ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಬೆಂಗಳೂರಿನಿಂದ ಬಳ್ಳಾರಿಗೆ ಅಜ್ಜಿ ಶವ ಕೊಂಡೊಯ್ಯುತ್ತಿದ್ದ ಕಾರು ಪಲ್ಟಿ: ಮೂವರು ಮೊಮ್ಮಕ್ಕಳ ಸಾವು

Posted by Vidyamaana on 2024-01-20 07:18:43 |

Share: | | | | |


ಬೆಂಗಳೂರಿನಿಂದ ಬಳ್ಳಾರಿಗೆ ಅಜ್ಜಿ ಶವ ಕೊಂಡೊಯ್ಯುತ್ತಿದ್ದ ಕಾರು ಪಲ್ಟಿ: ಮೂವರು ಮೊಮ್ಮಕ್ಕಳ ಸಾವು

ಚಿತ್ರದುರ್ಗ : ಅಜ್ಜಿಗೆ ಅನಾರೋಗ್ಯವೆಂದು ಚಿಕಿತ್ಸೆ ಕೊಡಿಸುವುದಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಅಜ್ಜಿ ಸಾವನ್ನಪ್ಪಿದ್ದಾರೆ. ಇನ್ನು ಮೃತ ದೇಹವನ್ನು ಕಾರಿನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ಕೊಂಡೊಯ್ಯುವಾಗ ಚಿತ್ರದುರ್ಗದ ಬಳಿ ಕಾರಿನ ಟೈರ್ ಬ್ಲ್ಯಾಸ್ಟ್‌ ಆಗಿದ್ದು, ವೇಗದಲ್ಲಿದ್ದ ಕಾರು ಪಲ್ಟಿಯಾಗಿ ಅಜ್ಜಿಯ ಮೂವರು ಮೊಮ್ಮಕ್ಕಳು ಕೂಡ ಹೆದ್ದಾರಿಯಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ.ಅಜ್ಜಿಯ ಶವ ಕೊಂಡೊಯ್ಯುವಾಗ ಟೈಯರ್ ಬ್ಲಾಸ್ಟ್ ಕಾರು ಪಲ್ಟಿ, 3 ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾಗದ ಘಟನೆ ಚಿತ್ರದುರ್ಗದ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಬಳಿ ನಡೆದಿದೆ. ರಾಂಪುರ ಬಳಿಯ ಗ್ರ್ಯಾಂಡ್ ಪೋರ್ಡ್ ಹೋಟೆಲ್ ಬಳಿ ಮಧ್ಯಾಹ್ನದ ವೇಳೆ ಘಟನೆ ನಡೆದಿದೆ. ಮೃತರೆಲ್ಲರೂ ಬಳ್ಳಾರಿಯ ಸಿರುಗುಪ್ಪ ಮೂಲದವರು ಎಂದು ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಿಂದ ಅಜ್ಜಿಯ ಶವ ಸಿರುಗುಪ್ಪಗೆ ಕೊಂಡೊಯ್ಯುತ್ತಿದ್ದರು. ಅಜ್ಜಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.ಇನ್ನು ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದರೆ, ಉಳಿದ 3 ಮಂದಿಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ರಾಂಪುರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಸ್ಥಳಕ್ಕೆ ಪಿಎಸ್‌ಐ ಪರಶುರಾಮ್ ಲಮಾಣಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಮೃತ ದೇಹಗಳನ್ನು ಕೂಡ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನ ಟೈರ್ ಬ್ಲಾಸ್ಟ್‌ ಆಗಿದ್ದೇ ಕಾರು ಅಪಘಾತಕ್ಕೆ ಕಾರಣವೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.ಮೃತರೆಲ್ಲರೂ‌ ಸಿರುಗುಪ್ಪ ಮೂಲದವರಾಗಿದ್ದಾರೆ. ಸುರೇಶ್ (40) , ಮಲ್ಲಿ (25), ಭೂಮಿಕ (9) ಮೃತ ದುರ್ದೈವಿಗಳು. ಇನ್ನು ನಾಗಮ್ಮ (31), ತಾಯಮ್ಮ (56), ಧನರಾಜ್ (39) ಹಾಗೂ ಚಾಲಕ ಶಿವು (26) ಗಂಭೀರ ಗಾಯಾಳುಗಳು ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ಮೃತ ದೇಹಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದವು. ಇನ್ನು ಅಪಘಾತವಾದ ಸ್ಥಳದಲ್ಲಿ ಸಮಾರು 2 ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಪುತ್ತೂರು : ಬೈಕ್-ಸ್ಕೂಟಿ ನಡುವೆ ಅಪಘಾತ : ಇಬ್ಬರಿಗೆ ಗಾಯ.

Posted by Vidyamaana on 2024-03-28 14:24:38 |

Share: | | | | |


ಪುತ್ತೂರು : ಬೈಕ್-ಸ್ಕೂಟಿ ನಡುವೆ ಅಪಘಾತ : ಇಬ್ಬರಿಗೆ ಗಾಯ.

ಪುತ್ತೂರು : ಸ್ಕೂಟಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ದರ್ಬೆಯಲ್ಲಿ ನಡೆದಿದೆ.


ಮುಂಬೈನಲ್ಲಿ ಇಂಡಿಗೋ-ಏರ್ ಇಂಡಿಯಾ ವಿಮಾನಗಳು ಒಂದೇ ರನ್ವೇಯಲ್ಲಿ ಟೇಕ್ ಆಫ್

Posted by Vidyamaana on 2024-06-09 14:02:56 |

Share: | | | | |


ಮುಂಬೈನಲ್ಲಿ ಇಂಡಿಗೋ-ಏರ್ ಇಂಡಿಯಾ ವಿಮಾನಗಳು ಒಂದೇ ರನ್ವೇಯಲ್ಲಿ ಟೇಕ್ ಆಫ್

ಮುಂಬೈ :ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುತ್ತಿದ್ದ ರನ್ ವೇಯಲ್ಲಿ ಇಂಡಿಗೋ ವಿಮಾನವೊಂದು ಇಳಿದ ನಂತರ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.ತ್ವರಿತ ಪ್ರತಿಕ್ರಿಯೆಯಲ್ಲಿ, ನಾಗರಿಕ ವಿಮಾನಯಾನ ನಿಯಮಿತ ನಿರ್ದೇಶನಾಲಯವು ತನಿಖೆಯನ್ನು ಪ್ರಾರಂಭಿಸಿದೆ ಮತ್ತು ಏರ್ ಟ್ರಾಫಿಕ್ ಕಂಟ್ರೋಲ್ ಅಧಿಕಾರಿಯನ್ನು ವಜಾಗೊಳಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಹೊರಹೊಮ್ಮಿದ ವೀಡಿಯೊದಲ್ಲಿ, ಎರಡೂ ವಿಮಾನಗಳು ಒಂದೇ ರನ್ವೇಯಲ್ಲಿ ಕಂಡುಬರುತ್ತವೆ. ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ, ಇಂಡಿಗೊ ವಿಮಾನವು ಇಳಿಯುವುದನ್ನು ಕಾಣಬಹುದು. ಇಂಡಿಗೋ ವಿಮಾನವು ಇಂದೋರ್ ನಿಂದ ಮುಂಬೈಗೆ ಹಾರುತ್ತಿದ್ದರೆ, ಏರ್ ಇಂಡಿಯಾ ವಿಮಾನವು ಕೇರಳದ ತಿರುವನಂತಪುರಕ್ಕೆ ಹೊರಟಿತು.

ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ ಸಂಸದ ಗೌತಮ್ ಗಂಭೀರ್

Posted by Vidyamaana on 2024-03-02 12:19:17 |

Share: | | | | |


ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ ಸಂಸದ ಗೌತಮ್ ಗಂಭೀರ್

ನವದೆಹಲಿ:ಅಚ್ಚರಿಯ ಘಟನೆಯೊಂದರಲ್ಲಿ ಭಾರತೀಯ ಜನತಾ ಪಕ್ಷದ ಸಂಸದ ಗೌತಮ್ ಗಂಭೀರ್ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.ಪೂರ್ವ ದೆಹಲಿಯನ್ನು ಪ್ರತಿನಿಧಿಸುವ ಮಾಜಿ ಕ್ರಿಕೆಟಿಗ ತಮ್ಮ ಅನುಯಾಯಿಗಳು ಮತ್ತು ಬೆಂಬಲಿಗರೊಂದಿಗೆ ಸುದ್ದಿಯನ್ನು ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದಾರೆ.


ಅವರು ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಉತ್ಸಾಹದಿಂದ ಆಡಿದ ಕ್ರೀಡೆಯತ್ತ ತಮ್ಮ ಗಮನವನ್ನು ಮರುನಿರ್ದೇಶಿಸುವ ಅಗತ್ಯವನ್ನು ಉಲ್ಲೇಖಿಸಿ ಅವರು ತಮ್ಮ ಕ್ರಿಕೆಟ್ ಬದ್ಧತೆಗಳ ಮೇಲೆ ಕೇಂದ್ರೀಕರಿಸುವ ಬಯಕೆಯನ್ನು ವ್ಯಕ್ತಪಡಿಸಿದರು.



"ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ನಾನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ, ಇದರಿಂದ ನಾನು ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ಕೇಂದ್ರೀಕರಿಸುತ್ತೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳು. ಜೈ. ಹಿಂದ್,"ಎಂದು ಗಂಭೀರ್ ಬರೆದಿದ್ದಾರೆ.


ಗಂಭೀರ್, ಮಾರ್ಚ್ 2019 ರಲ್ಲಿ ಬಿಜೆಪಿಗೆ ಸೇರಿದ್ದರು ಮತ್ತು ಅಂದಿನಿಂದ ದೆಹಲಿಯಲ್ಲಿ ಪಕ್ಷದ ಪ್ರಮುಖರಾಗಿದ್ದಾರೆ. ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಪೂರ್ವ ದೆಹಲಿ ಸ್ಥಾನಕ್ಕೆ ಸ್ಪರ್ಧಿಸಿ 6,95,109 ಮತಗಳ ಗಣನೀಯ ಅಂತರದಿಂದ ಗೆದ್ದರು.


ಮುಂಬರುವ 2024 ರ ಚುನಾವಣೆಗೆ ಗಂಭೀರ್‌ಗೆ ಟಿಕೆಟ್ ಸಿಗುವುದಿಲ್ಲ ಎಂಬ ವರದಿಗಳ ನಡುವೆ ರಾಜಕೀಯ ತ್ಯಜಿಸುವ ನಿರ್ಧಾರ ಬಂದಿದೆ.

ಕುದ್ಕಾಡಿ ಮನೆ ದರೋಡೆ ಪ್ರಕರಣ – ಖದೀಮರು ಅದೆಷ್ಟು ಚಾಣಾಕ್ಷರಾಗಿದ್ರು ಗೊತ್ತಾ?

Posted by Vidyamaana on 2023-09-30 09:35:38 |

Share: | | | | |


ಕುದ್ಕಾಡಿ ಮನೆ ದರೋಡೆ ಪ್ರಕರಣ – ಖದೀಮರು ಅದೆಷ್ಟು ಚಾಣಾಕ್ಷರಾಗಿದ್ರು ಗೊತ್ತಾ?

ಪುತ್ತೂರು: ಪಡುವನ್ನೂರು ಗ್ರಾಮದ ಕುದ್ಕಾಡಿಯಲ್ಲಿ ನಡೆದ ದರೋಡೆ ಪ್ರಕರಣವನ್ನು ಭೇದಿಸಿರುವ ಪುತ್ತೂರು ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಈ ಪೈಕಿ ಒಬ್ಬಾತ ಜೈಲಿನಲ್ಲಿದ್ದು ಪೆರೋಲ್ ಮೇಲೆ ಹೊರಗೆ ಬಂದಿರುವಾಗಲೇ ಕೃತ್ಯ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.


ದರೋಡೆ ಕೃತ್ಯದಲ್ಲಿ ಆರು ಮಂದಿಯನ್ನು ಬಂಧಿಸಿರುವ ಬಗ್ಗೆ ಎಸ್ಪಿ ರಿಷ್ಯಂತ್, ಸುದ್ದಿಗೋಷ್ಟಿ ನಡೆಸಿ ವಿವರ ನೀಡಿದ್ದಾರೆ. ಕಾಸರಗೋಡು ಜಿಲ್ಲೆಯ ಕುಖ್ಯಾತ ದರೋಡೆ ಗ್ಯಾಂಗ್ ಕೃತ್ಯದಲ್ಲಿ ಭಾಗಿಯಾಗಿದ್ದನ್ನು ಎಸ್ಪಿ ದೃಢಪಡಿಸಿದ್ದಾರೆ. ಸನಾಲ್, ಕಿರಣ್, ವಸಂತ್, ಫೈಜಲ್, ಸುಧೀರ್, ಅಬ್ದುಲ್ ನಿಸಾರ್ ಬಂಧಿತ ಆರೋಪಿಗಳು. ಇವರ ಪೈಕಿ ಸನಾಲ್ ಕೆವಿ ಕಾಸರಗೋಡು ಜಿಲ್ಲೆಯಲ್ಲಿ ಕುಖ್ಯಾತ ದರೋಡೆಕೋರನಾಗಿದ್ದು, 15ಕ್ಕೂ ಹೆಚ್ಚು ಕೇಸುಗಳನ್ನು ಹೊಂದಿದ್ದಾನೆ. ಹಿಂದೊಮ್ಮೆ ಜೈಲಿನಿಂದ ತಪ್ಪಿಸಿಕೊಂಡು ಹೋಗಿದ್ದ ಪ್ರಕರಣವೂ ಈತನ ಮೇಲಿದೆ. ನಾಲ್ಕು ಪ್ರಕರಣಗಳಲ್ಲಿ ಕೇರಳದ ಜೈಲಿನಲ್ಲಿ 9 ವರ್ಷಗಳ ಶಿಕ್ಷೆ ಅನುಭವಿಸಿದ್ದ.

ಎಲ್ಲರೂ ಕ್ರಿಮಿನಲ್ ಹಿನ್ನೆಲೆಯವರಾಗಿದ್ದು ಕಿರಣ್ ಮತ್ತು ಫೈಜಲ್ ತಲಾ ಮೂರು ಪ್ರಕರಣ ಹೊಂದಿದ್ದಾರೆ. ಸುಧೀರ್ ಮೇಲೆ ವಿಟ್ಲ ಮತ್ತು ಪುತ್ತೂರಿನಲ್ಲಿ ಕೇಸು ಇದೆ. ಕಾಸರಗೋಡು ಗಡಿಭಾಗ ಇಚ್ಲಂಗೋಡು ಗ್ರಾಮದ ಪಜ್ಜಂಬಳ ರವಿ 12 ವರ್ಷಗಳ ಹಿಂದಿನ ಪೆರ್ಲದ ಜಬ್ಬಾರ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ. ಕೇರಳದ ಜೈಲಿನಲ್ಲಿದ್ದ ರವಿ ಇತ್ತೀಚೆಗೆ 15 ದಿನಗಳ ಜಾಮೀನಿನಲ್ಲಿ ಜೈಲಿನಿಂದ ಹೊರಬಂದಿದ್ದ. ಈ ವೇಳೆ, ದರೋಡೆ ತಂಡದ ಜೊತೆ ಸೇರಿ ಕೃತ್ಯಕ್ಕೆ ಕೈಜೋಡಿಸಿದ್ದು, ಆನಂತರ ಮತ್ತೆ ಜೈಲಿಗೆ ಹೋಗಿದ್ದಾನೆ. ಕುದ್ಕಾಡಿಯ ಗುರುಪ್ರಸಾದ್ ಅವರ ಪರಿಚಯ ಹೊಂದಿದ್ದ ವಿಟ್ಲ ಪೆರುವಾಯಿ ನಿವಾಸಿ ಸುಧೀರ್, ದರೋಡೆ ತಂಡಕ್ಕೆ ಮಾಹಿತಿ ನೀಡಿ, ಅಲ್ಲಿ ಸಾಕಷ್ಟು ಬಂಗಾರ, ನಗದು ಇರಬಹುದು ಎಂದು ಹೇಳಿದ್ದ. ಆದರೆ ಮನೆಯಲ್ಲಿ ತಡಕಾಡಿದ್ದ ದರೋಡೆ ತಂಡಕ್ಕೆ ನಿರೀಕ್ಷೆ ಮಾಡಿದಷ್ಟು ಚಿನ್ನಾಭರಣ ಸಿಕ್ಕಿರಲಿಲ್ಲ. ಸುಧೀರ್ ಈ ಹಿಂದೆ ವಿಟ್ಲದಲ್ಲಿ ಕಾಳು ಮೆಣಸು ದರೋಡೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕುದ್ಕಾಡಿ ಗುರುಪ್ರಸಾದ್ ರೈ ಅವರಿಗೆ ಸಂಬಂಧಿಕರ ಮೂಲಕ ಪರಿಚಯ ಆಗಿದ್ದ. ಹೀಗಾಗಿ ಉಂಡ ಮನೆಗೇ ದ್ರೋಹ ಬಗೆದಿರುವುದು ಈಗ ಬಯಲಾಗಿದೆ.

ಪದೇ ಪದೇ ಕೃತ್ಯದಲ್ಲಿ ತೊಡಗುತ್ತಿದ್ದುದರಿಂದ ಇವರಿಗೆ ಸಾಕ್ಷ್ಯ ನಾಶದ ಬಗ್ಗೆ ತಿಳಿದಿತ್ತು. ದರೋಡೆ ಕೃತ್ಯ ನಡೆಸಿದ ವೇಳೆ ಮೊಬೈಲ್ ಬಳಕೆ ಮಾಡಿರಲಿಲ್ಲ. ಅಲ್ಲದೆ, ಮನೆಮಂದಿಯ ಮೊಬೈಲನ್ನೂ ತೆಗೆದು ನೀರಿಗೆ ಹಾಕಿದ್ದರು. ಅಲ್ಲದೆ, ತಾವು ಬಳಸಿದ್ದ ಪರಿಕರಗಳನ್ನು ಯಾವುದನ್ನೂ ಬಿಡದೆ ಒಯ್ದಿದ್ದರು. ಎಲ್ಲರೂ ಮುಸುಕು ಹಾಕಿದ್ದರಿಂದ ಮನೆಯವರಿಗೂ ಗುರುತು ಹಚ್ಚಲು ಆಗಿರಲಿಲ್ಲ. ಹೀಗಾಗಿ ಪ್ರಕರಣ ಭೇದಿಸುವುದು ತುಂಬ ಸವಾಲಾಗಿತ್ತು. ತಾಂತ್ರಿಕ ಸಾಕ್ಷ್ಯಗಳನ್ನು ಆಧರಿಸಿ ಪೊಲೀಸರು ಪ್ರಕರಣ ಪತ್ತೆಹಚ್ಚಿದ್ದು, ಉತ್ತಮ ಕೆಲಸ ಮಾಡಿದ್ದಕ್ಕಾಗಿ ಪೊಲೀಸ್ ತಂಡಕ್ಕೆ ಬಹುಮಾನ ನೀಡುತ್ತೇನೆ ಎಂದು ಎಸ್ಪಿ ರಿಷ್ಯಂತ್ ತಿಳಿಸಿದ್ದಾರೆ.


ಕೃತ್ಯದ ಬಳಿಕ ಗುರುಪ್ರಸಾದ್ ಮತ್ತು ಅವರ ತಾಯಿಯನ್ನು ಹಗ್ಗದಿಂದ ಬಿಡಿಸಿ, ಕುಡಿಯಲು ನೀರು ಕೊಟ್ಟಿದ್ದರು. ವೃದ್ಧ ತಾಯಿಯ ಕಾಲು ಮುಟ್ಟಿ ನಮಸ್ಕರಿಸಿ ತೆರಳಿದ್ದರು. ಇದರಿಂದ ಮನೆಯವರ ಬಗ್ಗೆ ತಿಳಿದವರೇ ಕೃತ್ಯ ಎಸಗಿದ್ದಾರೆಂಬ ಅನುಮಾನ ಪೊಲೀಸರಲ್ಲಿತ್ತು. ಕೂಲಿ ಕೆಲಸಕ್ಕೆ ಬರುತ್ತಿದ್ದವರ ಬಗ್ಗೆಯೂ ಅನುಮಾನಗಳಿದ್ದವು. ಸುಳಿವು ಸಿಗದೇ ಇದ್ದಾಗ ದರೋಡೆ ಕೃತ್ಯದಲ್ಲಿ ನಿರತರಾಗಿರುವ ಕಾಸರಗೋಡಿನ ಕುಖ್ಯಾತ ಕ್ರಿಮಿನಲ್ ಗಳನ್ನು ಗುರಿಯಾಗಿಸಿ ತನಿಖೆ ನಡೆಸಿದಾಗ, ಕೃತ್ಯ ಬೆಳಕಿಗೆ ಬಂದಿತ್ತು. ಸೆ.6ರಂದು ನಸುಕಿನ ವೇಳೆಗೆ ಪಡುವನ್ನೂರು ಗ್ರಾಮದ ಕುದ್ಕಾಡಿಯ ಕಾಂಗ್ರೆಸ್ ಮುಖಂಡ ಗುರುಪ್ರಸಾದ್ ರೈ ಮನೆಯಲ್ಲಿ ದರೋಡೆ ಕೃತ್ಯ ನಡೆದಿತ್ತು.


ಪ್ರಕರಣದ ತನಿಖೆಗಾಗಿ ಸರ್ಕಲ್ ಇನ್ಸ್ ಪೆಕ್ಟರ್ ರವಿ ಬಿಎಸ್ ನೇತೃತ್ವದಲ್ಲಿ ಅಪರಾಧ ಪತ್ತೆಯಲ್ಲಿ ಪಳಗಿದ್ದ ಸಿಬಂದಿಯನ್ನು ಒಳಗೊಂಡ ನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ., ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಸ್‌ .ಎಂ. ಇವರುಗಳ ನಿರ್ದೇಶನದಂತೆ ಮತ್ತು ಪುತ್ತೂರು ಉಪ-ವಿಭಾಗದ ಪೊಲೀಸ್ ಉಪ ಅಧೀಕ್ಷಕ ಡಾ. ಗಾನ ಪಿ, ಕುಮಾರ್ ರವರ ಮಾರ್ಗದರ್ಶನದ ಮೇರೆಗೆ ವಿಶೇಷ ಪತ್ತೆ ತಂಡದ ಅತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ರವರ ನೇತೃತ್ವದಲ್ಲಿ ಪುತ್ತೂರು ಸಂಚಾರ ಪೊಲೀಸ್ ಪಿಎಸ್‌ಐ ಉದಯರವಿ ಎಂ ವೈ, ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಧನಂಜಯ ಬಿ.ಸಿ., ಉಪ್ಪಿನಂಗಡಿ ಠಾಣಾ ಪಿಎಸ್‌ಐ ರುಕ್ಮ ನಾಯ್ಕ್, ಉಪ್ಪಿನಂಗಡಿ ಠಾಣಾ ಹೆಚ್.ಸಿ. ಹರೀಶ್ಚಂದ್ರ, ವೇಣೂರು ಠಾಣಾ ಹೆಚ್.ಸಿ. ಪ್ರವೀಣ್ ಮೂರುಗೋಳಿ, ವಿಟ್ಲ ಪೊಲೀಸ್ ಠಾಣಾ ಹೆಚ್ ಸಿ ಉದಯ ರೈ, ಪುತ್ತೂರು ಗ್ರಾಮಾಂತರ ವೃತ್ತ ಕಛೇರಿಯ ಹೆಚ್ ಸಿ ಅಬ್ದುಲ್ ಸಲೀಂ, ಪಿಸಿ, ಜಗದೀಶ್ ಅತ್ತಾಜೆ, ಎ.ಹೆಚ್.ಸಿ ಹರೀಶ್, ಪುತ್ತೂರು ಗ್ರಾಮಾಂತರ ಠಾಣಾ ಎಎಸ್‌ಐ ಮುರುಗೇಶ್, ಹೆಚ್.ಸಿ ಪ್ರವೀಣ್ ರೈ, ಹೆಚ್.ಸಿ ಅದ್ರಾಮ್, ಹೆಚ್.ಸಿ ಬಾಲಕೃಷ್ಣ, ಹೆಚ್.ಸಿ ಹರೀಶ್, ಹೆಚ್.ಸಿ ಪ್ರಶಾಂತ್, ಪಿಸಿ ಮುನಿಯ ನಾಯ್ಕ, ಪುತ್ತೂರು ಸಂಚಾರ ಠಾಣಾ ಹೆಚ್.ಸಿ ಪ್ರಶಾಂತ್ ರೈ, ಪುತ್ತೂರು ನಗರ ಠಾಣಾ ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಬಂಟ್ವಾಳ ಸಂಚಾರ ಠಾಣಾ ಪಿಸಿ ವಿವೇಕ್, ಪಿಸಿ ಕುಮಾರ್ ಕೆ, ಜಿಲ್ಲಾ ಗಣಕಯಂತ್ರ ವಿಭಾಗದ ಎಹೆಚ್‌ ಸಂಪತ್‌ ಕುಮಾರ್, ಸಿಪಿಸಿ ದಿವಾಕರ್, ವಾಹನ ಚಾಲಕ ಪ್ರವೀಣ್ ಹಾಗೂ ಪುತ್ತೂರು ಗ್ರಾಮಾಂತರ ಠಾಣೆಯ ಎಲ್ಲಾ ಅಧಿಕಾರಿ & ಸಿಬ್ಬಂದಿಗಳು ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಪುತ್ತೂರು : ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ

Posted by Vidyamaana on 2023-11-09 16:48:21 |

Share: | | | | |


ಪುತ್ತೂರು : ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ

ಪುತ್ತೂರು: ಖ್ಯಾತ ಹುಲಿವೇಷ ತಂಡದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳು ಗಾಂಜಾ ಸೇವಿಸಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದು ದ. ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ತಿಳಿಸಿದ್ದಾರೆ.

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ. ಸದ್ಯ ಅಪಘಾತದ ವಿಚಾರಕ್ಕೆ ಹತ್ಯೆಯಾಗಿದೆ ಎಂಬುದು ಸದ್ಯದ ತನಿಖೆಯಿಂದ ಹೊರ ಬಂದಿರುವ ಮಾಹಿತಿಯಾಗಿದ್ದು, ಹಳೇ ವೈಷಮ್ಯದಿಂದ ಹತ್ಯೆ ನಡೆಯಿತಾ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದರು.

ಇನ್ನು ಅಕ್ಷಯ್ ಕಲ್ಲೇಗ ಓರ್ವ ರೌಡಿ ಶೀಟರ್ ಆತನ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಆರೋಪಿಗಳೆಲ್ಲರೂ ಅಕ್ಷಯ್ ಕಲ್ಲೇಗನ ಪರಿಚಯಸ್ಥರೇ ಆಗಿದ್ದರು. ಹತ್ಯೆಯ ಹಿಂದೆ ಬೇರೇ ಏನಾದರು ಕಾರಣವಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.



Leave a Comment: