ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಬಿಜೆಪಿ - ಜೆಡಿಎಸ್ ಪಾದಯಾತ್ರೆ :ಎಚ್ ಡಿಕೆ ತೆರಳಿದ ಬಳಿಕ ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗಿ

Posted by Vidyamaana on 2024-08-04 06:18:29 |

Share: | | | | |


ಬಿಜೆಪಿ - ಜೆಡಿಎಸ್ ಪಾದಯಾತ್ರೆ :ಎಚ್ ಡಿಕೆ ತೆರಳಿದ ಬಳಿಕ ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗಿ

ರಾಮನಗರ : ಮುಡಾ ಪ್ರಕರಣ ವಿರೋಧಿಸಿ ನಡೆಯುತ್ತಿರುವ ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಬಿಜೆಪಿಯ ಮಾಜಿ ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಪಾದಯಾತ್ರೆಯಲ್ಲಿ ಹಾಜರಾಗಿ ಹೆಜ್ಜೆ ಹಾಕಿದ್ದಾರೆ.ಪ್ರಜ್ವಲ್​​ ರೇವಣ್ಣ ಪೆನ್​​​​​​​​ಡ್ರೈವ್​​​​ ವಿಚಾರ ಮುಂದಿಟ್ಟು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರೀತಂಗೌಡ ವಿರುದ್ಧ ಆಕ್ರೋಶ ಹೊರಹಾಕಿ ಪಾದಯಾತ್ರೆಗೆ ಬರುವುದನ್ನು ವಿರೋಧಿಸಿದ್ದರು.

BREAKING : ಪೋಕೋ ಪ್ರಕರಣದಲ್ಲಿ ಬಿಎಸ್‌ವೈಗೆ ಬಂಧನದ ಭೀತಿ : ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್

Posted by Vidyamaana on 2024-06-13 17:16:18 |

Share: | | | | |


BREAKING : ಪೋಕೋ ಪ್ರಕರಣದಲ್ಲಿ ಬಿಎಸ್‌ವೈಗೆ ಬಂಧನದ ಭೀತಿ : ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್

ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಇದೀಗ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ ಬೆಂಗಳೂರಿನ ಒಂದನೇ ತ್ವರಿತಗತಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್​ ತಿಂಗಳಲ್ಲಿ ಎಫ್​ಐಆರ್ ದಾಖಲಾಗಿತ್ತು.

ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Posted by Vidyamaana on 2024-05-05 16:14:09 |

Share: | | | | |


ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ನಡೆಯಲಿರುವ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. 5ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ ಸೇವೆ ನಡೆಯಿತು.‌ ಮೇ. 5ರಂದು ಬೆಳಿಗ್ಗೆ ದೇವಳದಲ್ಲಿ ನಿತ್ಯ ಮಹಾಪೂಜೆ ನಡೆಯಿತು. ನಂತರ ಶಾಂತಿನಗರ ಪೂಜಾ ಮೈದಾನದಿಂದ ಭಜನೆಯೊಂದಿಗೆ ಮೆರವಣಿಗೆ ಮೂಲಕ ಸಾಗಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಿಸಲಾಯಿತು. ಬಳಿಕ ತುಲಾಭಾರ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ನಡೆಯಿತು. ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಆಡಳಿತ ಮೊಕ್ತೇಸರ ರಾಜೇಶ್ ಶಾಂತಿನಗರ, ನಿಕಟಪೂರ್ವ ಆಡಳಿತ ಮೊಕ್ತೇಸರ ಯು‌.ಜಿ.ರಾಧ, ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಸಹಿತ ಹಲವರು ಭಾಗವಹಿಸಿದ್ದರು.‌ 

ಪುತ್ತೂರು : ನಳಿನ್ ಹಾಗೂ ಡಿವಿ ಕುರಿತು ಅವಹೇಳನಕಾರಿ ಬ್ಯಾನರ್ ಅಳವಡಿಸಿದ ಪ್ರಕರಣ. –ವಿಶ್ವನಾಥ್- ಮಾಧವ ಪೊಲೀಸ್ ವಶಕ್ಕೆ

Posted by Vidyamaana on 2023-05-15 13:48:30 |

Share: | | | | |


ಪುತ್ತೂರು : ನಳಿನ್ ಹಾಗೂ ಡಿವಿ ಕುರಿತು ಅವಹೇಳನಕಾರಿ ಬ್ಯಾನರ್ ಅಳವಡಿಸಿದ ಪ್ರಕರಣ. –ವಿಶ್ವನಾಥ್- ಮಾಧವ ಪೊಲೀಸ್ ವಶಕ್ಕೆ

ಪುತ್ತೂರು : ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರ ವಿರುದ್ಧ ಅವಹೇಳನಕಾರಿ ಬರಹದೊಂದಿಗೆ  ಭಾವಚಿತ್ರ ಲಗತ್ತಿಸಿ ಬ್ಯಾನರ್‌ ಅಳವಡಿಸಿದ ಪುತ್ತೂರು ಬಸ್ಸು ನಿಲ್ದಾಣದ ಬಳಿ ಪ್ರಕರಣದಲ್ಲಿ ಇಬ್ಬರನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನರಿಮೊಗರು ಗ್ರಾಮದ ಸಹೋದರರಾದ ವಿಶ್ವನಾಥ್‌ ಹಾಗೂ ಮಾಧವ ಪೊಲೀಸ್‌ ವಶದಲ್ಲಿರುವವರು. ಪುತ್ತೂರು ಕೆ.ಎಸ್ಆರ್.ಟಿಸಿ ಬಸ್ಸು ನಿಲ್ದಾಣದ ಎದುರು ಅರಣ್ಯ ಇಲಾಖೆಯ ಆವರಣ ಗೋಡೆ ಬಳಿ ಅವಹೇಳನಕಾರಿ ಬ್ಯಾನರ್ ಅಳವಡಿಸಲಾಗಿತ್ತು.

ಪುತ್ತೂರು ನಗರಸಭಾ ಆಯುಕ್ತ ಮಧು ಎಸ್‌ ಮನೋಹರ್‌  ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 ಅದರಲ್ಲಿ   “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರಧ್ಧಾಂಜಲಿ “ ಎಂದು ನಳಿನ್‌ ಕುಮಾರ್‌ ಕಟೀಲು ಹಾಗೂ  ಡಿ.ವಿ ಸದಾನಂದ ಗೌಡ ಎಂದು ಬರೆಯಲಾಗಿತ್ತು.  ಆ ಬ್ಯಾನರ್‌ ಗೆ  ಚಪ್ಪಲಿ ಹಾರವನ್ನು ಹಾಕಿರುವ ಬಗ್ಗೆಯೂ  ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಲಾಗಿತ್ತು.

ವಿಟ್ಲ : ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ

Posted by Vidyamaana on 2023-06-27 04:36:48 |

Share: | | | | |


ವಿಟ್ಲ : ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ

ವಿಟ್ಲ : ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ.

ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ.ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆನ್ನಲಾಗಿದೆ.

ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪಸ್ವಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದೆ.ಈ ಬಗ್ಗೆ ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದು, ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುತ್ತೂರಿಗರೇ ಇಂದು ಇಲ್ಲೆಲ್ಲ ಕರೆಂಟ್ ಇರಲ್ಲ; ಈ ಲಿಸ್ಟ್ನಲ್ಲಿ ನಿಮ್ಮ ಏರಿಯಾ ಇದೆಯಾ ನೋಡಿ

Posted by Vidyamaana on 2023-11-09 04:50:50 |

Share: | | | | |


ಪುತ್ತೂರಿಗರೇ ಇಂದು ಇಲ್ಲೆಲ್ಲ ಕರೆಂಟ್ ಇರಲ್ಲ; ಈ ಲಿಸ್ಟ್ನಲ್ಲಿ ನಿಮ್ಮ ಏರಿಯಾ ಇದೆಯಾ ನೋಡಿ

ಪುತ್ತೂರು: 110/33/11 ಕೆವಿ ಪುತ್ತೂರು

ವಿದ್ಯುತ್‌ ಉಪಕೇಂದ್ರದಲ್ಲಿ ಪಾಲನಾ

ಕಾರ್ಯ ಹಮ್ಮಿಕೊ೦ಡಿರುವುದರಿ೦ದ

ನ.9ರಂದು ಪೂರ್ವಾಹ್ನ 10 ರಿಂದ

ಸಾಯಂಕಾಲ 4 ಗಂಟೆಯವರೆಗೆ 33 ಕೆಪಿ

ಪುತ್ತೂರು, ಕಡಬ, ಸುಬ್ರಹ್ಮಣ್ಯ, 33ಕವಿ

ಪುತ್ತೂರು-ಕುಂಬ್ರ-ಬೆಳ್ಳಾರೆ, 33 ಕೆವಿ

ಪುತ್ತೂರು-ಸುಳ್ಯ ಹಾಗೂ 33 ಕೆವಿ ಪುತ್ತೂರು

ಸವಣೂರು ನೆಲ್ಯಾಡಿ ವಿದ್ಯುತ್‌ ಮಾರ್ಗಗಳ

ವಿದ್ಯುತ್‌ ನಿಲುಗಡೆ ಮಾಡಲಾಗುವುದು.

ಆದ್ದರಿಂದ 110/33/11 ಕೆವಿ ಪುತ್ತೂರು

ಹಾಗೂ 33/11 ಕೆವಿ ಕಡಬ, ನೆಲ್ಯಾಡಿ,ಸವಣೂರು, ಬಿಂದು ಮತ್ತು ಕ್ಯಾಂಪೋ

ವಿದ್ಯುತ್‌ ಉಪಕೇಂದ್ರದಿಂದ ಹೊರಡುವ

ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್‌

ಸರಬರಾಜಾಗುವ ವಿದ್ಯುತ್‌ ಬಳಕೆದಾರರು

ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ

Recent News


Leave a Comment: