Posted by vidyamaana on 2024-07-23 18:35:28 |
ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ.
ಕೇರಳ ಮಾಧ್ಯಮಗಳ ಕವರೇಜ್
ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ
Posted by Vidyamaana on 2023-10-21 12:35:31 |
ಉಪ್ಪಿನಂಗಡಿ : ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ನಲ್ಲಿ (Shir
non
i Ghat) ಸಂಭವಿಸಿದೆ.ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಟ್ರಕ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.Seemore ವಿಡಿಯೋ ನೋಡಲು ಕ್ಲಿಕ್ ಮಾಡಿ
ಉಪ್ಪಿನಂಗಡಿ : ಶಿರಾಡಿ ಘಾಟಿಯಲ್ಲಿ ಅಕ್ಕಿ ಸಾಗಟದ ಲಾರಿಗೆ ಬೆಂಕಿ - ಲಕ್ಷಾಂತರ ನಷ್ಟ
ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್, ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ಪಾರಾಗಿದ್ದಾರೆ.ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಸಂಪೂರ್ಣ ಸುಟ್ಟು ಹೋಗಿದೆ. ಹಾಸನದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಆದರೂ ಲಾರಿ ಅಕ್ಕಿ ಸಮೇತ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ಕೆಲ ಹೊತ್ತು ಅಡಚಣೆ
ಉಂಟಾಗಿತ್ತು ಎಂದು ತಿಳಿದುಬಂದಿದೆ.
Posted by Vidyamaana on 2023-11-04 09:06:48 |
ಪುತ್ತೂರು : ಪುತ್ತೂರು ಸುತ್ತಮುತ್ತಲ ಗ್ರಾಮ ಗಳಲ್ಲಿ ನ 3 ರಂದು ರಾತ್ರಿ ಗುಡುಗು, ಮಿಂಚು ಸಹಿತ ಮಳೆ ಸುರಿದಿದ್ದು,ಆರ್ಯಾಪು ಗ್ರಾಮದ ಕುರಿಯ ಅಜಲಾಡಿ ನಿವಾಸಿ ರುಖ್ಯ ಅವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದೆ.
ಸಿಡಿಲ ಆಘಾತಕ್ಕೆ ಮನೆಯ ವಯರಿಂಗ್ ಸಂಪೂರ್ಣ ಕೆಟ್ಟುಹೋಗಿದೆ.ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ.
ಸ್ಥಳಕ್ಕೆ ಆರ್ಯಾಪು ಗ್ರಾ.ಪಂ. ಸದಸ್ಯ ಯಾಕುಬ್ ಸಾಹೇಬ್ ಭೇಟಿ ನೀಡಿದರು
Posted by Vidyamaana on 2024-07-02 22:10:24 |
ವಿಟ್ಲ: ಮೆಹಂದಿಗೆ ಪ್ರಾಚೀನ ಕಾಲದ ಇತಿಹಾಸ ಇದ್ದು ಅದೊಂದು ಕೈಯಿಂದ ಕೈಯಲ್ಲಿ ಅರಳುವ ಅದ್ಬುತ ಕಲೆಯಾಗಿದೆ. ವಿದ್ಯಾರ್ಥಿನಿಯರು, ಯುವತಿಯರು ಹಾಗೂ ಗೃಹಣಿಯರು ಮೆಹಂದಿ ಬಿಡಿಸುವುದು ಕಲಿಯುವ ಮೂಲಕ ಕುಟುಂಬಕ್ಕೆ ಆರ್ಥಿಕ ನೆರವಾಗಬಹುದು ಎಂದು ವಿಟ್ಲದ ದಂತ ವೈದ್ಯೆ ಡಾ. ಕೌಲತ್ ಬಿ.ಎಂ. ಹೇಳಿದರು.
ವಿಟ್ಲ ಸ್ಕೂಲ್ ರೋಡಿನ ಮೋತಿ ಸಿಟಿ ಕಟ್ಟಡದಲ್ಲಿ ಇತ್ತೀಚಿಗೆ ಆರಂಭಗೊಂಡ ದಿ ನ್ವಾಲೇಜ್ ಹಬ್ ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಮೆಹಂದಿ ತರಗತಿಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
Posted by Vidyamaana on 2024-08-22 10:39:01 |
ಹುಬ್ಬಳ್ಳಿ, ಆ.21: ವಾಣಿಜ್ಯ ನಗರಿ ಹುಬ್ಬಳ್ಳಿ(Hubballi)ಯಲ್ಲಿ ದೋ ನಂಬರ್ ದಂಧೆಗಳು ಎಗ್ಗಿಲ್ಲದೆ ನಡೆಯುತ್ತಿವೆ. ಇವುಗಳನ್ನ ಮಟ್ಟ ಹಾಕಲು ಪೋಲೀಸರು ಎಷ್ಟೇ ಪ್ರಯತ್ನ ಮಾಡಿದರೂ ದಂಧೆಗಳು ಮಾತ್ರ ನಿಲ್ಲುತ್ತಿಲ್ಲ. ಈ ದೋ ನಂಬರ್ ದಂಧೆಗಿಂತ ಈಗ ಹುಬ್ಬಳ್ಳಿಯಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತಿರುವುದು ಮೀಟರ್ ಬಡ್ಡಿ ದಂಧೆ. ಈ ದಂಧೆಕೋರರ ಕಾಟಕ್ಕೆ ಅದೆಷ್ಟೋ ಜನರು ಜೀವವನ್ನೇ ಕಳೆದುಕೊಂಡಿದ್ದಾರೆ. ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರು ಅದೆಷ್ಟೇ ಬಿಸಿ ಮುಟ್ಟಿಸಿದರೂ ಈ ದಂಧೆಗೆ ಫುಲ್ ಸ್ಟಾಪ್ ಮಾತ್ರ ಬೀಳುತ್ತಿಲ್ಲ.
Posted by Vidyamaana on 2023-12-18 12:53:55 |
ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಸಾಕು ಮಗಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20), ನಾಪತ್ತೆಯಾಗಲು ಸಹಕರಿಸಿದ ಶಿರ್ವದ ರೂಪೇಶ್ (22), ಜಯಂತ್ (23) ಮತ್ತು ಮಜೂರು ನಿವಾಸಿ ಮೊಹಮ್ಮದ್ ಅಜೀಝ್ ಎಂದು ಗುರುತಿಸಲಾಗಿದೆ.
ಆರೋಪಿಗಳನ್ನು ಮತ್ತು ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಪೊಲೀಸರು ಕುಂಬ್ಳೆ ಬಳಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
ಲೀಲಾಧರ ಶೆಟ್ಟಿ ಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವೊಂದನ್ನು ದತ್ತು ಪಡೆದಿದ್ದು, ಆಕೆ ಡಿಸೆಂಬರ್ 11 ರಂದು ಏಕಾಏಕಿ ನಾಪತ್ತೆಯಾಗಿದ್ದಳು.
ಈ ಘಟನೆಯಿಂದ ನೊಂದು ಸಮಾಜಕ್ಕೆ ಹೆದರಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆಗೆ ಸಂಬಂಧಪಟ್ಟಂತೆ ಕಾಪು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಮತ್ತು ನಾಪತ್ತೆ ಪ್ರಕರಣಗಳು ದಾಖಲಾಗಿದ್ದವು.
ಆರೋಪಿ ಗಿರೀಶ್ ವಿರುದ್ದ ಪೋಕ್ಸೋ, ಅತ್ಯಾಚಾರ, ಅಪಹರಣ ಪ್ರಕರಣ ಮತ್ತು ಸ್ನೇಹಿತರ ವಿರುದ್ದ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿದೆ.
ಜಿಲ್ಲಾ ಪೋಲಿಸ್ ವರಿಷ್ಟಾದಿಕಾರಿ ಡಾಕ್ಟರ್ ಅರುಣ್ ಕೆ, ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ, ಕಾರ್ಕಳ ಡಿವೈಎಸ್ ಪಿ ಅರವಿಂದ ಕಲ್ಲಗುಜ್ಜಿ ಮಾರ್ಗದರ್ಶನದಲ್ಲಿ ಕಾಪು ಎಸ್ ಐ ಅಬ್ದುಲ್ ಖಾದರ್ ಮತ್ತು ತಂಡ ಆರೋಪಿಗಳನ್ನು ಬಂಧಿಸಿದೆ.