Posted by vidyamaana on 2024-05-27 18:41:30 |
ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ.
ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.
ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.
Posted by Vidyamaana on 2024-03-21 09:50:58 |
ಪುತ್ತೂರು: ಬಹುಭಾಷಾ ತಾರೆ ಪ್ರಿಯಾಮಣಿ ಅವರನ್ನು ಪುತ್ತೂರಿಗೆ ಕರೆಸಿಕೊಂಡು ಅದ್ದೂರಿಯಾಗಿ ಪುತ್ತೂರಿನ ಜನರ ಸೇವೆಗೆ ತೆರೆದುಕೊಂಡ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.
ಉದ್ಘಾಟನೆ ಸಂದರ್ಭ ಅಧಿವೇಶನ ನಡೆಯುತ್ತಿದ್ದ ಕಾರಣ ಭಾಗವಹಿಸಲು ಅಸಾಧ್ಯವಾಗಿತ್ತು. ಆದ್ದರಿಂದ ಇದೀಗ ಮಳಿಗೆಗೆ ಭೇಟಿ ನೀಡಿದರು.
ವಜ್ರ ಮತ್ತು ಚಿನ್ನದ ಆಭರಣಗಳ ವಿವಿಧ ವಿನ್ಯಾಸಗಳನ್ನು ಕಂಡ ಶಾಸಕ ಅಶೋಕ್ ಕುಮಾರ್ ರೈ ಅವರು ಮಳಿಗೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬ್ರಾಂಚ್ ಮ್ಯಾನೇಜರ್ ಕೆ.ಎಸ್ ಮುಸ್ತಫಾ ಕಕ್ಕಿಂಜೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಹಮ್ರಾಝ್, ಪವನ್, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Posted by Vidyamaana on 2023-09-17 13:15:25 |
ಆಫ್-ರೋಡಿಂಗ್ ಚಾಲನೆಯನ್ನು ಇಷ್ಟಪಡುವವರಿಗೆ ನಿಮಿಷ್ಟದ ಕಾರು ಯಾವುದೇ ಎಂದು ಕೇಳಿದರೆ, ಅವರಿಂದ ಬರುವ ಒಂದೇ ಉತ್ತರ ಮಹೀಂದ್ರಾ ಥಾರ್ (Mahindra Thar) ಎಂದು. ಅಷ್ಟರಮಟ್ಟಿಗೆ ಜನಪ್ರಿಯವಾಗಿದೆ. ಸದ್ಯ, ಕಂಪನಿಯು ಈ ಎಸ್ಯುವಿಯನ್ನು 5 ಡೋರ್ ಆಯ್ಕೆಯಲ್ಲಿ ಅಭಿವೃದ್ಧಿಪಡಿಸುತ್ತಿದ್ದು, ಇತ್ತೀಚೆಗೆ ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಂಡುಬಂದಿದೆ.ಈ ವೇಳೆ, ಸೆರೆಹಿಡದ ಸ್ಪೈ ಚಿತ್ರಗಳು ಇಂಟರ್ನೆಟ್ ನಲ್ಲಿ ಸೋರಿಕೆಯಾಗಿದ್ದು, ಅದರಲ್ಲಿ ಒಳಭಾಗದಲ್ಲಿ ವೈಶಿಷ್ಟ್ಯಗಳನ್ನು ನೋಡಬಹುದು. ಪ್ರಸ್ತುತ ಖರೀದಿಗೆ ದೊರೆಯುವ 3 ಡೋರ್ ಥಾರ್ ಎಸ್ಯುವಿಗೆ ಹೋಲಿಸಿದರೆ, 5 ಡೋರ್ ಥಾರ್ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದೆ. ಮುಖ್ಯವಾಗಿ, ದೊಡ್ಡದಾದ 12.3 - ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಹೊಂದಿದೆ.
ಮುಂಬರುವ ಮಹೀಂದ್ರಾ ಥಾರ್ 5 - ಡೋರ್, ನವೀನ ಸ್ಟೀರಿಂಗ್ ವೀಲ್ ಪಡೆದಿದೆ. ಇದು, XUV700ಗೆ ಹೋಲಿಕೆಯಾಗುತ್ತದೆ. ಜೊತೆಗೆ ವೃತ್ತಾಕಾರದ ಎಸಿ ವೆಂಟ್ಸ್ ಅನ್ನು ಹೊಂದಿದೆ. ಇದರೊಟ್ಟಿಗೆ ಆರ್ಮ್ರೆಸ್ಟ್ ಇದ್ದು, ಹಳೆಯ ಕಾರುಗಳಂತೆ ಡೋರ್ ಪ್ಯಾಡ್ಗಳಲ್ಲಿ ವಿಂಡೋ ಸ್ವಿಚ್ಗಳನ್ನು ಅಳವಡಿಕೆ ಮಾಡಲಾಗಿದೆ. ಈ ಮೂಲಕ ಹೊಸ 5 - ಡೋರ್ ಎಸ್ಯುವಿ, ಕ್ಯಾಬಿನ್ ಒಳಭಾಗದಲ್ಲಿ ಅತ್ಯಾಧುನಿಕ ವಿನ್ಯಾಸವನ್ನು ಪಡೆದಿದೆ.ಹೊಸ ಥಾರ್ ಇನ್ನೂ ಯಾವ ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎಂದು ನೋಡುವುದಾದರೆ, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕನೆಕ್ಟಿವಿಟಿ, ವೈರ್ಲೆಸ್ ಚಾರ್ಜರ್, ಕ್ರೂಸ್ ಕಂಟ್ರೋಲ್, ರೇರ್ ಎಸಿ ವೆಂಟ್ಸ್, ಆಟೋ ಡಿಮ್ಮಿಂಗ್ ಐಆರ್ವಿಎಂ, ಆಟೋ ಹೆಡ್ಲ್ಯಾಂಪ್ಸ್ ಮತ್ತು ಸೆನ್ಸಿಂಗ್ ವೈಪರ್ಸ್ ಅನ್ನು ಪಡೆದಿರುವ ನೀರಿಕ್ಷೆಯಿದೆ.
ಹೊಸ ಮಹೀಂದ್ರಾ ಥಾರ್ 5 - ಡೋರ್, ಎರಡು ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಸಿಗಬಹುದು. ಅವುಗಳೆಂದರೆ, 2.0 - ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2.2 - ಲೀಟರ್ ಡೀಸೆಲ್ ಎಂಜಿನ್. ಕ್ರಮವಾಗಿ, 150 bhp ಪವರ್, 320 Nm ಪೀಕ್ ಟಾರ್ಕ್, 130 bhp ಗರಿಷ್ಠ ಪವರ್ 300 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿರಬಹುದು. ಕಂಪನಿಯು ಈವರೆಗೆ ಈ ಎಸ್ಯುವಿ ಬೆಲೆಯನ್ನು ಎಲ್ಲಿಯೂ ಬಹಿರಂಗಪಡಿಸಿಲ್ಲ.ಪ್ರಸ್ತುತ, ದೇಶದಲ್ಲಿ 3 - ಡೋರ್ ಆಯ್ಕೆಯಲ್ಲಿ ಸಿಗುವ ಮಹೀಂದ್ರಾ ಥಾರ್, ರೂ.10.54 ಲಕ್ಷದಿಂದ ರೂ.16.78 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆಯಲ್ಲಿ ದೊರೆಯಲಿದ್ದು, ಅದಕ್ಕೆ ತಕ್ಕಂತೆ ಕಾರ್ಯಕ್ಷಮತೆಯನ್ನು ಹೊಂದಿದೆ. 4WD (ಫೋರ್ ವೀಲ್ ಡ್ರೈವ್) ಹಾಗೂ RWD (ರೇರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.
ಮಹೀಂದ್ರಾ ಥಾರ್ ಆಫ್-ರೋಡ್ ಎಸ್ಯುವಿಯಾಗಿರುವುದರಿಂದ ಕೊಂಚ ಕಡಿಮೆ ಇಂಧನ ದಕ್ಷತೆ ಹೊಂದಿದ್ದು, 15.2 kmpl ಮೈಲೇಜ್ ನೀಡುತ್ತದೆ. ಎವರೆಸ್ಟ್ ವೈಟ್, ರೆಡ್ ರೇಜ್, ನಪೋಲಿ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದ್ದು 7 - ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಮ್ಯಾನ್ಯುವಲ್ ಎಸಿ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಸೇರಿದಂತೆ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ.
Posted by Vidyamaana on 2024-05-26 07:56:26 |
ಸುಳ್ಯ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸುಳ್ಯ ಪಟ್ಟಣ ಪಂಚಾಯತ್, ಪುತ್ತಿಲ ಅಭಿಮಾನಿಗಳ ವತಿಯಿಂದ ಬಡ ಮಹಿಳೆಗಾಗಿ ನಿರ್ಮಿಸಲಾದ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ಮೇ.26 ರಂದು ನಡೆಯಲಿದೆ.
ಸುಳ್ಯದ ಪೈಚ್ಚಾರಿನಲ್ಲಿ ಬಡ ಮಹಿಳೆಗೆ ನೂತನವಾಗಿ ನಿರ್ಮಿಸಿದ ಮನೆ ಸೇವಾಶ್ರಯದ ಹಸ್ತಾಂತರ ಕಾರ್ಯಕ್ರಮ ನಾಳೆ (ಮೇ.26) ಬೆಳಿಗ್ಗೆ
Posted by Vidyamaana on 2024-01-29 15:26:03 |
ಜೋಡಿ ಹಕ್ಕಿ ಬಳ್ಳಾರಿಯಿಂದ ಆಂದ್ರಕ್ಕೆ ಹೋಗಿ ನರಸಿಂಹ ದೇವಸ್ಥಾನದಲ್ಲಿ ಹಾರ ಬದಲಾಯಿಸಿ ಮದುವೆ ಆಗಿದ್ದಾರೆ. ಹುಡುಗನ ಮನೆಯಲ್ಲಿ ಶಿಲ್ಪಾಳನ್ನ ಸೊಸೆ ಅಂತಾ ಒಪ್ಪಿಕೊಳ್ಳಲು ತಯಾರಿದ್ದಾರೆ. ಆದರೆ ಯುವತಿ ಮನೆಯಲ್ಲಿ ಅಳಿಯನನ್ನ ಒಪ್ಪಿಕೊಳ್ಳುತ್ತಿಲ್ಲ. ಹೀಗಾಗಿ ಹುಡುಗಿ ಪೋಷಕರಿಂದ ಏನಾದರೂ ಅನಾಹುತ ಆಗಬಹುದು ಅಂತಾ ರಕ್ಷಣೆಗಾಗಿ ಎಸ್ಪಿ ಕಚೇರಿಗೆ ಬಂದಿದ್ದಾರೆ.ಅವರಿಬ್ಬರೂ ಪರಸ್ಪರ ಐದು ವರ್ಷಗಳಿಂದ ಪ್ರೀತಿ ಮಾಡ್ತಾ ಇದ್ರು, ಅವರ ಪ್ರೀತಿಗೆ ಮನೆಯಲ್ಲಿ ಒಪ್ಪದ ಕಾರಣ ಮನೆ ಬಿಟ್ಟು ಓಡಿಬಂದು ನರಸಿಂಹ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ.. ಮದುವೆಯಾದ ಜೋಡಿಗೀಗ ಮನೆಯವರಿಂದಲೇ ಪ್ರಾಣ ಬೆದರಿಕೆ ಶುರುವಾಗಿದೆ, ಹೀಗಾಗಿ ರಕ್ಷಣೆಗಾಗಿ ಆ ಜೋಡಿ ಠಾಣೆ ಮೆಟ್ಟಿಲು ಏರಿದ್ದಾರೆ… ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.
ಹೌದು ಹೀಗೆ ಮುದ್ದುಮುದ್ದಾಗಿ ಕಾಣುವ ಈ ಜೋಡಿ ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ರು, ಒಂದೇ ಜಾತಿಯವರಾದ್ರು ಮನೆಯಲ್ಲಿ ಮದುವೆಗೆ ಒಪ್ಪಿಲ್ಲ, ಹೀಗಾಗಿ ಮನೆ ಬಿಟ್ಟು ಓಡಿ ಬಂದು ಆಂದ್ರದಲ್ಲಿ ನರಸಿಂಹ ದೇವಸ್ಥಾನದ ಮುಂದೆ ಮದುವೆಯಾಗಿದ್ದಾರೆ.. ಮದುವೆಯಾದ ವಿಷಯ ಹುಡಗಿ ಕುಟುಂಬಕ್ಕೆ ತಿಳಿಯುತ್ತಿದ್ದಂತೆ ಹುಡಗನ ಮೇಲೆ ಗರಂ ಆಗಿದ್ದಾರೆ.
ಹೀಗಾಗಿ ಬೆದರಿದ ಈ ಜೋಡಿ ಬಳ್ಳಾರಿ ಎಸ್ಪಿ ಕಚೇರಿಗೆ ಬಂದು ಜೀವ ರಕ್ಷಣೆಗೆ ಮನವಿ ಮಾಡಿದ್ದಾರೆ.. ಎಸ್ ಹೀಗೆ ಕಾಣುವ ಈ ಜೋಡಿ ಹೆಸರು ನಾರಾಯಣ (25) ಮತ್ತು ಶಿಲ್ಪಾ (20) ಅಂತಾ ಯುವಕ ನಾರಾಯಣ ಬಳ್ಳಾರಿ ತಾಲೂಕಿನ ಗೋನಾಳ ಗ್ರಾಮದವನಾದ್ರೆ, ಯುವತಿ ಶಿಲ್ಪಾ ಸಿರಗುಪ್ಪ ತಾಲೂಕಿನ ಊಳೂರು ಗ್ರಾಮದವಳು.. ಶಿಲ್ಪಾ 9 ನೇ ತರಗತಿ ಇರುವಾಗ ಗೋನಾಳ ಗ್ರಾಮದಲ್ಲಿರುವ ಅವಳ ದೊಡ್ಡಮ್ಮನ ಮನೆಗೆ ಬಂದಿದ್ದಳಂತೆ ಆಗ ನಾರಾಯಣನ ಪರಿಚಯವಾಗಿದೆ.. ಪರಿಚಯ ಪ್ರೇಮಕ್ಕೆ ತಿರುಗಿ ಈಗ ಈ ಜೋಡಿ ಮದುವೆ ಆಗಿದ್ದಾರೆ.. ಯುವಕ ಯುವತಿ ಕುರುಬ ಸಮುದಾಯಕ್ಕೆ ಸೇರಿದ್ದಾರೆ ಯಾವುದೇ ಜಾತಿ ಸಮಸ್ಯೆ ಇಲ್ಲ ಆದರೂ ಮನೆಯಲ್ಲಿ ಒಪ್ಪಿಲ್ಲ ಹೀಗಾಗಿ ಶಿಲ್ಪಾ ಮನೆ ಬಿಟ್ಟು ಬಂದು ಈ ಯುವಕನನ್ನ ಮದುವೆ ಆಗಿದ್ದಾಳೆ.
ಇನ್ನು ಯುವಕ ನಾರಾಯಣ ಬಳ್ಳಾರಿ ಜಿಲ್ಲಾ ಪಂಚಾಯತ್ನಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದಾನೆ.. ನೋಡಲು ಸ್ಮಾಟ್೯ ಆಗಿದ್ದಾನೆ.. ಯುವತಿ ಶಿಲ್ಪಾ ಪಿಯುಸಿ ಮುಗಿಸಿದ್ದಾಳೆ ಇವಳು ಕೂಡ ಸುಂದರವಾಗಿದ್ದಾಳೆ. ಪರಸ್ಪರ ಇಬ್ಬರೂ ಒಬ್ಬರನ್ನೊಬ್ಬರು ಬಿಟ್ಟು ಇರದಂತ ಪ್ರೀತಿ ಮಾಡಿದ್ದಾರೆ..
ಆದರೆ ಈ ಪ್ರೀತಿಗೆ ಹುಡುಗಿ ಪೋಷಕರು ಒಪ್ಪಿಗೆ ನೀಡಿಲ್ಲ, ಇದಕ್ಕೆ ಕಾರಣ ಅಂದ್ರೆ ಹುಡಗನಿಗೆ ಆಸ್ತಿಯಿಲ್ಲ ಬಡವ ಇದ್ದಾನೆ ಅಂತಾ. ಆದರೆ ಐದು ವರ್ಷದ ಪ್ರೀತಿ ಹೇಗೆ ಬಿಟ್ಟು ಕೊಡುವುದಕ್ಕೆ ಆಗುತ್ತೆ ಅಂತಾ ಶಿಲ್ಪಾ ಜ. 27 ನೇ ತಾರೀಖು ಮನೆ ಬಿಟ್ಟು ಬಂದಿದ್ದಾಳೆ.. ಮನೆ ಬಿಟ್ಟು ಬಂದು ನನ್ನ ಮದುವೆ ಆಗು ಅಂತಾ ನಾರಾಯಣನಿಗೆ ಹೇಳಿದ್ದಾಳೆ.ಆಗ ಇಬ್ಬರು ಬಳ್ಳಾರಿ ಯಿಂದ ಆಂದ್ರಪ್ರದೇಶಕ್ಕೆ ಹೋಗಿ ಅಲ್ಲಿರುವ ನರಸಿಂಹ ದೇವಸ್ಥಾನದ ಮುಂದೆ ಹಾರ ಬದಲಾಯಿಸಿ ಮದುವೆ ಆಗಿದ್ದಾರೆ.. ಹುಡುಗನ ಮನೆಯಲ್ಲಿ ಶಿಲ್ಪಾಳನ್ನ ಸೊಸೆ ಅಂತಾ ಒಪ್ಪಿಕೊಳ್ಳಲು ತಯಾರಿದ್ದಾರೆ. ಆದರೆ ಯುವತಿ ಮನೆಯಲ್ಲಿ ನಾರಾಯಣನನ್ನ ಅಳಿಯ ಅಂತಾ ಒಪ್ಪಿಕೊಳ್ಳುತ್ತಿಲ್ಲ.. ಹೀಗಾಗಿ ಹುಡುಗಿ ಪೋಷಕರಿಂದ ಏನಾದರೂ ಅನಾಹುತ ಆಗ ಬಹುದು ಅಂತಾ ರಕ್ಷಣೆಗಾಗಿ ಎಸ್ಪಿ ಕಚೇರಿಗೆ ಬಂದಿದ್ದಾರೆ.
ಒಟ್ಟಿನಲ್ಲಿ ಐದು ವರ್ಷದಿಂದ ಪ್ರೀತಿ ಪ್ರೇಮದಲ್ಲಿ ಮುಳಗಿದ್ದ ಜೋಡಿ ಮದುವೆ ಆಗಿದ್ದಾರೆ.. ಆದರೆ ಈ ಮದುವೆಗೆ ಹುಡುಗಿ ಪೋಷಕರು ಒಪ್ಪಿಗೆ ನೀಡಿಲ್ಲ.. ಹೀಗಾಗಿ ರಕ್ಷಣೆ ಬೇಕು ಅಂತಾ ಠಾಣೆ ಮೆಟ್ಟಿಲೇರಿದ್ದಾರೆ.. ಇನ್ನಾದರೂ ಎರಡೂ ಕುಟುಂಬಗಳು ಹಗೆ ಸಾಧಿಸದೆ ಈ ಜೋಡಿಯನ್ನ ಒಪ್ಪಿ ಆಶೀರ್ವದಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
Posted by Vidyamaana on 2024-06-29 20:09:45 |
ಬೆಳ್ತಂಗಡಿ : ಹಣಕಾಸಿನ ವಿಚಾರದಲ್ಲಿ ವಿವಾಹಿತ ಮಹಿಳೆಯ ಉಜಿರೆಯಲ್ಲಿರುವ ಬಟ್ಟೆ ಅಂಗಡಿ ಶಾಪ್ ಗೆ ಯುವಕನೊಬ್ಬ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ದಾಖಲಿಸಿಕೊಂಡು ಆರೋಪಿ ನವೀನ್ ಕನ್ಯಾಡಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ವಿವರ : ಬೆಳ್ತಂಗಡಿ ತಾಲೂಕಿನ
ಉಜಿರೆಯಲ್ಲಿರುವ ಧರ್ಮಸ್ಥಳ ನಿವಾಸಿ ಅವಿವಾಹಿತ ಮಹಿಳೆಯ ಬಟ್ಟೆ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಧರ್ಮಸ್ಥಳದ ಕನ್ಯಾಡಿ ನಿವಾಸಿ ನವೀನ್ ಕನ್ಯಾಡಿ ಎಂಬಾತ ಹಣಕಾಸಿನ ವಿಚಾರದಲ್ಲಿ ಏಕಾಏಕಿ ನುಗ್ಗಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮ ಮಂದಿರದ ಮುಂದೆ ಇರುವ ಹೂವಿನ ವ್ಯಾಪಾರಿಯಾಗಿರುವ ನವೀನ್ ಕನ್ಯಾಡಿ ಎಂಬಾತ ಧರ್ಮಸ್ಥಳದ ವಿವಾಹಿತ ಮಹಿಳೆಯಿಂದ ಸಾಲವಾಗಿ ಪಡೆದ ಹಣವನ್ನು ವಾಪಸ್ ವಿವಾಹಿತ ಮಹಿಳೆ ಹಿಂದಿರುಗಿಸಲು ಹೇಳಿದಕೆ. ಏಕಾಏಕಿ ಉಜಿರೆಯ ಮಹಿಳೆಯ ಬಟೆ. ಅಂಗಡಿಗೆ
Posted by Vidyamaana on 2024-04-18 20:51:23 |
ಹುಬ್ಬಳ್ಳಿ, ಏ 18: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಮಗಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಕಾಲೇಜ್ ಅವರಣದಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ.
ಸದ್ಯ ಮೃತದೇಹವನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು, ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಫಯಾಜ್ ಎನ್ನುವಾತನ್ನು ಬಂಧಿಸಿದ್ದಾರೆ.