Posted by vidyamaana on 2024-07-08 20:09:58 |
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಯ ಶಾಲಾ, ಪಿಯು ಕಾಲೇಜಿಗೆ ಜುಲೈ 09ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ದ. ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ದಿನಾಂಕ: 09/07/224 ರಂದು ರಜೆಯನ್ನು ಘೋಷಿಸಲಾಗಿದೆ.
Posted by Vidyamaana on 2024-01-10 19:16:52 |
ಬೆಂಗಳೂರು (ಜ.10): ಹೊಸ ವರ್ಷದ ಪಾರ್ಟಿಗೆಂದು ವ್ಯಕ್ತಿಯೊಬ್ಬನನ್ನು ಕಿಡ್ನಾಪ್ ಮಾಡಿ 5 ಲಕ್ಷ ರೂ. ಹಣವನ್ನು ಪಡೆದ ಕಿರಾತಕರು, ನಂತರ ಹಣ ಕೊಟ್ಟವನನ್ನು ಬಿಟ್ಟು ಕಳಿಸದೇ ಕೊಲೆಗೈದು ಕಾಡು ಪ್ರಾಣಿಗಳಿಗೆ ಆಹಾರವಾಗಲೆಂದು ಎಸೆದು ಬಂದಿದ್ದಾರೆ.ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದುಡಿಯುವ ವರ್ಗ ಒಂದಿದ್ದರೆ, ದುಡಿದು ಸಂಪಾದನೆ ಮಾಡಿದ್ದವರನ್ನು ದರೋಡೆ ಮಾಡಿ ಮಜಾ ಮಾಡುವ ಇನ್ನೊಂದು ವರ್ಗವಿದೆ.ಹೀಗೆ, ನಾಲ್ವರು ಕಿರಾತಕರು ತಮ್ಮ ಹೊಸ ವರ್ಷದ ಪಾರ್ಟಿ ಹಾಗೂ ಶೋಕಿಗಾಗಿ ಅಮಾಯಕರಿಂದ ಹಣ ಪಡೆದಿದ್ದೂ ಅಲ್ಲದೇ, ಅವರನ್ನು ಅನ್ಯಾಯವಾಗಿ ಕೊಲೆಗೈದು ಅವರ ಮೃತ ದೇಹವೂ ಸಿಗದಂತೆ ಕಾಡು ಪ್ರಾಣಿಗಳಿಗೆ ಎಸೆದು ವಿಕೃತಿ ಮೆರೆದಿದ್ದಾರೆ. ಇದರಿಂದ ಬೆಂಗಳೂರಿನಲ್ಲಿ ಕಷ್ಟಪಟ್ಟು ದುಡಿದು ಮನೆ, ಹೆಂಡತಿ-ಮಕ್ಕಳ ಜೊತೆಗೆ ನೆಮ್ಮದಿಯಾಗಿದ್ದ ಕುಟುಂಬಗಳು ಬೀದಿಗೆ ಬರುತ್ತಿವೆ.
ಬೆಂಗಳೂರಿನ ಜ್ಞಾನಭಾರತೊ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಜಯ್ , ಆನಂದ್, ತಿಮ್ಮ ಮತ್ತು ಹನುಮಂತ ಎಂಬ ನಾಲ್ವರು ಹೊಸ ವರ್ಷದ ಪಾರ್ಟಿಗಾಗಿ ಯಾರನ್ನಾದರೂ ಕಿಡ್ನಾಪ್ ಮಾಡಬೇಕು ಎಂದು ಸ್ಕೆಚ್ ಹಾಕಿದ್ದರು. ಅದರಂತೆ ತಮಗೆ ಪರಿಚಿತವಿದ್ದ ಗುರುಸಿದ್ದಪ್ಪ ಎನ್ನುವವರನ್ನು ಡಿ.3ಒರಂದು ತಾವಿದ್ದ ಸ್ಥಳಕ್ಕೆ ಕರೆಸಿಕೊಂಡು ಕಿಡ್ನಾಪ್ ಮಾಡಿದ್ದಾರೆ. ನಂತರ, ಆತನ ಪತ್ನಿಗೆ ಕರೆ ಮಾಡಿಸಿ 5 ಲಕ್ಷ ರೂ. ತರಲು ಹೇಳಿದ್ದಾರೆ. ಹಣವನ್ನು ಪಡೆದ ನಂತರ ಆತನನ್ನು ಬಿಟ್ಟು ಕಳುಹಿಸದೇ ಕಾರಿನಲ್ಲಿ ಕೂಡಿಸಿಕೊಂಡು ಮದ್ಯ ಸೇವನೆ ಮಾಡುತ್ತಾ ಮಂಚಿನಬೆಲೆ ಡ್ಯಾಮ್ ಬಳಿಗೆ ಹೋಗಿದ್ದಾರೆ.ಮಂಚಿನಬೆಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡಿದ್ದ ಗ್ಯಾಂಗ್, ಡಿಸೆಂಬರ್ 30ರ ರಾತ್ರಿ ಪಾರ್ಟಿ ಮಾಡಿ ಗುರು ಸಿದ್ದಪ್ಪನನ್ನು ಬಿಟ್ಟು ಕಳಿಸುವುದಾಗಿ ಹೇಳಿದ್ದರು. ಆದ್ರೆ ಇವನನ್ನು ಬಿಟ್ರೆ ಪೊಲೀಸರಿಗೆ ಹೇಳುತ್ತಾನೆ ಎಂದು ಕೊಲೆ ಮಾಡಿದ್ದಾರೆ. ಗುರುಸಿದ್ದಪ್ಪನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ನಂತರ, ಮೃತ ದೇಹವನ್ನು ಕಾಡಿನಲ್ಲಿಯೇ ಬೀಸಾಡಿ, ಅಲ್ಲಿಂದ ಹೊಸ ವರ್ಷಕ್ಕಾಗಿ ಗೋವಾಕ್ಕೆ ತೆರಳಿ ಭರ್ಜರಿಯಾಗಿ ಪಾರ್ಟಿ ಮಾಡಿದ್ದಾರೆ. ಆದರೆ, ಇತ್ತ ಹುಬ್ಬಳ್ಳಿಯಿಂದ ಬಂದು ಜೀವನ ಕಟ್ಟಿಕೊಂಡು, ಬೆಂಗಳೂರಿನ ಕಿರಾತಕ ಹುಡುಗರಿಗೆ ಪಾರ್ಟಿಗಾಗಿ ಹಣವನ್ನು ಕೊಟ್ಟ ಗುರುಸಿದ್ದಪ್ಪ ಅನಾಥ ಹೆಣವಾಗಿ ಕಾಡಿನಲ್ಲಿ ಬಿದ್ದಿದ್ದನು.
ಈ ನಡುವೆ ಗುರುಸಿದ್ದಪ್ಪ ಪತ್ನಿ ತನ್ನ ಗಂಡ ಹಣ ಪಡೆದುಕೊಂಡು ಹೋದವರು ಮನೆಗೆ ವಾಪಸ್ಸು ಬಂದಿಲ್ಲಾ ಎಂದು ಮಿಸ್ಸಿಂಗ್ ಕೇಸ್ ನೀಡಿದ್ದರು. ಮಿಸ್ಸಿಂಗ್ ಕೇಸ್ ವಿಚಾರಣೆ ಮಾಡುವಾಗ ಕೊಲೆ ಆಗಿರುವುದು ಪತ್ತೆಯಾಗಿದೆ. ಸದ್ಯ ಮಂಚಿನ ಬೆಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮೃತ ದೇಹ ಪತ್ತೆ ಮಾಡಿದ್ದಾರೆ. ಸತತ ಎರಡು ದಿನ ಹುಡುಕಾಟದ ಬಳಿಕ ಮೃತ ದೇಹ ಪತ್ತೆಯಾಗಿದ್ದು, ಕಾಡು ಪ್ರಾಣಿಗಳು ಗುರುಸಿದ್ದಪ್ಪನ ದೇಹವನ್ನು ಏಳೆದುಕೊಂಡು ಹೋಗಿ ತಿಂದಿದ್ದಾವೆ. ಇನ್ನು ದೇಹದಲ್ಲಿ ತಲೆ ಬುರುಡೆ ಮತ್ತು ಬೆನ್ನೆಲುಬಿನ ಮೂಳೆಗಳು ಮಾತ್ರ ಲಭ್ಯವಾಗಿವೆ. ಗುರುಸಿದ್ದಪ್ಪನ ಅಳಿದುಳಿದ ಮೃತದೇಹದ ಭಾಗಗಳನ್ನು ಸಂಗ್ರಹಿಸಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗುದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗುರುಸಿದ್ದಪ್ಪ ಮೃತ ದೇಹದ ಮರಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ.
Posted by Vidyamaana on 2024-05-24 05:59:45 |
ಬೆಂಗಳೂರು : ಸಾಮಾನ್ಯವಾಗಿ ಕಳ್ಳರು ಮನೆಗಳಲ್ಲಿ, ಬ್ಯಾಂಕ್ ಗಳನ್ನು ದರೋಡೆ ಮಾಡುವುದನ್ನು ನೋಡಿರುತ್ತೇವೆ. ಆದರೆ ಬೆಂಗಳೂರಲ್ಲಿ ಖದೀಮರು ಟ್ರಾಫಿಕ್ ಪೋಲೀಸರ ಹೆಸರಲ್ಲಿ ವಾಟ್ಸಪ್ ಮೂಲಕ ದಂಡ ವಸೂಲಿ ಮಾಡಿದ್ದಾರೆ. ಇದೀಗ ಖದೀಮರ ಕೈಗೆ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೌದು ಮೃತ ಹೆಡ್ ಕಾನ್ಸ್ಟೇಬಲ್ವೊಬ್ಬರ ಐಡಿ ಕಾರ್ಡ್ ಬಳಸಿ ಟ್ರಾಫಿಕ್ ಫೈನ್ ವಸೂಲಿ ಮಾಡುತ್ತಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಇವರು ವ್ಯಾಟ್ಸಪ್ ಮೂಲಕ ಮೆಸೇಜ್ ಕಳಿಸಿ ದಂಡ ಕಟ್ಟಿಸಿಕೊಳ್ಳುತ್ತಿದ್ದರು. ಈ ಹಿನ್ನಲೆ ಮೂವರನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ರಂಜನ್ ಕುಮಾರ್ ಪೋರ್ಬಿ, ಇಸ್ಮಾಯಿಲ್ ಅಲಿ ಹಾಗೂ ಸುಭಿರ್ ಮಲ್ಲಿಕ್ ಬಂಧಿತರು ಎಂದು ತಿಳಿದುಬಂದಿದೆ.
Posted by Vidyamaana on 2023-02-02 15:09:34 |
ನವದೆಹಲಿ (ಫೆ.2): ಕಳೆದ ವಾರ ಅದಾನಿ (Adani) ಗ್ರೂಪ್ ಕಂಪನಿಗಳ ಮೇಲೆ ಅಮೆರಿಕದ ಶಾರ್ಟ್ ಸೆಲ್ಲರ್ ಹಾಗೂ ಸಂಶೋಧನಾ ಸಂಸ್ಥೆ ಹಿಂಡೆನ್ಬರ್ಗ್ ವಂಚನೆ ಹಾಗೂ ಮೋಸದ ಆರೋಪ ಮಾಡಿತ್ತು. ಅಲ್ಲಿಂದ ಇಲ್ಲಿಯವರೆಗೂ ಷೇರುಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ನಷ್ಟಗಳನ್ನು ಕಂಡಿತ್ತು.ಷೇರು ಮಾರುಕಟ್ಟೆಯಲ್ಲಿ ಕಂಪನಿಯ ಷೇರುಗಳು ಕುಸಿತ ಕಾಣುತ್ತಿರುವ ಹಿನ್ನಲೆಯಲ್ಲಿ 20 ಸಾವಿರ ಕೋಟಿಗೂ ಹೆಚ್ಚಿನ ಫಾಲೋಆನ್ ಪಬ್ಲಿಕ್ ಆಫರ್ (ಎಫ್ಪಿಓ) ಜೊತೆ ಮುಂದುವರಿಯುವುದು ಸರಿಯಲ್ಲ ಎಂದಿದ್ದ ಅದಾನಿ ಗ್ರೂಪ್, ಇದನ್ನು ರದ್ದು ಮಾಡಿತ್ತು. ಸಂಪೂರ್ಣವಾಗಿ ಎಫ್ಪಿಓ ಮಾರಾಟವಾಗಿದ್ದರಿಂದ 20 ಸಾವಿರ ಕೋಟಿ ರೂಪಾಯಿಯನ್ನು ಹೂಡಿಕೆದಾರರಿಗೆ ವಾಪಸ್ ಮಾಡುವುದಾಗಿ ತಿಳಿಸಿತ್ತು.ಷೇರು ಕುಸಿತ ಕಾಣುತ್ತಿರುವ ಹಂತದಲ್ಲಿ ಎಫ್ಪಿಒ ಜೊತೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಗೌತಮ್ ಅದಾನಿ ಕೂಡ ಹೇಳಿದ್ದಾರೆ.
ಈ ನಡುವೆ ಕಂಪನಿಯ ಒಟ್ಟು ಷೇರುಗಳಿಂದಾದ ನಷ್ಟ 100 ಬಿಲಿಯನ್ ಡಾಲರ್ ಎಂದು ಹೇಳಲಾಗಿದೆ. ಭಾರತೀಯ ರೂಪಾಯಿಯಲ್ಲಿ 8 ಲಕ್ಷದ 19 ಸಾವಿರದ 134 ಕೋಟಿ ರೂ ನಷ್ಟ ಎಂದು ಹೇಳಲಾಗಿದೆ. ಇದರೊಂದಿಗೆ ಏಷ್ಯಾದ ಮೊದಲ ಶ್ರೀಮಂತ ಎಂಬ ಫೋರ್ಬ್ಸ್ ಪಟ್ಟಿಯಲ್ಲಿದ್ದ ಅದಾನಿ ಏಕಾಏಕಿ 16 ನೇ ಸ್ಥಾನಕ್ಕೆ ಕುಸಿದಿದ್ದಾರೆ.ಅದಾನಿ ಸಮೂಹದ ಷೇರುಗಳು ಭಾರಿ ಕುಸಿತ ಕಾಣುತ್ತಿರುವುದು ಹೂಡಿಕೆದಾರರಲ್ಲಿ ತೀವ್ರ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹೂಡಿಕೆದಾರರಿಗೆ ಎದುರಾಗಿರುವ ಅಪಾಯದ ಬಗ್ಗೆ ಚರ್ಚಿಸಲು ದೈನಂದಿನ ಸಂಸದೀಯ ಕಲಾಪವನ್ನು ಮೊಟಕುಗೊಳಿಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದವು.
ಈ ನಡುವೆ ಅದಾನಿ ಸಮೂಹ ಸಂಸ್ಥೆಗಳಿಗೆ ನೀಡಿದ ಸಾಲಗಳ ಕುರಿತಂತೆ ಭಾರತೀಯ ಬ್ಯಾಂಕ್ಗಳಿಂದ ರಿಸರ್ವ್ ಬ್ಯಾಂಕ್ ಮಾಹಿತಿ ಕೇಳಿದೆ ಎಂದು ವರದಿಯಾಗಿದೆ.
ಈ ನಡುವೆ ಸಂಸತ್ ಅಧಿವೇಶನದಲ್ಲಿ ಹಿಂಡೆನ್ಬರ್ಗ್ ಮಾಡಿರುವ ಆರೋಪಗಳ ಬಗ್ಗೆ ಚರ್ಚೆ ನಡೆಸಲು ಸಮಯ ಮೀಸಲಿಡುವಂತೆ ಭಾರತದ ಸಂಸದರು ಆಗ್ರಹಿಸಿದ್ದಾರೆ. ಅದಾನಿ ಗ್ರೂಪ್ನಲ್ಲಿ ಸರ್ಕಾರಿ ಮಾಲೀಕತ್ವದ ಭಾರತೀಯ ಜೀವ ವಿಮಾ ನಿಗಮ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೂಡ ದೊಡ್ಡ ಹೂಡಿಕೆದಾರರಾಗಿದ್ದಾರೆ. LIC ಶೇರ್ ಮೌಲ್ಯ ಕುಸಿತವಾಗಿದೆ.ಗುರುವಾರ ಮುಂಬೈನ ಬಿಎಸ್ಇ ಆರಂಭಿಕ ವಹಿವಾಟಿನಲ್ಲಿ ಅದಾನಿ ಸಮೂಹದ ಎಲ್ಲಾ 10 ಷೇರುಗಳು ಕೂಡ ಕುಸಿದವು. ಅದಾನಿ ಎಂಟರ್ಪ್ರೈಸಸ್, ಅದಾನಿ ಟ್ರಾನ್ಸ್ಮಿಷನ್ ಮತ್ತು ಅದಾನಿ ಪೋರ್ಟ್ಸ್ ನಷ್ಟವನ್ನು ಶೇ.10ರಷ್ಟು ಕಂಡಿದೆ. ಹಿಂಡೆನ್ಬರ್ಗ್ ವರದಿಯಿಂದ ಅದಾನಿ ಕಂಪನಿ ಷೇರುಗಳ ಮಾರಾಟ ವಿಪರೀತವಾಗಿ ಹೆಚ್ಚಾಗಿದೆ.
ಗುರುವಾರ ಮಾರುಕಟ್ಟೆಗಳು ಪ್ರಾರಂಭವಾಗುವ ಸ್ವಲ್ಪ ಸಮಯದ ಮೊದಲು ಬಿಡುಗಡೆಯಾದ ವೀಡಿಯೊದಲ್ಲಿ ಸಂಸ್ಥಾಪಕ ಗೌತಮ್ ಅದಾನಿ, ತಮ್ಮ ಕಂಪನಿಗಳ ಆರ್ಥಿಕ ಸ್ಥಿತಿಗತಿ ಬಗ್ಗೆ ಇರುವ ಕಳವಳಗಳನ್ನು ತಳ್ಳಿಹಾಕಿದರು. ಎಫ್ಪಿಓ ರದ್ದು ಮಾಡಿದ್ದರಿಂದ ಈಗಾಗಲೇ ನಡೆಯುತ್ತಿರುವ ಯೋಜನೆಗಳು ಹಾಗೂ ಭವಿಷ್ಯದ ಯೋಜನೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.
ಹೂಡಿಕೆದಾರರನ್ನು ರಕ್ಷಣೆ ಮಾಡುವ ಕಾರಣದಿಂದ ಎಫ್ಪಿಓ ಮಾರಾಟವನ್ನು ರದ್ದು ಮಾಡಿದ್ದೇವೆ. ಯಾಕೆಂದರೆ, ಪ್ರಸ್ತುತ ಮಾರುಕಟ್ಟೆಯಲ್ಲಿ ನಮ್ಮ ಷೇರುಗಳು ದೊಡ್ಡ ಮಟ್ಟದಲ್ಲಿ ಇಳಿಕೆ ಕಾಣುತ್ತಿವೆ. ಎಫ್ಪಿಓಗೆ ಈಗ ತಾನೆ ಸಹಿ ಹಾಕಿರುವ ಈ ಹೂಡಿಕೆದಾರರು ಇದರಿಂದ ದೊಡ್ಡ ಮಟ್ಟದ ನಷ್ಟ ಕಾಣುತ್ತಾರೆ. ಆ ಕಾರಣದಿಂದ ಎಫ್ಪಿಓ ರದ್ದು ಮಾಡಿದ್ದಾಗಿ ಹೇಳಿದ್ದಾರೆ.ನನಗೆ ನನ್ನ ಹೂಡಿಕೆದಾರರ ಹಿತವೇ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಮತ್ತೆಲ್ಲವೂ ನಂತರದ ಸ್ಥಾನದಲ್ಲಿರುತ್ತದೆ ಎಂದು ವಿಡಿಯೋದಲ್ಲಿ ಅದಾನಿ ಹೇಳಿದ್ದಾರೆ. ಹೂಡಿಕೆದಾರರಿಗೆ ಆಗಬಹುದಾದ ನಷ್ಟವನ್ನು ಗಮನದಲ್ಲಿಟ್ಟುಕೊಂಡು ಮಾರಾಟವನ್ನು ಹಿಂಪಡೆದುಕೊಳ್ಳಲಾಗಿದೆ ಎಂದಿದ್ದಾರೆ.
ಅದಾನಿ ಗ್ರೂಪ್ ಈವರೆಗೂ 8.4 ಟ್ರಿಲಿಯನ್ ರೂಪಾಯಿ ಅಂದರೆ, 102 ಬಿಲಿಯನ್ ಯುಎಸ್ ಡಾಲರ್ ಹಣವನ್ನು ಷೇರುಮಾರುಕಟ್ಟೆಯಿಂದ ಕಳೆದುಕೊಂಡಿದೆ. ಅದಾನಿ ಗ್ರೂಪ್ನ ಒಟ್ಟು 10 ಲಿಸ್ಟೆಡ್ ಕಂಪನಿಗಳಿದ್ದು, ಮುಂಬೈ ಮಾರುಕಟ್ಟೆಯಲ್ಲಿ ಎಲ್ಲಾ 10 ಷೇರುಗಳು ಆರಂಭದಲ್ಲಿ ಕುಸಿದರೂ ಬಳಿಕ ಚೇತರಿಕೆ ಕಂಡಿದ್ದವು. ಅದಾನಿ ಎಂಟರ್ಪ್ರೈಸಸ್ ಕಂಪನಿಯ ಷೇರುಗಳು ಗುರುವಾರ ಒಂದೇ ದಿನ ಶೇ. 18ರಷ್ಟು ಕುಸಿದಿದೆ
Posted by Vidyamaana on 2023-12-13 11:27:12 |
ಉಡುಪಿಯಲ್ಲಿ ನಡೆದ ಸ್ಪೆಷಲ್ ಮದುವೆಯೊಂದು ಇದೀಗ ಭಾರೀ ಸದ್ದು ಮಾಡುತ್ತಿದೆ. ಜೆಸಿಬಿಯಲ್ಲಿ ಮದುವೆ ಹಾಲ್ ಗೆ ಎಂಟ್ರಿ ಕೊಟ್ಟ ವಧು-ವರರು ಅಲ್ಲೇ ಮಂಟಪದಲ್ಲೇ ಕೋಳಿ ಅಂಕ ನಡೆಸಿದ್ದಾರೆ.
ಅಂದ್ದಾಗೆ ಇಂತಹ ಸ್ಪೆಷಲ್ ಮ್ಯಾರೇಜ್ ನಡೆದಿರೋದು ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ. ಇಲ್ಲಿನ ಮಿಥುನ್ ಮತ್ತು ಪೂಜಾ ಮದುವೆ ಸಮಾರಂಭ ಎಲ್ಲಾ ಮದುವೆಗಳಿಂದ ವಿಭಿನ್ನವಾಗಿ ನಡೆದಿದೆ. ಇದಕ್ಕೆಲ್ಲಾ ಕಾರಣ ಅವರ ಸ್ನೇಹಿತರು ಎನ್ನಲಾಗಿದೆ.
ಗೆಳೆಯನ ಮದುವೆಯನ್ನು ವಿಭಿನ್ನವಾಗಿ ಮಾಡಬೇಕೆಂದು ಮಿಥುನ್ ಸ್ನೇಹಿತರೇ ಆ ಪರಿಸರಕ್ಕೆ ಹೊಸದಾದ ಕೆಲವು ಪರಿಕಲ್ಪನೆಯನ್ನು ಅನಾವರಣ ಮಾಡಿದ್ದಾರೆ. ಸಾಮಾನ್ಯವಾಗಿ ಮದುವೆ ಹಾಲ್ಗೆ ವಧು-ವರರನ್ನು ಕಾರ್ನಲ್ಲಿ ಕರೆತರುತ್ತಾರೆ. ಆದರೆ ಮಿಥುನ್ ಮತ್ತು ಪೂಜಾ ಜೋಡಿ ಬಂದಿದ್ದು ಜೆಸಿಬಿಯಲ್ಲಿ. ಜೆಸಿಬಿಯ ಮುಂದಿನ ಕೊಕ್ಕೆಯಲ್ಲಿ ಕುಳ್ಳಿರಿಸಿ ಜೋಡಿಯನ್ನು ಮದುವೆ ಹಾಲ್ನತ್ತ ಕರೆ ತರಲಾಗಿದೆ. ಜೆಸಿಬಿಯನ್ನು ಹೂವಿನಿಂದ ಸಿಂಗಾರ ಮಾಡಿ, ಸ್ಪೆಷಲ್ ಸೋಫಾವನ್ನು ಮುಂಭಾಗಕ್ಕೆ ಜೊಡಿಸಿ ಅದರಲ್ಲಿ ವರವಧು ಕುಳಿತು ಮದುವೆ ಹಾಲ್ಗೆ ಎಂಟ್ರಿ ಕೊಟ್ಟಿದ್ದಾರೆ.
ಇದು ಮದುವೆಗೆ ಬಂದಿದ್ದ ಎಲ್ಲರ ಮೊಗದಲ್ಲಿ ನಗು ತಂದಿದೆ. ಮದುವೆಗೆ ಜೆಸಿಬಿ ಬಳಸಿದ್ದೇ ವಿಭಿನ್ನವಾಗಿದೆ ಎಂದು ಮದುವೆಗೆ ಬಂದವರು ಮಾತನಾಡಿಕೊಳ್ಳುತ್ತಿರುವಾಗಲೇ ಮತ್ತೊಂದು ವಿಭಿನ್ನವಾದ ಘಟನೆ ಮಿಥುನ್ ಮತ್ತು ಪೂಜಾ ಜೋಡಿ ಮದುವೆಯಲ್ಲಿ ನಡೆದಿದೆ. ಇನ್ನು ಮದುವೆ ಶಾಸ್ತ್ರಗಳು ಮಗಿಯುತ್ತಿದ್ದಂತೆ ಮಿಥುನ್ ಮತ್ತು ಪೂಜಾ ಅಂಕದ ಕೋಳಿಗಳನ್ನು ಮದುವೆ ಮಂಟಪದಲ್ಲೇ ಕಾಳಗ ಮಾಡಿಸಿದ್ದಾರೆ. ವಧು ಕಡೆಯಿಂದ ಒಂದು ಕೋಳಿಯನ್ನು ಹಾಗೂ ವರನ ಕಡೆಯಿಂದ ಒಂದು ಕೋಳಿಯನ್ನು ಮದುವೆ ಮಂಟಪದಲ್ಲೇ ಕೋಳಿ ಅಂಕಣಕ್ಕೆ ಇಳಿಸಲಾಗಿದೆ. ವರ ಮಿಥುನ್ಗೆ ಕೋಳಿ ಅಂಕಕ್ಕೆ ಹೋಗುವ ಹವ್ಯಾಸವಿದ್ದು, ಅದಕ್ಕಾಗಿ ಗೆಳೆಯರು ಈ ಅಚ್ಚರಿ ಕೊಟ್ಟಿದ್ದಾರೆ. ಸದ್ಯ ಬ್ರಹ್ಮಾವರದ ಈ ವಿಭಿನ್ನ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ
Posted by Vidyamaana on 2024-04-19 11:36:09 |
ಗದಗ: ಬೆಳ್ಳಂಬೆಳಿಗೆ ಬೆಚ್ಚಿಬೀಳಿಸುವ ಸುದ್ದಿ ಹೊರಬಿದ್ದಿದ್ದು, ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಲಗಿದಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಈ ಆಘಾತಕಾರಿ ಘಟನೆ ಗದಗದ ನಗರದ ದಾಸರ ಓಣಿಯಲ್ಲಿ ನಡೆದಿದೆ.
ನಗರ ಸಭೆಯ ಉಪಾಧ್ಯಕ್ಷೆ ಸುನಂದಾ ಬಾಕಳೆಯವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪರಶುರಾಮ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು.
Posted by Vidyamaana on 2023-03-09 13:27:52 |
ಚಿಕ್ಕಮಗಳೂರು: ಹೃದಯ ಹಾಗೂ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಚಿಕ್ಕಮಗಳೂರಿನ ಉಪ್ಪಳ್ಳಿಯ ಬಾಲಕ ನುಹ್ಮಾನ್ ಅವರ ಕುಟುಂಬ, ಚಿಕಿತ್ಸೆಯ ಖರ್ಚಿಗಾಗಿ ದಾನಿಗಳ ನೆರವಿಗಾಗಿ ಎದುರು ನೋಡುತ್ತಿದ್ದಾರೆ.
ಬಾಲಕ ನುಹ್ಮಾನ್ ಚುರುಕು ಹಾಗೂ ಪ್ರತಿಭಾವಂತ. ಇದ್ದಕ್ಕಿದ್ದಂತೆ ಒಂದು ದಿನ ಅನಾರೋಗ್ಯ ಕಾಡುತ್ತದೆ. ಅನಾರೋಗ್ಯ ತೀವ್ರಗೊಳ್ಳುತ್ತಿದ್ದಂತೆ, ಆಸ್ಪತ್ರೆಯ ಹಾದಿ ಹಿಡಿಯುತ್ತಾರೆ ಮನೆಯವರು. ವೈದ್ಯರು ಹೇಳಿದ ವಿಷಯ ಕೇಳಿ ದಂಗಾಗಿ ಬಿಡುತ್ತಾರೆ. ಕಾರಣ, ನುಹ್ಮಾನ್ ಏಕಕಾಲದಲ್ಲಿ ಮೆದುಳು ಹಾಗೂ ಹೃದಯದ ಕಾಯಿಲೆಗೆ ತುತ್ತಾಗಿದ್ದ. ಸದ್ಯ ನುಹ್ಮಾನ್ ಬೆಂಗಳೂರಿನ ನಿಮ್ಹಾನ್ಸಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮಗನನ್ನೇನೋ ಆಸ್ಪತ್ರೆಗೆ ಸೇರಿಸಿದರು ಹೆತ್ತವರು. ಆದರೆ ವೈದ್ಯರು ಹೇಳಿದ 15 ಲಕ್ಷ ರೂ.ವನ್ನು ಹೊಂದಿಸಿಕೊಳ್ಳಲು ಹೆತ್ತವರ ಕೈಯಿಂದ ಆಗುತ್ತಿಲ್ಲ. ಆದ್ದರಿಂದ ದಾನಿಗಳ ನೆರವಿಗಾಗಿ ಮನವಿ ಮಾಡಿದ್ದಾರೆ. ಸಂಪರ್ಕಕ್ಕಾಗಿ 7892938854,