ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಸುದ್ದಿಗಳು News

Posted by vidyamaana on 2024-07-23 21:09:49 |

Share: | | | | |


ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ  ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಬೆಂಗಳೂರು : ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ಪರವಾನಗಿ ಹಾಗೂ ಅದೇ ಶಾಲೆಯ ತರಬೇತುದಾರನ ಚಾಲನಾ ಪರವಾನಗಿಯನ್ನು (ಡಿಎಲ್‌) ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ರದ್ದುಗೊಳಿಸಿದೆ. 

ಯುವತಿಗೆ ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಅಡಿ ಕಾರು ತರಬೇತಿದಾರನ ವಿರುದ್ಧ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ನಗರದ ಯಾವುದೇ ಡ್ರೈವಿಂಗ್ ಶಾಲೆಯಲ್ಲೂ ಈ ರೀತಿಯ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಾಲಕ್ಷ್ಮೀಪುರದ 18 ವರ್ಷದ ಯುವತಿ ನೀಡಿದ್ದ ದೂರು ಆಧರಿಸಿ, ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?:‌

ದೂರು ನೀಡಿದ್ದ ಯುವತಿ ಕಾರು ಚಾಲನೆ ಕಲಿಯಲು ಮಾರುತಿ ಡ್ರೈವಿಂಗ್‌ ಸ್ಕೂಲ್‌ಗೆ ಸೇರಿದ್ದರು. ಅಣ್ಣಪ್ಪ ಎಂಬಾತ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದರು. ಒಂದು ತಿಂಗಳ ಕೋರ್ಸ್‌ ಮುಕ್ತಾಯವಾದ ಮೇಲೆ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್‌ಗೆ ₹750 ಕೊಡಬೇಕು ಎಂದು ಯುವತಿಯನ್ನು ಕೇಳಿಕೊಂಡಿದ್ದರು. ಯುವತಿ 15 ದಿನಗಳ ವಿಶೇಷ ಕ್ಲಾಸ್‌ಗೆ ಅಣ್ಣಪ್ಪ ಅವರಿಗೆ ₹10,500 ಪಾವತಿಸಿದ್ದರು. ಅದರಂತೆ ಅಣ್ಣಪ್ಪ ವಿಶೇಷ ತರಬೇತಿ ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.

ಪ್ರತಿದಿನ ಯುವತಿಯ ಮನೆ ಬಳಿ ಬಂದು ಆಕೆಯ ಕಾರಿನಲ್ಲೇ ಅಣ್ಣಪ್ಪ ಚಾಲನೆ ತರಬೇತಿ ನೀಡುತ್ತಿದ್ದರು. ಜುಲೈ 7ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಚಾಲನೆ ಬಗ್ಗೆ ಹೇಳಿಕೊಡಲು ಮುಂದಾಗಿದ್ದರು. ಬಸವೇಶ್ವರ ನಗರದ ನ್ಯಾಷನಲ್‌ ಶಾಲೆಯ ಮೇಲ್ಸೇತುವೆಯಲ್ಲಿ ತೆರಳುವಾಗ, ಯುವತಿ ಕಾರು ಚಾಲನೆ ಮಾಡುತ್ತಿದ್ದರು. ಆಗ ಅಣ್ಣಪ್ಪ ಅಸಭ್ಯವಾಗಿ ವರ್ತಿಸಿದ್ದರು ಎಂದು ಪೊಲೀಸರು ತಿಳಿಸಿದರು.

ತರಬೇತುದಾರನ ಅಸಭ್ಯ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಕಾರನ್ನು ಮನೆಯತ್ತ ತಿರುಗಿಸಿದ್ದರು. ಅದಾದ ಮೇಲೆ ತರಬೇತುದಾರ ಸುಮ್ಮನಾಗಿದ್ದರು. ಅಣ್ಣಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

 Share: | | | | |


ಗೆಳೆಯನಿಗಾಗಿ ಪಾಕ್‌ಗೆ ತೆರಳಿದ ತಾಯಿ ಬೇಕಾಗಿಲ್ಲ ಎಂದ ಮಕ್ಕಳು; ಎಲ್ಲ ಇದ್ದೂ ಅಂಜು ಈಗ ಅನಾಥೆ

Posted by Vidyamaana on 2023-12-01 11:53:32 |

Share: | | | | |


ಗೆಳೆಯನಿಗಾಗಿ ಪಾಕ್‌ಗೆ ತೆರಳಿದ ತಾಯಿ ಬೇಕಾಗಿಲ್ಲ ಎಂದ ಮಕ್ಕಳು; ಎಲ್ಲ ಇದ್ದೂ ಅಂಜು ಈಗ ಅನಾಥೆ

ನವದೆಹಲಿ: ಫೇಸ್‌ಬುಕ್‌ನಲ್ಲಿ ಪರಿಚಯವಾದ ಗೆಳೆಯನಿಗಾಗಿ ಗಂಡ, ಇಬ್ಬರು ಮಕ್ಕಳನ್ನು ಬಿಟ್ಟು ಕೆಲ ತಿಂಗಳ ಹಿಂದೆ ಪಾಕಿಸ್ತಾನಕ್ಕೆ (Pakistan) ತೆರಳಿ, ಪ್ರಿಯತಮ ನಸ್ರುಲ್ಲಾನನ್ನು ಮದುವೆಯಾಗಿದ್ದ ರಾಜಸ್ಥಾನದ ಅಂಜು (Anju) ಈಗ ಭಾರತಕ್ಕೆ ಬಂದಿದ್ದಾರೆ. ಅವರು ಭಾರತಕ್ಕೆ ಬಂದರೂ, ಗಂಡ, ಮಕ್ಕಳು, ಮಾವ ಇದ್ದರೂ ಅವರು ಅನಾಥರಾಗಿದ್ದಾರೆ.

ತಾಯಿಯನ್ನು ನಾವು ಭೇಟಿಯಾಗುವುದಿಲ್ಲ ಎಂದು ಅಂಜು ಮಕ್ಕಳು ಹೇಳಿದ್ದು, ಎಲ್ಲ ಇದ್ದರೂ ಈಗ ಅಂಜು ಏಕಾಂಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.


ಹೌದು, ಕೆಲ ದಿನಗಳ ಹಿಂದಷ್ಟೇ ಅಂಜು ಭಾರತಕ್ಕೆ ವಾಪಸಾಗಿದ್ದಾರೆ. ಆದರೆ, ಅಂಜು ಗಂಡ, ಮಾವ ಹಾಗೂ ಮಕ್ಕಳು ಇವರನ್ನು ಭೇಟಿಯಾಗಲು ಸುತಾರಾಂ ಬಯಸುತ್ತಿಲ್ಲ. ಅಂಜು ಅವರ ತಂದೆಯೂ ಮಗಳನ್ನೂ ಸ್ವೀಕರಿಸಲು ತಯಾರಿಲ್ಲ. ಇದರಿಂದಾಗಿ ಅಂಜು ಈಗ ಒಬ್ಬಂಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿದ್ದಾರೆ. ಅಲ್ಲದೆ, ಭಾರತಕ್ಕೆ ಬಂದ ಅಂಜು ಈಗ ಎಲ್ಲಿದ್ದಾರೆ ಎಂಬ ಮಾಹಿತಿಯೂ ಇಲ್ಲ ಎನ್ನಲಾಗಿದೆ.

ಅಂಜು-ನಸ್ರುಲ್ಲಾ ವೈರಲ್‌ ವಿಡಿಯೊ


ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ತನ್ನ ಫೇಸ್‌ಬುಕ್ ಪತಿ ಪಾಕಿಸ್ತಾನದ ಪ್ರಜೆ ನಸ್ರುಲ್ಲಾ ಅವರೊಂದಿಗೆ ವಾಸಿಸುತ್ತಿದ್ದ 34 ವರ್ಷದ ಅಂಜು ವಾಘಾ ಗಡಿಯ ಮೂಲಕ ಭಾರತಕ್ಕೆ ಬಂದ ವಾಪಸ್ ಬಂದಿದ್ದಾಳೆ. ಈ ವೇಳೆ, ತನಿಖಾ ಸಂಸ್ಥೆಗಳು ಅನೇಕ ಸುತ್ತಿನ ವಿಚಾರಣೆ ನಡೆಸಿದ ಬಳಿಕವಷ್ಟೇ ಆಕೆಗೆ ತನ್ನ ಮನೆಗೆ ಹೋಗಲು ಅವಕಾಶ ಕಲ್ಪಿಸಲಾಯಿತು. ಅವಳನ್ನು ಈಗ ಅಮೃತಸರ ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲಾಗಿದ್ದು, ಅಲ್ಲಿಂದ ಅವರು ದೆಹಲಿಗೆ ತೆರಳಿದ್ದಾರೆ.

ವಿಧಾನ ಸೌಧ ವಾಸ್ತುದೋಷ: ಐದು ವರ್ಷಗಳಿಂದ ಮುಚ್ಚಿದ್ದ ಬಾಗಿಲು ಓಪನ್

Posted by Vidyamaana on 2023-06-24 16:06:21 |

Share: | | | | |


ವಿಧಾನ ಸೌಧ ವಾಸ್ತುದೋಷ: ಐದು ವರ್ಷಗಳಿಂದ ಮುಚ್ಚಿದ್ದ ಬಾಗಿಲು ಓಪನ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ ಶನಿವಾರ ಒಳ ಪವೇಶಿಸಿ ಮೌಢ್ಯದ ವಿರುದ್ಧ ತಮ್ಮ ನಿಲುವನ್ನು ಮತ್ತೆ ಸಾಬೀತುಪಡಿಸಿದ್ದಾರೆ.ಜನರ ಬಗ್ಗೆ ಕಾಳಜಿ,ನಡತೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ.ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ,ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ.ಕೊಠಡಿಯೊಳಗೆ ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದಕ್ಕಿಂತ ಉತ್ತಮ ವಾಸ್ತು ಬೇರಿಲ್ಲ.ನಡೆ – ನುಡಿ ಶುದ್ಧವಿದ್ದರೆ ಮತ್ತೆಲ್ಲವೂ ಶುಭದಾಯಕವಾಗಿರಲಿದೆ.ಜನತೆಯ ಆಶೀರ್ವಾದ ಇರಲಿ.” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ಅನ್ನಭಾಗ್ಯ ಯೋಜನೆ ಕುರಿತು ಅಧಿಕಾರಿಗಳೊಂದಿಗೆ ನಡೆಸಿದ ಸಭೆ ವೇಳೆ ಸಿಎಂ ಬಾಗಿಲು ತೆರೆಸುವ ನಿರ್ಧಾರ ಕೈಗೊಂಡಿದ್ದಾರೆ. ಲಿಫ್ಟ್ ನಲ್ಲಿ ವಿಧಾನಸೌಧದ ಮೂರನೇ ಮಹಡಿಗೆ ಬಂದ ಸಿಎಂ ದಕ್ಷಿಣ ದ್ವಾರ ಬಂದ್‌ ಆಗಿರುವುದನ್ನು ಗಮನಿಸಿ ಜತೆಗಿದ್ದ ಅಧಿಕಾರಿಗಳಿಗೆ ಬಾಗಿಲು ಏಕೆ ಮುಚ್ಚಿದೆ ಎಂದು ಪ್ರಶ್ನಿಸಿದ್ದಾರೆ. ಸಿಬಂದಿ ಪಶ್ಚಿಮ ದ್ವಾರ ಮುಖೇನ ಒಳ ಹೋಗಿ ದಕ್ಷಿಣ ಬಾಗಿಲು ತೆರೆದ ಬಳಿಕ ಸಿದ್ದರಾಮಯ್ಯ ಅದೇ ದಾರಿಯಲ್ಲಿ ಒಳ ಪ್ರವೇಶಿಸಿ ಸಭೆ ನಡೆಸಿದರು. 2013ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಮುಚ್ಚಿದ್ದ ದಕ್ಷಿಣ ದ್ವಾರವನ್ನು ಅಧಿಕಾರಿಗಳಿಗೆ ಸೂಚನೆ ನೀಡಿ ತೆರೆಸಿದ್ದರು.

ಬೆಳಿಯೂರುಕಟ್ಟೆ ಸರಕಾರಿ ಪ ಪೂ ಕಾಲೇಜು ವಾರ್ಷಿಕೋತ್ಸವ

Posted by Vidyamaana on 2023-12-18 12:23:08 |

Share: | | | | |


ಬೆಳಿಯೂರುಕಟ್ಟೆ ಸರಕಾರಿ  ಪ ಪೂ ಕಾಲೇಜು ವಾರ್ಷಿಕೋತ್ಸವ

ಪುತ್ತೂರು: ಮಕ್ಕಳನ್ನು ತಿದ್ದುವ ಮತ್ತು ಅವರಿಗೆ ಉತ್ತಮ ದಾರಿ ತೋರಿಸುವ ಕೆಲಸ ಕೇವಲ ಶಿಕ್ಷಕರು‌ಮಾತ್ರವಲ್ಲ ಪೋಷಕರಿಂದಲೂ ಆಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಬೆಳಿಯೂರು ಕಟ್ಟೆ ಸರಕಾರಿ ಪ ಪೂ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರಕಾರಿ ಶಾಲೆಯಲ್ಲಿ ಶಿಸ್ತು ಕಡಿಮೆ ಎಂದು ಕೆಲವರು ಆಪಾದನೆ ಮಾಡುತ್ತಾರೆ. ಸರಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಶಿಸ್ತು ಪಾಲನೆ ಮಾಡಬೇಕಾದರೆ ಪೋಷಕರ ಸಹಕಾರ ಅತೀ ಅಗತ್ಯವಾಗಿದೆ.

ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡುವ ಕನಸು ಕಾಣಬೇಕು. ಕನಸೇ ಕಾಣದಿದ್ದರೆ ನನಸು ಮಾಡುವುದಾದರೂ ಏನನ್ನಯ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ವಿದ್ಯೆ ಕಲಿತು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಬೇಕು,ದುಶ್ಚಟಗಳಿಗೆ ಯಾರೂ ಬಲಿಯಾಗಬಾರದು. ತಂದೆ ತಾಯಿಯ ಹೆಸರನ್ನು ಕೆಡಿಸುವ ಕರಲಸವನ್ನು ಎಂದೂ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.


ಎರಡು ಗ್ರಾಮಕ್ಕೊಂದು ಕೆಪಿಎಸ್ ಸ್ಕೂಲ್


ಎರಡು ಗ್ರಾಮಕ್ಕೊಂದು ಕೆಪಿಎಸ್ ಸ್ಕೂಲ್ ಆರಂಭ ಮಾಡುವ ಉದ್ದೇಶ ಸರಕಾರಕ್ಕಿದ್ದು ,ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ಮುಖ್ಯ ಶಾಲೆಗೆ ಮರ್ಜಿ ಮಾಡಲಾಗುವುದು ಎಂದು ಹೇಳಿದರು.


15 ತಿಂಗಳಲ್ಲಿ 24 ಗಂಟೆಯೂ ನೀರು

ಮುಂದಿನ 15 ತಿಂಗಳೊಳಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ದಿನದ 24 ಗಂಟೆ ನೀರು ವಿತರಣೆಯಾಗಲಿದೆ ಎಂದು ಶಾಸಕರು ತಿಳಿಸಿದರು.

ದುಬೈನಲ್ಲಿ ರಸ್ತೆ ಅಪಘಾತ - ಕೋಟೆಕಾರು ಬೀರಿ ನಿವಾಸಿ ವಿದಿಶಾ ದುರ್ಮರಣ

Posted by Vidyamaana on 2024-02-23 15:57:28 |

Share: | | | | |


ದುಬೈನಲ್ಲಿ ರಸ್ತೆ ಅಪಘಾತ - ಕೋಟೆಕಾರು ಬೀರಿ ನಿವಾಸಿ ವಿದಿಶಾ ದುರ್ಮರಣ

ಉಳ್ಳಾಲ: ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ.


ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

2019ರಲ್ಲಿ ದುಬೈಗೆ ತೆರಳಿ ಎಕ್ಸ್‌ಕ್ಯೂಜೆಟ್‍ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯನಿರ್ವಹಿಸಿದ್ದರು. ಪ್ರತೀ ದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಫೆ. 22 ರ ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ.

ಅಪಘಾತದ ಪರಿಣಾಮ ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದೆಸೆಯಲ್ಲೇ ರೋಟರ್ಯಾಕ್ಟ್  ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.ಹೊಸ ಕಾರು ಖರೀದಿಸಿದ್ದರು: ದುಬೈಯಲ್ಲಿ ವಾಹನ ಚಾಲನಾ ಲೈಸೆನ್ಸ್ ಪಡೆದ ಬಳಿಕ ಕಳೆದ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದರು. ತಂದೆ-ತಾಯಿ ಮಗಳ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದೆ.

ಬೆಳ್ಳುಳ್ಳಿ ಬೆಳೆ ಕಾಪಾಡಿಕೊಳ್ಳಲು ಸೂಪರ್ ಪ್ಲ್ಯಾನ್ ಮಾಡಿದ ಭೋಪಾಲ್ ನ ರಾಹುಲ್ಲಾ

Posted by Vidyamaana on 2024-02-23 14:23:21 |

Share: | | | | |


ಬೆಳ್ಳುಳ್ಳಿ ಬೆಳೆ ಕಾಪಾಡಿಕೊಳ್ಳಲು ಸೂಪರ್ ಪ್ಲ್ಯಾನ್ ಮಾಡಿದ ಭೋಪಾಲ್ ನ ರಾಹುಲ್ಲಾ

ಭೋಪಾಲ್: ಒಂದೆಡೆ ಸಿಲಿಂಡರ್ ಬೆಲೆ ಏರಿಕೆಯಿಂದ ಬೇಸತ್ತಿರುವ ಜನರು ಇದೀಗ ತರಕಾರಿ ಬೆಲೆ ಏರಿಕೆಯಿಂದ ಜೇಬು ಖಾಲಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ಈರುಳ್ಳಿ, ಆಲೂಗೆಡ್ಡೆ ಹೊರತುಪಡಿಸಿ ಉಳಿದ ತರಕಾರಿಗಳ ಬೆಲೆ ನಿಧಾನಕ್ಕೆ ಏರಿಕೆಯಾಗುತ್ತಿದೆ. ಅದರಲ್ಲಿ ಬೆಳ್ಳುಳ್ಳಿ ಬೆಲೆ ಗಗನಕ್ಕೆ ಏರಿದೆ.ಬೆಲೆ ಏರಿಕೆಯಾಗುತ್ತಿರುವಂತೆಯೇ ಬೆಳ್ಳುಳ್ಳು ಬೆಳೆದ ರೈತರು ಒಂದೆಡೆ ಖುಷಿ ಪಟ್ಟರೇ ಮತ್ತೊಂದೆಡೆ ಆತಂಕ ಪಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿಯ ಬೆಲೆ ಕೆಜಿಗೆ 300, 400 ರೂಪಾಯಿಯಿಂದ 500 ರೂಪಾಯಿಗೆ ತಲುಪಿದ್ದು ರೈತರು ಉತ್ತಮ ಆದಾಯ ಪಡೆಯುತ್ತಿದ್ದಾರೆ.

ಇದರ ಬೆನ್ನಲ್ಲೆ ಬೆಳೆ ಕಳ್ಳತನವಾಗುವ ಭಯ ಕೂಡ ಅನೇಕ ರೈತರಲ್ಲಿ ಕಾಣುತ್ತಿದೆ. ಇದಕ್ಕಾಗಿ ವಿನೂತನ ಪರಿಹಾರಗಳನ್ನು ಕಂಡುಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಮಧ್ಯಪ್ರದೇಶದ ರೈತರೊಬ್ಬರು ತಮ್ಮ ಹೊಲಕ್ಕೆ ಸಂಪೂರ್ಣವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ಹೌದು.. ಮಧ್ಯಪ್ರದೇಶದ ರೈತ ರಾಹುಲ್ ದೇಶಮುಖ್ ತಮ್ಮ 13 ಎಕರೆ ಹೊಲದಲ್ಲಿ ಬೆಳ್ಳುಳ್ಳಿ ಬೆಳೆಯಲು 25 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದಾರೆ. ಮಾರುಕಟ್ಟೆಯಲ್ಲಿ ಈಗಾಗಲೇ ಬೆಳ್ಳುಳ್ಳಿ ಮಾರಾಟದಿಂದ ಸುಮಾರು 1 ಕೋಟಿ ರೂಪಾಯಿಗಳ ಗಮನಾರ್ಹ ಲಾಭವನ್ನು ಪಡೆದಿದ್ದಾರೆ.


ಹೀಗಾಗಿಯೇ ತಮ್ಮ ತಮ್ಮ ಬೆಳೆಯನ್ನು ರಕ್ಷಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ತಮ್ಮ ಹೊಲದಲ್ಲಿ ರಾಹುಲ್ ದೇಶಮುಖ್ ಅವರು ಸೌರಶಕ್ತಿಯನ್ನು ಬಳಸಿಕೊಳ್ಳುವುದು ಮತ್ತು ಮೊಬೈಲ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದರ ಮೂಲಕ ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳುತ್ತಿದ್ದಾರೆ."ನಾಲ್ಕು ಎಕರೆ ಬೆಳ್ಳುಳ್ಳಿ ಬೆಳೆದ ಹೊಲದ ಮೇಲೆ ಮೂರು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ" ಎಂದು ರಾಹುಲ್ ದೇಶಮುಖ್ ಹೇಳಿದ್ದಾರೆ. ಇನ್ನು, ಇವರಂತೆ ಬದ್ನೂರಿನ ಪವನ್ ಚೌಧರಿ ಎಂಬ ರೈತ ಕೂಡ 4 ಎಕರೆ ಬೆಳ್ಳುಳ್ಳಿ ಬೆಳೆಗೆ 4 ಲಕ್ಷ ಬಂಡವಾಳ ಹಾಕಿ 6 ಲಕ್ಷ ಲಾಭ ಗಳಿಸಿದ್ದು, ಭದ್ರತೆಗಾಗಿ ಮೂರು ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ. "ನನ್ನ ಹೊಲದ ಮೇಲೆ ಕಣ್ಣಿಡಲು ನಾನು ಮೂರು ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಿದ್ದೇನೆ. ಅವುಗಳಲ್ಲಿ ಎರಡು ನನಗೆ ಸೇರಿದ್ದು, ಒಂದು ಬಾಡಿಗೆಗೆ ಇದೆ. ನನ್ನ ಹೊಲಗಳಲ್ಲಿ ಬೆಳ್ಳುಳ್ಳಿ ಕಳ್ಳತನವಾಗುತ್ತಿದ್ದರಿಂದ ನಾನು ಈ ಕೆಲಸ ಮಾಡಬೇಕಾಯಿತು" ಎಂದು ತಿಳಿಸಿದ್ದಾರೆ.


ಸಾಮಾನ್ಯವಾಗಿ ಪ್ರತಿ ವರ್ಷ ಕೆ.ಜಿ.ಗೆ 80 ರೂ.ಗೆ ಮಾರಾಟವಾಗುತ್ತಿದ್ದ ಬೆಳ್ಳುಳ್ಳಿ ಈ ಋತುವಿನಲ್ಲಿ ಕೆಜಿಗೆ 300 ರೂಪಾಯಿಗಿಂತ ಹೆಚ್ಚು ಬೆಲೆ ಏರಿಕೆ ಕಂಡಿದೆ. ಬೆಲೆ ಏರಿಕೆಗೆ ಪ್ರಾಥಮಿಕ ಕಾರಣವೆಂದರೆ ಉತ್ಪಾದನೆ ಕಡಿಮೆಯಾಗಿರುವುದು. ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಹಲವಾರು ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗಿದ್ದು ಕೂಡ ಬೆಲೆ ಏರಿಕೆಗೆ ಕಾರಣವಾಗಿದೆ.

ಉಡುಪಿ ಹತ್ಯಾಕಾಂಡ: ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

Posted by Vidyamaana on 2023-12-18 20:26:16 |

Share: | | | | |


ಉಡುಪಿ ಹತ್ಯಾಕಾಂಡ: ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂರು ಮಕ್ಕಳನ್ನು ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆಯ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ. ಡಿ.30ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಸರು ಆದೇಶಿಸಿದ್ದಾರೆ.


ಡಿ.5ರಂದು ನ್ಯಾಯಾಲಯ ಡಿ.18ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿತ್ತು. ಇಂದಿಗೆ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶೆ ದೇವ ಅವರ ಮುಂದೆ ಹಾಜರುಪಡಿಸಲಾಗಿತ್ತು.


ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ, ಡಿ.30ಕ್ಕೆ ಹಾಜರುಪಡಿಸುವಂತೆ ಆದೇಶ ನೀಡಿದ್ದಾರೆ.

Recent News


Leave a Comment: