ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಸುದ್ದಿಗಳು News

Posted by vidyamaana on 2024-07-24 16:19:59 |

Share: | | | | |


ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ, ಜುಲೈ.24: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ (Love) ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ (Murder) ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.


ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು.

ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.


ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಇದರಿಂದ ಅನುಮಾನಗೊಂಡ ಸೌಮ್ಯ ನನ್ನನ್ನು ದೂರ ಮಾಡುತ್ತಿದ್ದಾನೆ. ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ.ಇದರಿಂದ ಗಾಬರಿಗೊಂಡ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ. ಮತ್ತೊಂದೆಡೆ ಮಗಳು ಮನೆಗೆ ಬರದಿದ್ದಕ್ಕೆ ಟೆನ್ಷನ್ ಆಗ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಸೃಜನ್ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

 Share: | | | | |


ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ

Posted by Vidyamaana on 2023-08-03 05:13:52 |

Share: | | | | |


ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ

ಬೆಳ್ತಂಗಡಿ : ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಕೊನೆಗೊಂಡಿದ್ದು. ಬುಧವಾರ ರಾತ್ರಿ ಬೆಂಗಳೂರು ಊರಿಗೆ ಲಗೇಜ್ ಜೊತೆ ತೆರಳಲು ಉಜಿರೆ ದ್ವಾರದ ಎದುರು ನಿಂತು ಪರಿಚಯಸ್ಥ ಮುಸ್ಲಿಂ ಆಟೋ ಚಾಲಕನಿಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆ.2 ರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಅಪರಿಚಿತ ಯುವಕರ ತಂಡ ನಿನಗೆ ಹಿಂದೂ ಯುವತಿಯರೆ ಬೇಕಾ ಎಂದು ಬೆದರಿಕೆ ಹಾಕಿ ಹಲ್ಲೆ ಹಾಕಿ ಹಲ್ಲೆ ನಡೆಸಿದ್ದಾರೆ.ಯುವಕ ಸಾಧ್ಯ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್ ಅವರ ಏಳನೇ ಪುತ್ರ ಆಟೋ ಚಾಲಕ ಮೊಹಮ್ಮದ್ ಅಶೀಕ್(22) ಮೇಲೆ ಆ‌.2 ರಂದು ರಾತ್ರಿ ಸುಮಾರು9 ಗಂಟೆಗೆ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದ ಮುಂದೆ ಹಲ್ಲೆದ್ದು . ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಅನಿಲ್‌ ಕುಮಾರ್ ತಂಡದಿಂದ ಧರ್ಮಸ್ಥಳ ಸುತ್ತಮುತ್ತಲಿನ ಸಿಸಿಕ್ಯಾಮರದ ಸಹಾಯದಿಂದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ; ಇಬ್ಬರು ಅಧಿಕಾರಿಗಳ ಅಮಾನತು

Posted by Vidyamaana on 2023-11-20 07:40:32 |

Share: | | | | |


ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ; ಇಬ್ಬರು ಅಧಿಕಾರಿಗಳ ಅಮಾನತು

ಬೆಂಗಳೂರು: ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣದಲ್ಲಿ ಈಗಾಗಲೇ ಐವರು ಬೆಸ್ಕಾಂ ಅಧಿಕಾರಿಗಳು, ಸಿಬ್ಬಂದಿಯನ್ನು ಪೊಲೀಸರು ಬಂದಿಸಿದ್ದಾರೆ. ಇನ್ನು ಪ್ರಕರಣದಲ್ಲಿ ನಿರ್ಲಕ್ಷ್ಯದ ಆರೋಪದಲ್ಲಿ ಇಬ್ಬರು ಬೆಸ್ಕಾಂ ಅಧಿಕಾರಿಗಳನ್ನು ಇಂಧನ ಇಲಾಖೆ ಅಮಾನತು ಮಾಡಿದ್ದು, ಮೃತರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದೆ.ಈ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್‌ ಪ್ರತಿಕ್ರಿಯಿಸಿ, ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ಶಾಕ್‌ಗೆ ಒಬ್ಬ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ದುರ್ದೈವದ ಘಟನೆ ನಡೆದಿದೆ. ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ AE ಮತ್ತು AEE ಯನ್ನು ಅಮಾನತುಗೊಳಿಸಲಾಗಿದೆ ಮತ್ತು ಇದಕ್ಕೆ ಕಾರಣಾದವರು ಮತ್ತಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ನೀಡಲಿದೆ ಎಂದು ತಿಳಿಸಿದ್ದಾರೆ.

ಐವರ ಬಂಧನ

ವಿದ್ಯುತ್‌ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಕಾಡುಗುಡಿ ಪೊಲೀಸರು ಬಂಧಿಸಿದ್ದಾರೆ. ನಿರ್ಲಕ್ಷ್ಯದ ಆರೋಪದಡಿ ಬೆಸ್ಕಾಂ ವೈಟ್‌ಫೀಲ್ಡ್‌ ವಿಭಾಗದ ಎಕ್ಸಿಕ್ಯೂಟಿವ್ ಎಂಜಿನಿಯರ್ ಶ್ರೀರಾಮ್‌,ಅಸಿಸ್ಟೆಂಟ್‌ ಎಂಜಿನಿಯರ್‌ ಚೇತನ್‌, ಎಇಇ ಸುಬ್ರಮಣ್ಯ, ಜೂನಿಯರ್‌ ಎಂಜಿನಿಯರ್‌ ರಾಜಣ್ಣ ಹಾಗೂ ಸ್ಟೇಷನ್‌ ಆಪರೇಟರ್ ಮಂಜು ಅವರನ್ನು ಪೊಲೀಸರು ಬಂಧಿಸಿದ್ದಾರೆ.


ಇಬ್ಬರ ಸಾವಿಗೆ ಬಿಎಂಟಿಸಿ ಬಸ್ ಡ್ರೈವರ್ ಕೂಡ ಕಾರಣ?


ವಿದ್ಯುತ್‌ ತಗುಲಿ ತಾಯಿ-ಮಗು ಮೃತಪಡಲು ಬಿಎಂಟಿಸಿ ಬಸ್ ಡ್ರೈವರ್ ಕೂಡ ಕಾರಣ ಎಂಬ ಆರೋಪ ಕೇಳಿಬಂದಿದೆ. ಸಿಗ್ನಲ್ ಬಿದ್ದಿದೆ ಎಂದು ಘಟನೆ ನಡೆದಿದ್ದ ಸ್ಥಳದಲ್ಲಿ ಬಸ್ ಚಾಲಕ ಡೋರ್ ಓಪನ್ ಮಾಡಿದ್ದ. ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಬಸ್ ನಿಲ್ದಾಣವಿತ್ತು. ಆದರೂ ಮೊದಲೇ ನಿಲ್ಲಿಸಿದ್ದರಿಂದ ತಾಯಿ-ಮಗು ಇಳಿದು ನಡೆದುಕೊಂಡು ಹೋಗಿದ್ದರಿಂದ ವಿದ್ಯುತ್‌ ತಂತಿ ತುಳಿದು ದರಂತಕ್ಕೆ ಕಾರಣವಾಗಿದೆ. ಹೀಗಾಗಿ ಬಸ್‌ ಚಾಲಕನ ವಿರುದ್ಧವೂ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.


ನ್ಯಾಯಕ್ಕಾಗಿ ಆಗ್ರಹಿಸಿ ಸಂಬಂಧಿಕರ ಪ್ರತಿಭಟನೆ


ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವಿಗೀಡಾದ್ದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು, ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಮೃತರ ಕುಟುಂಬಸ್ಥರು, ಸ್ಥಳೀಯರು ಕಾಡುಗುಡಿಯಲ್ಲಿ ಪ್ರತಿಭಟನೆ ನಡೆಸಿದರು. ಬೆಸ್ಕಾಂಗೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ನ್ಯಾಯಕ್ಕಾಗಿ ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದರು. ಇದರಿಂದ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಯಿತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಪರಿಸ್ಥಿತಿಯನ್ನು ನಿಯಂತ್ರಿಸಿದರು.ರಸ್ತೆಯಲ್ಲಿ ಬಿದ್ದ ವಿದ್ಯುತ್‌ ತಂತಿ ಮೆಟ್ಟಿ ತಾಯಿ-ಮಗು ಸುಟ್ಟು ಕರಕಲು


ಬೆಂಗಳೂರು: ಬೆಳ್ಳಂಬೆಳಗ್ಗೆಯೇ ರಾಜಧಾನಿಯಲ್ಲಿ ಅತ್ಯಂತ ಆತಂಕಕಾರಿ ಮತ್ತು ಹೃದಯ ಹಿಂಡುವ ಘಟನೆ ನಡೆದಿದೆ. ತನ್ನ ಪುಟ್ಟ ಮಗುವನ್ನು ಕಂಕುಳಲ್ಲಿ ಎತ್ತಿಕೊಂಡು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ವಿದ್ಯುತ್‌ ಆಘಾತಕ್ಕೆ (Electricuted) ಒಳಗಾಗಿ ಮಗುವಿನೊಂದಿಗೆ ಸುಟ್ಟು ಕರಕಲಾಗಿದ್ದಾರೆ (Mother and Child de

non

). ಬೆಸ್ಕಾಂ ಅಧಿಕಾರಿಗಳ‌ ನಿರ್ಲಕ್ಷ್ಯ (BESCOM Negligence) ಕ್ಕೆ ತಾಯಿ-ಮಗು ಬಲಿಯಾಗಿದ್ದಾರೆ.


ತಾಯಿ ಸೌಂದರ್ಯ ಮತ್ತು ಪುಟ್ಟ ಮಗಳು ಲಿಯಾ ಮೃತಪಟ್ಟ ದುರ್ದೈವಿಗಳು. ವೈಟ್‌ ಫೀಲ್ಡ್‌ ಸಮೀಪದ ಹೋಪ್ ಫಾರ್ಮ್ ಸರ್ಕಲ್‌ ಬಳಿ ದುರ್ಘಟನೆ ನಡೆದಿದೆ.


ಬೆಂಗಳೂರಿನಲ್ಲಿ ವಾಸವಾಗಿದ್ದ ಸೌಂದರ್ಯ ಅವರು ತಮ್ಮ ಪತಿ ಸಂತೋಷ್ ಮತ್ತು ಮಗುವಿನೊಂದಿಗೆ ತಮಿಳುನಾಡಿನ ತಾಯಿ ಮನೆಗೆ ಹೋಗಿದ್ದರು. ಶನಿವಾರ ರಾತ್ರಿ ಅವರು ಅಲ್ಲಿಂದ ಹೊರಟು ಬೆಳಗ್ಗೆ ಬೆಂಗಳೂರಿನ ವೈಟ್‌ ಫೀಲ್ಡ್‌ ಬಳಿ ಬಸ್ಸಿನಿಂದ ಇಳಿದಿದ್ದರು. ಬೆಳಗ್ಗೆ ಐದು ಗಂಟೆಯ ಹೊತ್ತಿಗೆ ಬಸ್ಸಿನಿಂದ ಇಳಿದು‌ ಸಂತೋಷ್‌, ಸೌಂದರ್ಯ ಪುಟ್ಟ ಮಗುವನ್ನು ಕಂಕುಳಲ್ಲಿಇಟ್ಟುಕೊಂಡು ಅವರು ವೈಟ್ ಫೀಲ್ಡ್ ಸಮೀಪದ ಓಫಾರ್ಮ್ ಸರ್ಕಲ್ ಬಳಿ ಮನೆ ಕಡೆಗೆ ಸಾಗುತ್ತಿದ್ದರು. ಅವರು ಎ.ಕೆ ಗೋಪಾಲ್ ಕಾಲೋನಿಯಲ್ಲಿ ವಾಸಿಸುತ್ತಿದ್ದರು.ಈ ವೇಳೆ ರಸ್ತೆ ಬದಿ ತುಂಡಾಡಿ ನೆಲದಲ್ಲಿ ಬಿದ್ದಿದ್ದ ವಿದ್ಯುತ್‌ ತಂತಿ ಅವರಿಗೆ ಕಾಣಿಸಲಿಲ್ಲ . ಕತ್ತಲಲ್ಲಿ ಅವರು ವಿದ್ಯುತ್‌ ತಂತಿಯನ್ನು ತುಳಿದಿದ್ದರು. ಮತ್ತು ಒಮ್ಮೆಗೇ ವಿದ್ಯುತ್‌ ಅವರ ದೇಹದಲ್ಲಿ ಪ್ರವಹಿಸಿ ತಾಯಿ ಮತ್ತು ಮಗು ಸ್ಥಳದಲ್ಲೇ ಸುಟ್ಟು ಕರಕಲಾಗಿ ಹೋಗಿದ್ದಾರೆ.

ಬೆಂಗಳೂರು: ಸಹಜೀವನ ಸಾಗಿಸುತ್ತಿದ್ದ ಪ್ರೇಮಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Posted by Vidyamaana on 2023-11-07 16:34:52 |

Share: | | | | |


ಬೆಂಗಳೂರು: ಸಹಜೀವನ ಸಾಗಿಸುತ್ತಿದ್ದ ಪ್ರೇಮಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಬೆಂಗಳೂರು: ಕೊತ್ತನೂರು ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ ಸಮುಚ್ಚಯವೊಂದರ ಫ್ಲ್ಯಾಟ್‌ನಲ್ಲಿ ಬೆಂಕಿ ಹಚ್ಚಿಕೊಂಡು ಸೌಮಿನಿ ದಾಸ್ (20) ಹಾಗೂ ಅಬಿಲ್ ಅಬ್ರಾಹಂ (29) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


‘ಪಶ್ಚಿಮ ಬಂಗಾಳದ ಸೌಮಿನಿ ದಾಸ್ ಹಾಗೂ ಕೇರಳದ ಅಬಿಲ್, ಪರಸ್ಪರ ಪ್ರೀತಿಸುತ್ತಿದ್ದರೆಂದು ಗೊತ್ತಾಗಿದೆ. ಒಂದೇ ಫ್ಲ್ಯಾಟ್‌ನಲ್ಲಿ ಸಹಜೀವನ ನಡೆಸುತ್ತಿದ್ದ ಇಬ್ಬರೂ ಭಾನುವಾರ ಸಂಜೆ ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.ವಿವಾಹಿತರಾಗಿದ್ದ ಸೌಮಿನಿ, ನರ್ಸಿಂಗ್ ವ್ಯಾಸಂಗ ಮಾಡಲು ನಗರಕ್ಕೆ ಬಂದಿದ್ದರು. ನರ್ಸಿಂಗ್ ಮುಗಿಸಿದ್ದ ಅಬಿಲ್, ಸ್ಥಳೀಯ ಏಜೆನ್ಸಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರಿಗೂ ಪರಸ್ಪರ ಪರಿಚಯವಾಗಿತ್ತು’ ಎಂದು ತಿಳಿಸಿವೆ.


‘ಮೂರು ತಿಂಗಳ ಹಿಂದೆಯಷ್ಟೇ ತಮ್ಮೂರಿಗೆ ಹೋಗಿದ್ದ ಸೌಮಿನಿ, ಪುನಃ ಬೆಂಗಳೂರಿಗೆ ವಾಪಸು ಬಂದಿದ್ದರು. ಇತ್ತೀಚೆಗೆ ಪತಿ ಜೊತೆ ಮಾತನಾಡಿದ್ದ ಅವರು, ‘ಮದುವೆಯಾದ ದಿನದಿಂದಲೂ ನೀನು ನನಗೆ ಕಿರುಕುಳ ನೀಡುತ್ತಿದ್ದಿಯಾ. ನಿನ್ನ ಜೊತೆ ನಾನು ಇರುವುದಿಲ್ಲ. ನನ್ನ ತಂಟೆಗೆ ಬರಬೇಡ. ನಾನು ಊರಿಗೂ ಬರುವುದಿಲ್ಲ’ ಎಂದಿದ್ದರೆಂದು ಹೇಳಲಾಗುತ್ತಿದೆ.’


‘ಸೌಮಿನಿ ಬಗ್ಗೆ ಅನುಮಾನಗೊಂಡಿದ್ದ ಪತಿ, ಅವರ ಬಗ್ಗೆ ವಿಚಾರಿಸಿದ್ದರು. ಅಬಿಲ್ ಜೊತೆ ಸೌಮಿನಿ ಸಹಜೀವನ ನಡೆಸುತ್ತಿದ್ದ ಸಂಗತಿ ಗೊತ್ತಾಗಿತ್ತು. ಈ ಬಗ್ಗೆ ಪತ್ನಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ‘ನಮ್ಮ ಪ್ರೀತಿಯ ವಿಷಯ ಬೇರೆಯವರಿಗೆ ಗೊತ್ತಾಗಿದೆ. ನಮ್ಮನ್ನು ಬದುಕಲು ಬಿಡುವುದಿಲ್ಲ’ ಎಂದು ತಿಳಿದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.


‘ಬೆಂಕಿ ಹಚ್ಚಿಕೊಂಡಿದ್ದ ಸಂದರ್ಭದಲ್ಲಿ ಇಬ್ಬರೂ ಕೂಗಾಡಿದ್ದರು. ಸ್ಥಳೀಯರು ಸಹಾಯಕ್ಕೆ ಹೋಗಿದ್ದರು. ಅಷ್ಟರಲ್ಲೇ ಇಬ್ಬರ ದೇಹ ಬಹುಪಾಲು ಸುಟ್ಟಿತ್ತು. ಸೌಮಿನಿ ದಾಸ್ ಸ್ಥಳದಲ್ಲೇ ಮೃತಪಟ್ಟಿದ್ದರು. ಉಸಿರಾಡುತ್ತಿದ್ದ ಅಬಿಲ್ ಅವರನ್ನು ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಯೇ ಅವರು ಮೃತಪಟ್ಟರು’ ಎಂದು ತಿಳಿಸಿವೆ.

ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೋಲೆ ಪ್ರಕರಣ: ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ ಕುಟುಂಬ

Posted by Vidyamaana on 2023-11-18 20:00:07 |

Share: | | | | |


ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೋಲೆ  ಪ್ರಕರಣ: ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ ಕುಟುಂಬ

ಉಡುಪಿ : ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣವನ್ನು ಕ್ಷಿಪ್ರವಾಗಿ ಪತ್ತೆ ಮಾಡಿದ ಉಡುಪಿ ಪೊಲೀಸ್ ಇಲಾಖೆಯನ್ನು ಮೃತರ ಕುಟುಂಬ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಅವರನ್ನು ಭೇಟಿಯಾಗಿ ಅಭಿನಂದಿಸಿತು.


ನೇಜಾರಿನ ನೂರ್ ಮುಹಮ್ಮದ್, ಅವರ ಮಗ ಅಸಾದ್,ಮೃತ ಹಸೀನಾರ ಸಹೋದರ ಅಶ್ರಫ್, ಇವರ ಮಗಳು ಫಾತಿಮಾ ಅಸ್ಟಾ ಸಂಬಂಧಿಕ ಯಾಸೀನ್, ಕಾಂಗ್ರೆಸ್ ಮುಖಂಡ ಎಂ.ಎ.ಗಫೂರ್ ಅವರು ಎಸ್ಪಿಯವರನ್ನು ಭೇಟಿಯಾಗಿ ಅಭಿನಂದಿಸಿದರು.ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಎ.ಗಫೂರ್, ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ. ನೂರ್ ಮುಹಮ್ಮದ್ ತಮ್ಮ ಕುಟುಂಬದ ಜೊತೆ ಬೆರೆತು ಸಮಯ ಕಳೆಯುವಂತೆ ಮತ್ತು ಮಗನಿಗೆ ಭವಿಷ್ಯದ ಕುರಿತು ಕೆಲವು ಮಾರ್ಗದರ್ಶನ ನೀಡಿದರು ಎಂದು ತಿಳಿಸಿದರು.


ಅದೇ ರೀತಿ ಸಮಾಜದ ಸುರಕ್ಷತೆ, ಸೌಹಾರ್ದತೆ ಬಗ್ಗೆಯೂ ಎಸ್ಪಿಯವರ ಜೊತೆ ಚರ್ಚೆ ಮಾಡಿದ್ದೇವೆ.


ಸಮಾಜದಲ್ಲಿ ಶಾಂತಿ ಸಾಮರಸ್ಯ ನಿರ್ಮಾಣವಾಗಿ, ಜನ ಭಯಭೀತಿಯಿಂದ ಹೊರಬರಬೇಕು. ಮಹಿಳೆಯರು ಸುರಕ್ಷಿತವಾಗಿ ಕೆಲಸಕ್ಕೆ ಹೋಗುವಂತೆ ಮಾಡಬೇಕು ಎಂಬುದರ ಕುರಿತು ಎಸ್ಪಿ ಜೊತೆ ಮಾತುಕತೆ ನಡೆಸಿದ್ದೇವೆ ಎಂದು ಅವರು ಹೇಳಿದರು

ಕರ್ನಾಟಕ ವಿಧಾನಪರಿಷತ್ ವಿಪಕ್ಷನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಕ

Posted by Vidyamaana on 2023-12-25 15:13:31 |

Share: | | | | |


ಕರ್ನಾಟಕ ವಿಧಾನಪರಿಷತ್ ವಿಪಕ್ಷನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಕ

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಎನ್ನುವಂತೆ ಇದೀಗ ವಿಧಾನ ಪರಿಷತ್ ವಿಪಕ್ಷ ನಾಯಕರನ್ನಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಿಸಲಾಗಿದೆ. ಅಲ್ಲದೇ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕರನ್ನಾಗಿ ಅರವಿಂದ್ ಬೆಲ್ಲದ್ ನೇಮಕ ಮಾಡಲಾಗಿದೆ.ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದಂತ ಜೆಪಿ ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿವಿಧ ಜವಾಬ್ದಾರಿಗಳಿಗೆ ನಿಯುಕ್ತಿಗೊಳಿಸಲಾಗಿದೆ ಎಂದಿದ್ದಾರೆ.ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ, ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ ಹಾಗೂ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ನೇಮಕ ಮಾಡಲಾಗಿದೆ.


ಇನ್ನೂ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಅರವಿಂದ್ ಬೆಲ್ಲದ್, ಮುಖ್ಯ ಸಚೇತಕರಾಗಿ ದೊಡ್ಡನಗೌಡ ಜಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಪುತ್ತೂರು : ಅನಾರೋಗ್ಯದಿಂದಾಗಿ ಪ್ರತಿಭಾನ್ವಿತ ವಿದ್ಯಾರ್ಥಿ ಸುಪ್ರೀತ್ ನಿಧನ

Posted by Vidyamaana on 2023-11-01 17:54:59 |

Share: | | | | |


ಪುತ್ತೂರು : ಅನಾರೋಗ್ಯದಿಂದಾಗಿ ಪ್ರತಿಭಾನ್ವಿತ ವಿದ್ಯಾರ್ಥಿ ಸುಪ್ರೀತ್ ನಿಧನ

ಪುತ್ತೂರು : ಪ್ರಾಥಮಿಕ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸರ್ವೆ ಸಮೀಪ ನಡೆದಿದೆ.ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಪ್ರೀತ್ ಮೃತ ಬಾಲಕ.ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಸುಪ್ರೀತ್ ರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.


ಸುಪ್ರೀತ್ ರವರು ಮುಂಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕುಸುಮಾ ಪೆರಂಟೋಳು ಮತ್ತು ಕುಂಞ ಮೇಸ್ತ್ರಿ ಅವರ ಪುತ್ರ.

ಈತ ಶಾಲೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ

Recent News


Leave a Comment: