ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ವೇಣೂರು ಪಟಾಕಿ ಘಟಕದಲ್ಲಿ ಸ್ಫೋಟ ಪ್ರಕರಣ ; ಕೇರಳದ ಇಬ್ಬರು, ಹಾಸನದ ಒಬ್ಬ ಸಾವು, ಆರು ಮಂದಿಗೆ ಗಂಭೀರ ಗಾಯ

Posted by Vidyamaana on 2024-01-29 07:59:38 |

Share: | | | | |


ವೇಣೂರು ಪಟಾಕಿ ಘಟಕದಲ್ಲಿ ಸ್ಫೋಟ ಪ್ರಕರಣ ; ಕೇರಳದ ಇಬ್ಬರು, ಹಾಸನದ ಒಬ್ಬ ಸಾವು, ಆರು ಮಂದಿಗೆ ಗಂಭೀರ ಗಾಯ

ಬೆಳ್ತಂಗಡಿ : ವೇಣೂರಿನ ಪಟಾಕಿ ತಯಾರಿ ಘಟಕದಲ್ಲಿ ನಡೆದ ಸ್ಪೋಟ ಘಟನೆಯಲ್ಲಿ ಮೃತಪಟ್ಟ ಮೂವರ ಗುರುತು ಪತ್ತೆಯಾಗಿದೆ.  ಸ್ಪೋಟ ಘಟನೆಯಲ್ಲಿ ಆರು ಜನ ಕಾರ್ಮಿಕರು ಗಾಯಗೊಂಡಿದ್ದಾರೆ.


ಮೃತರನ್ನು ಕೇರಳ ಮೂಲದ ಸ್ವಾಮಿ(55), ವರ್ಗಿಸ್ (68),  ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಎಂಬವರು ಗಾಯಗೊಂಡಿದ್ದಾರೆ. ಸ್ಥಳೀಯ ಕುಕ್ಕೇಡಿ ಗ್ರಾಮದ ನಿವಾಸಿ ಬಶೀರ್ ಎಂಬವರಿಗೆ ಸೇರಿದ ಜಾಗದಲ್ಲಿ ಪಟಾಕಿ ತಯಾರಿಕೆ ನಡೆಸುತ್ತಿದ್ದರು.‌ ಒಟ್ಟು 9 ಮಂದಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದಾಗ ಸಂಜೆಯ ವೇಳೆಗೆ ಬ್ಲಾಸ್ಟ್ ಆಗಿದೆ. ಸಾಲಿಡ್ ಫೈರ್ ವರ್ಕ್ ಎಂದು ಹೆಸರಿನ ಈ ಘಟಕದಲ್ಲಿ ಸ್ಫೋಟಕ ತಯಾರಿಗೆ ಸಾಕಷ್ಟು ಕಚ್ಚಾ ಸಾಮಗ್ರಿ ತಂದಿಡಲಾಗಿತ್ತು. ಈ ವೇಳೆ, ಸ್ಫೋಟ ಸಂಭವಿಸಿದೆ. ಘಟನೆ ನಡೆದ ಜಾಗ ವೇಣೂರು ಠಾಣೆ ವ್ಯಾಪ್ತಿಯಲ್ಲಿ ಬರುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಪಿ ರಿಷ್ಯಂತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. 


ಸ್ಫೋಟ ಘಟನೆಯಲ್ಲಿ ಇಬ್ಬರು ಸೊಂಟದಿಂದ ಕೆಳಗಿನ ಭಾಗ ಪೂರ್ತಿ ಕರಕಲಾಗಿದೆ. ಕೈಕಾಲು ಛಿದ್ರಗೊಂಡು ಹೊರಗಡೆ ಬಿದ್ದಿದ್ದರು. ಕಟ್ಟಡದ ಹೊರಭಾಗದಲ್ಲಿ ಸ್ಫೋಟ ಸಂಭವಿಸಿದ್ದು ಒಳಗಿದ್ದ ಗೋದಾಮಿಗೆ ಬೆಂಕಿ ಹತ್ತಿಕೊಂಡಿಲ್ಲ.

ಅತಿಯಾಗಿ ಸೆಕ್ಸ್​​ಗೆ ಒತ್ತಾಯಿಸಿದಕ್ಕೆ ಇನ್​​ಸ್ಟಾ ಗೆಳತಿ ಕಥೆಯನ್ನೇ ಮುಗಿಸಿದ್ದ ಆರೋಪಿ ನವೀನ್ ಅರೆಸ್ಟ್

Posted by Vidyamaana on 2024-04-23 15:24:20 |

Share: | | | | |


ಅತಿಯಾಗಿ ಸೆಕ್ಸ್​​ಗೆ ಒತ್ತಾಯಿಸಿದಕ್ಕೆ ಇನ್​​ಸ್ಟಾ ಗೆಳತಿ ಕಥೆಯನ್ನೇ ಮುಗಿಸಿದ್ದ ಆರೋಪಿ ನವೀನ್ ಅರೆಸ್ಟ್

ಬೆಂಗಳೂರು : ರಾಜಧಾನಿ ಬೆಂಗಳೂರಿನ (Bengaluru) ಕೊಡಿಗೇಹಳ್ಳಿ ಒಂಟಿ ಮಹಿಳೆ (Single Women) ಹತ್ಯೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದ್ದು, ಮನೆಯಲ್ಲೇ ಮಹಿಳೆಯನ್ನು ಕೊಲೆ ಮಾಡಿ (Murder Case) ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು (Kodigenahalli Police) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೇರೋಹಳ್ಳಿ ಮೂಲದ ನವೀನ್ ಬಂಧಿತ ಆರೋಪಿಯಾಗಿದ್ದು, ಏಪ್ರಿಲ್ 19ನೇ ತಾರೀಖು 48 ವರ್ಷದ ಶೋಭಾ ಎಂಬ ಮಹಿಳೆಯ ಮೃತದೇಹ ನಗ್ನಸ್ಥಿತಿಯಲ್ಲಿ ಪತ್ತೆಯಾಗಿತ್ತು.


ಆರೋಪಿ ನವೀನ್​​ ಸಾಮಾಜಿಕ ಜಾಲತಾಣ ಇನ್​​ಸ್ಟಾದಲ್ಲಿ ಮೃತ ಮಹಿಳೆ ಶೋಭಾರನ್ನು ಪರಿಚಯ ಮಾಡಿಕೊಂಡಿದ್ದನಂತೆ. ಇಬ್ಬರ ನಡುವಿನ ಸ್ನೇಹ ಕೆಲ ದಿನಗಳ ಬಳಿಕ ಅನೈತಿಕ ಸಂಬಂಧಕ್ಕೆ ತಿರುಗಿತ್ತು ಎನ್ನಲಾಗಿದೆ. ಕೊಲೆ ನಡೆದ ದಿನವೂ ಮಹಿಳೆ ಮನೆಗೆ ನವೀನ್​ ಬಂದಿದ್ದನಂತೆ. ಈ ವೇಳೆ ಅತಿಯಾಗಿ ಸೆಕ್ಸ್ ಗೆ ಒತ್ತಾಯಿಸುತ್ತಿದ್ದರಿಂದ ಬೇಸರಗೊಂಡು ಮಹಿಳೆಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿಯನ್ನ ಬಂಧಿಸಿರುವ ಕೊಡಿಗೇಹಳ್ಳಿ ಠಾಣೆ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಆ. 30 : ಅಕ್ಷಯ ಕಾಲೇಜಿನಲ್ಲಿ ಶ್ರಾವಣೋತ್ಸವಂ ಓಣಂ ಆಚರಣೆ

Posted by Vidyamaana on 2023-08-29 06:30:48 |

Share: | | | | |


ಆ. 30 : ಅಕ್ಷಯ ಕಾಲೇಜಿನಲ್ಲಿ ಶ್ರಾವಣೋತ್ಸವಂ ಓಣಂ ಆಚರಣೆ

ಪುತ್ತೂರು: ಇಲ್ಲಿನ ಅಕ್ಷಯ ಕಾಲೇಜಿನ ಸಾಂಸ್ಕೃತಿಕ ಸಂಘ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಆಗಸ್ಟ್ 30ರಂದು ಬೆಳಿಗ್ಗೆ 10.30ಕ್ಕೆ ಕಾಲೇಜು ಆವರಣದಲ್ಲಿ ಶ್ರಾವಣೋತ್ಸವಂ ಓಣಂ ಆಚರಣೆ ಕಾರ್ಯಕ್ರಮ ನಡೆಯಲಿದೆ.

ಪ್ರಗತಿ ಎಜುಕೇಷನಲ್ ಫೌಂಡೇಷನಿನ ಸ್ಥಾಪಕ ಅಧ್ಯಕ್ಷ ಗೋಕುಲ್’ನಾಥ್ ಪಿ.ವಿ. ಕಾರ್ಯಕ್ರಮ ಉದ್ಘಾಟಿಸುವರು. ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ಅಧ್ಯಕ್ಷತೆ ವಹಿಸುವರು.

ಸಾಂಸ್ಕೃತಿಕ ಸಂಘದ ಸಂಯೋಜಕಿ ದೀಕ್ಷಾ ರೈ, ಐಕ್ಯೂಎಸಿ ಸಂಯೋಜಕ ರಾಕೇಶ್ ಕುಳದಪಾರೆ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ., ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

Posted by Vidyamaana on 2023-10-14 14:19:51 |

Share: | | | | |


ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬಳ್ಳಾರಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಕೊಪ್ಪಳಕ್ಕೆ ಕರೆತಂದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿದ ಕಿರಾತಕರು ಕೊಪ್ಪಳದ ಸಣಾಪುರ ಬಳಿಯ ಹೋಟೆಲ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.ಈ ಸಂಬಂಧ ನವೀನ್, ಸಾಕೀವ್, ತನು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.


ಯುವತಿ ಬಳ್ಳಾರಿಯ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ನಿಮ್ಮ ಅಣ್ಣ ಬಂದಿದ್ದಾನೆಂದು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಹೊರಕ್ಕೆ ಕರೆಯಿಸಿ ನಂತರ ಆಟೋದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾರೆ. ನಂತರ ಕೊಪ್ಪಳ ಜಿಲ್ಲೆಯ ಸಣಾಪುರ ಬಳಿಯ ಕೆಫೆ ಹೋಟೆಲ್ ಗೆ ಕರೆದೊಯ್ದು ಬಿಯರ್ ಕುಡಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ನವೆಂಬರ್ 25– 26ರಂದು ಬೆಂಗಳೂರು ಕಂಬಳ: 125ಕ್ಕೂ ಅಧಿಕ ಜೋಡಿ ಕೋಣಗಳು ಭಾಗಿ:ಅಶೋಕ್ ಕುಮಾರ್ ರೈ

Posted by Vidyamaana on 2023-10-01 07:48:11 |

Share: | | | | |


ನವೆಂಬರ್ 25– 26ರಂದು ಬೆಂಗಳೂರು ಕಂಬಳ: 125ಕ್ಕೂ ಅಧಿಕ ಜೋಡಿ ಕೋಣಗಳು ಭಾಗಿ:ಅಶೋಕ್ ಕುಮಾರ್ ರೈ

ಮಂಗಳೂರು: ‘ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಂಬರುವ ನ.25 ಮತ್ತು 26ರಂದು ನಡೆಯಲಿರುವ ಕಂಬಳದಲ್ಲಿ 125 ಜೋಡಿಯಿಂದ 130 ಜೋಡಿ ಕೋಣಗಳು ಭಾಗವಹಿಸಲಿವೆ. ಈ ಕೋಣಗಳನ್ನು ನ. 23ರಂದು ಇಲ್ಲಿಂದ ಬೆಂಗಳೂರಿಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ’ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ ಕುಮಾರ್‌ ರೈ ತಿಳಿಸಿದರು.


ಬೆಂಗಳೂರು ಕಂಬಳಕ್ಕೆ ಕೋಣಗಳನ್ನು ಕೊಂಡೊಯ್ಯುವ ಕುರಿತು ಅವುಗಳನ್ನು ಸಾಕುವ ಯಜಮಾನರ ಜೊತೆ ಇಲ್ಲಿ ಶನಿವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು.ಕಂಬಳ ಕೋಣಗಳನ್ನು ಸಾಕುವ 130 ಯಜಮಾನರು ಬೆಂಗಳೂರು ಕಂಬಳದಲ್ಲಿ ಭಾಗವಹಿಸಲು ಸಮ್ಮತಿಸಿದ್ದಾರೆ. ಕೋಣಗಳನ್ನು ಲಾರಿಗಳಲ್ಲಿ ಕೊಂಡೊಯ್ಯಲಾಗುತ್ತದೆ. ಪಶು ಆಂಬುಲೆನ್ಸ್‌ಗಳು ಹಾಗೂ ಪಶುವೈದ್ಯರು ಜೊತೆಯಲ್ಲೇ ಇರುತ್ತಾರೆ. ಬೆಂಗಾವಲು ವಾಹನಗಳನ್ನೂ ಒದಗಿಸಲಿದ್ದೇವೆ. ಮೆರವಣಿಗೆ ಮೂಲಕ ಸಾಗುವ ಈ ಕೋಣಗಳಿಗೆ ಹಾಸನದಲ್ಲಿ ಎರಡು ಗಂಟೆ ವಿಶ್ರಾಂತಿ ಒದಗಿಸಲಾಗುತ್ತದೆ. ಅಲ್ಲಿ ತುಳುಕೂಟದವರು ಈ ಕೋಣಗಳನ್ನು ಬರಮಾಡಿಕೊಳ್ಳಲಿದ್ದಾರೆ’ ಎಂದರು.


‘ಕೋಣಗಳಿಗೆ ಕಂಬಳಕ್ಕೆ ಮುನ್ನ ಒಂದು ದಿನದ ವಿಶ್ರಾಂತಿ ಸಿಗಲಿದೆ. ಕೋಣಗಳು ಹಾಗೂ ಅವುಗಳ ಯಜಮಾನರು ಉಳಿದುಕೊಳ್ಳುವುದಕ್ಕೆ ಬೆಂಗಳೂರಿನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಕೋಣಗಳಿಗೆ ಕುಡಿಯುವ ನೀರು ಹಾಗೂ ಮೇವುಗಳನ್ನೂ ಇಲ್ಲಿಂದಲೇ ಕೊಂಡೊಯ್ಯಲಾಗುತ್ತದೆ. ಕಂಬಳಕ್ಕೂ ನಾಲ್ಕೈದು ದಿನ ಮುನ್ನವೇ ತಜ್ಞರು ಕರೆ ಯೋಗ್ಯವಾಗಿದೆಯೇ ಎಂಬುದನ್ನು ಪರಿಕ್ಷಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.


ತಾರಾ ಮೆರುಗು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬಳವನ್ನು ಉದ್ಘಾಟಿಸಲು ಒಪ್ಪಿದ್ದಾರೆ. ಬೆಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಹಿತ ಅನೇಕ ಸಚಿವರು, ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಬೆಂಗಳೂರು ಕಂಬಳದಲ್ಲಿ ತಾರಾ ಮೆರುಗು ಇರಲಿದೆ. ನಟಿ ಐಶ್ವರ್ಯ ರೈ ಹಾಗೂ ನಟ ರಜನಿಕಾಂತ್‌ ಅವರನ್ನು ಸಂಪರ್ಕಿಸಲಾಗಿದ್ದು, ಅವರೂ ಭಾಗವಹಿಸುವ ನಿರೀಕ್ಷೆ ಇದೆ.ಬಾಲಿವುಡ್‌ ಹಾಗೂ ಸ್ಯಾಂಡರ್‌ವುಡ್‌ನ ಖ್ಯಾತ ತಾರೆಯರು ಭಾಗವಹಿಸಲಿದ್ದಾರೆ. ನಟ ರಿಷಬ್‌ ಶೆಟ್ಟಿ, ಅನುಷ್ಕಾ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್‌ ಭಾಗವಹಿಸಲು ಒಪ್ಪಿದ್ದಾರೆ. ಈ ಕಂಬಳದ ನೇರ ಪ್ರಸಾರಕ್ಕೆ ಸ್ಪೋರ್ಟ್ಸ್ ಚಾನೆಲ್‌ಗಳು ಸಂಪರ್ಕಿಸಿವೆ’ ಎಂದರು.


‘ತಮ್ಮ ಹೆಸರಿನಲ್ಲಿ ಕಂಬಳ ಕೋಣ ಓಡಿಸುವಂತೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌, ಸಚಿವ ಡಾ.ಎಂ.ಸಿ.ಸುಧಾಕರ್‌ ಕೋರಿದ್ದರೆ. ಸಾಮಾನ್ಯವಾಗಿ ಕಂಬಳ ಕೋಣಗಳ ಮಾಲೀಕರು ತಮ್ಮ ಕೋಣಗಳನ್ನು ಬೇರೆಯವರ ಹೆಸರಿನಲ್ಲಿ ಒಡಿಸುವುದನ್ನು ಇಷ್ಟಪಡುವುದಿಲ್ಲ. ಅವರು ಒಪ್ಪಿದರೆ ಅವಕಾಶ ಕಲ್ಪಿಸುತ್ತೇವೆ’ ಎಂದು ತಿಳಿಸಿದರು.


‘ಕಂಬಳವನ್ನು 7 ಲಕ್ಷದಿಂದ 9 ಲಕ್ಷ ಮಂದಿ ವೀಕ್ಷಿಸುವ ನಿರೀಕ್ಷೆ ಇದೆ. ಅದಕ್ಕೆ ಪೂರಕ ಸೌಕರ್ಯಗಳನ್ನು ಕಲ್ಪಿಸುತ್ತಿದ್ದೇವೆ. 2 ಸಾವಿರ ಅತಿಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. 145 ಮೀ ಉದ್ದದ ಕಂಬಳದ ಕರೆ ನಿರ್ಮಿಸಲಾಗುತ್ತದೆ. ಸುಮಾರು 15 ಸಾವಿರ ಆಸನಗಳ ಗ್ಯಾಲರಿನಿರ್ಮಾಣವಾಗಲಿದೆ. 6 ಸಾವಿರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಕರಾವಳಿಯ ಸೊಗಡನ್ನು ಬಿಂಬಿಸುವ 150ಕ್ಕೂ ಹೆಚ್ಚು ಪ್ರದರ್ಶನ ಮಳಿಗೆಗಳನ್ನು ಸ್ಥಾಪಿಸಲಾಗುತ್ತದೆ. ಅವುಗಳಲ್ಲಿ ಕರಾವಳಿ ಶೈಲಿಯ ಆಹಾರಗಳು, ಇಲ್ಲಿನ ಕರಕುಶಲ ಪರಿಕರಗಳು, ಇಲ್ಲಿನ ಆಹಾರ ಸಿದ್ಧ ತಿನಿಸುಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ’ ಎಂದರು.


‘ಕಾನೂನು ಚೌಕಟ್ಟಿನಡಿಯಲ್ಲೇ ಕಂಬಳ ನಡೆಯಲಿದ್ದು, ಈ ಕುರಿತ ಸುಪ್ರೀಂ ಕೋರ್ಟ್ ಆದೇಶ ಪಾಲನೆಗೂ ಆದ್ಯತೆ ನೀಡಲಿದ್ದೇವೆ. ಈ ಕಂಬಳಕ್ಕೆ ₹ 6 ಕೋಟಿ ವೆಚ್ಚವಾಗುವ ನಿರೀಕ್ಷೆ ಇದೆ. ಸರ್ಕಾರದಿಂದಲೂ ನೆರವು ಕೋರುತ್ತೇವೆ. ಕರಾವಳಿಯ ಈ ಕ್ರೀಡೆಗೆ ಜಗದ್ವಿಖ್ಯಾತವಾಗದಬೇಕು ಎಂಬ ಆಶಯ ನಮ್ಮದು. ಬೆಂಗಳೂರಿನಲ್ಲಿ 1 ಎಕರೆ ವಿಶಾಲ ಪ್ರದೇಶದಲ್ಲಿ ತುಳುಭವನ, ಪಿಲಿಕುಳದಲ್ಲಿ ಕಂಬಳ ಭವನ ನಿರ್ಮಿಸುವ ಉದ್ದೇಶವಿದ್ದು, ಈ ಕುರಿತು ಸರ್ಕಾರಕ್ಕೆ ಬೇಡಿಕೆ ಸಲ್ಲಿಸುತ್ತೇವೆ’ ಎಂದರು.


ತುಳು ಮತ್ತು ಕನ್ನಡ ಭಾಷೆಗಳೆರಡರಲ್ಲೂ ಕಂಬಳದ ಧಾಟಿಯಲ್ಲೇ ವೀಕ್ಷಕ ವಿವರಣೆ ನೀಡಲಾಗುತ್ತದೆ. ಭಾಗವಹಿಸುವ ಎಲ್ಲ ಕೋಣಗಳಿಗೂ ಮೆಡಲ್, ಅವುಗಳನ್ನು ಓಡಿಸಿದವರಿಗೆ ಪ್ರಮಾಣಪತ್ರ ನೀಡಲಿದ್ದೇವೆ. ಮೊದಲ ಬಹುಮಾನ ಗೆದ್ದ ಕೋಣಗಳಿಗೆ ಎರಡು ಪವನ್‌ (16 ಗ್ರಾಂ) ಚಿನ್ನ, ದ್ವಿತೀಯ ಸ್ಥಾನ ಪಡೆದ ಕೋಣಗಳಿಗೆ ಒಂದು ಪವನ್ (8 ಗ್ರಾಂ) ಚಿನ್ನ ನೀಡಲಿದ್ದೇವೆ’ ಎಂದು ಮಾಹಿತಿ ನೀಡಿದರು.


ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ‘ಯಜಮಾನರು ಕೋಣಗಳನ್ನು ಬಹಳ ಜತನವಾಗಿ ಸಾಕಿರುತ್ತಾರೆ. ಹಾಗಾಗಿ ಬೆಂಗಳೂರಿಗೆ ಅವುಗಳನ್ನು ಕೊಂಡೊಯ್ಯುವಾಗ ಸಮಸ್ಯೆ ಆಗದಂತೆ ನೋಡಿಕೊಳ್ಳುವಂತೆ ಕೋರಿದ್ದಾರೆ. ಸಮಿತಿ ವ್ಯವಸ್ಥೆ ಕಲ್ಪಿಸಲಿದೆ’ ಎಂದರು.


ದ.ಕ. ಜಿಲ್ಲಾ ಕಂಬಳ ಸಮಿತಿಯ ಗೌರವಾಧ್ಯಕ್ಷ ಬಾರ್ಕೂರು ಶಾಂತಾರಾಮ ಶೆಟ್ಟಿ, ಪದಾಧಿಕಾರಿಗಳಾದ ಚಂದ್ರಹಾಸಸಾಧು ಸನಿಲ್, ವಿಜಯ ಕುಮಾರ್ ಜೈನ್‌, ಮುರಳೀಧರ ರೈ, ರೋಹಿತ್‌ ಹೆಗ್ಡೆ, ಲೋಕೇಶ್‌ ಶೆಟ್ಟಿ ಮುಚ್ಚೂರು ಮತ್ತಿತರರು ಇದ್ದರು.

ಬಂಟ್ವಾಳ : ಮಧ್ವದಲ್ಲಿ ಬಳಿ ಬೈಕ್ ಕಾರು ಅಪಘಾತ ಬೈಕ್ ಸಾವರ ಬೆಳ್ತಂಗಡಿಯ ಪ್ರದೀಶ್ ಶೆಟ್ಟಿ ಮೃತ್ಯು

Posted by Vidyamaana on 2024-02-01 20:44:55 |

Share: | | | | |


ಬಂಟ್ವಾಳ : ಮಧ್ವದಲ್ಲಿ ಬಳಿ ಬೈಕ್ ಕಾರು ಅಪಘಾತ   ಬೈಕ್ ಸಾವರ ಬೆಳ್ತಂಗಡಿಯ ಪ್ರದೀಶ್ ಶೆಟ್ಟಿ ಮೃತ್ಯು

ಬೆಳ್ತಂಗಡಿ : ಕಾರು ಮತ್ತು ಬೈಕ್ ಅಪಘಾತದಲ್ಲಿ ಬೈಕ್ ಸವಾರ ಬೆಳ್ತಂಗಡಿಯ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ಬಂಟ್ವಾಳ ತಾಲೂಕಿನ ಮಧ್ವದಲ್ಲಿ ನಡೆದಿದೆ.


ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು. ಇದರಲ್ಲಿ ಬೈಕ್ ಸವಾರ ಬೆಳ್ತಂಗಡಿಯ ರಮೇಶ್ ಶೆಟ್ಟಿ ಮತ್ತು ಪ್ರೇಮ ದಂಪತಿಯ ಎರಡನೇ ಪುತ್ರ ಪ್ರದೀಶ್ ಶೆಟ್ಟಿ(27) ಎಂಬಾತ ಸಾವನ್ನಪ್ಪಿದ ಯುವಕ.


ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಬೈಕ್ಕಿನಲ್ಲಿ  ಬರುತಿದ್ದ ವೇಳೆ ಮಂಗಳೂರು ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆ ಎಂಬಲ್ಲಿ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ  ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. 


ಪ್ರದೀಶ್ ಶೆಟ್ಟಿ ಬೆಳ್ತಂಗಡಿಯ ಮುತ್ತೂಟ್ಟು ಫೈನಾನ್ಸ್ ಸಂಸ್ಥೆಯೊಂದರಲ್ಲಿ ನೌಕರಿಯಲ್ಲಿದ್ದು. ಸಂಸ್ಥೆಯ ಕೆಲಸಕ್ಕಾಗಿ ಮಂಗಳೂರಿಗೆ ತೆರಳಿದ್ದ ಎನ್ನಲಾಗಿದೆ. ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Leave a Comment: