KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ಬಂಟ್ವಾಳ: ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ

Posted by Vidyamaana on 2024-05-06 07:15:02 |

Share: | | | | |


ಬಂಟ್ವಾಳ: ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ

ಬಂಟ್ವಾಳ: ತಾಲ್ಲೂಕಿನ ನಾವೂರು ಎಂಬಲ್ಲಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಇಂದು ಸಂಜೆ ಮೃತಪಟ್ಟ‌ ದುರಂತ ನಡೆದಿದೆ.

ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಂ ನಾಶಿಯಾ (14 ) ಮೃತ ಬಾಲಕಿಯರು. ಬಾಲಕಿಯರು ನಾವೂರು ಸಮೀಪದ ಮೈಂದಾಳದಲ್ಲಿ ಸಂಬಂಧಿಕರ ಮನೆಗೆ ಬಂದಿದ್ದರು. ಮನೆಯವರೊಂದಿಗೆ ಸಂಜೆ ಮಕ್ಕಳು ಸ್ಥಳೀಯ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ.

ರಾಜ್ಯಾದ್ಯಂತ ವ್ಯಾಪಿಸುತ್ತಿದೆ ಸಾಂಕ್ರಾಮಿಕ ಡೆಂಗ್ಯೂ - ಎಚ್ಚರ ಇರಲಿ : ರಾಜ್ಯದ ಜನರಿಗೆ ಸಿಎಂ ಮನವಿ

Posted by Vidyamaana on 2023-09-11 16:32:51 |

Share: | | | | |


ರಾಜ್ಯಾದ್ಯಂತ ವ್ಯಾಪಿಸುತ್ತಿದೆ ಸಾಂಕ್ರಾಮಿಕ ಡೆಂಗ್ಯೂ - ಎಚ್ಚರ ಇರಲಿ : ರಾಜ್ಯದ ಜನರಿಗೆ ಸಿಎಂ ಮನವಿ

ಬೆಂಗಳೂರು : ಕಳೆದ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಅತ್ಯಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.ರಾಜ್ಯಾದ್ಯಂತ ಕಳೆದ ಕೆಲವು ದಿನಗಳಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಹೀಗಾಗಿ ಎಲ್ಲರೂ ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸುವಂತೆ ಅವರು ಹೇಳಿದ್ದಾರೆ.ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಛಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಡೆಂಗ್ಯೂ ಬಗ್ಗೆ ಭಯ ಬೇಡ, ಆದರೆ ಜಾಗೃತೆ ವಹಿಸುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕಮಲ ಪಾಳಯಕ್ಕೆ ಶಾಕ್ ನೀಡಿದ ಸರ್ವೆ! - ಈ ಸರ್ತಿ ಬಿಜೆಪಿಗ್ ರಾಜ್ಯೊಡ್ ಎನ್ಮ ಸೀಟ್ ಮಾತ್ರಗೆ..!!

Posted by Vidyamaana on 2024-04-16 14:44:07 |

Share: | | | | |


ಕಮಲ ಪಾಳಯಕ್ಕೆ ಶಾಕ್ ನೀಡಿದ ಸರ್ವೆ! - ಈ ಸರ್ತಿ ಬಿಜೆಪಿಗ್ ರಾಜ್ಯೊಡ್ ಎನ್ಮ ಸೀಟ್ ಮಾತ್ರಗೆ..!!

ಬೆಂಗಳೂರು; ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಕೂಟ 28 ಕ್ಕೆ 28 ಸೀಟೂ ಗೆಲ್ಲಬೇಕೆಂಬ ಪಣ ತೊಟ್ಟಿದೆ.. ಇತ್ತ ಕಾಂಗ್ರೆಸ್‌ ನಾವು ಕನಿಷ್ಟ 20 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದೆ.. ಆದ್ರೆ ಚುನಾವಣಾ ಪೂರ್ವ ಸಮೀಕ್ಷೆಗಳು ಮಾತ್ರ ದಿನಕ್ಕೊಂದು ಭವಿಷ್ಯ ಹೇಳುತ್ತಿವೆ..

ಒಂದು ಸಮೀಕ್ಷೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತೆ ಅಂತ ಹೇಳಿದ್ರೆ, ಇನ್ನೊಂದು ಸಮೀಕ್ಷೆ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆಲ್ಲುತ್ತೆ ಎಂದು ಹೇಳುತ್ತಿವೆ.

ಹಿಂದೆಂದೂ ಇಲ್ಲದ ರೀತಿ ಸಮೀಕ್ಷೆ;

ಯಾವುದೇ ಸಮೀಕ್ಷೆ ಆದರೂ ಒಂದೆರಡು ಸೀಟು ವ್ಯತ್ಯಾಸ ಇರುತ್ತದೆ.. ಫಲಿತಾಂಶವೇ ಉಲ್ಟಾ ಆಗುವ ರೀತಿಯಲ್ಲಿ ಯಾರೂ ಸಮೀಕ್ಷೆ ಮಾಡೋದಿಲ್ಲ.. ಆದ್ರೆ ಕರ್ನಾಟಕದಲ್ಲಿ ಈ ಬಾರಿ ಅಂತಹ ಸಮೀಕ್ಷಾ ವರದಿಗಳು ಹೊರಬರುತ್ತಿವೆ.. ಕೆಲ ಸಮೀಕ್ಷೆಗಳು ಬಿಜೆಪಿ ಹಾಗೂ ಜೆಡಿಎಸ್‌ 20-24 ಸ್ಥಾನಗಳವರೆಗೆ ಗೆಲ್ಲುತ್ತೆ ಎಂದು ಹೇಳುತ್ತಿವೆ.. ಆದ್ರೆ ಕೆಲವು ಸಂಸ್ಥೆಗಳು ನಡೆಸಿದ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಅತಿಹೆಚ್ಚು ಸ್ಥಾನ ಗಳಿಸುತ್ತೆ ಎಂದು ಹೇಳುತ್ತಿವೆ.. ಹೀಗಾಗಿ, ಜನಕ್ಕೆ ಹಾಗೂ ರಾಜಕೀಯ ಪಕ್ಷಗಳಿಗೆ ಇದು ಸಾಕಷ್ಟು ಕನ್ಪ್ಯೂಸ್‌ ಮಾಡುತ್ತಿದೆ.

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಿಯಾ ಕಾರು ; ಚಿಕ್ಕಮಗಳೂರು ಬಟ್ಟೆ ಅಂಗಡಿ ವ್ಯಾಪಾರಿ ದಿನೇಶ್ ಮೃತ್ಯು

Posted by Vidyamaana on 2024-05-23 19:28:47 |

Share: | | | | |


ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಿಯಾ ಕಾರು ; ಚಿಕ್ಕಮಗಳೂರು ಬಟ್ಟೆ ಅಂಗಡಿ ವ್ಯಾಪಾರಿ ದಿನೇಶ್ ಮೃತ್ಯು

ಚಿಕ್ಕಮಗಳೂರು, ಮೇ 23: ಚಾಲಕನ ನಿಯಂತ್ರಣ ತಪ್ಪಿ ಕಿಯಾ ಕಾರು ಕೆರೆಗೆ ಬಿದ್ದ ಘಟನೆ ಅಂಬಳೆ ಕೆರೆಯಲ್ಲಿ ನಡೆದಿದೆ. ದಿನೇಶ್ (33) ಕಾರ್ನೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಾರ್ನಲ್ಲಿದ್ದ ಮತ್ತೊರ್ವ ಸಂತೋಷ್ ಪಾರಾಗಿದ್ದಾರೆ.

ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ಇಬ್ಬರು ಕಾರಿನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗಿನ ಜಾವ ಅವರಿದ್ದ ಕಾರು ಏಕಾಏಕಿ ಕೆರೆಗೆ ಬಿದ್ದಿದೆ. ಪರಿಣಾಮ ದಿನೇಶ್ ಅಲ್ಲೇ ಸಾವನ್ನಪ್ಪಿದ್ದಾರೆ.

ಸಾಜ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರವಾಗಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ

Posted by Vidyamaana on 2023-04-30 06:05:43 |

Share: | | | | |


 ಸಾಜ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರವಾಗಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು: ವಿಧಾನ ಸಭಾ ಚುನಾವಣೆಯ ಪ್ರಯುಕ್ತ ಬಿಜೆಪಿ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ರವರ ಪರವಾಗಿ ಸಾಜ ವಾರ್ಡ್ ನ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರದ ವಠಾರ 105ರಲ್ಲಿ ಮಹಾ ಸಂಪರ್ಕ ಅಭಿಯಾನ ಮತ್ತು ಪ್ರಣಾಳಿಕೆ ನೀಡುವ ಕಾರ್ಯಕ್ರಮ ಕ್ಕೆ ಚಾಲನೆ ನೀಡಲಾಯಿತು.

ಕಾಸರಗೋಡು: ಅಪಘಾತದ ಗಾಯಾಳು ಇಬ್ರಾಹಿಂ ಖಲೀಲ್ ಮೃತ್ಯು

Posted by Vidyamaana on 2023-10-03 13:42:04 |

Share: | | | | |


ಕಾಸರಗೋಡು: ಅಪಘಾತದ ಗಾಯಾಳು ಇಬ್ರಾಹಿಂ ಖಲೀಲ್ ಮೃತ್ಯು

ಕಾಸರಗೋಡು: ಸ್ಕೂಟರ್ ಮತ್ತು ಖಾಸಗಿ ಬಸ್ಸು ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ ಸವಾರನೋರ್ವ ಮೃತಪಟ್ಟಿದ್ದಾರೆ ಉಪ್ಪಳ ಸೊಂಕಾಲ್ ನ ಇಬ್ರಾಹಿಂ ಖಲೀಲ್ (23) ಮೃತ ಪಟ್ಟವರು.

Readmore...

ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!


ಅ 01 ರಂದು ಭಾನುವಾರ ರಾತ್ರಿ ಕುಂಬಳೆ ಭಾಸ್ಕರ ನಗರದಲ್ಲಿ ಅಪಘಾತ ನಡೆದಿತ್ತು. ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಖಲೀಲ್ ಅ 03 ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಜೊತೆಗಿದ್ದ ಉಪ್ಪಳ ಮಣಿಮುಂಡದ ಮುಹಮ್ಮದ್ ಮಾಝ್ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

Recent News


Leave a Comment: