Posted by vidyamaana on 2024-07-24 23:15:54 |
ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.
ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.
ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
Posted by Vidyamaana on 2023-09-16 08:21:20 |
ದುಬೈ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸೆ 15 ರಂದು ದುಬೈಗೆ ಭೇಟಿ ನೀಡಿದ್ದು, ಈ ಸಂದರ್ಭ ಅಲ್ಲಿರುವ ಪುತ್ತೂರಿನವರನ್ನು ಭೇಟಿಯಾದರು.
ದುಬೈಯ ಜುಮೈರಾ ತಾಜ್ ಹೊಟೇಲಿನಲ್ಲಿ ಶಾಸಕರಿಗೆ ಆತ್ಮೀಯ ಸ್ವಾಗತ ನೀಡಿ, ಅಭಿನಂದಿಸಿದರು.
ಬಳಿಕ ನಡೆದ ಸೌಹಾರ್ದ ಭೇಟಿಯಲ್ಲಿ ಮಾತನಾಡಿದ ಅಶೋಕ್ ರೈ, ಚುನಾವಣೆ ಸಂದರ್ಭ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ದುಬೈನಲ್ಲಿ ನೆಲೆಸಿರುವ ನಮ್ಮೂರಿನ ಯುವಕರ ಸಹಕಾರ ಅವಿಸ್ಮರಣೀಯ. ನಮ್ಮೂರಿನ ಜನಪರ ಕೆಲಸಗಳಿಗೆ ಸದಾ ನಿಮ್ಮ ಬೆಂಬಲ ಮುಂದೆಯೂ ಬೇಕು ಎಂದ ಅವರು, ದುಬೈಯ ಪುತ್ತೂರಿಗರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಸ್ತಾಫಾ ಕೋಡಿಂಬಾಡಿ, ಖಲೀಲ್ ಬಿ.ಎಚ್., ಅಜಿತ್ ಕೋಡಿಂಬಾಡಿ, ಅನ್ಸಾರ್ ಬಿ.ಎಚ್., ಸಿನಾನ್ ಮೊದಲಾದವರು ಉಪಸ್ಥಿತರಿದ್ದರು.
Posted by Vidyamaana on 2024-05-22 15:54:19 |
ಬೆಂಗಳೂರು : ಸಿಟಿ ರೌಂಡ್ಸ್ ಗೆ ಬಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬೆಂಗಳೂರು ನಗರವಾಸಿಗಳು ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿ ಬಗ್ಗೆ ಅಭಿನಂದನೆಗಳ ಮಹಾಪೂರವನ್ನೇ ಹರಿಸಿದರು.ಸಮಸ್ಯೆಗಳನ್ನು ಆಲಿಸುತ್ತ ಸಿಎಂ ಗೆ ಸಾರ್ವಜನಿಕರು ಮುಗಿಬಿದ್ದು ಗ್ಯಾರಂಟಿ ಯೋಜನೆಗಳಿಂದ ತಮ್ಮ ಕುಟುಂಬಗಳಿಗೆ ಆಗಿರುವ ಅನುಕೂಲಗಳನ್ನು ವಿವರಿಸಿ ಅಭಿನಂದಿಸಿದರು.
Posted by Vidyamaana on 2024-06-13 12:14:47 |
ನವದೆಹಲಿ: ದೆಹಲಿ ಮೆಟ್ರೋದಲ್ಲಿ (delhi metro) ಅಶ್ಲೀಲ ವರ್ತನೆಯ ವಿಡಿಯೋಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ (social media) ಆಗಾಗ ವೈರಲ್ (Viral Video) ಆಗುತ್ತಿದೆ. ಇದೀಗ ರೈಲಿನಲ್ಲೂ (train) ಜೋಡಿಯೊಂದು ಅಶ್ಲೀಲವಾಗಿ ವರ್ತಿಸಿ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಕಳೆದ ಕೆಲವು ದಿನಗಳಿಂದ ಮೆಟ್ರೋದಲ್ಲಿ, ಬೈಕ್ ನಲ್ಲಿ ಅಸಭ್ಯವಾಗಿ ವರ್ತಿಸುತ್ತಿರುವ ಜೋಡಿಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿತ್ತು. ಇದೀಗ ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ವಿಡಿಯೋವೊಂದರಲ್ಲಿ ಜೋಡಿಯೊಂದು ಸಣ್ಣ ಮಕ್ಕಳ ಎದುರೇ ರೈಲಿನಲ್ಲಿ ಮುದ್ದಾಡುತ್ತಾ ಸಾಗಿರುವುದು ವೈರಲ್ ಆಗಿದೆ.
ಸ್ಲೀಪರ್ ಕೋಚ್ನಲ್ಲಿ ದಂಪತಿ ಮುದ್ದಾಡುತ್ತಿದ್ದಾಗ ರೈಲಿನ ಟಿಕೇಟ್ ಪರೀಕ್ಷಿಸಲು ಪರೀಕ್ಷಕರು ಅಲ್ಲಿಗೆ ಬಂದಿದ್ದಾರೆ. ಅವರೊಂದಿಗೆ ಮಾತನಾಡುತ್ತಿದ್ದರೂ ದಂಪತಿ ಈ ಬಗ್ಗೆ ತಲೆಕೆಡಿಸಿಕೊಳ್ಳದೆ ಎಲ್ಲರ ಉಪಸ್ಥಿತಿಯಲ್ಲಿಯೂ ಪರಸ್ಪರ ಮುದ್ದಾಡುತ್ತಿದ್ದರು. ಇದು ಮಕ್ಕಳು ಸೇರಿದಂತೆ ಇತರ ಪ್ರಯಾಣಿಕರಿಗೂ ಮುಜುಗರ ಉಂಟು ಮಾಡುವಂತಿತ್ತು.
ಈ ವಿಡಿಯೋ ಯಾವಾಗ ಮತ್ತು ಎಲ್ಲಿ ತೆಗೆದಿರುವುದೆಂದು ತಿಳಿದು ಬಂದಿಲ್ಲ. ಈ ಕುರಿತು ಸಾಕಷ್ಟು ನೆಟ್ಟಿಗರು ಕಾಮೆಂಟ್ ಕೂಡ ಮಾಡಿದ್ದಾರೆ
Posted by Vidyamaana on 2024-03-31 06:15:03 |
ಆಲಂಕಾರು: ಇಲ್ಲಿನ ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ ಬಳಿ ಆಕ್ಷಿಜನ್ ಸಿಲಿಂಡರ್ ಸಾಗಾಟದ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಫಘಾತ ಸಂಭವಿಸಿದ್ದು ಇಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಮಾ.30 ರ ರಾತ್ರಿ ನಡೆದಿದೆ.
Posted by Vidyamaana on 2024-06-12 10:03:01 |
ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಬಾರ್ತೋಳಿ ಎಂಬಲ್ಲಿ ಕಾಡನೆಗಳನ್ನು ಬಂದ ದಾರಿಗೆ ಅಟ್ಟಿಸುವ ವೇಳೆ ಪಟಾಕಿ ಸಿಡಿದು ದುಂಬಾರೆಯ ಆನೆ ಸಲಹಾ ತರಬೇತಿ ಕೇಂದ್ರದ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಜೂ.11 ರ ಸಂಜೆ ನಡೆದ ಬಗ್ಗೆ ವರದಿಯಾಗಿದೆ.
ಜೂ.10 ರಂದು ರಾತ್ರಿ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಬಾರ್ತೋಳಿಯಲ್ಲಿ ಕೃಷಿ ಹಾನಿ ಮಾಡುತ್ತಿದ್ದ ಕಾಡಾನೆಗಳೆರಡು ಪಕ್ಕದ ಅಂದ್ರಗೇರಿ ಕಾಡು ಪ್ರದೇಶದಲ್ಲಿದ್ದು ಜನರಲ್ಲಿ ಆತಂಕವನ್ನು ಉಂಟು ಮಾಡಿತ್ತು. ಆನೆಯನ್ನು ಬಂದ ದಾರಿಯಲ್ಲೆ ಸುರಕ್ಷಿತವಾಗಿ ಕಳುಹಿಸುವಲ್ಲಿ ದುಬಾರೆ ಆನೆ ಸಲಹಾ ಸಮಿತಿಯವರು ಪಟಾಕಿ ಸಿಡಿಸಿ ಆನೆಯನ್ನು ಬೆನ್ನಟ್ಟುತ್ತಿದ್ದರು.
Posted by Vidyamaana on 2024-04-03 16:35:43 |
ಈ ಬಾರಿ ದಕ್ಷಿಣ ಕನ್ನಡದಲ್ಲಿ ಮೂರುವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು : ಸಂಸದ ನಳಿನ್ ಕುಮಾರ್ ಕಟೀಲ್| ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆ
ಪುತ್ತೂರು: ಜಗತ್ತಿನಲ್ಲಿ ಶ್ರೇಷ್ಠ ಭಾರತವನ್ನು ನಿರ್ಮಾಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ನಾಯಕರಾಗಿ ಹೊರಹೊಮ್ಮಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 400 ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಸಂಸದ, ರಾಜಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳವಾರ ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಸ್ವಾಮಿ ಕಲಾಮಂದಿರದಲ್ಲಿ ಪುತ್ತೂರು ಬಿಜೆಪಿ ವಿಧಾನಸಭಾ ವತಿಯಿಂದ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದ್ದು, ಭಾರತೀಯ ಜನತಾ ಪಾರ್ಟಿಯ ಕನಸುಗಳು ನನಸಾಗುವ ಕಾಲಘಟ್ಟದಲ್ಲಿದ್ದು, ಮುಂದಿನ ಪ್ರಧಾನಿಯಾಗಿ ನರೇಂದ್ರ ಮೋದಿ ಶತಸಿದ್ಧ ಎಂದು ಹೇಳಿದ ಅವರು, ಕಳೆದ ಬಾರಿ 2.70 ಲಕ್ಷ ಮತಗಳಿಂದ ಸಂಸದನಾಗಿ ನಾನು ಆಯ್ಕೆಯಾಗಿದ್ದು, ಈ ಬಾರಿ ದಕ್ಷಿಣ ಕನ್ನಡದಲ್ಲಿ ಮೂರುವರೆ ಲಕ್ಷಕ್ಕೂ ಅಧಿಕ ಮತಗಳ ಜತೆಗೆ ಪುತ್ತೂರಿನಲ್ಲಿ 70 ಸಾವಿರ ಮತಗಳ ಅಂತರದಲ್ಲಿ ಬ್ರಿಜೇಶ್ ಚೌಟರನ್ನು ಗೆಲ್ಲಿಸಿಕೊಡುವ ಪ್ರಯತ್ನವನ್ನು ನಾವೆಲ್ಲರೂ ಒಟ್ಟಾಗಿ ಮಾಡೋಣ ಎಂದರು.