ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಮೇ 8ರಂದು ನಟಿ ರಮ್ಯಾ ಉಪಸ್ಥಿತಿಯಲ್ಲಿ ಕಾಂಗ್ರೆಸ್ ರೋಡ್ ಶೋ.

Posted by Vidyamaana on 2023-05-06 12:25:24 |

Share: | | | | |


ಮೇ 8ರಂದು ನಟಿ ರಮ್ಯಾ ಉಪಸ್ಥಿತಿಯಲ್ಲಿ ಕಾಂಗ್ರೆಸ್ ರೋಡ್ ಶೋ.

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮೇ 8ರಂದು ಸಂಜೆ 3.30ಕ್ಕೆ ಬೊಳುವಾರಿನಿಂದ ದರ್ಬೆವರೆಗೆ ರೋಡ್ ಶೋ ನಡೆಯಲಿದ್ದು, ನಟಿ ರಮ್ಯಾ ಭಾಗವಹಿಸಲಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ರೀತಿಯ ರೋಡ್ ಶೋ ವಿಟ್ಲ ಹಾಗೂ ಉಪ್ಪಿನಂಗಡಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ನನ್ನ ಬೂತ್-ನಾನು ಅಭ್ಯರ್ಥಿ

ಕಾಂಗ್ರೆಸ್ ಪಕ್ಷದ ವತಿಯಿಂದ “ನನ್ನ ಬೂತ್-ನಾನು ಅಭ್ಯರ್ಥಿ” ಎಂಬ ಶಿರೋನಾಮೆಯಡಿ ತಾಲೂಕಿನ 220 ಬೂತ್ಗಳಲ್ಲಿ ಮತ ಪ್ರಚಾರ ಕಾರ್ಯಕ್ರಮ ಶನಿವಾರದಿಂದ ಹಮ್ಮಿಕೊಳ್ಳಲಾಗಿದೆ. ಸುಮಾರು 5 ಸಾವಿರ ಕಾರ್ಯಕರ್ತರು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹೇಳಿದರು.

ಈಗಾಗಲೇ ಬಿಡುಗಡೆ ಮಾಡಲಾದ ಪ್ರಣಾಳಿಕೆಯಂತೆ 200 ಯೂನಿಟ್ ಉಚಿತ ವಿದ್ಯುತ್, 10 ಕೆ.ಜಿ.ಅಕ್ಕಿ, ಉಚಿತ ಬಸ್ ಪಾಸ್ ನೀಡಿಕೆ ಸಹಿತ ಪುತ್ತೂರಿನಲ್ಲಿ ಬಹುದಿನಗಳ ಬೇಡಿಕೆಯಾದ ಮೆಡಿಕಲ್ ಕಾಲೇಜು ಸ್ಥಾಪನೆ ಮುಂತಾದವುಗಳನ್ನೊಳಗೊಂಡು ಕಾಂಗ್ರೆಸ್ ಹಿಂದೆ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಮನೆ ಮನೆ ತಲುಪಿಸುವ ಕಾರ್ಯ ಮಾಡಲಾಗಿದೆ. ಈಗಾಗಲೇ ಒಲವು ಕಂಡಿದ್ದು, ಬಹುಮತದಿಂದ ನನ್ನನ್ನು ಗೆಲ್ಲಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಅನಿಮಲ್ ಹಬ್:

ಈಗಾಗಲೇ ಕೊಯಿಲದಲ್ಲಿ ಪಶು ವೈದ್ಯಕೀಯ ಕಾಲೇಜು ಕಟ್ಟಡಗಳಿದ್ದು, 240 ಹುದ್ದೆಗಳು ಖಾಲಿ ಇದೆ. ಇವುಗಳನ್ನು ತುಂಬುವುದರ ಜತೆಗೆ ಕೊಯಿಲದಲ್ಲಿ ಕೋಳಿ ಆಡು ಸಾಕಣೆಗೆ ಹೆಚ್ಚಿನ ಒತ್ತು ನೀಡಿ ಎನಿಮಲ್ ಹಬ್‍ ನ್ನಾಗಿ ಪರಿವರ್ತಿಸಲಾಗುವುದು ಎಂದರು. 

ಉಳಿದಂತೆ ಡ್ರೈನೆಜ್ ವ್ಯವಸ್ಥೆ, ಕಟ್ ಕನ್ವರ್ಷನ್, ಸಿಂಗಲ್ ಲೇ ಓಟ್ ಅಪ್ರೂವಲ್  ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದ ಅವರು, ತಾಲೂಕಿನಲ್ಲಿ ಈಗಾಗಲೇ 3800 94 ಸಿ. ಅಕ್ರಮ-ಸಕ್ರಮ ಕಡತ ವಿಲೇವಾರಿಗೆ ಬಾಕಿಯಿದ್ದು, ಈ ಕುರಿತು ಪ್ರತೀ ಗ್ರಾಮಗಳಲ್ಲಿ ಸಭೆ ನಡೆಸಿ ಹಕ್ಕುಪತ್ರವನ್ನು ಮನೆ ಮನೆ ತಲುಪಿಸುವ ಕಾರ್ಯವನ್ನು ನಾನು ಗೆದ್ದು ಬಂದಲ್ಲಿ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. 

ಮಾನನಷ್ಟ ಮೊಕದ್ದಮೆ:

ಈಗಾಗಲೇ ನನ್ನ ಮೇಲೆ ಆರೋಪ ಹೊರಿಸಿರುವ ತಮ್ಮಣ್ಣ ಶೆಟ್ಟಿಯವರ ಮೇಲೆ ಕೇಸು ದಾಖಲಿಸಿದ್ದು, ಮೂರು ಕೋಟಿ ಮಾನನಷ್ಟ ಮೊಕ್ಕದ್ದಮೆ ಹಾಕಲಾಗಿದೆ ಎಂದರು.

ಹೈಕಮಾಂಡ್ ಅಭಿಪ್ರಾಯದಂತೆ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಕುರಿತು ಸೇರಿಸಿದ್ದಾರೆ.  ಈ ಕುರಿತು ನಮ್ಮ ವಿಚಾರವನ್ನು ಮುಂದಿನ ದಿನಗಳಲ್ಲಿ ತಿಳಿಸುವ ಕೆಲಸವನ್ನು ನಾವು ಮಾಡುತ್ತೇವೆ ಎಂದರು. 

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಕ್ತಾರ ಅಮಲ ರಾಮಚಂದ್ರ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ., ಚುನಾವಣಾ ಏಜೆಂಟ್ ಭಾಸ್ಕರ ಗೌಡ ಕೋಡಿಂಬಾಳ ಉಪಸ್ಥಿತರಿದ್ದರು.

ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

Posted by Vidyamaana on 2023-02-08 10:38:03 |

Share: | | | | |


ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

ಪುತ್ತೂರು: ತನ್ನ ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಸಂಭ್ರಮಕ್ಕೆ ಚಾಲನೆ ನೀಡಲು ಕೇಂದ್ರ ಗೃಹ ಖಾತೆಯ ಸಚಿವರು ಹಾಗೂ ಸಹಕಾರಿ ಸಚಿವರೂ ಆದ ಅಮಿತ್ ಶಾ ಅವರು ಪುತ್ತೂರಿಗೆ ಆಗಮಿಸುತ್ತಾರೆ. ಅಲ್ಲದೆ ಪ್ರತಿಷ್ಟಿತ ಕ್ಯಾಂಪ್ಕೋ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ), ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಪುತ್ತೂರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆವರಣದಲ್ಲಿ ಫೆಬ್ರವರಿ 10 ಶುಕ್ರವಾರದಿಂದ 12 ಆದಿತ್ಯವಾರದವರೆಗೆ 3 ದಿನಗಳ ಕಾಲ ನಡೆಯಲಿರುವ 5ನೇ ಬೃಹತ್ ಕೃಷಿಯಂತ್ರ ಮೇಳ-2023 ಮತ್ತು ಕನಸಿನ ಮನೆ ಪ್ರದರ್ಶನವೂ ನಡೆಯಲಿದೆ.ಇವೆರಡೂ ಕಾರ್ಯಕ್ರಮಗಳ ಬಗ್ಗೆ ರೈತಾಪಿ ವರ್ಗಕ್ಕೆ ಮತ್ತು ಜನತೆಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಕ್ಯಾಂಪ್ಕೋ ಸಿಬ್ಬಂದಿಗಳು ಮತ್ತು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಂದ ಜಾಥಾ ಕಾರ್ಯಕ್ರಮವು ನಡೆಯಿತು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿಯವರು ಕ್ಯಾಂಪ್ಕೋ ಚಾಕಲೇಟ್ ಕಾರ್ಖಾನೆಯ ಮುಂದೆ ಜಾಥಾಕ್ಕೆ ಚಾಲನೆ ನೀಡಿದರು.ದರ್ಬೆ ವೃತ್ತದಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಸೇರಿಕೊಂಡು ಜಾಥಾವನ್ನು ಮುನ್ನಡೆಸಿದರು. ಜಾಥಾವು ದರ್ಭೆಯಿಂದ ಮುಖ್ಯ ರಸ್ತೆಯಲ್ಲಿ ಸಾಗಿ ಬಸ್ಸುನಿಲ್ದಾಣ, ವೆಂಕಟ್ರಮಣ ದೇವಳ, ಅಂಚೆಕಛೇರಿಯ ಮುಂಬದಿಯಿಂದ ಶ್ರೀಧರ ಭಟ್ ಅವರ ಅಂಗಡಿಯ ಮುಂದಾಗಿ ಕಿಲ್ಲೆ ಮೈದಾನದಲ್ಲಿ ಸಮಾಪನಗೊಂಡಿತು.ಯಂತ್ರಮೇಳ ಮತ್ತು ಸುವರ್ಣ ಮಹೋತ್ಸವಾಚರಣೆಯ ಕರಪತ್ರಗಳನ್ನು ಹಂಚಲಾಯಿತು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ವ್ಯವಸ್ಥಾಪಕ ನಿರ್ದೇಶಕ ಎಚ್.ಎಮ್.ಕೃಷ್ಣ ಕುಮಾರ್, ನಿರ್ದೇಶಕರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ, ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಕೋಶಾಧಿಕಾರಿ ಮುರಳೀಧರ ಭಟ್, ಯಂತ್ರಮೇಳದ ಸಂಯೋಜಕ ರವಿಕೃಷ್ಣ.ಡಿ.ಕಲ್ಲಾಜೆ, ನಿರ್ದೇಶಕರಾದ ಸಂತೋಶ್ ಕುತ್ತಮೊಟ್ಟೆ, ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

ಬೀಚ್ ನಲ್ಲಿ ಆಟವಾಡುತ್ತಿದ್ದ ವೇಳೆ ಮೂವರು ಮಕ್ಕಳ ಮೇಲೆ ಬಡಿದ ಸಿಡಿಲು; ಆಘಾತಕಾರಿ ವಿಡಿಯೋ ವೈರಲ್

Posted by Vidyamaana on 2024-06-02 18:29:49 |

Share: | | | | |


ಬೀಚ್ ನಲ್ಲಿ ಆಟವಾಡುತ್ತಿದ್ದ ವೇಳೆ ಮೂವರು ಮಕ್ಕಳ ಮೇಲೆ ಬಡಿದ ಸಿಡಿಲು; ಆಘಾತಕಾರಿ ವಿಡಿಯೋ ವೈರಲ್

ಕೆಲವೊಮ್ಮೆ ಪ್ರಾಕೃತಿಕವಾಗಿ ಎದುರಾಗುವ ಆಘಾತಕಾರಿ ಸನ್ನಿವೇಶಗಳು ಜೀವನವನ್ನೇ ಕಸಿದುಕೊಳ್ಳುತ್ತವೆ. ಇದೀಗ ಅದೇ ರೀತಿಯ ಘಟನೆಯೊಂದು ನಡೆದಿದ್ದು, ಬೀಚ್‌ನಲ್ಲಿ ಖುಷಿಖುಷಿಯಾಗಿ ಆಟವಾಡುತ್ತಿದ್ದ ಮೂವರು ಮಕ್ಕಳ ಮೇಲೆ ಸಿಡಿಲು ಬಡಿದಿದೆ. ಈ ಆಘಾತಕಾರಿ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.ಮಳೆಗಾಲದಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಮಿಂಚುಗಳು ಬರುವುದು ಸಾಮಾನ್ಯ. ಆದರೆ ಗಾಳಿ ಮಳೆಯೊಂದಿಗೆ ಬರುವ ಭಯಾನಕ ಗುಡುಗು ಮಿಂಚುಗಳು ಎದೆಯಲ್ಲಿ ನಡುಕ ಹುಟ್ಟಿಸುವುದು ಮಾತ್ರವಲ್ಲದೆ, ಅನೇಕ ಪ್ರಾಣ ಹಾನಿಯನ್ನೂ ಕೂಡಾ ಉಂಟುಮಾಡುತ್ತದೆ. ಹೀಗೆ ಸಿಡಿಲು ಬಡಿದು ಪ್ರಾಣಿ-ಪಕ್ಷಿಗಳು, ಮನುಷ್ಯರು ಸಾವನ್ನಪ್ಪಿದ ಅನೇಕ ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದೇ ಭೀಕರ ಘಟನೆಯೊಂದು ನಡೆದಿದ್ದು, ಬೀಚ್‌ನಲ್ಲಿ ಸಂತೋಷವಾಗಿ ಆಟವಾಡುತ್ತಿದ್ದ ಮೂವರ ಮಕ್ಕಳ ಮೇಲೆ ಇದ್ದಕ್ಕಿದ್ದಂತೆ ಸಿಡಿಲು ಬಡಿದಿದೆ. ಈ ಆಘಾತಕಾರಿ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ

ಪುತ್ತೂರು ಕ್ಷೇತ್ರದಿಂದ ಗೌಡ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡಿ :ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಆಗ್ರಹ

Posted by Vidyamaana on 2023-04-11 03:00:56 |

Share: | | | | |


ಪುತ್ತೂರು ಕ್ಷೇತ್ರದಿಂದ ಗೌಡ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡಿ :ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಆಗ್ರಹ

ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ದ.ಕ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ಎರಡು ಸ್ಥಾನಗಳಲ್ಲಿ ಒಕ್ಕಲಿಗ ಗೌಡರಿಗೆ ಪ್ರಾತಿನಿಧ್ಯ ನೀಡಬೇಕು. ಅದರಲ್ಲೂ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗಳನ್ನು ಪರಿಗಣಿಸಲೇಬೇಕು ಎಂದು ಅವರು ಆಗ್ರಹಿಸಿದರು.

ಪುತ್ತೂರು ಕ್ಷೇತ್ರದಲ್ಲಿ ಶಾಸಕರಾಗಿರುವ ನಮ್ಮ ಸಮುದಾಯದ ಸಮರ್ಥ ನಾಯಕ ಸಂಜೀವ ಮಠಂದೂರು ಅವರಿಗೆ ಈ ಬಾರಿ ಟಿಕೆಟ್ ಇಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇದು ನಿಜವೇ ಆಗಿದ್ದಲ್ಲಿ ಮಠಂದೂರು ಅವರಿಗೆ ಟಿಕೆಟ್ ದೊರೆಯದಿರಲು ಕಾರಣವೇನುಎಂದು ಅವರು ಪ್ರಶ್ನಿಸಿದರು. ಜಿಲ್ಲೆಯಲ್ಲಿ ಸುಮಾರು 3.75 ಲಕ್ಷ ಮತದಾರರಿದ್ದು, ಈ ಪೈಕಿ ಪುತ್ತೂರಿನಲ್ಲಿ ಅತೀ ಹೆಚ್ಚು ಗೌಡ ಸಮುದಾಯದ ಮತದಾರರಿದ್ದಾರೆ. ಆದ್ದರಿ0ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಾದರೂ ಒಂದು ಸ್ಥಾನ ನೀಡಬೇಕು ಎಂದು ಈ ಹಿಂದೆಯೇ ವಿವಿಧ ರಾಜಕೀಯ ಪಕ್ಷಗಳಿಗೆ ಒತ್ತಾಯಿಸಲಾಗಿತ್ತು.ಆದರೆ ಇತ್ತೀಚಿನ ವರದಿಗಳನ್ನು ಗಮನಿಸಿದಾಗ ಸಮುದಾಯದ ಯಾವೊಬ್ಬ ನಾಯಕರ ಹೆಸರೂ ಪ್ರಸ್ತಾಪವಾಗಿರುವುದು ಕಂಡು ಬಂದಿಲ್ಲ.ಪುತ್ತೂರಿನಲ್ಲಿ ಗೌಡ ಸಮುದಾಯದವರಿಗೆ ಸ್ಥಾನ ಕಲ್ಪಿಸದಿದ್ದಲ್ಲಿ ಮೇ 10ರಂದು ನಡೆಯುವ ಚುನಾವಣೆ ಮತ್ತು 2024ರ ಲೋಕಸಭಾ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಅವರು ಎಚ್ಚರಿಸಿದರು.ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ನಿರ್ದೇಶಕ ಪದ್ಮನಾಭ ಗೌಡ, ಗುರುದೇವ್‌ ಯು.ಬಿ. ಉಪಸ್ಥಿತರಿದ್ದರು.

ಪ್ರಾಮಾಣಿಕರಿಗೆ ಇರಿಸು- ಮುರುಸು

ಪಕ್ಷಗಳಲ್ಲಿ ಹಲವು ವರ್ಷಗಳಿಂದ ಪ್ರಾಮಾಣಿಕವಾಗಿ ಸಂಘಟನೆ ಮಾಡುತ್ತಿರುವವರಿಗೆ ಚುನಾವಣೆ ಸಂದರ್ಭದಲ್ಲಿ ಜಾತಿಯಾಧಾರದ ಮೇಲೆ ಟಿಕೆಟ್ ಕೇಳುವವರಿಂದಾಗಿ ಇರಿಸು ಮುರುಸು ಉಂಟಾಗಿದೆ. ಹಲವು ವರ್ಷಗಳ ಕಾಲ ಪಕ್ಷವನ್ನ ಸಂಘಟನೆ ಮಾಡಿ, ಬಲಿಷ್ಠಗೊಳಿಸಿದ ಕಾರ್ಯಕರ್ತರು ಒಂದೆಡೆ ಟಿಕೆಟ್‌ಗಾಗಿ ನಿಷ್ಠೆಯಿಂದ ಪ್ರಯತ್ನ ನಡೆಸುತ್ತಿದ್ದರೆ, ಇನ್ನೊಂದೆಡೆ ತಮ್ಮ ಸಮುದಾಯದವರಿಗೆ ಟಿಕೆಟ್ ನೀಡಬೇಕೆಂದು ಜಾತಿಯ ಆಧಾರದ ಮೇಲೆ ಒತ್ತಡ ಹೇರುವವರಿಂದಾಗಿ ಪ್ರಾಮಾಣಿಕರಿಗೆ ಬೇಸರ ಉಂಟಾಗಿದೆ.


ಬೆಂಗಳೂರು :ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ : ಓರ್ವ ಶಂಕಿತನನ್ನು ವಶಪಡಿಸಿಕೊಂಡ ಪೊಲೀಸರು

Posted by Vidyamaana on 2024-03-02 07:21:16 |

Share: | | | | |


ಬೆಂಗಳೂರು :ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ : ಓರ್ವ ಶಂಕಿತನನ್ನು ವಶಪಡಿಸಿಕೊಂಡ ಪೊಲೀಸರು

ಬೆಂಗಳೂರು : ನಗರದ ರಾಮೇಶ್ವರಂ ಕೆಫೆ ಹೊಟೆಲ್ ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.ಬೆಳಗ್ಗೆ ಸುಮಾರು 11.40ರ ವೇಳೆಗ ಆಗಂತುಕ ರಾಮೇಶ್ವರಂ ಕೆಫೆ ಬಂದಿದ್ದಾನೆ.

ಹೆಗಲಿಗೆ ಸೈಡ್ ಬ್ಯಾಗ್, ತಲೆಗೆ ಕ್ಯಾಪ್ ಹಾಕಿಕೊಂಡು ರಾಮೇಶ್ವರಂ ಕೆಫೆ ಪ್ರವೇಶಿಸಿದ್ದಾನೆ. ಹೊಟೇಲ್ ನಲ್ಲಿ ಸ್ವಲ್ಪ ಹೊತ್ತು ಗಮನಿಸಿ ಕಾಲ ಕಳೆದಿದ್ದಾನೆ. ನಂತರ ತಿಂಡಿ ತಿಂದು ಬ್ಯಾಗ್ ವೊಂದನ್ನ ಹ್ಯಾಂಡ್ ವಾಷ್ ಬಳಿ ಇರಿಸಿದ್ದಾನೆ. ಅಲ್ಲಿಂದ ಕೆಫೆ ಸಮೀಪದಲ್ಲಿರೋ ನಿಲ್ದಾಣದಿಂದ ಬಸ್ ಹತ್ತಿ ತೆರಳಿರೋ ಸಾಧ್ಯೆತೆಗಳಿವೆ.ಬ್ಯಾಗ್ ಇಟ್ಟು ಒಂದು ಘಂಟೆಯ ನಂತರ ಬ್ಲಾಸ್ಟ್ ಆಗಿದ್ದು, ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ. ಆರೋಪಿ ಯಾರೆಂದು ಆಲ್ ಮೋಸ್ಟ್ ಗೊತ್ತಾಗಿದೆ. ಆರೋಪಿ ಪತ್ತೆಗಾಗಿ ಸಿಸಿಬಿಯಿಂದ ಕಾರ್ಯಾಚರಣೆ ನಡೆಸಿದ್ದು, ಕೆಲವೇ ಘಂಟೆಗಳಲ್ಲಿ ಆರೋಪಿಯನ್ನ ಬಂಧನ ಮಾಡಲಾಗತ್ತದೆ ಎಂದು ಅವರು ಹೇಳಿದರು.

ಶಂಕಿತ 28-30 ವರ್ಷ ವಯಸ್ಸಿನವನಾಗಿದ್ದು, BMTC ಬಸ್‌ನಲ್ಲಿ ರಾಮೇಶ್ವರಂ ಕೆಫೆಗೆ ಬಂದು ಕೂಪನ್ ಖರೀದಿಸಿ, ರವಾ ಇಡ್ಲಿ ಆರ್ಡರ್ ಮಾಡಿ, ಬ್ಯಾಗ್ ಇಟ್ಟು ಹೊರಟುಹೋಗಿದ್ದಾನೆ. ಶೋಧ ಕಾರ್ಯಕ್ಕಾಗಿ 8 ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆತನ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿವೆ.

ಉಪ್ಪಿನಂಗಡಿ:ಹೆರಿಗೆ ವೇಳೆ ತಾಯಿ ಮೃತಪಟ್ಟ ಬೆನ್ನಲ್ಲೇ ಹಸುಗೂಸು ಮೃತ್ಯು

Posted by Vidyamaana on 2023-06-23 01:40:56 |

Share: | | | | |


ಉಪ್ಪಿನಂಗಡಿ:ಹೆರಿಗೆ ವೇಳೆ ತಾಯಿ ಮೃತಪಟ್ಟ ಬೆನ್ನಲ್ಲೇ ಹಸುಗೂಸು ಮೃತ್ಯು

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ ಬೆನ್ನಿಗೆ ಅವರ ಹಸುಕೂಸು ಗುರುವಾರ ಮುಂಜಾನೆ ಮೃತಪಟ್ಟಿದೆ.


ಭವ್ಯರವರು ತನ್ನ 3ನೇ ಹೆರಿಗೆಗಾಗಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಮಂಗಳವಾರ ರಾತ್ರಿ ಅವರು ಗಂಡು ಜನ್ಮ ನೀಡಿದ್ದು, ಹೆರಿಗೆಯಾಗುತ್ತಲೇ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದರು. ಜನಿಸಿದ ಮಗುವನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮುಂಜಾನೆ ಮಗುವೂ ಮೃತಪಟ್ಟಿದೆ ಎನ್ನಲಾಗಿದೆ.

Recent News


Leave a Comment: