Posted by vidyamaana on 2024-07-24 19:54:18 |
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.
ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ
Posted by Vidyamaana on 2024-08-01 16:26:39 |
ಇದು ವರ್ಷದ ಹಿಂದೆ ವಯನಾಡಿನ ಮುಂಡಕ್ಕೈನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಶಿಕ್ಷಕಿ, ತನ್ನ ಶಾಲಾ ಮಕ್ಕಳಿಗೆ ಸೈಕಲ್ ಕಲಿಸುತ್ತಿದ್ದರು. ಈಗ ಮತ್ತೆ ಅದೇ ಸ್ಥಳ ವೈರಲ್ ಆಗಿದೆ. ಆದ್ರೆ ಸ್ಥಳದಲ್ಲಿ ಈಗ ದುಃಖ ಮಡುಗಟ್ಟಿದೆ.
ಇಷ್ಟು ದಿನ ಮಕ್ಕಳ ಸಂತೋಷ, ನಗುವಿನಿಂದ ಕೂಡಿದ್ದ ಶಾಲೆ ಮೈದಾನ ಕೆಸರು ಗದ್ದೆಯಾಗಿದೆ.
ಹಳೆ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡ ಶಾಲಿನಿ ತಂಕಚನ್, ತಮ್ಮ ದುಃಖವನ್ನು ತೋಡಿಕೊಂಡಿದ್ದಾರೆ. 4ನೇ ತರಗತಿಯ ಶಿಕ್ಷಕಿಯಾಗಿದ್ದ ಶಾಲಿನಿ ತಂಕಚನ್, ಈ ವಿಡಿಯೋ ಪೋಸ್ಟ್ ಮಾಡಿ ನನ್ನ ಪ್ರೀತಿ ಪಾತ್ರರು ಹೋದ್ರು ಅಂತ ಬರೆದಿದ್ದಾರೆ. ಸೈಕಲ್ ಓಡಿಸುತ್ತಿದ್ದ ಮೂವರು ಸೇರಿದಂತೆ ಭೂಕುಸಿತದಲ್ಲಿ ಒಂಭತ್ತು ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ.
Posted by Vidyamaana on 2024-05-18 07:25:22 |
ಉಡುಪಿ, ಮೇ 17 : ಮನೆಯಿಂದ ಕಾಲೇಜಿಗೆ ಹೋಗುತ್ತೇನೆ ಎಂದು ಹೋಗಿದ್ದ ವಿಧ್ಯಾರ್ಥಿನಿ ನಾಪತ್ತೆಯಾದ ಘಟನೆ ಹಿರಿಯಡ್ಕದಲ್ಲಿ ನಡೆದಿದ್ದು, ನಾಪತ್ತೆಯಾದ ವಿಧ್ಯಾರ್ಥಿನಿಯನ್ನು ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ(20) ಎಂದು ಗುರುತಿಸಲಾಗಿದ್ದು, ಎಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
Posted by Vidyamaana on 2024-01-15 16:57:42 |
ಪುತ್ತೂರು: ರೋಡ್ ರೋಲರ್ ಬಳಸದೆ ರಸ್ತೆಗೆ ಜಲ್ಲಿ ಹಾಕಿ ಚಪ್ ಡಿ ( ತೇಪೆ ) ಕಾಮಗಾರಿ ನಡೆಸುತ್ತಿದ್ದ ವೇಳೆ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕರು ಕಳಪೆ ಕಾಮಗಾರಿಯನ್ನು ಸ್ಥಗಿತಗೊಳಿಸಿದ ಘಟನೆ ವಿಟ್ಲ ಬೊಬ್ಬೆಕೇರಿಯಲ್ಲಿ ನಡೆದಿದೆ.
ಮಂಗಳೂರಿನಿಂದವಿಟ್ಲಕ್ಕೆ ತೆರಳುತ್ತಿದ್ದ ವೇಳೆ ಕಾರ್ಮಿಕರು ಹಾರೆಯ ಮೂಲಕ ರಸ್ತೆ ಹೊಂಡಗಳಿಗೆ ಜಲ್ಲಿಮಿಶ್ರಣವನ್ನು ಕೈಯಿಂದ ಗಟ್ಟಿ ಮಾಡುತ್ತಿದ್ದರು. ಇದನ್ನು ನೋಡಿದ ಶಾಸಕರು ಕಾರು ನಿಲ್ಲಿಸಿ ಕಾಮಗಾರಿ ಮಾಹಿತಿ ಪಡೆದರು. ಬಂಟ್ವಾಳ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಪ್ರೀತಮ್ ರಿಗೆ ಕರೆ ಮಾಡಿ ಕಳಪೆ ಕಾಮಗಾರಿ ಅಥವಾ ಚಪ್ಪ್ ಡಿ ಕೆಲಸಮಾಡುವುದು ಬೇಡ. ರೋಡ್ ರೋಲರ್ ಬಳಸಿ ಗುಣಮಟ್ಟದ ಜಲ್ಲಿ ಡಾಮಾರು ಬಳಸಿ ಕಾಮಗಾರಿ ನಡೆಸಿ ಎಂದು ಸೂಚನೆ ನೀಡಿದರು.ಶಾಸಕರ ಎಚ್ಚರಿಕೆಯ ಬಳಿಕಕಾಮಗಾರಿ ಸ್ಥಗಿತಗೊಳಿಸಲಾಗಿದೆ
Posted by Vidyamaana on 2024-03-01 14:05:03 |
ಪುತ್ತೂರು : ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಸಾಮೆತ್ತಡ್ಕ ನಿವಾಸಿ ಬಾಲಕೃಷ್ಣ (48) ಮೃತರು ಬಾಲಕೃಷ್ಣ ಅವರು ಪೈಂಟರ್ ಕೆಲಸ ನಿರ್ವಹಿಸುತ್ತಿದ್ದು, ಸಾಮೆತ್ತಡ್ಕದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.
Posted by Vidyamaana on 2024-06-30 16:40:20 |
ಪುತ್ತೂರು: ಮಧುರಾ ಬೀಡಿ ಉದ್ಯಮಿ, ಮರಿಲ್ ನಿವಾಸಿ ಡಿ.ಎ ಅಬ್ದುಲ್ ಖಾದರ್ (81 ವ) ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೆಲವು ದಿನಗಳ ಹಿಂದೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮಧುರಾ ಗ್ರೂಪ್ ನ ಸ್ಥಾಪಕರಾಗಿರುವ ಡಿ ಎ ಅಬ್ದುಲ್ ಖಾದರ್ ಮಧುರಾ