ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಬೆಳ್ತಂಗಡಿ : ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಪ್ರತಿಭಟನೆ

Posted by Vidyamaana on 2023-10-09 21:08:02 |

Share: | | | | |


ಬೆಳ್ತಂಗಡಿ : ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಪ್ರತಿಭಟನೆ

ಬೆಳ್ತಂಗಡಿ : ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಏಕಾಏಕಿ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಾ ನಿರತರಿಗೆ ಸಾಥ್ ನೀಡಿದರು.ಕೊನೆಗೆ ಅರಣ್ಯ ಅಧಿಕಾರಿಗಳು ಸರ್ವೆ ನಡೆಸುವ ಬಗ್ಗೆ ಒಪ್ಪಿಗೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಇಂದಿನಿಂದ ಬೆಂಗಳೂರು ಕಂಬಳ

Posted by Vidyamaana on 2023-11-25 08:52:02 |

Share: | | | | |


ಇಂದಿನಿಂದ ಬೆಂಗಳೂರು ಕಂಬಳ

ಬೆಂಗಳೂರು:ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಐತಿಹಾಸಿಕ ಕಂಬಳ ಕೂಟಕ್ಕೆ ಬೆಂಗಳೂರು ಸಜ್ಜಾಗಿದೆ.

ನಗರದ ಅರಮನೆ ಮೈದಾನದಲ್ಲಿ ಶನಿವಾರದಿಂದ ಎರಡು ದಿನಗಳ ಕಾಲ ಕಂಬಳ ನಡೆಯಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಂದ ಬಂದಿರುವ 180ಕ್ಕೂ ಅಧಿಕ ಜೋಡಿ ಕೋಣಗಳು ಕಂಬಳದ ಕರೆಯಲ್ಲಿ ಓಟದ ರಸದೂಟ ಉಣಿಸಲಿವೆ. ಬೆಂಗಳೂರು ಕಂಬಳವನ್ನು ಕಣ್ತುಂಬಿಕೊಳ್ಳಲು ರಾಜ್ಯದ ಜನತೆ ಕಾತುರರಾಗಿದ್ದಾರೆ.

ಅರಮನೆ ಮೈದಾನದ ಗೇಟ್‌ ನಂ. 5ರೊಳಕ್ಕೆ ಪ್ರವೇಶ ಪಡೆಯುತ್ತಿದ್ದಂತೆ ಕರಾವಳಿಯ ಸೊಗಡು ಕಣ್ತುಂಬುತ್ತಿದೆ. ಅಲಂಕಾರಗೊಂಡಿರುವ ಮೂರು ಬೃಹತ್‌ ವೇದಿಕೆಗಳ ಮೂಲಕ ಕಂಬಳಪ್ರಿಯರಿಗೆ ರಸದೌತಣ ನೀಡಲು ಬೆಂಗಳೂರು ಕಂಬಳದ ಕರೆ ಸಜ್ಜಾಗಿದೆ.

ಏಹ್ ಹೀರೋ..ರೈಗಳೇ... ಅಶೋಕ್ ರೈ ಹೆಗಲಿಗೆ ಕೈ ಹಾಕಿ ಭೇಷ್ ಎಂದ ಸಿ ಎಂ ಸಿದ್ಸರಾಮಯ್ಯ

Posted by Vidyamaana on 2024-05-21 14:15:19 |

Share: | | | | |


ಏಹ್ ಹೀರೋ..ರೈಗಳೇ... ಅಶೋಕ್ ರೈ ಹೆಗಲಿಗೆ ಕೈ ಹಾಕಿ ಭೇಷ್ ಎಂದ ಸಿ ಎಂ ಸಿದ್ಸರಾಮಯ್ಯ

ಮಂಗಳೂರು: ಏಹ್..ಹೀರೋ... ರೈ ಗಳೇ ಎಂದು ಹೇಳಿ ಪುತ್ತೂರು‌ಶಾಸಕರಾದ ಅಶೋಕ್ ರೈ ಅವರ ಹೆಗಲ ಮೇಲೆ ಕೈ ಹಾಕಿ ಭೇಷ್ ಎಂದು ಸಿ ಎಂ ಸಿದ್ದರಾಮಯ್ಯ ಅವರು ಅಭಿನಂದಿಸಿದರು.

ಬೆಳ್ತಂಗಡಿ‌ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆಯಲ್ಲಿ‌ಭಾಗವಹಿಸಲು ಆಗಮಿಸಿದ್ದ ಸಿದ್ದರಾಮಯ್ಯ ಅವರನ್ನು ಶಾಸಕರಾದ ಅಶೋಕ್ ರೈ ಯವರು ಸ್ವಾಗತಿಸಿದರು.



ರಝಾಕ್ ಬಿ.ಎಚ್ ನೇತೃತ್ವದಲ್ಲಿ ನಡೆಯುವ ಅಮರ್ ಅಕ್ಟರ್ ಅಂತೋನಿ ಟ್ರೋಫಿ ಉದ್ಘಾಟನೆ

Posted by Vidyamaana on 2023-12-21 12:24:54 |

Share: | | | | |


ರಝಾಕ್ ಬಿ.ಎಚ್ ನೇತೃತ್ವದಲ್ಲಿ ನಡೆಯುವ ಅಮರ್ ಅಕ್ಟರ್ ಅಂತೋನಿ ಟ್ರೋಫಿ ಉದ್ಘಾಟನೆ

ಪುತ್ತೂರು: ಜಾತಿ-ಜಾತಿ ಮಧ್ಯೆ ಸೌಹಾರ್ದತೆಯ ಸಾಮರಸ್ಯ ಮೂಡಿಸುವ ಅಮರ್ ಅಕ್ಟ‌ರ್ ಅಂತೋನಿ ಸೌಹಾರ್ದ ರೋಲಿಂಗ್ ಟ್ರೋಫಿ-2023 ಡಿ.19 ರಿಂದ 24ರ ತನಕ ಆರು ದಿನಗಳ ಕಾಲ ಕಿಲ್ಲೆ ಮೈದಾನದಲ್ಲಿ ಜರಗಲಿದ್ದು, ಈ ಕ್ರೀಡಾಕೂಟದ ಉದ್ಘಾಟನೆಯು ಡಿ.19 ರಂದು ಸಂಜೆ ನೆರವೇರಿತು.



ಸಿಟಿ ಫ್ರೆಂಡ್ಸ್ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಪುತ್ತೂರು, ಟೆನ್ ಗೈಯ್ಸ್ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಅಬುಧಾಬಿ, ಕ್ಲಾಸಿಕ್ ಫ್ರೆಂಡ್ಸ್ ಪುತ್ತೂರು, ಸೌದಿ ಅರೇಬಿಯಾ, ತುಳುನಾಡು ಫ್ರೆಂಡ್ಸ್ ಸೌದಿ ಅರೇಬಿಯಾ ಇವುಗಳ ಜಂಟಿ ಆಶ್ರಯದಲ್ಲಿ ಜರಗಲಿರುವ 11 ಜನರ ಅಂಡರ್ ಆರ್ಮ್ ಈ ಕ್ರಿಕೆಟ್ ಪಂದ್ಯಾಟಕ್ಕೆ ಪ್ರಸ್ತುತ 13ನೇ ವರ್ಷವಾಗಿದ್ದು ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಆಂಜನೇಯ ರೆಡ್ಡಿರವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ನಗರಸಭಾ ಪೌರಾಯುಕ್ತ ಮಧು ಎಸ್.ಮನೋಹರ್, ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಮುಖ್ಯಸ್ಥ ಚೇತನ್ ಕಜೆ, ಬಾಂಧವ್ಯ ಟ್ರೋಫಿಯ ಸಂಯೋಜಕರಾದ ಸ್ಕರಿಯ ಯಂ ಎ - ಫಾರೂಕ್ ಶೇಖ್ , ಭರತ್ ಪ್ರಿಂಟರ್ಸ್ ನ ಭರತ್ ಕುಮಾರ್, ಪಿಪಿಎಲ್ ಆಯೋಜಕರಾದ ಭಾನುಪ್ರಕಾಶ್, ಸಾದಿಕ್ ಬಪ್ಪಳಿಗೆ, ಇಸ್ಮಾಯಿಲ್ ಎಂ.ಬಿ ಬಲ್ನಾಡು, ಜನತಾ ಸ್ಟೇಲ್ ಬಜಾರ್ ಆಶಿಕ್, ಶಾಫಿ ಮುಹಾದ್, ಅಬ್ಬಾಸ್ ಮದರ್ ಇಂಡಿಯ, ಇಬ್ರಾಹಿಂ ಇಬ್ಬ ಸಂಘಟಕ ಅರುಣ್ ಬಪ್ಪಳಿಗೆ ಸಾದಿಕ್ ಸಹಿತ ಹಲವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಎಸ್.ಐ ಆಂಜನೇಯ ರೆಡ್ಡಿ, ನಗರಸಭಾ ಪೌರಾಯುಕ್ತ ಮಧು ಎಸ್.ಮನೋಹ‌ರ್, ಧನ್ವಂತರಿ ಕ್ಲಿನಿಕಲ್‌ ಲ್ಯಾಬೋರೇಟರಿ ಮುಖ್ಯಸ್ಥ ಚೇತನ್ ಕಜೆ, ಬಾಂಧವ್ಯ ಟ್ರೋಫಿಯ ಸಂಯೋಜಕರಾದ ಸ್ಕರಿಯ ಯಂ ಎ ಹಾಗೂ ಫಾರೂಕ್ ಶೇಖ್ , ಭರತ್ ಪ್ರಿಂಟರ್ಸ್ ನ ಭರತ್ ಗೌಡ, ಕೇಬಲ್ ಆಪರೇಟರ್ ಪ್ರವೀಣ್ ಪ್ರಭು, ಇತ್ತೀಚೆಗೆ ಕಥೋಲಿಕ್ ಸಭಾ ಮಂಗಳೂರು ಇವರಿಂದ ಮಂಗಳೂರಿನ ಕಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ.ವಂ.ಡಾ.ಪೀಟರ್ ಪಾವ್‌ ಸಲ್ದಾನ್ಹಾರವರಿಂದ ಸನ್ಮಾನಿತರಾದ ಪತ್ರಕರ್ತ ಸುದ್ದಿ ಬಿಡುಗಡೆಯ ವರದಿಗಾರ ಸಂತೋಷ್ ಮೊಟ್ಟೆತ್ತಡ್ಕರವರುಗಳನ್ನು ಗುರುತಿಸಿ ಸನ್ಮಾನಿಸಲಾಯಿತು.


ಪಂದ್ಯಾಕೂಟದಲ್ಲಿ ಹಳ್ಳಿ ಹುಡುಗ್ರು ಪೇಟೆ ಕಪ್ ಹೆಸರಿನಲ್ಲಿ 60 ತಂಡಗಳು, ಅಮರ್ ಅಕ್ಟರ್ ಅಂತೋನಿ ಸೌಹಾರ್ದ ರೋಲಿಂಗ್ ಟ್ರೋಫಿಗೆ 24 ತಂಡಗಳು, ಸ್ನೇಹ ಸೌಹಾರ್ದ ಟ್ರೋಫಿ ಹೆಸರಿನಲ್ಲಿ ವಿವಿಧ ಇಲಾಖೆಗಳ 12 ಕ್ರಿಕೆಟ್ ತಂಡಗಳು, ಕಿಲ್ಲೆ ಕಪ್‌ನಲ್ಲಿ 4 ತಂಡಗಳು ತೀವ್ರ ಹಣಾಹಣಿ ನಡೆಸಲಿದೆ.


ರಝಾಕ್ ಬಿ.ಎಚ್ ನೇತೃತ್ವದಲ್ಲಿ ನಡೆಯುವ ಈ ಕ್ರೀಡಾಕೂಟದಲ್ಲಿ ಪುತ್ತೂರಿನ ವೈದ್ಯರುಗಳು, ಪೊಲೀಸ್ ಇಲಾಖೆ,ಸುದ್ದಿ ಪುತ್ತೂರು ವಕೀಲರು, ಮೆಸ್ಕಾಂ ಉದ್ಯೋಗಿಗಳು, ಬ್ಯಾಂಕ್ ಉದ್ಯೋಗಿಗಳು, ದೈಹಿಕ ಶಿಕ್ಷಣ ಶಿಕ್ಷಕರು, ಭಾಗವಹಿಸುತ್ತಿದ್ದಾರೆ.

ಜಮ್ಮು-ಕಾಶ್ಮೀರದ ದೋಡಾದಲ್ಲಿ ಚೆನಾಬ್ ನದಿಗೆ ಉರುಳಿದ ಬಸ್: 25 ಮಂದಿ ಸಾವು, 10 ಮಂದಿಗೆ ಗಾಯ

Posted by Vidyamaana on 2023-11-15 14:07:03 |

Share: | | | | |


ಜಮ್ಮು-ಕಾಶ್ಮೀರದ ದೋಡಾದಲ್ಲಿ ಚೆನಾಬ್ ನದಿಗೆ ಉರುಳಿದ ಬಸ್: 25 ಮಂದಿ ಸಾವು, 10 ಮಂದಿಗೆ ಗಾಯ

ದೋಡಾ: ಕಿಶ್ತ್ವಾರ್ ನಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಡಜನ್ ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ದೋಡಾದಿಂದ 15 ಕಿ.ಮೀ ದೂರದಲ್ಲಿರುವ ರಾಗಿನಲ್ಲಾ ಅಸ್ಸಾರ್ ಬಳಿ ಅಪಘಾತ ಸಂಭವಿಸಿದ ಸಮಯದಲ್ಲಿ 50 ಕ್ಕೂ ಹೆಚ್ಚು ಜನರು ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.ಎಸ್‌ಎಸ್ಪಿ ದೋಡಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ಧಾವಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ

ದೆಹಲಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ಪೆಂಡಾಲ್ ಕುಸಿತ ; ಹಲವರು ಸಿಲುಕಿರುವ ಶಂಕೆ

Posted by Vidyamaana on 2024-02-17 13:14:16 |

Share: | | | | |


ದೆಹಲಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ಪೆಂಡಾಲ್ ಕುಸಿತ ; ಹಲವರು ಸಿಲುಕಿರುವ ಶಂಕೆ

ನವದೆಹಲಿ : ದೆಹಲಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ಪೆಂಡಾಲ್ ಕುಸಿದಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.ಪ್ರಾಥಮಿಕ ವರದಿಗಳ ಪ್ರಕಾರ, ರಾಷ್ಟ್ರ ರಾಜಧಾನಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಶನಿವಾರ ಬೆಳಿಗ್ಗೆ ಪೆಂಡಾಲ್ ಕುಸಿದಿದೆ. ಕ್ರೀಡಾಂಗಣದ ಗೇಟ್ ನಂ.2ರಲ್ಲಿ ಈ ಘಟನೆ ನಡೆದಿದೆ.ಅಗ್ನಿಶಾಮಕ ದಳದ ವಾಹನಗಳು ಮತ್ತು ಆಂಬ್ಯುಲೆನ್ಸ್ ಗಳು ಈಗಾಗಲೇ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



Leave a Comment: