KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ನೀರಾವರಿ ವಿಚಾರವಾಗಿ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸರ್ವ ಪಕ್ಷ ಸಭೆ

Posted by Vidyamaana on 2023-08-23 07:16:06 |

Share: | | | | |


ನೀರಾವರಿ ವಿಚಾರವಾಗಿ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸರ್ವ ಪಕ್ಷ ಸಭೆ

ಬೆಂಗಳೂರು: ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಮತ್ತು ಸಂಸದರು ಭಾಗವಹಿಸಿದ್ದರು.


ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್.ಕೆ. ಪಾಟೀಲ್, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಪಾಲ್ಗೊಂಡಿದ್ದರು.


ಹಿರಿಯ ವಕೀಲರಾದ ಮೋಹನ್ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ದೇವೇಗೌಡ ಮತ್ತು ಎಸ್.ಎಂ. ಕೃಷ್ಣ ಸಭೆಗೆ ಗೈರಾಗಿದ್ದರೆ, ರಾಜ್ಯವನ್ನು ಪ್ರತಿನಿಧಿಸುವ ಆರು ಕೇಂದ್ರ ಸಚಿವರು ಕೂಡಾ ಸಭೆಯಿಂದ ದೂರ ಉಳಿದಿದ್ದರು

ಸೀಟೂ ಹೋಯ್ತು ನೋಟೂ ಹೋಯ್ತು..– ಇದು ಪುತ್ತಿಲ ವಿರುದ್ಧ ಬೆಟ್ ಕಟ್ಟಿ ದುಡ್ಡು ಕಳೆದುಕೊಂಡವರ ವ್ಯಥೆ

Posted by Vidyamaana on 2023-05-16 23:26:35 |

Share: | | | | |


ಸೀಟೂ ಹೋಯ್ತು ನೋಟೂ ಹೋಯ್ತು..– ಇದು ಪುತ್ತಿಲ ವಿರುದ್ಧ ಬೆಟ್ ಕಟ್ಟಿ ದುಡ್ಡು ಕಳೆದುಕೊಂಡವರ ವ್ಯಥೆ

ಪುತ್ತೂರು: ಮಳೆ ನಿಂತರೂ ಮಳೆ ಹನಿ ನಿಲ್ಲಲಿಲ್ಲ ಎನ್ನುವ ಹಾಗೆ ವಿಧಾನಸಭಾ ಚುನಾವಣೆ ಮುಗಿದು ಸರ್ಕಾರ ರಚನೆಗೆ ಸರ್ಕಸ್ ಮುಂದುವರಿತ್ತಿರುವುದರ ನಡುವೆ ಇಲ್ಲಿ ಪುತ್ತೂರಿನಲ್ಲಿ ಬಿಜೆಪಿಗೆ ಮುಟ್ಟಿ ನೋಡಿಕೊಳ್ಳುವಂತೆ ಸೋಲಿನ ಪೆಟ್ಟು ನೀಡಿದ ಅರುಣ್ ಪುತ್ತಿಲ ಮತ್ತವರ ಹಿಂದುತ್ವದ ಸೇನೆಯ ರಣರೋಚಕ ಕಥೆಗಳು ಪತ್ತೂರು ಆಸುಪಾಸಿನವರ ಬಾಯಲ್ಲಿ ನಿತ್ಯ ನಲಿದಾಡುತ್ತಿದೆ.

   ಪುತ್ತೂರಿನಲ್ಲಿ ಬಿಜೆಪಿ  ಮುಖಂಡರ ಆತ್ಮವಿಶ್ವಾಸ ಎಷ್ಟರಮಟ್ಟಿಗೆ ಇತ್ತೆಂದರೆ ಕೌಂಟಿಂಗ್ ನಡೆಯುವ ದಿನದವರೆಗೂ ಅವರೆಲ್ಲರೂ ಬಿಜೆಪಿ ಗೆಲ್ಲುತ್ತದೆ ಇಲ್ಲವೇ ಎರಡನೇ ಸ್ಥಾನ ಪಡೆಯುತ್ತದೆ ಮತ್ತು ಪುತ್ತಿಲ ಅವರಿಗೆ 15 ಸಾವಿರಕ್ಕಿಂತ ಹೆಚ್ಚಿನ ಮತಗಳು ಬೀಳುವುದಿಲ್ಲ ಎಂಬ ವಿಶ್ವಾಸದಲ್ಲೇ ಇದ್ರು. ಆದರೆ ಅಂತಿಮವಾಗಿ ಪುತ್ತಿಲ ಅವರು 63 ಸಾವಿರದಷ್ಟು ಮತಗಳನ್ನು ಪಡೆದು ಅಲ್ಪ ಅಂತರದಿಂದ ಅಶೋಕ್ ಕುಮಾರ್ ರೈ ಎದುರು ಸೋತಿದ್ದು ಬಿಜೆಪಿ  ನಾಯಕರಿಗೆ ಬಿದ್ದ ಮೊದಲ ಪೆಟ್ಟಾಗಿತ್ತು.

     ಇದಕ್ಕಿಂತಲೂ ವಿಶೇಷವೆಂದ್ರೆ ಈ ಸಲ ಪುತ್ತೂರಿನಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಭರ್ಜರಿ ಬೆಟ್ಟಿಂಗ್ ನಡೆದಿತ್ತು ಎನ್ನುವುದು. ಕರಾವಳಿಯಲ್ಲಿ ಚುನಾವಣಾ ಬೆಟ್ಟಿಂಗ್ ರಾಜ್ಯದ ಬೇರೆ ಕಡೆಗಳಲ್ಲಿ ಇರುವಂತೆ ಇಲ್ಲ. ಆದರೆ ಈ ಬಾರಿ ಪುತ್ತೂರಿನಲ್ಲಿ ರಣ ರೋಚಕ ಫೈಟ್ ಇದ್ದ ಕಾರಣ ಭರ್ಜರಿಯಾಗಿಯೇ ಬೆಟ್ಟಿಂಗ್ ನಡೆದಿದೆ ಎನ್ನುವುದು ಇದೀಗ ಹೊರಬೀಳುತ್ತಿರುವ ಲೇಟೆಸ್ಟ್ ಸುದ್ದಿಯಾಗಿದೆ.

     ಅದರಂತೆ ಪುತ್ತಿಲ ಪರ ಇದ್ದವರು ಬಿಜೆಪಿ ಮೂರನೇ ಸ್ಥಾನಕ್ಕೆ ಇಳಿಯುತ್ತದೆ ಎಂದು ಬೆಟ್ಟಿಂಗ್ ಕಟ್ಟಿದ್ದಾರೆ. ಇದಕ್ಕರ ಎದುರಾಗಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗೋದಿಲ್ಲ ಎಂದು ಬಿಜೆಪಿ ಪರ ಇದ್ದವರು ಬೆಟ್ ಕಟ್ಟಿದ್ದಾರೆ. ಈ ಬೆಟ್ಟಿಂಗ್ ಮತದಾನ ನಡೆದ ಬಳಿಕ ಇನ್ನಷ್ಟು ಬಿರುಸಾಗಿಯೇ ನಡೆದಿದೆ! ಎಲ್ಲಿಯವರೆಗೆ ಅಂದ್ರೆ ಖಾಸಗಿ ಬ್ಯಾಂಕಿನ ಪ್ರಮುಖ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಏಳು ಕೋಟಿ ರೂಪಾಯಿಗಳಷ್ಟು ಹಣವನ್ನು ಈ ಬೆಟ್ಟಿಂಗ್ ನಲ್ಲಿ ಕಳೆದುಕೊಂಡಿದ್ದಾರೆ ಎಂಬ ಸುದ್ದಿ ಇದೀಗ ಪುತ್ತೂರಿನಲ್ಲಿ ಗೌಪ್ಯವಾಗೇನೂ ಉಳಿದಿಲ್ಲ!. ಇವರು ಮಾತ್ರವಲ್ಲದೇ ತಾಲೂಕು ಬಿಜೆಪಿ ಪದಾಧಿಕಾರಿಯೊಬ್ಬರು ತನ್ನ ಮನೆಯ ಒಡವೆಗಳನ್ನೆಲ್ಲಾ ಅಡವಿಟ್ಟು ಸುಮಾರು 50 ಲಕ್ಷ ರೂಪಾಯಿಗಳಷ್ಟು ಹಣವನ್ನು ಪುತ್ತಿಲ ವಿರುದ್ಧ ಬೆಟ್ ಕಟ್ಟಿ ಕಳ್ಕೊಂಡು ಇದೀಗ ಪೆಚ್ಚುಮೋರೆ ಹಾಕಿಕೊಂಡು ಓಡಾಡ್ತಿದ್ದಾರೆ ಎನ್ನುವ ವಿಚಾರ ಟಾಕ್ ಆಫ್ ದಿ ಟೌನ್ ಆಗಿದೆ! ಇನ್ನೊಬ್ಬ ಮಹಾಶಯರು ಹೊಸ ಉದ್ಯಮ ಪ್ರಾರಂಭಿಸಲೆಂದು ತೆಗೆದಿಟ್ಟಿದ್ದ 2.5ಕೋಟಿ ರೂಪಾಯಿಗಳನ್ನು ಬಿಜೆಪಿ ಪರ ಬೆಟ್ ಕಟ್ಟಿ ಇದೀಗ ತಲೆ ಮೇಲೆ ಟವಲ್ ಹಾಕ್ಕೊಂಡು ಕುಳಿತುಕೊಳ್ಳೋ ಪರಿಸ್ಥಿತಿಗಿಳಿದಿದ್ದಾರಂತೆ! ಹೀಗೆ ಈ ಸಲ ಏನಿಲ್ಲವೆಂದರೂ ಪುತ್ತೂರಿನಲ್ಲಿ ಬಿಜೆಪಿ –ಅರುಣ್ ಪುತ್ತಿಲ ಕಾದಾಟದಲ್ಲಿ ಫಲಿತಾಂಶದ ಪರ-ವಿರೋಧವಾಗಿ ಸುಮಾರು 75 ಕೋಟಿ ರೂಪಾಯಿಗಳಷ್ಟು ಮೊತ್ತದ ಭಾರೀ ಬೆಟ್ಟಿಂಗ್ ನಡೆದಿದೆ ಎನ್ನುವುದು ತಾಲೂಕಿನ ಮಟ್ಟಿಗೆ ಒಂದು ದಾಖಲೆಯೇ ಸರಿ.

   ಮತದಾನಕ್ಕೆ ಎರಡು ದಿನ ಇರುವಾಗ ಶುರುವಾದ ಈ ಬೆಟ್ಟಿಂಗ್ ಕೌಂಟಿಂಗ್ ದಿನ ಪೀಕ್ ನಲ್ಲಿತ್ತು. ಇಲ್ಲಿ ಪುತ್ತಿಲ ಪರ ಇದ್ದವರು ಕಡಿಮೆ ರೇಟಲ್ಲಿ ಜೂಜಿನ ಸವಾಲು ಪಡೆದು ಬಂಪರ್ ಲಾಟರಿ ಸಂಪಾದಿಸಿದ್ದಾರೆ. ದೊಡ್ಡ ಕುಳಗಳು ಮಾತ್ರವಲ್ಲದೇ ಅಂಗಡಿ ಮಾಲಕರು, ತೆಂಗಿನಕಾಯಿ ವ್ಯಾಪಾರಿಗಳು ಸೇರಿದಂತೆ ಜನಸಾಮಾನ್ಯರೂ ಸಹ ಈ ಬೆಟ್ಟಿಂಗ್ ನಲ್ಲಿ ದುಡ್ಡು ಕಟ್ಟಿ ಕೆಲವರು ಭರ್ಜರಿ ಲಾಭ ಮಾಡ್ಕೊಂಡಿದ್ರೆ ಇನ್ನು ಕೆಲವರು ನುಣ್ಣಗೆ ಬೋಳಿಸ್ಕೊಂಡು ಇದೀಗ ಒಟ್ರಾಶಿ ಟೆನ್ಷನ್ ನಲ್ಲಿದ್ದಾರೆ ಎನ್ನುವುದು ಪುತ್ತೂರಿನಲ್ಲಿ ಜನರ ಬಾಯಲ್ಲಿ ಓಡಾಡ್ತಿರೋ ವಿಷಯವಾಗಿದೆ.

ಒಟ್ಟಿನಲ್ಲಿ ಈ ಬಾರಿ ಪುತ್ತೂರಿನಲ್ಲಿ ಪುತ್ತಿಲರನ್ನು ಟಚ್ ಮಾಡಲು ಹೋಗಿ  ನಾಯಕರುಗಳು ಎಂದೂ ಮರೆಯಲಾಗದ ಏಟು ತಿಂದಿರುವುದು ಮಾತ್ರ ಸುಳ್ಳಲ್ಲ.

ಬೆಳ್ತಂಗಡಿ : ಹಾವು ರಕ್ಷಣೆ ವೇಳೆ ಸ್ನೇಕ್ ಅಶೋಕ್ ಗೆ ಹಾವು ಕಡಿತ, ಸ್ಥಿತಿ ಗಂಭೀರ

Posted by Vidyamaana on 2023-03-26 03:07:34 |

Share: | | | | |


ಬೆಳ್ತಂಗಡಿ : ಹಾವು ರಕ್ಷಣೆ ವೇಳೆ ಸ್ನೇಕ್ ಅಶೋಕ್ ಗೆ ಹಾವು ಕಡಿತ,  ಸ್ಥಿತಿ ಗಂಭೀರ

ಬೆಳ್ತಂಗಡಿ : ಮನೆಗೆ ಬಂದಿದ್ದ ಹಾವು ರಕ್ಷಣೆ ಮಾಡುವ ವೇಳೆ ನಾಗರ ಹಾವು ಕಚ್ಚಿ ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ಗಂಭೀರ ಸ್ಥಿತಿಯಲ್ಲಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿತ್ತಿದ್ದಾರೆ.


ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬಳಿಯಲ್ಲಿ ಮಾ.25 ರಂದು ರಾತ್ರಿ ಸುಮಾರು 10 ಗಂಟೆ ವೇಳೆ ಮನೆಯಲ್ಲಿ ನಾಗರ ಹಾವು ಇರುವ ಬಗ್ಗೆ ಮಾಹಿತಿ ನೀಡಿದ್ದು ಅದರಂತೆ ರಕ್ಷಣೆ ಮಾಡಲು ಸ್ನೇಕ್ ಅಶೋಕ್ ಲಾಯಿಲ ಹಿಡಿಯುವಾಗ ಬಲ ಕಾಲಿಗೆ ನಾಗರ ಹಾವು ಕಚ್ಚಿದೆ.ಘಟನೆ ಬಳಿಕ ನೇರ ಉಜಿರೆ ಬೆನಕ ಆಸ್ಪತ್ರೆಗೆ ಬಂದಿದ್ದು ಪರೀಕ್ಷಿಸಿದ ವೈದ್ಯರು ಮಂಗಳೂರು ಆಸ್ಪತ್ರೆಗೆ ರವಾನಿಸಲು ಸೂಚಿಸಿದ್ದಾರೆ. ಬಳಿಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಬಂದು ಪ್ರಥಮ ಚಿಕಿತ್ಸೆ ನೀಡಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಬಾ ಅಂಬುಲೆನ್ಸ್ ಚಾಲಕ ಜಲೀಲ್ ಮತ್ತು ಪತ್ರಕರ್ತ ಪ್ರತೀಕ್ ಕೋಟ್ಯಾನ್ ತಕ್ಷಣ ಮಂಗಳೂರು ಕಂಕನಾಡಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆಗೆ ದಾಖಲಿಸಿದ್ದಾರೆ.ಸ್ನೇಕ್ ಅಶೋಕ್ ಲಾಯಿಲ ಗಂಭೀರ ಸ್ಥಿತಿಯಲ್ಲಿದ್ದು ಸದ್ಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ನೇಕ್ ಅಶೋಕ್ ಅವರಿಗೆ ಈ ಮೊದಲು ನಾಗರ ಹಾವು ಕಚ್ಚಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಪ್ರಸಿದ್ಧ ಹಾವು ರಕ್ಷಕರಲ್ಲಿ ಸ್ನೇಕ್ ಅಶೋಕ್ ಲಾಯಿಲ ಒಬ್ಬರಾಗಿದ್ದಾರೆ.

ವೀಸಾ ನಿಯಮಕ್ಕೆ ಸಂಬಂಧಿಸಿ ಅಮೆರಿಕ ಸರ್ಕಾರ ಮಹತ್ವದ ಬದಲಾವಣೆ ಘೋಷಣೆ

Posted by Vidyamaana on 2023-02-16 10:27:04 |

Share: | | | | |


ವೀಸಾ ನಿಯಮಕ್ಕೆ ಸಂಬಂಧಿಸಿ ಅಮೆರಿಕ ಸರ್ಕಾರ ಮಹತ್ವದ ಬದಲಾವಣೆ ಘೋಷಣೆ

ವಾಷಿಂಗ್ಟನ್‌: ವೀಸಾ ನಿಯಮಕ್ಕೆ ಸಂಬಂಧಿಸಿ ಅಮೆರಿಕ ಸರ್ಕಾರ ಮಹತ್ವದ ಬದಲಾವಣೆ ಘೋಷಣೆ ಮಾಡಿದೆ. ಹೆತ್ತವರ ವೀಸಾ ಆಧಾರದಲ್ಲಿ ಅಮೆರಿಕಕ್ಕೆ ಬಂದವರಿಗೆ ದೀರ್ಘ‌ ಕಾಲದ ವೀಸಾ ನೀಡುವ ನಿಟ್ಟಿನಲ್ಲಿ ಇರಬೇಕಾದ ವಯಸ್ಸಿನ ಮಿತಿಯನ್ನು 21ರ ಒಳಗೇ ಇರುವಂತೆ ಆದೇಶ ಮಾಡಿದೆ.

ವೀಸಾ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಮಕ್ಕಳಿಗೆ 21 ದಾಟಿದರೆ ಅಂಥವರಿಗೆ ಹೆತ್ತವರ ಜತೆಗೆ ಅಮೆರಿಕಕ್ಕೆ ವಲಸೆ ಪ್ರಕ್ರಿಯೆ ಪೂರ್ತಿಗೊಳಿಸಲು ಅರ್ಹತೆ ಸಿಗುವುದಿಲ್ಲ.

ವಯಸ್ಸಿನ ಮಿತಿಯನ್ನು 21ರ ಒಳಗೇ ಇರಿಸಿರುವಂತೆ ಮಾಡಿರುವುದರಿಂದ ವಿಶೇಷವಾಗಿ ಭಾರತ ಮೂಲದ ನಾಗರಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅನುಕೂಲವಾಗಲಿದೆ. ಅಮೆರಿಕ ಸರ್ಕಾರದ ಮಕ್ಕಳ ಹಕ್ಕುಗಳ ರಕ್ಷಣೆ ಕಾಯ್ದೆ (ಸಿಎಸ್‌ಪಿಎ) ಅನ್ವಯ ಈ ಬದಲಾವಣೆ ಮಾಡಲಾಗಿದೆ. ತಂದೆ ಹಾಗೂ ತಾಯಿ ಉದ್ಯೋಗದಲ್ಲಿ ಇದ್ದು, ಅವರಿಗೆ ಕೌಟುಂಬಿಕ ಅಥವಾ ಉದ್ಯೋಗ ಆಧಾರಿತ ವೀಸಾ ನೀಡಲಾಗುತ್ತದೆ.

ಹೊಸ ವ್ಯವಸ್ಥೆಯಲ್ಲಿ ಅಮೆರಿಕ ವಲಸೆ ಮತ್ತು ಪೌರತ್ವ ಸೇವೆಗಳ ವಿಭಾಗ ಅವಧಿ ಮೀರಿದವರಿಗೆ ಹೊಸತಾಗಿ ಪೌರತ್ವ ನೀಡುವುದರ ಬಗ್ಗೆ ಮನವಿಗಳನ್ನು ಸ್ವೀಕರಿಸಲಿದೆ. ಈ ಮೂಲಕ ತೊಂದರೆಗೆ ಈಡಾಗಿರುವವರ ನೆರವಿಗೆ ಬರಲಿದೆ ಎಂದು ಇಂಪ್ರೂವ್‌ದಡ್ರೀಮ್‌ ಡಾಟ್‌ ಆರ್ಗ್‌ನ (improvethedream.org)ದೀಪ್‌ ಪಟೇಲ್‌ ಹೇಳಿದ್ದಾರೆ.

ಅಡಿಕೆ ರಬ್ಬರ್‌ಗೆ ಹಳದಿ ಚುಕ್ಕೆ ರೋಗ

Posted by Vidyamaana on 2023-07-18 12:31:41 |

Share: | | | | |


ಅಡಿಕೆ ರಬ್ಬರ್‌ಗೆ ಹಳದಿ ಚುಕ್ಕೆ ರೋಗ

ಪುತ್ತೂರು: ದ ಕ ಜಿಲ್ಲೆಯಲ್ಲಿ ಅಡಿಕೆಗೆ ಮತ್ತು ರಬ್ಬರ್‌ಗೆ ಎಲೆ ಚುಕ್ಕಿ ರೋಗ ಬಂದಿದ್ದು ಇದು ಕೃಷಿಕರ ಆತಂಕಕ್ಕೆ ಕಾರಣವಾಗಿದ್ದು ಈ ರೋಗಕ್ಕೆ ಕಾರಣ ಏನೆಂಬುದನ್ನು ಪತ್ತೆ ಮಾಡಬೇಕು ಮತ್ತು ಕೃಷಿಕರಿಗೆ ಸೂಕ್ತ ಪರಿಹಾರವನ್ನು ನೀಡಬೇಕಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸರಕಾರವನ್ನು ಆಗ್ರಹಿಸಿದ್ದಾರೆ.

ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಶಾಸಕರು ಮಳೆಗಾಲ ಆರಂಭದಲ್ಲೇ ಹಳದಿ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದರಿಂದ ಈ ರೋಗ ಎಲ್ಲಾ ಕಡೆಗಳಲ್ಲೂ ಹರಡುವ ಸಾಧ್ಯತೆ ಇದೆ. ಅಡಿಕೆಗೆ ಒಂದಲ್ಲ ಒಂದು ರೋಗ ಬರುತ್ತಲೇ ಇದ್ದು ಇದು ಕೃಷಿಕರ ಆತಂಕಕ್ಕೂ ಕಾರಣವಾಗಿದೆ. ಹಳದಿ ಎಲೆ ಚುಕ್ಕಿ ರೋಗದಿಂದ ಅಡಿಕೆ ಹಾಗೂ ರಬ್ಬರ್ ಗಿಡಗಳು ಸತ್ತು ಹೋದಲ್ಲಿ ಕೃಷಿಕರಿಗೆ ನಷ್ಟವಾಗಲಿದ್ದು ಇದಕ್ಕೆ ಸರಕಾರ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಮನವಿ ಮಾಡಿದರು. ವಿಟ್ಲದಲ್ಲಿರುವ ಸಿಪಿಸಿಆರ್‌ಐ ಎಂಬ ಸಂಸ್ಥೆ ಅಡಿಕೆ ವಿಚಾರದಲ್ಲಿ ಸಂಶೋಧನೆ ಮಾಡುವ ಕೇಂದ್ರ ಸರಕಾರದ ಒಂದು ಸಂಸ್ಥೆಯಾಗಿದ್ದು ಈ ಸಂಸ್ಥೆ ಅಡಿಕೆ ಕೃಷಿಕರ ಪರವಾಗಿ ಯಾವುದೇ ಕೆಲಸವನ್ನು ಮಾಡುತ್ತಿಲ್ಲ , ಅಡಿಕೆಗೆ ಬಂದಿರುವ ರೋಗದ ಕುರಿತು  ಸಂಶೋಧನೆ ಮಾಡಿ ಅದಕ್ಕೆ ಪರಿಹಾರ ಕಂಡುಕೊಳ್ಳುವಂತೆ ಸಂಸ್ಥೆಗೆ ಸೂಚನೆ ನೀಡಬೇಕು ಎಂದು ಶಾಸಕರು ಸರಕಾರದ ಗಮನಕ್ಕೆ ತಂದರು.

ಗಾಯಾಳು ಕೃಷಿಕರಿಗೆ ಮಾಶಾಸನ ಕೊಡಿ:

ದ ಕ ಜಿಲ್ಲೆಯಲ್ಲಿ ಸಾವಿರಾರು ಕೃಷಿಕರು ಅಡಿಕೆ ಮರ, ತೆಂಗಿನ ಮರ ಮತ್ತು ಮರಗಳಿಂದ ಬಿದ್ದು ಗಂಬೀರ ಸ್ವರೂಪದ ಗಾಯಗಳಾಗಿದೆ, ಚಿಕಿತ್ಸೆಗೂ ಸ್ಪಂದನೆ ನೀಡಲು ಸಾಧ್ಯವಾಗದೆ ಅಥವಾ ಚಿಕಿತ್ಸೆ ನೀಡಿದರೂ ಗುಣಮುಖರಾಗದೆ ಮಲಗಿದ್ದಲ್ಲೇ ಇದ್ದು ಅಂಥಹ ಕೃಷಿಕರಿಗೆ ಸರಕಾರ ತಿಂಗಳಿಗೆ ಕನಿಷ್ಟ 5೦೦೦ ಮಾಶಾಸನವನ್ನು ನೀಡಬೇಕು. ಮಲಗಿದ್ದಲ್ಲೇ ಇರುವ ಇಂಥಹ ಕೃಷಿಕರಿಗೆ ನಿತ್ಯ ಊಟಕ್ಕೆ, ಔಷಧಿ ಖರ್ಚಿಗೆ ಹಣವಿಲ್ಲದೆ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ ಇಂತವರು ರಾಜ್ಯದಲ್ಲಿ ಸುಮಾರು ೨೫ ಸಾವಿರಕ್ಕೂ ಮಿಕ್ಕಿ ಇರಬಹುದು ಅವರೆಲ್ಲರಿಗೂ ಮಾನವೀಯತೆ ನೆಲೆಯಲ್ಲಿ ಸರಕಾರ ಮಾಶಾಸನವನ್ನು ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

ಎಸ್ ಪಿ ಕಚೇರಿ ಸ್ಥಳಾಂತರ ಮಾಡಿ:

ಮಂಗಳೂರಿನಲ್ಲಿ ಕಾರ್ಯಚರಿಸುತ್ತಿರುವ ಜಿಲ್ಲಾ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡಬೇಕು. ಸ್ಥಳಾಂತರಕ್ಕಾಗಿ ಕೆಲವೊಂದು ಪ್ರಕ್ರಿಯೆಗಳು ಈಗಾಗಲೇ ನಡೆದಿದ್ದು ಅದನ್ನು ಮುಂದಿನ ಬಜೆಟ್‌ನೊಳಗೆ ಕಾರ್ಯರೂಪಕ್ಕೆ ತರಬೇಕು ಎಂದು ಶಾಸಕರು ಆಗ್ರಹಿಸಿದರು. ಮಂಗಳೂರಿನಲ್ಲಿ ಕಮಿಷನರೇಟ್ ವ್ಯಾಪ್ತಿ ಇರುವ ಕಾರಣ ಗ್ರಾಮಾಂತರ ಭಾಗವಾದ ಪುತ್ತೂರಿಗೆ ಎಸ್ ಪಿ ಕಚೇರಿಯನ್ನು ಶಿಫ್ಟ್ ಮಾಡಬೇಕಾದ ಅವಶ್ಯಕತೆ ಇದ್ದು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ ಇದು ಸಹಕಾರಿಯಾಗಲಿದೆ ಎಂದು ಶಾಸಕರು ಸರಕಾರಕ್ಕೆ ಮನವಿ ಮಾಡಿದರು.


ಪುತ್ತೂರಿನಲ್ಲಿ ಸುಸಜ್ಜಿತ ಸರಕಾರಿ ಆಸ್ಪತ್ರೆಯಿಲ್ಲದ ಕಾರಣ ಬಡವರಿಗೆ ತುಂಬಾ ತೊಂದರೆಯಾಗಿದೆ ಈ ಕಾರಣಕ್ಕೆ ಪುತ್ತೂರಿಗೆ ಮೆಡಿಕಲ್ ಕಾಲೇಜಿನ ಅವಶ್ಯಕತೆ ಇದ್ದು ಈಗಾಗಲೇ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡುವ ಕುರಿತು ಸರಕಾರದ ಹಂತದಲ್ಲಿ ಮಾತುಕತೆಗಳನ್ನು ನಡೆಸಲಾಗಿದೆ. ಮುಂದಿನ ಬಜೆಟ್‌ನಲ್ಲಿ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜಿಗೆ ಅನುದಾನವನ್ನು ಕಾಯ್ದಿರುಸುವಂತೆ ಸರಕಾರಕ್ಕೆ ಮನವಿ ಮಾಡಿದರು.

ದ ಕ ಜಿಲ್ಲೆಗೆ ಬಜೆಟ್‌ನಲ್ಲಿ ಏನೂ ಸಿಗುತ್ತಿಲ್ಲ


ಕಳೆದ ೧೫ ವರ್ಷಗಳಿಂದ ಬಜೆಟ್‌ನಲ್ಲಿ ದ ಕ ಜಿಲ್ಲೆಗೆ ಏನೂ ವಿಶೇಷ ಅನುದಾನಗಳು ಸಿಗುತ್ತಿಲ್ಲ. ಮಂಗಳಾ ಕಾರಿಡಾರ್ ಯೋಜನೆಯನ್ನು ಅನುಷ್ಠಾನಗೊಳಿಸಬೇಕಿದೆ. ಇದಕ್ಕೆ ೧೦೦೦ ಕೋಟಿ ಅನುದಾನ ಬೇಕಿದ್ದು ಪ್ರತೀ ವರ್ಷ ತಲಾ ೨೦೦ ಕೋಟಿಯಂತೆ ನೀಡಿದರೆ ಈ ಯೋಜನೆಯನ್ನು ಸಾಕಾರಗೊಳಿಸಬಹುದಾಗಿದೆ. ದ ಕ ಜಿಲ್ಲೆಯವರು ಮಾತನಾಡುವುದು ಕಡಿಮೆ, ನಾವು ಇನ್ನೊಬ್ಬರು ಮಾತನಾಡುವುದನ್ನು ಕೇಳುವುದು ಮಾತ್ರ ಆಗಾಗಿ ದ ಕ ಜಿಲ್ಲೆಗೆ ವಿಶೇಷ ಒತ್ತು ನೀಡುವಂತೆ ಮನವಿ ಮಾಡಿದರು.

ಮಾತಾಡದೆ ಇಷ್ಟು ಕಾರುಬಾರು ಮಾಡುತ್ತೀರಿ

ದ ಕ ಜಿಲ್ಲೆಯವರು ಮಾತನಾಡುವುದು ಕಡಿಮೆ ನಾವು ಇನ್ನೊಬ್ಬರು ಮಾತನಾಡುವುದನ್ನು ಕೇಳುವುದು ಮಾತ್ರ ಎಂದು ಶಾಸಕರು ಸಭಾಧ್ಯಕ್ಷರಲ್ಲಿ ಹೇಳಿದಾದ “ ನೀವು ಮಾತನಾಡದೆ ಇಷ್ಟೊಂದು ಕಾರುಬಾರು ಮಾಡುತ್ತೀರಿ ಇನ್ನು ಮಾತಾಡಿದ್ರೆ ಏನು ಮಾಡಬಹುದು. ನಾವಿಬ್ಬರೂ ಒಂದೇ ಕಡೆಯಿಂದ ಬಂದವರು ನೀವಲ್ಲಿ ಕುಳಿತುಕೊಂಡಿದ್ದೀರಿ , ಉಳಿದವರು ಆ ಬದಿಯಲ್ಲಿ ವಿರೋಧ ಪಕ್ಷದಲ್ಲಿ ಕೂತಿದ್ದಾರೆ ಎಂದು ಶಾಸಕರು ಹೇಳಿದರು.

ಅಡಿಕೆಗೆ ವಿರೋಧ ಮಾಡಿದವರು ದ್ವನಿ ಸೇರಿಸ್ತಾ ಇದ್ದಾರೆ

ಕಳೆದ ಬಾರಿ ಬಿಜೆಪಿ ಅದಿಕಾರದಲ್ಲಿದ್ದಾಗ ಬಿಜೆಪಿಯವರು ಅಡಿಕೆಗೆ ವಿರೋಧ ಮಾಡುತ್ತಿದ್ದವರು ಈಗ ಅಡಿಕೆ ಬೆಳೆಗಾರರ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಗೃಹ ಸಚಿವ ಅರಗಜ್ಞಾನೇಂದ್ರ ಅವರಿಗೆ ಮಾತಿನಲ್ಲೇ ಏಟು ನೀಡಿದ್ದಾರೆ. ನಾವು ವಿರೋಧ ಮಾಡಿಲ್ಲ ಯಾರು ವಿರೋಧ ಮಾಡಿದವರು ಎಂದು ಅರಗಜ್ಞಾನೇಂದ್ರ ಅವರು ಮರು ಪ್ರಶ್ನಿಸಿದಾಗ ನೀವು ಏನು ಮಾಡಿದ್ದೀರಿ ಎಂದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಶಾಸಕರು ಮರುತ್ತರ ನೀಡಿದರು.

ಮಂದಿನ ೨೫ ವರ್ಷ ಬಿಜೆಪಿಗೆ ವಿರೋಧ ಪಕ್ಷದ ಸ್ಥಾನ

ರಾಜ್ಯ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಚುನಾವಣಾ ಸಮಯದಲ್ಲಿ ಪ್ರಣಾಳಿಕೆಯಲ್ಲಿ ತಿಳಿಸಿದಾಗ ನನಗೆ ಒಂದು ರಈತಿಯ ಭಯ ಇತ್ತು. ಗೆದ್ದ ಬಳಿಕವೂ ಈ ಭಯ ಇತ್ತು. ಈ ಯೋಜನೆಗಳನ್ನು ಹೇಗೆ ಸರಕಾರ ಕೊಡಬಹುದು ಎಂಬ ಆತಂಕವೂ ಇತ್ತು ಆದರೆ ಬಜೆಟ್‌ನಲ್ಲಿ ಇದಕ್ಕೆ ಅನುದಾನ ಇಟ್ಟ ಬಳಿಕ ನನಗೆ ಧೈರ್ಯ ಬಂತು. ಗ್ಯಾರಂಟಿ ಯೋಜನೆಯನ್ನು ರಾಜ್ಯದ ಜನತೆ ಸ್ವೀಕರಿಸಿದ್ದಾರೆ ಈ ಕಾರಣಕ್ಕೆ ಮುಂದಿನ ೨೫ ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುತ್ತದೆ ಬಿಜೆಪಿ ವಿರೋಧ ಪಕ್ಷದಲ್ಲೇ ಕೂರಬೇಕಾದ ಸ್ಥಿತಿ ಬರಲಿದೆ ಎಂದು ಶಾಸಕರು ಹೇಳಿದರು.

ಉಪ್ಪಿನಂಗಡಿ : ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೋ ಚಿತ್ರೀಕರಣ :ಪೆರಿಯಡ್ಕ ನಿವಾಸಿ ರೆಹಮಾನ್ ಪೊಲೀಸ್ ವಶಕ್ಕೆ

Posted by Vidyamaana on 2024-07-22 17:34:57 |

Share: | | | | |


ಉಪ್ಪಿನಂಗಡಿ : ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೋ ಚಿತ್ರೀಕರಣ :ಪೆರಿಯಡ್ಕ ನಿವಾಸಿ ರೆಹಮಾನ್ ಪೊಲೀಸ್ ವಶಕ್ಕೆ

ಉಪ್ಪಿನಂಗಡಿ: ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜು.21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಮಾಡುತ್ತಿದ್ದ ರಹಿಮಾನ್ ನನ್ನು ಸ್ಥಳೀಯರು ಹಿಡಿದು ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದ ಅರುಣ್ ಕುಮಾರ್ ಪುತ್ತಿಲ, ಆರೋಪಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

Recent News


Leave a Comment: