ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಸುದ್ದಿಗಳು News

Posted by vidyamaana on 2024-07-23 19:43:42 |

Share: | | | | |


ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಪುಣೆ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವು ಚಾಲಕರು ಅವಸರದಲ್ಲಿ ವೇಗವಾಗಿ ವಾಹನ ಚಲಾಯಿಸಿ ಜನರ ಜೀವಕ್ಕೆ ಆಪತ್ತು ತರುತ್ತಿದ್ದಾರೆ. ಎಲ್ಲೆಂದರಲ್ಲಿ ನಿಂತ ಜನರ ಮೇಲೂ ವಾಹನವನ್ನು ಹಾರಿಸಿಕೊಂಡು ಹೋಗುತ್ತಾರೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case)ಆಗಿದೆ.ಪ್ರಿ-ಚಿಂಚ್ವಾಡ್‍ನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಟ್ಯಾಕ್ಸಿ ಮಹಿಳೆಗೆ ಡಿಕ್ಕಿ ಹೊಡೆದು ನಂತರ ಚಾಲಕ ಅಪಘಾತದ ಸ್ಥಳದಿಂದ ಓಡಿಹೋದ ಹೊಸ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪುಣೆಯಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಪಿಂಪ್ರಿ-ಚಿಂಚ್ವಾಡ್‍ನಲ್ಲಿ ಈ ಘಟನೆ ನಡೆದಿದೆ. ಈ ಹಿಟ್ ಅಂಡ್ ರನ್ ಪ್ರಕರಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಭಾನುವಾರ ಮಧ್ಯಾಹ್ನ 1:30ರ ಸುಮಾರಿಗೆ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ ಎದುರಿಗೆ ವೇಗವಾಗಿ ಬಂದ ಟ್ಯಾಕ್ಸಿ ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ರಸ್ತೆಯಲ್ಲಿದ್ದ ಇತರ ಜನರು ಆಕೆಯ ಸಹಾಯಕ್ಕಾಗಿ ಓಡಿ ಬರುತ್ತಿರುವುದು ಕಂಡುಬಂದಿದೆ. ಟ್ಯಾಕ್ಸಿಗೆ ಡಿಕ್ಕಿ ಹೊಡೆದ ಮಹಿಳೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಪಿಂಪ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಈ ಪ್ರಕರಣದ ಬಗ್ಗೆ ಪಿಂಪ್ರಿ-ಚಿಂಚ್ವಾಡ್ ಡಿಸಿಪಿ ಶಿವಾಜಿ ಪವಾರ್ ಮಾತನಾಡಿ, ಈ ಅಪಘಾತದಲ್ಲಿ ಸಂತ್ರಸ್ತೆ ರೇಖಾ ಗಾಯಗೊಂಡಿದ್ದಾರೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ. 24 ವರ್ಷದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನ ಚಾಲಕ ಕುಡಿದಿರಲಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೇಲ್ನೋಟಕ್ಕೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ಮಹಾರಾಷ್ಟ್ರದಲ್ಲಿ ವರದಿಯಾದ ಮೊದಲ ಹಿಟ್ ಅಂಡ್ ರನ್ ಪ್ರಕರಣವಲ್ಲ. ಈಗಾಗಲೇ ಹಿಟ್ ಅಂಡ್ ರನ್ ಪ್ರಕರಣ ಮತ್ತೊಂದು ಸುದ್ದಿಯಲ್ಲಿ, ವೇಗವಾಗಿ ಬಂದ ಆಡಿ ಕಾರು ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಆಟೋರಿಕ್ಷಾ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಲುಂಡ್ ಪೊಲೀಸರು ಆಡಿ ಕಾರನ್ನು ವಶಪಡಿಸಿಕೊಂಡಿದ್ದಾರೆ, ಆದರೆ ಅಪಘಾತದ ನಂತರ ಅದರ ಚಾಲಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

 Share: | | | | |


ಬೆಳ್ತಂಗಡಿ : ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Posted by Vidyamaana on 2023-11-07 21:53:20 |

Share: | | | | |


ಬೆಳ್ತಂಗಡಿ : ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳ್ತಂಗಡಿ : 11 ವರ್ಷಗಳ ಹಿಂದೆ ಕೊಲೆಯಾದ ಕಾಲೇಜ್ ವಿದ್ಯಾರ್ಥಿ ಸೌಜನ್ಯ ಪ್ರಕರಣ ಆರೋಪಿಗೆ ನಿರ್ದೋಷಿ ಎಂದು ತೀರ್ಪು ನೀಡಿದ ಹಲವು ತಿಂಗಳ ಬಳಿಕ ಇದೀಗ ಸಿಬಿಐ ಅಧಿಕಾರಿಗಳು ಹೈಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.


ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಗೆ ಸಾಕ್ಷದಾರ ಕೊರತೆಯಿಂದ ನಿರ್ದೋಷಿ ಎಂದು ತೀರ್ಪು ನೀಡಿದ್ದು ಇದೀಗ ನ.5 ಶನಿವಾರದಂದು ಸಿಬಿಐ ತನಿಖಾಧಿಕಾರಿಗಳು ಹೈ ಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಕೆಲವೇ ದಿನಗಳಲ್ಲಿ ಹೈಕೋರ್ಟ್ ಪ್ರಕರಣ ದಾಖಲಿಸಿದ ದಾವೆಯ CC ಹೊರಡಿಸಲಿದೆ.


ಇನ್ನೂ ಸೌಜನ್ಯ ಪ್ರಕರಣದಲ್ಲಿ ನಕಲಿ ಹೋರಾಟ ಮಾಡುವವರಿಗೆ ನಡುಕ ಹುಟ್ಟಿಸಿದೆ. ಈವರೆಗೆ ನಕಲಿ ಹೋರಾಟ ಮಾಡುವವರಿಗೆ ಕರ್ನಾಟಕದಲ್ಲಿ ಇನ್ನೂ ಮುಂದೆ ಹೋರಾಟ ನಿರ್ಬಂಧ ಹೇರಲಾಗುತ್ತೆ ಎನ್ನಲಾಗಿದೆ. ಅದಲ್ಲದೇ ಪ್ರಕರಣ ಯಾವ ರೀತಿಯಲ್ಲಿ ಮುಂದುವರಿಯತ್ತದೆ ಎಂದು ಕಾದು ನೋಡಬೇಕಾಗಿದೆ.

ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ

Posted by Vidyamaana on 2024-02-17 21:49:20 |

Share: | | | | |


ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನ ಕಾಂಗ್ರೆಸ್ ಸಮಾವೇಶದತ್ತ ಬರುವ ವೇಳೆ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಮುಖ್ಯಮಂತ್ರಿ ವಿಮಾನ ನಿಲ್ದಾಣದಿಂದ ಕಾಂಗ್ರೆಸ್ ಸಮಾವೇಶ ನಡೆಯುವ ಸಹ್ಯಾದ್ರಿ ಮೈದಾನಕ್ಕೆ ಬರುವ ವೇಳೆ ಮುತ್ತಿಗೆ ಹಾಕಲು ಬೊಂದೆಲ್ ಬಳಿ ಕಾರ್ಯಕರ್ತರು ಸೇರಿದ್ದರು. 50ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದು ರಸ್ತೆಯಲ್ಲಿ ಮುಖ್ಯಮಂತ್ರಿ ಬರುವಾಗ ಕಪ್ಪು ಪಟ್ಟಿ ಹಿಡಿದು ಪ್ರತಿಭಟನೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ

ಇನ್ನರ್‌ವೀಲ್ ಕ್ಲಬ್ ಪುತ್ತೂರು ಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿ ಶ್ರೀದೇವಿ ರೈ

Posted by Vidyamaana on 2023-06-13 23:20:14 |

Share: | | | | |


ಇನ್ನರ್‌ವೀಲ್ ಕ್ಲಬ್ ಪುತ್ತೂರು ಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿ ಶ್ರೀದೇವಿ ರೈ

ಪುತ್ತೂರು: ಪುತ್ತೂರು ಇನ್ನ‌ವೀಲ್ ಕ್ಲಬ್‌ನ ನೂತನ ಅಧ್ಯಕ್ಷೆಯಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ಶ್ರೀದೇವಿ ರೈ, ಕೋಶಾಧಿಕಾರಿಯಾಗಿ ಸೀಮಾ ನಾಗರಾಜ್‌ರವರು ಆಯ್ಕೆಗೊಂಡಿದ್ದಾರೆ.

ಕ್ಲಬ್‌ನ ಸಂಪಾದಕಿಯಾಗಿ ಸುಧಾ ಕಾರ್ಯಪ್ಪ, ISO ಆಗಿ ಆಶಾ ನಾಯಕ್, ವೆಬ್ ಕೋ-ಆರ್ಡಿನೇಟರ್ ಆಗಿ ವಚನಾ ಜಯರಾಮ್‌ ರವರು ಆಯ್ಕೆಯಾಗಿರುತ್ತಾರೆ.

ನಿಕಟಪೂರ್ವ ಅಧ್ಯಕ್ಷೆಯಾಗಿ ಟೈನಿ ದೀಪಕ್, ಉಪಾಧ್ಯಕ್ಷೆಯಾಗಿ ರಾಜೇಶ್ವರಿ ಆಚಾ‌ ಹಾಗೂ ನಿರ್ದೇಶಕರುಗಳಾಗಿ ರಾಜೇಶ್ವರಿ ಬಲರಾಮ್, ರಮಾ ಪ್ರಭಾಕರ್, ಪುಷ್ಪಾ ಕೆದಿಲಾಯ, ವೈ. ವಿಜಯಲಕ್ಷ್ಮಿ ಶೆಣೈ ಮತ್ತು ವೀಣಾ ಜಿ.ಕೆರವರು ಆಯ್ಕೆಯಾಗಿರುತ್ತಾರೆ.

ಲೈನ್ ಎ ಲೈಟ್" ಎನ್ನುವುದು ಇನ್ನರ್‌ವೀಲ್ ಕ್ಲಬ್‌ನ ಈ ವರ್ಷದ ಧೈಯ ವಾಕ್ಯ. ಆರೋಗ್ಯ, ಸ್ವಚ್ಛತೆ, ಕಡಿಮೆ ಪೇಪರ್ ಬಳಕೆ, ಮಹಿಳಾ ಸಬಲೀಕರಣ, ಪರಿಸರ ಕಾಳಜಿ, ಬಡ ಮಕ್ಕಳ ವಿಧ್ಯಾಭ್ಯಾಸಕ್ಕೆ ನೆರವು ಹೀಗೆ ಹಲವಾರು ಯೋಜನೆಗಳು ಈ ಧೈಯ ವಾಕ್ಯದಡಿ ಬರುತ್ತದೆ. ಕ್ಲಬ್‌ನ ಎಲ್ಲಾ ಸದಸ್ಯರುಗಳು ಇದಕ್ಕೆ ಪೂರಕವಾದ ಚಟುವಟಿಕೆಗಳನ್ನು ಮಾಡಲಿದ್ದಾರೆ ಎಂದು ನಿಯೋಜಿತ ಅಧ್ಯಕ್ಷೆ ಅಶ್ವಿನಿಕೃಷ್ಣ ಮುಳಿಯ ಇವರು ತಿಳಿಸಿದ್ದಾರೆ.

ನಾಳೆ ಪದಗ್ರಹಣ: ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜೂ.15ರಂದು ಬೆಳಗ್ಗೆ 11ರಿಂದ ರೋಟರಿ ಮನೀಷಾ ಹಾಲ್‌ನಲ್ಲಿ ನಡೆಯಲಿದೆ. ಪದಗ್ರಹಣವನ್ನು ಜಿಲ್ಲಾ ISO ರಜನಿ ಭಟ್‌ರವರು ನಡೆಸಿಕೊಡಲಿದ್ದಾರೆ.

ಲೋಕಸಭಾ ಚುನಾವಣೆ :ಪುತ್ತೂರು ಬಿಜೆಪಿಯಿಂದ ಚುನಾವಣಾ ನಿರ್ವಹಣಾ ಸಮಿತಿ ಸಭೆ

Posted by Vidyamaana on 2024-03-29 21:42:01 |

Share: | | | | |


ಲೋಕಸಭಾ ಚುನಾವಣೆ :ಪುತ್ತೂರು ಬಿಜೆಪಿಯಿಂದ ಚುನಾವಣಾ ನಿರ್ವಹಣಾ ಸಮಿತಿ ಸಭೆ

ಪುತ್ತೂರು :ಲೋಕಸಭಾ ಚುನಾವಣೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವಾರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಕಛೇರಿಯಲ್ಲಿ ನಡೆಯಿತು.ವಿವಿಧ ವಿಭಾಗಗಳ ಪ್ರಮುಖರಿಂದ ಒಟ್ಟು ಕ್ಷೇತ್ರದ ಚುನಾವಣೆಯ ಕೆಲಸಗಳ ಪ್ರಗತಿಯ ವಿವರಣೆಯನ್ನು ಚುನಾವಣಾ ನಿರ್ವಹಣ ಸಮಿತಿ ಸಂಚಾಲಕರಾದ ಚನಿಲ ತಿಮ್ಮಪ್ಪ ಶೆಟ್ಟಿಯವರು ಅವಲೋಕಿಸಿದರು.


ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರು, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ಚುನಾವಣೆಯ ಪ್ರಭಾರಿ ಸುಲೋಚನ ಜಿ.ಕೆ ಭಟ್,ಪಕ್ಷದ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸುನೀಲ್ ಆಳ್ವಾ,ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ,ಚುನಾವಣಾ ನಿರ್ವಹಣಾ ಸಹ ಸಂಚಾಲಕರಾದ ಉಮೇಶ್ ಗೌಡ, ಪ್ರಸನ್ನ ಮಾರ್ತ, ಪ್ರ.ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಜಯಶ್ರೀ ಶೆಟ್ಟಿ, 

2024-25ನೇ ಸಾಲಿನ ಬೆಂಗಳೂರು ಪ್ರೆಸ್ ಕ್ಲಬ್‌ ಚುನಾವಣೆ ಫಲಿತಾಂಶ ಪ್ರಕಟ

Posted by Vidyamaana on 2024-07-07 21:21:58 |

Share: | | | | |


2024-25ನೇ ಸಾಲಿನ ಬೆಂಗಳೂರು ಪ್ರೆಸ್ ಕ್ಲಬ್‌ ಚುನಾವಣೆ ಫಲಿತಾಂಶ ಪ್ರಕಟ

ಬೆಂಗಳೂರು :- ಪ್ರತಿಷ್ಟಿತ ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಆರ್, ಶ್ರೀಧರ್, ಉಪಾಧ್ಯಕ್ಷರಾಗಿ ವಿ.ಎನ್.ಮೋಹನ್ ಕುಮಾರ್ ಆಯ್ಕೆ ಆಗಿದ್ದಾರೆ.2024-25ನೇ ಸಾಲಿನ ಪ್ರೆಸ್ ಕ್ಲಬ್ ಚುನಾವಣೆ ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು.ಅದರಂತೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಧ್ಯಾನಪೂಣಚ್ಚ, ಶ್ರೀಧರ್ ಆರ್.ಮತ್ತು ಸುಭಾಶ್ ಹೂಗಾರ್ ರವರು ಸ್ಪರ್ಧೆ ಮಾಡಿದ್ದರು. ಉಪಾಧ್ಯಕ್ಷ ಸ್ಥಾನ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ , ಜಂಟಿ ಕಾರ್ಯದರ್ಶಿ, ಖಜಾಂಚಿ ಮತ್ತು 6 ಕಮಿಟಿ ಸದಸ್ಯರುಗಳು ಮತ್ತು ಮಹಿಳಾ ಮೀಸಲು ಸ್ಥಾನಗಳಿಗೆ ಚುನಾವಣೆ ನಡೆಯಿತು 

ನಾಪತ್ತೆಯಾಗಿರುವ ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು

Posted by Vidyamaana on 2024-05-18 04:56:01 |

Share: | | | | |


ನಾಪತ್ತೆಯಾಗಿರುವ ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು

ಪುತ್ತೂರು ಮೇ 17: ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಯೊಂದು ನಾಪತ್ತೆಯಾಗಿದ್ದು, ನಾಪತ್ತೆಯಾಗಿರು ಹೋರಿಗಾಗಿ ಬಜರಂಗದಳದ ಕಾರ್ಯಕರ್ತರು ದೈವದ ಮೊರೆ ಹೋಗಿದ್ದಾರೆ.

ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಎರಡು ಹೋರಿಗಳು ಮೇ 1 ರಿಂದ ನಾಪತ್ತೆಯಾಗಿತ್ತು.

Recent News


Leave a Comment: