Posted by vidyamaana on 2024-07-05 17:20:19 |
ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದರಾಗಿದ್ದಂತ ಕುಂಬ್ಳೆ ಶ್ರೀಧರ ರಾವ್ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದಾಗಿ ತಿಳಿದು ಬಂದಿದೆ.
ಇಂದು ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಸಮೀಪದಲ್ಲಿನ ಬೇರಿಕೆ ನಿವಾಸಿಯಾಗಿದ್ದಂತ ಶ್ರೀಧರ ರಾವ್ ಅವರಿಗೆ ಇಂದು ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.
ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ.
ಮೃತರು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಪತ್ನಿ ಸುಲೋಚನಾ, ಪುತ್ರರಾದ ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
Posted by Vidyamaana on 2023-09-06 18:39:08 |
ಪುತ್ತೂರು: ಅಕ್ರಮಸಕ್ರಮ ಕಡತ ವಿಲೇವಾರಿ ಮಾಡುವುದಾಗಿ ಹೇಳಿ ಮಹಿಳೆಯಿಂದ ಪಡೆದ ಲಂಚದ ಹಣವನ್ನು ಹಿಂತಿರುಗಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಗ್ರಾಮವೊಂದರ ಉಗ್ರಾಣಿಗೆಗೆ ಸೂಚನೆಯನ್ನು ನೀಡಿದ್ದಾರೆ.
ಕುಂಡಡ್ಕ ದಲ್ಲಿ ಶ್ರೀ ಕೃಷ್ಣಾಅಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ ಶಾಸಕರ ಬಳಿ ಬಂದ ಚಂದ್ರಾವತಿ ಎಂಬ ಮಹಿಳೆ ನಾನು ಶಕುಂತಳಾ ಶೆಟ್ಟಿ ಶಾಸಕರಾಗಿದ್ದ ಸಂದರ್ಭದಲ್ಲಿ ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿದ್ದೆ. ನನ್ನ ಮನೆ ಸರಕಾರಿ ಜಾಗದಲ್ಲಿದೆ. ನನ್ನ ಮನೆ ಇರುವ ಜಾಗವನ್ನು ಸಕ್ರಮ ಮಾಡಿಕೊಡಬೇಕೆಂದು ಅರ್ಜಿ ಸಲ್ಲಿಸಿದ್ದೇನೆ. ಸಲ್ಲಿಸಿದ ಅರ್ಜಿಯ ಎಲ್ಲಾ ದಾಖಲೆಗಳು ನನ್ನ ಬಳಿ ಇದೆ . ನಾನು ಅರ್ಜಿ ಕೊಟ್ಟಾಗ ನನ್ನಿಂದ ನನ್ನ ಗ್ರಾಮದ ಉಗ್ರಾಣಿ ಒಟ್ಟು ೩೦ ಸಾವಿರ ಹಣವನ್ನು ಲಂಚವಾಗಿ ಪಡೆದುಕೊಂಡಿದ್ದಾರೆ. ಏಳು ವರ್ಷ ಕಳೆದರೂ ನನಗೆ ಅಕ್ರಮ ಸಕ್ರಮದಲ್ಲಿ ಜಾಗ ರೆಕಾರ್ಡ್ ಆಗಲಿಲ್ಲ, ನಾನು ಬಡವೆ, ನನ್ನಲ್ಲಿ ಏನೂ ಇಲ್ಲ, ನಾನು ಬೀಡಿಕಟ್ಟಿ ಜೀವನ ಮಾಡುವುದು, ಆದರೂ ನನ್ನಿಂದ ಹಣಪಡೆದುಕೊಂಡಿದ್ದಾರೆ. ಹಣ ಕೊಟ್ಟರೂ ಕೆಲಸ ಮಾಡಿಲ್ಲ ನನಗೆ ನ್ಯಾಯ ಕೊಡಿ ಎಂದು ಶಾಸಕರಲ್ಲಿ ಮನವಿ ಮಾಡಿದ್ದಾರೆ. ಕೂಡಲೇ ಹಣ ಪಡೆದುಕೊಂಡ ಉಗ್ರಾಣಿಗೆ ಕರೆ ಮಾಡಿದ ಶಾಸಕರು ಬಡ ಮಹಿಳೆಯಿಂದ ಲಂಚವಾಗಿ ಪಡೆದುಕೊಂಡ ೩೦ ಸಾವಿರ ಹಣವನ್ನು ವಾರದೊಳಗೆ ಮಹಿಳೆಗೆ ಪಾವತಿಸಿಬೇಕು ಇಲ್ಲವಾದರೆ ಕೆಲಸದಿಂದ ಸಸ್ಪೆಂಡ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಹಿಳೆಗೆ ಸಾಂತ್ವನ ಹೇಳಿದ ಶಾಸಕರು ನಿಮ್ಮ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚನೆ ಕೊಡುತ್ತೇನೆ. ಅಕ್ರಮ ಸಕ್ರಮ ಸಮಿತಿಯಾದ ತಕ್ಷಣವೇ ನಿಮ್ಮ ಜಾಗ ನಿಮಗೆ ರೆಕಾರ್ಡ್ ಆಗಲಿದೆ ಎಂದು ಹೇಳಿದಾಗ ಮಹಿಳೆ ಶಾಸಕರಿಗೆ ನಮಸ್ಕರಿಸಿದರು.
Posted by Vidyamaana on 2023-11-26 22:14:31 |
ಬೆಂಗಳೂರು: ಪೊಲೀಸರ ಕಿರುಕುಳಕ್ಕೊಳಗಾಗುವ ಬಿಜೆಪಿ ಕಾರ್ಯಕರ್ತರ ದೂರು ಸ್ವೀಕರಿಸಲು ಮತ್ತು ಅವರಿಗೆ ಕಾನೂನು ನೆರವು ನೀಡಲು ವಿರೋಧ ಪಕ್ಷ ಬಿಜೆಪಿ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯಲಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ ವಿಜಯೇಂದ್ರ, ಈ ಧೋರಣೆಯ ವಿರುದ್ಧ ಮಾತನಾಡಿದರೆ ಪೊಲೀಸ್ ಮೂಲಕ ಕಿರುಕುಳ ನೀಡಲಾಗುತ್ತೆ ಎಂದಿದ್ದಾರೆ. ಅಂತಹ ಕಾರ್ಯಕರ್ತರಿಗೆ ಬಿಜೆಪಿ ಕಾನೂನು ನೆರವು ನೀಡುತ್ತದೆ ಎಂದು X ಮೂಲಕ ಶಿಕಾರಿಪುರ ಶಾಸಕರೂ ಆದ ವಿಜಯೇಂದ್ರ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಸೋಷಿಯಲ್ ಮೀಡಿಯಾ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆ ಮತ್ತು ಸರ್ಕಾರದ ವಿರುದ್ಧ ಧ್ವನಿ ಎತ್ತಲು ಕಾರ್ಯಕರ್ತರು ಹಿಂದೆ ಸರಿಯುವ ಅಗತ್ಯವಿಲ್ಲ. ನಿಮ್ಮ ನೆರವಿಗೆ ನಾವಿದ್ದೇವೆ ಎಂದೂ ವಿಜಯೇಂದ್ರ ಹೇಳಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲು ಪೊಲೀಸರಿಗೆ ಅಧಿಕಾರ ಇಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲಿರುವ ನಮ್ಮ ಕಾರ್ಯಕರ್ತರ ಬಂಧುಗಳಿಗೆ ಯಾವುದೇ ತೊಂದರೆ, ಬೆದರಿಕೆ, ಕಿರುಕುಳ ಎದುರಾದರೆ ತಕ್ಷಣವೇ ಪಕ್ಷ ನೆರವಿಗೆ ಬರುತ್ತದೆ ಎಂದು ಬಿಜೆಪಿ ಅಧ್ಯಕ್ಷ ಹೇಳಿದ್ದಾರೆ.
Posted by Vidyamaana on 2023-01-12 12:34:12 |
ನೆಲ್ಯಾಡಿ: ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದಾಗಿ ನೆಲ್ಯಾಡಿ ಪೇಟೆ ಸಂಪೂರ್ಣ ಧೂಳುಮಯಗೊಂಡಿದೆ. ದೂಳುತಿಂದು ಜನರಲ್ಲಿ ಆರೋಗ್ಯ ಸಮಸ್ಯೆ ಕಾಡಲಾರಂಭಿಸಿದ್ದು ಕೆಮ್ಮು, ಜ್ವರ, ಅಲರ್ಜಿಯಿಂದ ಶಾಲಾ ಮಕ್ಕಳು, ವರ್ತಕರು, ಗ್ರಾಮಸ್ಥರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈಗ ದಿನದಲ್ಲಿ ಒಂದೆರಡು ಸಲ ನೀರು ಹಾಯಿಸಲಾಗುತ್ತಿದ್ದರೂ ದೂಳಿನ ಸಮಸ್ಯೆಗೆ ಮುಕ್ತಿ ಸಿಗುತ್ತಿಲ್ಲ. ಕನಿಷ್ಠ ನಾಲ್ಕೈದು ಸಲವಾದರೂ ಹೆದ್ದಾರಿಯುದ್ದಕ್ಕೂ ನೀರು ಹಾಕಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
Posted by Vidyamaana on 2023-06-26 09:11:18 |
ಪುತ್ತೂರು: ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಸುರತ್ಕಲ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸ್ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕೃಷ್ಣಾಪುರ ಮೂಲದ ಹಬೀಬ್ ಹಸನ್, (ಬಂಟ್ವಾಳದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ) ಮತ್ತು ಉಳ್ಳಾಲದ ಮೊಹಮ್ಮದ್ ಫೈಝಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಈ ಹಿಂದೆ ಮಂಗಳೂರು ಮತ್ತು ಕಾರವಾರ ಮತ್ತು ಮಂಗಳೂರು ಜೈಲಿನಲ್ಲಿದ್ದು ಸಜೆ ಅನುಭವಿಸಿದ್ದರು. ಹಬೀಬ್ ಹಸನ್ ವಿರುದ್ಧ ಒಟ್ಟು 35ಪ್ರಕರಣಗಳು ದಾಖಲಾಗಿದ್ದು, ಮೊಹಮ್ಮದ್ ಫೈಝಲ್ ವಿರುದ್ಧ ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ 15 ಪ್ರಕರಣಗಳು ದಾಖಲಾಗಿವೆ.ಇವರ ಬಂಧನಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮಾರ್ಗದರ್ಶನದಲ್ಲಿ ತಂಡವನ್ನು ರಚಿಸಲಾಗಿತ್ತು.ಕಳವುಗೈದ ಮೋಟರ್ ಬೈಕ್ ಮತ್ತು ಸ್ಕೂಟರ್ ನಲ್ಲಿ ಅಲ್ಲಲ್ಲಿ ಕಳ್ಳತನ ಮಾಡುತ್ತಿದ್ದರು.
ಸಿಕ್ಕಿಬಿದ್ದಿದ್ದು ಹೇಗೆ?
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಡಂಬೈಲ್ ಎಂಬಲ್ಲಿ ಪುಷ್ಪಾವತಿ ಎಂಬವರು ಜೂ.2 ರಂದು ಮುಂಜಾನೆ ತಮ್ಮ ಮನೆಯ ಕಂಪೌಂಡ್ ಒಳಭಾಗದಲ್ಲಿದ್ದ ಬಾವಿಯಿಂದ ನೀರು ಸೇದುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಅಂದಾಜು 1.25 ಲಕ್ಷ ರೂ. ಬೆಲೆಯ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದರು. ಈ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರಿಗೆ ಕಳ್ಳರು ಕದ್ದ ಚಿನ್ನಾಭರಣವನ್ನು ಮಂಗಳೂರು ನಗರ ಮಾರಾಟಕ್ಕೆ ಯತ್ನಿಸಿ ವಿಫಲರಾಗಿ , ಸುರತ್ಕಲ್ ನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿತ್ತು. ಹೀಗಾಗಿ ಮಾದವ ನಗರ ಕೊಡಿಪ್ಪಾಡಿ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ, ದಿಚಕ್ರವಾಹನವೊಂದನ್ನು ನಿಲ್ಲಿಸಲು ಸೂಚಿಸಿದಾಗ ಸವಾರರಿಬ್ಬರು ವಾಹನದಿಂದ ಇಳಿದು ಓಡಿದ್ದರು. ಇವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಸಿದ 13 ಕಳವು ಪ್ರಕರಣಗಳು ಬೆಳಕಿಗೆ ಬಂದಿದೆ ಆರೋಪಿಗಳಿಂದ ಒಟ್ಟು 12ಲಕ್ಷದ 48 ಸಾವಿರದ 550 ಮೌಲ್ಯದ ಚಿನ್ನಾಭರಣಗಳನ್ನು 1ಲಕ್ಷದ 34ಸಾವಿರ ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಯಸ್ಸಾದ ಮಹಿಳೆಯರನ್ನು ಗುರಿಯಾಗಿಸುತ್ತಿದ್ದ ಆರೋಪಿಸಿಗಳು ಕದ್ದ ದ್ವಿಚಕ್ರ ವಾಹನಗಳನ್ನು ಚೈನ್ ಸ್ನ್ಯಾಚಿಂಗ್ ಗೆ ಬಳಸುತ್ತಿದ್ದರು.ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ 8000 ರೂಪಾಯಿ ಬಹುಮಾನ ಘೋಷಿಸಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
Posted by Vidyamaana on 2024-04-23 16:20:35 |
ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.
ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು ಮಲಾರ್ ನಿವಾಸಿ ಆಲಿ(24) ಎಂದು ಗುರುತಿಸಲಾಗಿದೆ.