ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಸುದ್ದಿಗಳು News

Posted by vidyamaana on 2024-07-23 21:09:49 |

Share: | | | | |


ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ  ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಬೆಂಗಳೂರು : ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ಪರವಾನಗಿ ಹಾಗೂ ಅದೇ ಶಾಲೆಯ ತರಬೇತುದಾರನ ಚಾಲನಾ ಪರವಾನಗಿಯನ್ನು (ಡಿಎಲ್‌) ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ರದ್ದುಗೊಳಿಸಿದೆ. 

ಯುವತಿಗೆ ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಅಡಿ ಕಾರು ತರಬೇತಿದಾರನ ವಿರುದ್ಧ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ನಗರದ ಯಾವುದೇ ಡ್ರೈವಿಂಗ್ ಶಾಲೆಯಲ್ಲೂ ಈ ರೀತಿಯ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಾಲಕ್ಷ್ಮೀಪುರದ 18 ವರ್ಷದ ಯುವತಿ ನೀಡಿದ್ದ ದೂರು ಆಧರಿಸಿ, ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?:‌

ದೂರು ನೀಡಿದ್ದ ಯುವತಿ ಕಾರು ಚಾಲನೆ ಕಲಿಯಲು ಮಾರುತಿ ಡ್ರೈವಿಂಗ್‌ ಸ್ಕೂಲ್‌ಗೆ ಸೇರಿದ್ದರು. ಅಣ್ಣಪ್ಪ ಎಂಬಾತ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದರು. ಒಂದು ತಿಂಗಳ ಕೋರ್ಸ್‌ ಮುಕ್ತಾಯವಾದ ಮೇಲೆ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್‌ಗೆ ₹750 ಕೊಡಬೇಕು ಎಂದು ಯುವತಿಯನ್ನು ಕೇಳಿಕೊಂಡಿದ್ದರು. ಯುವತಿ 15 ದಿನಗಳ ವಿಶೇಷ ಕ್ಲಾಸ್‌ಗೆ ಅಣ್ಣಪ್ಪ ಅವರಿಗೆ ₹10,500 ಪಾವತಿಸಿದ್ದರು. ಅದರಂತೆ ಅಣ್ಣಪ್ಪ ವಿಶೇಷ ತರಬೇತಿ ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.

ಪ್ರತಿದಿನ ಯುವತಿಯ ಮನೆ ಬಳಿ ಬಂದು ಆಕೆಯ ಕಾರಿನಲ್ಲೇ ಅಣ್ಣಪ್ಪ ಚಾಲನೆ ತರಬೇತಿ ನೀಡುತ್ತಿದ್ದರು. ಜುಲೈ 7ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಚಾಲನೆ ಬಗ್ಗೆ ಹೇಳಿಕೊಡಲು ಮುಂದಾಗಿದ್ದರು. ಬಸವೇಶ್ವರ ನಗರದ ನ್ಯಾಷನಲ್‌ ಶಾಲೆಯ ಮೇಲ್ಸೇತುವೆಯಲ್ಲಿ ತೆರಳುವಾಗ, ಯುವತಿ ಕಾರು ಚಾಲನೆ ಮಾಡುತ್ತಿದ್ದರು. ಆಗ ಅಣ್ಣಪ್ಪ ಅಸಭ್ಯವಾಗಿ ವರ್ತಿಸಿದ್ದರು ಎಂದು ಪೊಲೀಸರು ತಿಳಿಸಿದರು.

ತರಬೇತುದಾರನ ಅಸಭ್ಯ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಕಾರನ್ನು ಮನೆಯತ್ತ ತಿರುಗಿಸಿದ್ದರು. ಅದಾದ ಮೇಲೆ ತರಬೇತುದಾರ ಸುಮ್ಮನಾಗಿದ್ದರು. ಅಣ್ಣಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

 Share: | | | | |


ಮಂಗಳೂರು ವ್ಯಕ್ತಿಯ ಮೇಲೆ ತಲವಾರು ದಾಳಿ:ಚರಣ್ ರಾಜ್ ಸಹಿತ ಮೂವರ ಬಂಧನ

Posted by Vidyamaana on 2023-08-22 10:50:41 |

Share: | | | | |


ಮಂಗಳೂರು  ವ್ಯಕ್ತಿಯ ಮೇಲೆ ತಲವಾರು ದಾಳಿ:ಚರಣ್ ರಾಜ್ ಸಹಿತ ಮೂವರ ಬಂಧನ

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನ್ಯ ಕೋಮಿನ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಗಳಲ್ಲಿ ಮೂವರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚರಣ್ ರಾಜ್ ( 23), ಸುಮಂತ್ ಬರ್ಮನ್ (24), ಅವಿನಾಶ (24) ಬಂಧಿತ ಆರೋಪಿಗಳು.

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್.ವಿ.ಶೆಟ್ಟಿ ಕಾಲೇಜು ರೋಡ್ ಬಳಿ ವ್ಯಕ್ತಿಯೊಬ್ಬರು ನಡೆದುಕೊಂಡು ಮನೆಗೆ ಹೋಗುತ್ತಿರುವಾಗ ಉರುಂದಾಡಿ ಗುಡ್ಡೆಯ ಚರಣ್, ಸುಮಂತ್ ಬರ್ಮನ್ ಹಾಗೂ ಕೋಡಿಕಲ್ ನ ಅವಿನಾಶ್ ಎಂಬವರು ಸ್ಕೂಟಿಯಲ್ಲಿ ಬಂದು ಅಡ್ಡಹಾಕಿ ತಡೆದು ತಲವಾರು ಬಿಸೀದ್ದಾರೆ. ಈ ವೇಳೆ ವ್ಯಕ್ತಿಯು ತಪ್ಪಿಸಿಕೊಂಡಿದ್ದಾರೆ. ಆದರೆ ಮುಖಕ್ಕೆ ಗಾಯವಾಗಿದೆ.


ಇನ್ನು ಕಾವೂರು ಪೊಲೀಸರು ಕಾರ್ಯಪ್ರವತ್ತರಾಗಿ ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಝೀರೋದಿಂದ 256 ಬೆಡ್ ಆಸ್ಪತ್ರೆ ಕಟ್ಟಿದ ಸಾಮಾನ್ಯ ರೈತ ಕುಟುಂಬದ ಡಾ.ಧನಂಜಯ ಸರ್ಜಿ ; ಕಡಿಮೆ ವೆಚ್ಚದ ವೈದ್ಯಕೀಯ ಚಿಕಿತ್ಸೆ, 160 ವಿಶೇಷ ಚೇತನ ಮಕ್ಕಳ ದತ್ತು, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವನ - ಸಾಧನೆ

Posted by Vidyamaana on 2024-05-28 22:21:06 |

Share: | | | | |


ಝೀರೋದಿಂದ 256 ಬೆಡ್ ಆಸ್ಪತ್ರೆ ಕಟ್ಟಿದ ಸಾಮಾನ್ಯ ರೈತ ಕುಟುಂಬದ ಡಾ.ಧನಂಜಯ ಸರ್ಜಿ ; ಕಡಿಮೆ ವೆಚ್ಚದ ವೈದ್ಯಕೀಯ ಚಿಕಿತ್ಸೆ, 160 ವಿಶೇಷ ಚೇತನ ಮಕ್ಕಳ ದತ್ತು, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವನ - ಸಾಧನೆ

ಶಿವಮೊಗ್ಗ, ಮೇ.28: ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದು, ಸಣ್ಣ ಪ್ರಾಯದಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಣ ಪಡೆದು ಶಿವಮೊಗ್ಗ ಜಿಲ್ಲೆಯಲ್ಲಿ ಖ್ಯಾತ ಮಕ್ಕಳ ತಜ್ಞರಾಗಿ ಸಾವಿರಾರು ಮಂದಿಗೆ ದೃಷ್ಟಿಯಿತ್ತವರು. 

ಉತ್ಕೃಷ್ಟ ಗುಣಮಟ್ಟದ ಸೇವೆ, ಕೈಗೆಟುಕುವ ದರದಲ್ಲಿ ರೋಗಿಗಳಿಗೆ ಒಂದೇ ಸೂರಿನಡಿ ಸರ್ವ ರೀತಿಯ ಆರೋಗ್ಯ ಸೇವೆ ನೀಡುವ ಡಾ.ಧನಂಜಯ ಸರ್ಜಿ ಶಿವಮೊಗ್ಗದಲ್ಲಿ ಸ್ಥಾಪಿಸಿದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಲೆನಾಡಿನಲ್ಲಿ ಮನೆಮಾತಾಗಿದೆ. ಖಾಸಗಿ ಆಸ್ಪತ್ರೆ ಗಳೆಂದರೆ ಬಿಲ್ ನೋಡುತ್ತಲೇ ರೋಗಿಯ ಎದೆ ಝಲ್ ಎನ್ನುತ್ತದೆ. ಆದರೆ, ಇದಕ್ಕೆ ತದ್ವಿರುದ್ಧ ಸರ್ಜಿ ಆಸ್ಪತ್ರೆ. 2014ರಲ್ಲಿ ಝೀರೋ ಬೆಡ್ ನಿಂದ ಆರಂಭಗೊಂಡ ಆಸ್ಪತ್ರೆ ಇಂದು 256 ಬೆಡ್ ಗೆ ತಲುಪಿದ್ದು ಪ್ರಸ್ತುತ ಆರೋಗ್ಯ ಕ್ಷೇತ್ರದ ಹೀರೋ ಆಗಿ ಬೆಳೆದದ್ದು ಅಚ್ಚರಿಯ ಸಂಗತಿ.

ಸರಳ, ಸಜ್ಜನ, ಹಮ್ಮು ಬಿಮ್ಮು ಇಲ್ಲದ ಸಹೃದಯಿ ವ್ಯಕ್ತಿತ್ವದ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರೂ ಆದ ಡಾ.ಧನಂಜಯ ಸರ್ಜಿ ಅವರು ಮೂಲತಃ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಗೊತ್ತೇನಹಳ್ಳಿ ಗ್ರಾಮದವರು. ಸರ್ಜಿ ರುದ್ರಪ್ಪ, ತಾಯಿ ರೇಣುಕಾ ಅವರ ಪುತ್ರ. ಇವರ ಎಲ್ಲ ಸಾಧನೆಯ ಹಿಂದೆ ಪತ್ನಿ, ಆಸ್ಪತ್ರೆಯ ನಿರ್ದೇಶಕರೂ ಆದ ನಮಿತಾ ಸರ್ಜಿ ಅವರ ಶ್ರಮವೂ ಇದೆ. 


ದಾವಣಗೆರೆಯ ಜೆಜೆಎಂ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಅತ್ಯುತ್ತಮ ವಿದ್ಯಾರ್ಥಿಯಾಗಿ ಹೊರಹೊಮ್ಮಿದವರು ಡಾ.ಧನಂಜಯ ಸರ್ಜಿ. ಶಿಕ್ಷಣದ ಹಂತದಲ್ಲೇ ಜಿಲ್ಲೆಯ ಆರೋಗ್ಯ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಕನಸು ಕಂಡವರು. ಆ ಕನಸು ಈಗ ಸಾಕಾರಗೊಂಡಿದೆ. 2007ರ ಮಾರ್ಚ್ 18ರಂದು ಶಿವಮೊಗ್ಗದಲ್ಲಿ ಸರ್ಜಿ ಚೈಲ್ಡ್ ಕೇರ್ ಸೆಂಟರ್ ಮೂಲಕ ಇವರ ಸೇವೆ ಆರಂಭಗೊಂಡಿತ್ತು. ನಂತರ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಲ್ಲಿ ತಿಂಗಳ ಸಂಬಳಕ್ಕೆ ಕೆಲಸ ಮಾಡಿದ್ದರು. 2014ರಲ್ಲಿ ಹೊಸ ಆಸ್ಪತ್ರೆ ಆರಂಭಿಸಿ, ಕೇವಲ 9 ವರ್ಷದಲ್ಲಿ 256 ಬೆಡ್ ವರೆಗೆ ತಲುಪಿದೆ.ಜಿಲ್ಲಾಡಳಿತದಿಂದ ಪ್ರಶಂಸಾ ಪತ್ರ 


ಎರಡು ವರ್ಷಗಳ ಹಿಂದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಕ್ಕಳ ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಸಂದರ್ಭ ನವಜಾತ 13 ಮಕ್ಕಳನ್ನೂ ಸರ್ಜಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಸರ್ಜಿ ಆಸ್ಪತ್ರೆಯಲ್ಲಿ ಈ ಶಿಶುಗಳಿಗೆ ಸೂಕ್ತ ಚಿಕಿತ್ಸೆ ನೀಡಿದ್ದು ಜೀವ ಕಾಪಾಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಧನಂಜಯ ಸರ್ಜಿ ಅವರಿಗೆ ಪ್ರಶಂಸಾ ಪತ್ರ ನೀಡುವ ಮೂಲಕ ಸೇವೆಗೆ ಬೆನ್ನು ತಟ್ಟಿ ಪ್ರೋತ್ಸಾಹಿಸಿತ್ತು.


ಇಂದು ಒಂದೇ ಸೂರಿನಡಿ ಎಲ್ಲಾ ರೀತಿಯ ಚಿಕಿತ್ಸಾ ಸೌಲಭ್ಯದ ಆಸ್ಪತ್ರೆಯನ್ನಾಗಿಸಿದ್ದಾರೆ. ಕೈಗೆಟಕುವ ದರ, ಉತ್ಕೃಷ್ಟ ಹಾಗೂ ನಗುಮೊಗದ ವಿಶ್ವಾಸಾರ್ಹ ಸೇವೆಯೇ ಇವರ ಯಶಸ್ಸಿಗೆ ಕಾರಣ. ಈಗ ಅವರ ಆಸ್ಪತ್ರೆಗೆ ರಾಜ್ಯದ ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಶಿರಸಿ, ಚಿಕ್ಕಮಗಳೂರು, ಹಾಸನ, ಅರಸೀಕರ ಹಾಗೂ ತುಮಕೂರು, ಬೆಂಗಳೂರು ಜಿಲ್ಲೆಗಳಿಂದ ನಿತ್ಯವೂ ನೂರಾರು ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದಾರೆ. ಒಟ್ಟು 75 ಐಸಿಯು ಬೆಡ್ ಗಳು ಆಪರೇಷನ್ ಥಿಯೇಟರ್ ಗಳ ಸೌಲಭ್ಯ ಇದೆ. ಎರಡೂ ಸರ್ಜಿ ಆಸ್ಪತ್ರೆ ಸೇರಿ ವರ್ಷಕ್ಕೆ ಎರಡು ಲಕ್ಷ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರತಿದಿನಕ್ಕೆ ಸರಾಸರಿ 500ರಿಂದ 750 ರೋಗಿಗಳನ್ನು ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ವರ್ಷದಲ್ಲಿ 1800ರಿಂದ 2000 ವರೆಗೆ ಹೆರಿಗೆ ಆಗುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ

ಕಾಣಿಯೂರು ಎಲುವೆ ರಿಕ್ಷಾ ಚಾಲಕನ ಆತ್ಮಹತ್ಯೆ ಪ್ರಕರಣ ಸಾವಿನ ಬಗ್ಗೆ ಸಂಶಯ

Posted by Vidyamaana on 2023-12-29 21:51:48 |

Share: | | | | |


ಕಾಣಿಯೂರು ಎಲುವೆ ರಿಕ್ಷಾ ಚಾಲಕನ ಆತ್ಮಹತ್ಯೆ ಪ್ರಕರಣ  ಸಾವಿನ ಬಗ್ಗೆ ಸಂಶಯ

ಕಾಣಿಯೂರು: ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು, ಇದೀಗ ಸಾವಿನಲ್ಲಿ ಸಂಶಯ ವ್ಯಕ್ತಗೊಂಡು ದೂರು ದಾಖಲಾಗಿದೆ.


ಕಾಣಿಯೂರಿನ ಬೆದ್ರಾಜೆ ಮನೆ ವಸಂತ (42) ಅವರ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ ವಸಂತ ಮರಕ್ಕೆ ನೈಲಾನ್‌ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.



ವಸಂತ ಅವರು ಕಾಣಿಯೂರು ಪೇಟೆಯಲ್ಲಿ ಆಟೋರಿಕ್ಷಾ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು ಡಿ. 27ರಂದು ಬೆಳಗ್ಗೆ 6 ಗಂಟೆಗೆ ಅವರ ಆಟೋರಿಕ್ಷಾದಲ್ಲಿ ಬಾಡಿಗೆಗೆಂದು ಮನೆಯಿಂದ ಹೋಗಿ ವಾಪಸು ಮನೆಗೆ ಬಂದವರು ಮನೆಯಲ್ಲಿನ ತೋಟದಲ್ಲಿ ಅಡಿಕೆ ಹೆಕ್ಕುವ ಕೆಲಸವನ್ನು ಮಾಡಿಕೊಂಡಿದ್ದರು.


ಮಧ್ಯಾಹ್ನ ವಸಂತ ಅವರು ಊಟ ಮಾಡಿ ಆಟೋರಿಕ್ಷಾದಲ್ಲಿ ಮನೆಯಿಂದ ಹೋದವರು ಏಲುವೆ ಎಂಬಲ್ಲಿಗೆ ಬಾಡಿಗೆಗೆ ಹೋಗುತ್ತಿರುವುದಾಗಿ ಅವರ ಅಣ್ಣ ಗಣೇಶ್‌ ಅವರಿಗೆ ತಿಳಿಸಿದ್ದರು. ಅಲ್ಲಿಂದ ಮತ್ತೆ ಕಾಲ್ ಮಾಡಿ ಪದ್ಮಯ ಗೌಡರ ಅಳಿಯ ಮೊಬೈಲನ್ನು ಎಳೆದುಕೊಂಡು ಹೋಗಿದ್ದಾರೆ ಎಂದು ಗಣೇಶರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ಮತ್ತೆ ಎರಡೂ ಪೋನ್ ಸ್ವಿಚ್ ಆಫ್ ಆಗಿತ್ತು.  



ಎಲುವೆ ಎಂಬಲ್ಲಿಯ ಕಾಡಿನ ಬಳಿ ಆಟೋ ರಿಕ್ಷಾ ರಸ್ತೆಯ ಬಳಿ ನಿಂತಿರುವುದು ಕಂಡುಬಂದಿದ್ದು, ಸ್ವಲ್ಪ ದೂರದಲ್ಲಿ ಮರವೊಂದಕ್ಕೆ ನೈಲಾನ್‌ ಹಗ್ಗದಿಂದ ವಸಂತ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡುಬಂದಿದ್ದರು. ಈ ಕುರಿತು ವಸಂತ ಅವರ ಸಹೋದರ ಗಣೇಶ್‌ ಅವರು ಮರಣದಲ್ಲಿ ಸಂಶಯವಿದ್ದು, ತನಿಖೆ ನಡೆಸುವಂತೆ ಬೆಳ್ಳಾರೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.


ಮೃತದೇಹದ ಕಾಲುಗಳಲ್ಲಿ ಮಣ್ಣು ಮೆತ್ತಿಕೊಂಡಿದೆ. ಚಪ್ಪಲಿ ನಾಪತ್ತೆಯಾಗಿದ್ದು ಮತ್ತಷ್ಟು ಸಂಶಯಕ್ಕೆ ಕಾರಣವಾಗಿದೆ.


ಪ್ರಕರಣಕ್ಕೆ ವೈರಲ್  ವಿಡಿಯೋ ಕಾರಣವೇ..? 

ಕೆಲ ದಿನಗಳ ಹಿಂದೆ 

 ವಿಡಿಯೋ ವೈರಲ್ ಆಗಿತ್ತು.  ಆ ವೀಡಿಯೋವನ್ನು ಆತ್ಮಹತ್ಯೆ ಮಾಡಿಕೊಂಡ ವಸಂತರು ಯಾರಿಗೋ ತೋರಿಸಿದ್ದರು ಎನ್ನಲಾಗಿದೆ.  


ನಂತರ ಅದೇ ವಿಷಯದಲ್ಲಿ ವಸಂತರಿಗೆ ಹಲ್ಲೆ ನಡೆದಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅದೇ ವಿಡಿಯೋ ಇದ್ದ ಮೊಬೈಲನ್ನು ಎಳೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಮಡಿಕೇರಿ : ಹನಿಟ್ರ್ಯಾಪ್ ಗೆ ಸಿಲುಕಿದ ನಿವೃತ್ತ ಯೋಧನಿಂದ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ..!

Posted by Vidyamaana on 2023-11-09 07:41:16 |

Share: | | | | |


ಮಡಿಕೇರಿ : ಹನಿಟ್ರ್ಯಾಪ್ ಗೆ ಸಿಲುಕಿದ ನಿವೃತ್ತ ಯೋಧನಿಂದ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ..!

ಮಡಿಕೇರಿ : ಫೇಸ್‌ಬುಕ್‌ನಲ್ಲಿ ಪರಿಚಯವಾಗಿ ಹನಿಟ್ರ್ಯಾಪ್‌ ನಲ್ಲಿ ಸಿಲುಕಿ ಯುವತಿಯ ಬ್ಲ್ಯಾಕ್‌ಮೇಲ್‌ನಿಂದ ಬೇಸತ್ತು ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ಸಂಭವಿಸಿದೆ.ಈತನನ್ನು ಪ್ರೀತಿಯ ನಾಟಕವಾಡಿ ಬಲೆಗೆ ಕೆಡವಿ ಹನಿಟ್ರ್ಯಾಪ್‌ ಮಾಡಿದ ಯುವತಿಯನ್ನು ಜೀವಿತಾ ಎಂದು ಗುರುತಿಸಲಾಗಿದೆ.ಮಡಿಕೇರಿ ನಗರದ ಉಕ್ಕುಡ ನಿವಾಸಿ ಸಂದೇಶ್ (38) ನಾಪತ್ತೆಯಾದ ನಿವೃತ್ತ ಯೋಧ.ಜೀವಿತಾ ಎಂಬ ಮಹಿಳೆ ವಿರುದ್ಧ ಸಂದೇಶ್​ ಆರೋಪ ಮಾಡಿದ್ದಾರೆ. ಮದುವೆಯಾಗಿದ್ದ ಯೋಧನನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡ ಜೀವಿತಾ ಆತನೊಂದಿಗೆ ಸುತ್ತಾಟ ಮಾಡಿ ಫೋಟೋ ಹಾಗೂ ವೀಡಿಯೊ ಇಟ್ಟುಕೊಂಡು ತನ್ನ ಸ್ನೇಹಿತರೊಂದಿಗೆ ಸೇರಿ ಬ್ಲ್ಯಾಕ್‌ಮೇಲ್‌ ಮಾಡಿ ಲಕ್ಷಾಂತರ ರೂ. ಕಿತ್ತುಕೊಂಡಿದ್ದಾಳೆ. ಹಣ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಯೋಧನಿಗೆ ಏಕಾಏಕಿ 50 ಲಕ್ಷ ರೂ.


ಗೆ ಬೇಡಿಕೆ ಇಟ್ಟಿದ್ದಳು. ಇದರಿಂದ ಕಂಗಾಲಾದ ಯೋಧ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸತೀಶ್ ಎಂಬ ಪೊಲೀಸ್​ ಹೆಸರನ್ನೂ ಯೋಧ ಸಂದೇಶ್ ಬರೆದಿದ್ದಾರೆ. ಪೊಲೀಸ್ ಮಾನಸಿಕ‌ ಕಿರುಕುಳ ಆರೋಪ ಮಾಡಿದ್ದಾರೆ.ಮಡಿಕೇರಿ ನಗರದ ಪಂಪಿನ ಕೆರೆ ಬಳಿ ಸಂದೇಶ್​ಗೆ ಸೇರಿದ ವಸ್ತು ಪತ್ತೆಯಾಗಿವೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರಿಂದ ಶೋಧ ಕಾರ್ಯ ಆರಂಭಿಸಲಾಗಿದೆ.ಯೋಧನ ಪತ್ನಿ ನೀಡಿದ ದೂರಿನ ಪ್ರಕಾರ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

Road Accident: ಬೈಕ್‌ಗಳ ಡಿಕ್ಕಿ, ಹಬ್ಬಕ್ಕೆ ಊರಿಗೆ ಬಂದ ಸಾಫ್ಟ್‌ವೇರ್ ಇಂಜಿನಿಯರ್ ಸೇರಿ ಮೂವರು ಸಾವು

Posted by Vidyamaana on 2024-09-07 08:52:50 |

Share: | | | | |


Road Accident: ಬೈಕ್‌ಗಳ ಡಿಕ್ಕಿ, ಹಬ್ಬಕ್ಕೆ ಊರಿಗೆ ಬಂದ ಸಾಫ್ಟ್‌ವೇರ್ ಇಂಜಿನಿಯರ್ ಸೇರಿ ಮೂವರು ಸಾವು

ಬಾಗಲಕೋಟೆ: ಬೈಕುಗಳು ಭೀಕರವಾಗಿ ಡಿಕ್ಕಿಯಾದ (Bagalakote Ro

non

Accident) ಪರಿಣಾಮ, ಗಣೇಶೋತ್ಸವದ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ (Software Engineer) ಸೇರಿ ಮೂವರು ಮೃತಪಟ್ಟಿದ್ದಾರೆ. ಬಾಗಲಕೋಟೆ (bagalakote news) ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದೆ.

ಮೃತಪಟ್ಟರನ್ನು ಬೆಂಗಳೂರಿನ ಸಾಪ್ಟವೇರ್ ಎಂಜಿನಿಯರ್ ರಜನಿ ಒಂದಕುದರಿ (34), ಬಾಗಲಕೋಟೆಯ ಬಿವಿವಿ ಸಂಘದ ದಂತ ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ಶೃತಿ ಒಂದಕುದರಿ (32) ಹಾಗೂ ಅಭಿಷೇಕ ದೋತ್ರೆ (20) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಇನ್ನೊಬ್ಬ ಸವಾರ ತೀವ್ರವಾಗಿ ಗಾಯಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

BREAKING: ಬೆಂಗಳೂರಲ್ಲಿ ವಾಕಿಂಗ್ ಹೋಗುತ್ತಿದ್ದ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ಆರೋಪಿ ಅರೆಸ್ಟ್

Posted by Vidyamaana on 2024-08-05 18:51:50 |

Share: | | | | |


BREAKING: ಬೆಂಗಳೂರಲ್ಲಿ ವಾಕಿಂಗ್ ಹೋಗುತ್ತಿದ್ದ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ಆರೋಪಿ ಅರೆಸ್ಟ್

ಬೆಂಗಳೂರು : ನಗರದಲ್ಲಿ ವಾಯು ವಿಹಾರದ ವೇಳೆಯಲ್ಲಿ ಮಹಿಳೆಯೊಬ್ಬರನ್ನು ಓಡಿಸಿಕೊಂಡು ಬಂದಿದ್ದಂತ ವ್ಯಕ್ತಿಯೊಬ್ಬ ಆಕೆಗೆ ಮುತ್ತಿಟ್ಟಿದ್ದನು. ಈ ಮೂಲಕ ಅಸಭ್ಯವಾಗಿ ವರ್ತನೆಯನ್ನು ತೋರಿದ್ದನು. ಈ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್.8ರಂದು ಮುಂಜಾನೆ ವಾಕಿಂಗ್ ಹೋಗುತ್ತಿದ್ಧ ಮಹಿಳೆಯನ್ನು ಕಾಮುಕನೊಬ್ಬ ತಬ್ಬಿ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿತ್ತು.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು, ಆರೋಪಿ ಸುರೇಶ್ ಎಂಬಾತನನ್ನು ಬಂಧಿಸಿದ್ದಾರೆ.

Recent News


Leave a Comment: