ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ತನ್ನ ಹೆಸರಿನ ಟೀ ಶರ್ಟ್ ಧರಿಸಿದ್ದ ಅಭಿಮಾನಿಯ ಹಿಂಬಾಲಿಸಿ ಹೋಗಿ ಮಾತನಾಡಿಸಿದ ಸಚಿನ್‌: ವೀಡಿಯೋ ವೈರಲ್

Posted by Vidyamaana on 2024-02-05 07:24:24 |

Share: | | | | |


ತನ್ನ ಹೆಸರಿನ ಟೀ ಶರ್ಟ್ ಧರಿಸಿದ್ದ ಅಭಿಮಾನಿಯ ಹಿಂಬಾಲಿಸಿ ಹೋಗಿ ಮಾತನಾಡಿಸಿದ ಸಚಿನ್‌: ವೀಡಿಯೋ ವೈರಲ್

        ಕ್ರಿಕೆಟ್  ಹಾಗೂ ಸಿನಿಮಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ತಾರೆಯರಿಗೆ ತಮ್ಮದೇ ಆದ ಅಭಿಮಾನಿಗಳಿರುತ್ತಾರೆ. ತಮ್ಮ ನೆಚ್ಚಿನ ನಾಯಕಿ /ನಾಯಕಿಗಾಗಿ ಅಭಿಮಾನಿಗಳು ಏನೂ ಮಾಡಲು ಸಿದ್ಧರಿರುತ್ತಾರೆ. ಕೆಲವರು ದೇವಸ್ಥಾನ ಕಟ್ಟುತ್ತಾರೆ, ಇನ್ನು ಕೆಲವರು ದೇವರಂತೆ ಪೂಜೆ ಮಾಡುತ್ತಾರೆ.

ಕೆಲ ಅಭಿಮಾನಿಗಳು ತಮ್ಮ ನೆಚ್ಚಿನ ವ್ಯಕ್ತಿಯ ಹುಟ್ಟುಹಬ್ಬದಂದು ರಕ್ತದಾನ ಮಾಡುತ್ತಾರೆ. ಬಡವರಿಗೆ ಹಣ್ಣು ಹಂಪಲು ನೀಡುತ್ತಾರೆ, ವೃದ್ಧಾಶ್ರಮಗಳಲ್ಲಿ ಸೇವೆ ಮಾಡುತ್ತಾರೆ ಹೀಗೆ ವಿವಿಧ ರೀತಿಯಲ್ಲಿ ತಮ್ಮ ಅಭಿಮಾನವನ್ನು ಮೆರೆಯುತ್ತಾರೆ. ಹಾಗೆಯೇ ಭಾರತದಲ್ಲಿ ಕ್ರಿಕೆಟ್‌ಗೆ ಇರುವ ಅಭಿಮಾನಕ್ಕೆ ಬೇರೆಯದೇ ಸ್ಥಾನವಿದೆ. ಅನೇಕರು ತಮ್ಮ ನೆಚ್ಚಿನ ನಾಯಕನ ಹೆಸರಿರುವ ಟೀ ಶರ್ಟ್ ಧರಿಸಿ ಆ ಮೂಲಕ ಅಭಿಮಾನ ಮೆರೆಯುವುದನ್ನು ನೋಡಬಹುದು . ಹೀಗೆ ತಮ್ಮ ನೆಚ್ಚಿನ ಕ್ರಿಕೆಟಿಗನ ಟೀ ಶರ್ಟ್ ಧರಿಸಿ ರಸ್ತೆಯಲ್ಲಿ ಓಡಾಡ್ತಿರಬೇಕಾದರೆ ಅವರೇ ಬಂದು ನಿಮ್ಮನ್ನ ಮಾತನಾಡಿಸಿದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು. ಒಂದು ಕ್ಷಣ ಇದು ನಿಜನಾ ಕನಸಾ ಅಂತ ನಿಮ್ಮನೇ ನೀವು ಚಿವುಟಿ ನೋಡುವುದಂತೂ ಪಕ್ಕಾ ಅದೇ ರೀತಿಯ ಅನುಭವ ಈಗ ಇಲ್ಲಿ ವ್ಯಕ್ತಿಯೊಬ್ಬರಿಗೆ ಆಗಿದೆ. ಇವರನ್ನು ಭೇಟಿಯಾಗಿದ್ದು ಬೇರೆ ಯಾರು ಅಲ್ಲ, ಕ್ರಿಕೆಟ್ ಗಾಡ್ ಎಂದೇ ಖ್ಯಾತಿ ಗಳಿಸಿರುವ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌.


💥ವಿಡಿಯೋ ನೋಡಲು ಕ್ಲಿಕ್ ಮಾಡಿ!!!!

ಹೌದು, ತಮ್ಮ ಕಟ್ಟ ಅಭಿಮಾನಿಯನ್ನು ಆತನಿಗೆ ತಿಳಿಯದಂತೆ ಆತ ಊಹೆಯೂ ಮಾಡದಂತೆ ಸಡನ್ ಆಗಿ ಭೇಟಿ ಮಾಡಿ ಆತನ ಬದುಕಿನಲ್ಲಿ ಸಾರ್ಥಕ್ಯದ ಭಾವ ಮೂಡಿಸಿದ್ದಾರೆ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ತಾನೂ ಸ್ವಲ್ಪವೂ ನಿರೀಕ್ಷೆ ಮಾಡಿರದ ಈ ಕ್ಷಣ ನೋಡಿ ಅಭಿಮಾನಿ ಪೂರ್ತಿ ಭಾವುಕನಾಗಿದ್ದು ಕ್ರಿಕೆಟ್ ದೇವರಿಗೆ ದೊಡ್ಡ ನಮಸ್ಕಾರ ಮಾಡಿದ್ದಾನೆ ಈ ಅಭಿಮಾನಿ.ಹಾಗಿದ್ದರೆ ನಡೆದಿದ್ದೇನು?


ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ತಮ್ಮ ಕಾರಿನಲ್ಲಿ ಸಾಗುತ್ತಿದ್ದ ವೇಳೆ ಅವರ ಕಾರಿನ ಮುಂದೆಯೇ ಭಾರತ ಕ್ರಿಕೆಟ್ ಟೀಮ್‌ ಪ್ರತಿನಿಧಿಸುವ ನೀಲಿ ಬಣ್ಣದ ಟೀ ಶರ್ಟ್‌ ಮೇಲೆ ಸಚಿನ್ ತೆಂಡೂಲ್ಕರ್ ಐ ಮಿಸ್ ಯೂ ಎಂದು ಬರೆದಿರುವ ಟೀ ಶರ್ಟ್ ತೊಟ್ಟು ಸ್ಕೂಟರ್‌ನಲ್ಲಿ ವ್ಯಕ್ತಿಯೊಬ್ಬ ಸಾಗುತ್ತಿದ್ದು, ಇದನ್ನು ನೋಡಿದ ಸಚಿನ್ ತೆಂಡೂಲ್ಕರ್‌ ಕಾರಿನಲ್ಲಿ ಆತನನ್ನು ಹಿಂಬಾಲಿಸಿಕೊಂಡು ಹೋಗಿ ಭೇಟಿ ಮಾಡಿದ್ದಾರೆ. ಆದರೆ ಇದನ್ನು ನಿರೀಕ್ಷೆ ಮಾಡಿರದ ಆತ ಕೆಲ ಕಾಲ ಶಾಕ್ ಆಗಿದ್ದಾನೆ. ಬಳಿಕ ನನಗೆ ನಿಜವಾಗಿಯೂ ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ, ಇವತ್ತು ನನಗೆ ನನ್ನ ಭಗವಂತನ ದರ್ಶನವಾಯ್ತು ಎಂದು ಆತ ಹೇಳಿಕೊಂಡಿದ್ದಾನೆ. ಅಲ್ಲದೇ ತನ್ನ ಬಳಿ ಇದ್ದ ಸಚಿನ್ ತೆಂಡೂಲ್ಕರ್ ಅವರ ಸಾಧನೆಯ ಫೋಟೋಗಳ ಪೇಪರ್ ಕಟ್ಟಿಂಗ್ ಅಂಟಿಸಿ ಫೋಟೋಗಳನ್ನು ಅಂಟಿಸಿದ್ದ ಪುಸ್ತಕವನ್ನು ಸಚಿನ್‌ಗೆ ತೋರಿಸಿದ್ದಾರೆ. ತನ್ನ ನೆಚ್ಚಿನ ಅಭಿಮಾನಿ ಜೊತೆ ಮಾತನಾಡಿದ ಸಚಿನ್ ಟೀ ಶರ್ಟ್ ನೋಡಿ ನಿಮ್ಮನ್ನು ಮಾತನಾಡಿಸಬೇಕು ಎನಿಸಿತು ಅದಕ್ಕೆ ಗಾಡಿ ನಿಲ್ಲಿಸಿದೆವು ಎಂದು ಹೇಳಿದ್ದಾರೆ. ಜೊತೆಗೆ ಆತನಿಗೆ ಆಟೋಗ್ರಾಫ್ ನೀಡಿದರೆ, ಮೊದಲಿಗೆ ಸಚಿನ್ ಏರ್‌ಫೋರ್ಟ್‌ಗೆ ಹೋಗೋದು ಹೇಗೆ ಎಂದು ಕೇಳಿದ್ದಾರೆ. ಈ ವೇಳೆ ಇವರತ್ತ ತಿರುಗಿದ ಅಭಿಮಾನಿ ಶಾಕ್‌ನಿಂದ ನೋಡಿ ನಾನಿವತ್ತೂ ನಿಜವಾಗಿಯೂ ಭಗವಂತನನ್ನು ನೋಡಿದೆ ಎಂದು ಹೇಳಿದ್ದಾರೆ.ನೀವು ಹೆಲ್ಮೆಟ್ ಧರಿಸಿದ್ದೀರಿ ನಾನು ಸೀಟ್ ಬೆಲ್ಟ್ ಧರಿಸಿದ್ದೇನೆ, ಸದಾ ಹೆಲ್ಮೆಟ್ ಧರಿಸಿ ಪ್ರಯಾಣಿಸಿ ಚೆನ್ನಾಗಿರಿ ಎಂದು ಹಾರೈಸಿ ಸಚಿನ್ ಅಲ್ಲಿಂದ ಹೊರಟು ಹೋಗಿದ್ದಾರೆ. ಇನ್ನು ಈ ವಿಡಿಯೋ ನೋಡಿದ ಸಚಿನ್ ಅಭಿಮಾನಿಗಳು ಕೂಡ ಭಾವುಕರಾಗಿದ್ದು, ಕೇವಲ ಕ್ರಿಕೆಟ್ ಗಾಡ್ ಈ ರೀತಿ ಮಾಡಲು ಸಾಧ್ಯ ಎಂದೆಲ್ಲಾ ತಮ್ಮ ನೆಚ್ಚಿನ ಕ್ರಿಕೆಟಿಗನನ್ನು ಹೊಗಳಿದ್ದಾರೆ. ಆದರೆ ಮತ್ತೆ ಕೆಲವರು ಇದು ಸ್ಕ್ರಿಪ್ಟೆಡ್( ಪ್ಲಾನ್ ಮಾಡಿ ಮಾಡಿದ ವೀಡಿಯೋ) ಎಂದು ದೂರಿದ್ದಾರೆ. ಸ್ಕ್ರಿಫ್ಟ್ ಚೆನ್ನಾಗಿ ಬರೀತೀರಾ ಎಂದು ಟೀಕಿಸಿದ್ದಾರೆ.


ಆದರೆ ಸ್ವತಃ ಸಚಿನ್ ಈ ವೀಡಿಯೋವನ್ನು ಪೋಸ್ಟ್ ಮಾಡಿದ್ದು, ನನ್ನ ಮೇಲೆ ಇಷ್ಟೊಂದು ಪ್ರೀತಿ ತೋರಿದ ಈ ವ್ಯಕ್ತಿಯ ಕಂಡು ನನ್ನ ಹೃದಯ ಖುಷಿಯಿಂದ ಭಾರವಾಯ್ತು. ನಾವು ನಿರೀಕ್ಷೆಯೇ ಮಾಡದ ಕಡೆಯಿಂದೆಲ್ಲಾ ಬರುವ ಈ ರೀತಿಯ ಅಗಾಧ ಪ್ರೀತಿಯಿಂದ ನಮಗೆ ಜೀವನ ತುಂಬಾ ವಿಶೇಷ ಎನಿಸುವುದು ಎಂದು ಸಚಿನ್ ತೆಂಡೂಲ್ಕರ್ ಬರೆದುಕೊಂಡಿದ್ದಾರೆ. ಸಚಿನ್ ಭೇಟಿ ಮಾಡಿದ ಈ ಅಭಿಮಾನಿಯ ಹೆಸರು ಹರೀಶ್‌ಒಟ್ಟಿನಲ್ಲಿ ಸಚಿನ್ ಭೇಟಿಯಿಂದ ಅಭಿಮಾನಿ ಒಂದು ಕ್ಷಣ ಮಾತೇ ಹೊರಡದಂತಾಗಿ ಭಾವುಕರಾಗಿದ್ದು ಈ ವೀಡಿಯೋದಲ್ಲಿ ಕಣ್ಣಿಗೆ ಕಟ್ಟಿದಂತಿದೆ

ಸುಳ್ಯ- ಪಾಣತ್ತೂರು ರಸ್ತೆಯಲ್ಲಿ ಗುಡ್ಡ ಕುಸಿತ

Posted by Vidyamaana on 2023-07-06 11:57:42 |

Share: | | | | |


ಸುಳ್ಯ- ಪಾಣತ್ತೂರು ರಸ್ತೆಯಲ್ಲಿ ಗುಡ್ಡ ಕುಸಿತ

ಸುಳ್ಯ: ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಸುಳ್ಯದಿಂದ ಕೇರಳದ ಪಾಣತ್ತೂರು ಸಂಪರ್ಕಿಸುವ ಕಲ್ಲಪಳ್ಳಿಯಲ್ಲಿ ಗುಡ್ಡದಿಂದ ಮಣ್ಣು ಕುಸಿದು ರಸ್ತೆ ಸಂಚಾರದಲ್ಲಿ ತಡೆ ಉಂಟಾಗಿರುವುದಾಗಿ ಘಟನೆ ಜು ೬ ರಂದು ಸಂಭವಿಸಿದೆ.

 ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಬಳಿಕ ಸ್ಥಳೀಯರು ಸೇರಿ ಮಣ್ಣು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು. ಇನ್ನೂ ಮಳೆ ಮುಂದುವರಿದರೆ ಗುಡ್ಡ ಇನ್ನಷ್ಟು ಕುಸಿಯುವ ಅಪಾಯ ಎದುರಾಗಿದ್ದು ಈ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ಎಚ್ಚರಿಕೆಯಿಂದ ಪ್ರಯಾಣಿಸಬೇಕು ಎಂದು ತಿಳಿಸಲಾಗಿದೆ .

ಭಾವನಾತ್ಮಕ ಪತ್ರ ಬರೆದ ಅನಂತ್ ಕುಮಾರ್ ಹೆಗಡೆ

Posted by Vidyamaana on 2024-03-25 04:45:39 |

Share: | | | | |


ಭಾವನಾತ್ಮಕ ಪತ್ರ ಬರೆದ ಅನಂತ್ ಕುಮಾರ್ ಹೆಗಡೆ

ಶಿರಸಿ: ಜನಕ್ಕೆ ಸೇವೆಯ ಸೌಭಾಗ್ಯ ಕೊಟ್ಟ ಜನ‌ಮನಕ್ಕೆ ಸಾಷ್ಟಾಂಗ ಪ್ರಣಾಮ ಎಂದು ಸಂಸದ ಅನಂತಕುಮಾರ ಹೆಗಡೆ ಮತದಾರರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.


ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿಯಿಂದ ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ವಂಚಿತ ಅನಂತಕುಮಾರ ಹೆಗಡೆ ಅವರ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅದರ ಪೂರ್ಣ ಪಾಠ ಇಲ್ಲಿದೆ.

ಈ ಭೂಮಿಯಲ್ಲಿ ಒಂದು ಲೌಕಿಕ ಬದುಕಿನಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನ್ನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು. ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು.

ಆದರೆ, ಆರಂಭ ಎಲ್ಲಿಂದ ತಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ‌ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ  ನಾನು ಈ ಪೂಜೆಯನ್ನು ಎಲ್ಲಿಂದ ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ.ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ಧನ ಆರಾಧನೆ. ಸರಿ‌ ಸುಮಾರು ೩೦ ವರ್ಷಗಳ ಲಾಲ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ‌ಪ್ರೀತಿ, ಸ್ನೇಹ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು. ಅದು ಅದಮ್ಯ.


ಯಾವುದೇ ಪೂಜೆ, ಆರಾಧ‌ನೆ ಅದು ಎಂದಿಗೂ‌ ಮುಗಿಯದ ಅನಂತ ಕಾಯಕ. ಈ ತಾಯ್ನೆಲದ ಪೂಜೆಯಲ್ಲಿ ಆಕೆಯ ಸೇವೆಯಲ್ಲಿ ನನ್ನನ್ನು‌ ನಾನು ಸಮರ್ಪಿಸಿಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದ್ದಕ್ಕೆ ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದ ಪದ್ಮಗಳಿಗೆ ಅನಂತ‌ ನಮನಗಳನ್ನು ಸಲ್ಲಿಸುತ್ತೇನೆ.

ಕಳೆದ‌ ಮೂರು ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಯ್ಯೋಗ . ಈ ಬದುಕಿನಲ್ಲಿ ಅದು ನನಗೊಂದು ಗುರುತು ನೀಡಿದೆ.ನಿಜಕ್ಕೂ ಅಷ್ಟೇ ಸಾಕು. ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೆ ಸಿಕ್ಕೀತು? ಎಂದೂ ಕೇಳಿದ್ದಾರೆ.

ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ, ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ಮು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ ಮತ್ತೊಮ್ಮೆ ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ. ತಮ್ಮೆಲ್ಲರ ನೆನಪಿನಲ್ಲಿ ಹೃದಯಾಂತರಾಳದ ಕೃತಜ್ಞತೆಗಳು ಎಂದು ಪತ್ರ ಬರೆದಿದ್ದಾರೆ

ಶಾಸಕರ ಇಂದಿನ ಕಾರ್ಯಕ್ರಮ (ಜೂ18)

Posted by Vidyamaana on 2023-06-17 23:17:58 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ (ಜೂ18)

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜೂ  18 ರಂದು

ಬೆಳಿಗ್ಗೆ 10.30 ಪುತ್ತೂರು ಬಂಟರ ಭವನದಲ್ಲಿ ಸನ್ಮಾನ ಕಾರ್ಯಕ್ರ‌ಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 3.30 ಜೈನರ ಭವನದಲ್ಲಿ ಹಲಸು ಮೇಳದಲ್ಲಿ ಭಾಗವಹಿಸಲಿದ್ದಾರೆ 

ಸಂಜೆ 6 ಕ್ಕೆ ಕೋಡಿಂಬಾಡಿ ಶ್ರೀಮಹಿಷ ಮರ್ದೀನಿ ದೇವಸ್ಥಾನದಲ್ಲಿ ಹುಟ್ಟೂರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯ ಸರ್ಕಾರದಿಂದ ಅರ್ಚಕರು ನೌಕರರಿಗೆ ಗುಡ್ ನ್ಯೂಸ್

Posted by Vidyamaana on 2023-10-15 10:39:08 |

Share: | | | | |


ರಾಜ್ಯ ಸರ್ಕಾರದಿಂದ ಅರ್ಚಕರು ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ.ಈ ಕುರಿತು ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಬಿ ಮತ್ತು ಸಿ ವರ್ಗದ ದೇವಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರ ಅರ್ಚಕರು ಮತ್ತು ಸಿಬ್ಬಂದಿಯ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.ಸರ್ಕಾರವು ಪಿಯುಸಿ ವಿದ್ಯಾರ್ಥಿಗಳಿಗೆ 5,000 ರೂ., ಐಟಿಐ/ ಜೆಒಸಿ/ ಡಿಪ್ಲೊಮಾ ವಿದ್ಯಾರ್ಥಿಗಳಿಗೆ 5,000 ರೂ., ಪದವಿಗೆ 7,000 ರೂ., ಸ್ನಾತಕೋತ್ತರರಿಗೆ 15,000 ರೂ., ಆಯುರ್ವೇದ 25,000 ರೂ. ವಾರ್ಷಿಕ ಆರ್ಥಿಕ ನೆರವು ನೀಡಲಿದೆ. ಹೋಮಿಯೋಪತಿ ಕೋರ್ಸ್‌ಗಳು, ತಾಂತ್ರಿಕ ಶಿಕ್ಷಣಕ್ಕೆ (ಎಂಜಿನಿಯರಿಂಗ್) 25,000 ರೂ., ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ 50,000 ರೂ. ಮತ್ತು ವಿದೇಶದಲ್ಲಿ ಅಧ್ಯಯನಕ್ಕೆ 1 ಲಕ್ಷ ರೂ. ನೆರವು ಸಿಗಲಿದೆ ಎಂದು ಹೇಳಿದ್ದಾರೆ.


ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರು, ನೌಕರರ ಪೈಕಿ ವರ್ಷಕ್ಕೆ 1,200 ಮಂದಿಯನ್ನು ಕಾಶಿ, ಗಯಾ ಯಾತ್ರೆಗೆ ಉಚಿತವಾಗಿ ಕಳುಹಿಸಲಾಗುವುದು. ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರು, ನೌಕರರು ಮೃತರಾದರೆ ಅವರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ನಿತ್ಯ ದುಡಿ ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ

Posted by Vidyamaana on 2023-12-14 20:18:19 |

Share: | | | | |


ನಿತ್ಯ ದುಡಿ ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ

ಬೆಳಗಾವಿ: ಬೆಳಗಾವಿ ಅಧಿವೇಶನದ (Belagavi Session) ನಡುವೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಲವು ಸಂಘಟನೆಗಳು ಸುರ್ವಣಸೌಧದ (Suvarna soudha) ಬಳಿ ಪ್ರತಿಭಟನೆಗಳನ್ನು ನಡೆಸುತ್ತಿವೆ. ಈ ನಡುವೆ ಮದ್ಯ ಪ್ರಿಯರು ಕೂಡ ಪ್ರತಿಭಟನೆ ನಡೆಸಿದ್ದು, ಇವರ ವಿವಿಧ ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ (Santosh l

non

) ಸುಸ್ತಾಗಿದ್ದಾರೆ.


ಸುವರ್ಣಗಾರ್ಡನ್ ಟೆಂಟ್ ನಲ್ಲಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘ ಪ್ರತಿಭಟನೆ ನಡೆಸುತ್ತಿದ್ದು, "ನಿತ್ಯ ದುಡಿ.. ಸತ್ಯ ನುಡಿ.. ಸ್ವಲ್ಪ ಕುಡಿ.. ಮನೆಗೆ ನಡಿ" ಎಂಬ ಘೋಷವಾಕ್ಯದಡಿ ಹೋರಾಟ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಚಿವ ಸಂತೋಷ್ ಲಾಡ್, ಪ್ರತಿಭಟನಾನಿರತರ ಸಮಸ್ಯೆ ಆಲಿಸಿದರು. ಈ ವೇಳೆ ಮದ್ಯಪ್ರಿಯರ ಮನವಿ ಕೇಳಿ ಸಚಿವ ಸಂತೋಷ್ ಲಾಡ್ ಅವರು ಅಚ್ವರಿಗೊಳಗಾಗಿದ್ದಾರೆ.


ಮದ್ಯಪ್ರಿಯರ ಬೇಡಿಕೆಗಳೇನು?


• ಕುಡುಕ ಎಂಬ ಪದ ನಿಷೇಧಿಸಿ ಮದ್ಯ ಪ್ರಿಯರು ಎಂದು ಮಾಡಬೇಕು


• ಮದ್ಯ ಮಾರಾಟದಿಂದ ಬರುವ ಆದಾಯದ ಶೇ. 10 ರಷ್ಟು ಮೀಸಲಿಡಬೇಕು


• ಲೀವರ್ ಸಮಸ್ಯೆಯಿಂದ ಬಳಲುವವರಿಗೆ ಚಿಕಿತ್ಸೆ ಕೊಡಿಸಬೇಕು


• ಮದ್ಯಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು


• ಒಬ್ಬರಿಗೆ ಒಂದು ಕ್ವಾರ್ಟರ್ ನಿಗದಿ ಮಾಡಬೇಕು


• ಡಿಸೆಂಬರ್ 31 ಮದ್ಯಾಪನ ಪ್ರಿಯರ ದಿನ ಎಂದು ಘೋಷಣೆ ಮಾಡಬೇಕು


• ಮದ್ಯ ಸೇವಿಸಿ ಮೃತಪಟ್ಟರೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕು


• ಮದ್ಯಪಾನ ಪ್ರಿಯರ ಕುಟುಂಬದಲ್ಲಿ ವಿವಾಹವಾದರೆ ಎರಡು ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು


• ಬಾರ್‌ಗಳಲ್ಲಿ ಸ್ವಚ್ಛತೆ ಕಾಪಾಡಬೇಕು


• ಬಾರ್‌ಗಳ ಬಳಿ ಆಯಂಬುಲೆನ್ಸ್ ವ್ಯವಸ್ಥೆ ಮಾಡಬೇಕು


• ಮದ್ಯಪ್ರಿಯರ ಭವನ ಸ್ಥಾಪಿಸಬೇಕು


ಹೀಗೆ ವಿವಿಧ ಬೇಡಿಕೆಗಳನ್ನು ಸಚಿವ ಸಂತೋಷ್ ಲಾಡ್ ಮುಂದಿಟ್ಟಿದ್ದಾರೆ. ಮದ್ಯಪ್ರಿಯರ ಮನವಿಯನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ.

Recent News


Leave a Comment: