ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ

ಸುದ್ದಿಗಳು News

Posted by vidyamaana on 2024-07-08 15:11:53 |

Share: | | | | |


ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ

ಕಲಬುರಗಿ: ಹೃದಯಾಘಾತವಾದ ಹಿನ್ನೆಲೆಯಲ್ಲಿ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ.

ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದ್ದಲ್ಲಿ ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಇಹಲೋಕ ತ್ಯಜಿಸಿದ್ದಾರೆ.

ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ರಟಕಲ್ ಗ್ರಾಮದಲ್ಲಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.

 Share: | | | | |


BREAKING: ಹೆಲಿಕಾಪ್ಟ‌ರ್ ಪತನ, ಇರಾನ್ ಅಧ್ಯಕ್ಷರು ಸೇರಿದಂತೆ ಎಲ್ಲರೂ ದುರ್ಮರಣ!

Posted by Vidyamaana on 2024-05-20 09:24:27 |

Share: | | | | |


BREAKING: ಹೆಲಿಕಾಪ್ಟ‌ರ್ ಪತನ, ಇರಾನ್ ಅಧ್ಯಕ್ಷರು ಸೇರಿದಂತೆ ಎಲ್ಲರೂ ದುರ್ಮರಣ!

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಪತ್ತೆಯಾಗಿದೆ ಆದರೆ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಇರಾನ್ನ ರೆಡ್ ಕ್ರೆಸೆಂಟ್ ಮುಖ್ಯಸ್ಥರು ಹೇಳಿದ್ದಾರೆ.ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವ ಹುಸೇನ್ ಅಮಿರಾಬ್ಡೊಲ್ಲಿಯನ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತದ ಸ್ಥಳದಲ್ಲಿ ಬದುಕುಳಿದವರು ಕಂಡುಬಂದಿಲ್ಲ ಎಂದು ಇರಾನಿನ ಸರ್ಕಾರಿ ಮಾಧ್ಯಮ ಸೋಮವಾರ ತಿಳಿಸಿದೆ.

ಬೆಂಗಳೂರು: ಅಂಗಡಿ ಮಾಲೀಕನಿಗೆ ಸುಳ್ಳು ಹೇಳಿ 1 ಕೆ.ಜಿಗೂ ಹೆಚ್ಚು ಚಿನ್ನ ದೋಚಿದ್ದ ಸೇಲ್ಸ್‌ಮ್ಯಾನ್ ಸೆರೆ

Posted by Vidyamaana on 2023-10-12 08:28:56 |

Share: | | | | |


ಬೆಂಗಳೂರು: ಅಂಗಡಿ ಮಾಲೀಕನಿಗೆ ಸುಳ್ಳು ಹೇಳಿ 1 ಕೆ.ಜಿಗೂ ಹೆಚ್ಚು ಚಿನ್ನ ದೋಚಿದ್ದ ಸೇಲ್ಸ್‌ಮ್ಯಾನ್ ಸೆರೆ

ಬೆಂಗಳೂರು : ಚಿನ್ನ ಇಡಲಾಗಿದ್ದ ಬ್ಯಾಗ್​ ಅನ್ನು ಅಪರಿಚಿತರು ಸುಲಿಗೆ ಮಾಡಿದ್ದಾರೆ ಎಂದು ಸುಳ್ಳು ಕಥೆ ಕಟ್ಟಿ ಜ್ಯುವೆಲ್ಲರಿ ಶಾಪ್ ಮಾಲೀಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಸೇಲ್ಸ್‌ಮ್ಯನ್ ಹಲಸೂರು ಗೇಟ್ ಪೊಲೀಸರ ಅತಿಥಿಯಾಗಿದ್ದಾನೆ.ಹಲಸೂರು ಗೇಟ್ ಠಾಣಾ ವ್ಯಾಪ್ತಿಯಲ್ಲಿರುವ ಚಿನ್ನದ ಮಳಿಗೆಯ ಮಾಲೀಕ ಅಭಿಷೇಕ್ ಎಂಬವರು ನೀಡಿದ ದೂರಿನ ಮೇರೆಗೆ ಇದೇ ಅಂಗಡಿಯಲ್ಲಿ‌ ಸೇಲ್ಸ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ರಾಜಸ್ತಾನ ಮೂಲದ ಲಾಲ್‌ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 1 ಕೆ.ಜಿಗೂ ಹೆಚ್ಚು ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಈತನಿಗೆ ಸಹಕರಿಸಿದ ಮತ್ತೋರ್ವ ಆರೋಪಿ‌ ರಾಜ್ ಪಾಲ್‌ ಎಂಬಾತನನ್ನೂ ಬಂಧಿಸಲಾಗಿದೆ.


ಏಳು ತಿಂಗಳಿಂದ ಅಭಿಷೇ‌ಕ್ ಅವರ ಅಂಗಡಿಯಲ್ಲಿ ಸೇಲ್ಸ್‌ಮ್ಯಾನ್ ಆಗಿ ಕೆಲಸ‌ ಮಾಡುತ್ತಿದ್ದ ಲಾಲ್​ ಸಿಂಗ್​ ಮಾಲೀಕರ ನಂಬಿಕೆ ಗಳಿಸಿಕೊಂಡಿದ್ದ. ಕಳೆದ‌ ತಿಂಗಳು 28ರಂದು ಆಂಧ್ರದ ನಲ್ಲೂರಿನಲ್ಲಿರುವ ಮುಕೇಶ್ ಹಾಗೂ ಶುಭಂ ಗೋಲ್ಡ್ ಜ್ಯುವೆಲ್ಲರಿ ಶಾಪ್​ಗಳ ಮಾಲೀಕರಿಗೆ 1.262 ಕೆ.ಜಿ ಚಿನ್ನಾಭರಣ ಕೊಟ್ಟು ಬರುವಂತೆ ಲಾಲ್​ ಸಿಂಗ್​ಗೆ ಮಾಲೀಕರು ಸೂಚಿಸಿದ್ದರು. ಚಿನ್ನಾಭರಣಬ್ಯಾಗ್ ನೀಡುತ್ತಿದ್ದಂತೆ ಆರೋಪಿ ತನ್ನ ವಕ್ರ ಬುದ್ಧಿ ಪ್ರದರ್ಶಿಸಿದ್ದಾನೆ‌. ಬೆಂಗಳೂರಿನಲ್ಲಿರುವ ಸಹಚರರಿಗೆ ವಿಷಯ ತಿಳಿಸಿ ದೋಚುವ ಬಗ್ಗೆ ಸಂಚು‌ ನಡೆಸಿದ್ದಾನೆ‌.‌


ನೆಲ್ಲೂರಿನ ಕಾಳಹಸ್ತಿ ಬಳಿ ತೆರಳಿ ಮಾಲೀಕರಿಗೆ ಫೋನ್‌ ಮಾಡಿ ಯಾರೋ ಅಪರಿಚಿತರು ಗನ್ ಇಟ್ಟು ಕೈಗಳಿಗೆ ಚಾಕುವಿನಿಂದ ಹಲ್ಲೆ ಮಾಡಿ ಚಿನ್ನವಿರುವ ಬ್ಯಾಗ್ ಕಸಿದುಕೊಂಡರು ಎಂದು ಸುಳ್ಳು ಹೇಳಿ ಫೋನ್​ ಸ್ವಿಚ್ ಆಫ್ ಮಾಡಿಕೊಂಡಿದ್ದ. ನಿರಂತರವಾಗಿ ಎರಡು ದಿನಗಳ ಕಾಲ ಫೋನ್​ ಮಾಡಿದರೂ ಸ್ವಿಚ್ ಆಫ್ ಬರುತ್ತಿರುವುದನ್ನು ಕಂಡು ಅನುಮಾನಗೊಂಡ ಮಾಲೀಕರು ಸ್ವತಃ ತಾನೇ ಕಾಳಹಸ್ತಿಗೆ ತೆರಳಿದ್ದರು‌.‌ ಅಷ್ಟೊತ್ತಿಗಾಗಲೇ ಲಾಲ್‌ಸಿಂಗ್ ಚಿನ್ನಾಭರಣವನ್ನು ಸಹಚರರ ಮೂಲಕ ರಾಜಸ್ತಾನಕ್ಕೆ ಕಳುಹಿಸಿದ್ದನು.


ಆ ನಂತರ ನಿರಂತರ ಶೋಧ ನಡೆಸಿದ ಬಳಿಕ ಲಾಲ್ ಸಿಂಗ್‌ನನ್ನು ಪತ್ತೆ ಹಚ್ಚಿ ಮಾಲೀಕರು ಬೆಂಗಳೂರಿಗೆ ಕರೆತಂದಿದ್ದರು. ಬ್ಲೇಡ್‌ನಿಂದ ಕೈಗಳನ್ನುಕೊಯ್ದುಕೊಂಡಿದ್ದನು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಇನ್ಸ್‌ಸ್ಪೆಕ್ಟರ್ ಹನುಮಂತ್ರ ಭಜಂತ್ರಿ, ಚಾಕುವಿನಿಂದ ಕೈಗಳ ಮೇಲೆ ಹಲ್ಲೆ‌ ಮಾಡಿರುವುದಾಗಿ ನೀಡಿದ ಹೇಳಿಕೆಗೂ ಕೈ ಮೇಲೆ ಆಗಿರುವ ಗಾಯಕ್ಕೂ ಸಾಮ್ಯತೆ ಬರದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಅಪರಾಧ ಕೃತ್ಯದ ಬಗ್ಗೆ ಆರೋಪಿ ಸತ್ಯ ಬಾಯ್ಬಿಟ್ಟಿದ್ದಾನೆ. 


10 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದು‌ ಕೂಲಂಕಷ ವಿಚಾರಣೆ ನಡೆಸಿದಾಗ ಕದ್ದ ಮಾಲನ್ನು ರಾಜಸ್ತಾನಕ್ಕೆ ಸಹಚರರ ಮೂಲಕ ಕಳುಹಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಸಹಚರ ರಾಜ್ ಆಲಿಯಾಸ್ ರಾಜಪಾಲ್‌ನನ್ನು ವಶಕ್ಕೆ ಪಡೆದು 75 ಲಕ್ಷ ರೂ ಮೌಲ್ಯದ 1.262 ಕೆ‌.ಜಿ ಚಿನ್ನವನ್ನು ವಶಕ್ಕೆ‌ ಪಡೆದುಕೊಳ್ಳಲಾಗಿದೆ. ಕೃತ್ಯವೆಸಗಲು ಸಹಕರಿಸಿದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು ಪತ್ತೆಗೆ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದರು.

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಅನೀಸ್ ಮೃತ್ಯು

Posted by Vidyamaana on 2023-06-09 23:30:02 |

Share: | | | | |


ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಅನೀಸ್ ಮೃತ್ಯು

ಮಂಗಳೂರು : ಉಪ್ಪಿನಂಗಡಿ ಬಳಿ ವಾರದ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಪುತ್ತೂರು Habitude ಬಟ್ಟೆ ಅಂಗಡಿ  ಮಾಲಕ ಹಮೀದ್ ನೀರಕಟ್ಟೆ ಅವರ ಸಹೋದರಿಯ ಮಗ ಅನೀಸ್ (27 ) ಚಿಕಿತ್ಸೆ ಫಲಕಾರಿಯಾಗದೆ ಇಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಜೂ 2 ರಂದು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಉಪ್ಪಿನಂಗಡಿ ಬಳಿಯ ಪಂಜಳ ಎಂಬಲ್ಲಿ  ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಬೈಕ್ ನಲ್ಲಿದ್ದ ಅನೀಸ್ ಮತ್ತು ಅವರ ಮಾವ ಹಮೀದ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ತೀವ್ರ ಗಾಯಗೊಂಡು ಕೋಮಾಗೆ ಜಾರಿದ್ದ ಅನೀಸ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಜೂ 9 ರಂದು ರಾತ್ರಿ ಅನೀಸ್ ಅಸುನೀಗಿದ್ದಾರೆ.ಮೃತರು ತಾಯಿ, ಇಬ್ಬರು ಇಬ್ಬರು ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

BREAKING : ಕೌಟುಂಬಿಕ ಕಲಹದ ಹಿನ್ನೆಲೆ ಬಾಮೈದನನ್ನು ಭೀಕರವಾಗಿ ಹತ್ಯೆಗೈದ ಭಾವ

Posted by Vidyamaana on 2024-04-09 22:58:30 |

Share: | | | | |


BREAKING : ಕೌಟುಂಬಿಕ ಕಲಹದ ಹಿನ್ನೆಲೆ ಬಾಮೈದನನ್ನು ಭೀಕರವಾಗಿ ಹತ್ಯೆಗೈದ ಭಾವ

ಬೆಂಗಳೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಭಾವನಿಂದ ಭಾಮೈದನ ಹತ್ಯೆಗೆ ಈಡಗಿರುವ ಘಟನೆ ಬೆಂಗಳೂರಿನ ವೆಂಕಟೇಶಪುರದಲ್ಲಿ ನಡೆದಿದೆ.ಹೌದು ಕಿರಣ್ ಕುಮಾರ್ (32) ಹತ್ಯೆಗೆ ಈಡಾದ ವ್ಯಕ್ತಿಯಾಗಿದ್ದಾನೆ.ಚಾಕುವಿನಿಂದ ಇರಿದು ಭಾಮೈದನನ್ನು ಭಾವ ಲಕ್ಷ್ಮಣ ಎನ್ನುವವರು ಭೀಕರವಾಗಿ ಹತ್ಯೆಗೈದಿದ್ದಾರೆ.

ಕಬಕ : ಓಜಾಲ ನಿವಾಸಿ ಉಸ್ಮಾನ್ ಹೃದಯಾಘಾತದಿಂದ ನಿಧನ

Posted by Vidyamaana on 2024-03-06 15:11:50 |

Share: | | | | |


ಕಬಕ : ಓಜಾಲ ನಿವಾಸಿ ಉಸ್ಮಾನ್ ಹೃದಯಾಘಾತದಿಂದ ನಿಧನ

ಪುತ್ತೂರು :- ಬಂಟ್ವಾಳ ತಾಲೂಕಿನ ಕುಲ ಗ್ರಾಮದ ಓಜಾಲ ನಿವಾಸಿ ಉಸ್ಮಾನ್ ರವರು ದೇರಳಕಟ್ಟೆ ಯಾನಪೋಯ ಆಸ್ಪತ್ರೆಯಲ್ಲಿ ಮಾ 06 ರಂದು  ಹೃದಯಾಘಾತದಿಂದ ನಿಧನರಾದರು 

ಹಲವಾರು ವರ್ಷಗಳಿಂದ ಸೆಕೆಂಡೆಂಡ್ ವಾಹನ ವ್ಯಾಪಾರಸ್ಥರು,ಹಲವಾರು ವರ್ಷಗಳ ಹಿಂದೆ ಪುತ್ತೂರಿನ ಜೆ.ಎಂ.ಕಟ್ಟಡದಲ್ಲಿ ಯುನೈನ್ ಅಂಟೋ ಲಿಂಕ್ಸ್ ಮಾಲಕ ರಾಗಿದ್ದರು,ಮೃತರು ಪತ್ನಿ ಮಕ್ಕಳನ್ನು ಅಗಲಿದ್ದಾರೆ

ಪುತ್ತೂರು : ಜಂ ಇಯ್ಯತುಲ್ ಉಲಾಮಾ ವತಿಯಿಂದ ಬೃಹತ್ ಮೌಲೀದ್‌ ಮಜ್ಲಿಸ್

Posted by Vidyamaana on 2023-10-08 13:32:04 |

Share: | | | | |


ಪುತ್ತೂರು : ಜಂ ಇಯ್ಯತುಲ್ ಉಲಾಮಾ ವತಿಯಿಂದ  ಬೃಹತ್ ಮೌಲೀದ್‌ ಮಜ್ಲಿಸ್

ಪುತ್ತೂರು: ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಪುತ್ತೂರು ತಾಲೂಕು ಸಮಿತಿಯಿಂದ ಬೃಹತ್ ಮೌಲೀದ್ ಮಜ್ಲಿಸ್ ಕಾರ್ಯಕ್ರಮ ಪುತ್ತೂರು ಬದ್ರಿಯಾ ಮಸೀದಿ ಸಭಾಂಗಣದಲ್ಲಿ ನಡೆಯಿತು.


  1. ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ

ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಅಸೈಯದ್‌ ಅಹಮದ್ ಪೂಕೋಯ ತಂಙಳ್ ನೇತೃತ್ವ ವಹಿಸಿ ದುವಾಶೀರ್ವಚನ ನೀಡಿ ಮಾತನಾಡಿ ಮಿಲಾದುನ್ನೆಬಿಯ ಮಹತ್ವದ ಬಗ್ಗೆ ವಿವರಿಸಿದರು.ಯಾಹ್ಯಾ ತಂಙಳ್    ಪೋಳ್ಯ,ಪುತ್ತೂರು ಬದ್ರಿಯಾ ಮಸೀದಿಯ ಖತೀಬ್ ಅಬ್ಬಾಸ್ ಫೈಝಿ ಪುತ್ತಿಗೆ,ಪುತ್ತೂರು ಸಾಲ್ಮರ ಸೈಯದ್ ಮಲೆ ಮಸೀದಿಯ ಖತೀಬ್ ಉಮ್ಮರ್ ದಾರಿಮಿ ಸಾಲ್ಮರ,ಅಬ್ಬಾಸ್ ಮದನಿ ಮೊಟ್ಟೆತ್ತಡ್ಕ,ಉಮ್ಮರ್ ಫೈಝಿ ಸಾಲ್ಮರ,ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಎಲ್‌ ಟಿ ಅಬ್ದುಲ್ ರಝಾಕ್ ಹಾಜಿ, ಪ್ರಧಾನ ಕಾರ್ಯದರ್ಶಿ ಯಾಕೂಬ್ ಖಾನ್ ಬಪ್ಪಳಿಗೆ ಮೊದಲಾದರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಮೀಯ್ಯತ್ತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ದಾರಿಮಿ ಸಂಪ್ಯ ಸ್ವಾಗತಿಸಿದರು.ಮೌಲೀದ್‌ ಮಜ್ಲಿಸ್ ಕಾರ್ಯಕ್ರಮದಲ್ಲಿ ಜಂ ಇಯ್ಯತುಲ್ ಉಲಾಮಾದ ಪದಾಧಿಕಾರಿಗಳಾದ ಉಮರ್ ಮುಸ್ಲಿಯಾರ್ ನಂಜೆ, ಸಿರಾಜುದ್ದೀನ್ ಫೈಝಿ ಬಪ್ಪಳಿಗೆ,ರಶೀದ್ ರಹ್ಮಾನಿ ಪರ್ಲಡ್ಕ, ಅಝೀಝ್ ದಾರಿಮಿ ಕೊಡಾಜೆ, ಸಿದ್ದೀಕ್ ಫೈಝಿ ಮುಕ್ರಂಪಾಡಿ,ಶಾಫಿ ಇರ್ಫಾನಿ ಕಲ್ಲೆಗ, ಆಸಿಫ್ ಅಝ್ಹರಿ ಇರ್ದೆ ಉಪಸ್ಥಿತರಿದ್ದರು.

Recent News


Leave a Comment: