ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಸುದ್ದಿಗಳು News

Posted by vidyamaana on 2024-07-23 21:30:52 |

Share: | | | | |


ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಪುತ್ತೂರು: ಪೆಟ್ರೋಲಿಯಂ ಉತ್ಪನ್ನಗಳ ತಯಾರಿಕಾ ಸಂಸ್ಥೆ ಒ.ಎನ್.ಜಿ.ಸಿ.ಯ ಅಂಗ ಸಂಸ್ಥೆಯಾಗಿರುವ ಎಂ.ಆರ್.ಪಿ.ಎಲ್.ನ ಹೈಕ್ಯೂ ರಿಟೇಲ್ ಔಟ್ ಲೆಟ್ ಮಹೇಶ್ವರ ಪೆಟ್ರೋಲಿಯಂ ಜು.21ರಂದು ಮಾಣಿ-ಮೈಸೂರು ರಾಷ್ಟಿಯ ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ವಿವಿಧ ಗಣ್ಯರ ಸಮ್ಮುಖದಲ್ಲಿ ಶುಭಾರಂಭ ಗೊಂಡಿತ್ತು . ಸಭಾ ಕಾರ್ಯಕ್ರಮಕ್ಕೂ ಮೊದಲು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸಂಸ್ಥೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಸವಣೂರು ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ಸವಣೂರು ಸೀತಾರಾಮ ರೈ, ಸ್ಥಳೀಯ ನಗರ ಸಭಾ ಸದಸ್ಯೆ ಯಶೋಧಾ ಪೂಜಾರಿ ಮತ್ತು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಪೆಟ್ರೋಲ್ ಹಾಕುವ ಯಂತ್ರಗಳ ರಿಬ್ಬನ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ತೈಲ ತುಂಬುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿರುವ ವಾಮನ್ ಪೈ ಅವರು ಉಚಿತ ನೈಟ್ರೋಜನ್ ಪೂರೈಕ್ ವ್ಯವಸ್ಥೆಯನ್ನು ಉದ್ಘಾಟಿಸಿದರು.

ಬಳಿಕ, ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ ಅವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭ ಗೊಂಡಿತ್ತು . ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಕಿನಾರ ಅವರು ಅತಿಥಿ ಗಣ್ಯರನ್ನು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಕಾರ್ಯಾಚರಣೆಗೆ ಅಧಿಕೃತ ಚಾಲನೆಯನ್ನು ನೀಡಿದರು.

ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾಗಿರುವ ಗಣೇಶ್ ಭಟ್ ಅವರು ಮಾತನಾಡಿ, ತಲಪಾಡಿಯ ದುರ್ಗಾಪರಮೇಶ್ವರಿ ದೇವರು ಈ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಅವರಿಗೆ ಕುಲದೇವರಾಗಿರುವ ಕಾರಣ ತಲಪಾಡಿ ಕ್ಷೇತ್ರöಕ್ಕೂ ಪುತ್ತೂರಿಗೂ ವಿಶೇಷ ನಂಟಿದೆ ಎಂದು ಹೇಳಿದರು. ಶಿವಪ್ರಸಾದ್ ಶೆಟ್ಟಿ ಅವರು ದೈವಭಕ್ತರಾಗಿದ್ದು ಅವರ ಸತ್ಕರ್ಮ ಮತ್ತು ದೇವರ ಮೇಲೆ ಅವರಿಟ್ಟ ಭಕ್ತಿ ಹಾಗೂ ಗುರು-ಹಿರಿಯರ ಮೇಲಿನ ಗೌರವ ಅವರನ್ನು ಇಂದು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ದೈವ-ದೇವರ ಅನುಗ್ರಹದೊಂದಿಗೆ ಈ ನೂತನ ಸಂಸ್ಥೆಯು ಉತ್ತಮ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿ ಇನ್ನಷ್ಟು ಹೆಸರುವಾಸಿಯಾಗಲಿ ಎಂದು ಅವರು ಶುಭಾಶೀರ್ವಾದ ನೀಡಿದರು.

Additional Image

ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಭಗವಂತನನ್ನು ತೋರಿಸುವವ ಗುರು, ಜ್ಞಾನವನ್ನು ಕೊಡುವವ ಗುರು ಎಂಬ ಮಾತನ್ನು ನಮ್ಮ ಹಿರಿಯತು ಹೇಳಿದ್ದಾರೆ. ಅಂತಹ ಗುರುವಿನ ಪ್ರೇರಣೆ ಇರತಕ್ಕಂತಹ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಪುಣ್ಯಸಂದರ್ಭವಾಗಿರುವ ಈ ಗುರುಪೂರ್ಣಮಿಯ ದಿನದಂದು ಈ ಪುತ್ತೂರಿನ ಪುಣ್ಯ ನೆಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆ ಉದ್ಘಾಟನೆಗೊಂಡಿರುವುದು ಈ ಸಂಸ್ಥೆಗೆ ಗುರುಹಿರಿಯರ ಆಶೀರ್ವಾದ ಇದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದರು. ಈ ಸಂಸ್ಥೆಯು ಎಂ.ಆರ್.ಪಿ.ಎಲ್.ನ ಒಂದಹ ಅತ್ಯುನ್ನತ ಸಂಸ್ಥೆಯಾಗಿ ಬೆಳೆಯುತ್ತದೆ, ಮಾತ್ರವಲ್ಲದೇ ಶಿವಪ್ರಸಾದ್ ಶೆಟ್ಟಿ ಅವರು ಓರ್ವ ಯಸಸ್ವಿ ಪೆಟ್ರೋಲಿಯಂ ಉದ್ಯಮಿಯಾಗಿ ಬೆಳೆಯುತ್ತಾರೆ ಎಂಬ ವಿಶ್ವಾಸವನ್ನು ಕಟೀಲ್ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಶಿವಪ್ರಸಾದ್ ಅವರು ಭೂವ್ಯವಹಾರದಲ್ಲಿ ಓರ್ವ ಯಶಸ್ವಿ ಉದ್ಯಮಿಯಾಗಿ ಪುತ್ತೂರಿನ ಮಟ್ಟಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಶ್ರೀಮಂತಿಕೆ ಬಂದಾಗ ಕೆಲವರಿಗೆ ಎಲ್ಲವೂ ಮರೀತದೆ, ಆದರೆ ಶಿವಪ್ರಸಾದ್ ಅವರು ತಮ್ಮಲ್ಲಿರುವ ಹೃದಯ ಶ್ರೀಮಂತಿಕೆಯಿAದ ತಮ್ಮ ವ್ಯವಹಾರದ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ಶಿವಪ್ರಸಾದ್ ಅವರು ಓರ್ವ ಧಾರ್ಮಿಕ ಮನೋಭಾವದ ವ್ಯಕ್ತಿ ಎಂಬುದಕ್ಕೆ ಉದಾಹರಣೆಯಾಗಿ, ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಸಂದರ್ಭದಲ್ಲಿ ಒಂದು ಗುಡಿ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ತನ್ನದು ಎಂದು ಮಾತುಕೊಟ್ಟು ಅದರಂತೆ ನಡೆದುಕೊಂಡ ವಿಚಾರವನ್ನು ಕಟೀಲ್ ಅವರು ಸಭೆಯ ಮುಂದೆ ಬಿಚ್ಚಿಟ್ಟರು. ತೈಲೋದ್ಯಮ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು ಎಂ.ಆರ್.ಪಿ.ಎಲ್, ಭಾರತ್ ಪೆಟ್ರೋಲಿಯಂ ಸಹಿತ ಎಲ್ಲಾ ಸಂಸ್ಥೆಗಳೂ ಸ್ಪರ್ಧಾತ್ಮಕ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಇದು ಈ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಪುತ್ತೂರು ಪರಿಸರದಲ್ಲಿ ಎಂ.ಆರ್.ಪಿ.ಎಲ್.ನ ಪ್ರಥಮ ಔಟ್ ಲೆಟ್ ಪ್ರಾರಂಭಿಸುವ ಅವಕಾಶ ಶಿವಪ್ರಸಾದ್ ಅವರಿಗೆ ಸಿಕ್ಕಿರುವುದಕ್ಕೆ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಮತ್ತು ಈ ಉದ್ಯಮದಲ್ಲಿ ಶಿವಪ್ರಸಾದ್ ಅವರಿಗೆ ಯಶಸ್ಸು ಲಭಿಸಲಿ ಎಂಬ ಸದಾಶಯದ ನುಡಿಗಳನ್ನು ನಳಿನ್ ಕುಮಾರ್ ಕಟೀಲ್ ನೀಡಿದರು. 

Additional Image


Additional Image

ವ್ಯಕ್ತಿಯೊಬ್ಬರು ಉದ್ಯಮದಲ್ಲಿ ಬೆಳೆದರೂ ಕೂಡ ಹೇಗೆ ತನ್ನ ಪಾಡಿಗೆ ತನ್ನ ವ್ಯವಹಾರವನ್ನು ನಡೆಸಿಕೊಂಡು ಸಾಮಾಜಿಕವಾಗಿಯೂ, ಧಾರ್ಮಿಕವಾಗಿಯೂ ತನ್ನನ್ನು ತೊಡಗಿಸಕೊಳ್ಳುತ್ತಾರೆ ಎಂಬುದಕ್ಕೆ ಶಿವಪ್ರಸಾದ್ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು. ಕಳೆದ ಸಲ ಮಹಾಲಿಂಗೇಶ್ವರ ದೇವರಿಗೆ ಒಂದಷ್ಟು ಜನರ ಸಹಕಾರದೊಂದಿಗೆ ಬಂಗಾರದ ಮಾಲೆಯನ್ನು ಒಪ್ಪಿಸುವಲ್ಲಿ ಮುಂದಾಳತ್ವವನ್ನು ಶಿವಪ್ರಸಾದ್ ಅವರು ವಹಿಸಿಕೊಂಡಿರುವುದು ಅವರಲ್ಲಿರುವ ಧಾರ್ಮಿಲ ಪ್ರಜ್ಞೆಗೆ ಸಾಕ್ಷಿ ಎಂಬ ವಿಚಾರವನ್ನು ಶಾಸಕರು ಈ ಸಂದರ್ಬದಲ್ಲಿ ವಿಶೇಷವಾಗಿ ಶ್ಲಾಘಿಸಿದರು.

 Share: | | | | |


ಜೆರೋಸಾ ಶಾಲೆ ಘಟನೆ ಹಿಂದೆ ವ್ಯವಸ್ಥಿತ ಪಿತೂರಿ, ಮಕ್ಕಳನ್ನು ಸ್ವಾರ್ಥಕ್ಕೆ ಬಳಸಿದ್ದು ಅಕ್ಷಮ್ಯ, ; ಸತ್ಯಶೋಧನೆ ತನಿಖೆಗೆ ಸಮಾನ ಮನಸ್ಕರ ನಿಯೋಗ ಆಗ್ರಹ

Posted by Vidyamaana on 2024-02-14 19:32:09 |

Share: | | | | |


ಜೆರೋಸಾ ಶಾಲೆ ಘಟನೆ ಹಿಂದೆ ವ್ಯವಸ್ಥಿತ ಪಿತೂರಿ, ಮಕ್ಕಳನ್ನು ಸ್ವಾರ್ಥಕ್ಕೆ ಬಳಸಿದ್ದು ಅಕ್ಷಮ್ಯ,  ; ಸತ್ಯಶೋಧನೆ ತನಿಖೆಗೆ ಸಮಾನ ಮನಸ್ಕರ ನಿಯೋಗ ಆಗ್ರಹ

ಮಂಗಳೂರು, ಫೆ.14: ಸಂತ ಜೆರೋಸಾ ಶಾಲೆಯಲ್ಲಿ ಹಿಂದು ದೇವರ ಅವಹೇಳನ ಆರೋಪಕ್ಕೆ ಸಂಬಂಧಿಸಿ ಶಾಸಕ ವೇದವ್ಯಾಸ ಕಾಮತ್ ನಡೆಸಿದ ಪ್ರತಿಭಟನೆ ವಿರೋಧಿಸಿ ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳು, ಗಣ್ಯ ನಾಗರಿಕ ಪ್ರತಿನಿಧಿಗಳ ನಿಯೋಗ ಜೆರೋಸಾ ಶಾಲೆಗೆ ಭೇಟಿ ನೀಡಿ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿದ್ದು ಒಟ್ಟು ಘಟನೆಯ ವಿವರವನ್ನು ಪಡೆದು ತೀವ್ರ ಖಂಡನೆ ವ್ಯಕ್ತಪಡಿಸಿದೆ. 


ಮತೀಯ ದ್ವೇಷದ ದಾಳಿಗೆ ಗುರಿಯಾದ ಶಾಲೆಯ ಅಧ್ಯಾಪಕರು, ಆಡಳಿತ ಮಂಡಳಿಗೆ ಸಂಘಟನೆ ವತಿಯಿಂದ ನೈತಿಕ ಬೆಂಬಲ ವ್ಯಕ್ತಪಡಿಸಲಾಯಿತು. ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿಯವರ ಪಕ್ಷಪಾತದ, ಮತೀಯ ತಾರತಮ್ಯದ,  ದುರುದ್ದೇಶ ಪೂರ್ವಕ ನಡೆಯನ್ನು ನಿಯೋಗ ಒಕ್ಕೊರಲಿನಿಂದ ಖಂಡಿಸಿತು.ರವೀಂದ್ರನಾಥ ಠಾಗೋರ "ವರ್ಕ್ ಅಂಡ್ ವರ್ಶಿಪ್" ಹಾಡಿನ ಇಂಗ್ಲಿಷ್ ಪಠ್ಯ ಸಂಬಂಧಿಸಿ ಶಿಕ್ಷಕಿಯೊಬ್ಬರು ಉಲ್ಲೇಖಿಸಿದ ವಿಷಯಗಳನ್ನು ಮತೀಯ ಶಕ್ತಿಗಳು ದುರುದ್ದೇಶದಿಂದ ತಿರುಚಿದ್ದು ಪೋಷಕರನ್ನು ದಾರಿ ತಪ್ಪಿಸಿರುವುದು ಆಡಳಿತ ಮಂಡಳಿ ಪ್ರತಿನಿಧಿಗಳ ಜೊತೆಗೆ ಚರ್ಚಿಸಿದಾಗ ಎದ್ದು ಕಾಣಿಸಿದೆ. ಶಿಕ್ಷಕಿ ಧರ್ಮ ನಿಂದನೆ ಮಾಡಿದ್ದಾರೆ ಎಂದು ಅಪರಿಚಿತ ಮಹಿಳೆಯೋರ್ವರು ಹರಿಯಬಿಟ್ಟ ವಾಯ್ಸ್ ರೆಕಾರ್ಡ್ ಅನ್ನು ಆಧಾರವಾಗಿ ಮುಂದಿಟ್ಟು ಶಿಕ್ಷಕಿಯ ಮೇಲೆ ಆರೋಪ ಮಾಡಲಾಗಿದೆ. ಈ ಕುರಿತು ಮೌಖಿಕ ದೂರು ನೀಡಿದ ನಾಲ್ಕು ಪೋಷಕರಿಗೆ ತನಿಖೆ ನಡೆಸಲು ಒಂದು ವಾರ ಸಮಯ ಕೇಳಲಾಗಿತ್ತು. ಅದಕ್ಕೆ ಆ ಪೋಷಕರು ಸಹಮತವನ್ನು ವ್ಯಕ್ತಪಡಿಸಿದ್ದರು. ಆದರೆ, ಸೋಮವಾರ ಅಪರಿಚಿತ ಗುಂಪೊಂದು ಶಾಲೆಯ ಮುಂಭಾಗ ಆಗಮಿಸಿ ಪ್ರತಿಭಟನೆ ಆರಂಭಿಸಿದ್ದು, ತಕ್ಷಣವೇ ಶಿಕ್ಷಕಿಯ ವಜಾಕ್ಕೆ ಆಗ್ರಹಿಸಿದ ವಿಚಾರ ಆಡಳಿತ ಮಂಡಳಿ ನಿಯೋಗದ ಗಮನಕ್ಕೆ ತಂದಿದ್ದು, ಈ ಬೆಳವಣಿಗೆ ಶಾಸಕರ ಬೆಂಬಲಿತ ಕೋಮು ಶಕ್ತಿಗಳ ಪಿತೂರಿ ಈ ಘಟನೆಯ ಹಿಂದಿರುವುದು ಎದ್ದು ಕಾಣುವಂತಿದೆ. ಪ್ರಥಮವಾಗಿ ವಾಯ್ಸ್ ರೆಕಾರ್ಡ್ ಹರಿಯಬಿಟ್ಟು ಧರ್ಮ ನಿಂದನೆಯ ಆರೋಪ ಹೊರಿಸಿ, ಪ್ರಚೋದಿಸಿದವರ ಹಿನ್ನಲೆ, ಉದ್ದೇಶ ಸ್ಪಷ್ಟಪಡಿಸಬೇಕಿದೆ. ಈ ಮಹಿಳೆಯ ಮನೆಯ ಮಕ್ಕಳು ಜೆರೋಸಾ ಶಾಲೆಯಲ್ಲಿ ಕಲಿಯುತ್ತಿರುವುದು ನಿಜವೇ ? ಎಂಬುದೂ ತನಿಖೆಯಿಂದ ಬಹಿರಂಗಗೊಳ್ಳಬೇಕಿದೆ. 


ಮೊದಲನೆಯದಾಗಿ ಇಂತಹ ದೂರು ಇದ್ದಾಗ ಪೋಷಕರು ಪೇರೆಂಟ್ಸ್ ಎಸೋಷಿಯೇಷನ್ ಗೆ ದೂರು ನೀಡಿ ಆಂತರಿಕ ತನಿಖೆಯಾಗುವಂತೆ ನೋಡಬೇಕಿತ್ತು. ಇದು ಸಾಮಾನ್ಯ ನಿಯಮ. ಇಲ್ಲಿ ಅದನ್ನು ಕಡೆಗಣಿಸಿ ಶಾಸಕರು ಹಾಗೂ ಕೋಮು ಶಕ್ತಿಗಳ ಕೈಯಲ್ಲಿ ವಿದ್ಯಾರ್ಥಿಗಳು, ಪೋಷಕರು ದಾಳಗಳಾಗಿದ್ದು ಎದ್ದು ಕಂಡ ಅಂಶ. ಬಹಳ ಪ್ರಧಾನವಾಗಿ ತನ್ನ ಕ್ಷೇತ್ರದ ಪ್ರತಿಷ್ಟಿತ ಶಾಲೆಯ ಮೇಲೆ ಆರೋಪ ಬಂದಾಗ ಶಾಸಕರಾದವರು ಮಧ್ಯಸ್ಥಿಕೆ ವಹಿಸಿ ನಿಯಮ ಪ್ರಕಾರ ಕ್ರಮ ಜರಗುವಂತೆ ವ್ಯವಸ್ಥೆ ಮಾಡಬೇಕಿತ್ತು. ಆದರೆ, ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಶಾಸಕರುಗಳಾಗಿ ಜೆರೋಸಾ ಶಾಲೆಗೆ ಬರುವ ಬದಲಿಗೆ, ಬಜರಂಗದಳ, ಸಂಘ ಪರಿವಾರದ ಪ್ರತಿನಿಧಿಗಳಂತೆ ಆಗಮಿಸಿದ್ದು, ನಡೆದುಕೊಂಡದ್ದು ಎದ್ದು ಕಾಣುತ್ತಿರುವ ಅಂಶ. 


ಶಾಸಕರುಗಳು ಸ್ವತಃ ಅಲ್ಪಸಂಖ್ಯಾತ ಧರ್ಮಗಳ ಧಾರ್ಮಿಕ ನಂಬಿಕೆಗಳನ್ನು ಕೆಣಕುವಂತೆ ಮಾತಾಡಿರುವುದು, ಗೌರವಾನ್ವಿತ ಫಾದರ್ ಗಳನ್ನು ಅಸಂವಿಧಾನಿಕ ಪದಗಳನ್ನು ಬಳಸಿ ನಿಂದಿಸಿರುವುದು, ಸ್ವತಃ ಧರ್ಮದ್ವೇಷದಿಂದ ಕುರುಡಾಗಿರುವುದು, ತಮ್ಮ ಶಾಸನಾತ್ಮಕ ಜವಾಬ್ದಾರಿಯನ್ನು ಮರೆತಿರುವುದು ಕ್ರಿಮಿನಲ್ ಅಪರಾಧ. ಅದಲ್ಲದೆ ತಮ್ಮ ತಾಳಕ್ಕೆ ತಕ್ಕಂತೆ ಕುಣಿಯುವ ಡಿಡಿಪಿಐ ಮೂಲಕ ಶಾಲೆಯ ಆಡಳಿತ ಮಂಡಳಿಯನ್ನು ಬೆದರಿಸಿರುವುದು, ತಾವೂ ಸ್ವತಃ ಬೆದರಿಕೆ ಒಡ್ಡಿರುವುದು ಎದ್ದು ಕಾಣಿಸುತ್ತದೆ. ಈ ರೀತಿಯ ಬೆದರಿಕೆ, ಭಯ ಸೃಷ್ಟಿಯ ಮೂಲಕ ಆರೋಪ ಹೊತ್ತ ಶಿಕ್ಷಕಿಯನ್ನು ತನಿಖೆಯೇ ಇಲ್ಲದೆ ಶಿಕ್ಷೆಗೆ ಒಳಪಡಿಸುವ ಬಲವಂತದ ಸ್ಥಿತಿಯನ್ನು ನಿರ್ಮಿಸಿರುವುದು, ಪ್ರಾಥಮಿಕ ಶಾಲೆಯ ಮಕ್ಕಳನ್ನು ಧರ್ಮ ದ್ವೇಷ ಹುಟ್ಟಿಸುವ ರೀತಿ ಪ್ರತಿಭಟನೆಗೆ ಬಳಸಿರುವುದು, ಘೋಷಣೆ, ಹೇಳಿಕೆಗೆ ಪ್ರಚೋದಿಸಿರುವುದು ಮಂಗಳೂರಿನ ನಾಗರಿಕ ಪ್ರಜ್ಞೆಗೆ ಮಾಡಿದ ಅಪಮಾನ. ಈ ಮೂಲಕ ಮಂಗಳೂರಿನಲ್ಲಿ ಕೋಮು ಹಿಂಸೆ ಸೃಷ್ಟಿಸುವ ಹುನ್ನಾರ ಶಾಸಕರುಗಳಿಗೆ ಹಾಗೂ ಅವರ ಹಿಂಬಾಲಕರುಗಳಿಗೆ ಇದ್ದದ್ದು ಸ್ಪಷ್ಟ‌ ಎಂದು ನಿಯೋಗದ ನೇತೃತ್ವ ವಹಿಸಿದ್ದ ಡಿವೈಎಫ್ಐ ಪ್ರಕಟಣೆಯಲ್ಲಿ ತಿಳಿಸಿದೆ. 


ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟರ ಈ ರೀತಿಯ ನಡೆ ಅತ್ಯಂತ ಅಪಾಯಕಾರಿಯಾಗಿದ್ದು, ಇವರ ಮೇಲೆ ದಾಂಧಲೆ, ಗೂಂಡಾಗಿರಿ, ಬೆದರಿಕೆಯ ಜೊತೆಗೆ ಕೋಮುಗಲಭೆಗೆ ಪ್ರಚೋದನೆಯ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ಸಮಿತಿ ಆಗ್ರಹಿಸುತ್ತದೆ. ಹಾಗೆಯೇ, ಟೀಚರ್ ಧರ್ಮ ನಿಂದನೆ ಮಾಡಿರುವ ಆರೋಪದ ಕುರಿತು ಇಲಾಖಾ ತನಿಖೆ ಪಾರದರ್ಶಕವಾಗಿ ನಡೆಯಬೇಕು, ಜೊತೆಗೆ ಪ್ರಕರಣದ ಎಲ್ಲಾ ಆಯಾಮಗಳು, ಬಹಳ ಪ್ರಧಾನವಾಗಿ ಮೊದಲು ವಾಯ್ಸ್ ರೆಕಾರ್ಡ್ ಮೂಲಕ ಪ್ರಚೋದನಾತ್ಮಕವಾಗಿ ಆರೋಪ ಮಾಡಿದ ಮಹಿಳೆಯ ಹಿನ್ನೆಲೆ, ಉದ್ದೇಶ, ಪೋಷಕರಿಗಿಂತ ಮೊದಲು ಸಂಘ ಪರಿವಾರದ ಕಾರ್ಯಕರ್ತರು ಆಗಮಿಸಿ ಪ್ರತಿಭಟನೆ ನಡೆಸಿರುವುದು, ಶಾಲೆಯ ವಿದ್ಯಾರ್ಥಿನಿಯರ ಮೂಲಕ ಗಂಭೀರ ಆರೋಪದ, ಮತೀಯವಾದಿ ಮನಸ್ಥಿತಿಯ ಮಾಧ್ಯಮ ಹೇಳಿಕೆ ನೀಡಿರುವುದು, ವಿದ್ಯಾರ್ಥಿನಿಯರು ಧಾರ್ಮಿಕ(ದ್ವೇಷದ) ಘೋಷಣೆ, ಧಾರ್ಮಿಕ ಸಂಕೇತದ ಶಾಲುಗಳನ್ನು ಬೀಸುವಂತೆ ಮಾಡಿರುವುದು ಪ್ರಕರಣದ ಹಿಂದೆ ವ್ಯವಸ್ಥಿತ ಪಿತೂರಿ ಮೇಲ್ನೋಟಕ್ಕೆ ಕಾಣುವಂತೆ ಮಾಡಿದೆ. ಈ ಅಂಶಗಳೂ ತನಿಖೆಗೆ ಒಳಪಡಬೇಕು, ತನಿಖೆಯ ಆಧಾರದಲ್ಲಿ ಕಾನೂನು ಕ್ರಮಗಳು ಜರುಗಬೇಕು ಎಂದು ನಿಯೋಗ ಒತ್ತಾಯಿಸುತ್ತದೆ. ಅದಲ್ಲದೆ, ಪ್ರಕರಣ ಹಳಿ ತಪ್ಪಲು ಶಾಸಕರ ಅಡಿಯಾಳಿನಂತೆ ನಡೆದುಕೊಂಡ ಡಿಡಿಪಿಐ ವರ್ತನೆಯೂ ಒಂದು ಪ್ರಧಾನ ಕಾರಣ. ಡಿಡಿಪಿಐಯನ್ನು ಈ ಪ್ರಕರಣದ ತನಿಖಾ ಪ್ರಕ್ರಿಯೆಯ ಜವಾಬ್ದಾರಿಯಿಂದ ಹೊರಗಿಡಬೇಕು, ಅವರ ಮೇಲೆ ಕ್ರಮ ಜರುಗಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.


ಈ ಹಿನ್ನೆಲೆಯಲ್ಲಿ ನಿವೃತ್ತ ಐಎಎಸ್ ಅಥವಾ ಐಪಿಎಸ್,  ನ್ಯಾಯವಾದಿಗಳ ನೇತೃತ್ವದ ಗಣ್ಯರು ಒಳಗೊಂಡ ಸತ್ಯಶೋಧನಾ ಸಮಿತಿಯನ್ನು ಸರಕಾರ ರಚಿಸಬೇಕು, ಅದು ಈ ಪ್ರಕರಣದ ಎಲ್ಲಾ ಆಯಾಮಗಳ ಸಮಗ್ರ ವರದಿಯನ್ನು ನಾಗರಿಕ ಸಮಾಜದ ಮುಂದೆ ಇಡಲು ಸಾಧ್ಯ ಆಗಬೇಕು ಎಂದು ನಿಯೋಗ ಸರಕಾರದ ಬಳಿ ಮನವಿ ಮಾಡುತ್ತದೆ. ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಭರತ್ ಶೆಟ್ಟಿ ಈ ಪ್ರಕರಣದಲ್ಲಿ ನಡೆದುಕೊಂಡ ರೀತಿ ಅಕ್ಷಮ್ಯ. ಶಾಸನ ಸಭೆಯ ಸದಸ್ಯರು ಈ ರೀತಿ ನಡೆದುಕೊಳ್ಳುವುದು ಅಸಹಜ ಮಾತ್ರ ಅಲ್ಲ, ವ್ಯವಸ್ಥೆಯನ್ನೇ ಬುಡಮೇಲು ಮಾಡುವ ದುಷ್ಕೃತ್ಯ.  ಇವರ ಮೇಲೆ ಸಭಾಪತಿಗಳು ಕ್ರಮ ಕೈಗೊಳ್ಳಬೇಕು ಹಾಗೂ ಇವರಿಗೆ ಶಾಸನ ಸಭೆಯ ಸದಸ್ಯ ಜವಾಬ್ದಾರಿ ಕುರಿತು ವಿಶೇಷ ತರಬೇತಿಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಪೀಕರ್ ಯು.ಟಿ ಖಾದರ್ ಅವರಿಗೆ ನಿಯೋಗ ದೂರು ನೀಡಲಿದೆ.


ನಿಯೋಗದಲ್ಲಿ ಮುನೀರ್ ಕಾಟಿಪಳ್ಳ, ಸಾಮಾಜಿಕ ಕಾರ್ಯಕರ್ತರಾದ ಎಂ.ಜಿ ಹೆಗ್ಡೆ, ಮಂಜುಳಾ ನಾಯಕ್, ನ್ಯಾಯವಾದಿಗಳಾದ ಯಶವಂತ ಮರೋಳಿ, ದಿನೇಶ್ ಹೆಗ್ಡೆ ಉಳೆಪಾಡಿ, ಕಾಂಗ್ರೆಸ್ ಮುಖಂಡರಾದ ಪಿ.ವಿ ಮೋಹನ್, ಮಾಜಿ ಮೇಯರ್ ಕೆ. ಅಶ್ರಫ್, ಮಾಜಿ ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್, ಹಿರಿಯ ಕಾರ್ಮಿಕ ನೇತಾರರಾದ ಬಾಲಕೃಷ್ಣ ಶೆಟ್ಟಿ, ಸಿಪಿಐಎಂ ನ ಸುನಿಲ್ ಕುಮಾರ್ ಬಜಾಲ್, ಜನವಾದಿ ಮಹಿಳಾ ಸಂಘಟನೆಯ ಜಯಂತಿ ಬಿ ಶೆಟ್ಟಿ,  ಭಾರತಿ ಬೋಳಾರ, ವಿವಿಧ ಸಂಘಟನೆಗಳ ಸ್ಟಾನಿ ಅಳ್ವಾರಿಸ್, ಎರಿಕ್ ಲೋಬೋ, ಅನಿಲ್ ಲೋಬೋ, ಸಮರ್ಥ್ ಭಟ್, ಯೋಗೀಶ್ ನಾಯಕ್, ನೆಲ್ಸನ್ ರೋಚ್, ಡಿವೈಎಫ್ಐ ಜಿಲ್ಲಾ ಮುಖಂಡರಾದ ಬಿ.ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಯೋಗಿತಾ, ನಿವೃತ್ತ ಪ್ರಾಧ್ಯಾಪಕರುಗಳಾದ ಡಾ. ಶಿವರಾಮ ಶೆಟ್ಟಿ, ಡಾ.ವಸಂತ ಕುಮಾರ್ ಇದ್ದರು

BGF ಬಪ್ಪಳಿಗೆ ಗ್ಲೋಬಲ್ ಫ್ರೆಂಡ್ಸ್ ವತಿಯಿಂದ ಯುವ ವಿದ್ವಾಂಸ ಬಪ್ಪಳಿಗೆ ಶಫೀಕ್ ಫೈಝಿರವರಿಗೆ ಹುಟ್ಟೂರ ಸನ್ಮಾನ

Posted by Vidyamaana on 2023-09-29 11:28:59 |

Share: | | | | |


BGF ಬಪ್ಪಳಿಗೆ ಗ್ಲೋಬಲ್ ಫ್ರೆಂಡ್ಸ್ ವತಿಯಿಂದ ಯುವ ವಿದ್ವಾಂಸ ಬಪ್ಪಳಿಗೆ ಶಫೀಕ್ ಫೈಝಿರವರಿಗೆ  ಹುಟ್ಟೂರ ಸನ್ಮಾನ

   ಪುತ್ತೂರು : ತೋಡಾರು ಶಂಸುಲ್ ಉಲಮಾ ಅರಬಿಕ್  ಕಾಲೇಜಿನ ಸಂತತಿ ಬಪ್ಪಳಿಗೆ ನೂರುಲ್ ಹುದಾ ಮದ್ರಸದ ಹಳೆ ವಿದ್ಯಾರ್ಥಿ ಪಟ್ಟಿಕ್ಕಾಡ್ ಜಾಮಿಆಃ ನೂರಿಯದಲ್ಲಿ 2022 ನೇ ಸಾಲಿನ ಫಿಕ್ಹ್ ವಿಭಾಗದಲ್ಲಿ ಪ್ರಥಮ  ಸ್ಥಾನ ಪಡೆದು ಫೈಝಿ ಅಲ್ ಮಅಬರಿ  ಪದವಿ ಪಡೆದ ಮುಹಮ್ಮದ್ ಶಫೀಕ್ ರನ್ನು   ಬಪ್ಪಳಿಗೆಯಲ್ಲಿ ನಡೆದ ಮೀಲಾದ್ ಸಮಾರಂಭದಲ್ಲಿ ಅದ್ದೂರಿಯಾಗಿ ಸನ್ಮಾನಿಸಲಾಯಿತು.

    ಸ್ಥಳೀಯ ಸಾಮಾಜಿಕ ಸೇವಾ ಸಂಘಟನೆಯಾದ  *BGF ಬಪ್ಪಳಿಗೆ ಗ್ಲೋಬಲ್ ಫ್ರೆಂಡ್ಸ್* ಈ ಸನ್ಮಾನವನ್ನು ಜಮಾಅತರ ಪರವಾಗಿ, ಮಸೀದಿ ವಠಾರದಲ್ಲಿ ನಡೆದ ಮೀಲಾದ್ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿತ್ತು.

ಶಾಲು ಹೊದಿಸಿ,ಐದು ಸಾವಿರ ರೂಪಾಯಿಯನ್ನೊಳಗೊಂಡ ನಗದು, ಸನ್ಮಾನ ಫಲಕ ಹಾಗೂ ಅಮೂಲ್ಯ ಗ್ರಂಥಗಳನ್ನು ನೀಡಿ ಯುವ ವಿದ್ವಾಂಸನನ್ನು ಸಂಘಟಕರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಜಮಾಅತ್ ಸಮಿತಿ ಪದಾಧಿಕಾರಿಗಳು, ಅನ್ಸಾರುಲ್ ಇಸ್ಲಾಂ ಯುವಕ ಸಮಿತಿ ಕಾರ್ಯಕರ್ತರು, ಬಪ್ಪಳಿಗೆ ಈದ್ ಮಿಲಾದ್ ಸಮಿತಿಯ ಸಾರಥಿಗಳು, ಮಸೀದಿ ಮದ್ರಸದ ಉಸ್ತಾದರು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು.

      ಹಿರಿಯ ವಿದ್ವಾಂಸರಾಗಿದ್ದ ಮರ್ಹೂಂ ಅಬ್ದುಲ್ ಖಾದಿರ್ ಫೈಝಿ ಬಪ್ಪಳಿಗೆ ಹಾಗೂ ಝೈನಬ ದಂಪತಿಗಳ ಗಂಡು ಮಕ್ಕಳಲ್ಲಿ ಕಿರಿಯವರೇ ಮುಹಮ್ಮದ್ ಶಫೀಕ್.

     ಮಕ್ಕಳಿಗೆ ಬೇಕಾದ ಧಾರ್ಮಿಕ ಮತ್ತು ಲೌಕಿಕ ವಿದ್ಯಾಭ್ಯಾಸಗಳೆರಡನ್ನೂ ನೀಡಿ ಜೀವನದ ಉತ್ತಮ ದಾರಿಯನ್ನು ಕಂಡುಕೊಳ್ಳುವಲ್ಲಿ ಮಕ್ಕಳಿಗೆ ಸರಿಯಾದ ದಾರಿ ತೋರುವಲ್ಲಿ ಮರ್ಹೂಂ ಅಬ್ದುಲ್ ಖಾದರ್ ಫೈಝಿ ಉಸ್ತಾದರು ಯಶಸ್ವಿಯಾಗಿದ್ದಾರೆ.ಗಂಡು ಮಕ್ಕಳ ಪೈಕಿ ಮೂರು ಮಂದಿ ವಿದೇಶ ಉದ್ಯೋಗದಲ್ಲಿದ್ದು ಕಿರಿಯ ಮಗನಾದ ಶಫೀಕ್ ನನ್ನು ಓರ್ವ ಧಾರ್ಮಿಕ ವಿದ್ವಾಂಸ(ಆಲಿಂ)ನನ್ನಾಗಿ ಮಾಡಬೇಕೆಂದು ನನ್ನ ಆಸೆ ಎಂದು ಬಪ್ಪಳಿಗೆ ಮದ್ರಸದ ಒಂದನೇ ತರಗತಿಗೆ ದಾಖಲು ಮಾಡುವಾಗ ಹೇಳಿದ್ದರು.

   ಮದ್ರಸದ ಒಂದನೇ ತರಗತಿಯಲ್ಲಿ ಆತೂರು ಕುದ್ಲೂರಿನ  ನಝೀರ್ ಮದನಿ ಉಸ್ತಾದರು ಅಧ್ಯಾಪಕರಾಗಿದ್ದು, ಒಂದನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ 

 ತ್ರಪ್ತಿ ದಾಯಕ ಅಂಕಗಳು ಶಫೀಕ್ ಪಡೆದಿಲ್ಲ ಎಂಬ ಮಾಹಿತಿಯನ್ನು ಅವರು ಅಂದು  ಮದ್ರಸಾ ಮುಖ್ಯೋಪಾಧ್ಯಾಯರಾಗಿದ್ದ ನನ್ನ ಗಮನಕ್ಕೆ ತಂದಾಗ ಮರ್ಹೂಂ ಫೈಝಿ ಉಸ್ತಾದರಿಗೆ ಈ ಮಾಹಿತಿಯನ್ನು ನಾನು ತಿಳಿಸಿ,ಇನ್ನೊಂದು ವರ್ಷ ಒಂದನೇ ತರಗತಿಯಲ್ಲೇ ಕಲಿಯುವುದಾದರೆ ಮುಂದಿನ  ಭವಿಷ್ಯ ಒಳ್ಳೆಯ ದಾಗಲಿದೆ ಎಂದಾಗ ,ಅವನ ಹಿತಕ್ಕಾಗಿ ನೀವು ಕೈಗೊಳ್ಳುವ ಎಲ್ಲಾ ಕ್ರಮಗಳಿಗೆ ನಾನು ಬದ್ಧ ಎಂದರು.

   ಅಲ್ಲಿಂದ ಮತ್ತೆ ಪ್ರಾರಂಭವಾಯಿತು,ಶಫೀಕನ ಕಲಿಕೆಯ ಛಲ.ಮುಂದಿನ ಎಲ್ಲಾ ತರಗತಿಗಳಲ್ಲೂ ಪ್ರಥಮನಾಗಿ,ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ರೇಂಜ್ ಮಟ್ಟದಲ್ಲಿಯೇ ಉನ್ನತ ಸಾಧನೆಗೈದು, ಉತ್ತಮ ನಡವಳಿಕೆಯ ವಿದ್ಯಾರ್ಥಿ ಯಾಗಿ ಗುರುಹಿರಿಯರ ಸಂಪೂರ್ಣ ತೃಪ್ತಿ ಗಳಿಸಿದ್ದ.

    ಹತ್ತನೇ ತರಗತಿಯ ಬಳಿಕ ತಂದೆಯ ಅಭಿಲಾಷೆಯಂತೆ ಜಾಮಿಆಃ ನೂರಿಯಾದ ಸಂತತಿಯಾಗಿ ,ಧರ್ಮ ಪ್ರಬೋಧನೆಯ ಕುಡಿಯಾಗಬೇಕೆಂದು ಪ್ರತಿಷ್ಠಿತ ತೋಡಾರು ಶಂಸುಲ್ ಉಲಮಾ ಅರಬಿಕ್ ಕಾಲೇಜಿನಲ್ಲಿ ಪ್ರವೇಶಾತಿ ಪಡೆದ.(ವಿದ್ಯಾರ್ಥಿಯಾಗಿದ್ದ ಈ ಮಗನೇ ತಂದೆಯ ಜನಾಝ ನಮಾಝಿಗೆ ನೇತ್ರತ್ವವನ್ನು ನೀಡಿದ್ದರು.)ಕಾಲೇಜಿನ  ಅಧ್ಯಯನ ವರ್ಷಗಳನ್ನು 

ಪ್ರತಿಭಾನ್ವಿತನಾಗಿ ಪೂರೈಸಿ, ಜಾಮಿಆಃ ನೂರಿಯಾದಲ್ಲಿ ಸೇರಿ, ಅಧ್ಯಯನಕ್ಕೆ   ಫಿಖ್ಹ್ ವಿಭಾಗವನ್ನು ಆಯ್ಕೆ ಮಾಡಿ,ಅಂತಿಮ ಪರೀಕ್ಷೆಯಲ್ಲಿ ಘಟಾನುಘಟಿ ವಿದ್ಯಾರ್ಥಿ ಗಳೆಡೆಯಲ್ಲಿ  ಪ್ರಥಮ ಸ್ಥಾನವನ್ನು ಪಡೆದು ಮಹ್ಬರಿ ಫೈಝಿ ಪಟ್ಟ ಅಲಂಕರಿಸಿ ಬಪ್ಪಳಿಗೆಗೆ ಕೀರ್ತಿ ತಂದ ಶಫೀಕ ರನ್ನು ಅಭಿನಂದಿಸಿ ಈ ಸನ್ಮಾನವನ್ನು ನೀಡಲಾಯಿತು.

ಪ್ರಸ್ತುತ ಶಫೀಕ್ ಫೈಝಿಯವರು ಕಿನ್ಯದ ವಾದೀ ತೈಬ ಅಕಾಡೆಮಿಯಲ್ಲಿ ಮುದರ್ರಿಸರಾಗಿ ಸೇವೆ ಸಲ್ಲಿಸುತ್ತಿದ್ದು,ಮುಂದಿನ ಜೀವನ ಇನ್ನಷ್ಟು ಬೆಳಗಿ ಅವರ ವಿದ್ವತ್ ಸಂಪತ್ತು ಸಮುದಾಯಕ್ಕೆ ಬೆಳಕಾಗಲಿ...ಆಮೀನ್

ಲಿಟ್ಲ್ ಫ್ಲವ‌ರ್ ಶಾಲೆಯಲ್ಲಿ ಮೇಲೈಸಿದ ಶಾಲಾ ಸ್ಕೌಟ್ ಗೈಡ್, ಕಬ್, ಬುಲ್ ಬುಲ್ ದಳದ ವಾರ್ಷಿಕ ಮೇಳ

Posted by Vidyamaana on 2024-02-18 07:45:15 |

Share: | | | | |


ಲಿಟ್ಲ್  ಫ್ಲವ‌ರ್ ಶಾಲೆಯಲ್ಲಿ ಮೇಲೈಸಿದ ಶಾಲಾ ಸ್ಕೌಟ್  ಗೈಡ್, ಕಬ್, ಬುಲ್ ಬುಲ್ ದಳದ ವಾರ್ಷಿಕ ಮೇಳ

ಪುತ್ತೂರು: ದರ್ಬೆ ಲಿಟ್ಲ್  ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಸ್ಕೌಟ್ , ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವಾರ್ಷಿಕ ಮೇಳ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಶಾಲಾ ಸೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ಮಕ್ಕಳಿಂದ ಗೂಡುದೀಪ ರಚನೆ, ನಕ್ಷತ್ರ ರಚನೆ, ರಾಷ್ಟ್ರಧ್ವಜದ ಚಿತ್ರ ರಚನೆ, ಎಲೆಗಳಿಂದ ಆಕೃತಿ ತಯಾರಿ ನಡೆಯಿತು. ರಂಗಬೆಳಕು ತಂಡ ಪುತ್ತೂರು ವತಿಯಿಂದ ಕೃಷ್ಣಪ್ಪ ಬಂಬಿಲ ನೇತೃತ್ವದಲ್ಲಿ ಜಾಗೃತಿ ಗೀತೆಗಳ ಗಾಯನ ನಡೆಯಿತು. ದರ್ಬೆ ವೃತ್ತದಿಂದ 352 ವಿದ್ಯಾರ್ಥಿಗಳು, ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ನಡೆದ ಆಕರ್ಷಕ ಪಥಸಂಚಲನವನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ ಭಟ್ ಉದ್ಘಾಟಿಸಿದರು. ನಂತರ ಶಾಲಾ ಸ್ಕೌಟ್ , ಗೈಡ್, ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಕರೋಕೆ ಹಾಡುಗಳ ಸುಮಧುರ ಗಾಯನ ನೆರವೇರಿತು.ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ. ಎಸ್., ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ ಭಟ್‌, ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷ ಸತೀಶ್‌ ಆ‌ರ್, ಶಾಲಾ ಸೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದವರು, ಶಿಕ್ಷಕ ಶಿಕ್ಷಕಿಯರ ಉಪಸ್ಥಿತಿಯೊಂದಿಗೆ ಧ್ವಜಾರೋಹಣ ನೆರವೇರಿತು. ಬಳಿಕ ನಡೆದ ಸಮಾರಂಭವನ್ನು ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಉದ್ಘಾಟಿಸಿದರು. ಶಾಲಾ ಸಂಚಾಲಕಿ ವಂದನೀಯ ಭಗಿನಿ ಪ್ರಶಾಂತಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸುದ್ದಿ ಸಮೂಹ ಸಂಸ್ಥೆಯ ಆಡಳಿತ ನಿರ್ಧೇಶಕ ಡಾ. ಯು. ಪಿ ಶಿವಾನಂದ, ಪುತ್ತೂರು ನಗರ ಸಭೆಯ ಸ್ಥಳೀಯ ಸದಸ್ಯೆ ಶಶಿಕಲಾ, ನಿವೃತ್ತ ಸೈನಿಕರ ಸಂಘದ ಗೌರವಾಧ್ಯಕ್ಷ ಕರ್ನಲ್ ಡಿ. ಜಿ. ಭಟ್‌, ನಿವೃತ್ತ ಶಿಕ್ಷಕಿ ಮೇರಿ ಡಿಸಿಲ್ವ, ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ ಭಟ್, ಶಾಲಾ ಸುರಕ್ಷಾ ಸಮಿತಿಯ ಅಧ್ಯಕ್ಷ ಸತೀಶ್‌ ಆ‌ರ್. ಉಪಸ್ಥಿತರಿದ್ದರು.ಬಳಿಕ ಕೆಮ್ಮಿಂಜೆ ಅಗ್ನಿಶಾಮಕ ದಳದ ವತಿಯಿಂದ ಅಗ್ನಿಶಾಮಕ ಪ್ರಾತ್ಯಕ್ಷಿಕೆ ಅಗ್ನಿಶಾಮಕ ದಳದ ಮುಖ್ಯಸ್ಥ ರುಕ್ಕಯ ಗೌಡ ಅವರ ನೇತೃತ್ವದಲ್ಲಿ ನೆರವೇರಿತು. ಬಳಿಕ ಪುತ್ತೂರು ಸೌಟ್, ಗೈಡ್, ಸ್ಥಳೀಯ ಸಂಸ್ಥೆಯ ಸಂಘಟನಾ ಕಾರ್ಯದರ್ಶಿ ಶ್ರೀಮತಿ ವೇದಾವತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಂತರ ಶಾಲಾ ಸಂಚಾಲಕಿ ವಂದನೀಯ ಭಗಿನಿ ಪ್ರಶಾಂತಿ ಬಿ. ಎಸ್. ಅಧ್ಯಕ್ಷತೆಯಲ್ಲಿ, ಪುತ್ತೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾನ್ಯ ಲೋಕೇಶ್ ಎಸ್‌. ಆ‌ರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಪುತ್ತೂರು ಸೈಟ್, ಗೈಡ್, ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ವಿದ್ಯಾ ಆರ್. ಗೌರಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಪಾಪೆಮಜಲು ಇಲ್ಲಿನ ಶಿಕ್ಷಕಿ ಶ್ರೀಮತಿ ಮೇಬಲ್ ಡಿಸೋಜ, ಪುತ್ತೂರು ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಶಶಿಕಲಾ, ಅಮ‌ರ್ ಅಕ್ಟ‌ರ್ ಅಂತೋನಿ ಸೌಹಾರ್ದ ರೋಲಿಂಗ್ ಟ್ರೋಫಿಯ ಸ್ಥಾಪಕಾಧ್ಯಕ್ಷರಾದ ರಝಾಕ್ ಬಪ್ಪಳಿಗೆ, ಶಾಲಾ ದಾನಿಗಳಾದ ಶ್ರೀಮತಿ ಸುನೀತಾ ರಕ್ಷಕ ಶಿಕ್ಷಕ ಸಂಘದ ನಿಕಟಪೂರ್ವ ಉಪಾಧ್ಯಕ್ಷರಾದ ಶ್ರೀಯುತ ರಘುನಾಥ ರೈ, ಪುತ್ತೂರು ಸ್ಕೌಟ್ , ಗೈಡ್, ಸ್ಥಳೀಯ ಸಂಸ್ಥೆಯ ಸಂಘಟನಾ ಕಾರ್ಯದರ್ಶಿ ಶ್ರೀಮತಿ ವೇದಾವತಿ, ಪುತ್ತೂರು ಸ್ಕೌಟ್  ಗೈಡ್ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಶ್ರೀಮತಿ ಡೋರತಿ ಮೇರಿ ಡಿಸೋಜ, ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ಮೇರಿ ಡಿಸಿಲ್ವ, ಶ್ರೀಮತಿ ಲಿಡಿಯಾ ಮರಿಯಾ ರಸ್ಕಿನ್ಹ, ಶ್ರೀಮತಿ ಐರಿನ್ ವೇಗಸ್, ಹಿರಿಯ ವಿದ್ಯಾರ್ಥಿ ಡಾ. ಶ್ರೀಪ್ರಕಾಶ್‌, ಪೋಷಕರಾದ ಶ್ರೀಮತಿ ಡಾ. ವಿಜಯ ಸರಸ್ವತಿ, ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀಯುತ ರಾಮಚಂದ್ರ ಭಟ್, ಶಾಲಾ ಸುರಕ್ಷಾ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಸತೀಶ್ ಆರ್, ಹಾಗೂ ಭಗಿನಿ ಫೆಲ್ಸಿ ಡಿಸೋಜ ಉಪಸ್ಥಿತರಿದ್ದರು. ಬಳಿಕ 352 ವಿದ್ಯಾರ್ಥಿಗಳ ಭಾಗವಹಿಸುವಿಕೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.ಮರುದಿನ ಬಿ ಪಿ ಸಿಕ್ಸ್ ವ್ಯಾಯಾಮ, ಸರ್ವಧರ್ಮ ಪ್ರಾರ್ಥನೆ ನಡೆಯಿತು. ಉಪಾಹಾರದ ಬಳಿಕ ಬೆಂಕಿ ಬಳಸದ ಅಡುಗೆ ಗಮನ ಸೆಳೆಯಿತು. ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಯ ಸಂಚಾಲಕ ಪ್ರವೀಣ್‌ ವರ್ಣಕುಟೀರ ಅವರಿಂದ ಮುಖವಾಡ ತಯಾರಿ, ಗೊಂಬೆ ತಯಾರಿ, ಕರಕುಶಲ ವಸ್ತುಗಳ ಪ್ರಾತ್ಯಕ್ಷಿಕೆ ನೆರವೇರಿತು.


ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯಶಿಕ್ಷಕಿ ಭಗಿನಿ ವೆನಿಶಾ ಬಿ. ಎಸ್. ವಹಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ ಭಟ್, ಶಾಲಾ ಸ್ಕೌಟ್ಸ್ , ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವಾರ್ಷಿಕ ಮೇಳದ ನಾಯಕಿ ವಿಲ್ಮಾ ಫೆರ್ನಾಂಡಿಸ್, ಸ್ಕೌಟ್ಸ್  ಶಿಕ್ಷಕರಾದ ಬಾಲಕೃಷ್ಣ ಪೊರ್ದಾಲ್, ಭವ್ಯ, ಬುಲ್ ಬುಲ್ ಶಿಕ್ಷಕಿಯರಾದ ಜೋಸ್ಲಿನ್ ಪಾಯಸ್, ಮಮತಾ, ದೀಕ್ಷಾ, ಕಬ್ ಶಿಕ್ಷಕಿಯರಾದ ಸುಶ್ಮಿತಾ, ದಿವ್ಯ, ಗೈಡ್ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

KSRTCಯಲ್ಲಿ ಚಾಲಕರಾಗ್ಬೇಕಾ? – ಆ.22ರಂದು ಸಂದರ್ಶನ ಇದೆ

Posted by Vidyamaana on 2023-08-19 04:27:27 |

Share: | | | | |


KSRTCಯಲ್ಲಿ ಚಾಲಕರಾಗ್ಬೇಕಾ? – ಆ.22ರಂದು ಸಂದರ್ಶನ ಇದೆ

ಮಂಗಳೂರು: ರಾಜ್ಯ ಸರಕಾರದ ಸಾರಿಗೆ ನಿಗಮದ ಬಸ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕಗೊಳಿಸುವ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದ್ದು, ನೇರ ನೇಮಕ ಪ್ರಕ್ರಿಯೆ ನಡೆಯಲಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.


ಆಸಕ್ತ ಅಭ್ಯರ್ಥಿಗಳು ಆಗಸ್ಟ್ ತಿಂಗಳ 22ರ ಮಂಗಳವಾರದಂದು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಇಂದಿರಾಗಾಂಧಿ ಜನ್ಮಶತಾಬ್ದಿ ಭವನದ ಕೆಳ ಅಂತಸ್ಥಿನಲ್ಲಿ ಸಂದರ್ಶನಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ 1ಗಂಟೆಯ ತನಕ ಅವಕಾಶ ಕಲ್ಪಿಸಲಾಗಿದೆ.

ಸಲ್ಲಿಸಬೇಕಾದ ದಾಖಲೆಗಳು:

ಆಧಾರ್ ಕಾರ್ಡ್

ವಾಹನ ಚಾಲನಾ ಪರವಾಣಿಗೆ ಪತ್ರ

ಭಾರೀ ಗಾತ್ರದ ವಾಹನ ಚಾಲನೆ ಅನುಜ್ಞಾ ಪತ್ರ

4 ಪಾಸ್ ಪೋರ್ಟ್ ಫೋಟೊ

7ನೇ ತರಗತಿ ಮೇಲ್ಪಟ್ಟ ತೇರ್ಗಡೆಯಾದ ಅಂಕಪಟ್ಟಿ

ವರ್ಕ್​ ಫ್ರಮ್​​ ಹೋಮ್ ಮೂಲಕ ಹೆಚ್ಚು ಹಣ ಗಳಿಸಬಹುದೆಂದು ಆಸೆ ತೋರಿಸಿ 158 ಕೋಟಿ ರೂ. ವಂಚಿಸಿದ್ದ ಆರೋಪಿಗಳು ಅರೆಸ್ಟ್​

Posted by Vidyamaana on 2024-01-31 11:32:42 |

Share: | | | | |


ವರ್ಕ್​ ಫ್ರಮ್​​ ಹೋಮ್ ಮೂಲಕ ಹೆಚ್ಚು ಹಣ ಗಳಿಸಬಹುದೆಂದು ಆಸೆ ತೋರಿಸಿ 158 ಕೋಟಿ ರೂ. ವಂಚಿಸಿದ್ದ ಆರೋಪಿಗಳು ಅರೆಸ್ಟ್​

ಬೆಂಗಳೂರು, : ವರ್ಕ್​ ಫ್ರಾಮ್​​ ಹೋಮ್​ (ಮನೆಯಲ್ಲೇ ಕುಳಿತು ಕೆಲಸ) ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದೆಂಬ ಆಮಿಷ ಒಡ್ಡಿ ಜನರ ಖಾತೆಗಳಿಂದ 158 ಕೋಟಿ ರೂ.ದೋಚಿದ್ದ ಅತಿ ದೊಡ್ಡ ಸೈಬರ್​ ವಂಚಕರ (Cyber Crime) ಜಾಲವನ್ನು ಕೇಂದ್ರ ಅಪರಾಧ ವಿಭಾಗದ (CCB) ಅಧಿಕಾರಿಗಳು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರು, ಹೈದರಾಬಾದ್ ಮತ್ತು ಮುಂಬೈನಲ್ಲಿ ಕೂತು ವಂಚಿಸುತ್ತಿದ್ದ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.


ಕರ್ನಾಟಕ ಸೇರಿದಂತೆ 28 ರಾಜ್ಯಗಳಲ್ಲಿ 2,143 ಸೈಬರ್​ ವಂಚನೆ ಕೃತ್ಯ ಎಸಗಿದ್ದಾರೆ. ರಾಜ್ಯದಲ್ಲಿ 265 ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿಗಳ ಬರೊಬ್ಬರಿ 30 ಬ್ಯಾಂಕ್ ಖಾತೆಗಳು ಪರಿಶೀಲನೆ ನಡೆಸಿದಾಗ 158 ಕೋಟಿ ರೂ. ಮೊತ್ತದ ವಹಿವಾಟು ನಡೆದಿದೆ. ಆರೋಪಿಗಳಿಂದ 11 ಮೊಬೈಲ್ ಫೋನ್‌ಗಳು ಮತ್ತು 15 ಸಿಮ್ ಕಾರ್ಡ್‌ ಸೇರಿದಂತೆ 62.8 ಲಕ್ಷ ರೂ. ಅನ್ನು ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 14 ಪೊಲೀಸ್ ಠಾಣೆಗಳಲ್ಲಿ 135 ದೂರು ದಾಖಲಾಗಿವೆ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ನಗರದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ವಿದ್ಯಾರಣ್ಯಪುರದ ಬಿಇಎಲ್ ಲೇಔಟ್‌ನ ನಿವಾಸಿಯಾಗಿರುವ ಭವ್ಯಾ ಎಂಬುವರಿಗೆ ಟ್ರೇಡ್​ ಸ್ಟೇಷನ್​ ಕಂಪನಿ ಹೆಸರಿನಲ್ಲಿ ಆರೋಪಿಗಳು ಸಂಪರ್ಕಿಸಿದ್ದಾರೆ. ಬಳಿಕ ಹಣ ಹೂಡಿಕೆ ಮಾಡಿದರೆ ಮನೆಯಲ್ಲೇ ಕುಳಿತು ಹೆಚ್ಚು ಹಣ ಸಂಪಾದಿಸಬಹುದು ಎಂದು ಭರವಸೆ ನೀಡಿದ್ದಾರೆ. ಇದನ್ನು ನಂಬಿದ ಭವ್ಯಾ ಅವರು ಹಂತ-ಹಂತವಾಗಿ ಹೂಡಿಕೆ ಮಾಡಿದ್ದು, ಬರೊಬ್ಬರಿ 18.75 ಲಕ್ಷ ರೂ. ವಂಚಿಸಿದ್ದಾರೆ. ಈ ಸಂಬಂಧ ಭವ್ಯಾ ಅವರು ನೀಡಿದ ದೂರಿನ ಮೇರೆಗೆ ಉಪ ಪೊಲೀಸ್ ಆಯುಕ್ತ ಅಬ್ದುಲ್ ಅಹದ್ ನೇತೃತ್ವದ ಸಿಸಿಬಿ ಅಧಿಕಾರಿಗಳು ಪ್ರಕರಣದ ಜಾಡನ್ನು ಭೇದಿಸಿದ್ದು, ಆರೋಪಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಗಳು ವಾಟ್ಸಾಪ್ ಮತ್ತು ಟೆಲಿಗ್ರಾಮ್ ಅಪ್ಲಿಕೇಶನ್‌ಗಳಲ್ಲಿ ಅಪರಿಚಿತರಿಗೆ ಸಂದೇಶಗಳನ್ನು ಕಳುಹಿಸುತ್ತಾರೆ. ಬಳಿಕ ವರ್ಕ್​ ಫ್ರಾಮ್​ ಹೋಮ್​ ಆಮಿಷ ಒಡ್ಡುತ್ತಾರೆ. ಇವರ ಬಲೆಗೆ ಬಿದ್ದ ನಾಗರಿಕರಿಗೆ “ನಮ್ಮ ಸಿಬ್ಬಂದಿ ಹೆಚ್ಚುವರಿ ಆದಾಯಕ್ಕಾಗಿ ಮನೆಯಿಂದ ಕೆಲಸ ಮಾಡಿದ್ದಾರೆ. ಈ ಅಧಿಕ ಹಣ ಗಳಿಸುತ್ತಿದ್ದಾರೆ” ಎಂದು ಹೇಳುತ್ತಾರೆ. ಅಲ್ಲದೆ ಬಲೆಗೆ ಬಿದ್ದ ಜನರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಖಾತೆಗಳು ಮತ್ತು ಯೂಟ್ಯೂಬ್ ವೀಡಿಯೊಗಳನ್ನು ಕಳಸಿ ನಂಬಿಸುತ್ತಾರೆ. ಬಳಿಕ ಹೂಡಿಕೆ ಮಾಡುವಂತೆ ಮಾಡುತ್ತಾರೆ. ಮೊದಲಿಗೆ ಸಣ್ಣ ಪ್ರಮಾಣದ ಹಣವನ್ನು ಹೂಡಿಕೆ ಮಾಡಿಸಿಕೊಳ್ಳುತ್ತಾರೆ. ಹೂಡಿಕೆ ಮಾಡಿದ ಹಣಕ್ಕಿಂತ ಡಬಲ್​ ಹಣವನ್ನು ಹೂಡಿಕೆದಾರರಿಗೆ ನೀಡುತ್ತಾರೆ.


ನಂತರ ರೇಟಿಂಗ್​, ಗೂಗಲ್​ ರೇಟಿಂಗ್​ ನೆಪದಲ್ಲಿ ನಾಗರಿಕರ ಬಳಿ ಹಣ ಹೂಡಿಕೆ ನೆಪದಲ್ಲಿ ಅವರ ಬ್ಯಾಂಕ್​ ಖಾತೆಗಳ ಸಂಪೂರ್ಣ ಮಾಹಿತಿ ಪಡೆದುಕೊಳ್ಳುತ್ತಾರೆ. ಬಳಿಕ ಜಾಲಕ್ಕೆ ಸಿಲುಕಿದವರ ಬ್ಯಾಂಕ್​ ಖಾತೆಗಳಲ್ಲಿನ ಕೋಟ್ಯಾಂತರ ಹಣವನ್ನು ದೋಚಿ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡುತ್ತಿದ್ದರು. ಹೀಗೆ ದೇಶದ ಸಾಕಷ್ಟು ಜನರಿಗೆ ಮೋಸ ಮಾಡಿದ್ದಾರೆ. ಇನ್ನು ಪ್ರಕರಣ ಕಿಂಗ್​ಪಿಂಗ್​ಗಳು ವಿದೇಶದಲ್ಲಿದ್ದು ಅವರ ಬಂಧನಕ್ಕಾಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಅ.30: ಮಿತ್ತೂರಿನಲ್ಲಿ ಭಾರತ್ ವೆಹಿಕಲ್ ಬಜಾರ್ ಶುಭಾರಂಭ

Posted by Vidyamaana on 2023-10-11 21:28:27 |

Share: | | | | |


ಅ.30: ಮಿತ್ತೂರಿನಲ್ಲಿ ಭಾರತ್ ವೆಹಿಕಲ್ ಬಜಾರ್ ಶುಭಾರಂಭ

ಪುತ್ತೂರು: HMS ಗ್ರೂಪ್ಸ್ ನವರ ಉಪಯೋಗಿಸಿದ ಕಾರುಗಳು ಮತ್ತು ಗೂಡ್ಸ್ ವಾಹನಗಳ ಮಾರಾಟ, ಖರೀದಿ ಮತ್ತು ವಿನಿಮಯ ಕೇಂದ್ರ ಕಬಕ ಸಮೀಪದ ಮಿತ್ತೂರು ಮಸೀದಿ ಬಳಿ ಅ.30ರಂದು ಶುಭಾರಂಭಗೊಳ್ಳಲಿದೆ.


ಇನ್ಸೂರೆನ್ಸ್, ಕಾರ್ ಸರ್ವೀಸ್ ಘಟಕ ಹಾಗೂ ವೆಹಿಕಲ್ ಲೋನ್ ಸೌಲಭ್ಯ ಕೂಡಾ ಇರಲಿದೆ. ಶುಭಾರಂಭ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ಭಾರತ್ ವೆಹಿಕಲ್ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Recent News


Leave a Comment: