ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 01

Posted by Vidyamaana on 2023-06-30 23:09:08 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 01

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಜುಲೈ 01 ರಂದು...

 ಬೆಳಿಗ್ಗೆ 10 ಗಂಟೆಗೆ ಸರ್ವೆ ವಲಯ ಕಾರ್ಯಕರ್ತರ ಸಭೆ

12.30 ತಾಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ ದಿನಾಚರಣೆ

ಮದ್ಯಾಹ್ನ 3 ಗಂಟೆ ನರಿಮೊಗರು ವಲಯ ಕಾರ್ಯಕರ್ತರ ಸಭೆ

ಸಂಜೆ 5 ಕುರಿಯದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಗಮನಿಸಿ: ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಸುಲಭವಾದ ಉಪಾಯ ಇಲ್ಲಿದೆ!

Posted by Vidyamaana on 2024-02-28 04:33:22 |

Share: | | | | |


ಗಮನಿಸಿ: ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಸುಲಭವಾದ ಉಪಾಯ ಇಲ್ಲಿದೆ!

ಸೆಳ್ಳೆಗಳ ಕಾಟ ಅಷ್ಟಿಷ್ಟಲ್ಲ. ಸಂಜೆ ಆಯಿತೆಂದರೆ ಅದೆಲ್ಲಿಂದ ಬರುತ್ತವೆಯೋ ಮನೆಯೊಳಗೆ ನುಗ್ಗಿ ಮನೆಮಂದಿಗೆಲ್ಲ ಹಿಂಸೆ ನೀಡಲಾರಂಭಿಸುತ್ತವೆ. ಇವುಗಳಿಂದ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಕೂಡ ಹೆಚ್ಚು. ಕೆಲವೊಮ್ಮೆ ಇವು ಮಾರಣಾಂತಿಕ ಕೂಡ ಹೌದು.ಇವುಗಳನ್ನು ನಿಯಂತ್ರಿಸಲು ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್‌ ಕ್ವಾಯಿಲ್‌ಗಳನ್ನು ಬಳಸಲಾಗುತ್ತದೆ. ಇದರಿಂದ ಸೊಳ್ಳೆಗಳು ನಿಯಂತ್ರಣಕ್ಕೇನೋ ಬರುತ್ತವೆ. ಆದರೆ ಈ ಕೆಮಿಕಲ್‌ ಹೊಗೆ ಅಥವಾ ವಾಸನೆ ಮನುಷ್ಯನ ಶ್ವಾಶಕೋಶಕ್ಕೆ ತುಂಬಾ ಡೇಂಜರ್‌. ಇದು ಮನುಷ್ಯನ ಆರೋಗ್ಯದ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಯಾವುದೇ ಕೆಮಿಕಲ್‌ ಇಲ್ಲದೆ ನೈಸರ್ಗಿಕವಾಗಿ ಸೊಳ್ಳೆಗಳು ಮನೆಯೊಳಗೆ ಬರದಂತೆ ಕೆಲ ಉಪಾಯಗಳಿವೆ. ತಿಳಿದುಕೊಳ್ಳಿ.


ನಾವಿಂದು ಹೇಳುವ ಮನೆಮದ್ದು ಸೊಳ್ಳೆಗಳನ್ನು ನಿಯಂತ್ರಿಸಬಹುದು ಮತ್ತು ಇದರ ಹೊಗೆ ದೇಹಕ್ಕೆ ಯಾವುದೇ ತೊಂದರೆ ನೀಡದೇ ನಿಮ್ಮ ಉಸಿರಾಟಕ್ಕೂ ಔಷಧಿ ರೂಪದಲ್ಲಿ ಕೆಲಸ ಮಾಡುತ್ತದೆ. ಸೊಳ್ಳೆಗಳ ಕಾಟದಿಂದ ಮುಕ್ತಿಹೊಂದಲು ಬೇಕಾಗುವ ಸಾಮಗ್ರಿಗಳು

ಕರ್ಪೂರ, ಬೆಳ್ಳುಳ್ಳಿ, ತುಪ್ಪ, ಅಥವಾ ಕೊಬ್ಬರಿ ಎಣ್ಣೆ ಹಾಗು ಒಂದು ಮಣ್ಣಿನ ಬಟ್ಟಲು.

ಮೊದಲು ಒಂದು ಅರೆಯುವ ಕಲ್ಲಿಗೆ ಆರೇಳು ಎಸಳು ಬೆಳ್ಳುಳ್ಳು ಹಾಕಿಕೊಳ್ಳಿ, ಇದಕ್ಕೆ ಎರಡು ಕರ್ಪೂರ ಹಾಕಿ ಎರಡನ್ನೂ ಚೆನ್ನಾಗಿ ಜಜ್ಜಿಕೊಳ್ಳಿ. ಜಜ್ಜಿಕೊಂಡ ಈ ಮಿಶ್ರಣವನ್ನು ಒಂದು ಮಣ್ಣಿನ ಬಟ್ಟಲಿಗೆ ಹಾಕಿಕೊಳ್ಳಿ. ಇದಕ್ಕೆ ಸ್ವಲ್ಪ ಕೊಬ್ಬರಿ ಎಣ್ಣೆ ಅಥವಾ ತುಪ್ಪ ಹಾಕಿ ಬೇಕಿದ್ದರೆ ಇನ್ನಷ್ಟು ಕರ್ಪೂರ ಹಾಕಿ. ನಂತರ ಇದಕ್ಕೆ ಬೆಂಕಿ ಹಾಕಿ. ಬೆಂಕಿ ಹಾಕಿ ಹೊಗೆಯಾಡುತ್ತಿದ್ದಂತೆಯೇ ಮನೆಯಲ್ಲಾ ಈ ಹೊಗೆಯನ್ನು ಆಡಿಸಬೇಕು. ಮನೆಯ ಮೂಲೆ ಮೂಲೆಯಲ್ಲೂ ಇದರ ಹೋಗೆ ತಲುಪುವಂತೆ ನೋಡಿಕೊಳ್ಳಬೇಕು.ಸಂಜೆ ದೀಪ ಹಚ್ಚುವ ಸಮಯದಲ್ಲಿ ಹೀಗೆ ಮಾಡಿ. ಸೊಳ್ಳೆ ಬರುವ ಸಮಯದಲ್ಲಿ ಈ ಹೊಗೆಯಾಡಿಸಿದರೆ ಈ ಘಾಟಿನ ಹೊಗೆಗೆ ಸೊಳ್ಳೆ ಅಪ್ಪಿತಪ್ಪಿಯೂ ನಿಮ್ಮ ಮನೆಯೊಳಗೆ ನುಗ್ಗುವುದಿಲ್ಲ. ಇನ್ನು ಇದರ ಹೊಗೆ ನಿಮ್ಮ ಆರೋಗ್ಯಕ್ಕೂ ಒಳ್ಳೆಯದು. ಇದರಿಂದ ಯಾವುದೇ ಸೈಡ್‌ ಎಫೆಕ್ಟ್‌ ಇಲ್ಲ. ಒಮ್ಮೆ ಟ್ರೈ ಮಾಡಿ ನೋಡಿ.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

ಚಿತ್ರದುರ್ಗ: ಐವರ ಅಸ್ಥಿಪಂಜರ ಪತ್ತೆ, FSL ವರದಿಯಲ್ಲಿ ಸ್ಫೋಟಕ ಅಂಶ ಬೆಳಕಿಗೆ

Posted by Vidyamaana on 2024-05-17 07:19:54 |

Share: | | | | |


ಚಿತ್ರದುರ್ಗ: ಐವರ ಅಸ್ಥಿಪಂಜರ ಪತ್ತೆ, FSL ವರದಿಯಲ್ಲಿ ಸ್ಫೋಟಕ ಅಂಶ ಬೆಳಕಿಗೆ

ಚಿತ್ರದುರ್ಗ, ಮೇ.17: ನಗರದ ಚಳ್ಳಕೆರೆ (Challakere) ಗೇಟ್​ ಸಮೀಪದ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಜಗನ್ನಾಥರೆಡ್ಡಿ ಎಂಬುವವರ ಮನೆಯಲ್ಲಿ 2023ರ ಡಿಸೆಂಬರ್ 28ರಂದು ನಿವೃತ್ತ ಇಂಜಿನಿಯರ್ ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣಾರೆಡ್ಡಿ ಹಾಗೂ ನರೇಂದ್ರರೆಡ್ಡಿ ಸೇರಿದಂತೆ ಐವರ ಅಸ್ಥಿಪಂಜರ (Skeleton) ಪತ್ತೆಯಾಗಿದ್ದವು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್(FSL) ರಿಪೋರ್ಟ್ ಬಂದಿದ್ದು, ಚಿತ್ರದುರ್ಗ ಪೊಲೀಸರ ಕೈ ಸೇರಿದೆ. ಈ ವರದಿಯಲ್ಲಿ ಸಾವಿನ ಕುರಿತು ಸತ್ಯಾಂಶ ಬಯಲಾಗಿದೆ.

ಎಸ್ಪಿ ಹೇಳಿದ್ದಿಷ್ಟು

ಇನ್ನು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಚಿತ್ರದುರ್ಗ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ, 5 ಅಸ್ಥಿಪಂಜರ ಸಿಕ್ಕ ತಕ್ಷಣ, ಪೂರ್ತಿ ಮನೆ ಅಸ್ತವ್ಯಸ್ತತೆಯಲ್ಲಿತ್ತು. ಕೂಡಲೇ ಎಫ್‌ಎಸ್‌ಎಲ್ ಟೀಂ ಕರೆಸಿ ಸೂಕ್ತ ತನಿಖೆಗೆ ಆದೇಶ ನೀಡಲಾಯಿತು.

ತನಿಖಾ ತಂಡ ಹಾಗೂ FSL ತಂಡ ಸೇರಿ ಆ ಮನೆಯಿಂದ 71 ಸಾಕ್ಷ್ಯಗಳನ್ನು ಕಲೆ ಹಾಕಲಾಗಿತ್ತು. ಎಲ್ಲಾ ಸ್ಯಾಂಪಲ್ಸ್​ಗಳನ್ನು ದಾವಣಗೆರೆ, ಬೆಂಗಳೂರು ಲ್ಯಾಬೋರೇಟರಿಗೆ ಕಳುಹಿಸಲಾಗಿತ್ತು. ಇದು ತುಂಬಾ ಸೆನ್ಸಿಬಲ್ ಕೇಸ್ ಆಗಿದ್ದರಿಂದ ರಿಪೋರ್ಟ್ ತಡವಾಗಿ ಬಂದಿದೆ.

BREAKING : ದೇಶಾದ್ಯಂತ ಫೇಸ್ ಬುಕ್ ಸರ್ವರ್ ಡೌನ್ ಬಳಕೆದಾರರ ಪರದಾಟ

Posted by Vidyamaana on 2023-10-18 22:39:00 |

Share: | | | | |


BREAKING : ದೇಶಾದ್ಯಂತ ಫೇಸ್ ಬುಕ್  ಸರ್ವರ್ ಡೌನ್ ಬಳಕೆದಾರರ ಪರದಾಟ

ನವದೆಹಲಿ : ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಫೇಸ್ಬುಕ್ನ ಸರ್ವರ್ ಬುಧವಾರ ಸ್ಥಗಿತವನ್ನ ಅನುಭವಿಸಿದ್ದು, ಹಲವಾರು ಬಳಕೆದಾರರು ಹೊಸ ಪೋಸ್ಟ್ ಅಪ್ಲೋಡ್ ಮಾಡುವಲ್ಲಿ ಸಮಸ್ಯೆಗಳನ್ನ ವರದಿ ಮಾಡಿದ್ದಾರೆ.ಹೌದು, ಫೇಸ್ಬುಕ್ನ ಸರ್ವರ್ ಬುಧವಾರ ಸ್ಥಗಿತವನ್ನ ಅನುಭವಿಸಿದ್ದು, ಹಲವಾರು ಬಳಕೆದಾರರು ಹೊಸ ಪೋಸ್ಟ್ ಅಪ್ಲೋಡ್ ಮಾಡುವಲ್ಲಿ ಸಮಸ್ಯೆಗಳನ್ನ ವರದಿ ಮಾಡಿದ್ದಾರೆ.ಇನ್ನು ಸ್ಥಗಿತ ಟ್ರ್ಯಾಕಿಂಗ್ ವೆಬ್ಸೈಟ್ ಡೌನ್ಡೆಟೆಕ್ಟರ್, ಅಪ್ಲಿಕೇಶನ್ ಮತ್ತು ವೆಬ್ಸೈಟ್ ಎರಡಕ್ಕೂ ಸರ್ವರ್ ಸಂಪರ್ಕ ಸಮಸ್ಯೆಗಳಿಗೆ ಸಂಬಂಧಿಸಿದ ವರದಿಗಳ ಸಂಖ್ಯೆಯಲ್ಲಿ ಹಠಾತ್ ಏರಿಕೆಯನ್ನ ತೋರಿಸಿದೆ.

ಪುತ್ತೂರು ಅಕ್ರಮ ಸಕ್ರಮ ಸಮಿತಿ ರಚಿಸಿ ಸರಕಾರದ ಆದೇಶ

Posted by Vidyamaana on 2023-09-14 21:54:25 |

Share: | | | | |


ಪುತ್ತೂರು ಅಕ್ರಮ ಸಕ್ರಮ ಸಮಿತಿ ರಚಿಸಿ ಸರಕಾರದ ಆದೇಶ

ಮಂಗಳೂರು: ದ.ಕ. ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ(ಅಕ್ರಮ ಸಕ್ರಮ) ಸಮಿತಿಯನ್ನು ರಚಿಸಿ ಸರಕಾರ ಆದೇಶ ಹೊರಡಿಸಿದೆ.ಸಮಿತಿಯ ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಸಾಮಾನ್ಯ ಸದಸ್ಯರಾಗಿ ಎಂ ಮಹಮ್ಮದ್ ಬಡಗನ್ನೂರು, ಮಹಿಳಾ ಸದಸ್ಯರಾಗಿ ಶ್ರೀಮತಿ ರೂಪರೇಖಾ ಆಳ್ವ, ಪರಿಶಿಷ್ಟ ಜಾತಿ ಪ್ರವರ್ಗದಿಂದ ರಾಮಣ್ಣ ಪಿಲಿಂಜ, ಸದಸ್ಯ ಕಾರ್ಯದರ್ಶಿಯಾಗಿ ತಾಲೂಕಿನ ತಹಶೀಲ್ದಾರ್ ಅವರನ್ನು ನಾಮನಿರ್ದೇಶನ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಸಿಎಂ-ಡಿಸಿಎಂ ನೋಡಿದ್ರೆ ಒಂದು ವರ್ಷ ಯಾರೂ ಅನುದಾನ ಕೇಳ್ಬೇಡಿ ಹೇಳ್ತಿದ್ದಾರೆ

Posted by Vidyamaana on 2024-03-21 20:48:00 |

Share: | | | | |


ಸಿಎಂ-ಡಿಸಿಎಂ ನೋಡಿದ್ರೆ ಒಂದು ವರ್ಷ ಯಾರೂ ಅನುದಾನ ಕೇಳ್ಬೇಡಿ ಹೇಳ್ತಿದ್ದಾರೆ

ಪುತ್ತೂರು: ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದು ಸುಮಾರು 300 ದಿವಸಗಳು ಆಗಿದ್ದು ಈ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ತಾವು ಚುನಾವಣೆ ಸಂದರ್ಭ ಘೋಷಿಸಿದ ಗ್ಯಾರಂಟಿಗಳಿಗೋಸ್ಕರ ಒಂದು ವರ್ಷದ ಅವಧಿಗೆ ಯಾವುದೇ ಅಭಿವೃದ್ಧಿ ಅನುದಾನ 2023-24ರ ಅವಧಿಗೆ ದೊರೆಯುವುದಿಲ್ಲ ಎಂದಿದ್ದಾರೆ. ಆದ್ದರಿಂದ ರಾಜ್ಯದ ಎಲ್ಲಾ ಶಾಸಕರು ಸಹಕಾರ ಮಾಡಬೇಕು ಎಂದು ವಿನಂತಿಸಿರುವ ಈ ಸಂದರ್ಭದಲ್ಲಿ ಬಹಳಷ್ಟು ಕಾಂಗ್ರೇಸ್ ಪಾರ್ಟಿಯ ಶಾಸಕರು ಅಪಸ್ವರ ಎಬ್ಬಿಸಿರುವ ವರದಿಯನ್ನು ಪತ್ರಿಕೆಗಳಲ್ಲಿ ನೋಡಿದ್ದೇವೆ. ಆದರೆ ಪುತ್ತೂರಿನ ಶಾಸಕರು, ಪುತ್ತೂರಿಗೆ ಹಣದ ಹೊಳೆಯೇ ಹರಿದು ಬಂದಿದೆ. ಶಿಲಾನ್ಯಾಸ ಮಾಡಲು ಸಮಯ ಇಲ್ಲದಷ್ಟು ಅನುದಾನ ಬಂದಿದೆ ಎಂದು ಹೇಳುತ್ತಾ ಪುತ್ತೂರಿನ ಪ್ರಜ್ಞಾವಂತ ಮತದಾರರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

ಪುತ್ತೂರಿಗೆ 1474.29 ಕೋಟಿ ಅನುದಾನ ಬಂದಿದೆ ಎಂದು ಬ್ಯಾನ‌ರ್ ಬರೆದು ಬಿಜೆಪಿ ಕಾರ್ಯಕರ್ತನ ಮನೆಗೆ ಚೆಂಡೆಯ ಶಬ್ದದೊಂದಿಗೆ ನುಗ್ಗಿ ದಾಂಧಲೆ ಎಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಹಾಲಿ ಶಾಸಕರು ಪ್ರಕಟಿಸಿರುವ ಬ್ಯಾನರ್‌ನಲ್ಲಿ ಮತ್ತು ಅವರು ಭಾಷಣಗಳಲ್ಲಿ ಘೋಷಿಸುವ ಅನುದಾನಗಳು ಪ್ರಸ್ತುತ ಅವರ ಅವಧಿಯಲ್ಲಿ ಬಿಡುಗಡೆಗೊಂಡ ಅನುದಾನಗಳ ಮೊತ್ತ ಎಷ್ಟು? ಹಿಂದಿನ ಭಾಜಪಾ ಸರಕಾರ ಇದ್ದಾಗ ಬಿಡುಗಡೆಗೊಂಡ ಅನುದಾನಗಳು ಎಷ್ಟು? ಎಂಬುದನ್ನು ಮರೆತು ಎಲ್ಲವೂ ನಮ್ಮದೇ ಸರಕಾರ, ನಾನೇ ಮಾಡಿದೆ ಎನ್ನುವ ರೀತಿಯಲ್ಲಿ ಪ್ರಕಟಿಸಿದ್ದಾರೆ. ಅವರು ಬ್ಯಾನರ್ ನಲ್ಲಿ ಹಾಕಿರುವ ಅನುದಾನ ಯಾವ ವರ್ಷ? ಯಾವ ಸರಕಾರ? ಯಾವ ಶಾಸಕರ ಅವಧಿಯಲ್ಲಿಲ್ಲಿ ಬಂತು ಎಂಬುದರ ವಿವರವನ್ನು ದಾಖಲೆ ಸಮೇತವಾಗಿ ಈ ಮೂಲಕ ನೀಡುತ್ತಿದ್ದೇವೆ ಎಂದ ಅವರು ಸುಳ್ಳು ಹೇಳುತ್ತಿರುವ ರೂ.1474.29 ಕೋಟಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿ ರೂ.1219 ಕೋಟಿ ನಮ್ಮ ಸರಕಾರದ ಯೋಜನೆಗಳು. ಅಲ್ಲದೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಡದ ನಮ್ಮ ಬಿಜೆಪಿ ಶಾಸಕರಿಂಸ ಸುಳ್ಯ ಕ್ಷೇತ್ರದ ಕೊಯಿಲಾ ಪಶು ವೈದ್ಯಕೀಯ ಕಾಲೇಜು, ನೀರಿನ ಸರಬರಾಜು ಮತ್ತು ಕೊಯಿಲಾ ಸಬ್ ಸ್ಟೇಷನ್ ಸೇರಿ 483 ಕೋಟಿಯ ಯೋಜನೆಯನ್ನು ಸೇರಿಸಿರುತ್ತಾರೆ.ಇದು ನಮ್ಮ ಹಿಂದಿನ ಸರಕಾರದ ಸಾಧನೆ. ಇವೆರಡನ್ನು ಕಾಂಗ್ರೆಸ್ ನ ದಾಸಕರ ಪ್ರಕಟಿಸಿರುವ ಅನುದಾನಗಳಲ್ಲಿ ಕಡಿತಗೊಳಿಸಿದರೆ ಕೇವಲ 104 ಕೋಟಿ ಇವರ ಅವಧಿಯದ್ದು ಕಾಣಬಹುದು. ಆದರೆ ಇದು ಅವರ ಬರೀ ಆಶ್ವಾಸನೆಯೂ ಎಂಬುದನ್ನು ಕಾಲವೇ ಉತ್ತರಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ ಉಪಸ್ಥಿತರಿದ್ದರು.

Recent News


Leave a Comment: