ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಸುದ್ದಿಗಳು News

Posted by vidyamaana on 2024-07-24 16:19:59 |

Share: | | | | |


ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ, ಜುಲೈ.24: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ (Love) ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ (Murder) ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.


ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು.

ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.


ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಇದರಿಂದ ಅನುಮಾನಗೊಂಡ ಸೌಮ್ಯ ನನ್ನನ್ನು ದೂರ ಮಾಡುತ್ತಿದ್ದಾನೆ. ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ.ಇದರಿಂದ ಗಾಬರಿಗೊಂಡ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ. ಮತ್ತೊಂದೆಡೆ ಮಗಳು ಮನೆಗೆ ಬರದಿದ್ದಕ್ಕೆ ಟೆನ್ಷನ್ ಆಗ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಸೃಜನ್ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

 Share: | | | | |


ರಾಜಕೀಯ ಪಕ್ಷಗಳ ಅನಧಿಕೃತ ಔತಣಕೂಟಗಳ ಮೇಲೆ ನಿಗಾ-ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಆದೇಶ.

Posted by Vidyamaana on 2023-03-15 09:05:15 |

Share: | | | | |


ರಾಜಕೀಯ ಪಕ್ಷಗಳ ಅನಧಿಕೃತ ಔತಣಕೂಟಗಳ ಮೇಲೆ ನಿಗಾ-ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಆದೇಶ.

ಪುತ್ತೂರು:ಅನುಮತಿ ರಹಿತವಾಗಿ ಹಾಕಲಾಗಿರುವ ಬ್ಯಾನರ್, ಬಂಟಿಂಗ್ಸ್‌ಗಳ ತೆರವು, ಇಲಾಖಾ ಅನುಮತಿ ಪಡೆಯದೆ ರಾಜಕೀಯ ಪಕ್ಷಗಳು, ಮುಖಂಡರು ಯಾವುದೇ ಸಾರ್ವಜನಿಕ ಔತಣಕೂಟಗಳನ್ನು ನಡೆಸದಂತೆ ನಿಗಾ ಇರಿಸುವುದು ಸೇರಿದಂತೆ, ಕರ್ನಾಟಕ ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ದ.ಕ.ಜಿಲ್ಲಾಧಿಕಾರಿಯವರು ಕೆಲವೊಂದು ಸೂಚನೆಗಳನ್ನು ನೀಡಿ ಸುತ್ತೋಲೆ ಹೊರಡಿಸಿದ್ದು ಸಂಬಂಧಪಟ್ಟ ಇಲಾಖೆಗಳು ಕಟ್ಟುನಿಟ್ಟಾಗಿ ಪಾಲಿಸಿ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023 ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ.ಚುನಾವಣೆ ಘೋಷಣೆ ಪೂರ್ವದಲ್ಲಿ ಜಿಲ್ಲಾಡಳಿತವು ನಿಷ್ಪಕ್ಷಪಾತ ಚುನಾವಣೆ ನಡೆಸಲು ಸಜ್ಜಾಗಬೇಕಾಗಿರುತ್ತದೆ.ಜಿಲ್ಲೆಯಾದ್ಯಂತ ಅನೇಕ ಸಾರ್ವಜನಿಕ ಸಭೆ-ಸಮಾರಂಭಗಳು, ಹಬ್ಬ- ಹರಿದಿನಗಳು, ಸಾರ್ವಜನಿಕ ಔತಣಕೂಟಗಳು ಇತ್ಯಾದಿ ಕಾರ್ಯಕ್ರಮಗಳನ್ನು ಅನೇಕ ಸಂಘ-ಸಂಸ್ಥೆಗಳು, ರಾಜಕೀಯ ಸಂಘಟನೆಗಳು ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿಯನ್ನು ಪಡೆಯದೆ ನಡೆಸುತ್ತಿರುವುದು ಗಮನಕ್ಕೆ ಬಂದಿರುತ್ತದೆ.ಅಲ್ಲದೇ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಪಟ್ಟ ಇಲಾಖೆಗಳ ಅನುಮತಿ ಇಲ್ಲದೇ ಅನೇಕ ಬ್ಯಾನರ್-ಬಂಟಿಂಗ್ಸ್‌ಗಳು, ಪ್ಲೆಕ್ಸ್‌ಗಳನ್ನು ನಿಯಮ ಬಾಹಿರವಾಗಿ ಹಾಕಿರುವುದು ಕಂಡುಬರುತ್ತವೆ.ಇದು ಕರ್ನಾಟಕ ತೆರೆದ ಸ್ಥಳಗಳು (ವಿರೂಪಗೊಳಿಸುವಿಕೆ ತಡೆಗಟ್ಟುವ)ಕಾಯ್ದೆ 1981ರ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ.ಈ ಕಾಯ್ದೆಯು ಎಲ್ಲಾ ಸಂಧರ್ಭದಲ್ಲಿಯೂ ಜಾರಿಯಲ್ಲಿದ್ದಾಗಿಯೂ ಸಹಿತ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಸರಿಯಾದ ಕ್ರಮವನ್ನು ಕೈಗೊಳ್ಳದೆ ಇರುವುದು ಜಿಲ್ಲಾಡಳಿತದ ಮೇಲೆ ಗಂಭೀರವಾದಪರಿಣಾಮವನ್ನು ಬೀರುತ್ತದೆ.ಅನುಮತಿ ಇಲ್ಲದೆ ಸಾರ್ವಜನಿಕ ಔತಣಕೂಟಗಳು ಮತ್ತು ಇತರ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಸಾಮಾಜಿಕ ಸ್ವಾಸ್ಥ್ಯ ಮತ್ತು ಸಾರ್ವಜನಿಕರ ಆರೋಗ್ಯದ ಮೇಲೆ ಹಾಗೂ ಕಾನೂನು ಸುವ್ಯವಸ್ಥೆಯ ಮೇಲೆ ಗಂಭೀರವಾದ ಪರಿಣಾಮ ಬೀರುವ ಸಾಧ್ಯತೆಯಿರುವುರಿಂದ ಈ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.ಆದೇಶಿಸಿದ್ದಾರೆ.

ಮಾಧಕ ವ್ಯಸನಿಗಳ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಿ

Posted by Vidyamaana on 2023-12-13 21:05:17 |

Share: | | | | |


ಮಾಧಕ ವ್ಯಸನಿಗಳ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಿ

ಪುತ್ತೂರು: ಮಾಧಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ, ಯವು ಪೀಳಿಗೆ ಮಾಧಕ ವ್ಯಸನಕ್ಕೆ ಬಲಿಯಾಗುತ್ತಿದೆ, ಇದು ಅತ್ಯಂತ ಗಂಭೀರ ವಿಚಾರವಾಗಿದ್ದು ಇದು ಹೀಗೇ ಮುಂದುವರೆದರೆ ವ್ಯಸನಿಗಳಿಂದ ರಾಜ್ಯಕ್ಕೆ, ದೇಶಕ್ಕೆ ತೊಂದರೆ ಉಂಟಾಗಬಹುದು, ಸಮಾಜವನ್ನು ಹಾಳು ಮಾಡುತ್ತಿರುವ ಇಂತವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.


ರಾಜ್ಯದಲ್ಲಿ ಮಾಧಕ ವ್ಯಸನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ, ಯುವ ಸಮೂಹ ಇದಕ್ಕೆ ಬಲಿಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೧೪೭ ಪೆಡ್ಲರ್‌ಗಳ ವಿರುದ್ದ ಪ್ರಕರಣ ದಾಖಲಾಗಿದೆ, ೫೨೮ ಮಂದಿ ಮಾದಕ ವ್ಯಸನಿಗಳ ವಿರುದ್ದ ಪ್ರಕರಣ ದಾಖಲಾಗಿದೆ, ಪುತ್ತೂರಿನಲ್ಲಿ ೨೬ ಪ್ರಕರಣಗಳು ದಾಖಲಾಗಿದೆ. ಇದನ್ನು ನಿಯಂತ್ರಣ ಮಾಡಲು ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.

ವ್ಯಸನ ಮುಕ್ತ ಕೇಂದ್ರಗಳನ್ನು ಆರಂಭಿಸಿ

ರಾಜ್ಯದ ಪ್ರತೀ ತಾಲೂಕುಗಳಲ್ಲಿ ಡಿ ಎಡಿಕ್ಸನ್ ಸೆಂಟರ್‌ಗಳನ್ನು ಆರಂಭಿಸಬೇಕು. ಈ ಕೇಂದ್ರಗಳಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಬೇಕಿದೆ. ಪೊಲೀಸ್ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ನಿರ್ಜನ ಪ್ರದೇಶಗಳ ಬಗ್ಗೆ ಪೊಲೀಸರು ಹೆಚ್ಚು ನಿಗಾ ಇಡಬೇಕು, ಕೆಲವು ಕಡೆಗಳಲ್ಲಿ ವೆಂಟೆಡ್ ಡ್ಯಾಮ್‌ಗಳ ಬಳಿ ಈ ವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿದೆ. ಇದೆಲ್ಲವನ್ನೂ ತಡೆಗಟ್ಟುವ ಮೂಲಕ ಪೊಲೀಸ್ ಇಲಾಖೆ ಮಾಧಕ ವ್ಯಸನಿಗಳ ಭೇಟೆಯಾಡಬೇಕು ಎಂದು ಶಾಸಕರು ಆಗ್ರಹಿಸಿದರು.

ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಮಾಡಿ

ಪ್ರತೀ ಶಾಲಾ ಕಾಲೇಜುಗಳಲ್ಲಿ ಮಾಧಕ ದ್ರವ್ಯ ವ್ಯಸನದಿಂದ ಅಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಮಾಡಬೇಕು. ಈ ರೀತಿಯ ಕಾರ್ಯಕ್ರಮವನ್ನು ಮಾಡುವ ಮೂಲಕ ಯುವ ಸಮೂಹ ಮತ್ತು ಯುವ ವಿದ್ಯಾರ್ಥಿ ಸಮೂಹ ಈ ಚಟಗಳಿಗೆ ಬಲಿಯಾಗದಂತೆ ಎಚ್ಚರಿಕಾ ವ್ಯವಸ್ಥೆಗಳನ್ನು ಮಾಡಬೇಕು ಎಂದು ಶಾಸಕರು ಸರಕಾರವನ್ನು ಆಗ್ರಹಿಸಿದರು.

ಪುತ್ತೂರಿನಲ್ಲಿ ಡಿಎಡಿಕ್ಸನ್ ಸೆಂಟರ್ ಗೆ ಮನವಿ

ಪುತ್ತೂರಿನಲ್ಲಿ ಡಿ ಎಡಿಕ್ಸನ್ ಸೆಂಟರ್ ಪ್ರಾರಂಭ ಮಾಡುವಂತೆ ಶಾಸಕರು ಗೃಹ ಸಚಿವರಾದ ಡಾ. ಎಚ್ ಜಿ ಪರಮೇಶ್ವರ್ ಅವರಲ್ಲಿ ಮನವಿ ಮಾಡಿದರು. ಈ ವಿಚಾರವನ್ನು ಪರಿಶೀಲನೆ ಮಾಡುವುದಾಗಿ ಸಚಿವರು ಭರವಸೆ ನೀಡಿದರು. ದ ಕ ಜಿಲ್ಲೆಯಲ್ಲಿ ಮಂಗಳೂರಿನಲ್ಲಿ ಮಾತ್ರ ಡಿ ಎಡಿಕ್ಸನ್ ಕೇಂದ್ರವಿದ್ದು ಉಪ ವಿಭಾಗವಾದ ಪುತ್ತೂರಿನಲ್ಲಿ ವ್ಯಸನ ಮುಕ್ತ ಕೇಂದ್ರವನ್ನು ಆರಂಭಿಸಬೇಕು ಎಂದು ಶಾಸಕರು ಮನವಿ ಮಾಡಿದರು.

ಮಾಧಕ ವ್ಯಸನಿಗಳ ವಿರುದ್ದ ಯುದ್ದ ಸಾರಿದ್ದೇವೆ: ಗೃಹ ಸಚಿವರು


ಮಾಧಕ ವ್ಯಸನಿಗಳಿಂದ ಸಮಾಜಕ್ಕೆ ಕಂಠಕ ಉಂಟಾಗುತ್ತಿದೆ. ಇಂಥವರ ವಿರುದ್ದ ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವ್ಯಸನಿಗಳ ಭೇಟೆಯಾಡುತ್ತಿದ್ದೇವೆ. ಈಗಾಗಲೇ ರಾಜ್ಯಾದ್ಯಂತ ಕಾರ್ಯಾಚರಣೆ ಪ್ರಾರಂಭವಾಗಿದೆ. ನೂರಾರು ಕೋಟಿ ರೂ ಬೆಲೆ ಬಾಳುವ ಮಾಧಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜ್ಯದಲ್ಲೇ ಅತೀ ಹೆಚ್ಚು ಅಂದರೆ ಸುಮಾರು ೨೧ ಕೋಟಿ ರೂ ಮೌಲ್ಯದ ಮಾಧಕ ವಸ್ತುಗಳನ್ನು ಒಂದೇ ದಿನದಲ್ಲಿ ವಶಕ್ಕೆ ಪಡೆಯಲಾಗಿದೆ. ದ ಕ ಜಿಲ್ಲೆಯನ್ನು ಒಂದು ವರ್ಷದೊಳಗೆ ವ್ಯಸನ ಮುಕ್ತ ಅಥವಾ ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡುವುದಾಗಿ ಪೊಲೀಸರು ಒಪ್ಪಿಕೊಂಡಿದ್ದು ಅದನ್ನು ಚಾಲೆಂಜಗಿ ಸ್ವೀಕರಿಸಿದ್ದಾರೆ. ಮಾಧಕ ವ್ಯಸನಿಗಳ ಮತ್ತು ಅದನ್ನು ಮರಾಟ ಮಾಡುವ ದುಷ್ಕರ್ಮಿಗಳ ವಿರುದ್ದ ನಾವು ಈಗಾಗಲೇ ಯುದ್ದವನ್ನೇ ಸಾರಿದ್ದು , ಈಗಾಗಲೇ ರಾಜ್ಯದಲ್ಲಿ ೪೬ ಕಡೆಗಳಲ್ಲಿ ವಿಶೇಷ ಠಾಣೆಗಳನ್ನು ತೆರೆಯಲಾಗಿದೆ,ಇದರಲ್ಲಿ ಯವುದೇ ರಾಜಿಯಿಲ್ಲ ಎಂದು ಗೃಹ ಸಚಿವ ಡಾ. ಎಚ್ ಜಿ ಪರಮೇಶ್ವರ್ ಅವರು ಸಭೆಯಲ್ಲಿ ಸಪಷ್ಟಪಡಿಸಿದರು.

ದಶ ವರ್ಷದ ಜನ್ಮದಿನದ ಸಂಭ್ರಮದಲ್ಲಿ ಹೊಸ ದಿಶೆ ಯತ್ತ ಯೋಚಿಸಿದ ಕುಮಾರಿ ದಿಶಾ

Posted by Vidyamaana on 2023-07-03 02:07:53 |

Share: | | | | |


ದಶ ವರ್ಷದ ಜನ್ಮದಿನದ ಸಂಭ್ರಮದಲ್ಲಿ ಹೊಸ ದಿಶೆ ಯತ್ತ ಯೋಚಿಸಿದ ಕುಮಾರಿ ದಿಶಾ

ಪುತ್ತೂರು: ತಮ್ಮ ಬರ್ತ್ ಡೇಯನ್ನು ವಿಶೇಷವಾಗಿ ಆಚರಿಸಿಕೊಳ್ಳುವುದು ಎಲ್ಲಾ ಮಕ್ಕಳ ಒಂದು ಕನಸು. ಅದರಲ್ಲೂ ಮೊದಲ ವರ್ಷದ ಬರ್ತ್ ಡೇ ಬಿಟ್ರೆ ಐದು ಮತ್ತು ಹತ್ತನೇ ವರ್ಷದ ಬರ್ತ್ ಡೇಗೆ ಇತ್ತೀಚಿನ ದಿನಗಳಲ್ಲಿ ವಿಶೇಷತೆ ಬಂದಿದೆ. ಇದಕ್ಕೆ ಪೂರಕವಾಗಿ ಮಕ್ಕಳ ಹೆತ್ತವರೂ ಸಹ ತಮ್ಮ ಮುದ್ದಿನ ಮಕ್ಕಳ ಬರ್ತ್ ಡೇಯನ್ನು ಹಲವು ವಿಶೇಷತೆ ಮತ್ತು ವೈಭವದೊಂದಿಗೆ ಆಚರಿಸುತ್ತಾರೆ. ಆದರೆ ಕೆಲವರು ತಮ್ಮ ಬರ್ತ್ ಡೇ ಆಚರಣೆ ಸಂದರ್ಭದಲ್ಲಿ ಸಮಾಜಮುಖಿ ಯೋಚನೆ ಮತ್ತು ಕಾರ್ಯಗಳನ್ನು ಮಾಡುವ ಮೂಲಕ ಇತರರಿಗೆ ಮಾದರಿಯಾಗಿ ಸುದ್ದಿಯಾಗುತ್ತಾರೆ.


ಇದಕ್ಕೊಂದು ಉದಾಹರಣೆ ಎಂಬಂತೆ ತೆಂಕು ಯಕ್ಷರಂಗದ ಸಿಡಿಲಮರಿ, ಅಭಿನವ ಆಭಿಮನ್ಯು ಎಂದೇ ಖ್ಯಾತರಾಗಿರುವ ಪ್ರಖ್ಯಾತ ಪುಂಡುವೇಷಧಾರಿ ದಿವಂಗತ ಶ್ರೀಧರ ಭಂಡಾರಿ ಅವರ ಮೊಮ್ಮಗಳು ಕು. ದಿಶಾ ತನ್ನ ಹತ್ತನೇ ವರ್ಷದ ಜನ್ಮದಿನವನ್ನು ಜು.01ರಂದು ಆಚರಿಸಿಕೊಂಡಿದ್ದು ಈ ಸಂಭ್ರಮದ ಸಂದರ್ಭದಲ್ಲಿ ಪುಟಾಣಿ ದಿಶಾ ಮಾದರಿ ಕಾರ್ಯವೊಂದರ ಮೂಲಕ ಸುದ್ದಿಯಾಗಿದ್ದಾಳೆ.


ಯಕ್ಷರಂಗದ ಕೋಲ್ಮಿಂಚು ದಿ. ಶ್ರೀಧರ ಭಂಡಾರಿ ಅವರ ಪುತ್ರಿ ಡಾ. ಅನಿಲ ದೀಪಕ್ ಮತ್ತು ದೀಪಕ್ ಅವರ ಪುತ್ರಿ ಮತ್ತು ವಿವೇಕಾನಂದ ಸಿಬಿಎಸ್.ಸಿ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿರುವ ಕು. ದಿಶಾ ತನ್ನ ಹತ್ತನೇ ವರ್ಷದ ಜನ್ಮದಿನದ ಸಂದರ್ಭದಲ್ಲಿ ತನ್ನ ಪಿಗ್ಗಿ ಬ್ಯಾಂಕ್ ಕಲೆಕ್ಷನ್ ನಲ್ಲಿದ್ದ ಸುಮಾರು 13,302 ರೂಪಾಯಿಗಳಷ್ಟು ಮೊತ್ತವನ್ನು ತಮ್ಮ ಅರಂತಾಡಿ ಸಂಕಬೈಲು ತರವಾಡು ಮನೆಯ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಸಮರ್ಪಣೆ ಮಾಡುವ ಮೂಲಕ ತನ್ನ ಹತ್ತನೇ ವರ್ಷದ ಜನ್ಮದಿನಕ್ಕೆ ದೈವ-ದೇವರ ವಿಶೇಷ ಆಶೀರ್ವಾದವನ್ನು ಪಡೆದುಕೊಂಡಿದ್ದಾಳೆ.


ಮಕ್ಕಳಲ್ಲಿ ಎಳವೆಯಲ್ಲೇ ಇಂತಹ ಸಮಾಜಮುಖಿ ಮತ್ತು ಧಾರ್ಮಿಕ ಚಿಂತನೆಗಳನ್ನು ಬೆಳೆಸುವುದರಿಂದ ಅವರು ಬೆಳೆದು ದೊಡ್ಡವರಾದ ಮೇಲೆ ಅವರ ವ್ಯಕ್ತಿತ್ವದ ಮೇಲೆ ಇದು ಪ್ರಭಾವವನ್ನು ಬೀರುತ್ತದೆ ಎಂಬುದು ದಿಶಾ ತಾಯಿ ಡಾ ಅನಿಲ ದೀಪಕ್ ಅವರ ಅಭಿಪ್ರಾಯವಾಗಿದೆ. ಅಂತೂ ಕು. ದಿಶಾ ತನ್ನ ಜನ್ಮದಿನದ ಸಂದರ್ಭದಲ್ಲಿ ಒಂದು ಹೊಸ ‘ದಿಶೆ’ಯತ್ತ ಯೋಚಿಸಿರುವುದು ಸಂತಸದ ವಿಚಾರವೇ ಸರಿ.

ಸಹಾರಾ ಸಮೂಹ ದ ಸಂಸ್ಥಾಪಕ ಸುಬ್ರತಾ ರಾಯ್ ವಿಧಿವಶ

Posted by Vidyamaana on 2023-11-15 05:47:04 |

Share: | | | | |


ಸಹಾರಾ ಸಮೂಹ ದ ಸಂಸ್ಥಾಪಕ ಸುಬ್ರತಾ ರಾಯ್ ವಿಧಿವಶ

ನವದೆಹಲಿ: ಸಹಾರಾ ಸಮೂಹದ ( Sahara Group ) ಸ್ಥಾಪಕ ಸುಬ್ರತಾ ರಾಯ್ ( Subrata Roy ) ದೀರ್ಘಕಾಲದ ಅನಾರೋಗ್ಯದ ನಂತರ ಮುಂಬೈನಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಭಾನುವಾರ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಗೆ (ಕೆಡಿಎಎಚ್) ದಾಖಲಿಸಲಾಗಿತ್ತು.ಆದರೇ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿರೋದಾಗಿ ತಿಳಿದು ಬಂದಿದೆ.


ಈ ಕುರಿತಂತೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವಂತ ಸಹಾರಾ ಇಂಡಿಯಾ ಪರಿವಾರ್ ( Sahara India Pariwar ), ನಮ್ಮ ಗೌರವಾನ್ವಿತ ಸಹರಾಶ್ರೀ ಸುಬ್ರತಾ ರಾಯ್ ಸಹಾರಾ ಅವರ ನಿಧನದ ಬಗ್ಗೆ ಸಹಾರಾ ಇಂಡಿಯಾ ಪರಿವಾರ್ ತೀವ್ರ ದುಃಖದಿಂದ ತಿಳಿಸುತ್ತಿದೆ. ಸ್ಪೂರ್ತಿದಾಯಕ ನಾಯಕ ಮತ್ತು ದೂರದೃಷ್ಟಿಯ ಸಹರಾಶ್ರೀ ಜಿ ಅವರು ಮೆಟಾಸ್ಟಾಟಿಕ್ ಕ್ಯಾನ್ಸರ್, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಉಂಟಾಗುವ ತೊಡಕುಗಳೊಂದಿಗೆ ದೀರ್ಘಕಾಲದ ಹೋರಾಟದ ನಂತರ ಹೃದಯ ಸ್ತಂಭನದಿಂದಾಗಿ 2023 ರ ನವೆಂಬರ್ 14 ರಂದು ರಾತ್ರಿ 10.30 ಕ್ಕೆ ನಿಧನರಾದರು ಎಂದು ತಿಳಿಸಿದೆ.ಜೂನ್ 10, 1948 ರಂದು ಬಿಹಾರದ ಅರಾರಿಯಾದಲ್ಲಿ ಜನಿಸಿದ ಸುಬ್ರತಾ ರಾಯ್ ಹಣಕಾಸು, ರಿಯಲ್ ಎಸ್ಟೇಟ್, ಮಾಧ್ಯಮ ಮತ್ತು ಆತಿಥ್ಯ ಸೇರಿದಂತೆ ವಿವಿಧ ಕ್ಷೇತ್ರಗಳನ್ನು ವ್ಯಾಪಿಸಿದ ವಿಶಾಲ ಸಾಮ್ರಾಜ್ಯವನ್ನು ಸ್ಥಾಪಿಸಿದರು.


ಸುಬ್ರತಾ ರಾಯ್ ಗೋರಖ್ಪುರದ ಸರ್ಕಾರಿ ತಾಂತ್ರಿಕ ಸಂಸ್ಥೆಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದರು. ನಂತರ ಅವರು 1976ರಲ್ಲಿ ಸಹಾರಾ ಫೈನಾನ್ಸ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಮೊದಲು ಗೋರಖ್ಪುರದಲ್ಲಿ ವ್ಯವಹಾರಕ್ಕೆ ಕಾಲಿಟ್ಟರು.


1978 ರ ಹೊತ್ತಿಗೆ, ಅವರು ಅದನ್ನು ಸಹಾರಾ ಇಂಡಿಯಾ ಪರಿವಾರ್ ಆಗಿ ಪರಿವರ್ತಿಸಿದರು. ಇದು ಭಾರತದ ಅತಿದೊಡ್ಡ ಕಂಪನಿಗಳಲ್ಲಿ ಒಂದಾಗಿದೆ. ಸಹಾರಾ ಸಮೂಹವು 1992ರಲ್ಲಿ ರಾಷ್ಟ್ರೀಯ ಸಹಾರಾ ಎಂಬ ಹಿಂದಿ ಭಾಷೆಯ ಪತ್ರಿಕೆಯನ್ನು ಪ್ರಾರಂಭಿಸಿತು ಮತ್ತು ನಂತರ ಸಹಾರಾ ಟಿವಿಯೊಂದಿಗೆ ದೂರದರ್ಶನ ಕ್ಷೇತ್ರವನ್ನು ಪ್ರವೇಶಿಸಿತು.

ಬಂಡಾಯ ಅಭ್ಯರ್ಥಿ ಕೆಎಸ್​ ಈಶ್ವರಪ್ಪ ನಾಮಪತ್ರ ಸಲ್ಲಿಕೆ

Posted by Vidyamaana on 2024-04-12 16:06:24 |

Share: | | | | |


ಬಂಡಾಯ ಅಭ್ಯರ್ಥಿ ಕೆಎಸ್​ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನವೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆಎಸ್​ ಈಶ್ವರಪ್ಪ ನಾಮಪತ್ರ ಸಲ್ಲಿಸಿದ್ದಾರೆ. ಅವರು ನಾಮಪತ್ರ ಸಲ್ಲಿಸಲು ಬಂದಿದ್ದರು.


ಸಾವಿರಾರು ಬೆಂಬಲಿಗರೊಂದಿಗೆ ಶಿವಮೊಗ್ಗದ ರಾಮಣ್ಣಶ್ರೇಷ್ಟಿ ಪಾರ್ಕ್ ನಿಂದ ಮೆರವಣಿಗೆ ಮೂಲಕ ಗೋಪಿ ಸರ್ಕಲ್‌ವರೆಗೂ ತೆರಳಿದ ಬಳಿಕ ನಾಮಪತ್ರ ಸಲ್ಲಿಸಿಸಿದರು. ಈ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಕೆ ಎಸ್ ಈಶ್ವರಪ್ಪ ಪತ್ನಿ ವಿಜಯಲಕ್ಷ್ಮಿ, ಪುತ್ರ ಕಾಂತೇಶ್​ ಹಾಗೂ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಮತ್ತು ಆಪ್ತರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು.

ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ತಾಲೂಕು ಟೈಲರ್ಸ್ ಸಹಕಾರ ಸಂಘದ ವತಿಯಿಂದ ಗೌರವಾರ್ಪಣೆ

Posted by Vidyamaana on 2023-10-26 09:25:39 |

Share: | | | | |


ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ತಾಲೂಕು ಟೈಲರ್ಸ್ ಸಹಕಾರ ಸಂಘದ ವತಿಯಿಂದ ಗೌರವಾರ್ಪಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 56 ನೇ ಪಟ್ಟಾಭಿಷೇಕದ ವರ್ಧನ್ನೋತ್ಸವದ ಪ್ರಯುಕ್ತ ತಾಲೂಕು ಟೈಲರ್ಸ್ ಸಹಕಾರ ಸಂಘದ ವತಿಯಿಂದ ಗೌರವಿಸಲಾಯಿತು.


ಸಂಘದ ಅಧ್ಯಕ್ಷ ವಲೇರಿಯನ್ ರೊಡ್ರಿಗಸ್, ಉಪಾಧ್ಯಕ್ಷ ಕೆ.ಕುಶಾಲಪ್ಪ ಗೌಡ, ಸಂಘದ ನಿರ್ದೇಶಕರು ಜೋಸೆಫ್


ಡಿಸೋಜಾ,ವಸಂತ ಪೂಜಾರಿ ಎನ್, ವಸಂತ, ವಲೇರಿಯನ್ ಪಾಯಸ್, ರಾಜು ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಧಿಕಾರಿ ರೋಲ್ಸನ್ ಜೋಯೆಲ್ ಮೊರಸ್ ಉಪಸ್ಥಿತರಿದ್ದರು

Recent News


Leave a Comment: