾನ ನಡೆಸಲು ಸೂಚಿಸಿದ್ದು, ಆ.15 ರೊಳಗೆ ಡ್ರಗ್ಸ್ ಚಟುವಟಿಕೆ ಹತ್ತಿಕ್ಕಲು ಗಡುವು ನೀಡಿದ್ದೇನೆ ಎಂದರು.

ತೀರ್ಥಹಳ್ಳಿಯ ದಾಸನಕೂಡಿಗೆಯಲ್ಲಿ ನವವಿವಾಹಿತೆ ನೇಣಿಗೆ ಶರಣು

Posted by Vidyamaana on 2024-01-18 13:39:32 |

Share: | | | | |


ತೀರ್ಥಹಳ್ಳಿಯ ದಾಸನಕೂಡಿಗೆಯಲ್ಲಿ ನವವಿವಾಹಿತೆ ನೇಣಿಗೆ ಶರಣು

ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ತೀರ್ಥಹಳ್ಳಿ (Thirthahalli) ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರ ಮಾರ್ಚ್ನಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ವಿವಾಹವಾಗಿದ್ದರು. ವಿದ್ಯಾರ್ಥ್ ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಕೆಲಸಕ್ಕೆ ಪತಿ ವಿದ್ಯಾರ್ಥ್ ತೆರಳಿದ್ದರು. ಮನೆಯಲ್ಲಿ ಪತಿಯ ತಂದೆ, ತಾಯಿ ಇದ್ದರು. ಕೊಠಡಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಲಾಗಿದೆ.ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ತಹಶೀಲ್ದಾರ್ ಜಕ್ಕನಗೌಡರ್ ಉಪಸ್ಥಿತಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ

ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಹಾವು ಕಡಿತ

Posted by Vidyamaana on 2023-11-17 11:40:43 |

Share: | | | | |


ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಹಾವು ಕಡಿತ

ಪುತ್ತೂರು : ನ 16 ರಂದು ಸಂಜೆ ವೇಳೆ ಮನೆಯಲ್ಲಿ ವಾಕಿಂಗ್ ಮಾಡುತ್ತಿದ್ದಾಗ ಮಠಂದೂರು ರವರಿಗೆ ಹಾವು ಕಚ್ಚಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಸಂಜೀವ ಮಠಂದೂರು ರವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಮುರಳಿಕೃಷ್ಣ ಹಸಂತಡ್ಕ, ಚನಿಲ ತಿಮ್ಮಪ್ಪ ಶೆಟ್ಟಿ, ಆರ್.ಸಿ ನಾರಾಯಣ್, ಅರುಣ್ ವಿಟ್ಲ, ಸೀತಾರಾಮ ರೈ ಕೆದಂಬಾಡಿಗುತ್ತು ಸಹಿತ ಹಲವರು ಉಪಸ್ಥಿತರಿದ್ದರು.

ಇಂದು ಸುದಾನ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ದ.ಕ ಜಿಲ್ಲಾ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್‌ ಪಂದ್ಯಾಟ

Posted by Vidyamaana on 2024-01-06 08:05:45 |

Share: | | | | |


ಇಂದು ಸುದಾನ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ದ.ಕ ಜಿಲ್ಲಾ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್‌ ಪಂದ್ಯಾಟ

ಪುತ್ತೂರು: ದ.ಕ ಜಿಲ್ಲಾ ವಾಲಿಬಾಲ್ ಸಂಸ್ಥೆ ಮಂಗಳೂರು ಇದರ ಆಶ್ರಯದಲ್ಲಿ ಪುತ್ತೂರು ತಾಲೂಕು ವಾಲಿಬಾಲ್ ಸಂಸ್ಥೆ ಮತ್ತು ಸುದಾನ ವಸತಿಯುತ ವಿದ್ಯಾಸಂಸ್ಥೆ ಪುತ್ತೂರು ಇವರ ಸಹಯೋಗದೊಂದಿಗೆ ದ.ಕ.ಜಿಲ್ಲಾ ಮಟ್ಟದ 14, 17 ಮತ್ತು 19 ವರ್ಷ ವಯೋಮಾನದ ಶಾಲಾ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟ ಜ.6ರಂದು ಸುದಾನ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಜರಗಲಿದೆ ಎಂದು ದ.ಕ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಬಿ.ಎಸ್ ಸತೀಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಈ ಹಿಂದಿನ ಶಾಲಾ ಮಕ್ಕಳ ವಾಲಿಬಾಲ್ ಪಂದ್ಯಾಟವು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜರಗಿದ್ದು ಜಿಲ್ಲೆಯ 47 ತಂಡಗಳು ಭಾಗವಹಿಸಿತ್ತು. ಈ ಭಾರಿ 24 ತಂಡಗಳು ಈಗಾಗಲೇ ನೋಂದಾವಣೆ ಮಾಡಿಕೊಂಡಿವೆ. ಇನ್ನೂ ನೋಂದಾವಣೆಗೆ ಅವಕಾಶವಿದೆ ಎಂದು ಹೇಳಿದರು. ಜ.6ರಂದು ಬೆಳಿಗ್ಗೆ 9.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಸಂಚಾಲಕ ಸೀತಾರಾಮ ರೈ ಸವಣೂರು ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅವರು ಪಂದ್ಯಾಟದ ಉದ್ಘಾಟನೆ ಮಾಡಲಿದ್ದಾರೆ. ರಾಜ್ಯ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದ‌ರ್, ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ.ಜೀವಂಧ‌ರ್ ಜೈನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನ್ಯಾಕ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ನ ಅಧ್ಯಕ್ಷ ಜಗದೀಶ್ ಶೆಟ್ಟಿ, ಡಿಎಫ್‌ಒ ಶ್ರೀಧರ್ ಅವರು ಭಾಗವಹಿಸಲಿದ್ದಾರೆ.


ಸಂಜೆ ಪಂದ್ಯಾಟದ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭ ನಡೆಯಲಿದ್ದು, ನ್ಯಾಯವಾದಿ ಜಯಪ್ರಕಾಶ್ ರೈ ಸುಳ್ಯ ಅವರು ಬಹುಮಾನ ವಿತರಣೆ ಮಾಡಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್, ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಆಂಜನೇಯ ರೆಡ್ಡಿ, ಉದ್ಯಮಿ ಸಹಜ್ ರೈ, ಸುದಾನ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ, ಪುತ್ತೂರು ಯುವ ಸಬಲೀಕರಣ ಮತ್ತು ಯುವಜನ ಸೇವಾ ಕ್ರೀಡಾಧಿಕಾರಿ ಶ್ರೀಕಾಂತ್ ಪೂಜಾರಿ ಬಿರಾವು, ಬಿ.ಎಸ್.ಎನ್.ಎಲ್‌ನ ಗಣೇಶ್ ರೈ, ದ.ಕ. ಜಿಲ್ಲಾ ಪಿಡಬ್ಲ್ಯೂಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಧಾಕೃಷ್ಣ ನ್ಯಾಕ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.


ಪಂದ್ಯಾಟದಲ್ಲಿ ಆಯ್ಕೆಗಳು ನಡೆಯಲಿದೆ: ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದವರನ್ನು ಆಯ್ಕೆ ಮಾಡಿ ಅವರಿಗೆ ವಿಶೇಷ ತರಬೇತಿ ನೀಡಲಿದ್ದೇವೆ. ದಕ್ಷಿಣ ಕನ್ನಡದ ವಾಲಿಬಾಲ್ ಆಟಗಾರರಿಗೆ ಉತ್ತಮ ಹೆಸರಿದೆ. ಇದರ ಜೊತೆಗೆ ತೀರ್ಪುಗಾರರಿಗೂ ತರಬೇತಿ ನೀಡುತ್ತೇವೆ. ಈ ಎಲ್ಲಾ ಚಟುವಟಿಕೆಗಳು ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಉತ್ಸಾಹ ಹೆಚ್ಚಿಸಲಿದೆ. ಮುಂದಿನ ದಿನ ಮಕ್ಕಳಲ್ಲಿ ಎಲ್ಲಾ ರೀತಿಯ ಬೆಳವಣಿಗೆಗೆ ಕಾರಣವಾಗಲಿದೆ ಎಂದು ವಾಲಿಬಾಲ್ ಸಂಸ್ಥೆಯ ಗೌರವಾಧ್ಯಕ್ಷರಾಗಿರುವ ಸುದಾನ ವಸತಿಯುತ ಶಾಲೆಯ ಸಂಚಾಲಕರಾದ ರೇ. ವಿಜಯ ಹಾರ್ವಿನ್ ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ದ.ಕ.ಜಿಲ್ಲಾ ವಾಲಿಬಾಲ್ ಸಂಸ್ಥೆಯ ಕಾರ್ಯದರ್ಶಿ ಶಂಕರ್ ಶೆಟ್ಟಿ ಪರಾರಿಗುತ್ತು, ತಾಲೂಕು ಸಂಸ್ಥೆಯ ಅಧ್ಯಕ್ಷ ಸತೀಶ್ ರೈ ಕಟ್ಟಾವು, ಕಾರ್ಯದರ್ಶಿ ಬಾಬು ಮಾಸ್ತರ್ ಉಪಸ್ಥಿತರಿದ್ದರು.

ಪೆರುವಾಜೆ : ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ

Posted by Vidyamaana on 2024-03-10 21:19:46 |

Share: | | | | |


ಪೆರುವಾಜೆ : ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ

ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದ 2024 ನೇ ಸಾಲಿನ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆಯು ಮಾ.10 ರಂದು ಪೆರುವಾಜೆ ದೇವಾಲಯದ ವಠಾರದಲ್ಲಿ ನಡೆಯಿತು.

ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ‌ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಲೆಕ್ಕಪತ್ರ ಮಂಡಿಸಿ   91.30 ಲಕ್ಷ ರೂ.ಜಮೆ ಆಗಿದ್ದು ಖರ್ಚು ವೆಚ್ಚದ ವಿವರ, ಉಳಿತಾಯ ಮೊತ್ತ, ಶ್ರೀಕ್ಷೇತ್ರದ ದೈವ ದೇವರಿಗೆ ಆಭರಣ ಸಮರ್ಪಣೆಯ ವಿವರವನ್ನು ಅಂಕಿ ಅಂಶಗಳೊಂದಿಗೆ ಸಭೆಯ ಮುಂದಿಟ್ಟರು.

*ಜಮಾ-ಖರ್ಚು ಮಂಡನೆ*

ಶ್ರೀ ಕ್ಷೇತ್ರಕ್ಕೆ ಸಹಾಯಧನದ ರೂಪದಲ್ಲಿ 78.64 ಲಕ್ಷ ರೂ., ಹುಂಡಿ ಹರಿವಾಣ ಕಾಣಿಕೆ ಮೂಲಕ 2.80 ಲಕ್ಷ ರೂ., ಉಳಿಕೆ ಮರದ ಹರಾಜಿನಿಂದ 3.11 ಲಕ್ಷ ರೂ. ಸೇರಿದಂತೆ ಒಟ್ಟು‌ 91,30,028.00 ರೂ. ಜಮೆ ಆಗಿದೆ. ರಥದ ಕೆಲಸಕ್ಕೆ 27.70 ಲಕ್ಷ ರೂ.,ರಥದ ಶೆಡ್ ನಿರ್ಮಾಣಕ್ಕೆ 11.91 ಲಕ್ಷ ರೂ. ಸೇರಿದಂತೆ ಜಾತ್ರೆ ಹಾಗೂ ಬ್ರಹ್ಮರಥೋತ್ಸವಕ್ಕೆ ವಿವಿಧ ವಿಭಾಗದಲ್ಲಿ ಖರ್ಚಾದ ಮೊತ್ತ, ಉಳಿತಾಯದ ರೂಪದಲ್ಲಿ ಬ್ಯಾಂಕ್ ನಲ್ಲಿ 81,986 ರೂ., ನಗದು ರೂಪದಲ್ಲಿ 28,522 ರೂ. ಮೊತ್ತ ಲಭ್ಯತೆಯ ಲೆಕ್ಕವನ್ನು ಮಂಡಿಸಲಾಯಿತು.

*17.98 ಲಕ್ಷ ರೂ.ಮೊತ್ತದ ಆಭರಣ ಸಮರ್ಪಣೆ*

ಜಮೆಯಾದ 91.30 ಲಕ್ಷ ರೂ.ಮೊತ್ತದಲ್ಲಿ ರಥ ನಿರ್ಮಾಣಕ್ಕೆ ಹಾಗೂ ಜಾತ್ರೆಯ ಖರ್ಚು ಭರಿಸಿ ಉಳಿದ ಮೊತ್ತದಲ್ಲಿ 17.98 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಶ್ರೀ ಕ್ಷೇತ್ರದ ದೈವ ದೇವರಿಗೆ ಸಮರ್ಪಿಸಲಾಗಿದೆ. ಕಲ್ಲುರ್ಟಿ ದೈವಕ್ಕೆ ಚಿನ್ನದ ಹೂವು, ದೈವ ನರ್ತಕನಿಗೆ ಚಿನ್ನದ ಉಂಗುರ 14,049 ರೂ., ಉತ್ಸವ ಮೂರ್ತಿಗೆ ಚಿನ್ನದ ಕವಚ 7.57 ಲಕ್ಷ ರೂ., ಕಲ್ಕುಡ ದೈವಕ್ಕೆ ಬೆಳ್ಳಿಯ ತಲೆಪಟ್ಟಿ 87,612 ರೂ., ಪ್ರಭಾವಳಿಯ ಸತ್ತಿಗೆಗೆ ಚಿನ್ನ 5.40 ಲಕ್ಷ ರೂ., ಪಲ್ಲಕ್ಕಿಗೆ ಬೆಳ್ಳಿ 2.98 ಲಕ್ಷ ರೂ., ದೈವದ ಬೆಳ್ಳಿ 66,507 ರೂ.ಮೊತ್ತ ಸೇರಿದಂತೆ 17.98 ಲಕ್ಷ ರೂ. ವೆಚ್ಚವಾಗಿದೆ. ಉಳಿದಂತೆ 43 ಸಾವಿರ ರೂ. ವೆಚ್ಚದಲ್ಲಿ ರಂಗಪೂಜೆಯ ಸ್ಟ್ಯಾಂಡ್, 2.75 ಲಕ್ಷ ರೂ.ವೆಚ್ಚದಲ್ಲಿ ಇಂಟರ್ ಲಾಕ್ ಅಳವಡಿಕೆ, 66 ಸಾವಿರ ರೂ. ವೆಚ್ಚದಲ್ಲಿ ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ಪರಿಕರಗಳ ಖರೀದಿಸಲಾಗಿದೆ ಎಂದು ಪದ್ಮನಾಭ ಶೆಟ್ಟಿ ಹೇಳಿದರು.

ಅಪೂರ್ವ ಕಾರ್ಯಕ್ರಮ

ಕ್ಷೇತ್ರದಲ್ಲಿ‌ ನೂರು ವರ್ಷದ ಬಳಿಕ‌ ನಡೆದ ಬ್ರಹ್ಮರಥೋತ್ಸವವು ಐತಿಹಾಸಿಕ ದಾಖಲೆ ಬರೆದಿದ್ದು ಇದಕ್ಕೆ ಮೂಲ ಕಾರಣ ಭಕ್ರವೃಂದದ ಸಹಕಾರ. ಶ್ರೀ ಜಲದುರ್ಗಾದೇವಿಯ ಇಚ್ಛೆಯಂತೆ ಯಾರ ಕೈಯಲ್ಲಿ ಯಾವ ಕೆಲಸ ಮಾಡಬೇಕಿತ್ತೊ ಅದನ್ನು ಆ ಮಹಾತಾಯಿ ಮಾಡಿಸಿದ್ದಾಳೆ. ಪೆರುವಾಜೆ ರಥೋತ್ಸವ ಹತ್ತೂರಿನ ಜನರ ಮನಸ್ಸಿನಲ್ಲಿ ‌ಉಳಿದುಕೊಳ್ಳುವಂತೆ ನಡೆದಿದೆ. ಇಂತಹ ಅಪೂರ್ವ ಕ್ಷಣದಲ್ಲಿ‌ ನಾವೆಲ್ಲರೂ ಭಾಗಿಯಾಗಿರುವುದಕ್ಕೆ ಜಲದುರ್ಗಾದೇವಿಯೇ ಕಾರಣ ಎಂದು ಪದ್ಮನಾಭ ಶೆಟ್ಟಿ ಹೇಳಿದರು.


ದಾನ ರೂಪದಲ್ಲಿ ಬಂತು 50 ಲಕ್ಷ ರೂ.ಮೊತ್ತದ ಮರ..!

ಆರು ತಿಂಗಳ ಹಿಂದೆ ರಥ ನಿರ್ಮಾಣದ ಬಗ್ಗೆ ಚಿಂತನೆ‌ ನಡೆಯಿತು. 1 ಕೋ. ರೂ. ಅಂದಾಜು ವೆಚ್ಚ ನಿರೀಕ್ಷಿಸಲಾಗಿತ್ತು. ಇಷ್ಟೊಂದು ಮೊತ್ತದ ಕೆಲಸ ಕಾರ್ಯ ಆರಂಭಕ್ಕೆ ಸಣ್ಣ ಅಳಕು‌ ಇತ್ತು. ಆದರೆ ದೇವಿಯ ಇಚ್ಛೆ ಬೇರೆಯೇ ಇತ್ತು. ಎಲ್ಲವೂ ಪವಾಡದಂತೆ ನಡೆದು ಹೋಯಿತು. ಸುಮಾರು 50 ಲಕ್ಷ ರೂ. ಮೊತ್ತದ ಮರವನ್ನು ಭಕ್ತರು ದಾನ ರೂಪದಲ್ಲಿ ಕ್ಷೇತ್ರಕ್ಕೆ ಸರ್ಮಪಿಸಿದರು. ಹೀಗಾಗಿ ರಥ ನಿರ್ಮಾಣದ ಅರ್ಧ ಖರ್ಚು ದಾನ ರೂಪದಲ್ಲಿಯೇ ಭರ್ತಿಯಾಯಿತು. ಉಳಿದ ಮೊತ್ತ ದೇಣಿಗೆ ರೂಪದಲ್ಲಿ ಹರಿದು ಬಂತು. ವ್ಯವಸ್ಥಾಪನ ಸಮಿತಿ ಅವಧಿ‌ ಮುಕ್ತಾಯವಾದರೂ ಜಾತ್ರೆ, ಬ್ರಹ್ಮರಥೋತ್ಸವವು ಸಮಿತಿಯ ಮೂಲಕವೇ ನೆರವೇರಿತು. ಹೀಗಾಗಿ ಸಣ್ಣ ಅವಧಿಯಲ್ಲಿ ಬಹು‌ದೊಡ್ಡ ಕಾರ್ಯ‌ ನಡೆದಿದೆ. ಇದರ ಹಿಂದೆ ಸ್ಥಾನಮಾನದ ಫಲಾಫೇಕ್ಷೆ ಇಲ್ಲದೆ ದುಡಿದ ಸಾವಿರಾರು ಕಾರ್ಯಕರ್ತರ ಕರ ಸೇವೆಯು ಸೇರಿದೆ. ಅವರಿಗೆ ಶ್ರೀ ದೇವಿಯು ಎಲ್ಲ ಫಲವನ್ನು ಕರುಣಿಸಲಿ ಎಂದು ಪದ್ಮನಾಭ ಶೆಟ್ಟಿ ಹೇಳಿದರು.

ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಯಶಸ್ಸಿನ  ಹಿಂದೆ ದುಡಿದ ವ್ಯವಸ್ಥಾಪನ ಸಮಿತಿ ಭಕ್ತರು ಅಭಿನಂದಿಸಿದರು.

ವೇದಿಕೆಯಲ್ಲಿ ವ್ಯವಸ್ಥಾಪನ ಸಮಿತಿ ಮಾಜಿ‌ ಸದಸ್ಯರಾದ ಭೋಜರಾಜ ಶೆಟ್ಟಿ ಕಲ್ಕಂಪಾಡಿಗುತ್ತು, ವೆಂಕಟಕೃಷ್ಣ ರಾವ್, ನಾರಾಯಣ ಕೊಂಡೆಪ್ಪಾಡಿ, ದಾಮೋದರ ನಾಯ್ಕ ಪೆಲತ್ತಡ್ಕ, ಜಯಪ್ರಕಾಶ್ ರೈ ಪೆರುವಾಜೆ, ಜಗನ್ನಾಥ ರೈ ಪೆರುವಾಜೆ, ಪ್ರಮುಖರಾದ ದೇವದಾಸ ಶೆಟ್ಟಿ ಪೆರುವಾಜೆ, ರಾಮ ಯು, ಕುಶಾಲಪ್ಪ ಗೌಡ ಪೆರುವಾಜೆ, ವೇದಿತ್ ರೈ, ಸುಂದರ ನಾಗನಮಜಲು, ಸಚಿನ್ ರಾವ್ ಪೆರುವಾಜೆ, ವಿಜಯ ಪೆರುವಾಜೆ, ವಾಸುದೇವ ಪೆರುವಾಜೆ, ರವಿಚಂದ್ರ, ಜಯಚಂದ್ರ ಪೆರುವಾಜೆ, ಸುರೇಶ್ ಭಟ್ ಉಪ್ಪಂಗಳ, ಪ್ರಕಾಶ್ ಪೆರುವಾಜೆ, ಪ್ರಶಾಂತ್ ಪೆರುವಾಜೆ, ರಜನೀಶ್ ಸವಣೂರು, ರಕ್ಷಿತ್ ಪೆರುವಾಜೆ, ಪವನ್, ವಸಂತ ಆಚಾರ್ಯ ಪೆರುವಾಜೆ, ಚಿದಾನಂದ ಬಜ, ಚೇತನ್, ರಂಜಿತ್, ಯಶೋಧಾ ಬೀರುಸಾಗು ಮೊದಲಾದವರು ಉಪಸ್ಥಿತರಿದ್ದರು. ರಥ ಸಮರ್ಪಣ ಸಮಿತಿ ಕಾರ್ಯದರ್ಶಿ ಪ್ರದೀಪ್ ಕುಮಾರ್ ರೈ ಪನ್ನೆ ನಿರೂಪಿಸಿದರು.

Recent News


Leave a Comment: