ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಸುದ್ದಿಗಳು News

Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29

Share: | | | | |


ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್‌ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್‌ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್‌ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.

ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.


ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್‌ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್‌ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.

ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್‌ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.

ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

 Share: | | | | |


ಪುತ್ತೂರು: ರಸ್ತೆಗಳ ಬದಿಯಲ್ಲಿ ಬೆಳೆದಿರುವ ಗಿಡಗಂಟಿಗಳ ತೆರವು ಮಾಡಿ

Posted by Vidyamaana on 2023-11-01 08:45:26 |

Share: | | | | |


ಪುತ್ತೂರು: ರಸ್ತೆಗಳ ಬದಿಯಲ್ಲಿ ಬೆಳೆದಿರುವ ಗಿಡಗಂಟಿಗಳ ತೆರವು ಮಾಡಿ

ಪುತ್ತೂರು: ನಗರ ಸಭೆಯ ವ್ಯಾಪ್ತಿಯ ರಸ್ತೆಗಳ ಬದಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ಹಾಗೂ ರಸ್ತೆಗಳೇ ಕಾಣದಂತೆ ಬೆಳೆದಿರುವ ಗಿಡಗಂಟಿಗಳನ್ನು ಮತ್ತು ಪೊದೆಗಳನ್ನು ಅತಿ ಶೀಘ್ರದಲ್ಲಿ ತೆರವು ಮಾಡಬೇಕು ಇಲ್ಲವಾದಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್ ಮಹಮ್ಮದ್ ಆಲಿಯವರ ನಿಯೋಗ ನಗರಸಭೆ ಪೌರಾಯುಕ್ತರಿಗೆ ಎಚ್ಚರಿಕೆ ನೀಡಿದ್ದಾರೆ.


ಪುತ್ತೂರು ನಗರಸಭೆಯ ವಾರ್ಡುಗಳ ರಸ್ತೆಗಳ ಬದಿಗಳಲ್ಲಿ ಮೊರೆಗಳು ಹಾಗೂ ಗಿಡಗಂಟಿಗಳು ಬೆಳೆದು ಕೆಲವು ಕಡೆ ರಸ್ತೆಗಳೇ ಕಾಣದಂತಾಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ನಡೆದಾಡಲು ತುಂಬಾ ತೊಂದರೆಯಾಗುತ್ತಿದೆ. ಬೆಳೆದಿರುವ ಪೊದೆಗಳಲ್ಲಿ ಹಾವುಗಳು ಇರುವ ಅಪಾಯವಿದ್ದು, ಇಲ್ಲಿ ನಡೆದಾಡುವ ನಾಗರಿಕರಿಗೆ ಹಾಗೂ ಮಕ್ಕಳಿಗೆ ಹಾವುಗಳಿಂದ ಅಪಾಯವಾಗುವ ಸಂಭವವಿರುತ್ತದೆ. ಆದುದರಿಂದ ರಸ್ತೆ ಬದಿಗಳಲ್ಲಿ ಬೆಳೆದಿರುವ ಪೊದೆಗಳು ಹಾಗೂ ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸುವುದು ಬಹಳ ಆಗತ್ಯವಿರುತ್ತದೆ. ಆದರೆ ನಗರಸಭೆಯಲ್ಲಿ ಪೊದೆಗಳನ್ನು ಸವರಲು ಹಾಗೂ ಗಿಡಗಂಟಿಗಳನ್ನು ಕಡಿಯಲು, ಕಟ್ಟಿಂಗ್ ಮೆಷಿನ್‌ಗಳಿದ್ದರೂ ಸಹ ಗಿಡಗಂಟಿಗಳನ್ನು ಕಡಿಯುವಂತಹ ಕೆಲಸ ಕಾರ್ಯ ಮಾಡಲು ನಗರಸಭೆಯ ಆರೋಗ್ಯ ನಿರೀಕ್ಷಕರುಗಳು ನಿರ್ಲಕ್ಷ್ಯ ವಹಿಸಿರುವುದು ಎದ್ದು ಕಾಣುತ್ತಿದೆ. ಆದ್ದರಿಂದ ನಗರಸಭಾ ವ್ಯಾಪ್ತಿಯ ರಸ್ತೆ ಬದಿಗಳ ಗಿಡಗಂಟಿಗಳನ್ನು ಕಡಿಯುವ ಹಾಗೂ ಪೊದೆಗಳನ್ನು ತೆರವು ಮಾಡುವ ಕೆಲಸವನ್ನು ತಕ್ಷಣವೇ ಕೈಗೆತ್ತಿಕೊಳ್ಳಬೇಕೆಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ. ಇದರ ಜೊತೆಗೆ ವಾರ್ಡುಗಳ ಚರಂಡಿಗಳ ಹಾಗೂ ದೊಡ್ಡ ತೋಡುಗಳ ಹೂಳೆತ್ತುವ ಕಾಮಗಾರಿಯನ್ನು ಈಗಾಗಲೇ ‘ಗುತ್ತಿಗೆ ನೀಡಿದ್ದು, ಗುತ್ತಿಗೆದಾರರು, ಕೆಲವೇ ಕೆಲವು ವಾರ್ಡುಗಳಲ್ಲಿ ಮಾತ್ರ ಅಲ್ಪ ಸ್ವಲ್ಪ ಭಾಗ ಚರಂಡಿಗಳ ಹೂಳೆತ್ತುವ ಕೆಲಸವನ್ನು ಮಾಡಿರುತ್ತಾರೆ. ಆದರೆ ದೊಡ್ಡ ತೋಡುಗಳ ಹೂಳೆತ್ತುವ ಕಾಮಗಾರಿಯನ್ನು ಈವರೆಗೂ ನಡೆಸಿರುವುದಿಲ್ಲ. ಮಳೆಗಾಲ ಮುಗಿಯುತ್ತಾ ಬಂದಿರುವುದರಿಂದ ಇನ್ನೂ ಹೂಳೆತ್ತುವ, ಆವಶ್ಯಕತೆ ಕೂಡಾ ಇರುವುದಿಲ್ಲ. ಆದುದರಿಂದ ಹೊಳೆತ್ತುವ ಕಾಮಗಾರಿಯ ಬಗ್ಗೆ ತಾವು ಸರಿಯಾದ ಪರಿಶೀಲನೆ ಮಾಡಿ ಆಗಿರುವ


ಕಾಮಗಾರಿಗೆ ಮಾತ್ರ ಬಿಲ್ಲು ಪಾವತಿಸಬೇಕು. ಮಳೆಗಾಲ ಮುಗಿದಿರುವುದರಿಂದ ಇನ್ನು ಯಾವುದೇ ಹೂಳೆತ್ತುವ ಕಾಮಗಾರಿಯನ್ನು ನಡೆಸದೇ ಅದನ್ನು ಸ್ಥಗಿತಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.


ಇದಕ್ಕೆ ತಪ್ಪಿದಲ್ಲಿ ನಗರ ಕಾಂಗ್ರೇಸ್‌ ವತಿಯಿಂದ ನಗರಸಭೆಯ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದುದೆಂದು ಅವರು ಎಚ್ಚರಿಕೆ ನೀಡಿದ್ದಾರೆ. ಮುಂದಿನ ಮಳೆಗಾಲದ ಪೂರ್ವದಲ್ಲಿ ನಗರಸಭೆ ವ್ಯಾಪ್ತಿಯ ಚರಂಡಿಗಳ ಹೂಳೆತ್ತುವ ಕಾಮಗಾರಿಯ ಗುತ್ತಿಗೆ ನೀಡದೆ ನಗರಸಭೆಯಲ್ಲಿರುವ ಹಿಟಾಚಿ ಮತ್ತು ಜೆಸಿಬಿ ಯಂತ್ರವನ್ನು ಬಳಸಿ ಹೂಳೆತ್ತುವ ಕೆಲಸವನ್ನು ಮಾಡುವ ಮೂಲಕ ನಗರಸಭೆಯ ಸಾರ್ವಜನಿಕ ತೆರಿಗೆ ಹಣ ಪೋಲಾಗುವುದನ್ನು ತಪ್ಪಿಸಬೇಕಾಗಿ ಅವರು ಮನವಿಯಲ್ಲಿ ತಿಳಿಸಿದ್ದಾರೆ.

ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ ನೇತೃತ್ವದ ಕಾಂಗ್ರೆಸ್ ನಿಯೋಗ ನಗರ ಸಭಾ ಪೌರಾಯುಕ್ತ ಮಧು ಎಸ್ ಮನೋಹರ್ ಗೆ ಮನವಿ ಸಲ್ಲಿಸುತ್ತಿರುವುದು, ನಿಯೋಗದಲ್ಲಿ ನಗರಸಭಾ ಮಾಜಿ ಅಧ್ಯಕ್ಷೆ ಶ್ರೀಮತಿ ಜಯಂತಿ ಬಲ್ನಾಡ್,ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಗಳಾದ ರೋಶನ್ ರೈ ಬನ್ನೂರು, ರಾಮಚಂದ್ರ ನಾಯ್ಕ್ ಮಂಜಲ್ಪಡ್ಪು, ಸಿರಿಲ್ ರೋಡ್ರಿಗಸ್ ನಗರ ಕಾಂಗ್ರೆಸ್ ಪ್ರದಾಧಿಕಾರಿಗಳಾದ ವಿಕ್ಟರ್ ಪಾಯ್ಸ್, ಕೆಮ್ಮಿ0ಜೆ, ಇಸ್ಮಾಯಿಲ್ ಬೊಳುವಾರ್,ವಾಲ್ಟರ್ ಸಿಕ್ವೆರಾ, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳಾದ ವಿಜಯಲಕ್ಷ್ಮಿ ಕೆ, ಸಾಯಿರಾ ಭಾನು ಬನ್ನೂರು, ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಮೋನು ಬಪ್ಪಳಿಗೆ,, ಕೃಷ್ಣನಗರ ಬೂತ್ ಅಧ್ಯಕ್ಷ ಹರೀಶ್ ಆಚಾರ್ಯ, ಯಂಗ್ ಬ್ರಿಗೇಡ್ ನ ಜಯಂತ ನಗರ ಮುಂತಾದವರು ಉಪಸ್ಥಿತರಿದ್ದರು

ಇ ಫೌಂಡೇಶನ್ (ರಿ.) (ಇ ಫ್ರೆಂಡ್ಸ್ )ವತಿಯಿಂದ ಸ್ಕೂಲ್ ಚಲೋ ಕಾರ್ಯಕ್ರಮ..!

Posted by Vidyamaana on 2024-06-15 20:09:54 |

Share: | | | | |


ಇ ಫೌಂಡೇಶನ್ (ರಿ.) (ಇ ಫ್ರೆಂಡ್ಸ್ )ವತಿಯಿಂದ ಸ್ಕೂಲ್ ಚಲೋ ಕಾರ್ಯಕ್ರಮ..!

ಪುತ್ತೂರು:- ಶೈಕ್ಷಣಿಕ ಅಭಿವೃದ್ಧಿಗಾಗಿ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುವ ಇ ಫೌಂಡೇಶನ್ ಇಂಡಿಯಾ (ರಿ.) ವತಿಯಿಂದ ಸ್ಕೂಲ್ ಚಲೋ ಕಾರ್ಯಕ್ರಮವು ಸಂಸ್ಥೆಯ ಕಾರುಣ್ಯ ಕಛೇರಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಯಮಿಗಳಾದ ಯುನಿಟಿ ಶಮೀರ್ ಹಾಜಿ ಇವರು ಸಾಂಕೇತಿಕವಾಗಿ ಪುಸ್ತಕ ಹಾಗೂ ಬ್ಯಾಗ್ ಗಳನ್ನು ವಿತರಿಸುವುದರೊಂದಿಗೆ ಉದ್ಘಾಟಿಸಿದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಇಮ್ತಿಯಾಝ್ ಪಾರ್ಲೆ ಇವರು ಶಿಕ್ಷಣಕ್ಕೆ ಇ ಫ್ರೆಂಡ್ಸ್ ಪುತ್ತೂರು ನೀಡುತ್ತಿರುವ ಕೊಡುಗೆ ಮತ್ತು ಶೈಕ್ಷಣಿಕ ಪ್ರಗತಿ ಸಾಮುದಾಯಿಕ ಅನಿವಾರ್ಯ ಕೂಡ ಆಗಿದೆ ಎಂದು ತಿಳಿಸಿದರು.

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಣ: ಚಲಾವಣೆಗೆ ಯತ್ನಿಸುತ್ತಿದ್ದ ಕಡಬ ಮೂಲದ ಆಯೂಬ್ ಖಾನ್‌ ಸಹಿತ ನಾಲ್ವರ ಬಂಧನ

Posted by Vidyamaana on 2024-08-20 00:23:32 |

Share: | | | | |


ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಣ:  ಚಲಾವಣೆಗೆ ಯತ್ನಿಸುತ್ತಿದ್ದ ಕಡಬ ಮೂಲದ ಆಯೂಬ್ ಖಾನ್‌ ಸಹಿತ ನಾಲ್ವರ ಬಂಧನ

ಮಂಗಳೂರು, ಆಗಸ್ಟ್‌ 19: ಯೂಟ್ಯೂಬ್ ನೋಡಿ ಖೋಟಾ ನೋಟು ಪ್ರಿಂಟ್ ಮಾಡುವುದನ್ನು ಕಲಿತು 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಅದನ್ನು ಮಂಗಳೂರು ನಗರದಲ್ಲಿ ಚಲಾವಣೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2.13 ಲಕ್ಷ ಮೌಲ್ಯದ 427 ಖೋಟಾ ನೋಟುಗಳನ್ನು ವಶಪಡಿಸಿದ್ದಾರೆ.

ಬಂಧಿತರನ್ನು ಕೇರಳದ ಕಾಸರಗೋಡು ಜಿಲ್ಲೆಯ ಕೊಳತ್ತೂರಿನ ವಿ.ಪ್ರಿಯೇಶ್ (38), ಕಾಸರಗೋಡು ಜಿಲ್ಲೆಯ ಮಲ್ಲ ಗ್ರಾಮದ ‌ಮುಳಿಯಾರಿನ ವಿನೋದ್ ಕುಮಾರ್‌ ಕೆ. (33), ಪೆರಿಯಾದ ಕುನಿಯಾ ವಡಂಕುರದ ಅಬ್ದುಲ್ ಖಾದರ್ ಎಸ್.ಎ (58) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಬೆಳಿಯೂರು ಕಟ್ಟೆಯ ಆಯೂಬ್ ಖಾನ್‌ (51) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು 2.13 ಲಕ್ಷ ಮೌಲ್ಯದ 500 ಮುಖಬೆಲೆಯ ಖೋಟಾ ನೋಟುಗಳನ್ನು ವಶಪಡಿಸಲಾಗಿದೆ. ಇವರು ಕಾಸರಗೋಡಿನಲ್ಲಿ ನಕಲಿ ನೋಟುಗಳನ್ನು ಮುದ್ರಿಸಿ ತಂದು ಮಂಗಳೂರು ನಗರದ ಕ್ಲಾಕ್ ಟವರ್ ವೃತ್ತದ ಬಳಿಯ ಲಾಡ್ಜ್ ಒಂದರಲ್ಲಿದ್ದು ಚಲಾವಣೆಗೆ ಯತ್ನಿಸುತ್ತಿದ್ದರು. ಎಷ್ಟು ಮೊತ್ತದ ನಕಲಿ ನೋಟು ಚಲಾವಣೆ ಆಗಿದೆ ಮತ್ತು ಎಷ್ಟು ಸಮಯದಿಂದ ಮೋಸದ ಕೃತ್ಯ ನಡೆಯುತ್ತಿದೆ ಎನ್ನುವ ಬಗ್ಗೆ ತನಿಖೆ ನಡೆಯಬೇಕಷ್ಟೆ

ದಿಲ್ಲಿಯ ಹಿಂಡನ್ ವಾಯುನೆಲೆಗೆ ಬಂದಿಳಿದ ಶೇಖ್ ಹಸೀನಾ

Posted by Vidyamaana on 2024-08-05 22:15:42 |

Share: | | | | |


ದಿಲ್ಲಿಯ ಹಿಂಡನ್ ವಾಯುನೆಲೆಗೆ ಬಂದಿಳಿದ ಶೇಖ್ ಹಸೀನಾ

ಹೊಸದಿಲ್ಲಿ : ಬಾಂಗ್ಲಾದೇಶದ ನಾಯಕಿ, ಮಾಜಿ ಪ್ರಧಾನಿ ಶೇಖ್ ಹಸೀನಾ ಸೋಮವಾರ ಸಂಜೆ ದಿಲ್ಲಿ ಸಮೀಪದ, ಉತ್ತರ ಪ್ರದೇಶದ ಗಾಝಿಯಾಬಾದ್‌ನಲ್ಲಿರುವ ಹಿಂಡನ್ ವಾಯುಪಡೆ ನೆಲೆಗೆ ಬಂದಿಳಿದಿದ್ದಾರೆ.ಸೋಮವಾರ ಮುಂಜಾನೆ ಪ್ರತಿಭಟನಾಕಾರರು ಪ್ರಧಾನಿ ಶೇಖ್ ಹಸೀನಾ ಅವರ ಢಾಕಾದ ನಿವಾಸ ಗೋನೋಬಬಾನ್‌ಗೆ ನುಗ್ಗಿದ್ದರು.ಅಷ್ಟರಲ್ಲಾಗಲೇ ಅವರು ಪಲಾಯನಗೈದಿದ್ದರು. ಮೂಲಗಳ ಪ್ರಕಾರ ದಿಲ್ಲಿಯಿಂದ ಶೇಖ್ ಹಸೀನಾ ಲಂಡನ್‌ಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.

ಸರಕಾರಿ ಉದ್ಯೋಗದಲ್ಲಿ ಸ್ವಾತಂತ್ಯ ಹೋರಾಟಗಾರರ ಕುಟುಂಬಕ್ಕೆ ಮೀಸಲಾತಿ ವಿರೋಧಿಸಿ ಪ್ರಾರಂಭಗೊಂಡ ಪ್ರತಿಭಟನೆಯು ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು. 300 ಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಮೃತಪಟ್ಟಿದ್ದರು. ಐದು ಬಾರಿ ಪ್ರಧಾನಿಯಾಗಿದ್ದ 73 ವರ್ಷದ ಶೇಖ್ ಹಸೀನಾ ಅವರು ಕೆಲವೇ ಗಂಟೆಗಳ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಾಂಗ್ಲಾದೇಶ ಸೇನೆಯು ಸರಕಾರದ ಮೇಲೆ ಹಿಡಿತ ಸಾಧಿಸಿದೆ.

ರಾಷ್ಟ್ರವನ್ನು ಉದ್ದೇಶಿಸಿ ದೂರದರ್ಶನದಲ್ಲಿ ಭಾಷಣ ಮಾಡಿದ ಸೇನಾ ಮುಖ್ಯಸ್ಥ ಜನರಲ್ ವೇಕರ್-ಉಜ್-ಝಮಾನ್ ಅವರು ಬಾಂಗ್ಲಾ ಸೇನೆಯು ಮಧ್ಯಂತರ ಸರ್ಕಾರ ರಚಿಸಲಿದೆ ಎಂದರು.

ಪ್ರೀತಿಗೆ ಪೋಷಕರ ನಿರಾಕರಣೆ; ಪ್ರೇಮಿಗಳಿಬ್ಬರು ನೇಣಿಗೆ ಶರಣು

Posted by Vidyamaana on 2024-02-03 18:08:10 |

Share: | | | | |


ಪ್ರೀತಿಗೆ ಪೋಷಕರ ನಿರಾಕರಣೆ; ಪ್ರೇಮಿಗಳಿಬ್ಬರು ನೇಣಿಗೆ ಶರಣು

ಕಲಬುರಗಿ : ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ. ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು.ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಗ್ರಾಮದ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಸಿದ್ದರು. ಮುಂದಿನ ತಿಂಗಳು ಮದುವೆ ಕೂಡ ನಿಶ್ಚಯವಾಗಿತ್ತು ಎನ್ನಲಾಗಿದೆ.ಪ್ರೇಯಸಿಗೆ ಮದುವೆ ನಿಶ್ಚಯ ಆಗಿರುವ ವಿಷಯ ತಿಳಿದ ಗೊಲ್ಲಾಳಪ್ಪ ನಿನ್ನೆ ರಾತ್ರಿ ಶಶಿಕಲಾಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾನೆ. ನಂತರ ಮಾಗಣಪುರ ಗ್ರಾಮದ ದೇವಸ್ಥಾನದಲ್ಲಿ ಜೋಡಿ ಮದುವೆ ಮಾಡಿಕೊಂಡಿದ್ದಾರೆ. ಬಳಿಕ ಅದೇ ಗ್ರಾಮದ ಹೊರವಾಲಯದ ತೋಟದ ಜಮೀನಿನಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಪ್ರೇಮಿಗಳಿಬ್ಬರು ನೇಣಿಗೆ ಶರಣಾಗುವ ಮುನ್ನ ತಾವು ಮದುವೆ ಮಾಡಿಕೊಂಡಿರುವುದರ ಬಗ್ಗೆ ಸೆಲ್ಫಿ ಫೋಟೋ ತೆಗೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಂಟ್ವಾಳ: ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ

Posted by Vidyamaana on 2024-05-06 07:15:02 |

Share: | | | | |


ಬಂಟ್ವಾಳ: ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ

ಬಂಟ್ವಾಳ: ತಾಲ್ಲೂಕಿನ ನಾವೂರು ಎಂಬಲ್ಲಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಇಂದು ಸಂಜೆ ಮೃತಪಟ್ಟ‌ ದುರಂತ ನಡೆದಿದೆ.

ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಂ ನಾಶಿಯಾ (14 ) ಮೃತ ಬಾಲಕಿಯರು. ಬಾಲಕಿಯರು ನಾವೂರು ಸಮೀಪದ ಮೈಂದಾಳದಲ್ಲಿ ಸಂಬಂಧಿಕರ ಮನೆಗೆ ಬಂದಿದ್ದರು. ಮನೆಯವರೊಂದಿಗೆ ಸಂಜೆ ಮಕ್ಕಳು ಸ್ಥಳೀಯ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ.

Recent News


Leave a Comment: