Posted by vidyamaana on 2024-07-23 21:30:52 |
ಪುತ್ತೂರು: ಪೆಟ್ರೋಲಿಯಂ ಉತ್ಪನ್ನಗಳ ತಯಾರಿಕಾ ಸಂಸ್ಥೆ ಒ.ಎನ್.ಜಿ.ಸಿ.ಯ ಅಂಗ ಸಂಸ್ಥೆಯಾಗಿರುವ ಎಂ.ಆರ್.ಪಿ.ಎಲ್.ನ ಹೈಕ್ಯೂ ರಿಟೇಲ್ ಔಟ್ ಲೆಟ್ ಮಹೇಶ್ವರ ಪೆಟ್ರೋಲಿಯಂ ಜು.21ರಂದು ಮಾಣಿ-ಮೈಸೂರು ರಾಷ್ಟಿಯ ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ವಿವಿಧ ಗಣ್ಯರ ಸಮ್ಮುಖದಲ್ಲಿ ಶುಭಾರಂಭ ಗೊಂಡಿತ್ತು . ಸಭಾ ಕಾರ್ಯಕ್ರಮಕ್ಕೂ ಮೊದಲು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸಂಸ್ಥೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಸವಣೂರು ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ಸವಣೂರು ಸೀತಾರಾಮ ರೈ, ಸ್ಥಳೀಯ ನಗರ ಸಭಾ ಸದಸ್ಯೆ ಯಶೋಧಾ ಪೂಜಾರಿ ಮತ್ತು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಪೆಟ್ರೋಲ್ ಹಾಕುವ ಯಂತ್ರಗಳ ರಿಬ್ಬನ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ತೈಲ ತುಂಬುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿರುವ ವಾಮನ್ ಪೈ ಅವರು ಉಚಿತ ನೈಟ್ರೋಜನ್ ಪೂರೈಕ್ ವ್ಯವಸ್ಥೆಯನ್ನು ಉದ್ಘಾಟಿಸಿದರು.
ಬಳಿಕ, ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ ಅವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭ ಗೊಂಡಿತ್ತು . ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಕಿನಾರ ಅವರು ಅತಿಥಿ ಗಣ್ಯರನ್ನು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಕಾರ್ಯಾಚರಣೆಗೆ ಅಧಿಕೃತ ಚಾಲನೆಯನ್ನು ನೀಡಿದರು.
ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾಗಿರುವ ಗಣೇಶ್ ಭಟ್ ಅವರು ಮಾತನಾಡಿ, ತಲಪಾಡಿಯ ದುರ್ಗಾಪರಮೇಶ್ವರಿ ದೇವರು ಈ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಅವರಿಗೆ ಕುಲದೇವರಾಗಿರುವ ಕಾರಣ ತಲಪಾಡಿ ಕ್ಷೇತ್ರöಕ್ಕೂ ಪುತ್ತೂರಿಗೂ ವಿಶೇಷ ನಂಟಿದೆ ಎಂದು ಹೇಳಿದರು. ಶಿವಪ್ರಸಾದ್ ಶೆಟ್ಟಿ ಅವರು ದೈವಭಕ್ತರಾಗಿದ್ದು ಅವರ ಸತ್ಕರ್ಮ ಮತ್ತು ದೇವರ ಮೇಲೆ ಅವರಿಟ್ಟ ಭಕ್ತಿ ಹಾಗೂ ಗುರು-ಹಿರಿಯರ ಮೇಲಿನ ಗೌರವ ಅವರನ್ನು ಇಂದು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ದೈವ-ದೇವರ ಅನುಗ್ರಹದೊಂದಿಗೆ ಈ ನೂತನ ಸಂಸ್ಥೆಯು ಉತ್ತಮ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿ ಇನ್ನಷ್ಟು ಹೆಸರುವಾಸಿಯಾಗಲಿ ಎಂದು ಅವರು ಶುಭಾಶೀರ್ವಾದ ನೀಡಿದರು.
ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಭಗವಂತನನ್ನು ತೋರಿಸುವವ ಗುರು, ಜ್ಞಾನವನ್ನು ಕೊಡುವವ ಗುರು ಎಂಬ ಮಾತನ್ನು ನಮ್ಮ ಹಿರಿಯತು ಹೇಳಿದ್ದಾರೆ. ಅಂತಹ ಗುರುವಿನ ಪ್ರೇರಣೆ ಇರತಕ್ಕಂತಹ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಪುಣ್ಯಸಂದರ್ಭವಾಗಿರುವ ಈ ಗುರುಪೂರ್ಣಮಿಯ ದಿನದಂದು ಈ ಪುತ್ತೂರಿನ ಪುಣ್ಯ ನೆಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆ ಉದ್ಘಾಟನೆಗೊಂಡಿರುವುದು ಈ ಸಂಸ್ಥೆಗೆ ಗುರುಹಿರಿಯರ ಆಶೀರ್ವಾದ ಇದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದರು. ಈ ಸಂಸ್ಥೆಯು ಎಂ.ಆರ್.ಪಿ.ಎಲ್.ನ ಒಂದಹ ಅತ್ಯುನ್ನತ ಸಂಸ್ಥೆಯಾಗಿ ಬೆಳೆಯುತ್ತದೆ, ಮಾತ್ರವಲ್ಲದೇ ಶಿವಪ್ರಸಾದ್ ಶೆಟ್ಟಿ ಅವರು ಓರ್ವ ಯಸಸ್ವಿ ಪೆಟ್ರೋಲಿಯಂ ಉದ್ಯಮಿಯಾಗಿ ಬೆಳೆಯುತ್ತಾರೆ ಎಂಬ ವಿಶ್ವಾಸವನ್ನು ಕಟೀಲ್ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಶಿವಪ್ರಸಾದ್ ಅವರು ಭೂವ್ಯವಹಾರದಲ್ಲಿ ಓರ್ವ ಯಶಸ್ವಿ ಉದ್ಯಮಿಯಾಗಿ ಪುತ್ತೂರಿನ ಮಟ್ಟಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಶ್ರೀಮಂತಿಕೆ ಬಂದಾಗ ಕೆಲವರಿಗೆ ಎಲ್ಲವೂ ಮರೀತದೆ, ಆದರೆ ಶಿವಪ್ರಸಾದ್ ಅವರು ತಮ್ಮಲ್ಲಿರುವ ಹೃದಯ ಶ್ರೀಮಂತಿಕೆಯಿAದ ತಮ್ಮ ವ್ಯವಹಾರದ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ಶಿವಪ್ರಸಾದ್ ಅವರು ಓರ್ವ ಧಾರ್ಮಿಕ ಮನೋಭಾವದ ವ್ಯಕ್ತಿ ಎಂಬುದಕ್ಕೆ ಉದಾಹರಣೆಯಾಗಿ, ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಸಂದರ್ಭದಲ್ಲಿ ಒಂದು ಗುಡಿ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ತನ್ನದು ಎಂದು ಮಾತುಕೊಟ್ಟು ಅದರಂತೆ ನಡೆದುಕೊಂಡ ವಿಚಾರವನ್ನು ಕಟೀಲ್ ಅವರು ಸಭೆಯ ಮುಂದೆ ಬಿಚ್ಚಿಟ್ಟರು. ತೈಲೋದ್ಯಮ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು ಎಂ.ಆರ್.ಪಿ.ಎಲ್, ಭಾರತ್ ಪೆಟ್ರೋಲಿಯಂ ಸಹಿತ ಎಲ್ಲಾ ಸಂಸ್ಥೆಗಳೂ ಸ್ಪರ್ಧಾತ್ಮಕ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಇದು ಈ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಪುತ್ತೂರು ಪರಿಸರದಲ್ಲಿ ಎಂ.ಆರ್.ಪಿ.ಎಲ್.ನ ಪ್ರಥಮ ಔಟ್ ಲೆಟ್ ಪ್ರಾರಂಭಿಸುವ ಅವಕಾಶ ಶಿವಪ್ರಸಾದ್ ಅವರಿಗೆ ಸಿಕ್ಕಿರುವುದಕ್ಕೆ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಮತ್ತು ಈ ಉದ್ಯಮದಲ್ಲಿ ಶಿವಪ್ರಸಾದ್ ಅವರಿಗೆ ಯಶಸ್ಸು ಲಭಿಸಲಿ ಎಂಬ ಸದಾಶಯದ ನುಡಿಗಳನ್ನು ನಳಿನ್ ಕುಮಾರ್ ಕಟೀಲ್ ನೀಡಿದರು.
ವ್ಯಕ್ತಿಯೊಬ್ಬರು ಉದ್ಯಮದಲ್ಲಿ ಬೆಳೆದರೂ ಕೂಡ ಹೇಗೆ ತನ್ನ ಪಾಡಿಗೆ ತನ್ನ ವ್ಯವಹಾರವನ್ನು ನಡೆಸಿಕೊಂಡು ಸಾಮಾಜಿಕವಾಗಿಯೂ, ಧಾರ್ಮಿಕವಾಗಿಯೂ ತನ್ನನ್ನು ತೊಡಗಿಸಕೊಳ್ಳುತ್ತಾರೆ ಎಂಬುದಕ್ಕೆ ಶಿವಪ್ರಸಾದ್ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು. ಕಳೆದ ಸಲ ಮಹಾಲಿಂಗೇಶ್ವರ ದೇವರಿಗೆ ಒಂದಷ್ಟು ಜನರ ಸಹಕಾರದೊಂದಿಗೆ ಬಂಗಾರದ ಮಾಲೆಯನ್ನು ಒಪ್ಪಿಸುವಲ್ಲಿ ಮುಂದಾಳತ್ವವನ್ನು ಶಿವಪ್ರಸಾದ್ ಅವರು ವಹಿಸಿಕೊಂಡಿರುವುದು ಅವರಲ್ಲಿರುವ ಧಾರ್ಮಿಲ ಪ್ರಜ್ಞೆಗೆ ಸಾಕ್ಷಿ ಎಂಬ ವಿಚಾರವನ್ನು ಶಾಸಕರು ಈ ಸಂದರ್ಬದಲ್ಲಿ ವಿಶೇಷವಾಗಿ ಶ್ಲಾಘಿಸಿದರು.
Posted by Vidyamaana on 2023-10-27 10:46:59 |
ಬಂಟ್ವಾಳ: ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದೆ. ಗುರುವಾರ ರಾತ್ರಿ 9ಗಂಟೆಗೆ ನಡೆದ ಘಟನೆಯಲ್ಲಿ ತಂಡಗಳ ನಡುವೆ ವೈಯಕ್ತಿಕ ಕಲಹದ ಮುಂದುವರಿದ ಭಾಗವಾಗಿ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾಗಿ ಹೇಳಲಾಗಿದ್ದು, ಘಟನೆಯಿಂದ ಮೂವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್ ,ಶಂಕರ್ ಚೂರಿ ಇರಿತಕ್ಕೊಳಗಾದವರು.
ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್,ಮೆಲ್ಕಾರ್ ನಿವಾಸಿಗಳಾದ ಚೇತನ್,ಪ್ರಸನ್ನ,ಪ್ರದೀಪ್ ಮತ್ತು ಪ್ರಕಾಶ್ ಅವರ ತಂಡ ಸೇರಿಕೊಂಡು ಹಲ್ಲೆ ಮಾಡಿದ್ದಲ್ಲದೆ ಚೂರಿಯಿಂದ ಇರಿದಿದ್ದಾರೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
*ಘಟನೆಗೆ ಕಾರಣವೇನು?*
ಬುಧವಾರ ರಾತ್ರಿ ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಎರಡು ತಂಡಗಳ ನಡುವೆ ನಡೆದ ಗಲಾಟೆ ಮುಂದುವರಿದ ಭಾಗವಾಗಿ ಗುರುವಾರ ರಾತ್ರಿ ಚೂರಿ ಇರಿತದವರೆಗೆ ಮುಂದುವರಿದಿದೆ.
ಕೆಲವರ್ಷಗಳ ಹಿಂದೆ ಜೊತೆಯಾಗಿ ಹುಲಿ ವೇಷ ಹಾಕಿ ಶಾರದ ವಿಸರ್ಜನೆ ಮೆರವಣಿಗೆಯಲ್ಲಿ ಹೆಜ್ಜೆಯಾಕುತ್ತಿದ್ದ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಬಾಗವಾಗಿದ್ದು,ಇದೀಗ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕಲಾಗುತ್ತದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶಾರದ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಈ ಎರಡು ತಂಡಗಳ ನಡುವೆ ಗಲಾಟೆ ನಡೆದಿದ್ದು, ಮುಂದುವರಿದ ಭಾಗವಾಗಿ ನಿನ್ನೆ ಮೆಲ್ಕಾರ್ ಜಂಕ್ಷನ್ ಕಲ್ಲಿ ಒಂದು ತಂಡದ ಸದಸ್ಯರು ಬ್ಯಾನರ್ ತೆರವು ಮಾಡುತ್ತಿದ್ದ ವೇಳೆ ಇನ್ನೊಂದು ತಂಡ ಸ್ಥಳಕ್ಕೆ ಬಂದು ಹಲ್ಲೆ ನಡೆಸಿ,ಚೂರಿಯಿಂದ ಇರಿದು ಪರಾರಿಯಾಗಿದೆ.
ಘಟನೆಯಿಂದ ಗಾಯಗೊಂಡ ಮೂವರನ್ನು ಆರಂಭದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಓರ್ವನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೂವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
Posted by Vidyamaana on 2024-05-28 12:05:02 |
ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ನೋಡುಗರ ಎದೆ ನಡುಗಿಸುವಂತಿದೆ. ತನ್ನ ಗೆಳೆಯನ ಜೊತೆ ವಾಗ್ವಾದ ಮಾಡುತ್ತಿದ್ದ ಯುವತಿಯೊಬ್ಬಳು ನೋಡ ನೋಡುತ್ತಿದ್ದಂತೆ ರೈಲಿನ ಮುಂದೆ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ.
ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆಗ್ರಾದ ರಾಜಾ ಕಿ ಮಂಡಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ಫ್ಲಾಟ್ ಫಾರಂ ಸಂಖ್ಯೆ ಒಂದರಲ್ಲಿ ಯುವತಿಯೊಬ್ಬಳು ತನ್ನ ಗೆಳೆಯನ ಜೊತೆ ಕುಳಿತಿರುತ್ತಾಳೆ. ಇಬ್ಬರ ನಡುವೆ ಯಾವುದೋ ಕಾರಣಕ್ಕೆ ಪರಸ್ಪರ ವಾಗ್ವಾದ ನಡೆಯುತ್ತಿರುತ್ತದೆ. ಈ ಸಂದರ್ಭದಲ್ಲಿ ಏಕಾಏಕಿ ಎದ್ದು ನಿಂತ ಆಕೆ ರೈಲ್ವೆ ಟ್ರ್ಯಾಕಿನ ಮೇಲೆ ಹಾರಿ ವಾಗ್ವಾದ ಮುಂದುವರಿಸಿದ್ದಾಳೆ.
Posted by Vidyamaana on 2023-10-14 21:48:24 |
ದಾವಣಗೆರೆ: ಅಬಕಾರಿ ಉಪ ಆಯುಕ್ತೆ ಸೇರಿದಂತೆ ಅಬಕಾರಿ ಇಲಾಖೆಯ ನಾಲ್ವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಿಲ್ಲಾ ಅಬಕಾರಿ ಉಪ ಆಯುಕ್ತೆ ಸ್ವಪ್ನ, ಪ್ರಥಮ ದರ್ಜೆ ಸಹಾಯಕ ಅಶೋಕ ಎಚ್.ಎಂ., ಹರಿಹರ ಅಬಕಾರಿ ವಲಯ ಕಚೇರಿಯ ಅಬಕಾರಿ ನಿರೀಕ್ಷಕಿ ಶೀಲಾ, ದ್ವಿತೀಯ ದರ್ಜೆ ಸಹಾಯಕಿ ಶೈಲಶ್ರೀ ಅವರನ್ನು ಲೋಕಾಯುಕ್ತ ತಂಡ ವಶಕ್ಕೆ ಪಡೆದಿದೆ.
ಹರಿಹರದ ಅಮರಾವತಿ ಬಳಿ ಸಿಎಲ್- 7 ಮದ್ಯದ ಅಂಗಡಿ ಪರವಾನಗಿ ಮಾಡಿಕೊಡಲು ಡಿ.ಜಿ. ರಘುನಾಥ ಎಂಬುವರು ಅರ್ಜಿ ಸಲ್ಲಿಸಿದ್ದರು. ಅಬಕಾರಿಗಳು ಮೂರು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಗರದ ದೇವರಾಜ ಅರಸು ಬಡಾವಣೆಯಲ್ಲಿ ಇರುವ ಅಬಕಾರಿ ಇಲಾಖೆ ಕಚೇರಿಯಲ್ಲಿ ಆರೋಪಿ ಅಶೋಕ ಎಚ್.ಎಂ. ಲಂಚ ಪಡೆಯುತ್ತಿರುವಾಗ ಲೋಕಾಯುಕ್ತ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದ ತಂಡ ನಡೆಸಿದ ಈ ದಾಳಿಯಲ್ಲಿ ಪೊಲೀಸ್ ನಿರೀಕ್ಷಕರಾದ ಪ್ರಭು ಬ. ಸೂರಿನ, ಮಧುಸೂಧನ್, ಎಚ್.ಎಸ್. ರಾಷ್ಟ್ರಪತಿ, ಹಾವೇರಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ಪಂಡಿತ್ ಅವರ ನೇತೃತ್ವದಲ್ಲಿ ಕಾನ್ಸ್ಟೆಬಲ್ಗಳಾದ ವೀರೇಶಯ್ಯ, ಆಂಜನೇಯ, ಜಂಷಿದಾ ಖಾನಂ, ಧನರಾಜ್, ಮಲ್ಲಿಕಾರ್ಜುನ, ಲಿಂಗೇಶ, ಬಸವರಾಜ, ಗಿರೀಶ್, ವಿನಾಯಕ, ಕೃಷ್ಣನಾಯ್ಕ, ಮೋಹನ್, ಕೋಟಿನಾಯ್ಕ, ಮಾಲತೇಶ ಅರಸೀಕೆರೆ, ಎಸ್.ಎಸ್.ಕಡಕೋಳ, ಮಹಾಂತೇಶ ಕಂಬಳಿ, ಮಹಾಂತೇಶ ಕಂಬಳಿ, ಲಕ್ಷ್ಮವ್ವ ಅನವೇರಿ, ಹರ್ಷಿಯಾ, ಸರೋಜಾ ಕಾರ್ಯಾಚರಣೆಯಲ್ಲಿದ್ದರು.
Posted by Vidyamaana on 2023-12-08 04:40:26 |
ಪುತ್ತೂರು: ಅಂತರಾಷ್ಟ್ರೀಯ ಭಯೋತ್ಪಾದನೆ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಜೊತೆ ವೇದಿಕೆ ಹಂಚಿಕೊಂಡು ಅವರುಗಳ ನೇತೃತ್ವದಲ್ಲಿ ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದನ್ನು ಬಜರಂಗದಳ ಖಂಡಿಸುತ್ತದೆಯಲ್ಲದೆ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತ್ತಡ್ಕ ತಿಳಿಸಿದ್ದಾರೆ.ಮುಖ್ಯಮಂತ್ರಿಯವರು ಭಾಗವಹಿಸಿದ ಕಾರ್ಯಕ್ರಮದಲ್ಲಿ ಮುಸಲ್ಮಾನ ಸಮಾಜಕ್ಕೆ ಹತ್ತು ಸಾವಿರ ಕೋಟಿ ಹಣವನ್ನು ಅನುದಾನ ನೀಡುತ್ತೇನೆಂದು ಹೇಳಿದ್ದು ಕರ್ನಾಟಕದ ಮುಖ್ಯಮಂತ್ರಿ ಭಯೋತ್ಪಾದನೆಗೆ ಹಣಕಾಸು ವ್ಯವಸ್ಥೆ ಮಾಡುವ ವ್ಯಕ್ತಿಯೇ ಎಂದು ಸಂಶಯ ವ್ಯಕ್ತವಾಗುತ್ತಿದೆ. ಮತ್ತು ನಮ್ಮ ತೆರಿಗೆ ಹಣವನ್ನು ಈ ರೀತಿ ತುಷ್ಟಿಕರಣಕ್ಕೋಸ್ಕರ ಮಾತನಾಡುವುದು,ಅನುದಾನ ಘೋಷಣೆ ಮಾಡುವುದು ಬಹುಸಂಖ್ಯಾತ ಹಿಂದುಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ವಿಶ್ವಹಿಂದು ಪರಿಷದ್ ಬಜರಂಗದಳ ಸಂಘಟನೆ ಡಿ.8 ರಂದು ರಾಜ್ಯಪಾಲರ ಬಳಿ ದೂರುನೀಡಿ ಕ್ರಮಕೈಗೊಳ್ಳಲು ಆಗ್ರಹಿಸಲಾಗುವುದು.ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಮಾಡಿ,ಈ ರೀತಿಯ ವರ್ತನೆಯನ್ನು ನಿಲ್ಲಿಸಲು ಆಗ್ರಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Posted by Vidyamaana on 2023-10-02 20:33:58 |
ಕೊಯಮತ್ತೂರು, ಅಕ್ಟೋಬರ್ 2: ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಅವರು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಲೇ ಇದ್ದಾರೆ. ಭಾನುವಾರ ಕೊಯಮತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತೆಯೊಬ್ಬರ ಪ್ರಶ್ನೆಗೆ ಸಿಡಿಮಿಡಿಗೊಂಡು ಕಿರಿಕ್ ಮಾಡಿದ್ದಾರೆ.ಇದು ತಮಿಳುನಾಡಿನಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದರೆ ಪಕ್ಷದಲ್ಲಿ ಮುಂದುವರಿಯುತ್ತೀರಾ ಎಂಬ ಪ್ರಶ್ನೆಯನ್ನು ಅಣ್ಣಾಮಲೈ ಅವರಿಗೆ ಮಹಿಳಾ ವರದಿಗಾರ್ತಿ ಕೇಳಿದ್ದಾರೆ.
ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಣ್ಣಾಮಲೈ, ಮಹಿಳಾ ಪತ್ರಕರ್ತೆಗೆ ಕ್ಯಾಮೆರಾ ಮುಂದೆ ಬರಲು ಹೇಳಿದ್ದಾರೆ.
ಯಾರು ಇಂತಹ ಬುದ್ಧಿವಂತ ಪ್ರಶ್ನೆ ಕೇಳುತ್ತಿದ್ದಾರೆಂದು ತಮಿಳುನಾಡಿನ ಜನರು ನೋಡಲಿ ಎಂದು ಬೆದರಿಕೆಯ ಧ್ವನಿಯಲ್ಲಿ ಅಣ್ಣಾಮಲೈ ಮಾತನಾಡಿದ್ದಾರೆ.
ಇಲ್ಲಿ ಬಾ ಅಕ್ಕ, ಇಲ್ಲಿಗೆ ಬಂದು ಮಾತಾಡು. ಇಂತಹ ಅದ್ಭುತ ಪ್ರಶ್ನೆಯನ್ನು ಯಾರು ಕೇಳುತ್ತಿದ್ದಾರೆಂದು ತಮಿಳುನಾಡಿನ ಜನತೆ ನೋಡಲಿ ಎಂದು ಹೇಳಿದ್ದಾರೆ.ಪ್ರಶ್ನೆ ಕೇಳುವುದಕ್ಕೆ ಒಂದು ರೂಢಿ ಇದೆ. ಒಬ್ಬ ವ್ಯಕ್ತಿಯು ಪ್ರಶ್ನೆಗಳನ್ನು ಕೇಳುವ ಹಕ್ಕನ್ನು ಹೊಂದಿರುವಾಗ, ಅವರು ಲಕ್ಷ್ಮಣ ರೇಖೆಯನ್ನು ದಾಟಬಾರದು. ಇದಕ್ಕೆ ಮಿತಿ ಇದೆ. ಯಾರೇ ಆಗಲಿ ಆ ರೂಢಿಯನ್ನು ದಾಟಬಾರದು. ಅಂತಹ ಜನರನ್ನು ನಾನು ಸುಮ್ಮನೇ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾರೆ.
ಬಿಜೆಪಿ ಜೊತೆಗಿನ ದೀರ್ಘ ಕಾಲದ ಸಂಬಂಧವನ್ನು ಎಐಎಡಿಎಂಕೆ ಕಡಿದುಕೊಂಡಿದೆ. ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳದ ಬಿಜೆಪಿಗೆ ಇದು ಆಘಾತಕಾರಿಯೆಂದೇ ಹೇಳಬಹುದು.
ಅಣ್ಣಾಮಲೈ ವಿರುದ್ಧ ಎಐಎಡಿಎಂಕೆ ಆರೋಪ
ಬಿಜೆಪಿ ಜೊತೆಗಿನ ಸಂಬಂಧ ಮುರಿದುಕೊಳ್ಳಲು ಅಣ್ಣಾಮಲೈ ಕಾರಣವೆಂದು ಎಐಎಡಿಎಂ ನಾಯಕರು ಆರೋಪಿಸಿದ್ದಾರೆ. ಅಣ್ಣಾಮಲೈ ಅವರು ತಮ್ಮ ಪಕ್ಷದ ಮಹಾನಾಯಕರನ್ನು ನಿಂದಿಸುತ್ತಿದ್ದಾರೆ. ಇದನ್ನು ನಾವು
ಎಂದಿಗೂ ಸಹಿಸಿಕೊಳ್ಳುವುದಿಲ್ಲವೆಂದು ಎಐಎಡಿಎಂಕೆ ನಾಯಕರು ಹೇಳಿದ್ದಾರೆ.
ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಬಿಜೆಪಿ ಹೈಕಮಾಂಡ್ಗೆ ಎಐಎಡಿಎಂಕೆ ಒತ್ತಾಯಿಸಿದೆ. ಈ ಕುರಿತ ಪ್ರಶ್ನೆಯನ್ನು ಪತ್ರಕರ್ತೆ ಕೇಳಿದ್ದಕ್ಕೆ ಅಣ್ಣಾಮಲೈ ಕೆರಳಿದ್ದಾರೆ.
ಅಣ್ಣಾಮಲೈಗೆ ಹೈಕಮಾಂಡ್ ಬುಲಾವ್
ಈ ಬೆಳವಣಿಗೆಗಳ ನಡುವೆಯೇ ಅಣ್ಣಾಮಲೈ ಅವರನ್ನು ದೆಹಲಿ ಬರುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿದೆ. ಇದು ಭಾರೀ ಮಹತ್ವ ಪಡೆದುಕೊಂಡಿದೆ. ಅಣ್ಣಾಮಲೈ ಅವರು ಸೋಮವಾರ ದೆಹಲಿಗೆ ತೆರಳಿದ್ದಾರೆ ಎಂದು ಮೂಲಗಳು ಹೇಳಿವೆ.ಎನ್ಡಿಎ ಜೊತೆಗಿನ ಸಂಬಂಧವನ್ನು ಮುರಿದುಕೊಳ್ಳುವ ನಿರ್ಧಾರವನ್ನು ಎಐಎಡಿಎಂಕೆ ಕಳೆದ ವಾರ ಘೋಷಿಸಿದೆ. 2024 ರ ಲೋಕಸಭೆ ಚುನಾವಣೆಗೆ ತನ್ನದೇ ಆದ ಮೈತ್ರಿಯನ್ನು ರಚಿಸುವುದಾಗಿಯೂ ಅದು ತಿಳಿಸಿದೆ. ಈ ಮೈತ್ರಿ ಮುರಿದುಬಿದ್ದಿದ್ದಕ್ಕೆ ಕಾರಣ ಅಣ್ಣಾಮಲೈ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಅಣ್ಣಾಮಲೈ ಅವರನ್ನು ಪ್ರಶ್ನಿಸಲಿದೆ ಎಂಬ ಮಾತುಗಳು ಕೇಳಿಬಂದಿವೆ.
ಅಣ್ಣಾಮಲೈ ಅವರು ಬಿಜೆಪಿಯ ಉನ್ನತ ನಾಯಕತ್ವದೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಭಾಗವಹಿಸುವ ಸಾಧ್ಯತೆ ಇದೆ. ಅವರಿಬ್ಬರೂ ತಮಿಳುನಾಡಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಅಣ್ಣಾಮಲೈ ಜೊತೆ ಮಾಹಿತಿ ಪಡೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.ಅಣ್ಣಾಮಲೈ ಅವರು ದೆಹಲಿ ಭೇಟಿ ಮುಗಿದ ಬಳಿಕ ಮುಂದಿನ ವಾರ ಹೊಸ ಮೈತ್ರಿಕೂಟ ರಚಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಮಿಳುನಾಡು ಬಿಜೆಪಿ ಹೇಳಿದೆ. ಎಐಎಡಿಎಂಕೆ ಹೊರತುಪಡಿಸಿದ ಮೈತ್ರಿಕೂಟ ಇದಾಗಲಿದೆ ಎಂದು ಬಿಜೆಪಿ ತಿಳಿಸಿದೆ.
ತಮಿಳುನಾಡಿನಲ್ಲಿ ಭವಿಷ್ಯದ ಕಾರ್ಯತಂತ್ರಗಳು ಹಾಗೂ ಸಂಭಾವ್ಯ ಮೈತ್ರಿಗಳ ಬಗ್ಗೆ ಬಿಜೆಪಿ ಹೈಕಮಾಂಡ್ ಅಣ್ಣಾಮಲೈ ಬಳಿ ಚರ್ಚಿಸಲಿದೆ ಎಂದು ತಮಿಳುನಾಡು ಬಿಜೆಪಿ ನಾಯಕರು ನಿರೀಕ್ಷಿಸಿದ್ದಾರೆ.